horoscope today read your daily horoscope predictions for may 25, 2023Horoscope Today : ಅಮೃತಸಿದ್ಧಿಯೋಗದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ Vistara News
Connect with us

ಪ್ರಮುಖ ಸುದ್ದಿ

Horoscope Today : ಅಮೃತಸಿದ್ಧಿಯೋಗದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಷಷ್ಠಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
Koo

ಇಂದಿನ ಪಂಚಾಂಗ (25-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಷಷ್ಠಿ 29:19 ವಾರ: ಗುರುವಾರ
ನಕ್ಷತ್ರ: ಪುಷ್ಯ 17:52 ಯೋಗ: ವೃದ್ಧಿ 18:06
ಕರಣ: ಕೌಲವ 16:08
ಅಮೃತಕಾಲ: ಬೆಳಗ್ಗೆ 10 ಗಂಟೆ 45 ನಿಮಿಷದಿಂದ ಮಧ್ಯಾಹ್ನ 12 ಗಂಟೆ 32 ನಿಮಿಷದವರೆಗೆ.
ಇಂದಿನ ವಿಶೇಷ: ಅರಣ್ಯ ಗೌರೀ ವ್ರತ, ಗುರುಪುಷ್ಯ ಯೋಗ, ಅಮೃತಸಿದ್ಧಿಯೋಗ.

ಸೂರ್ಯೋದಯ : 05:53 ಸೂರ್ಯಾಸ್ತ : 06:41

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಶಾ ಭಂಗ ಮಾಡುವ ಸಾಧ್ಯತೆ. ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣದ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಹೊಂದುವಿರಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗೆ ಸಂಬಂಧಪಡದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದಿಂದ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಇದು ಅಪಾಯ ತಂದೀತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೆನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೀಡೆ

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್​ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

VISTARANEWS.COM


on

Edited by

wrestlers protest
Koo

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಶರಣ್ ಸಿಂಗ್​ ಬಂಧನಕ್ಕೆ ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ತಾತ್ಕಾಲಿಕವಾಗಿ ಈ ಪ್ರತಿಭಟನೆಯಿಂದ ಹಿಂದೆ ಸರಿದ್ದಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್​ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಈ ವಿಚಾರವನ್ನು ಅನುರಾಗ್​ ಠಾಕೂರ್​ ಪ್ರಕಟಿಸಿದ್ದಾರೆ.

ಬುಧವಾರ ಕೇಂದ್ರ ಸರ್ಕಾರ ಕುಸ್ತಿಪಟುಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿತ್ತು. ಇದಕ್ಕೂ ಮುನ್ನ ಅನುರಾಗ್​ ಠಾಕೂರ್​ ಅವರು ತಮ್ಮ ನಿವಾಸದಲ್ಲಿ ಕುಸ್ತಿಪಟುಗಳೊಂದಿಗೆ ಮಹತ್ವದ ಸಭೆಯೊಂದನ್ನು ನಡೆಸಿದ್ದರು. ಇದೀಗ ಸಭೆ ಮುಕ್ತಾಯ ಕಂಡಿದ್ದು ಕುಸ್ತಿ ಪಟುಗಳು ಜೂನ್​ 15ರ ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಇದರ ಜತೆಗೆ ಕುಸ್ತಿಪಟುಗಳು ಕೆಲ ಮಹತ್ವದ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಸಭೆಯ ಬಳಿಕ ಮಾತನಾಡಿದ ಅನುರಾಗ್​ ಠಾಕೂರ್​, ಕುಸ್ತಿಪಟುಗಳ ಎಲ್ಲ ಸಮಸ್ಯೆಯನ್ನು ಆಲಿಸಲಾಗಿದೆ. ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧದ ತನಿಖೆ ಪೂರ್ಣಗೊಳ್ಳಲಿದೆ. ಹೀಗಾಗಿ ಕುಸ್ತಿಪಟುಗಳು ಜೂನ್ 15ರ ವರೆಗೆ ಪ್ರತಿಭಟನೆ ರದ್ದು ಮಾಡಲು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಕುಸ್ತಿಪಟುಗಳು ತಮ್ಮ ಮೇಲಿನ ಎಫ್‌ಐಆರ್ ವಾಪಸ್ ಪಡೆಯುವಂತೆ ಮತ್ತು ಜೂನ್ 30ರೊಳಗೆ ನಡೆಯುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡದಂತೆ ಒತ್ತಾಯಿಸಿದ್ದಾರೆ. ಜತೆಗೆ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ಬಜರಂಗ್​ ಪೂನಿಯ, ಸಚಿವರ ಭರವಸೆಯ ಮೇರೆಗೆ ನಾವು ನಮ್ಮ ಪ್ರತಿಭಟನೆಯಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದೇವೆ, ಆದರೆ ನಮ್ಮ ಹೋರಾಟದಿಂದ ಅಲ್ಲ ಎಂದು ಹೇಳಿದ್ದಾರೆ. ಸಾಕ್ಷಿ ಮಲಿಕ್​ ಮಾತನಾಡಿ ತಮ್ಮ ವಿರುದ್ಧ ದಾಖಲಾದ ಎಲ್ಲ ಎಫ್​ಐಆರ್​ಗಳು ಹಿಂಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ Wrestlers Protest: ಅನುರಾಗ್​ ಠಾಕೂರ್​ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು

ಇದಕ್ಕೂ ಮೊದಲು ಜನವರಿಯಲ್ಲಿ ಕುಸ್ತಿಪಟುಗಳ ಜತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಭೆ ನಡೆಸಿದ್ದರು. ಆ ವೇಳೆ ಬ್ರಿಜ್​ ಭೂಷಣ್​ ಸಿಂಗ್​ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ್ದರು. ಇದರಿಂದ ಕುಸ್ತಿಪಟುಗಳು ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟಿದ್ದರು. ಬಳಿಕ ಲೈಂಗಿಕ ದೌರ್ಜನ್ಯ ಆರೋಪಗಳ ತನಿಖೆಗಾಗಿ ಭಾರತ ಒಲಿಂ‍‍‍ಪಿಕ್‌ ಸಂಸ್ಥೆಯು ಐಒಎ ಮಹಿಳಾ ಬಾಕ್ಸರ್‌ ಎಂಸಿ ಮೇರಿಕೋಮ್ ಮತ್ತು ಕುಸ್ತಿಪಟು ಯೋಗೇಶ್ವರ್‌ ದತ್‌ ಆರ್ಚರಿ ಸ್ಪರ್ಧಿ ಡೋಲಾ ಬ್ಯಾನರ್ಜಿ ಮತ್ತು ಭಾರತ ವೇಟ್‌ಲಿಫ್ಟಿಂಗ್‌ ಫೆಡರೇಷನ್‌ ಅಧ್ಯಕ್ಷ ಸಹದೇವ್‌ ಯಾದವ್‌ ಅವರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು. ಇದರ ಪರಿಣಾಮ ಕುಸ್ತಿಪಟುಗಳು ಭರವಸೆ ನೀಡಿದಂತೆ ಕೆಲವು ತಿಂಗಳ ಕಾಲ ಕಾದಿದ್ದರು. ಆದರೆ ಬ್ರಿಜ್​ ಭೂಷಣ್​ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲ ಕಾರಣ ಮತ್ತೆ ಪ್ರತಿಭಟನೆ ನಡೆಸಿದ್ದರು. ಇದೀಗ ದ್ವಿತೀಯ ಬಾರಿ ಭರವಸೆ ನೀಡಿರುವ ಅನುರಾಗ್​ ಠಾಕೂರ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.

Continue Reading

ಕರ್ನಾಟಕ

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

for tenants also to wrestlers protest and more news
Koo

1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್‌ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್‌ ಉಚಿತ ವಿದ್ಯುತ್‌ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್‌ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್‌ ಐಡಿಯನ್ನು ಆರ್‌ಆರ್‌ ಸಂಖ್ಯೆಯೊಂದಿಗೆ ಲಿಂಕ್‌ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್‌ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್‌ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್‌ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್‌ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Wrestlers Protest: ಅನುರಾಗ್​ ಠಾಕೂರ್​ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಸಿಂಗ್ ಶರಣ್​ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ವಿನೇಶ್​ ಫೋಗಟ್​ ಮತ್ತು ಸಾಕ್ಷಿ ಮಲಿಕ್​ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್‌ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್‌ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್‌ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ಆಯೋಜನೆಯಾಗಿದೆ.

VISTARANEWS.COM


on

Edited by

BJP lose in karnataka
Koo

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡ ನಂತರದಲ್ಲಿ ಬಹುತೇಕ ಮೌನವಾಗಿರುವ ಬಿಜೆಪಿ ಇದೀಗ ವಿಧಾನಸಭೆ ಚುನಾವಣೆಯ ಅವಲೋಕನಕ್ಕೆ ಮುಂದಾಗಿದೆ. ನೂತನ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ನೂತನವಾಗಿ ಚುನಾಯಿತರಾದ 66 ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆಯು ಗುರುವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಎಲ್ಲ ಪರಾಜಿತ ಅಭ್ಯರ್ಥಿಗಳು ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

ಸಂಜೆ ರಾಜ್ಯ ಕೋರ್ ಕಮಿಟಿ ಸಭೆ
ಬುಧವಾರ ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಗುರುವಾರ ನಡೆಯುವ ಎಲ್ಲ ಸಭೆಗಳಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯದ ಪ್ರಭಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ.

ಈ ಸಭೆಯಲ್ಲಿ ರಾಜ್ಯದ ಚುನಾವಣೆಯ ಕುರಿತು ಅವಲೋಕನ, ಕೇಂದ್ರ ಸರ್ಕಾರದ 9 ವರ್ಷಗಳ ಯೋಜನೆ, ಜುಲೈ 03 ರಂದು ನಡೆಯಲಿರುವ ಅಧಿವೇಶನ, ತೆರವಾಗಿರುವ 3 ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Text Book: ಹೊಸ ಪಠ್ಯಕ್ರಮ ರಚನೆಗೆ ಸಮಿತಿ; ಬಿಜೆಪಿ ಅವಧಿಯ ಅಧ್ಯಾಯಗಳಿಗೆ ಕೊಕ್‌?

Continue Reading

ದೇಶ

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಇದೇ ವೇಳೆ ಕಲ್ಲು ತೂರಾಟವೂ ನಡೆದಿದೆ.

VISTARANEWS.COM


on

Edited by

Kolhapur Protest
ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ.
Koo

ಕೊಲ್ಹಾಪುರ: ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್‌ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್‌ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಅವರನ್ನು ವೈಭವೀಕರಿಸಿ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು. ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್‌ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸುತ್ತಲೇ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ಮಾಡಿದರು. ಇದರಿಂದ ಕೆರಳಿದ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಯಿತು. ಲಾಠಿ ಚಾರ್ಜ್‌ ಹಾಗೂ ಹಿಂದು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಏನಿದು ಪ್ರಕರಣ?

ಮೈಸೂರು ಅರಸ ಟಿಪ್ಪು ಸುಲ್ತಾನ್‌ ಹಾಗೂ ಮೊಘಲ್‌ ಅರಸ ಔರಂಗಜೇಬ್‌ ಅವರನ್ನು ವೈಭವೀಕರಿಸಿ ಒಂದಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಾರೆ. ಇದನ್ನು ಹಿಂದು ಸಂಘಟನೆಗಳು ಖಂಡಿಸಿದ್ದು, ಪೋಸ್ಟ್‌ ಹಾಕಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊಲ್ಹಾಪುರ ಬಂದ್‌ಗೆ ಕರೆ ನೀಡಿದ್ದರು. ಅದರಂತೆ ಪ್ರತಿಭಟನೆ ನಡೆಸುವಾಗ ಗಲಾಟೆ ನಡೆದಿದೆ.

ಇದನ್ನೂ ಓದಿ: Textbook Revision: ಹಿಜಾಬ್‌ ಓಕೆ, ಸೂಲಿಬೆಲೆ ಪಠ್ಯಕ್ಕೆ ಕತ್ತರಿ, ಟಿಪ್ಪು ಪಾಠ ಸೇರ್ಪಡೆ: ಸಾಹಿತಿಗಳ ಒತ್ತಾಯ, ಸಿದ್ದರಾಮಯ್ಯ ಏನಂದ್ರು?

ಕಾನೂನು ಕೈಗೆತ್ತಿಕೊಳ್ಳದಂತೆ ಸಿಎಂ ಮನವಿ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದು ಸಂಘಟನೆಗಳಿಗೆ ಬೆಲೆ ಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದಕ್ಕಾಗಿ, ಹಿಂದು ಸಂಘಟನೆಗಳು ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿವೆ. ಅದರಲ್ಲೂ, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್‌ ಮಾಡಿದ್ದು, ಇದರಿಂದ ಕಾರ್ಯಕರ್ತರ ಕೋಪ ಹೆಚ್ಚಾಗಿದೆ. ಆಗ ಪ್ರತಿಭಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು 21 ಜನರನ್ನು ಬಂಧಿಸಿದ್ದು, ಕೊನೆಗೆ ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ.

ಇನ್ನು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, “ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಬಾರದು” ಎಂದು ಮನವಿ ಮಾಡಿದ್ದಾರೆ. ಸದ್ಯ, ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್‌ ಚೌಕ್‌ನಲ್ಲಿ ಪರಿಸ್ಥಿತಿ ತಹಬಂದಿಗೆ ಬಂದಿದೆ. ಆದರೂ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ತಿಳಿದುಬಂದಿದೆ.

Continue Reading
Advertisement
wrestlers protest
ಕ್ರೀಡೆ29 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ31 mins ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್31 mins ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ35 mins ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ48 mins ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ50 mins ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ1 hour ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ1 hour ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ1 hour ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

Kolhapur Protest
ದೇಶ1 hour ago

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ31 mins ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ8 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ16 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!