Mars Transit 2023 In Leo On 01 July 2023 Effect On Zodiac SignsMars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ! - Vistara News

ಪ್ರಮುಖ ಸುದ್ದಿ

Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

ಮಂಗಳ ಗ್ರಹವನ್ನು ಸೌರ ಮಂಡಲದ ಸೇನಾಧಿಪತಿ ಎಂದು ಕರೆಯುತ್ತಾರೆ. ಈ ಗ್ರಹವು ಜುಲೈ 1 ರಂದು ಸಿಂಹ ರಾಶಿಗೆ ಪ್ರವೇಶಿಸಲಿದೆ (Mars Transit 2023). ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನು ನೋಡೋಣ.

VISTARANEWS.COM


on

Mangal Gochar 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಲ ಕಾಲಕ್ಕೆ ಗ್ರಹಗಳು ಒಂದು ಮನೆಯಿಂದ ಮತ್ತೊಂದು ಮನೆಗೆ ಸಂಚಾರ ನಡೆಸುತ್ತಲೇ ಇರುತ್ತವೆ. ಇದರಿಂದಾಗಿಯೇ ಪ್ರತಿಯೊಬ್ಬರ ಗ್ರಹಗತಿ ಬದಲಾಗುತ್ತಿರುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ರೀತಿಯ ಗ್ರಹಗಳ ಸಂಚಾರಕ್ಕೆ ವಿಶೇಷ ಮಹತ್ವವನ್ನು ನೀಡಲಾಗುತ್ತದೆ. ಈ ಗ್ರಹಗಳ ಸಂಚಾರ (Mars Transit 2023) ಪ್ರತಿಯೊಂದು ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮ ಬೀರುತ್ತವೆ ಎಂಬುದನ್ನು ನೋಡಲಾಗುತ್ತದೆ.

ಮಂಗಳ ಗ್ರಹವನ್ನು ಸೌರ ಮಂಡಲದ ಸೇನಾಧಿಪತಿ ಎಂದು ಕರೆಯುತ್ತಾರೆ. ಸಾಹಸ, ಉತ್ಸಾಹ, ಪರಿಶ್ರಮ ಮತ್ತು ಪರಾಕ್ರಮ ಕಾರಕ ಗ್ರಹವಾಗಿರುವ ಮಂಗಳ ಗ್ರಹವು ಇದೇ ಜುಲೈ 01 ರಂದು ಸಿಂಹ ರಾಶಿಗೆ ಪ್ರವೇಶಿಸಲಿದೆ. ಆಗಸ್ಟ್‌ 18ರ ವರೆಗೆ ಈ ರಾಶಿಯಲಿದ್ದು, ಮುಂದೆ ಕನ್ಯಾ ರಾಶಿಗೆ ಪ್ರವೇಶಿಸಲಿದೆ. ಮಂಗಳನ ಈ ಸಂಚಾರದಿಂದ ಕೆಲವು ರಾಶಿಗಳ ಮೇಲೆ ಶುಭ ಪ್ರಭಾವ ಉಂಟಾಗಲಿದೆ. ಆ ರಾಶಿಗಳು ಯಾವವು ಎಂಬುದನ್ನು ತಿಳಿಯೋಣ. ನಿಮ್ಮ ರಾಶಿಯ ಮೇಲೆ ಈ ಮಂಗಳನ ಸಂಚಾರ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನೂ ನೋಡೋಣ.

ಮೇಷ: ವಿದ್ಯಾರ್ಥಿಗಳಿಗೆ ಉತ್ತಮವಾದ ಕಾಲ

Weekly Horoscope

ಮೇಷ ರಾಶಿಯವರಿಗೆ, ಮಂಗಳವು ಲಗ್ನ ಮತ್ತು ಎಂಟನೇ ಮನೆಯ ಅಧಿಪತಿ ಮತ್ತು ಮಂಗಳ ನಿಮ್ಮ ಐದನೇ ಮನೆಯಲ್ಲಿ ಸಂಚಾರ ನಡೆಸುತ್ತಿದ್ದಾನೆ. ಈ ಸಂಚಾರದಿಂದಾಗಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಾರೆ. ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ಅದರಲ್ಲಿ ಆಯ್ಕೆಯಾಗಬಹುದು. ವ್ಯಾಪಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವವರು ಉತ್ತಮ ಲಾಭ ಪಡೆಯುತ್ತಾರೆ. ನೀವು ವಿದೇಶಕ್ಕೆ ಹೋಗಬೇಕೆಂದು ಯೋಚಿಸುತ್ತಿದ್ದರೆ, ಈಗ ನಿಮಗೆ ಒಳ್ಳೆಯ ಸಮಯ. ಆಮದು ಮತ್ತು ರಫ್ತಿಗೆ ಸಂಬಂಧಿಸಿದ ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತಾರೆ.

ವೃಷಭ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Weekly Horoscope

ವೃಷಭ ರಾಶಿಯವರಿಗೆ ಮಂಗಳ ಹನ್ನೆರಡನೇ ಮತ್ತು ಏಳನೇ ಮನೆಯ ಅಧಿಪತಿಯಾಗಿದ್ದಾನೆ. ನಿಮ್ಮ ನಾಲ್ಕನೇ ಮನೆಯಲ್ಲಿ ಈ ಸಂಚಾರ ನಡೆಯುತ್ತಿದೆ. ಈ ಸಂಚಾರ ನಿಮ್ಮ ಮೇಲೆ ಅನುಕೂಲಕರ ಪರಿಣಾಮ ಬೀರುವುದಿಲ್ಲ. ಈ ಸಂಚಾರದಿಂದಾಗಿ, ನಿಮಗೆ ಸ್ವಲ್ಪ ಮಾನಸಿಕ ಒತ್ತಡ ಉಂಟಾಗಲಿದೆ. ಈ ಸಮಯದಲ್ಲಿ, ಆಸ್ತಿ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಡೆಸುವ ವ್ಯವಹಾರದಲ್ಲಿ ಹಣದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳು ನಿಮ್ಮ ವಿರುದ್ಧ ಸ್ವಲ್ಪ ಪಿತೂರಿ ಮಾಡಬಹುದು. ವೈವಾಹಿಕ ಜೀವನದಲ್ಲೂ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಬೇಡಿ. ನೀವು ಈಗ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.

ಮಿಥುನ: ನಿಮಗಿದು ಅದೃಷ್ಟದ ಸಮಯ

Weekly Horoscope

ಮಿಥುನ ರಾಶಿಯವರಿಗೆ ಹನ್ನೊಂದು ಮತ್ತು ಆರನೇ ಮನೆಯ ಅಧಿಪತಿ ಮಂಗಳ. ಜುಲೈ 1 ರಿಂದ, ನಿಮ್ಮ ಮೂರನೇ ಮನೆಯಲ್ಲಿ ಮಂಗಳನ ಸಂಚಾರವಿದೆ. ಇದು ಧೈರ್ಯ ಮತ್ತು ಶಕ್ತಿಯ ಮನೆಯಾಗಿದೆ. ಈ ಮಂಗಳ ಸಂಚಾರವು ಮಿಥುನ ರಾಶಿಯವರಲ್ಲಿ ಧೈರ್ಯ ಮತ್ತು ಶೌರ್ಯವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ, ರಿಯಲ್ ಎಸ್ಟೇಟ್ ಮತ್ತು ಆಸ್ತಿಗೆ ಸಂಬಂಧಿಸಿದ ವ್ಯವಹಾರ ನಡೆಸುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ನಿಮ್ಮ ಶತ್ರುಗಳು ನಿಮ್ಮ ವಿರುದ್ಧ ಏನೂ ಮಾಡಲಾರರು. ಎಲ್ಲ ಶತ್ರುಗಳನ್ನು ಹಿಮ್ಮೆಟ್ಟಿಸಲು ನಿಮಗೆ ಸಾಧ್ಯವಾಗುತ್ತದೆ. ಅದೃಷ್ಟದ ಈ ಸಮಯದಲ್ಲಿ ನಿಮ್ಮ ಕೈ ಹಿಡಿಯುತ್ತದೆ. ನಿಮ್ಮ ತಂದೆಯ ಸಹಾಯದಿಂದ ಯಾವುದೇ ಅಪೂರ್ಣ ಕೆಲಸವನ್ನು ನೀವು ಪೂರ್ಣಗೊಳಿಸಬಹುದು. ಸರ್ಕಾರಿ ನೌಕರರು ಮೇಲಧಿಕಾರಿಗಳ ಬೆಂಬಲ ಪಡೆಯುತ್ತಾರೆ. ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ನೀವು ಬಡ್ತಿ ಕೂಡ ಪಡೆಯಬಹುದು.

ಕಟಕ: ವಾಹನ ಚಲಾಯಿಸುವಾಗ ಎಚ್ಚರಿಕೆ ಇರಲಿ

Weekly Horoscope

ಕಟಕ ರಾಶಿಯವರಿಗೆ ಮಂಗಳ ಹತ್ತನೇ ಮತ್ತು ಐದನೇ ಮನೆಯ ಅಧಿಪತಿಯಾಗಿದ್ದಾನೆ. ನಿಮ್ಮ ಎರಡನೇ ಮನೆಯ ಮೂಲಕ ಅಂದರೆ ಸಂಪತ್ತಿನ ಮನೆಯ ಮೂಲಕ ಈ ಸಂಚಾರ ನಡೆಸುತ್ತಾನೆ. ಈ ಸಂಚಾರದಿಂದ, ನಿಮ್ಮ ಪೂರ್ವಜರ ವ್ಯವಹಾರದಿಂದ ನೀವು ಲಾಭ ಪಡೆಯಬಹುದು. ನಿಮ್ಮ ತಂದೆಯ ಕೆಲಸವನ್ನು ನೀವು ನೋಡಿಕೊಳ್ಳುತ್ತಿದ್ದರೆ, ವ್ಯಾಪಾರ ಬೆಳವಣಿಗೆಯ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತವೆ. ಈ ಸಮಯದಲ್ಲಿ ನೀವು ಯಾವುದೇ ನ್ಯಾಯಾಲಯದ ಪ್ರಕರಣದಲ್ಲಿ ಭಾಗಿಯಾಗಬೇಡಿ ಮತ್ತು ನೀವು ಮಾತನಾಡುವಾಗ, ಭರವಸೆ ನೀಡುವಾಗ ಸಂಯಮದಿಂದಿರಿ. ಕಟು ಮಾತು ಬೇಡ. ನಿಮ್ಮ ಪ್ರೀತಿಯ ಸಂಬಂಧದಲ್ಲಿ ಸ್ವಲ್ಪ ಏರುಪೇರಾಗಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು ತಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಬೇಕು. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಗಾಯವಾಗುವ ಸಂಭವವಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ನಿಮ್ಮ ತಂದೆಯ ಬೆಂಬಲದೊರೆಯುತ್ತದೆ. ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆಗಳಿವೆ.

ಸಿಂಹ: ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ!

Weekly Horoscope

ಸಿಂಹ ರಾಶಿಯವರಿಗೆ, ಮಂಗಳವು ಅದೃಷ್ಟದ ಮನೆ ಮತ್ತು ನಾಲ್ಕನೇ ಮನೆಯ ಅಧಿಪತಿ, ನಿಮ್ಮ ಲಗ್ನದಲ್ಲಿ ಮಾತ್ರ ಸಂಚಾರವಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳನು ​ ನಾಲ್ಕನೇ, ಏಳನೇ ಮತ್ತು ಎಂಟನೇ ಮನೆಯ ಮೇಲೆ ದೃಷ್ಟಿ ಬೀರುತ್ತಾನೆ. ಮಂಗಳ ಗ್ರಹದ ಸಂಚಾರದಿಂದಾಗಿ ನಿಮ್ಮ ವ್ಯಕ್ತಿತ್ವದಲ್ಲಿ ವಿಭಿನ್ನ ರೀತಿಯ ಹೊಳಪು ಪಡೆಯುತ್ತದೆ ಮತ್ತು ನೀವು ಪೂರ್ಣ ಲಾಭವನ್ನು ಅನುಭವಿಸುವಿರಿ. ನಿಮ್ಮ ಗುರಿಗಳನ್ನು ಸಾಧಿಸಲು ಇದು ಸರಿಯಾದ ಸಮಯ. ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ. ಮಂಗಳ ಸಂಚಾರದ ಪ್ರಭಾವದಿಂದ, ನೀವು ಆಸ್ತಿಯನ್ನು ಖರೀದಿಸಬಹುದು. ಈ ಸಮಯದಲ್ಲಿ ನೀವು ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ವೈವಾಹಿಕ ಜೀವನದಲ್ಲಿ ಮಂಗಳ ಗ್ರಹದ ಈ ಸಂಕ್ರಮಣದಿಂದಾಗಿ, ಸ್ವಲ್ಪ ಉದ್ವೇಗದ ಪರಿಸ್ಥಿತಿ ನಿರ್ಮಾಣವಾಗಬಹುದು. ಆದರೂ ಸಂಬಂಧದಲ್ಲಿ ಬಿರುಕೇನೂ ಮೂಡದು. ಆದರೆ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವನ್ನು ಮುಂದುವರಿಸಬೇಡಿ. ನಿಮ್ಮ ಸ್ನೇಹಿತರನ್ನು ಹೆಚ್ಚು ನಂಬಬೇಡಿ. ಯಾರಿಗೂ ಸಾಲ ಕೊಡಬೇಡಿ ಅಥವಾ ಯಾರಿಂದಲೂ ಹಣವನ್ನು ತೆಗೆದುಕೊಳ್ಳಬೇಡಿ. ಕೆಲಸವನ್ನು ಬದಲಾಯಿಸಲು ನೀವು ಉದ್ದೇಶಿಸಿದ್ದರೆ ಸಮಯವು ನಿಮಗೆ ಅನುಕೂಲಕರವಾಗಿದೆ.

ಕನ್ಯಾ: ಆರ್ಥಿಕವಾಗಿ ನಷ್ಟವಾಗಬಹುದು, ಎಚ್ಚರಿಕೆ ಇರಲಿ

Weekly Horoscope

ಕನ್ಯಾ ರಾಶಿಯವರಿಗೆ ಮಂಗಳ ಮೂರನೇ ಮತ್ತು ಎಂಟನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಹನ್ನೆರಡನೇ ಮನೆಯಲ್ಲಿ ಅಂದರೆ ಖರ್ಚಿನ ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ಮೂರನೇ, ಆರನೇ ಮತ್ತು ಏಳನೇ ಮನೆಯ ಮೇಲೆ ದೃಷ್ಟಿ ನೆಟ್ಟಿದ್ದಾನೆ. ಇದರಿಂದಾಗಿ ನೀವು ಅನಾವಶ್ಯಕವಾಗಿ ಪ್ರಯಾಣಿಸಬೇಕಾಗಿ ಬರಬಹುದು ಮತ್ತು ಈ ಸಮಯದಲ್ಲಿ ನೀವು ಆರ್ಥಿಕವಾಗಿ ಹಿನ್ನಡೆ ಅನುಭವಿಸಬಹುದು. ಕೆಲಸದಲ್ಲಿ ಸ್ಥಳದಲ್ಲಿ ನಿರೀಕ್ಷಿಸಿದ ಬಡ್ತಿಯನ್ನು ಪಡೆಯಲಾಗುವುದಿಲ್ಲ. ಇದರಿಂದಾಗಿ ನಿಮ್ಮ ಮನಸ್ಸಿಗೆ ಸ್ವಲ್ಪ ಬೇಸರವಾಗಬಹುದು. ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ಸಮಯವು ಅನುಕೂಲಕರವಾಗಿಲ್ಲ. ಈಗ ನೀವು ಉತ್ಸಾಹ ತೋರಿದರೆ ಭವಿಷ್ಯದಲ್ಲಿ ಸಮಸ್ಯೆಗಳಾಗಬಹುದು. ಈ ಸಮಯದಲ್ಲಿ ಒಡಹುಟ್ಟಿದವರೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ಹೆಂಡತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ.

ತುಲಾ: ಪಾಲುದಾರಿಕೆ ವ್ಯವಹಾರಕ್ಕೆ ಸೂಕ್ತ ಸಮಯ

Weekly Horoscope

ತುಲಾ ರಾಶಿಯ ಜನರಿಗೆ, ಮಂಗಳವು ಎರಡನೇ ಮತ್ತು ಏಳನೇ ಮನೆಯ ಅಧಿಪತಿಯಾಗಿದ್ದಾನೆ. ಈ ಸಂಚಾರವು ಹನ್ನೊಂದನೇ ಮನೆಯಲ್ಲಿ ಅಂದರೆ ಲಾಭಸ್ಥಾನದಲ್ಲಿ ನಡೆಯುತ್ತದೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ಎರಡನೇ, ಐದನೇ ಮತ್ತು ಆರನೇ ಮನೆಯ ಮೇಲೆ ದೃಷ್ಟಿ ಬೀರುತ್ತಾನೆ. ಮಂಗಳ ಗ್ರಹದ ಈ ಸಂಚಾರದಿಂದಾಗಿ ನಿಮ್ಮ ಯಾವುದೇ ಪಾಲುದಾರಿಕೆ ಒಪ್ಪಂದವು ಈ ಸಮಯದಲ್ಲಿ ಪ್ರಗತಿ ಹೊಂದಬಹುದು. ನೀವು ಪಾಲುದಾರಿಕೆಯಲ್ಲಿ ಕೆಲಸವನ್ನು ಪ್ರಾರಂಭಿಸಲು ಬಯಸಿದ್ದರೆ ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಜನರು ಉತ್ತಮ ಲಾಭ ಪಡೆಯುತ್ತಾರೆ. ನಿಮ್ಮ ಶತ್ರುಗಳು ಈ ಸಮಯದಲ್ಲಿ ಪರಿಣಾಮಕಾರಿಯಾಗಿರುವುದಿಲ್ಲವಾದರೂ, ಯಾವುದೇ ರೀತಿಯ ನ್ಯಾಯಾಲಯದ ವಿವಾದದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ. ಉದ್ಯೋಗಸ್ಥರು ಈ ಸಮಯದಲ್ಲಿ ಉತ್ತಮ ಏಳಿಗೆಯನ್ನು ಹೊಂದುತ್ತಾರೆ. ಸರ್ಕಾರಿ ಕೆಲಸ ಮಾಡುವವರಿಗೆ ಉನ್ನತ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

ವೃಶ್ಚಿಕ: ಪ್ರೇಮ ಜೀವನವನ್ನು ಬಲಪಡಿಸುವ ಸಮಯ

Weekly Horoscope

ವೃಶ್ಚಿಕ ರಾಶಿಯವರಿಗೆ ಮಂಗಳನು ​​ಲಗ್ನದ ಅಧಿಪತಿ ಮತ್ತು ಆರನೇ ಮನೆಯ ಅಧಿಪತಿ. ಮಂಗಳನ ಈ ಸಂಕ್ರಮಣವು ವೃಶ್ಚಿಕ ರಾಶಿಯವರ ಕ್ರಿಯೆಯ ಮನೆಯಲ್ಲಿ ನಡೆಯುತ್ತಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳನ ದೃಷ್ಟಿ ಲಗ್ನ, ನಾಲ್ಕನೇ ಮತ್ತು ಐದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ. ಈ ಸಂಚಾರವು ವೃಶ್ಚಿಕ ರಾಶಿಯವರಿಗೆ ಯಶಸ್ಸನ್ನು ತಂದುಕೊಡಲಿದೆ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ ಗೌರವ ಪಡೆಯತ್ತೀರಿ. ನಿಮ್ಮ ಮೇಲಧಿಕಾರಿಗಳು ನಿಮ್ಮನ್ನು ಪ್ರಶಂಸಿಸುವರು. ನಿಮ್ಮ ಗೌರವವೂ ಹೆಚ್ಚಾಗುತ್ತದೆ. ನಿಮ್ಮ ಬುದ್ಧಿವಂತಿಕೆ ಮತ್ತು ಕಠಿಣ ಪರಿಶ್ರಮದಿಂದ ಕಷ್ಟವಾದದ್ದನ್ನೂ ಸಾಧಿಸಿ, ಗುರಿ ಮುಟ್ಟುವಿರಿ. ಈ ಸಂಕ್ರಮಣದಿಂದಾಗಿ ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳು ನಡೆಯುತ್ತವೆ. ನಿಮ್ಮ ಕುಟುಂಬದ ಸದಸ್ಯರಿಗೆ ನೀವು ಅಮೂಲ್ಯವಾದ ಉಡುಗೊರೆಯನ್ನು ಸಹ ನೀಡಬಹುದು. ಮಂಗಳನ ಈ ಸಂಚಾರವು ನಿಮ್ಮ ಪ್ರೇಮ ಜೀವನಕ್ಕೂ ಉತ್ತಮವಾಗಿದೆ. ನೀವು ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುತ್ತೀರಿ.

ಧನಸ್ಸು: ಆಮದು-ರಫ್ತು ವ್ಯಾಪಾರಿಗಳಿಗೆ ಲಾಭ ಹೆಚ್ಚಲಿದೆ

Weekly Horoscope

ಧನು ರಾಶಿಯವರಿಗೆ, ಮಂಗಳ ಐದನೇ ಮತ್ತು ಹನ್ನೆರಡನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಅದೃಷ್ಟದ ಮನೆಯಲ್ಲಿ ಸಂಚಾರ ನಡೆಯುತ್ತಿದೆ. ಮಂಗಳನ ಈ ಸಂಚಾರದಿಂದಾಗಿ ಧನು ರಾಶಿಯವರಲ್ಲಿ ಧಾರ್ಮಿಕತೆ ಹೆಚ್ಚುತ್ತದೆ ಮತ್ತು ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಬಹುದು. ಕುಲ ಗುರುಗಳ, ಪೀಠಾಧಿಪತಿಗಳ ಬೆಂಬಲ, ಆಶೀರ್ವಾದ ಪಡೆದುಕೊಳ್ಳುತ್ತೀರಿ. ವಿದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳು, ಬಿಸ್ನೆಸ್‌ ಮಾಡುವವರು ಲಾಭವನ್ನು ಪಡೆಯುತ್ತಾರೆ. ಆಮದು ಮತ್ತು ರಫ್ತಿಗೆ ಸಂಬಂಧಿಸಿದ ವ್ಯಾಪಾರಿಗಳು ಈ ಸಮಯದಲ್ಲಿ ಹೆಚ್ಚಿನ ಲಾಭ ಪಡೆಯುತ್ತಾರೆ. ನಿಮ್ಮ ವಿದ್ಯಾಭ್ಯಾಸಕ್ಕಾಗಿ ನೀವು ವಿದೇಶಕ್ಕೆ ಹೋಗಲು ಬಯಸಿದರೆ, ಈ ಸಮಯವು ಅನುಕೂಲಕರವಾಗಿದೆ. ನೀವು ನಿಮ್ಮ ಸಹೋದರರ ಬೆಂಬಲವನ್ನು ಪಡೆಯುತ್ತೀರಿ ಮತ್ತು ಯಾವುದೇ ಪೂರ್ವಜರ ಆಸ್ತಿ ವಿವಾದವಿದ್ದರೆ ಅದನ್ನು ಸಹ ಬಗೆಹರಿಸಿಕೊಳ್ಳುತ್ತೀರಿ. ನಿಮ್ಮ ಕುಟುಂಬ ಸದಸ್ಯರಿಗಾಗಿ ನೀವು ಸಮಯವನ್ನು ನೀಡುತ್ತೀರಿ. ನಿಮಗೆ ವಾಹನ ಅಥವಾ ಕಟ್ಟಡವನ್ನು ಖರೀದಿಸುವ ಯೋಗವಿದೆ. ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ನಡೆಸುತ್ತೀರಿ.

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಮಕರ: ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರಲಿ

Weekly Horoscope

ಮಕರ ರಾಶಿಯವರಿಗೆ ಮಂಗಳವು ನಾಲ್ಕನೇ ಮತ್ತು ಹನ್ನೊಂದನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಎಂಟನೇ ಮನೆಯಲ್ಲಿ ಅಂದರೆ ಹಠಾತ್ ಘಟನೆಗಳು ಸಂಭವಿಸಲು ಕಾರಣವಾಗುವ ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಇಲ್ಲಿಂದ ನಿಮ್ಮ ಹನ್ನೊಂದನೇ ಮನೆ, ಹಣದ ಮನೆ ಮತ್ತು ಮೂರನೇ ಮನೆಯ ಮೇಲೆ ದೃಷ್ಟಿ ನೆಟ್ಟಿದ್ದಾನೆ. ಈ ಮನೆಯಲ್ಲಿ ಮಂಗಳ ಸಂಚಾರದಿಂದ ನಿಮಗೆ ತೊಂದರೆಯಾಗಬಹುದು. ಈ ಸಮಯದಲ್ಲಿ ನಿಮ್ಮ ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ವ್ಯಪಾರ ಮಾಡುವವರಿಗೆ ಈ ಸಮಯ ಅನುಕೂಲವಾಗಿಲ್ಲ. ಹಣದ ಕೊರತೆಯನ್ನು ಎದುರಿಸಬೇಕಾಗಿಬರಬಹುದು. ನಿಮ್ಮ ಕೌಟುಂಬಿಕ ಜೀವನ ಕೂಡ ಸಮಸ್ಯೆಗಳಿಂದ ಕೂಡಿರುತ್ತದೆ. ಮಾತನಾಡುವಾಗ ಸಂಯಮ ಅಗತ್ಯ. ನಿಮ್ಮ ಕಟುವಾದ ಮಾತುಗಳಿಂದಾಗಿ ಜಗಳವಾಗಬಹುದು. ಈ ಸಮಯದಲ್ಲಿ, ನಿಮ್ಮ ಧೈರ್ಯ ಮತ್ತು ಶೌರ್ಯ ಸ್ವಲ್ಪ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ನೀವು ಹಣಕಾಸಿನ ವ್ಯವಹಾರಗಳಲ್ಲಿಯೂ ಜಾಗರೂಕರಾಗಿರಬೇಕು.

ಕುಂಭ: ನಿಮಗೆ ರಾಜಯೋಗದ ಕಾಲವಿದು!

Weekly Horoscope

ಕುಂಭ ರಾಶಿಯವರಿಗೆ ಮಂಗಳ ತೃತೀಯ ಮತ್ತು ಹತ್ತನೇ ಮನೆಯ ಅಧಿಪತಿಯಾಗಿರುವುದರಿಂದ ರಾಜಯೋಗವಿದೆ. ನಿಮ್ಮ ಏಳನೇ ಮನೆಯಲ್ಲಿ ಅಂದರೆ ಪಾಲುದಾರಿಕೆಯ ಭಾವದಲ್ಲಿ ಮಂಗಳನ ಸಂಕ್ರಮಣ ನಡೆಯಲಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ದಶಮ, ಲಗ್ನ ಮತ್ತು ಸಂಪತ್ತಿನ ಸ್ಥಳವನ್ನು ನೋಡುತ್ತಿದ್ದಾನೆ. ಹೀಗಾಗಿ ವ್ಯಾಪಾರಿ ವರ್ಗದವರಿಗೆ ಈ ಮಂಗಳ ಸಂಚಾರವು ತುಂಬಾ ಒಳಿತನ್ನು ಮಾಡಲಿದೆ. ಈ ಸಮಯದಲ್ಲಿ ನೀವು ಹೊಸ ಬಂಡವಾಳ ಹೂಡಿಕೆ ಮಾಡುತ್ತೀರಿ ಮಾತ್ರವಲ್ಲದೆ ನಿಮ್ಮ ವ್ಯವಹಾರವೂ ವಿಸ್ತರಿಸುತ್ತದೆ. ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸಲು ಉದ್ದೇಶಿಸಿದ್ದರೆ ಇದು ಉತ್ತಮ ಸಮಯ. ಈ ಸಮಯದಲ್ಲಿ ನಿಮ್ಮ ಕುಟುಂಬದಲ್ಲಿ ನಿಮಗೆ ಕೆಲವು ದೊಡ್ಡ ಜವಾಬ್ದಾರಿಗಳನ್ನು ನೀಡಬಹುದು. ಆದಾಗ್ಯೂ, ನೀವು ನಿಮ್ಮ ಬಾಳಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕೋರ್ಟ್ ಕೇಸ್ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ಸರ್ಕಾರಿ ಊದ್ಯೋಗಿಗಳು ಈ ಸಮಯದಲ್ಲಿ ಬಡ್ತಿ ಪಡೆಯಬಹುದು. ವಿದ್ಯಾರ್ಥಿ ವರ್ಗಕ್ಕೂ ಈ ಸಮಯ ತುಂಬಾ ಒಳ್ಳೆಯದು. ನೀವು ಸಂಶೋಧನೆಯ ವಿಷಯಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ಈ ಸಮಯವು ನಿಮಗೆ ನಿಜವಾಗಿಯೂ ಅನುಕೂಲಕರವಾಗಿದೆ.

ಇದನ್ನೂ ಓದಿ : Mithuna Sankranti 2023 : ಸೂರ್ಯನ ಈ ಸಂಚಾರ‌, ಕೆಲವರ ಬದುಕಲ್ಲಿ ಬಂಗಾರ!

ಮೀನ: ಇದು ಶುಭ ಫಲಗಳನ್ನು ಪಡೆಯುವ ಸಮಯ

Weekly Horoscope

ಮೀನ ರಾಶಿಯವರಿಗೆ ಮಂಗಳ ಎರಡನೇ ಮತ್ತು ಅದೃಷ್ಟದ ಮನೆಯ ಅಧಿಪತಿ. ನಿಮ್ಮ ಆರನೇ ಮನೆಯಲ್ಲಿ ಅಂದರೆ ಶತ್ರು ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಹೀಗಾಗಿ ಈ ಸಂಚಾರವು ತುಂಬಾ ಶುಭ ಫಲಗಳನ್ನು ನೀಡುತ್ತದೆ. ಮಂಗಳ ಗ್ರಹದ ಈ ಸಂಚಾರದಿಂದ, ನಿಮ್ಮ ಕೆಲಸದಲ್ಲಿ ನೀವು ಬಯಸಿದ ಬಡ್ತಿಯನ್ನು ಪಡೆಯಬಹುದು. ನಿಮ್ಮ ಶತ್ರುಗಳು ಸಂಪೂರ್ಣವಾಗಿ ನಾಶವಾಗಲಿದ್ದಾರೆ. ಮಂಗಳ ಗ್ರಹವು ಅದೃಷ್ಟದ ಸ್ಥಾನಕ್ಕೆ ಹೋಗುವುದರಿಂದ, ಈ ಸಮಯದಲ್ಲಿ ನೀವು ಅದೃಷ್ಟವನ್ನು ಪಡೆಯುತ್ತೀರಿ.
ಈ ಸಮಯದಲ್ಲಿ ನೀವು ವಿದೇಶಕ್ಕೆ ಹೋಗುವ ಅವಕಾಶವನ್ನು ಸಹ ಪಡೆಯಬಹುದು. ನೀವು ಕೆಲವು ಕೆಲಸದ ಸಂಬಂಧ ಪ್ರಯಾಣಿಸಬೇಕಾಗಿ ಬರಬಹುದು. ಈ ಪ್ರವಾಸಗಳು ಭವಿಷ್ಯದಲ್ಲಿ ನಿಮಗೆ ಪ್ರಯೋಜನ ನೀಡುತ್ತವೆ. ಲಗ್ನದ ಮೇಲೆ ಮಂಗಳನ ದೃಷ್ಟಿಯೂ ನಡೆಯುತ್ತಿದೆ, ಇದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನಿಮ್ಮ ಧೈರ್ಯ ಮತ್ತು ಶೌರ್ಯವು ಹೆಚ್ಚಾಗುತ್ತದೆ. ಸಮಾಜದಲ್ಲಿ ನೀವು ಗೌರವವನ್ನು ಪಡೆಯುತ್ತೀರಿ. ನಿಮ್ಮಲ್ಲಿನ ನಾಯಕತ್ವದ ಗುಣ ವೃದ್ಧಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ದೇಶ

Tsering Namgyal: ಸಂಸತ್ತಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ್ದ ತ್ಸೆರಿಂಗ್‌ ಈಗ ಅದೇ ಪಕ್ಷದ ಲಡಾಕ್‌ ಅಭ್ಯರ್ಥಿ!

Tsering Namgyal: ಸಂಸತ್‌ನಲ್ಲಿ ನಿಂತು ಕಾಂಗ್ರೆಸ್‌ ವಂಶಾಡಳಿತವನ್ನು, ಜಮ್ಮು-ಕಾಶ್ಮೀರ, ಲಡಾಕ್‌ಗೆ ಮಾಡಿದ ಅವಮಾನವನ್ನು ಗಟ್ಟಿಯಾಗಿ ಹೇಳುವ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದ, ಈಗಲೂ ಬಿಜೆಪಿ ಸಂಸದರಾಗಿರುವ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೊನೆಯ ಕ್ಷಣದಲ್ಲಿ ಬಿಜೆಪಿಯ ಭಿನ್ನಮತದ ಲಾಭ ಪಡೆದ ಕಾಂಗ್ರೆಸ್‌ ನಾಯಕರು ನಾಮ್‌ಗ್ಯಾಲ್‌ ತ್ಸೆರಿಂಗ್‌ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Tsering Namgyal
Koo

ನವದೆಹಲಿ: ರಾಜಕೀಯದಲ್ಲಿ ಯಾರೂ ಶತ್ರುಗಳಿಲ್ಲ, ಯಾರೂ ಮಿತ್ರರಾಗಿಯೂ ಇರುವುದಿಲ್ಲ ಎಂಬ ಮಾತಿದೆ. ಇದಕ್ಕೆ ನಿದರ್ಶನ ಎಂಬಂತೆ, ಲಡಾಕ್‌ ಬಿಜೆಪಿ ಸಂಸದ, ಒಂದು ಕಾಲದ ಕಾಂಗ್ರೆಸ್‌ ಖಟ್ಟರ್‌ ವಿರೋಧಿಯಾಗಿದ್ದ ಜಾಮ್‌ಯಾಂಗ್‌ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರೀಗ ಕಾಂಗ್ರೆಸ್‌ (Congress) ಟಿಕೆಟ್‌ ಪಡೆದು, ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ.

ಹೌದು, ಸಂಸತ್‌ನಲ್ಲಿ ನಿಂತು ಕಾಂಗ್ರೆಸ್‌ ವಂಶಾಡಳಿತವನ್ನು, ಜಮ್ಮು-ಕಾಶ್ಮೀರ, ಲಡಾಕ್‌ಗೆ ಮಾಡಿದ ಅವಮಾನವನ್ನು ಗಟ್ಟಿಯಾಗಿ ಹೇಳುವ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದ, ಈಗಲೂ ಬಿಜೆಪಿ ಸಂಸದರಾಗಿರುವ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ತುಸು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಕೊನೆಯ ಕ್ಷಣದಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್‌ ನಾಯಕರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading

ಸಿನಿಮಾ

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Ragini Khanna: ನಟ ಗೋವಿಂದ ಅವರ ಸೋದರ ಸೊಸೆಯಾಗಿರುವ ರಾಗಿಣಿ ಖನ್ನಾ ಅವರು ಗುರುಗಾಂವ್‌, ಡಬಲ್‌ ದಿ ತ್ರಿಬಲ್‌, ಘೂಮಕೇತು, ಪೋಷಂ ಪಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು ಇತ್ತೀಚೆಗೆ ಕ್ರೈಸ್ತ ಧರ್ಮ ಸ್ವೀಕರಿಸಿದ್ದಾರೆ ಎನ್ನಲಾಗಿತ್ತು. ಈಗ ಅವರು ಹಿಂದು ಧರ್ಮಕ್ಕೆ ಮರಳಿದ್ದು, ಕ್ರೈಸ್ತ ಧರ್ಮ ಸ್ವೀಕರಿಸಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

VISTARANEWS.COM


on

Ragini Khanna
Koo

ಮುಂಬೈ: ಬಾಲಿವುಡ್‌ ನಟ ಗೋವಿಂದ (Actor Govinda) ಅವರ ಸೋದರ ಸೊಸೆ, ನಟಿ ರಾಗಿಣಿ ಖನ್ನಾ (Ragini Khanna) ಅವರು ಕ್ರೈಸ್ತ ಧರ್ಮಕ್ಕೆ (Christianity) ಮತಾಂತರ ಆಗಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ. “ನಾನು ಹಿಂದು ಧರ್ಮ ಬಿಟ್ಟು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವುದಕ್ಕೆ ವಿಷಾದವಿದೆ. ಈ ಕುರಿತು ನಾನು ಕ್ಷಮೆಯಾಚಿಸುತ್ತೇನೆ. ನಾನೀಗ ಹಿಂದು ಧರ್ಮಕ್ಕೆ ಮರಳಿದ್ದು, ನಾ ಖಟ್ಟರ್‌ ಹಿಂದು ಸನಾತನವಾದಿಯಾಗಿದ್ದೇನೆ. ನಾನೀಗ ನನ್ನ ಬೇರುಗಳಿಗೆ ಮರಳಿದ್ದೇನೆ ಎಂಬುದಾಗಿ ಅನಿಸುತ್ತಿದೆ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು ಚುಕುದಾರ್‌ಬಹದ್ದೂರ್‌ 2.0 ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಾಗಿಣಿ ಖನ್ನಾ ಅವರು ಕ್ರೈಸ್ತ ಧರ್ಮ ಸ್ವೀಕರಿಸಿದ ಕುರಿತು ಪೋಸ್ಟ್‌ ಮಾಡಲಾಗಿತ್ತು. “ನಾನು ರಾಗಿಣಿ ಖನ್ನಾ. ನಾನೀಗ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದೇನೆ. ಕ್ರೈಸ್ತನು ಈಗ ನನಗೆ ದೇವರಾಗಿದ್ದು, ಆತನ ಬೋಧನೆಗಳೊಂದಿಗೆ ನಾನು ನನ್ನ ಜೀವನದ ಮಾರ್ಗವನ್ನು ಕಂಡುಕೊಳ್ಳುತ್ತೇನೆ” ಎಂಬುದಾಗಿ ಪೋಸ್ಟ್‌ ಮಾಡಲಾಗಿತ್ತು.

“ನಾನು ಮನಸಾರೆ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದೇನೆ. ಭಕ್ತಿಯ ಹಾದಿಯಲ್ಲಿ ನಾನು ನಂಬಿಕೆಯೊಂದಿಗೆ ಮುನ್ನಡೆಯುತ್ತೇನೆ. ಶಾಂತಿ ಹಾಗೂ ಪ್ರೀತಿಯನ್ನು ಹಂಚುತ್ತ ಮುಂದೆ ಸಾಗುತ್ತೇನೆ. ಪ್ರಾರ್ಥನೆಗಳ ಮೂಲಕ ನನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಸಕಾರಾತ್ಮಕಗೆ ಮೂಡುವಂತೆ ಮಾಡುತ್ತೇನೆ” ಎಂದು ಮಾಡಿರುವ ಪೋಸ್ಟ್‌ ವೈರಲ್‌ ಆಗಿತ್ತು. ರಾಗಿಣಿ ಖನ್ನಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿ, ಪೋಸ್ಟ್‌ ವೈರಲ್‌ ಆದ ಬಳಿಕ ರಾಗಿಣಿ ಖನ್ನಾ ಅವರು ಕ್ಷಮೆಯಾಚಿಸಿದ್ದಾರೆ. ನಾನೀಗ ಖಟ್ಟರ್‌ ಹಿಂದು ಎಂದು ಅವರು ಹೇಳಿದ್ದಾರೆ. ಈಗ ಜನರು ರಾಗಿಣಿ ಖನ್ನಾ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ. ನಟ ಗೋವಿಂದ ಅವರ ಸೋದರ ಸೊಸೆಯಾಗಿರುವ ರಾಗಿಣಿ ಖನ್ನಾ ಅವರು ಗುರುಗಾಂವ್‌, ಡಬಲ್‌ ದಿ ತ್ರಿಬಲ್‌, ಘೂಮಕೇತು, ಪೋಷಂ ಪಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Continue Reading
Advertisement
Lok Sabha Election
ಪ್ರಮುಖ ಸುದ್ದಿ1 min ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ4 mins ago

Tsering Namgyal: ಸಂಸತ್ತಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ್ದ ತ್ಸೆರಿಂಗ್‌ ಈಗ ಅದೇ ಪಕ್ಷದ ಲಡಾಕ್‌ ಅಭ್ಯರ್ಥಿ!

IPL 2024
ಪ್ರಮುಖ ಸುದ್ದಿ12 mins ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ34 mins ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ35 mins ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ46 mins ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ1 hour ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ1 hour ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ1 hour ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ2 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ5 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ19 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌