horoscope today read your daily horoscope predictions for may 24, 2023Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ - Vistara News

ಪ್ರಮುಖ ಸುದ್ದಿ

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (24-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಪಂಚಮಿ 27:00 ವಾರ: ಬುಧವಾರ
ನಕ್ಷತ್ರ: ಪುರ್ನವಸು 15:05 ಯೋಗ: ಗಂಡ 17:18
ಕರಣ: ಭವ 13:56 ಇಂದಿನ ವಿಶೇಷ: ಶ್ರುತ ಪಂಚಮಿ, ಕಾಮನ್‌ವೆಲ್ತ್ ದಿನ
ಅಮೃತಕಾಲ: ಮಧ್ಯಾಹ್ನ 12 ಗಂಟೆ 28 ನಿಮಿಷದಿಂದ 02 ಗಂಟೆ 13 ನಿಮಿಷದವರೆಗೆ.

ಸೂರ್ಯೋದಯ : 05:53 ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಮಾಡುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಸಮಯ ವ್ಯರ್ಥ ಮಾಡದೇ ಕಾರ್ಯದಲ್ಲಿ ಮುನ್ನುಗ್ಗಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವುದು ಬೇಡ. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ದೊರೆಯಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ. ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ. ಅತಿರೇಕದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು, ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಗಲುಗನಸು ಕಾಣುತ್ತಾ ಸಮಯ ಮತ್ತು ಶ್ರಮವನ್ನು ವ್ಯರ್ಥ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಬಿರುಸು ಮಾತುಗಳಿಂದ ಸಂಬಂಧ ಹಳಸುವ ಸಾಧ್ಯತೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಮಾಟ ಮಂತ್ರ ಮಾಡಿಸಿದ್ದನ್ನು ತಿಳಿಯುವುದು ಹೇಗೆ? ಈ ವಿಡಿಯೋ ನೋಡಿ.
Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಮಾತು ಮಿತವಾಗಿರಲಿ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ, ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಫಲ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Lashkar-e-Islam: ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ತಮ್ಮ ಅಡಗು ತಾಣ ಮಾಡಿಕೊಂಡಿರುವ ಉಗ್ರರು ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಸೇರ್ಪಡೆ ಹಾಜಿ ಅಕ್ಬರ್ ಅಫ್ರಿದಿಯ ಹತ್ಯೆ. ಕುಖ್ಯಾತ ಲಷ್ಕರ್-ಇ-ಇಸ್ಲಾಂ (Lashkar-e-Islam) ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Haji Akbar Afridi
Koo

ಇಸ್ಲಾಮಾಬಾದ್‌: ಕೆಲವು ದಿನಗಳಿಂದ ಭಾರತ ವಿರೋಧಿ ಭಯೋತ್ಪಾದಕರು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾಗುತ್ತಿದ್ದಾರೆ. ಈ ಪಟ್ಟಿಗೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕುಖ್ಯಾತ ಲಷ್ಕರ್-ಇ-ಇಸ್ಲಾಂ (Lashkar-e-Islam) ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿ (Haji Akbar Afridi)ಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಗ್ರಗಾಮಿ ಚಟುವಟಿಕೆಗಳು ಮತ್ತು ಉಗ್ರಗಾಮಿ ಸಿದ್ಧಾಂತಕ್ಕೆ ಹೆಸರುವಾಸಿಯಾದ ಲಷ್ಕರ್-ಇ-ಇಸ್ಲಾಂ ಸಂಘಟನೆ ಕರಾಳ ಇತಿಹಾಸವನ್ನು ಹೊಂದಿದೆ. ಈ ಹಿಂದೆ ಈ ಗುಂಪು ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು, ಕಾಶ್ಮೀರದಿಂದ ಪಲಾಯನ ಮಾಡುವಂತೆ ಎಚ್ಚರಿಕೆ ನೀಡಿತ್ತು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸುವಂತೆ ಬೆದರಿಕೆ ಹಾಕಿತ್ತು. ಇದಲ್ಲದೆ 2014ರಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನೊಂದಿಗೆ ಅಕ್ಬರ್ ಸಂಪರ್ಕ ಹೊಂದಿದ್ದ ಎಂದು ವರದಿ ತಿಳಿಸಿದೆ.

ಕಾಶ್ಮೀರಿ ಪಂಡಿತರಿಗೆ ಬೆದರಿಕೆ

ಕಾಶ್ಮೀರಿ ಪಂಡಿತರು ವಾಸಿಸುತ್ತಿರುವ ಕಾಶ್ಮೀರದ ಬಾರಾಮುಲ್ಲಾದ ವೀರ್ವಾನ್‌ ಕಾಲೋನಿಗೆ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ 2022ರಲ್ಲಿ ಬೆದರಿಕೆ ಪತ್ರ ರವಾನಿಸಿತ್ತು. ʼʼಪಂಡಿತರು ಮತ್ತು ಮುಸ್ಲಿಮರಲ್ಲದವರು (ಕಾಫಿರರು) ಇಸ್ಲಾಂಗೆ ಮತಾಂತರ ಆಗಬೇಕು. ಇಲ್ಲವೇ ಕಾಶ್ಮೀರ ಕಣಿವೆ ಬಿಡಬೇಕು. ಇಲ್ಲದೇ ಹೋದರೆ ಸಾವಿಗೆ ಸಿದ್ಧರಾಗಬೇಕು. ಕಾಶ್ಮೀರ ಇರುವುದು ಕೇವಲ ಅಲ್ಲಾನ ಅನುಯಾಯಿಗಳಿಗೆ ಮಾತ್ರ’ʼ ಎಂಬ ಬೆದರಿಕೆ ಒಡ್ಡಲಾಗಿತ್ತು.

ರಕ್ಷಣಾ ಪಡೆಗಳಿಗೆ ಈ ಪತ್ರ ಮೊದಲು ಪೋಸ್ಟ್‌ ಮೂಲಕ ಬಂದಿದ್ದು, ಅದನ್ನು ಅವರು ವೀರ್ವಾನ್‌ನಲ್ಲಿರುವ ಪಂಡಿತರ ಕಾಲೋನಿಯ ಅಧ್ಯಕ್ಷರಿಗೆ ನೀಡಿದ್ದರು. ಬಳಿಕ ಈ ಕುರಿತಾಗಿ ಬಾರಾಮುಲ್ಲಾದ ಎಸ್‌ಎಸ್‌ಪಿ ಅವರಿಗೆ ದೂರು ನೀಡಲಾಗಿತ್ತು. ಈ ಪಂಡಿತರ ಕಾಲೋನಿಯಲ್ಲಿ ಸುಮಾರು 350 ಪಂಡಿತರು ವಾಸವಾಗಿದ್ದಾರೆ. ಲಷ್ಕರ್‌-ಇ-ಇಸ್ಲಾಂ ಸಂಘಟನೆಯನ್ನು 2015ರಲ್ಲೇ ನಿರ್ನಾಮ ಮಾಡಲಾಗಿದೆ.

ಪಾಕ್‌ ಜೈಲಿನಲ್ಲಿ ಸರಬ್ಜಿತ್ ಸಿಂಗ್ ಹತ್ಯೆ ಮಾಡಿದ್ದ ವ್ಯಕ್ತಿ ಅಪರಿಚಿತರಿಂದ ಖತಂ!

ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ (Amir Sarfaraz) ಅಲಿಯಾಸ್ ತಾಂಬಾ (Tamba) ಎಂಬಾತನನ್ನು ಕೆಲವು ದಿನಗಳ ಹಿಂದೆ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಏಪ್ರಿಲ್‌ 14ರಂದು ಘಟನೆ ನಡೆದಿತ್ತು.

ಇದನ್ನೂ ಓದಿ: Amir Sarfaraz: ಪಾಕ್ ಜೈಲಿನಲ್ಲಿದ್ದ ಸರಬ್ಜಿತ್ ಸಿಂಗ್ ಕೊಂದವನ ಹತ್ಯೆ; ಇದು ಯಾರ ಕೈವಾಡ?

ಲಾಹೋರ್‌ನ ಇಸ್ಲಾಂಪುರ ಪ್ರದೇಶದಲ್ಲಿ ಈ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಮೀರ್ ಸರ್ಫರಾಜ್ ನನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ತ್ವರಿತವಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದ. ಗುಪ್ತಚರ ಆರೋಪದ ಮೇಲೆ ಬಂಧಿಯಾಗಿದ್ದ ಸರಬ್ಜಿತ್ ಸಿಂಗ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಈ ಹಿಂದೆ ಭಾರತ ಧ್ವನಿ ಎತ್ತಿದ್ದರೂ ಪಾಕಿಸ್ತಾನ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ಇದೀಗ ಸುಮಾರು 11 ವರ್ಷಗಳ ಬಳಿಕ ಅಂಡರ್‌ವರ್ಲ್ಡ್ ಡಾನ್ ಅಮೀರ್ ಸರ್ಫರಾಜ್‌ನನ್ನು ಅಪರಿಚಿತ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವುದು ಕುತೂಹಲ ಮೂಡಿಸಿದೆ. ಸದ್ಯ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಂದು ಅಮೀರ್ ಸರ್ಫರಾಜ್ ಐಎಸ್‌ಐ ಸೂಚನೆಯ ಮೇರೆಗೆ ಸರಬ್ಜಿತ್ ಸಿಂಗ್ ಅವರನ್ನು ಕೊಲೆ ಮಾಡಿದ್ದ ಎನ್ನಲಾಗಿದೆ.

Continue Reading

ದೇಶ

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

ICICI Bank: ಐಸಿಐಸಿಐ ಬ್ಯಾಂಕ್‌ನ ಸುಮಾರು 17 ಸಾವಿರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿಯು ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದೆ. ಇದರಿಂದಾಗಿ ಕ್ರೆಡಿಟ್‌ ಕಾರ್ಡ್‌ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಸಾವಿರಾರು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ.

VISTARANEWS.COM


on

ICICI Bank
Koo

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ನ (ICICI Bank) ಮೊಬೈಲ್‌ ಬ್ಯಾಂಕಿಂಗ್‌ ಅಪ್ಲಿಕೇಷನ್‌ನಲ್ಲಿ (Mobile Banking Application) ತಾಂತ್ರಿಕ ತೊಂದರೆ ಎದುರಾಗಿದೆ. ಅಷ್ಟೇ ಅಲ್ಲ, ಸುಮಾರು 17 ಸಾವಿರ ಗ್ರಾಹಕರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು ವ್ಯಕ್ತವಾಗಿವೆ. ಇದರಿಂದಾಗಿ ಐಸಿಐಸಿಐ ಬ್ಯಾಂಕ್‌ನ ಲಕ್ಷಾಂತರ ಗ್ರಾಹಕರು (ICICI Bank Custormers) ಆತಂಕಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಐಸಿಐಸಿಐ ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಶನ್‌ನಲ್ಲಿ (App) ಭಾರಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಸಾವಿರಾರು ಗ್ರಾಹಕರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಟೆಕ್ನೊಫಿನೋ ಸಂಸ್ಥೆಯ ಸಂಸ್ಥಾಪಕ ಸುಮಂತಾ ಮಂಡಲ್‌ ಅವರು ತಾಂತ್ರಿಕ ದೋಷ ಹಾಗೂ ಮಾಹಿತಿ ಸೋರಿಕೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದು, ಆರ್‌ಬಿಐ ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

“ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಸಾವಿರಾರು ಗ್ರಾಹಕರಿಗೆ ತೊಂದರೆಯಾಗಿದೆ. ಅದರಲ್ಲೂ, ಐ ಮೊಬೈಲ್‌ ಪೇ ಅಪ್ಲಿಕೇಷನ್‌ನಲ್ಲಿ ಭಾರಿ ದೋಷ ಕಾಣಿಸಿಕೊಂಡಿದೆ. ಕ್ರೆಡಿಟ್‌ ಕಾರ್ಡ್‌ ನಂಬರ್‌, ಎಕ್ಸ್‌ಪೈರಿ ಡೇಟ್‌, ಸಿವಿವಿ ಸೇರಿ ಎಲ್ಲ ಮಾಹಿತಿಯು ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಸೆಟಿಂಗ್ಸ್‌ ಕೂಡ ಬದಲಾಯಿಸಬಹುದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಮಾಡಲು ಬೇರೆಯವರ ಕ್ರೆಡಿಟ್‌ ಕಾರ್ಡ್‌ ಮಾಹಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದಾಗಿದೆ” ಎಂದು ಅವರು ದೂರಿದ್ದಾರೆ.

ಐಸಿಐಸಿಐ ಬ್ಯಾಂಕ್‌ ಹೇಳುವುದೇನು?

ತಾಂತ್ರಿಕ ದೋಷವಾಗಿದೆಯೋ, ಯಾರಾದರೂ ಹ್ಯಾಕ್‌ ಮಾಡಿದ್ದಾರೋ ಎಂಬ ಕುರಿತು ಅನುಮಾನ ವ್ಯಕ್ತವಾಗುತ್ತಲೇ ಈ ಕುರಿತು ಐಸಿಐಸಿಐ ಬ್ಯಾಂಕ್‌ ಸ್ಪಷ್ಟನೆ ನೀಡಿದೆ. “ಹೊಸದಾಗಿ ನೀಡಲಾದ 17 ಸಾವಿರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿಯು ಬಹಿರಂಗವಾಗಿದೆ. ಇದು ತಾಂತ್ರಿಕ ದೋಷದಿಂದ ಉಂಟಾಗಿರುವ ಸಾಧ್ಯತೆ ಇದೆ. ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರ ಪೈಕಿ ಶೇ.0.1ರಷ್ಟು ಗ್ರಾಹಕರಿಗೆ ತೊಂದರೆಯಾಗಿದೆ. ಆದರೆ, ಗ್ರಾಹಕರ ಹಿತದೃಷ್ಟಿಯಿಂದಾಗಿ ಕೂಡಲೇ ಎಲ್ಲ ಕಾರ್ಡ್‌ಗಳನ್ನು ಬ್ಲಾಕ್‌ ಮಾಡಿದ್ದೇವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಬಗೆಹರಿಸಲಾಗತ್ತದೆ. ಯಾರದರೂ ಹಣ ಕಳೆದುಕೊಂಡಿದ್ದರೆ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ” ಎಂಬುದಾಗಿ ಬ್ಯಾಂಕ್‌ ಮನವಿ ಮಾಡಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Continue Reading

Lok Sabha Election 2024

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Lok Sabha Election 2024: ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ.

VISTARANEWS.COM


on

Lok Sabha Election 2024 No names of election officials in voter list Protest in front of the polling booth
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಶುಕ್ರವಾರ ಬೆಂಗಳೂರಿನಲ್ಲಿ ಮೊದಲ ಹಂತದ ಮತದಾನ (First phase of polling) ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸಿದೆ. ಚುನಾವಣಾ ಪ್ರಕ್ರಿಯೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆದರೆ, ಬೆಂಗಳೂರಲ್ಲಿ ಚುನಾವಣಾ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳ ಹೆಸರೇ ವೋಟರ್‌ ಲಿಸ್ಟ್‌ನಲ್ಲಿ (Voter List) ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆ ಅಧಿಕಾರಿಗಳು ಮತಗಟ್ಟೆ ಎದುರೇ ಧರಣಿ ಕುಳಿತಿದ್ದಾರೆ.

ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ. ಹಲವು ಅಧಿಕಾರಿಗಳ ಹೆಸರು ಮಿಸ್‌ ಆಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಈ ಬಗ್ಗೆ ಚುನಾವಣಾ ಆಯೋಗವು ಇನ್ನೂ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ. ಈ ಅಧಿಕಾರಿಗಳಿಗೆ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಇನ್ನೂ ಮಾಹಿತಿ ಗೊತ್ತಾಗಿಲ್ಲ.

Continue Reading

ಆರೋಗ್ಯ

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

ಸೊಳ್ಳೆಯಿಂದ ಬರುವಂಥ ರೋಗಗಳೆಲ್ಲ (World Malaria Day) ಒಂದೇ ರೀತಿಯವು ಎನ್ನುವಂತಿಲ್ಲ. ಪ್ರತಿಯೊಂದು ರೋಗಕ್ಕೂ ಅದರದ್ದೇ ಆದ ಭಿನ್ನ ಸ್ವರೂಪವಿದೆ, ಲಕ್ಷಣಗಳಿವೆ, ಹಾಗಾಗಿ ಚಿಕಿತ್ಸೆಯೂ ಬೇರೆ ಆಗಬೇಕು. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿಯ ಕೊರತೆಯಿದ್ದರೆ, ಸಮಸ್ಯೆ ಬಿಗಡಾಯಿಸುತ್ತದೆ. ಸೊಳ್ಳೆಗಳಿಂದಲೇ ಪ್ರಸರಣವಾಗುವ ಮಲೇರಿಯ ಮತ್ತು ಡೆಂಗು ರೋಗಗಳಿಗೆ ವ್ಯತ್ಯಾಸವೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

World Malaria Day
Koo

ಈ ಬೇಸಿಗೆಯಲ್ಲಿ ಸೊಳ್ಳೆಗಳ ಹಾವಳಿ (World Malaria Day) ಹೆಚ್ಚಿನ ಕಡೆಗಳಲ್ಲಿ ತೀವ್ರವಾಗಿ ಕಾಣುತ್ತಿದೆ. ಮುಂಗಾರು ಬರುವ ಮೊದಲೇ ಸೊಳ್ಳೆಗಳು ದಾಂಗುಡಿಯಿಟ್ಟಿವೆ. ಬೇಸಿಗೆ ರಜೆಯೆಂಬ ನೆವದಲ್ಲಿ ಪ್ರಯಾಣ ಮಾಡುವಾಗ ಸೊಳ್ಳೆಗಳ ಕಾಟವಿರುವ ಊರು ಎದುರಾದರೆ ಆತಂಕವಾಗುವುದು ಸಹಜ. ಸೊಳ್ಳೆಯಿಂದ ಬರುವಂಥ ರೋಗಗಳೆಲ್ಲ ಒಂದೇ ರೀತಿಯವು ಎನ್ನುವಂತಿಲ್ಲ. ಪ್ರತಿಯೊಂದು ರೋಗಕ್ಕೂ ಅದರದ್ದೇ ಆದ ಭಿನ್ನ ಸ್ವರೂಪವಿದೆ, ಲಕ್ಷಣಗಳಿವೆ, ಹಾಗಾಗಿ ಚಿಕಿತ್ಸೆಯೂ ಬೇರೆ ಆಗಬೇಕು. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿಯ ಕೊರತೆಯಿದ್ದರೆ, ಸಮಸ್ಯೆ ಬಿಗಡಾಯಿಸುತ್ತದೆ. ಈ ನಿಟ್ಟಿನಲ್ಲಿ, ಸೊಳ್ಳೆಗಳಿಂದಲೇ ಪ್ರಸರಣವಾಗುವ ಮಲೇರಿಯ ಮತ್ತು ಡೆಂಗು ರೋಗಗಳಿಗೆ ವ್ಯತ್ಯಾಸವೇನು ಎಂಬ ಅರಿವಿನ ಲೇಖನವಿದು.

World Malaria Day

ಪ್ರಸರಣ ಹೇಗೆ?

ಮಲೇರಿಯ

ಅನಾಫಿಲಿಸ್‌ ಸೊಳ್ಳೆಯಿಂದ ದೇಹ ಪ್ರವೇಶಿಸುವ ಪ್ಲಾಸ್ಮೋಡಿಯಂ ಎಂಬ ಏಕಕೋಶ ಜೀವಿಯಿಂದ ಬರುವ ರೋಗವಿದು. ಮಲೇರಿಯ ಹೆಚ್ಚಿರುವ ಪ್ರದೇಶಗಳಿಗೆ ಹೋದಾಗ ಇದಕ್ಕೆ ತುತ್ತಾಗುವ ಸಂಭವ ಹೆಚ್ಚು.

ಡೆಂಗ್ಯು

ಈಡಿಸ್‌ ಸೊಳ್ಳೆಯು ದೇಹಕ್ಕೆ ಚುಚ್ಚುವ ಡೆಂಗ್ಯು ವೈರಸ್‌ನಿಂದ ಬರುವ ರೋಗವಿದು. ಅಂದರೆ ಮಲೇರಿಯ ಬರುವುದು ಪರಾವಲಂಬಿ ಜೀವಿಯಿಂದಾದರೆ, ಡೆಂಗ್ಯು ಬರುವುದು ವೈರಸ್‌ನಿಂದ. ಯಾವುದೇ ಪ್ರದೇಶದಲ್ಲೂ ಡೆಂಗು ಸೊಳ್ಳೆಗಳು ಕಾಣಬಹುದು, ಸೊಳ್ಳೆ ಕಚ್ಚಿದಾಗ ಬರಬಹುದು.

ಲಕ್ಷಣಗಳೇನು?

ಮಲೇರಿಯ

ಜ್ವರ, ನಡುಕ, ಬೆವರು, ತಲೆನೋವು, ಮೈಕೈ ನೋವು, ಹೊಟ್ಟೆ ತೊಳೆಸುವುದು, ವಾಂತಿ.

ಡೆಂಗ್ಯು

ಇದ್ದಕ್ಕಿದ್ದಂತೆ ತೀವ್ರವಾದ ಜ್ವರ, ತೀಕ್ಷ್ಣ ತಲೆನೋವು, ಕಣ್ಣು ನೋವು, ಮೈಮೇಲೆಲ್ಲ ದದ್ದುಗಳು, ಕೀಲು, ಸ್ನಾಯುಗಳಲ್ಲಿ ತೀವ್ರ ನೋವು. ಜೊತೆಗೆ ಪ್ಲೇಟ್‌ಲೆಟ್‌ ಸಂಖ್ಯೆ ಕುಸಿಯುತ್ತದೆ. ಅಂದರೆ ಮಲೇರಿಯ ಫ್ಲೂ ಮಾದರಿಯ ಲಕ್ಷಣಗಳನ್ನು ತೋರಿಸಿದರೆ, ಡೆಂಗು ಜ್ವರದಲ್ಲಿ ತಲೆನೋವು ಮತ್ತು ಕೀಲು-ಸ್ನಾಯುಗಳ ನೋವು ತೀವ್ರವಾಗಿರುತ್ತದೆ.

dengue flue

ಪತ್ತೆ ಹೇಗೆ?

ಎರಡೂ ಮಾದರಿಯ ಜ್ವರಗಳಿಗೆ ರಕ್ತ ಪರೀಕ್ಷೆಯೇ ಪತ್ತೆ ಮಾಡುವುದಕ್ಕೆ ನಿಖರವಾದ ಆಧಾರ.

ಚಿಕಿತ್ಸೆ ಏನು?

ಮಲೇರಿಯ

ಕ್ಲೊರೊಕ್ವಿನ್‌ನಂಥ ಔಷಧಿಗಳು ಇದಕ್ಕಾಗಿಯೇ ಇವೆ. ಪ್ಲಾಸ್ಮೋಡಿಯಂನಂಥ ಪರಾವಲಂಬಿಗಳ ಹತೋಟಿಗೆ ಔಷಧಿ ನೀಡಲಾಗುತ್ತದೆ. ಉಳಿದಂತೆ, ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ಬೇಕಾಗುತ್ತದೆ.

ಡೆಂಗ್ಯು

ಈ ವೈರಸ್‌ಗೆ ಪ್ರತ್ಯೇಕವಾದ ಆಂಟಿವೈರಸ್‌ ಚಿಕಿತ್ಸೆ ಲಭ್ಯವಿಲ್ಲ. ರೋಗಿಯ ಲಕ್ಷಣಗಳನ್ನು ಆಧರಿಸಿ ಅದಕ್ಕೆ ಔಷಧಿಯನ್ನು ನೀಡಲಾಗುತ್ತದೆ. ಪ್ಲೇಟ್‌ಲೆಟ್‌ ಕುಸಿದಂಥ ಸಂದರ್ಭಗಳಲ್ಲಿ ರೋಗಿಯ ಆಹಾರ ಪದ್ಧತಿ ಅತ್ಯಂತ ಮಹತ್ವದ್ದು.

Malaria

ಸಾವಿನ ಪ್ರಮಾಣ

ಮಲೇರಿಯ

ಸೂಕ್ತ ಸಮಯಲ್ಲೆ ಸರಿಯಾದ ಚಿಕಿತ್ಸೆ ದೊರೆಯದಿದ್ದರೆ, ಮಲೇರಿಯ ಪ್ರಾಣಕ್ಕೆ ಎರವಾಗುತ್ತದೆ. ವಿಶ್ವದಲ್ಲಿ ಇಂದಿಗೂ ಮಲೇರಿಯಕ್ಕೆ ತುತ್ತಾಗು ಜೀವ ಕಳೆದುಕೊಳ್ಳುತ್ತಿರುವವರ ಸಾವಿನ ಸಂಖ್ಯೆ ಬಹಳಷ್ಟಿದೆ.

ಡೆಂಗ್ಯು

ಈ ಜ್ವರವೂ ಪ್ರಾಣಾಪಾಯ ತರಬಹುದಾದರೂ, ಮಲೇರಿಯಕ್ಕೆ ಹೋಲಿಸಿದರೆ ಸಾವಿನ ಪ್ರಮಾಣ ಇದರಲ್ಲಿ ಕಡಿಮೆ.

World Malaria Day, Mosquito eradication is essential to prevent the disease

ತಡೆ ಹೇಗೆ?

ಈ ಎರಡೂ ರೋಗಗಳಲ್ಲಿ ಸೊಳ್ಳೆ ನಿರ್ಮೂಲನೆಯೇ ಮುಖ್ಯವಾಗಿದ್ದು. ಎಲ್ಲಾದರೂ ನೀರು ನಿಂತಿದ್ದರೆ ಅಲ್ಲೆಲ್ಲ ಕೀಟನಾಶಕ ಸಿಂಪಡಿಸಿ ತುರ್ತಾಗಿ ಸೊಳ್ಳೆಗಳ ಹೆಚ್ಚಳ ನಿಲ್ಲಿಸಬೇಕು. ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕು. ಸೊಳ್ಳೆಗಳು ಕಚ್ಚದಂತೆ ರೆಪೆಲ್ಲೆಂಟ್‌ಗಳನ್ನು ಬಳಸುವುದು ಅಗತ್ಯ. ಕಿಟಕಿಗಳಿಗೆ ಸೊಳ್ಳೆ ಪ್ರವೇಶಿಸದಂಥ ಪರದೆಗಳು ಮತ್ತು ರಾತ್ರಿ ಮಲಗುವಾಗಲೂ ಪರದೆ ಬಳಸುವುದು ಸೂಕ್ತ. ತುಂಬು ಬಟ್ಟೆಗಳನ್ನು ಧರಿಸುವುದು ಸರಿಯಾದ ಕ್ರಮ. ಸೊಳ್ಳೆಗಳು ಹೆಚ್ಚು ಚಟುವಟಿಕೆಯಲ್ಲಿರುವ ಹೊತ್ತಿನಲ್ಲಿ ಮನೆಯೊಳಗೇ ಇರಬೇಕು.

ಇದನ್ನೂ ಓದಿ: World Malaria Day: ಭಾರತದಲ್ಲಿ ಮಲೇರಿಯಾಗೆ ಪ್ರತಿವರ್ಷ 20 ಸಾವಿರ ಬಲಿ; ಸೊಳ್ಳೆಗಳು ಭಾರಿ ಡೇಂಜರ್‌!

Continue Reading
Advertisement
Haji Akbar Afridi
ವಿದೇಶ2 mins ago

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Tata Motors gets approval for 333 patents
ದೇಶ7 mins ago

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Neha Murder Case in hubblli
ಹುಬ್ಬಳ್ಳಿ19 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ26 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ICICI Bank
ದೇಶ26 mins ago

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ34 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202438 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ47 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್1 hour ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು1 hour ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ19 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ26 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ4 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌