horoscope today read your daily horoscope predictions for may 17, 2023Horoscope Today : ಇಂದು ಐದು ರಾಶಿಯವರಿಗೆ ಶುಭ ಫಲ; ನಿಮ್ಮ ರಾಶಿ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today : ಇಂದು ಐದು ರಾಶಿಯವರಿಗೆ ಶುಭ ಫಲ; ನಿಮ್ಮ ರಾಶಿ ಭವಿಷ್ಯ ಹೀಗಿದೆ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತ್ರಯೋದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (17-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ತ್ರಯೋದಶಿ 22:27 ವಾರ: ಬುಧವಾರ
ನಕ್ಷತ್ರ: ರೇವತಿ 07:37 ಯೋಗ: ಆಯುಷ್ಮಾನ್ 21:15
ಕರಣ: ಗರಜ 10:59 ಇಂದಿನ ವಿಶೇಷ: ಪ್ರದೋಷ
ಅಮೃತಕಾಲ: ಮುಂಜಾನೆ 05 ಗಂಟೆ 18 ನಿಮಿಷದಿಂದ 06 ಗಂಟೆ 52 ನಿಮಿಷದವರೆಗೆ.

ಸೂರ್ಯೋದಯ : 05:54 ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಭಾವನಾತ್ಮಕವಾಗಿ ನೀವು ಇಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದೀತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜೊತೆಗೆ ಪುರಸ್ಕಾರ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸಿಹಿ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡುತ್ತವೆ. ಆತುರದ ತಿರ್ಮಾನ, ಮಾತುಗಳು ಅಪಾಯ ತಂದೀತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವರು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ ಸಾಧ್ಯತೆ. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್‌ ಪ್ರಯಾಣ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ. ಇದರ ನಡುವೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು. ಕೋಪದಲ್ಲಿ ಮಾತಿಗೆ ಮಾತು ಬೆಳೆಸುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ. ಯೋಚಿಸದೇ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಕೋಪದಲ್ಲಿ ಆಡಿದ ಮಾತುಗಳ ಪರಿಣಾಮ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಫಾರೂಕ್‌ ಅಬ್ದುಲ್ಲಾ, ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Farooq Abdullah
Koo

ಶ್ರೀನಗರ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರ (PoK) ಕುರಿತು ಮಹತ್ವದ ಚರ್ಚೆಯೊಂದು ಶುರುವಾಗಿದೆ. “ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳುವುದು, ಸೇನೆಯನ್ನು ನುಗ್ಗಿಸಿ ವಾಪಸ್‌ ಪಡೆಯುವುದು ಬೇಕಾಗಿಲ್ಲ. ಅಲ್ಲಿನ ಜನರೇ ಭಾರತದ ಜತೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಹೇಳಿದ್ದಾರೆ. ಇನ್ನು ಇದಕ್ಕೆ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ (Farooq Abdullah) ಪ್ರತಿಕ್ರಿಯಿಸಿದ್ದು, “ಭಾರತ ಆಕ್ರಮಣ ಮಾಡುವುದು ಬೇಕಾಗಿಲ್ಲ. ಪಾಕಿಸ್ತಾನವೇನೂ ಬಳೆ ತೊಟ್ಟಿಲ್ಲ” ಎಂದು ಹೇಳಿದ್ದಾರೆ. ಇದು ಈಗ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಜನಾಥ್‌ ಸಿಂಗ್‌ ಹೇಳಿದ್ದೇನು?

ಪಿಟಿಐಗೆ ಸಂದರ್ಶನ ನೀಡುವ ವೇಳೆ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದರು. “ಪಿಒಕೆ ವಿಚಾರದಲ್ಲಿ ಭಾರತ ಏನೂ ಮಾಡಬೇಕಿಲ್ಲ. ಜಮ್ಮು-ಕಾಶ್ಮೀರದ ಪರಿಸ್ಥಿತಿ ಬದಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವ ಜತೆಗೆ ಆರ್ಥಿಕ ಪ್ರಗತಿಯಾಗುತ್ತಿದೆ. ಇದರಿಂದಾಗಿ ನಾವು ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಬೇಕಿಲ್ಲ. ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಹೇಳಿದ್ದರು.

ಫಾರೂಕ್‌ ಅಬ್ದುಲ್ಲಾ ಪ್ರತಿಕ್ರಿಯೆ ಏನು?

ಸುದ್ದಿಗೋಷ್ಠಿ ನಡೆಸಿದ ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ, ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. “ದೇಶದ ರಕ್ಷಣಾ ಸಚಿವರು ಪಿಒಕೆ ಮೇಲೆ ದಾಳಿ ಮಾಡಿ ಎಂಬುದಾಗಿ ಹೇಳಿದರೆ, ಅದನ್ನು ತಡೆಯಲು ನಾವು ಯಾರು? ಆದರೆ, ಒಂದು ನೆನಪಿರಲಿ. ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ. ಅವರ ಬಳಿಯೂ ಪರಮಾಣು ಬಾಂಬ್‌ಗಳಿವೆ. ಆ ಪರಮಾಣು ಬಾಂಬ್‌ಗಳು ನಮ್ಮ ಮೇಲೆ ಬಂದು ಬೀಳುತ್ತವೆ” ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಎಚ್ಚರಿಸಿದ್ದಾರೆ.

ಜೈಶಂಕರ್‌ ಕೂಡ ಮಹತ್ವದ ಹೇಳಿಕೆ

ಪಿಒಕೆ ಕುರಿತು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಕೂಡ ಹೇಳಿಕೆ ನೀಡಿದ್ದಾರೆ. “ಪಿಒಕೆ ಭಾರತದ ಭಾಗವಾಗಿದೆ. ಪಿಒಕೆ ಭಾರತದ ಭಾಗ ಎಂಬುದಾಗಿ ಸಂಸತ್ತಿನಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿದೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಆದರೆ, ಅದನ್ನು ಅತಿಕ್ರಮಣ ಮಾಡಿಕೊಳ್ಳಲು ಕಾರಣರಾದವರು ಯಾರು? ಅದರ ಮೇಲೆ ಬೇರೆಯವರು ನಿಯಂತ್ರಣ ಸಾಧಿಸಲು ಯಾರು ಕಾರಣ” ಎಂಬುದಾಗಿ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕುಟುಕಿದರು. ಇದಕ್ಕೂ ಮೊದಲು ಕೂಡ, ಅಮಿತ್‌ ಶಾ ಅವರು ಪಿಒಕೆ ನಮ್ಮದೇ ಎಂದು ಹೇಳಿದ್ದರು.

ಇದನ್ನೂ ಓದಿ: ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Continue Reading

Latest

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Champions Trophy: ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ.

VISTARANEWS.COM


on

Champions Trophy
Koo

ಬೆಂಗಳೂರು: ಪಾಕಿಸ್ತಾನ ಸೂಪರ್ ಲೀಗ್ (PSL) ನ 2025 ರ ಆವೃತ್ತಿಯನ್ನು ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಪ್ರಿಲ್ 7 ರಿಂದ ಮೇ 20 ರವರೆಗೆ ಸಮಯವನ್ನು ನಿಗದಿಪಡಿಸಿದೆ. ಇದರರ್ಥ ಮುಂದಿನ ವರ್ಷದ ಪಿಎಸ್ಎಲ್ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಋತುವಿನೊಂದಿಗೆ ಸಂಘರ್ಷ ಹೊಂದುತ್ತದೆ. ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಲಿರುವ 2025 ರ ಚಾಂಪಿಯನ್ಸ್ ಟ್ರೋಫಿಯಿಂದಾಗಿ (Champions Trophy) ಪಿಎಸ್ಎಲ್ 2025 ಅನ್ನು ವಿಳಂಬಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಬಿಸಿಸಿಐಗೆ ತೊಂದರೆ ನೀಡಲು ಪಾಕಿಸ್ತಾನ ಸಂಚು ರೂಪಿಸಿದೆ.

ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಇದು ಶತ್ರು ರಾಷ್ಟ್ರವನ್ನು ಕೆರಳಿಸಿದೆ. ಮತ್ತೊಂದು ಬಾರಿ ಆಗಲಿರುವ ಮುಜುಗರವನ್ನು ತಪ್ಪಿಸಿಕೊಳ್ಳುವುದಕ್ಕೆ ಭಾರತ ಮತ್ತು ಬಿಸಿಸಿಐಗೆ ಕಾಟ ಕೊಡಲು ಮುಂದಾಗಿದೆ. ಅರದಂತೆ ಫೆಬ್ರವರಿ ವೇಳೆಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಿ ಬಳಿಕ ಪಿಎಸ್​ಎಲ್​ ನಡೆಸಲು ಮುಂದಾಗಿದೆ. ಇದರಿಂದ ಭಾರತಕ್ಕೆ ಐಪಿಎಲ್​ ನಡೆಸಲು ತೊಂದರೆ ಆಗಲಿ ಮತ್ತು ವಿದೇಶಿ ಆಟಗಾರರ ಲಭ್ಯತೆ ಕಡಿಮೆಯಾಗಲಿ ಎಂದು ಯೋಜನೆ ರೂಪಿಸಿದೆ.

ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ. ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ಆಯೋಜಿಸಲಿದ್ದು, ಎರಡೂ ತಂಡಗಳು ತವರು ನೆಲದಲ್ಲಿ ಕನಿಷ್ಠ ಐದು ಪಂದ್ಯಗಳನ್ನು ಆಡಲಿವೆ.

“ಪಿಸಿಬಿ ಹೆಚ್ಚುವರಿ ಸ್ಥಳಗಳನ್ನು ಅನ್ವೇಷಿಸುವುದನ್ನು ಮುಂದುವರಿಸುತ್ತದೆ. ನಾಲ್ಕು ಪ್ಲೇಆಫ್​ಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ, “ಎಂದು ಪಿಸಿಬಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

ವಿದೇಶಿ ಆಟಗಾರರಿಗೆ ಸಮಸ್ಯೆ

2025 ರಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ದಿನಾಂಕಗಳ ನಡುವಿನ ಸಂಭಾವ್ಯ ಘರ್ಷಣೆಯು ಅನೇಕ ವಿದೇಶಿ ಆಟಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತದೆ. ಏಕೆಂದರೆ ಅವರು ಎರಡು ಲೀಗ್​ಗಳ ನಡುವೆ ಒಂದನ್ನು ಮಾತ್ರ ಆರಿಸಬೇಕಾಗುತ್ತದೆ.

“ಎಂದಿನಂತೆ, ಪಾಕಿಸ್ತಾನ ಸೂಪರ್ ಲೀಗ್ 2025 ಗಾಗಿ ನಾವು ಫ್ರಾಂಚೈಸಿ ಮಾಲೀಕರೊಂದಿಗೆ ಬಹಳ ರೋಮಾಂಚಕಾರಿ ಮತ್ತು ಆಸಕ್ತಿದಾಯಕ ಸಭೆಯನ್ನು ನಡೆಸಿದ್ದೇವೆ. ಫ್ರಾಂಚೈಸಿ ಮಾಲೀಕರು 2025 ರ ಈವೆಂಟ್ ಮತ್ತು ಅದರಾಚೆಗೆ ಪಿಸಿಬಿ ಶಿಫಾರಸು ಮಾಡಿದ ವಿಂಡೋ ಮತ್ತು ಪ್ಲೇಆಫ್ ಸ್ಥಳಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

“ಈ ಸಭೆಯಲ್ಲಿ ಪಿಎಸ್ಎಲ್ 2025 ಮತ್ತು ಅದಕ್ಕಿಂತ ಹೆಚ್ಚಿನ ಸೂಕ್ತ ವಿಂಡೋಗೆ ಸಂಬಂಧಿಸಿದಂತೆ ಪಿಸಿಬಿ ಫ್ರಾಂಚೈಸಿ ಮಾಲೀಕರೊಂದಿಗೆ ಹೆಚ್ಚಿನ ಡೇಟಾ ಹಂಚಿಕೊಳ್ಳಲಿದೆ. ಇದರಿಂದ ಅವರು ತಮ್ಮೊಳಗೆ ಚರ್ಚಿಸಬಹುದು, ಹೆಚ್ಚು ಮಾಹಿತಿಯುತ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಸಾಮಾನ್ಯ ಮಂಡಳಿ ಸಭೆಯಲ್ಲಿ ತಮ್ಮ ಆಲೋಚನೆಗಳು ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲಾಗಿದೆ ಎಂದು ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

ಪಾಕಿಸ್ತಾನದ ಅತಿದೊಡ್ಡ ಬ್ರಾಂಡ್​​ ಒಂದರ ಭವಿಷ್ಯಕ್ಕಾಗಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಫ್ರಾಂಚೈಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

Continue Reading

ಕ್ರೀಡೆ

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

IPL 2024 : ಇನ್ನಿಂಗ್ಸ್ ಮಧ್ಯದ ವಿರಾಮದ ಸಮಯದಲ್ಲಿ, 33 ವರ್ಷದ ಆಟಗಾರ ವೀಕ್ಷಕವಿವರಣೆಗಾರರು ಈ ಬಗ್ಗೆ ಕೇಳಿದಾಗ ತಮ್ಮ ನಿಧಾನ ಸಂಭ್ರಮಾಚರಣೆಯ ಕುರಿತು ಮಾತನಾಡಿದ್ದಾರೆ. ಭಾರತ ತಂಡದ ಮಾಜಿ ನಾಯಕನ ಬಗ್ಗೆ “ತುಂಬಾ ಗೌರವ” ಇದೆ, ಅದಕ್ಕಾಗಿ ಹೆಚ್ಚು ಸಂಭ್ರಮಿಸಲಿಲ್ಲ ಎಂದು ಹೇಳಿದರು. ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಸಿಎಸ್​ಕೆ ದಂತಕಥೆಯ ಮೇಲಿನ ಅಭಿಮಾನವನ್ನು ಅವರು ಮೃದು ಆಚರಣೆಯ ಮೂಲಕ ಪ್ರಸ್ತುತಪಡಿಸಿದರು.

VISTARANEWS.COM


on

IPL 2024
Koo

ಧರ್ಮಶಾಲಾ: ಇಲ್ಲಿ ನಡೆದ ಐಪಿಎಲ್ 2024ರ (IPL 2024) 53 ನೇ ಪಂದ್ಯದಲ್ಲಿ ಸಿಎಸ್​​ಕೆ ಇನ್ನಿಂಗ್ಸ್​​ನ ಡೆತ್ ಓವರ್​ಗಳಲ್ಲಿ ಹರ್ಷಲ್ ಪಟೇಲ್ ಮಿಂಚಿದ್ದರು. ಅವರು ಸಿಎಸ್​ಕೆ ಮಾಜಿ ನಾಯಕ ಎಂಎಸ್ ಧೋನಿಯನ್ನು ನಿಧಾನಗತಿಯ ಯಾರ್ಕರ್ನಿಂದ ಔಟ್​ ಮಾಡಿದರು. ಅದೇ ರೀತಿ ಪಂಜಾಬ್ ಕಿಂಗ್ಸ್ ತಂಡದ ಡ್ಯಾರಿಲ್ ಮಿಚೆಲ್ ಮತ್ತು ಶಾರ್ದೂಲ್ ಠಾಕೂರ್ ಅವರ ವಿಕೆಟ್ಗಳನ್ನು ಪಡೆದು ‘ಯೆಲ್ಲೋ ಬ್ರಿಗೇಡ್’ ಅನ್ನು 167 ರನ್​ಗಳಿಗೆ ನಿಯಂತ್ರಿಸಲು ನೆರವಾದರು. ಕುತೂಹಲಕಾರಿ ಸಂಗತಿಯೆಂದರೆ, ಡೇಂಜರ್ ಮ್ಯಾನ್ ಎಂಎಸ್ ಧೋನಿಯನ್ನು ಔಟ್ ಮಾಡಿದ ನಂತರವೂ ಪಟೇಲ್ ಹೆಚ್ಚು ಸಂಭ್ರಮಾಚರಣೆ ಮಾಡಲಿಲ್ಲ. ಅದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಇನ್ನಿಂಗ್ಸ್ ಮಧ್ಯದ ವಿರಾಮದ ಸಮಯದಲ್ಲಿ, 33 ವರ್ಷದ ಆಟಗಾರ ವೀಕ್ಷಕವಿವರಣೆಗಾರರು ಈ ಬಗ್ಗೆ ಕೇಳಿದಾಗ ತಮ್ಮ ನಿಧಾನ ಸಂಭ್ರಮಾಚರಣೆಯ ಕುರಿತು ಮಾತನಾಡಿದ್ದಾರೆ. ಭಾರತ ತಂಡದ ಮಾಜಿ ನಾಯಕನ ಬಗ್ಗೆ “ತುಂಬಾ ಗೌರವ” ಇದೆ, ಅದಕ್ಕಾಗಿ ಹೆಚ್ಚು ಸಂಭ್ರಮಿಸಲಿಲ್ಲ ಎಂದು ಹೇಳಿದರು. ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಸಿಎಸ್​ಕೆ ದಂತಕಥೆಯ ಮೇಲಿನ ಅಭಿಮಾನವನ್ನು ಅವರು ಮೃದು ಆಚರಣೆಯ ಮೂಲಕ ಪ್ರಸ್ತುತಪಡಿಸಿದರು.

ಇದಕ್ಕೂ ಮುನ್ನ ಹರ್ಷಲ್ ಪಟೇಲ್ ನ್ಯೂಜಿಲೆಂಡ್ ಮೂಲದ ಸಿಎಸ್​​ಕೆ ತಂಡದ ಮೂರನೇ ಕ್ರಮಾಂಕದ ಬ್ಯಾಟರ್​ ಡ್ಯಾರಿಲ್ ಮಿಚೆಲ್ ಅವರನ್ನು ಲೆಂಗ್ತ್ ಎಸೆತದಲ್ಲಿ ಬಲೆಗೆ ಬೀಳಿಸಿದ್ದರು. ಇದಲ್ಲದೆ, ಪಟೇಲ್ ತಮ್ಮ ಸ್ಪೆಲ್​​ನ ಅಂತಿಮ ಓವರ್ ಮತ್ತು ಸಿಎಸ್​​ಕೆ ಇನ್ನಿಂಗ್ಸ್​​ನ ಕೊನೆಯ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಮತ್ತು ಎಂಎಸ್ ಧೋನಿ ಅವರನ್ನು ಸತತ ಎಸೆತಗಳಲ್ಲಿ ಔಟ್​ ಮಾಡಿದರು.

ಪಂದ್ಯದಲ್ಲಿ ಏನಾಯಿತು?

ಧರ್ಮಶಾಲಾ: ಚೆನ್ನೈ ಸೂಪರ್ ಕಿಂಗ್ಸ್​ ತಂಡ ತನ್ನ ಹಿಂದಿನ ಪಂದ್ಯದ ಸೋಲಿಗೆ ಪ್ರತಿಕಾರ ತೀರಿಸಿಕೊಂಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್​ (IPL 2024) ಪಂದ್ಯದಲ್ಲಿ 28 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಹಿಂದಿನ ಪಂದ್ಯದಲ್ಲಿ ಅದೇ ತಂಡದ ವಿರುದ್ಧ ಅನುಭವಿಸಿದ್ದ 7 ವಿಕೆಟ್ ಸೋಲಿಗೆ ಉತ್ತರ ಹೇಳಿದೆ. ಇದರೊಂದಿಗೆ ಐಪಿಎಲ್‌ 2024ರ ಆವೃತ್ತಿಯಲ್ಲಿ ಪ್ಲೇ ಆಫ್‌ ಆಸೆಯನ್ನು ಇನ್ನೂ ಜೀವಂತವಾಗಿ ಇರಿಸಿಕೊಂಡಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಅತ್ತ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಪ್ಲೇ ಆಫ್‌ ಹಂತಕ್ಕೇರುವ ಕನಸು ಹೊತ್ತಿದ್ದ ಸ್ಯಾಮ್‌ ಕರನ್‌ ಪಡೆ, ಸಿಎಸ್‌ಕೆ ವಿರುದ್ಧ ಸೋಲಿನೊಂದಿಗೆ ಮತ್ತೆ ಹಿನ್ನಡೆ ಅನುಭವಿಸಿದೆ.

ಇದನ್ನೂ ಓದಿ: IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್‌ ಬೀಸಿದ ರುತುರಾಜ್‌ ಪಡೆಯುವ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯ್ತು.

ಬ್ಯಾಟಿಂಗ್‌ ಆಹ್ವಾನ ಪಡೆದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಗಲಲ್ಲ. ಅಜಿಂಕ್ಯ ರಹಾನೆ 9 ರನ್‌ ಗಳಿಸಿ ಔಟಾದರು. ಈ ವೇಳೆ ಒಂದಾದ ನಾಯಕ ಋತುರಾಜ್‌ ಹಾಗೂ ಡ್ಯಾರಿಲ್​ ಮಿಚೆಲ್‌ ಅರ್ಧಶತಕದ ಜೊತೆಯಾಟ ನೀಡಿದರು. 21 ಎಸೆತಗಳಲ್ಲಿ 32 ರನ್‌ ಗಳಿಸಿ ಗಾಯಕ್ವಾಡ್‌ ಔಟಾದರೆ, ಅವರ ಬೆನ್ನಲ್ಲೇ ಶಿವಂ ದುಬೆ ಗೋಲ್ಡನ್‌ ಡಕ್‌ ಆದರು. ಈ ವೇಳೆ ಚೆನ್ನೈ ತಂಡಕ್ಕೆ ಆಘಾತವಾಯಿತು. ಅಲ್ಲದೆ ದುಬೆ ಸತತ ಎರಡು ಪಂದ್ಯಗಳಲ್ಲಿ ಮೊದಲ ಎಸೆತದಲ್ಲೇ ಔಟಾದರು. ಮಿಚೆಲ್‌ ಇನಿಂಗ್ಸ್​​ ರನ್‌ಗೆ ಅಂತ್ಯವಾದರೆ, ಮೊಯೀನ್‌ ಅಲಿ 17 ರನ್ ಗಳಿಸಿದರು.

Continue Reading

ಪ್ರಮುಖ ಸುದ್ದಿ

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Al Jazeera: ಕತಾರ್‌ ಮೂಲದ ಸುದ್ದಿವಾನಿಯಾದ ಅಲ್‌ಜಜೀರಾ, ಹಮಾಸ್‌ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಇಸ್ರೇಲ್‌ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂಬುದು ಇಸ್ರೇಲ್‌ ವಾದವಾಗಿದೆ. ಹಾಗಾಗಿ, ಚಾನೆಲ್‌ಅನ್ನು ಸ್ಥಗಿತಗೊಳಿಸಲು ಬೆಂಜಮಿನ್‌ ನೆತನ್ಯಾಹು ಅವರು ಆದೇಶಿಸಿದ್ದಾರೆ. ಪ್ರಧಾನಿಯ ಆದೇಶದ ಬೆನ್ನಲ್ಲೇ, ಚಾನೆಲ್‌ಗೆ ತೆರಳಿದ ಪೊಲೀಸರು ವಾಹಿನಿಯ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಿದ್ದಾರೆ.

VISTARANEWS.COM


on

Al Jazeera
Koo

ಟೆಲ್‌ ಅವಿವ್:‌ 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel Hamas War) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಇಸ್ರೇಲ್‌ ಸತತವಾಗಿ ದಾಳಿ ನಡೆಸಿ, ಉಗ್ರರನ್ನು ಸದೆಬಡಿಯುತ್ತಿದೆ. ಇಸ್ರೇಲ್‌ ದಾಳಿಯಲ್ಲಿ ನಾಗರಿಕರೂ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ, ಇಸ್ರೇಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‌ಜಜೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಸ್ಥಗಿತಗೊಳಿಸಿದೆ. ಚಾನೆಲ್‌ ಬಂದ್‌ ಮಾಡುವ ಕುರಿತು ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಘೋಷಣೆ ಮಾಡಿದ್ದಾರೆ.

“ಅಲ್‌ಜಜೀರಾ ಚಾನೆಲ್‌ಅನ್ನು ಇಸ್ರೇಲ್‌ನಲ್ಲಿ ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹಾಗಾಗಿ, ಚಾನೆಲ್‌ಅನ್ನು ಸ್ಥಗಿತಗೊಳಿಸಲಾಗುತ್ತಿದೆ” ಎಂದು ಬೆಂಜಮಿನ್‌ ನೆತನ್ಯಾಹು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಬೆಂಜಮಿನ್‌ ನೆತನ್ಯಾಹು ವಕ್ತಾರ (ಅರಬ್‌ ವರ್ಲ್ಡ್)‌ ಒಫಿರ್‌ ಜೆಂಡಲ್‌ಮ್ಯಾನ್‌ ಕೂಡ ಮಾಹಿತಿ ನೀಡಿದ್ದಾರೆ. “ಕೂಡಲೇ ಅಲ್‌ಜಜೀರಾ ಚಾನೆಲ್‌ಅನ್ನು ಸ್ಥಗಿತಗೊಳಿಸುತ್ತೇವೆ. ಕೇಬಲ್‌ ಹಾಗೂ ಸ್ಯಾಟಲೈಟ್‌ ಟೆಲಿವಿಷನ್‌ ಕಂಪನಿಗಳಿಂದ ಚಾನೆಲ್‌ಅನ್ನು ತೆಗೆಯಲಾಗುತ್ತದೆ. ವರದಿಗಾರರು ಕೂಡ ಕೆಲಸ ಮಾಡಲು ಬಿಡುವುದಿಲ್ಲ” ಎಂದು ತಿಳಿಸಿದ್ದಾರೆ. ಇದಾದ ಬೆನ್ನಲ್ಲೇ, ಚಾನೆಲ್‌ಗೆ ತೆರಳಿದ ಪೊಲೀಸರು ಸುದ್ದಿವಾಹಿನಿಯನ್ನು ಸ್ಥಗಿತಗೊಳಿಸಿದ್ದಾರೆ. ಇದಕ್ಕೆ ಅಲ್‌ಜಜೀರಾ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದೆ.

ಕತಾರ್‌ ಮೂಲದ ಸುದ್ದಿವಾನಿಯಾದ ಅಲ್‌ಜಜೀರಾ, ಹಮಾಸ್‌ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಇಸ್ರೇಲ್‌ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂಬುದು ಇಸ್ರೇಲ್‌ ವಾದವಾಗಿದೆ. “ಇಸ್ರೇಲ್‌ ವಿರೋಧಿ ನೀತಿಯನ್ನು ಅಲ್‌ಜಜೀರಾ ಅನುಸರಿಸುತ್ತಿದೆ. ಅದು ಹಮಾಸ್‌ ಮುಖವಾಣಿಯಂತೆ ಕಾರ್ಯನಿರ್ವಹಿಸುತ್ತಿದೆ. ಇದು ದೇಶದ ಭದ್ರತೆಗೆ ಧಕ್ಕೆ ತರುವ ವಿಷಯವಾಗಿದೆ. ಹಾಗಾಗಿ, ಚಾನೆಲ್‌ ಸ್ಥಗಿತಗೊಳಿಸಲು ಆದೇಶಿಸಲಾಗಿದೆ” ಎಂದು ಇಸ್ರೇಲ್‌ ಸಚಿವರೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದಕ್ಕೂ ಮೊದಲು ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ವಿರುದ್ಧ ಮಂಡಿಸಿದ ನಿರ್ಣಯದ ಪರವಾಗಿ ಭಾರತ ಮತದಾನ ಮಾಡಿತ್ತು. ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶಗಳಲ್ಲಿ ಇಸ್ರೇಲ್‌ ಆಕ್ರಮಣಕಾರಿ ನೀತಿಯನ್ನು ಖಂಡಿಸಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಪರವಾಗಿ ಭಾರತ ಮತದಾನ ಮಾಡಿರುವುದು ವಿಶೇಷವಾಗಿತ್ತು. ಇದಾದ ನಂತರ ಇಸ್ರೇಲ್‌ ವಿರುದ್ಧ ಮಂಡಿಸಿದ ನಿರ್ಣಯದ ಮತದಾನದಿಂದ ಭಾರತ ದೂರ ಉಳಿದಿದೆ.

ಇದನ್ನೂ ಓದಿ: War and Love : ಹಮಾಸ್​ ಒತ್ತೆಯಾಳುವಾಗಿರುವ ಪ್ರಿಯತಮನಿಗಾಗಿ 6 ತಿಂಗಳಿಂದ ಕಾಯುತ್ತಿದ್ದಾಳೆ ಇಸ್ರೇಲ್​ ಯುವತಿ!

Continue Reading
Advertisement
Farooq Abdullah
ದೇಶ3 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest17 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ1 hour ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ1 hour ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest2 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ2 hours ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 20242 hours ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌