horoscope today read your daily horoscope predictions for may 06, 2023Horoscope Today : ಸಿಂಹ ರಾಶಿಯವರ ಅದೃಷ್ಟ ಸಂಖ್ಯೆ 3; ನಿಮ್ಮ ಅದೃಷ್ಟ ಸಂಖ್ಯೆ ಎಷ್ಟು? - Vistara News

ಪ್ರಮುಖ ಸುದ್ದಿ

Horoscope Today : ಸಿಂಹ ರಾಶಿಯವರ ಅದೃಷ್ಟ ಸಂಖ್ಯೆ 3; ನಿಮ್ಮ ಅದೃಷ್ಟ ಸಂಖ್ಯೆ ಎಷ್ಟು?

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಾಡ್ಯದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (06-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ಪಾಡ್ಯ 21:51 ವಾರ: ಶನಿವಾರ
ನಕ್ಷತ್ರ: ವಿಶಾಖ 21:12 ಯೋಗ: ವ್ಯತಿಪಾತ 07:29
ಕರಣ: ಬಾಲವ 10:31 ಇಂದಿನ ವಿಶೇಷ: ಶೃಂಗೇರಿ ಶ್ರೀ ಶಾರದಾಂಬೆಗೆ ಮಹಾಭಿಷೇಕ.
ಅಮೃತಕಾಲ: ಮಧ್ಯಾಹ್ನ 12 ಗಂಟೆ 35 ನಿಮಿಷದಿಂದ ಸಂಜೆ 02 ಗಂಟೆ 09 ನಿಮಿಷದವರೆಗೆ.

ಸೂರ್ಯೋದಯ : 05:57 ಸೂರ್ಯಾಸ್ತ : 06:36

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಮಾಡಿ ಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಯಾರೊಂದಿಗಾದರೂ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೇ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಸಕರಾತ್ಮಕ ಆಲೋಚನೆಗಳು ನಿಮ್ಮ ಕೆಲಸ ಕಾರ್ಯಗಳಿಗೆ ಬೆಂಬಲವಾಗಿ ನೀಡುತ್ತಿವೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ ಫಲ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡವನ್ನು ಈ ರೀತಿ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ. ಕಾರ್ಯದಲ್ಲಿ ನಿಧಾನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕು ತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಾಲಭಾದೆಗೆ ಪರಿಹಾರ ಹೇಗೆ? ಈ ವಿಡಿಯೋ ನೋಡಿ.
Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಬಗ್ಗೆ ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading

ಬೆಂಗಳೂರು

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.

VISTARANEWS.COM


on

By

Kichcha Sudeeps mother Saroja passes away
Koo

ಬೆಂಗಳೂರು: ನಟ ಕಿಚ್ಚ ಸುದೀಪ್‌ (Kichcha Sudeepa) ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ನಿನ್ನೆ ಶನಿವಾರ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ 07.04 ನಿಮಿಷಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

Kichcha Sudeeps mother Saroja passes away

ನಿನ್ನೆಯಷ್ಟೆ ಬಿಗ್ ಬಾಸ್ ವೇದಿಕೆ ಮೇಲೆ ತಾಯಿ ಮಹತ್ವದ ಬಗ್ಗೆ ಸುದೀಪ್‌ ಮಾತನಾಡಿದ್ದರು. ಚೈತ್ರಾ ಕುಂದಾಪುರ ಜಗದೀಶ್ ವಿರುದ್ಧ ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಅನ್ನೋ ಪದ ಬಳಸಿದ್ದರು. ಅದಕ್ಕೆ ಖಡಕ್ ಆಗಿ ಉತ್ತರಿಸಿದ ಸುದೀಪ್‌, ನೀವು ಅಂದಿರುವುದು ಅಪ್ಪನಿಗಲ್ಲ ಅದು ತಾಯಿಗೆ ಮಾಡಿದ ಅವಮಾನ ಅಂತ ಆಕ್ರೋಶದಲ್ಲಿ ಅರಿವು ಮೂಡಿಸಿದ್ದರು. ನಿನ್ನೆ ಎಪಿಸೋಡ್‌ನಲ್ಲಿ ಚೈತ್ರಗೆ ಕ್ಲಾಸ್ ತಗೆದುಕೊಂಡಿದ್ದರು.

ಸುದೀಪ್ ತಾಯಿ ನಿಧನ ಸುದ್ದಿಗೆ ಚಿತ್ರರಂಗ ಹಾಗು ಫ್ಯಾನ್ಸ್ ಕಂಬನಿ ಮಿಡಿದಿದೆ. ಸುದೀಪ್ ತಾಯಿ ನಿಧನದ ಹಿನ್ನೆಲೆ ಜಗದೀಶ್ ಸುದ್ದಿಗೋಷ್ಟಿ ರದ್ದಾಗಿದೆ. ಸುದೀಪ್ ಅವರಿಗೆ ಜಗದೀಶ್‌ ಸಾಂತ್ವನ ಹೇಳಿದ್ದಾರೆ.

Continue Reading

ಭವಿಷ್ಯ

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರ ಮಿಥುನ ರಾಶಿಯನ್ನು ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 06:45 ವಾರ: ಭಾನುವಾರ
ನಕ್ಷತ್ರ: ಕೃತಿಕಾ 08:30 ಯೋಗ: ವ್ಯತಿಪಾತ 14:10
ಕರಣ: ವಿಷ್ಟಿ (ಭದ್ರ) 06:45 ಅಮೃತಕಾಲ: ಬೆಳಗ್ಗೆ 06:21 ರಿಂದ 07:48

ಸೂರ್ಯೋದಯ : 06:10   ಸೂರ್ಯಾಸ್ತ : 05:59

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದ್ದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು,ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬಿಗ್ ಬಾಸ್

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

ವಾರದ ಕತೆ ಕಿಚ್ಚನ ಜೊತೆ ಪಂಚಾಯ್ತಿಯಲ್ಲಿ ಯಾವೆಲ್ಲ ವಿಷ್ಯಗಳು ಚರ್ಚೆಗೆ ಬರುತ್ತೆ ಗೊತ್ತಾ?
ಕಿಚ್ಚನ ಪಂಚಾಯ್ತಿಗೆ ವೀಕ್ಷಕರು ಇಟ್ಟ ಬೇಡಿಕೆಗಳೇನು?

VISTARANEWS.COM


on

By

Bigg boss kannada
Koo

ಬೆಂಗಳೂರು: ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಶೋನಲ್ಲಿ ಕಿಚ್ಚು ಹೆಚ್ಚಾಗಿದೆ. ಇದೆ ಮೊದಲ ಸಲ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಸ್ಪರ್ಧಿಗಳು ನಿಯಮ ಮೀರಿದ ಹಿನ್ನೆಲೆಯಲ್ಲಿ ನೇರವಾಗಿ ಎಲಿಮಿನೇಟ್‌ ಆಗಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಲಾಯರ್‌ ಜಗದೀಶ್‌, ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಶುಕ್ರವಾರ ಮನೆ ತೊರೆದಿದ್ದರು.

ಇದೀಗ ವಾರದ ಕಥೆ ಕಿಚ್ಚ ಜತೆಯಲ್ಲಿ ನಟ ಸುದೀಪ್‌ ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ? ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು ಯಾವುದು ಎಂಬ ಕುತೂಹಲ ಮೂಡಿದೆ.

ಅಸಲಿಗೆ ದೊಡ್ಡ ಮನೆಯಲ್ಲಿ ಆ ದಿನ ನಡೆದಿದ್ದೇನು ಗೊತ್ತಾ?

ಕಳೆದ (ಬುಧವಾರ) ಟಾಸ್ಕ್‌ ಮುಗಿದ ಬಳಿಕ ಗಾರ್ಡನ್‌ ಏರಿಯಾದಲ್ಲಿ ಜಗದೀಶ್‌ ಮತ್ತು ಗೋಲ್ಡ್‌ ಸುರೇಶ್‌ ಮಾತನಾಡುತ್ತ ಕೂತಿದ್ದರು. ಈ ವೇಳೆ ಮಾತಿನ ಭರದಲ್ಲಿ ಜಗದೀಶ್‌ ಮನೆಯ ಸ್ಪರ್ಧಿಗಳ ಬಗ್ಗೆ ಇಲ್ಲ ಸಲ್ಲದ ಪದ ಬಳಕೆ ಮಾಡಿ ಮಾತನಾಡಲು ಶುರುಮಾಡಿದರು. ಜಗದೀಶ್‌ ಅವರ ಮಾತುಗಳು ಸುರೇಶ್‌ಗೆ ಅಸಹನೀಯ ಎನಿಸತೊಡಗಿದವು. ಕೂಡಲೇ ಇಂಥ ಪದಗಳ ಪ್ರಯೋಗ ನನ್ನ ಮುಂದೆ ಮಾಡಬೇಡ ಎಂದು ಬೇಡಿಕೊಂಡರು. ಮುಂದುವರಿದು, ಆ ಹಂಸಾ ಮುಂ* ಎಂಬ ಪದ ಬಳಕೆ ಪ್ರಯೋಗಿಸಿದರು .

ಅಲ್ಲಿಂದ ಶುರುವಾಯ್ತು ವಾರ್‌.. ಹಂಸಾಗೆ ಆ ಪದ ಪ್ರಯೋಗಿಸಿದ ವಿಚಾರ, ನಂತರ ಇಡೀ ಮನೆಗೂ ಗೊತ್ತಾಯ್ತು. ಮುಂದುವರಿದು ದೊಡ್ಡ ಮಟ್ಟದ ಮಾತಿನ ಚಕಮಕಿ ನಡೆಯಿತು. ಮಾತಿಗೆ ಮಾತು ಬೆಳೆಯಿತು. ತಳ್ಳಾಟ ನೂಕಾಟವೂ ನಡೆಯಿತು. ಲಾಯರ್‌ ಜಗದೀಶ್‌ ಅವರ ಮೇಲೆ ಇಡೀ ಮನೆಯ ಮಹಿಳಾ ಸ್ಪರ್ಧಿಗಳು ಮುಗಿಬಿದ್ದರು. ಇದೇ ವೇಳೆ ಮಾತುಕತೆ ಅತಿರೇಕಕ್ಕೆ ಹೋಗುತ್ತಿದ್ದಂತೆ, ಜಗದೀಶ್‌ ಅವರನ್ನು ಅಲ್ಲೇ ಇದ್ದ ರಂಜಿತ್‌ ತಳ್ಳಿದರು. ಇದೆಲ್ಲವನ್ನು ಗಮನಿಸಿದ ಬಿಗ್‌ಬಾಸ್‌ ಸಹ ತಾಳ್ಮೆ ಕಳೆದುಕೊಂಡು, ಮೊದಲ ಸಲ ಜೋರಾಗಿ ಕೂಗಿ ಎಲ್ಲರನ್ನು ಒಂದೆಡೆ ಕೂರಿಸಿದರು.

ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಹೊರಕ್ಕೆ

ಇತ್ತ, ಕೆಲ ಹೊತ್ತಿನ ಬಳಿಕ ಮಹಿಳೆಯರಿಗೆ ನಿಂದನೆ, ಅಪಮಾನ ಸಹಿಸುವುದಿಲ್ಲ ಎಂಬ ಆರೋಪದ ಮೇಲೆ ಜಗದೀಶ್‌ ಅವರನ್ನು ಬಿಗ್‌ಬಾಸ್‌ನಿಂದ ನೇರವಾಗಿ ಎಲಿಮಿನೇಟ್‌ ಮಾಡಿ, ಹೊರಗೆ ಕಳಿಸಲಾಯಿತು. ಇತ್ತ ದೈಹಿಕ ಹಲ್ಲೆ ಅಕ್ಷಮ್ಯ ಅಪರಾಧ ಎಂಬ ನಿಯಮದಡಿ ರಂಜಿತ್‌ ಅವರನ್ನೂ ಹೊರಗೆ ಕಳಿಸಲಾಯಿತು. ಈ ಮೂಲಕ ಶುಕ್ರವಾರ ಅಚ್ಚರಿಯ ಬೆಳವಣಿಗೆಯಲ್ಲಿ ಡಬಲ್‌ ಶಾಕಿಂಗ್‌ ಎಲಿಮಿನೇಷನ್‌ ಆಯ್ತು. ಇತ್ತ ರಂಜಿತ್‌ ಮಾಡಿದ್ದು ಸರಿಯಿದೆ. ಅವರ ಉದ್ದೇಶ ಒಳ್ಳೆಯದು ಎಂದು ಸ್ಪರ್ಧಿಗಳು ಕಣ್ಣೀರಿಟ್ಟರೂ, ನಿಯಮ ಗೌರವಿಸುವ ಸಲುವಾಗಿ ಔಟ್‌ ಮಾಡಲಾಯಿತು.

ಇದೀಗ.. ವಾರದ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಲಿರುವ ‘ಗರಮಾ ಗರಂ’ ವಿಷಯಗಳು ಯಾವವು ಎಂಬುದನ್ನು ಕಲರ್ಸ್‌ ಕನ್ನಡ ಸೋಶಿಯಲ್‌ ಮೀಡಿಯಾದಲ್ಲಿ ನಿನ್ನೆ ಪೋಸ್ಟ್‌ ಹಂಚಿಕೊಂಡಿದೆ . ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳ ಮಹಾಪೂರವೇ ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚನ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ

ಈ ಸಲದ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರಲ್ಲಿ ಶಾಕಿಂಗ್‌ ಎಲಿಮಿನೇಷನ್‌ ನಡೆದಿದೆ. ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟ ಪದ ಪ್ರಯೋಗ ಬಳಸಿದ್ದಕ್ಕೆ ಜಗದೀಶ್‌ ಎಲಿಮಿನೇಟ್‌ ಆದರೆ, ಒಳ್ಳೆಯ ಉದ್ದೇಶ ಇದ್ದರೂ, ದೈಹಿಕ ಹಲ್ಲೆ ಮಾಡಿದ ಆರೋಪದ ಮೇಲೆ ರಂಜಿತ್‌ ಮನೆಯಿಂದ ಹೊರ ನಡೆದಿದ್ದಾರೆ. ಇತ್ತ ಮನೆಯ ಸ್ಪರ್ಧಿಗಳು ರಂಜಿತ್‌ ತೆರಳಿದ್ದಕ್ಕೆ ಬೇಸರದಲ್ಲಿದ್ದರೆ, ಜಗದೀಶ್‌ ಹೊರ ನಡೆದಿದ್ದಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಇದೆಲ್ಲದರ ನಡುವೆಯೇ ವಾರಾಂತ್ಯವೂ ಬಂದಿದೆ. ಕಿಚ್ಚನ ಆಗಮನಕ್ಕೂ ಕ್ಷಣಗಣನೆ ಆರಂಭವಾಗಿದೆ.

ಕಳೆದ ವಾರ ಯಾವುದೇ ಎಲಿಮಿನೇಷನ್‌ ಇರಲಿಲ್ಲ. ಅಚ್ಚರಿಯ ಬೆಳವಣಿಗೆಯಲ್ಲಿ ಎಲ್ಲರೂ ಸೇವ್‌ ಆಗಿದ್ದರು. ಆದರೆ, ಈ ವಾರ ಹಾಗಾಗಲಿಲ್ಲ. ಯಾರೂ ನಿರೀಕ್ಷಿಸದೇ ಇಬ್ಬರು ಸ್ಪರ್ಧಿಗಳು ನೇರವಾಗಿ ಹೊರ ನಡೆಯಬೇಕಾಯಿತು. ಹೀಗಿರುವಾಗ ಈ ವಾರ ಎಲಿಮಿನೇಷನ್‌ ಇರುತ್ತಾ? ಎಂಬ ಒಂದಷ್ಟು ಪ್ರಶ್ನೆಗಳಂತೂ ಎಲ್ಲರ ಮನಸಿನಲ್ಲೂ ಮೂಡಿದೆ. ಅದರಲ್ಲೂ ವೀಕ್ಷಕರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇದೀಗ ಕಿಚ್ಚನ ಪಂಚಾಯ್ತಿಯಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಸಿಗಬಹುದಾ?

ಹೌದು. ಸೋಷಿಯಲ್‌ ಮೀಡಿಯಾದಲ್ಲಿ ಈ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಬೇಕಿರೋ ‘ಗರಮಾ ಗರಂ’ ವಿಷಯಗಳು ಯಾವವು” ಎಂದು ಪೋಸ್ಟ್‌ ಹಂಚಿಕೊಂಡಿದೆ ಕಲರ್ಸ್‌ ಕನ್ನಡ. ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚ ಸುದೀಪ್‌ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ ಆಯ್ದ ಕೆಲವು ಪ್ರಶ್ನೆಗಳು ಮತ್ತು ಬೇಡಿಕೆಗಳು.

ಸುದೀಪ್‌ಗೆ ವೀಕ್ಷಕರ ಪ್ರಶ್ನೆ ಮತ್ತು ಬೇಡಿಕೆ:

  • -ಜಗ್ಗು ಇಲ್ಲದ ಬಿಗ್‌ ಬಾಸ್ ನಾವು ನೋಡಲ್ಲ.‌ ಲಾಯರ್ ಜಗದೀಶ್‌ಗೆ ನ್ಯಾಯ ಸಿಗಬೇಕು. ಪುರುಷರಿಗೆ ಆದ ನಿಂದನೆ ಅಪಮಾನದ ಬಗ್ಗೆ ಕರ್ನಾಟಕದ ಜನತೆ ಸಹಿಸುವುದಿಲ್ಲ. ಅವರನ್ನ ಮತ್ತೆ ಅಖಾಡಕ್ಕೆ ಇಳಿಸಲೇಬೇಕು. ಹೆಣ್ಣಿಗೆ ಮಾತ್ರ ಅವಮಾನ ಆಗಿರಲಿಲ್ಲ ಗಂಡಿಗೂ ಅವಮಾನ ಆಗಿದೆ ಇದರ ಬಗ್ಗೆ ನೀವು ಪ್ರಶ್ನೆ ಎತ್ತಲೇಬೇಕು. ಗಂಡಿನ ಮರ್ಯಾದೆಗೆ ಧಕ್ಕೆ ಬರ್ತಿದೆ ಈ ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳಿಂದ. ಮುಂದೆ ಪುರುಷ ರಕ್ಷಣಾ ವೇದಿಕೆಯನ್ನು ತೆರೆದರು ತೆರೆಯಬಹುದು.
  • -ಸುದೀಪ್‌ ಸರ್‌, ಜಗದೀಶ್‌ ಅವರನ್ನ ಏಕವಚನದಲ್ಲಿ ಮಾತಾಡುವುದಲ್ಲದೇ ಹೋರ್ಗಡೆ ಎನ್ ತಗೊಂಡು ಹೊಡೀತಾರೆ ನಿಂಗೆ ಎನ್ನುತ್ತ ತಳ್ಳಿದ್ದಾರೆ ಭವ್ಯ ಇದಕ್ಕೆ ನ್ಯಾಯ ಸಿಗುತ್ತಾ?
  • -ಮಾನಸ ಅವರು ಒಬ್ಬ ಗಂಡಸಿಗೆ ಸೀರೆ ಕೊಡ್ತೀನಿ ಉಟ್ಕೋ, ಅಂತಾರೆ ಅವಳ ಗಂಡ ತುಕಾಲಿ, ಹೆಂಡತಿ ತುಕಾಲಿ ಪ್ರೊ ಮ್ಯಾಕ್ಸ್ ಅಂತ ನೆಟ್ಟಿಗರು ಕಿಡಿಕಾರಿದ್ದಾರೆ. ಗಂಡಿನ ಘನತೆಗೆ ಧಕ್ಕೆ ಆದಾಗ ತಿರುಗೇಟು ಕೊಟ್ಟರೆ ಅದು ಮಹಿಳೆಗೆ ಅಗೌರವವೇ? ಕಿಚ್ಚ ಸುದೀಪ್ ಇದಕ್ಕೆ ನ್ಯಾಯ ಒದಗಿಸುವ ಮೂಲಕ ಪುರುಷರ ಘನತೆ ಕಾಪಾಡಬೇಕು ಅಂದಿದ್ದಾರೆ.
  • -ಜಗ್ಗುನ ಪ್ರವೋಕ್ ಮಾಡಿದ ಎಲ್ಲರಿಗೂ ಅವರ ತಪ್ಪಿನ ಅರಿವು ಮಾಡಿಸಬೇಕು. ಹೆಣ್ಣಿನ ಬಗ್ಗೆ ಕೆಟ್ಟದಾಗಿ ಮಾತಾಡುವುದು ತಪ್ಪು. ಜಗದೀಶ್‌ಗೆ ಶಿಕ್ಷೆಯಾಗಿದ್ದು ಸರಿ. ಆದರೆ ಚೈತ್ರ ಹೇಳ್ತಾರೆ ಅಪ್ಪನಿಗೆ ಹುಟ್ಟಿದರೆ ಬಾ, ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಬಾ ಅಂತ ಇದರಲ್ಲಿ ಆಗಿರುವುದು ಒಂದು ಹೆಣ್ಣಿಗೆ ಅವಮಾನ ಅಂದರೇ (ಜಗದೀಶ್ ತಾಯಿಯ ಬಗ್ಗೆ ) ಇದರ ಬಗ್ಗೆನೂ ಚರ್ಚೆ ಆಗಲೇಬೇಕು.
  • -ಜಗ್ಗು ಮಾತಾಡಿದ್ದು ತಪ್ಪು ಅದರಲ್ಲಿ 2 ಮಾತಿಲ್ಲ.. ಆದ್ರೆ ಸತತ 3 ದಿನಗಳಿಂದ ರಂಜಿತ್, ಮಂಜು, ತ್ರಿವಿಕ್ರಮ ಜಗಳ ಆಡೋ ತರ ಪ್ರಚೋದನೆ ಮಾಡಿದ್ದು ತಪ್ಪಲ್ವಾ?.. ಮಾನಸ ಮಾತು ಅಸಹ್ಯವಾಗಿತ್ತು ಅವಳನ್ನು ಯಾಕೆ ಹೊರಗೆ ಹಾಕಿಲ್ಲ. . ಚೈತ್ರ, ಭವ್ಯ, ಮಾನಸ 3 ಜನ ಅಮ್ಮ ಅಪ್ಪ ಹೆಂಡ್ತಿ ಅನ್ನೋ ಶಬ್ದ ಬಳಸಿ ಮಾತನಾಡುವುದಲ್ಲದೇ ಜಗದೀಶ್‌ ಅವರನ್ನ ಥಳಿಸಿದ್ದಾರೆ.

ರಂಜಿತ್‌ಗೆ ವೀಕ್ಷಕರ ಮೆಚ್ಚುಗೆ

ರಂಜಿತ್‌ ನೇರವಾಗಿ ಮನೆಯಿಂದ ಹೊರಬರುತ್ತಿದ್ದಂತೆ, ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಪರವಾಗಿ ಮೆಚ್ಚುಗೆಯ ಕಾಮೆಂಟ್‌ಗಳು ಸಂದಾಯವಾಗುತ್ತಿವೆ. “ನಿಮ್ಮ ಹೆಸರು ಬಿಗ್‌ಬಾಸ್‌ನಲ್ಲಿ ಶಾಶ್ವತ. ಒಂದೊಳ್ಳೆಯ ಉದ್ದೇಶಕ್ಕೆ ನೀವು ನಿಯಮ ಮುರಿದಿದ್ದೀರಿ. ಇದನ್ನು ಬೇರೆಯವರೂ ಮಾಡಲು ಅಸಾಧ್ಯ” ಎಂದು ಧ್ರುವ ಎಂಬುವವರು ಟ್ವಿಟ್‌ ಮಾಡಿದ್ದಾರೆ. “ಉದ್ದೇಶ ಸರಿ. ಅಸಲಿ ವಿಚಾರ ಬಿಗ್‌ಬಾಸ್‌ಗೂ ಗೊತ್ತು, ಅಷ್ಟೇ ಸಾಕು.. ಮಿಸ್‌ ಯೂ ರಂಜಿತ್”‌ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಒಳ್ಳೆಯ ಉದ್ದೇಶಕ್ಕೆ ಹೋಗ್ತಿದ್ದೀಯಾ ಮಗ. ಸೂರ್ಯ ರಂಜಿತ್‌ ಬಿಬಿ ಇರೋವರೆಗೂ ಇದು ಒಂದು ಉದಾಹರಣೆಯಾಗಿ ನಿಲ್ಲಲಿದೆ. ಒಂದೊಳ್ಳೆಯ ಕಾರಣಕ್ಕೆ ನೀವು ಆಚೆ ಹೋಗಿದ್ದೀರಿ” ಎಂದು ವೀಕ್ಷಕರು ಟ್ವಿಟ್‌ ಮಾಡಿದ್ದಾರೆ.

Continue Reading
Advertisement
Karnataka Rain
ಮಳೆ17 ಗಂಟೆಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

Kichcha Sudeeps mother Saroja passes away
ಬೆಂಗಳೂರು18 ಗಂಟೆಗಳು ago

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Dina Bhavishya
ಭವಿಷ್ಯ1 ದಿನ ago

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Bigg boss kannada
ಬಿಗ್ ಬಾಸ್2 ದಿನಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ2 ದಿನಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು2 ದಿನಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ2 ದಿನಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು3 ದಿನಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ3 ದಿನಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌