horoscope today read your daily horoscope predictions for may 09, 2023Horoscope Today : ಇಂದು ಯಾವ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ? ಇಲ್ಲಿದೆ ನಿತ್ಯ ಭವಿಷ್ಯ Vistara News
Connect with us

ಪ್ರಮುಖ ಸುದ್ದಿ

Horoscope Today : ಇಂದು ಯಾವ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ? ಇಲ್ಲಿದೆ ನಿತ್ಯ ಭವಿಷ್ಯ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
Koo

ಇಂದಿನ ಪಂಚಾಂಗ (09-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ಚೌತಿ 16:07 ವಾರ: ಮಂಗಳವಾರ
ನಕ್ಷತ್ರ: ಮೂಲ 17:44 ಯೋಗ: ಸಿದ್ದಿ 21:14
ಕರಣ: ಬಾಲವ 16:07
ಅಮೃತಕಾಲ: ಬೆಳಗ್ಗೆ 11 ಗಂಟೆ 44 ನಿಮಿಷದಿಂದ ಮಧ್ಯಾಹ್ನ 01ಗಂಟೆ 14 ನಿಮಿಷದವರೆಗೆ.

ಸೂರ್ಯೋದಯ : 05:56 ಸೂರ್ಯಾಸ್ತ : 06:36

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಯಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ, ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವರ್ತನೆ ಎಲ್ಲರ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿವೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಯಾವ ಉಂಗುರ ಧರಿಸಿದರೆ ನಿಮಗೆ ಕಷ್ಟಗಳು ದೂರವಾಗುತ್ತವೆ?
Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆ ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಜೂನ್​ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

VISTARANEWS.COM


on

Edited by

World Cup schedule
Koo

ಲಂಡನ್​: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್​ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಲಂಡನ್​ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್​ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್​ 5ರಿಂದ ನವೆಂಬರ್‌ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.

ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್​ ತಂಡ ಭಾರತ ವಿರುದ್ಧ ವಿಶ್ವ ಕಪ್​ ಆಡಲ್ಲವಂತೆ!

48 ಪಂದ್ಯಗಳು

ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್​ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.

Continue Reading

ಪ್ರಮುಖ ಸುದ್ದಿ

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.

VISTARANEWS.COM


on

Edited by

western ghats in rain
Koo

ಮಳೆಗಾಲದ ಪ್ರವಾಸ ಎಂದರೆ ಮೈಮನಗಳಿಗೆ ತಾಜಾತನದ ಅನುಭೂತಿ. ಜೂನ್‌ ಬಂತೆಂದರೆ ಆಕಾಶ ಕಪ್ಪಿಟ್ಟು ಧೋ ಎಂದು ಸುರಿವ ಮಳೆಯನ್ನು ಕಾರಿನಲ್ಲಿ ತಿರುವು ಮುರುವಿನ ರಸ್ತೆಯಲ್ಲಿ ಕಾರು ಚಲಾಯಿಸುತ್ತಲೋ, ಅಥವಾ ಹೋಂ ಸ್ಟೇಯೊಂದರಲ್ಲಿ ಕೂತು, ಮಳೆಯನ್ನು ನೋಡುತ್ತಾ ಕೂರುವುದೋ ಅಥವಾ ಸುರಿದ ಮಳೆ ಬಿಟ್ಟು ಹೋದ ತಂಪಿನಲ್ಲಿ ಕಾಡಿನುದ್ದಕ್ಕೂ ಹೆಜ್ಜೆ ಹಾಕುವುದರಲ್ಲೋ ಆನಂದವಿದೆ. ಮಳೆಯನ್ನು ಪ್ರೀತಿಸುವ ಪ್ರತಿಯೊಂದು ಜೀವವೂ ಮಳೆಗಾಲದ ಪ್ರವಾಸವನ್ನು ಪ್ರೀತಿಸದೆ ಇರಲು ಸಾಧ್ಯವೇ ಇಲ್ಲ.

ಮಲೆನಾಡು ಹೆಸರೇ ಹೇಳುವಂತೆ ಮಲೆಗಳ ನಾಡು. ಇವು ಮಳೆಗಾಲದಲ್ಲಿ ಮಾತ್ರವಲ್ಲ, ಸರ್ವ ಕಾಲದಲ್ಲೂ ಹಸಿರಾಗಿ ಕಂಗೊಳಿಸುವ ಊರುಗಳು. ಇನ್ನು ಮಳೆಗಾಲ ಹೇಗಿರಬಹುದು ಎಂದು ಯಾರೂ ಕೂಡಾ ಊಹಿಸಬಹುದು. ಮಳೆಗಾಲದಲ್ಲಿ ಜಿಟಿಜಿಟಿ ಮಳೆಯ ಸದ್ದನ್ನೇ ದಿನವೂ ಕೇಳಬಹುದಾದ ಚಂದನೆಯ ಹಚ್ಚ ಹಸಿರು ಪಚ್ಚೆಪೈರಿನ ಊರುಗಳನ್ನು ಹೊಂದಿರುವ ಮಲೆನಾಡಿನಲ್ಲಿ ಸಾಕಷ್ಟು ಪ್ರವಾಸೀ ತಾಣಗಳೂ ಇವೆ. ಬಹುತೇಕ ಪ್ರವಾಸಿ ತಾಣಗಳನ್ನು ಮಳೆಗಾಲದಲ್ಲಿ ನೋಡುವ ಸೊಗಸೇ ಬೇರೆ. ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.

sakrebailu elephant camp

1. ಸಕ್ರೆಬೈಲು ಆನೆ ಶಿಬಿರ: ಶಿವಮೊಗ್ಗದಿಂದ 14 ಕಿಮೀ ದೂರದಲ್ಲಿರುವ ಸಕ್ರೆಬೈಲು ಆನೆ ಶಿಬಿರ ಹಲವು ಆನೆಗಳಿಗಿಗೆ ತವರು. ಇಲ್ಲಿ ತರಬೇತಿ ಪಡೆದ ಆನೆಗಳನ್ನೂ, ಆನೆ ಮರಿಗಳನ್ನೂ ನೋಡುವುದಷ್ಟೇ ಅಲ್ಲ, ಇಲ್ಲಿ ತುಂಬಿ ಹರಿವ ತುಂಗೆಯಲ್ಲಿ ಆನೆ ಸ್ನಾನ ಮಾಡುವ ಸೊಬಗನ್ನೂ ನೋಡಬಹುದು. ಮಳೆಗಾಲದಲ್ಲಿ, ಸಕ್ರೆಬೈಲು ಹಾಗೂ ಸುತ್ತಮುತ್ತಲ ಕಾಡಿನ ಪರಿಸರ ಅದ್ಭುತವಾಗಿ ಕಾಣಿಸುವುದಷ್ಟೇ ಅಲ್ಲ, ಇಲ್ಲಿಗೆ ಹೋಗುವ ದಾರಿಯೂ ಒಂದು ಅನುಭವವೇ. ರಸ್ತೆಯ ಇಕ್ಕೆಲಗಳಲ್ಲಿರುವ ಗದ್ದೆ, ಮಳೆಗಾಲ ಶುರುವಾಗುವ ಹೊತ್ತಿನಲ್ಲಿ ರೈತರು ಪೈರು ನೆಡುವ ಸಂಭ್ರಮ, ಮುಂಜಾವಿನಲ್ಲಿ ಮಂಜು ಮುಸುಕಿದ ಪ್ರಕೃತಿ ಇವೆಲ್ಲ ನೋಡುತ್ತಾ ಪ್ರವಾಸ ಮಾಡುವ ಅನುಭವವೇ ಜೀವನದ ಅತ್ಯಂತ ಸಂತಸಾಯಕ ಅನುಭವಗಳಲ್ಲೊಂದಾಗಬಹುದು.

kuppalli in rain

2. ಕುಪ್ಪಳ್ಳಿ: ನಮ್ಮ ನಾಡಗೀತೆಯನ್ನು ರಚಿಸಿದ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರನ್ನು ನಾವು ಪ್ರೀತಿಯಿಂದ ಸ್ಮರಿಸಿದಾಗಲೆಲ್ಲ ನೆನಪಾಗುವುದು ಕುಪ್ಪಳ್ಳಿ. ಕುಪ್ಪಳ್ಳಿ ಕುವೆಂಪು ಅವರ ತವರು. ಕುವೆಂಪು ಕೃತಿಗಳಲ್ಲಿ ಮಲೆನಾಡಿನ ಸೊಬಗಿನ ಕುರಿತಾದ ವರ್ಣನೆಯನ್ನು ಕೇಳಿದವರಿಗೆಲ್ಲ, ಕುಪ್ಪಳ್ಳಿಯನ್ನು ನೋಡಬೇಕೆಂಬ ತವಕ ಇಲ್ಲದೆ ಇರದು. ಮಳೆಗಾಲದಲ್ಲಿ ಮಲೆನಾಡಿನ ಕುಪ್ಪಳ್ಳಿಯನ್ನು ನೋಡಲು ಸಕಾಲ. ಶಿವಮೊಗ್ಗದಿಂದ 66 ಕಿಮೀ ದೂರದಲ್ಲಿರುವ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಮನೆಯನ್ನೂ, ಕವಿಶೈಲವನ್ನೂ ನೋಡಿ, ಆಗುಂಬೆಯ ಸೊಬಗನ್ನೂ ಸವಿದು ಜೋಗ ಜಲಪಾತ, ಲಿಂಗನಮಕ್ಕಿ ಹಿನ್ನೀರು, ಕುಂದಾದ್ರಿ ಬೆಟ್ಟ ಇತ್ಯಾದಿಗಳನ್ನೆಲ್ಲ ನೋಡಿ ಬರಬಹುದು.

kandlavana in honnavara

3. ಹೊನ್ನಾವರ ಕಾಂಡ್ಲಾವನ: ಹೊನ್ನಾವರದ ಶರಾವತಿ ಕಾಂಡ್ಲಾವನ ಇತ್ತೀಚೆಗೆ ಭಾರೀ ಪ್ರಸಿದ್ಧಿ ಪಡೆದಿರುವ ಚಂದನೆಯ ಪ್ರವಾಸೀ ತಾಣಗಳಲ್ಲೊಂದು. ಶರಾವತಿ ಹಿನ್ನೀರಿನಲ್ಲಿ ಕಾಂಡ್ಲಾ ಮಳೆಕಾಡುಗಳನ್ನು ನೋಡಲು ನಿರ್ಮಿತವಾದ ನಡೆದು ಸಾಗಬಹುದಾದ ಮರದ ಸೇತುವೆಯ ಮೂಲಕ ಸಾಗುತ್ತಾ ಕಾಂಡ್ಲಾವನದ ಸೊಬಗನ್ನು ಸವಿಯಬಹುದು. ಶರಾವತಿ ಹಿನ್ನೀರಿನಲ್ಲಿ ಬೋಟಿಂಗ್‌ ಕೂಡಾ ಮಾಡಬಹುದು.

manjarabad port in sakaleshpura

4. ಮಂಜರಾಬಾದ್‌ ಕೋಟೆ: ಕನ್ನಡದ ಹಲವು ಸಿನಿಮಾಗಳ ಹಾಡುಗಳಲ್ಲಿ ಬಂದು ಹೋಗಿರುವ ಈ ಕೋಟೆಯನ್ನು ಮಳೆಗಾಲದಲ್ಲಿ ನೋಡುವುದೇ ಸೊಗಸು. ೧೭೯೨ರಲ್ಲಿ ಟಿಪ್ಪು ಸುಲ್ತಾನ್‌ ಕಟ್ಟಿಸಿದ ಈ ಕೋಟೆ ನಕ್ಷತ್ರಾಕಾರದಲ್ಲಿರುವುದರಿಂದ ಗಮನ ಸೆಳೆಯುತ್ತದೆ. ಸಕಲೇಶಪುರಿಂದ ೬ ಕಿಮೀ ದೂರದಲ್ಲಿರುವ ಈ ಕೋಟೆ ಮಳೆಗಾಲದಲ್ಲಿ ನೋಡಲೇಬೇಕಾದ ಸುಂದರ ತಾಣ.

dandeli kali river in rain

5. ದಾಂಡೇಲಿ: ಮಳೆಗಾಲದಲ್ಲಿ ನೋಡಲೇಬೇಕಾದ ಇನ್ನೊಂದು ಅದ್ಭುತ ಸ್ಥಳ ಎಂದರೆ ಅದು ಉತ್ತರಕನ್ನಡ ಜಿಲ್ಲೆಯಲ್ಲಿರುವ ದಾಂಡೇಲಿ. ಕಾಳೀ ನದೀ ತೀರದಲ್ಲಿರುವ ದಾಂಡೇಲಿಯನ್ನು ಮಳೆಗಾಲದಲ್ಲಿ ನೋಡುವುದೇ ಚಂದ. ದಟ್ಟ ಕಾಡು, ಸದಾ ಸುರಿವ ಮಳೆ, ಅಪರೂಪದ ಪಕ್ಷಿಸಂಕುಲ ಎಲ್ಲವೂ ದಾಂಡೇಲಿಯನ್ನು ಅಪೂರ್ವವನ್ನಾಗಿ ಮಾಡಿವೆ. ಇಲ್ಲಿ ತಿರುಗಾಡುವ ಮೂಲಕ ನೀವು ಈವರೆಗೆ ಕಂಡಿರದ ಮಳೆಯನ್ನೂ ಅನುಭವಿಸಬಹುದು, ಅಷ್ಟೇ ಅಲ್ಲ, ಅದೃಷ್ಟ ಮಾಡಿದ್ದರೆ, ಹಾರ್ನ್‌ಬಿಲ್‌ ಪಕ್ಷಿಯನ್ನೂ ಕಾಣಬಹುದು!

ಇದನ್ನೂ ಓದಿ: Monsoon Travel: ಮಳೆ ಇಷ್ಟಪಡುವ ಮಂದಿ ಮಳೆಗಾಲದಲ್ಲಿ ಈ ಬೆಟ್ಟದೂರುಗಳಿಗೆ ಹೋಗಬೇಕು!

Continue Reading

ಆರೋಗ್ಯ

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

VISTARANEWS.COM


on

Edited by

Chamarajanagar oxygen tragedy and Dinesh Gundu Rao
Koo

ಬೆಂಗಳೂರು: ‌ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್‌ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್!‌ 90 ರೂಪಾಯಿ ಮಿನಿಮಮ್ ಚಾರ್ಜ್‌ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?

ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೋವಿಡ್ ಅವಧಿಯ ಟೆಂಡರ್‌ಗಳ ಮರು ಪರಿಶೀಲನೆ ಮಾಡಲಾಗುತ್ತದೆ. ಅನುಮಾನ ಬಂದ ಟೆಂಡರ್‌ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್‌ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ‌ಕರೆಯುತ್ತೇವೆ ಎಂದು ಹೇಳಿದರು.

ಅಧಿಕಾರಿಗಳಿಗೆ ತರಾಟೆ

ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Manja Thread: ಇದುವರೆಗೂ ಪಕ್ಷಿಗಳ ಪ್ರಾಣ ತೆಗೆಯುತ್ತಿದ್ದ ಗಾಳಿಪಟದ ಮಾಂಜಾ ದಾರ, ಈಗ ಅಮಾಯಕ ಯುವಕನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಸತತ ಆರು ದಿನಗಳ ಜೀವನ್ಮರಣ ಹೋರಾಟ ನಡೆಸಿ, ನರಳಾಡಿ ಪ್ರಾಣ ಬಿಟ್ಟಿದ್ದಾನೆ.

VISTARANEWS.COM


on

Edited by

Manja Thread dead person
ರವಿ ಮೃತ ದುರ್ದೈವಿ
Koo

ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಚೈನೀಸ್‌ ಮಾಂಜಾ ದಾರವು (Manja Thread) ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ.

ಉತ್ತರ‌ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವೇಳೆ ಗಾಳಿಪಟ ಹಾರಿಸುವ ಪರಿಪಾಠ ಇದೆ. ಆದರೆ ಇದೆ ಸಂಭ್ರಮವು ಬೈಕ್‌ ಸವಾರರಿಗೆ ಸಂಚಕಾರ ತಂದೊಡ್ಡಿದೆ. ಗದಗ ನಗರದ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿ, ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ ಕತ್ತು ಸೀಳಿತ್ತು. ರಕ್ತದ ಮಡುವಿನಲ್ಲೇ ಸ್ಥಳೀಯರು ಆಟೋ ಮೂಲಕ ರವಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹರಿತವಾದ ದಾರವು ರವಿಯ ಕತ್ತನ್ನು ಬಲವಾಗಿ ಸೀಳಿದ್ದರಿಂದ, ಆರು ದಿನ ಬಳಿಕ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

Manja Thread Effected

ಕಾಳಸಂತೆಯಲ್ಲಿ ಸಿಗ್ತಿದೆ ಅಪಾಯಕಾರಿ ದಾರ

ರಾಜ್ಯದಲ್ಲಿ ಚೈನೀಸ್ ಮಾಂಜಾ ದಾರ ಮಾರಾಟವು ನಿಷೇಧ ಇದ್ದರೂ, ಗದಗ ಜಿಲ್ಲೆಯಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿಲ್ಲ. ಕಾಳಸಂತೆಗಳಲ್ಲಿ ಈ ಅಪಾಯಕಾರಿ ದಾರ ಮಾರಾಟವಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಕಳೆದ ಭಾನುವಾರ (ಜೂ.4) ಕಾರ ಹುಣ್ಣಿಮೆಯ ದಿನದಂದು ಹಾರಿಸಿದ ಗಾಳಿಪಟದ ದಾರದಿಂದಾಗಿ ರೈಲ್ವೆ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿತ್ತು. ಬೈಕ್‌ನಲ್ಲಿ ಹೋಗುವಾಗ ಕತ್ತು, ಕೈ-ಕಾಲುಗಳಿಗೆ ಹರಿತವಾದ ದಾರದಿಂದ ಗಾಯಗಳಾಗಿತ್ತು. ಈ ರೀತಿಯ ಅವಘಡಗಳು ನಡೆಯುತ್ತಿದ್ದರೂ, ಸಂಬಂಧಪಟ್ಟವರು ಗಪ್ ಚುಪ್ ಆಗಿದ್ದಾರೆ.

ಇದನ್ನೂ ಓದಿ: Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

ಅಪಾಯಕಾರಿ ಮಾಂಜಾ ದಾರಕ್ಕೆ ಕಡಿವಾಣ ಹಾಕುವಂತೆ ವಿಸ್ತಾರ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಆದರೆ ಅಧಿಕಾರಿ ವರ್ಗ ಮಾತ್ರ ಕೈ ಕಟ್ಟಿ ಕುಳಿತು ನಿರ್ಲಕ್ಷ್ಯತನ ತೋರಿತ್ತು. ಇದರ ಪರಿಣಾಮ ಈಗ ಕಾರ ಹುಣ್ಣಿಮೆ ವೇಳೆ ಮಾಂಜಾ ದಾರದಲ್ಲಿ ಗಾಳಿಪಟ ಹಾರಿಸಿದ ಕಾರಣದಿಂದಾಗಿ ಸವಾರರು ಗಂಭೀರ ಗಾಯಗೊಂಡಿದ್ದರು. ಅದರಲ್ಲಿ ಒಬ್ಬ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಚೈನೀಸ್‌ ಮಾಂಜಾ ದಾರ ಮಾರಾಟವನ್ನು ತಡೆಯುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ‌ ಮಾಡಿದ್ದರು. ‌ಆದರೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯತನ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Actress Nayanthara
South Cinema8 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ10 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್14 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema16 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema20 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ33 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

Monsoon Fashion 2023
ಫ್ಯಾಷನ್1 hour ago

Monsoon Fashion 2023: ಫ್ಯಾಷನ್‌ ಲೋಕಕ್ಕೆ ಲಗ್ಗೆ ಇಟ್ಟ ಮಾನ್ಸೂನ್‌ ಸೀಸನ್‌ ವೈಬ್ರೆಂಟ್‌ ಔಟ್‌ಫಿಟ್ಸ್!

Chamarajanagar oxygen tragedy and Dinesh Gundu Rao
ಆರೋಗ್ಯ1 hour ago

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Manja Thread dead person
ಕರ್ನಾಟಕ1 hour ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ1 hour ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!