horoscope today read your daily horoscope predictions for may 25, 2023Horoscope Today : ಅಮೃತಸಿದ್ಧಿಯೋಗದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ಅಮೃತಸಿದ್ಧಿಯೋಗದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಷಷ್ಠಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (25-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಷಷ್ಠಿ 29:19 ವಾರ: ಗುರುವಾರ
ನಕ್ಷತ್ರ: ಪುಷ್ಯ 17:52 ಯೋಗ: ವೃದ್ಧಿ 18:06
ಕರಣ: ಕೌಲವ 16:08
ಅಮೃತಕಾಲ: ಬೆಳಗ್ಗೆ 10 ಗಂಟೆ 45 ನಿಮಿಷದಿಂದ ಮಧ್ಯಾಹ್ನ 12 ಗಂಟೆ 32 ನಿಮಿಷದವರೆಗೆ.
ಇಂದಿನ ವಿಶೇಷ: ಅರಣ್ಯ ಗೌರೀ ವ್ರತ, ಗುರುಪುಷ್ಯ ಯೋಗ, ಅಮೃತಸಿದ್ಧಿಯೋಗ.

ಸೂರ್ಯೋದಯ : 05:53 ಸೂರ್ಯಾಸ್ತ : 06:41

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಶಾ ಭಂಗ ಮಾಡುವ ಸಾಧ್ಯತೆ. ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣದ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಹೊಂದುವಿರಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗೆ ಸಂಬಂಧಪಡದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದಿಂದ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಇದು ಅಪಾಯ ತಂದೀತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೆನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Suresh Raina: ಆ ವಿಶ್ವಕಪ್ ಆವೃತ್ತಿಯಲ್ಲಿ ಸುರೇಶ್ ಟೀಮ್ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಅವರು ತಂಡದ ಭಾಗವಾಗಿದ್ದರು. ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಘಟಿಸಿರು ಪ್ರತಿಯೊಂದು ವಿಷಯವನ್ನೂ ತಿಳಿದಿದ್ದರು. ರೈನಾ ಕಡಿಮೆ ಪಂದ್ಯಗಳನ್ನು ಆಡಿರಬಹುದು. ಆದರೆ ಆಡಿದ ಪಂದ್ಯಗಳು ಬಹಳ ಮುಖ್ಯವಾಗಿದ್ದವು.

VISTARANEWS.COM


on

Suresh Raina
Koo

ನವದೆಹಲಿ: ಎಂಎಸ್ ಧೋನಿ (MS Dhoni) ನಾಯಕತ್ವದಲ್ಲಿ ಭಾರತ ತಂಡ 2011ರ ಏಕ ದಿನ ವಿಶ್ವ ಕಪ್​ (2011 ODI World Cup) ಗೆದ್ದಿದೆ. ಆ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸುರೇಶ್ ರೈನಾ (Suresh Raina) ಕೂಡಾ ಭಾರತ ತಂಡದ ಭಾಗವಾಗಿದ್ದರು. ಅವರೀಗ ವಿಶ್ವ ಕಪ್​ ಗೆಲುವಿನ ಕುರಿತು ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದು ಅದು ಪೂರ್ವ ನಿಯೋಜಿತ ಗೆಲುವು ಎಂದು ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಫೈನಲ್​​ ಫೈನಲ್ ಗೆಲುವು ಸೇರಿದಂತೆ ಇಡೀ ಪಂದ್ಯಾವಳಿಯುನ್ನು ಮೊದಲೇ ಪ್ಲ್ಯಾನ್ ಮಾಡಲಾಗಿತ್ತು ಎಂದು ಎಂದು ರೈನಾ ಇತ್ತೀಚೆಗೆ ಲಾಲಾಂಟಾಪ್ ಸಂದರ್ಶನದಲ್ಲಿ ಹೇಳಿದ್ದಾರೆ. ಮಾಜಿ ಎಡಗೈ ಬ್ಯಾಟರ್​ ಆ ಸಂದರ್ಶನದಲ್ಲಿ ಇನ್ನಷ್ಟು ಆಸಕ್ತಿದಾಯಕ ಬಹಿರಂಗಪಡಿಸಿದ್ದಾರೆ. ಅದರಲ್ಲಿ ಗಮನ ಸೆಳೆದಿರುವುದು ವಿಶ್ವ ಕಪ್ ಗೆಲುವು

ಆ ವಿಶ್ವಕಪ್ ಆವೃತ್ತಿಯಲ್ಲಿ ಸುರೇಶ್ ಟೀಮ್ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಅವರು ತಂಡದ ಭಾಗವಾಗಿದ್ದರು. ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಘಟಿಸಿರು ಪ್ರತಿಯೊಂದು ವಿಷಯವನ್ನೂ ತಿಳಿದಿದ್ದರು. ರೈನಾ ಕಡಿಮೆ ಪಂದ್ಯಗಳನ್ನು ಆಡಿರಬಹುದು. ಆದರೆ ಆಡಿದ ಪಂದ್ಯಗಳು ಬಹಳ ಮುಖ್ಯವಾಗಿದ್ದವು. 50 ಓವರ್​ಗಳ ವಿಶ್ವಕಪ್​ನಲ್ಲಿ ಅವರು ವೆಸ್ಟ್ ಇಂಡೀಸ್ ವಿರುದ್ಧ ಚೆನ್ನೈನಲ್ಲಿ ಪಾದಾರ್ಪಣೆ ಮಾಡಿದ್ದರು.

ರೈನಾ ಚೊಚ್ಚಲ ವಿಶ್ವಕಪ್ ಆವೃತ್ತಿ

ಅಹ್ಮದಾಬಾದ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್​​ನ 2 ನೇ ಕ್ವಾರ್ಟರ್ ಫೈನಲ್​​ನಲ್ಲಿ ಸುರೇಶ್ ರೈನಾ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದರು ಅಲ್ಲಿ ಭಾರತವು ಹಾಲಿ ಚಾಂಪಿಯನ್​ಗಳನ್ನು ಸೋಲಿಸಿತು. ನಂತರ ಅವರು ಮೊಹಾಲಿಯಲ್ಲಿ ಪಾಕಿಸ್ತಾನ ವಿರುದ್ಧ ಸೆಮಿಫೈನಲ್​​ನಲ್ಲಿ ಆಡಿದರು. ಅವರ 4ನೇ ಪಂದ್ಯವು ಮುಂಬೈನಲ್ಲಿ ನಡೆದ ಫೈನಲ್ ಆಗಿತ್ತು. ಅಲ್ಲಿ ಭಾರತೀಯರು ಶ್ರೀಲಂಕಾವನ್ನು 6 ವಿಕೆಟ್​ಗಳಿಂದ ಸೋಲಿಸಿ 1983ರ ನಂತರ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದರು.

ಗೆಲವು ಹೇಗೆ ಪೂರ್ವ ನಿಯೋಜಿತ ಎಂಬ ಸುರೇಶ್ ರೈನಾ ವಿವರಣೆ ಹೀಗಿದೆ

ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರನ್ನು ಬೇಗ ಔಟ್ ಆದ ತಕ್ಷಣ ಡ್ರೆಸ್ಸಿಂಗ್ ಕೋಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು ಎಂಬುದನ್ನು ಸುರೇಶ್ ರೈನಾ ಮೊದಲು ಒಪ್ಪಿಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ 3 ನೇ ವಿಕೆಟ್​​ಗೆ ಉತ್ತಮ ಜೊತೆಯಾಟ ನೀಡಿದಾಗ ಭರವಸೆಗಳು ಉಂಟಾದವು. ಕೊಹ್ಲಿ ನಿರ್ಗಮನದ ನಂತರ ಎಂಎಸ್ ಧೋನಿ ತಮ್ಮ ಪ್ರಧಾನ ಫಾರ್ಮ್​ನಲ್ಲಿದ್ದ ಯುವರಾಜ್ ಸಿಂಗ್ ಬದಲಿಗೆ ಬ್ಯಾಟಿಂಗ್ ಮಾಡಲು ಹೊರನಡೆದಿದ್ದು ಅಚ್ಚರಿ ರೈನಾ ನೆನಪಿಸಿಕೊಂಡರು.

ಇದನ್ನೂ ಓದಿ: Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

ಮುರಳೀಧರನ್ ಅವರ ಸ್ಪಿನ್ ದಾಳಿಯನ್ನು ನಿಭಾಯಿಸಲು ಯೋಜಿಸಿದ ಧೋನಿ, ಎಡಗೈ ಮತ್ತು ಬಲಗೈ ಸಂಯೋಜನೆಯನ್ನು ಬಯಸಿದ್ದರು. ಅದಕ್ಕಾಗಿ ಯುವರಾಜ್ ಅವರಿಗಿಂತ ಮೊದಲು ಧೋನಿ ಬ್ಯಾಟಿಂಗ್ ಮಾಡಲು ಮುಂದಾದರು ಎಂದು ಸುರೇಶ್ ರೈನಾ ಹೇಳಿದ್ದಾರೆ. ಮ್ಯಾನ್​ ಆಫ್​​​ ದಿ ಟೂರ್ನಮೆಂಟ್​ ಪ್ರಶಸ್ತಿ ಪಡೆದ ಯುವರಾಜ್ ಅವರಿಗಿಂತ ಮುಂದೆ ಹೋಗುವ ಧೋನಿಯ ನಿರ್ಧಾರವು ಮಾಸ್ಟರ್ ಸ್ಟ್ರೋಕ್ ಆಗಿತ್ತು. ಇವೆಲ್ಲವೂ ಪೂರ್ವ ನಿಯೋಜಿತ ಎಂದರು. ಅಂದ ಹಾಗೆ ಈ ನಿಯೋಜನೆಯನ್ನು ಮಾಡಿದ್ದು ಯಾರು ಎಂದು ಕೇಳಿದ ಪ್ರಶ್ನೆಗೆ ‘ಮೇಲಿರುವ ಭಗವಂತ’ ಎಂದು ಉತ್ತರಿಸಿದ್ದಾರೆ.

“ಮೊದಲ ಎರಡು ವಿಕೆಟ್​ಗಳು ಬಿದ್ದ ನಂತರ ಡ್ರೆಸ್ಸಿಂಗ್ ರೂಮ್​​ನಲ್ಲಿ ಮೌನವಿತ್ತು. ಆದರೆ ಗೌತಮ್ ಗಂಭೀರ್​ ಮತ್ತು ವಿರಾಟ್ ನಡುವಿನ ಪಾಲುದಾರಿಕೆ (ಪಂದ್ಯವನ್ನು ಬದಲಾಯಿಸಿತು). ವಿರಾಟ್ ವಿಕೆಟ್ ಬಿದ್ದಾಗ ನಾನು ಡ್ರೆಸ್ಸಿಂಗ್ ರೂಮ್​ನಲ್ಲಿದ್ದೆ. ಧೋನಿ ಭಾಯ್ ಬ್ಯಾಟಿಂಗ್ ಮಾಡಲು ಹೊರಗೆ ಹೊರಟರು. ನಾನು ಇದ್ದಕ್ಕಿದ್ದಂತೆ ಏನಾಯಿತು ಎಂದು ನೋಡಿದಾಗ ನಾನು ಹಾಗೆ ಭಾವಿಸಿದೆ”ಎಂದು ಸುರೇಶ್ ರೈನಾ ಹೇಳಿದ್ದಾರೆ.

“ಧೋನಿ ಭಾಯ್ ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಮಾಸ್ಟರ್ ಸ್ಟ್ರೋಕ್​ಗಳಾಗಿದ್ದವು. ಏಕೆಂದರೆ ಆ ಸಮಯದಲ್ಲಿ ಸಿಎಸ್​ಕೆ ಪರ ಆಡುತ್ತಿದ್ದ ಮುರಳೀಧರನ್ ಎದುರಾಳಿ ತಂಡದಲ್ಲಿದೆ. ಆದ್ದರಿಂದ ಯುವಿ ಪ್ರಧಾನ ಫಾರ್ಮ್​ನಲ್ಲಿದ್ದರೂ ಅವರು ಎಡ-ಬಲ ಸಂಯೋಜನೆಯನ್ನು ಹೊಂದಲು ಬಯಸಿದರು ಎಂದು ಹೇಳಿದ್ದಾರೆ.

ಇಡಿ ಟೂರ್ನಿಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡಲಾಗಿದೆ. ಆಟಗಾರರನ್ನು ಬಳಸಿಕೊಳ್ಳಲಾಗಿದೆ. ಆದ್ದರಿಂದ ವಿಶ್ವಕಪ್ ಸ್ಕ್ರಿಪ್ಟ್ ಮಾಡಲಾಗಿದೆ ಎಂದು ನನಗೆ ಅನಿಸಿತು. ಏನಾಗುತ್ತಿದೆಯೋ ಅದು ಖಂಡಿತವಾಗಿಯೂ ಸಂಭವಿಸುತ್ತದೆ ಮತ್ತು ಅದನ್ನು ಮೇಲಿನ ಭಗವಂತ ಬರೆದಿದ್ದಾನೆ”ಎಂದು ರೈನಾ ಮುಕ್ತಾಯಗೊಳಿಸಿದರು.

Continue Reading

ದೇಶ

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Dimond Smuggling: ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

dimond smuggling
Koo

ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದದ ವಜ್ರಗಳ ಹರಳುಗಳು (Diamond Smuggling) ಪತ್ತೆಯಾಗಿವೆ. ಅದರ ಮೌಲ್ಯ 6.48 ಕೋಟಿ ರೂಪಾಯಿ ಎಂದು ಮೌಲ್ಯ ಮಾಪನ ಮಾಡಲಾಗಿದೆ. ಅರೋಪಿ ಸಮೇತ ಅಧಿಕಾರಿಗಳು ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಅಧಿಕಾರಿಯೊಬ್ಬರು ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು/ ಅವುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂತು ಎಂದು ಹೇಳಿದ್ದಾರೆ.

ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಗೊತ್ತಾಯಿತು ಎಂದು ಅವರು ಹೇಳಿದ್ದಾರೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆದು 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ನಂತರ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ರೆಸ್ಟೊರೆಂಟ್ ಮಾಲೀಕನ ನೆರವು

ಇದೇ ರೀತಿಯ ಘಟನೆಯಲ್ಲಿ, ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಇದನ್ನೂ ಓದಿ: Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

ನಿರ್ಗಮನ ಪ್ರದೇಶದಲ್ಲಿ ಚಿನ್ನವನ್ನು ಸ್ವೀಕರಿಸುವುದು ಮತ್ತು ಅದನ್ನು ಹೊರಗಿನ ದಂಧೆಯ ಸದಸ್ಯರಿಗೆ ಹಸ್ತಾಂತರಿಸುವುದು ಅವನ ಪಾತ್ರವಾಗಿತ್ತು. ಅವರು ಬಾಂದ್ರಾ ಟಿ ಜಂಕ್ಷನ್ನಲ್ಲಿ ನೂರುಲ್ ಹಸನ್ ಜೆ ಮತ್ತು ಕಲಂದರ್ ಅಝರುದ್ದೀನ್ ಎಂಬುವರಿಗೆ ಸರಕುಗಳನ್ನು ಹಸ್ತಾಂತರಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಸ್ಜಿದ್ ಬಂದರ್ ನ ಹೋಟೆಲ್ ಸ್ಟಾರ್ ನಲ್ಲಿ ತಂಗಿದ್ದ ನೂರುಲ್ ಮತ್ತು ಕಲಂದರ್ ಅವರು ಮೊಹಮ್ಮದ್ ಅಲಿ ರಸ್ತೆಯ ಆಂಥೋನಿ ಎಂಬುವರಿಗೆ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅವರು ಪ್ರತಿ ವಿತರಣೆಗೆ 3 ಲಕ್ಷ ರೂ.ಗಳನ್ನು ಪಡೆದರು, ಅದರಲ್ಲಿ 1.8 ಲಕ್ಷ ರೂ.ಗಳನ್ನು ಕಳ್ಳಸಾಗಣೆಗೆ ಸಹಾಯ ಮಾಡಿದ್ದಕ್ಕಾಗಿ ಪಾಂಡಿಯನ್ ಗೆ ಪಾವತಿಸುತ್ತಿದ್ದರು.

Continue Reading

ಕರ್ನಾಟಕ

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Lok Sabha Election 2024: ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

VISTARANEWS.COM


on

Lok Sabha Election 2024 Only a guaranteed wave in Karnataka says Cm Siddaramaiah
Koo

ಚಿತ್ರದುರ್ಗ: ಚುನಾವಣೆ (Lok Sabha Election 2024) ಸಂದರ್ಭದಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ. ಕರ್ನಾಟಕ ರಾಜ್ಯ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಕೇಳಲಿಲ್ಲ. ಈಗ ಮತ ಕೇಳಲು ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಬಂದಿದ್ದಾರೆ. ಕರ್ನಾಟಕದಲ್ಲಿ ಮೋದಿ (Modi wave in Karnataka) ಅಲೆಯಿಲ್ಲ. ಏಕೆಂದರೆ ಅವರ ಸುಳ್ಳು ಜನರಿಗೆ ಅರ್ಥವಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿಗಳ ಅಲೆಯಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಹಸೀ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿದ್ದಾರೆ. ಹತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದವರು, ಮಹಿಳೆಯರು, ಬಡವರ ಪರವಾಗಿ ಅವರು ಏನೂ ಮಾಡಿಲ್ಲ. ಆರ್ಥಿಕ ಶಕ್ತಿ ತುಂಬುವಲ್ಲಿ ವಿಫಲರಾಗಿದ್ದಾರೆ. 2014ರಲ್ಲಿ‌ ಮೋದಿಯವರು ಅನೇಕ ಭರವಸೆ ಕೊಟ್ಟಿದ್ದರು. ಆದರೆ ಯಾವುದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Lok Sabha Election 2024 Only a guaranteed wave in Karnataka says Cm Siddaramaiah

ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಂದಾಗಿದ್ದಾರೆ. ಸೋಲುವ ಭಯದಿಂದ ಈ ಇಬ್ಬರೂ ಒಂದಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಸೋಲುತ್ತೇವೆ ಎಂದು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಪೈಪೋಟಿ ಮೇಲೆ ಸುಳ್ಳು

ಈ ಮೊದಲು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹೇಳಿದ್ದರು. ಆದರೆ ಈಗ ಕೋಮುವಾದಿ ಬಿಜೆಪಿ ಪಕ್ಷದ ಜತೆಗೆ ಸೇರಿಕೊಂಡಿದ್ದಾರೆ. ಮನಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು, ಮೋದಿ ಅದನ್ನು ಅಕ್ಷಯ ಪಾತ್ರೆ ಮಾಡಿಟ್ಟಿದಾರೆ. ಮೋದಿ, ದೇವೇಗೌಡರು ಪೈಪೋಟಿ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ‌ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ರೈತರ ಸಾಲ ಮನ್ನಾ ಮಾಡದ ಮೋದಿ

ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಬಿಜೆಪಿಯವರು ಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯವರು ಅಲ್ಲ, 2028ರವರೆಗೆ ನಮಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನೀವು ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Continue Reading

ಪ್ರಮುಖ ಸುದ್ದಿ

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Virat Kohli : ಈ ಮನ್ನಣೆ ನಿಸ್ಸಂದೇಹವಾಗಿ ಅರ್ಹವಾಗಿದೆ. ಏಕೆಂದರೆ ಮುಂಬೈನ ಕ್ರಿಕೆಟ್​ ಪ್ರೇಕ್ಷಕರು ಕೊಹ್ಲಿ ಇತಿಹಾಸವನ್ನು ನಿರ್ಮಿಸುವುದಕ್ಕೆ ಸಾಕ್ಷಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಶತಕ ಬಾರಿಸುವ ಮೂಲಕ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೊಹ್ಲಿ, ವಿಶ್ವಕಪ್​ನ ಮೊದಲ ಸೆಮಿಫೈನಲ್​​ನಲ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.

VISTARANEWS.COM


on

Virat kohli
Koo

ಬೆಂಗಳೂರು: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್​ನಲ್ಲಿ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ ವಿರಾಟ್ ಕೊಹ್ಲಿ (Virat Kohli) ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿದ್ದರು. ಈ ಮೂಲಕ ಅವರು ಸಚಿನ್ ತೆಂಡೂಲ್ಕರ್​ ಅವರ 49 ಏಕ ದಿನ ಶತಕಗಳ ಸಾಧನೆಯನ್ನು ಮುರಿದಿದ್ದರು. ಹೀಗಾಗಿ ಅದು ಕ್ರೀಡಾ ಇತಿಹಾಸದಲ್ಲಿ ಚಾರಿತ್ರಿಕ ಘಟನೆಯಾಗಿದೆ. ಅವರು ಶತಕ ಬಾರಿಸಿದ ಬಳಿಕ ದೇಶ ವಿದೇಶಗಳ ಅಥ್ಲೀಟ್​ಗಳಿಂದ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಇದೀಗ ಅವರ ಆ ಅವಿಸ್ಮರಣೀಯ ಶತಕಕ್ಕೆ ಅಂತಾರಾಷ್ಟ್ರೀಯ ಗೌರವವೊಂದು ದೊರಕಿದೆ ಎಂಬುದಾಗಿ ವರದಿಯಾಗಿದೆ. ಕೊಹ್ಲಿಯ ಅಭಿಮಾನಿ ಎಂಬ ಹೆಸರಲ್ಲಿ ಸೃಷ್ಟಿ ಮಾಡಿರುವ ಎಕ್ಸ್​ ಖಾತೆಯಲ್ಲಿ ಈ ಮಾಹಿತಿಹಂಚಿಕೊಳ್ಳಲಾಗಿದೆ.

ಸ್ಪೇನ್ ನ ಮ್ಯಾಡ್ರಿಡ್ ನ ಪಲಾಸಿಯೊ ಡಿ ಸಿಬೆಲೆಸ್ ನಲ್ಲಿ ಸೋಮವಾರ (ಏಪ್ರಿಲ್ 22) ನಡೆದ ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ ನಲ್ಲಿ ಕೊಹ್ಲಿಯ ಈ ಅಸಾಧಾರಣ ಸಾಧನೆಯನ್ನು ಉನ್ನತ ಕ್ರೀಡಾ ಕ್ಷಣಗಳಲ್ಲಿ ಒಂದಾಗಿ ಗೌರವಿಸಲಾಗಿದೆ ಎಂದು ಎಕ್ಸ್​ನಲ್ಲಿ ಬರೆಯಲಾಗಿದೆ.

ಈ ಮನ್ನಣೆ ನಿಸ್ಸಂದೇಹವಾಗಿ ಅರ್ಹವಾಗಿದೆ. ಏಕೆಂದರೆ ಮುಂಬೈನ ಕ್ರಿಕೆಟ್​ ಪ್ರೇಕ್ಷಕರು ಕೊಹ್ಲಿ ಇತಿಹಾಸವನ್ನು ನಿರ್ಮಿಸುವುದಕ್ಕೆ ಸಾಕ್ಷಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಶತಕ ಬಾರಿಸುವ ಮೂಲಕ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೊಹ್ಲಿ, ವಿಶ್ವಕಪ್​ನ ಮೊದಲ ಸೆಮಿಫೈನಲ್​​ನಲ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.

ಸಚಿನ್​ ದಾಖಲೆ ಮುರಿದ ಕೊಹ್ಲಿ

ಎರಡು ದಶಕಗಳ ಕಾಲ ರಾಷ್ಟ್ರದ ಭರವಸೆಗಳನ್ನು ಹೊತ್ತ ಬ್ಯಾಟಿಂಗ್ ದಂತಕಥೆ ಸಚಿನ್ ಅವರ ಹೆಜ್ಜೆಗಳನ್ನು ಅನುಸರಿಸಿ, ಸಚಿನ್ ತೆಂಡೂಲ್ಕರ್ ಅವರ ಸ್ಮರಣೀಯ ವಿಶ್ವಕಪ್ ವಿದಾಯದ 12 ವರ್ಷಗಳ ನಂತರ, ಕೊಹ್ಲಿ 50 ನೇ ಏಕದಿನ ಶತಕವನ್ನು ತಲುಪಿದರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

ಭಾರತದ 3ನೇ ಕ್ರಮಾಂಕದ ಬ್ಯಾಟರ್​ ತಮ್ಮ 279ನೇ ಏಕದಿನ ಇನ್ನಿಂಗ್ಸ್​ನಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ. ವಿಶೇಷವೆಂದರೆ ಕೊಹ್ಲಿಯ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಲು ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಕ್ರೀಡಾಂಗಣದಲ್ಲಿದ್ದರು.

ಸೋಮವಾರ ಸಂಜೆ ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್​​ 25 ನೇ ಆವೃತ್ತಿಗೆ ಸಾಕ್ಷಿಯಾಯಿತು. ಇದು ಹಿಂದಿನ ವರ್ಷದ ಅತ್ಯುತ್ತಮ ವೈಯಕ್ತಿಕ ಮತ್ತು ಕ್ರೀಡಾ ಸಾಧನೆಗಳನ್ನು ಗುರುತಿಸಲು ಮೀಸಲಾಗಿರುವ ಕಾರ್ಯಕ್ರಮವಾಗಿದೆ. ಸರ್ಬಿಯಾದ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ಮತ್ತು ಸ್ಪೇನ್ ನ ಐಟಾನಾ ಬೊನ್ಮಾಟಿ ಕ್ರಮವಾಗಿ ವರ್ಷದ ಕ್ರೀಡಾಪಟು ಮತ್ತು ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿಶ್ವಕಪ್ ಫೈನಲ್​​ನಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ ಆಸ್ಟ್ರೇಲಿಯಾದ ಕ್ರಿಕೆಟಿಗ ಟ್ರಾವಿಸ್ ಹೆಡ್ ಅವರ ಗಮನಾರ್ಹ ಕ್ಯಾಚ್ ಸೇರಿದಂತೆ ಗಮನಾರ್ಹ ಕ್ರೀಡಾ ಕ್ಷಣಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗಿದೆ.

Continue Reading
Advertisement
Voting awareness programme in Shira
ತುಮಕೂರು3 mins ago

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Suresh Raina
ಪ್ರಮುಖ ಸುದ್ದಿ3 mins ago

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Karnataka Weather Forecast
ಮಳೆ7 mins ago

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Bridge Collapse
ದೇಶ18 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

dimond smuggling
ದೇಶ35 mins ago

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Tongue Reveals Health
ಆರೋಗ್ಯ36 mins ago

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

HD Devegowda
ಕರ್ನಾಟಕ42 mins ago

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

Lok Sabha Election 2024 Only a guaranteed wave in Karnataka says Cm Siddaramaiah
ಕರ್ನಾಟಕ49 mins ago

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Virat kohli
ಪ್ರಮುಖ ಸುದ್ದಿ1 hour ago

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Job Alert
ಉದ್ಯೋಗ1 hour ago

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌