Horoscope Today : ಇಂದು ಧನಸ್ಸು ರಾಶಿಯವರಿಗೆ ಧನಲಾಭ ; ನಿಮ್ಮ ದಿನ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today : ಇಂದು ಧನಸ್ಸು ರಾಶಿಯವರಿಗೆ ಧನಲಾಭ ; ನಿಮ್ಮ ದಿನ ಭವಿಷ್ಯ ಹೇಗಿದೆ?

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (19-03-2023)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.

ತಿಥಿ: ದ್ವಾದಶಿ 08:06/ತ್ರಯೋದಶಿ 28:54 ವಾರ: ಭಾನುವಾರ
ನಕ್ಷತ್ರ: ಧನಿಷ್ಠ 22:02 ಯೋಗ: ಸಿದ್ದಿ 20:05
ಕರಣ: ತೈತುಲ 08:06
ಅಮೃತಕಾಲ: ರಾತ್ರಿ 08 ಗಂಟೆ 54 ನಿಮಿಷದಿಂದ ಮಧ್ಯರಾತ್ರಿ 10 ಗಂಟೆ 22 ನಿಮಿಷದವರೆಗೆ.

ಸೂರ್ಯೋದಯ : 06:40 ಸೂರ್ಯಾಸ್ತ : 06:33

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ.ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ.ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ,ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು.ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ.ಆರೋಗ್ಯ ಉತ್ತಮ ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತರಿ.ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು.ಆರೋಗ್ಯ ಪರಿಪೂರ್ಣ.ಬದುಕಿನ ಹೊಸ ಭರವಸೆ ಮೂಡಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ.ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ.ಕಾರ್ಯದಲ್ಲಿ ಯಶಸ್ಸು ಸಿಗಲಿದೆ.ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ.ವ್ಯಾಪರದಲ್ಲಿ ಪ್ರಗತಿ.ಭರವಸೆಯ ಹೊಸ ಅವಕಾಶಗಳು ಸಿಗಲಿದೆ.ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವುರು.ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ.ವ್ಯಾಪಾರದಲ್ಲಿ ಪ್ರಗತಿ.ಹಣಕಾಸು ಪ್ರಗತಿ ಉತ್ತಮ.ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ.ಆರ್ಥಿಕ ಪ್ರಗತಿ ಸಾಧಾರಣ.ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ.ಮಾತಿನ ಮೇಲೆ ಹಿಡಿತವಿರಲಿ.ಉದ್ಯೋಗದಲ್ಲಿ ಪ್ರಗತಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ.ಮಾತುಗಳು ಮಥಿಸಿ ಕಲಹ ಸಂಭಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ.ಕೌಶಲ್ಯಕ್ಕ ತಕ್ಕ ಪ್ರತಿಫಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ.ಆರ್ಥಿಕವಾಗಿ ಪ್ರಗತಿ ಕಾಣುವಿರಿ.ಆಪ್ತರ ಬೆಂಬಲ ಸಿಗಲಿದೆ.ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ.ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ.ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ,ಆದರಿಂದ ಶಾಂತವಾಗಿರಿ.ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ.ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ.ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ.ಮೌನವಾಗಿರುವುದು ಉತ್ತಮ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ.ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ.ಆರೋಗ್ಯ ಉತ್ತಮ.ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Papamochani Ekadasi 2023 : ಪಾಪವಿಮೋಚಿನೀ ಏಕಾದಶಿ ದಿನ ವ್ರತಾಚರಣೆ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

Bhagwant Mann: ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು 2022ರಲ್ಲಿ ಡಾ. ಗುರುಪ್ರೀತ್‌ ಕೌರ್‌ ಅವರನ್ನು ಮದುವೆಯಾಗಿದ್ದರು. ಈಗ ಈ ದಂಪತಿಗೆ ಮೊದಲ ಮಗು ಜನಿಸಿದೆ.

VISTARANEWS.COM


on

Bhagwant Mann
Koo

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ (Bhagwant Mann) ಅವರು 50ನೇ ವಯಸ್ಸಿನಲ್ಲಿ ಮತ್ತೊಮ್ಮೆ ತಂದೆಯಾಗಿದ್ದಾರೆ. ಭಗವಂತ್‌ ಮಾನ್‌ ಹಾಗೂ ಡಾ.ಗುರುಪ್ರೀತ್‌ ಕೌರ್‌ (Dr. Gurpreet Kaur) ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಭಗವಂತ್‌ ಮಾನ್‌ ಅವರು ಈ ಸಂತಸವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನಗೆ ಹೆಣ್ಣುಮಗು ಜನಿಸಿದೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದು, ಸಾವಿರಾರು ಜನ ಪಂಜಾಬ್‌ ಮುಖ್ಯಮಂತ್ರಿಗೆ (Punjab CM) ಅಭಿನಂದನೆ ಸಲ್ಲಿಸಿದ್ದಾರೆ.

“ದೇವರು ನನಗೆ ಮಗಳನ್ನು ಉಡುಗೊರೆಯಾಗಿ ನೀಡಿದ್ದಾನೆ. ತಾಯಿ ಹಾಗೂ ಮಗಳು ಆರೋಗ್ಯದಿಂದ ಇದ್ದಾರೆ” ಎಂಬುದಾಗಿ ಭಗವಂತ್‌ ಮಾನ್‌ ಪೋಸ್ಟ್‌ ಮಾಡಿದ್ದಾರೆ. ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಿಳಿದುಬಂದಿದೆ. ಗುರುಪ್ರೀತ್‌ ಕೌರ್‌ ಅವರನ್ನು ಬುಧವಾರ (ಮಾರ್ಚ್‌ 27) ಮೊಹಾಲಿಯ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ (ಮಾರ್ಚ್‌ 28) ಬೆಳಗ್ಗೆ ಹೆರಿಗೆಯಾಗಿದೆ.

2 ವರ್ಷದ ಹಿಂದೆ ಮದುವೆ

ಪಂಜಾಬ್‌ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಭಗವಂತ್‌ ಮಾನ್‌ ಅವರು ಎರಡನೇ ಮದುವೆಯಾಗಿದ್ದರು. ಡಾ.ಗುರುಪ್ರೀತ್‌ ಕೌರ್‌ ಹಾಗೂ ಭಗವಂತ್‌ ಮಾನ್‌ ಅವರ ಮದುವೆಯು 2022ರ ಜುಲೈ 7ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಅತ್ಯಂತ ಆತ್ಮೀಯರ ಉಪಸ್ಥಿತಿಯಲ್ಲಿ ಸರಳವಾಗಿ ನೆರವೇರಿತ್ತು. ಗುರುಪ್ರೀತ್‌ ಕೌರ್‌ ಅವರು ಮೂಲತಃ ಹರಿಯಾಣದ ಕುರುಕ್ಷೇತ್ರದ ಪಿಹೋವಾ ಗ್ರಾಮದವರು. ಪ್ರಸಕ್ತ ಪಂಜಾಬ್‌ನ ರಾಜಪುರದಲ್ಲಿ ನೆಲೆಸಿದ್ದಾರೆ. ಕೃಷಿ ಹಿನ್ನೆಲೆಯ ಕುಟುಂಬದ ಮೂರನೇ ಮಗಳು ಈಕೆ. ಇಡೀ ಕುಟುಂಬವೇ ಈ ಹರಿಯಾಣದಿಂದ ರಾಜಪುರಕ್ಕೆ ಶಿಫ್ಟ್‌ ಆಗಿದೆ.

ಇದನ್ನೂ ಓದಿ: 51ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ!

ಭಗವಂತ್ ಮಾನ್​ ಮೊದಲನೇ ಪತ್ನಿ ಇಂದ್ರಪ್ರೀತ್‌ ಕೌರ್‌ ಅಮೆರಿಕದಲ್ಲಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ಇಬ್ಬರು ಮಕ್ಕಳು ಭಗವಂತ್ ಮಾನ್ ಪಂಜಾಬ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 23 ವರ್ಷ ಮಗಳು ಸೀರತ್‌ ಕೌರ್‌ ಮಾನ್‌ ಮತ್ತು 17 ವರ್ಷದ ಮಗ ದಿಲ್ಶಾನ್‌ ಸಿಂಗ್‌ ಮಾನ್‌. ಇಬ್ಬರೂ ಅಮೆರಿಕದಲ್ಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಗವಂತ್‌ ಮಾನ್‌ ಅವರ ಮೊದಲ ಪುತ್ರಿಯು ತಂದೆಯ ವಿರುದ್ಧವೇ ಹಲವು ಆರೋಪಗಳನ್ನು ಮಾಡಿದ್ದರು. ಆ ವಿಡಿಯೊ ಭಾರಿ ವೈರಲ್‌ ಆಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Valmiki Samaj to support Pralhad Joshi says Prasannanandapuri Swamiji
Koo

ಹುಬ್ಬಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ವಾಲ್ಮೀಕಿ ಸಮಾಜದವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಬೆನ್ನಿಗೆ ನಿಲ್ಲಬೇಕು. ಅವರಿಗೆ ಶಕ್ತಿಯಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ (Prasannanandapuri Swamiji) ಸಮಾಜದ ಬಾಂಧವರಿಗೆ ಕರೆ ನೀಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಆಶೀರ್ವದಿಸಿ ಮಾತನಾಡಿದ ಪ್ರಸನ್ನಾನಂದಪುರಿ ಸ್ವಾಮೀಜಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ಆಶಿಸಿದರು.

ಪ್ರಲ್ಹಾದ್‌ ಜೋಶಿಯವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಎಲ್ಲ ಸಮಾಜದ ಜನರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರಣವಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ವಾಲ್ಮೀಕಿ ಕಾರ್ಯಕರ್ತರನ್ನು ನಾಯಕರನ್ನಾಗಿ ಬೆಳೆಸಿದ್ದಾರೆ

ನಮ್ಮ ಸಮಾಜದ ಕಾರ್ಯಕರ್ತರನ್ನು ನಾಯಕರನ್ನಾಗಿಸಿದ್ದೇ ಪ್ರಲ್ಹಾದ್‌ ಜೋಶಿಯವರು. ಬಂಗಾರು ಹನುಮಂತು ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ಆಗಲು ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿ ಸಹಕರಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಸ್ಮರಿಸಿದರು.

ಧರಣಿಗೆ ನ್ಯಾಯ ನೀಡಿದರು

ಬೆಂಗಳೂರಿನಲ್ಲಿ ತಾವು ಉಪವಾಸ ಧರಣಿ ಕುಳಿತ ವೇಳೆ ತನ್ನೆಲ್ಲ ಪ್ರೋಟೋಕಾಲ್ ಮರೆತು ನನ್ನನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದರು.

ಜಾತಿ ಭೇದ ತೋರದ ನಾಯಕ

ಸಚಿವ ಪ್ರಲ್ಹಾದ್‌ ಜೋಶಿಯವರು ಯಾವತ್ತೂ ಜಾತಿ ಭೇದ ತೋರಿದವರಲ್ಲ. ಎಲ್ಲ ಸಮಾಜ, ವರ್ಗದವರನ್ನು ಸಮಾನವಾಗಿ ಕಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಪಡಿಸಿ ಮನ ಗೆದ್ದಿದ್ದಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

ಗುರು-ಹಿರಿಯರ ಆಶೀರ್ವಾದವೇ ಶ್ರೀರಕ್ಷೆ

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಶೀರ್ವಾದ ಪಡೆದರು.

ವಾಲ್ಮೀಕಿ ಸಮುದಾಯದ ಪ್ರಗತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ, ಶ್ರಮಿಸಿದೆ. ಮುಂದೆಯೂ ಸಮಾಜದ ಪರ ಇರಲಿದೆ ಎಂದು ಪ್ರಲ್ಹಾದ್‌ ಜೋಶಿ‌ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಣಿಕಂಠ ಶಾಗೋಟಿ, ಪುಂಡಲಿಕ ತಳವಾರ, ಮೋಹನ್ ಗುಡಿಸಲ್ಮನಿ, ಮಾರುತಿ ಚಾಕಲಬ್ಬಿ, ಲಕ್ಷ್ಮಣ್ ಮ್ಯಾಗಿನ್ಮನಿ, ಅಶೋಕ ಸೋಲಾರ್ಕೊಪ್ಪ, ಸಂತೋಷ ಟಿ, ದೇವೇಂದ್ರ, ಮಂಜು ಹುಡ್ಡೇದ ಹಾಗೂ ಬಿಜೆಪಿ ಪ್ರಮುಖರು ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು

Continue Reading

ದೇಶ

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

ಕಳೆದ ಸೋಮವಾರ (ಮಾರ್ಚ್‌ 25) ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಯುವತಿಯರು ಚಲಿಸುವ ಸ್ಕೂಟಿಯ ಮೇಲೆಯೇ ರೊಮ್ಯಾನ್ಸ್‌ ಮಾಡಿದ್ದರು. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

VISTARANEWS.COM


on

Holi Girls
Koo

ನೊಯ್ಡಾ: ಹೋಳಿ ಹಬ್ಬದ ದಿನ ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸುವ (Holi Celebrations) ಬದಲು ನೊಯ್ಡಾದಲ್ಲಿ ಚಲಿಸುವ ಸ್ಕೂಟಿಯ ಮೇಲೆಯೇ ಹೋಳಿ ಆಚರಣೆ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ (Noida Viral Video) ಇಬ್ಬರು ಯುವತಿಯರಿಗೆ ನೊಯ್ಡಾ ಟ್ರಾಫಿಕ್‌ ಪೊಲೀಸರು (Noida Traffic Police) ಮತ್ತೆ 47,500 ರೂ. ದಂಡ ವಿಧಿಸಿದ್ದಾರೆ. ಮೊದಲು ವಿಡಿಯೊ ವೈರಲ್‌ ಆಗುತ್ತಲೇ ಇಬ್ಬರು ಯುವತಿಯರು ಹಾಗೂ ಸ್ಕೂಟಿ ಚಾಲನೆ ಮಾಡುತ್ತಿದ್ದ ಯುವಕನಿಗೆ 33 ಸಾವಿರ ರೂ. ದಂಡ ವಿಧಿಸಿದ್ದರು. ಈಗ ಮತ್ತೆ 47,500 ದಂಡ ವಿಧಿಸಲಾಗಿದ್ದು, ಒಟ್ಟು 80,500 ರೂ. ದಂಡ ಬಿದ್ದಂತಾಗಿದೆ.

ನೋಯ್ಡಾದಲ್ಲಿ ಕಳೆದ ಸೋಮವಾರ (ಮಾರ್ಚ್‌ 25) ಯುವಕನು ಸ್ಕೂಟರ್ ಚಾಲನೆ ಮಾಡುತ್ತಿದ್ದರೆ, ಹುಡುಗಿಯರು ಚಲಿಸುತ್ತಿರುವ ಸ್ಕೂಟರ್​ನಲ್ಲಿ ಪರಸ್ಪರ ಎದುರು ಬದುರಾಗಿ ಕುಳಿತು ಅಶ್ಲೀಲ ನೃತ್ಯ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ, ಆದಾಗ್ಯೂ, ವಿಡಿಯೊ ಚಿತ್ರೀಕರಿಸಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ವೈರಲ್ ಆಗಿರುವ ವೀಡಿಯೊದಲ್ಲಿ, ಇಬ್ಬರು ಹುಡುಗಿಯರು ಸ್ಕೂಟರ್​ನ ಹಿಂಭಾಗ ಕುಳಿತು ಬಾಲಿವುಡ್ ಹಾಡು “ಮೊಹೆ ರಂಗ್ ಲಗಾಡೆ” ಗೆ ನೃತ್ಯ ಮಾಡಿದ್ದಾರೆ. ಹುಡುಗಿಯರು ನೃತ್ಯ ಮಾಡುತ್ತಿದ್ದಾರೆಯೇ, ಅಶ್ಲೀಲ ಕೆಲಸದಲ್ಲಿ ತೊಡಗಿದ್ದಾರೆಯೇ ಅಥವಾ ಪ್ರಣಯದಲ್ಲಿ ತೊಡಗಿದ್ದಾರೆಯೇ ಎಂದು ವಿವರಿಸುವುದು ಅಸಾಧ್ಯ. ವಿಡಿಯೊ ನೋಡಿಯೇ ನಿರ್ಧಾರ ಮಾಡಬೇಕಾಗುತ್ತದೆ. ಆದರೆ, ಯಾರು ಕೂಡ ಈ ಯುವತಿಯರ ವರ್ತನೆಯನ್ನು ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ದೆಹಲಿ ಮೆಟ್ರೋದಲ್ಲೂ ಯುವತಿಯರ ಹುಚ್ಚಾಟ

ದೆಹಲಿಯ ಮೆಟ್ರೋದಲ್ಲಿಯೂ ಇಬ್ಬರು ಯುವತಿಯರು ಹೋಳಿ ಆಚರಣೆ ಮಾಡುವ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ ವಿಡಿಯೊ ವೈರಲ್‌ ಆಗಿದೆ. ಚಲಿಸುವ ಮೆಟ್ರೋದಲ್ಲಿಯೇ ಪರಸ್ಪರ ಬಣ್ಣ ಹಚ್ಚುವ ಯುವತಿಯರು, ತಬ್ಬಿ ಮುದ್ದಾಡಿದ ವಿಡಿಯೊ ವೈರಲ್‌ ಆಗುತ್ತಲೇ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Rohit Sharma Holi Celebration: ಹೋಳಿ ಆಡಿ ಸಂಭ್ರಮಿಸಿದ ರೋಹಿತ್​ ಶರ್ಮ; ವಿಡಿಯೊ ವೈರಲ್

ಇಬ್ಬರು ಯುವತಿಯರು ದೆಹಲಿ ಮೆಟ್ರೋ ಹತ್ತಿದ್ದಾರೆ. ರೈಲು ಚಲಿಸುತ್ತಲೇ ಕೆಳಗೆ ಕುಳಿತ ಅವರು ಪರಸ್ಪರ ಬಣ್ಣ ಹಚ್ಚಿಕೊಂಡಿದ್ದಾರೆ. ಆಕೆಯ ಕೆನ್ನೆಗೆ ಈಕೆ, ಈಕೆಯ ಕೆನ್ನೆಗೆ ಆಕೆ ಬಣ್ಣ ಹಚ್ಚುವುದು, ಇಬ್ಬರೂ ಮಲಗಿ ರೊಮ್ಯಾನ್ಸ್‌ ಮಾಡುವುದು, ಮುದ್ದಾಡುವುದು, ಮುತ್ತು ಕೊಡುವುದು ಸೇರಿ ಬಹಿರಂಗವಾಗಿಯೇ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹುಚ್ಚಾಟವನ್ನು ಕಂಡ ಪ್ರಯಾಣಿಕರು, ಮನಸ್ಸಲ್ಲೇ ಹಿಡಿ ಶಾಪ ಹಾಕಿದ್ದಾರೆ. ಆದರೆ, ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ, ಅವರಿಗೆ ತೊಂದರೆಯಾಗುತ್ತದೆಯೋ ಎಂಬುದರ ಪರಿವೇ ಇಲ್ಲದೆ ಇಬ್ಬರು ಯುವತಿಯರು ಹುಚ್ಚಾಟ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

Lok Sabha Election 2024: ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024 personal prestige will not be allowed DK Shivakumar warns Kolar leaders
Koo

ಬೆಂಗಳೂರು: ಈ ಲೋಕಸಭಾ ಚುನಾವಣೆ (Lok Sabha Election 2024:) ಸಂಬಂಧ ಕೋಲಾರದಲ್ಲಿ ಎಲ್ಲ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ (Congress Candidate) ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂಧಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಿ ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಸುರೇಶ್ ಸೇವೆ ಒಂದು ಇತಿಹಾಸ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ, ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

ಎಲ್ಲ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ

ಬಿಜೆಪಿ ಹಾಗೂ ಜೆಡಿಎಸ್ ಸೇರಿ‌ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದವರಾದ ಡಾ. ಸಿ.ಎನ್.‌ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಲಾಗಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಾಹುಲ್‌, ಸೋನಿಯಾ, ಪ್ರಿಯಾಂಕಾ ಬರ್ತಾರೆ ಪ್ರಚಾರಕ್ಕೆ

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

Continue Reading
Advertisement
Actor Darshan at Matinee Movie Team
ಸ್ಯಾಂಡಲ್ ವುಡ್45 seconds ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್4 mins ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ7 mins ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ10 mins ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

kalaburagi News Drone flying at kalaburagi Central University
ಕಲಬುರಗಿ31 mins ago

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Lok Sabha Election 2024 Valmiki Samaj to support Pralhad Joshi says Prasannanandapuri Swamiji
Lok Sabha Election 202441 mins ago

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Holi Girls
ದೇಶ56 mins ago

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

Kangana Ranaut
ಬಾಲಿವುಡ್1 hour ago

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Water Crisis in Bengaluru
ಬೆಂಗಳೂರು1 hour ago

Water Crisis: ಇನ್ನು 3 ದಿನದಲ್ಲಿ ನಿಮ್ಮ ಮನೆಯ ನಲ್ಲಿಗಳಿಗೆ ಈ ಸಾಧನ ಹಾಕದಿದ್ದರೆ 5000 ರೂ. ದಂಡ!

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 hour ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 hour ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ9 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 202424 hours ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

Does congress karnataka have the power to slap youth for PM Narendra Modi slogan Pralhad Joshi question
ಕರ್ನಾಟಕ3 days ago

PM Narendra Modi: ಮೋದಿ ಯುವ ಪಡೆಯ ಕಪಾಳಕ್ಕೆ ಹೊಡೆಯುವ ಶಕ್ತಿ ‘ಕೈ’ಗಿದೆಯೇ? ಪ್ರಲ್ಹಾದ್‌ ಜೋಶಿ ಪ್ರಶ್ನೆ

ಟ್ರೆಂಡಿಂಗ್‌