Mars Transit 2023 In Leo On 01 July 2023 Effect On Zodiac SignsMars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ! - Vistara News

ಪ್ರಮುಖ ಸುದ್ದಿ

Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

ಮಂಗಳ ಗ್ರಹವನ್ನು ಸೌರ ಮಂಡಲದ ಸೇನಾಧಿಪತಿ ಎಂದು ಕರೆಯುತ್ತಾರೆ. ಈ ಗ್ರಹವು ಜುಲೈ 1 ರಂದು ಸಿಂಹ ರಾಶಿಗೆ ಪ್ರವೇಶಿಸಲಿದೆ (Mars Transit 2023). ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನು ನೋಡೋಣ.

VISTARANEWS.COM


on

Mangal Gochar 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಲ ಕಾಲಕ್ಕೆ ಗ್ರಹಗಳು ಒಂದು ಮನೆಯಿಂದ ಮತ್ತೊಂದು ಮನೆಗೆ ಸಂಚಾರ ನಡೆಸುತ್ತಲೇ ಇರುತ್ತವೆ. ಇದರಿಂದಾಗಿಯೇ ಪ್ರತಿಯೊಬ್ಬರ ಗ್ರಹಗತಿ ಬದಲಾಗುತ್ತಿರುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ರೀತಿಯ ಗ್ರಹಗಳ ಸಂಚಾರಕ್ಕೆ ವಿಶೇಷ ಮಹತ್ವವನ್ನು ನೀಡಲಾಗುತ್ತದೆ. ಈ ಗ್ರಹಗಳ ಸಂಚಾರ (Mars Transit 2023) ಪ್ರತಿಯೊಂದು ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮ ಬೀರುತ್ತವೆ ಎಂಬುದನ್ನು ನೋಡಲಾಗುತ್ತದೆ.

ಮಂಗಳ ಗ್ರಹವನ್ನು ಸೌರ ಮಂಡಲದ ಸೇನಾಧಿಪತಿ ಎಂದು ಕರೆಯುತ್ತಾರೆ. ಸಾಹಸ, ಉತ್ಸಾಹ, ಪರಿಶ್ರಮ ಮತ್ತು ಪರಾಕ್ರಮ ಕಾರಕ ಗ್ರಹವಾಗಿರುವ ಮಂಗಳ ಗ್ರಹವು ಇದೇ ಜುಲೈ 01 ರಂದು ಸಿಂಹ ರಾಶಿಗೆ ಪ್ರವೇಶಿಸಲಿದೆ. ಆಗಸ್ಟ್‌ 18ರ ವರೆಗೆ ಈ ರಾಶಿಯಲಿದ್ದು, ಮುಂದೆ ಕನ್ಯಾ ರಾಶಿಗೆ ಪ್ರವೇಶಿಸಲಿದೆ. ಮಂಗಳನ ಈ ಸಂಚಾರದಿಂದ ಕೆಲವು ರಾಶಿಗಳ ಮೇಲೆ ಶುಭ ಪ್ರಭಾವ ಉಂಟಾಗಲಿದೆ. ಆ ರಾಶಿಗಳು ಯಾವವು ಎಂಬುದನ್ನು ತಿಳಿಯೋಣ. ನಿಮ್ಮ ರಾಶಿಯ ಮೇಲೆ ಈ ಮಂಗಳನ ಸಂಚಾರ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನೂ ನೋಡೋಣ.

ಮೇಷ: ವಿದ್ಯಾರ್ಥಿಗಳಿಗೆ ಉತ್ತಮವಾದ ಕಾಲ

Weekly Horoscope

ಮೇಷ ರಾಶಿಯವರಿಗೆ, ಮಂಗಳವು ಲಗ್ನ ಮತ್ತು ಎಂಟನೇ ಮನೆಯ ಅಧಿಪತಿ ಮತ್ತು ಮಂಗಳ ನಿಮ್ಮ ಐದನೇ ಮನೆಯಲ್ಲಿ ಸಂಚಾರ ನಡೆಸುತ್ತಿದ್ದಾನೆ. ಈ ಸಂಚಾರದಿಂದಾಗಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಾರೆ. ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ಅದರಲ್ಲಿ ಆಯ್ಕೆಯಾಗಬಹುದು. ವ್ಯಾಪಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವವರು ಉತ್ತಮ ಲಾಭ ಪಡೆಯುತ್ತಾರೆ. ನೀವು ವಿದೇಶಕ್ಕೆ ಹೋಗಬೇಕೆಂದು ಯೋಚಿಸುತ್ತಿದ್ದರೆ, ಈಗ ನಿಮಗೆ ಒಳ್ಳೆಯ ಸಮಯ. ಆಮದು ಮತ್ತು ರಫ್ತಿಗೆ ಸಂಬಂಧಿಸಿದ ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತಾರೆ.

ವೃಷಭ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Weekly Horoscope

ವೃಷಭ ರಾಶಿಯವರಿಗೆ ಮಂಗಳ ಹನ್ನೆರಡನೇ ಮತ್ತು ಏಳನೇ ಮನೆಯ ಅಧಿಪತಿಯಾಗಿದ್ದಾನೆ. ನಿಮ್ಮ ನಾಲ್ಕನೇ ಮನೆಯಲ್ಲಿ ಈ ಸಂಚಾರ ನಡೆಯುತ್ತಿದೆ. ಈ ಸಂಚಾರ ನಿಮ್ಮ ಮೇಲೆ ಅನುಕೂಲಕರ ಪರಿಣಾಮ ಬೀರುವುದಿಲ್ಲ. ಈ ಸಂಚಾರದಿಂದಾಗಿ, ನಿಮಗೆ ಸ್ವಲ್ಪ ಮಾನಸಿಕ ಒತ್ತಡ ಉಂಟಾಗಲಿದೆ. ಈ ಸಮಯದಲ್ಲಿ, ಆಸ್ತಿ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಡೆಸುವ ವ್ಯವಹಾರದಲ್ಲಿ ಹಣದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳು ನಿಮ್ಮ ವಿರುದ್ಧ ಸ್ವಲ್ಪ ಪಿತೂರಿ ಮಾಡಬಹುದು. ವೈವಾಹಿಕ ಜೀವನದಲ್ಲೂ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಬೇಡಿ. ನೀವು ಈಗ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.

ಮಿಥುನ: ನಿಮಗಿದು ಅದೃಷ್ಟದ ಸಮಯ

Weekly Horoscope

ಮಿಥುನ ರಾಶಿಯವರಿಗೆ ಹನ್ನೊಂದು ಮತ್ತು ಆರನೇ ಮನೆಯ ಅಧಿಪತಿ ಮಂಗಳ. ಜುಲೈ 1 ರಿಂದ, ನಿಮ್ಮ ಮೂರನೇ ಮನೆಯಲ್ಲಿ ಮಂಗಳನ ಸಂಚಾರವಿದೆ. ಇದು ಧೈರ್ಯ ಮತ್ತು ಶಕ್ತಿಯ ಮನೆಯಾಗಿದೆ. ಈ ಮಂಗಳ ಸಂಚಾರವು ಮಿಥುನ ರಾಶಿಯವರಲ್ಲಿ ಧೈರ್ಯ ಮತ್ತು ಶೌರ್ಯವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ, ರಿಯಲ್ ಎಸ್ಟೇಟ್ ಮತ್ತು ಆಸ್ತಿಗೆ ಸಂಬಂಧಿಸಿದ ವ್ಯವಹಾರ ನಡೆಸುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ನಿಮ್ಮ ಶತ್ರುಗಳು ನಿಮ್ಮ ವಿರುದ್ಧ ಏನೂ ಮಾಡಲಾರರು. ಎಲ್ಲ ಶತ್ರುಗಳನ್ನು ಹಿಮ್ಮೆಟ್ಟಿಸಲು ನಿಮಗೆ ಸಾಧ್ಯವಾಗುತ್ತದೆ. ಅದೃಷ್ಟದ ಈ ಸಮಯದಲ್ಲಿ ನಿಮ್ಮ ಕೈ ಹಿಡಿಯುತ್ತದೆ. ನಿಮ್ಮ ತಂದೆಯ ಸಹಾಯದಿಂದ ಯಾವುದೇ ಅಪೂರ್ಣ ಕೆಲಸವನ್ನು ನೀವು ಪೂರ್ಣಗೊಳಿಸಬಹುದು. ಸರ್ಕಾರಿ ನೌಕರರು ಮೇಲಧಿಕಾರಿಗಳ ಬೆಂಬಲ ಪಡೆಯುತ್ತಾರೆ. ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ನೀವು ಬಡ್ತಿ ಕೂಡ ಪಡೆಯಬಹುದು.

ಕಟಕ: ವಾಹನ ಚಲಾಯಿಸುವಾಗ ಎಚ್ಚರಿಕೆ ಇರಲಿ

Weekly Horoscope

ಕಟಕ ರಾಶಿಯವರಿಗೆ ಮಂಗಳ ಹತ್ತನೇ ಮತ್ತು ಐದನೇ ಮನೆಯ ಅಧಿಪತಿಯಾಗಿದ್ದಾನೆ. ನಿಮ್ಮ ಎರಡನೇ ಮನೆಯ ಮೂಲಕ ಅಂದರೆ ಸಂಪತ್ತಿನ ಮನೆಯ ಮೂಲಕ ಈ ಸಂಚಾರ ನಡೆಸುತ್ತಾನೆ. ಈ ಸಂಚಾರದಿಂದ, ನಿಮ್ಮ ಪೂರ್ವಜರ ವ್ಯವಹಾರದಿಂದ ನೀವು ಲಾಭ ಪಡೆಯಬಹುದು. ನಿಮ್ಮ ತಂದೆಯ ಕೆಲಸವನ್ನು ನೀವು ನೋಡಿಕೊಳ್ಳುತ್ತಿದ್ದರೆ, ವ್ಯಾಪಾರ ಬೆಳವಣಿಗೆಯ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತವೆ. ಈ ಸಮಯದಲ್ಲಿ ನೀವು ಯಾವುದೇ ನ್ಯಾಯಾಲಯದ ಪ್ರಕರಣದಲ್ಲಿ ಭಾಗಿಯಾಗಬೇಡಿ ಮತ್ತು ನೀವು ಮಾತನಾಡುವಾಗ, ಭರವಸೆ ನೀಡುವಾಗ ಸಂಯಮದಿಂದಿರಿ. ಕಟು ಮಾತು ಬೇಡ. ನಿಮ್ಮ ಪ್ರೀತಿಯ ಸಂಬಂಧದಲ್ಲಿ ಸ್ವಲ್ಪ ಏರುಪೇರಾಗಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು ತಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಬೇಕು. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಗಾಯವಾಗುವ ಸಂಭವವಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ನಿಮ್ಮ ತಂದೆಯ ಬೆಂಬಲದೊರೆಯುತ್ತದೆ. ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆಗಳಿವೆ.

ಸಿಂಹ: ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ!

Weekly Horoscope

ಸಿಂಹ ರಾಶಿಯವರಿಗೆ, ಮಂಗಳವು ಅದೃಷ್ಟದ ಮನೆ ಮತ್ತು ನಾಲ್ಕನೇ ಮನೆಯ ಅಧಿಪತಿ, ನಿಮ್ಮ ಲಗ್ನದಲ್ಲಿ ಮಾತ್ರ ಸಂಚಾರವಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳನು ​ ನಾಲ್ಕನೇ, ಏಳನೇ ಮತ್ತು ಎಂಟನೇ ಮನೆಯ ಮೇಲೆ ದೃಷ್ಟಿ ಬೀರುತ್ತಾನೆ. ಮಂಗಳ ಗ್ರಹದ ಸಂಚಾರದಿಂದಾಗಿ ನಿಮ್ಮ ವ್ಯಕ್ತಿತ್ವದಲ್ಲಿ ವಿಭಿನ್ನ ರೀತಿಯ ಹೊಳಪು ಪಡೆಯುತ್ತದೆ ಮತ್ತು ನೀವು ಪೂರ್ಣ ಲಾಭವನ್ನು ಅನುಭವಿಸುವಿರಿ. ನಿಮ್ಮ ಗುರಿಗಳನ್ನು ಸಾಧಿಸಲು ಇದು ಸರಿಯಾದ ಸಮಯ. ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ. ಮಂಗಳ ಸಂಚಾರದ ಪ್ರಭಾವದಿಂದ, ನೀವು ಆಸ್ತಿಯನ್ನು ಖರೀದಿಸಬಹುದು. ಈ ಸಮಯದಲ್ಲಿ ನೀವು ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ವೈವಾಹಿಕ ಜೀವನದಲ್ಲಿ ಮಂಗಳ ಗ್ರಹದ ಈ ಸಂಕ್ರಮಣದಿಂದಾಗಿ, ಸ್ವಲ್ಪ ಉದ್ವೇಗದ ಪರಿಸ್ಥಿತಿ ನಿರ್ಮಾಣವಾಗಬಹುದು. ಆದರೂ ಸಂಬಂಧದಲ್ಲಿ ಬಿರುಕೇನೂ ಮೂಡದು. ಆದರೆ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವನ್ನು ಮುಂದುವರಿಸಬೇಡಿ. ನಿಮ್ಮ ಸ್ನೇಹಿತರನ್ನು ಹೆಚ್ಚು ನಂಬಬೇಡಿ. ಯಾರಿಗೂ ಸಾಲ ಕೊಡಬೇಡಿ ಅಥವಾ ಯಾರಿಂದಲೂ ಹಣವನ್ನು ತೆಗೆದುಕೊಳ್ಳಬೇಡಿ. ಕೆಲಸವನ್ನು ಬದಲಾಯಿಸಲು ನೀವು ಉದ್ದೇಶಿಸಿದ್ದರೆ ಸಮಯವು ನಿಮಗೆ ಅನುಕೂಲಕರವಾಗಿದೆ.

ಕನ್ಯಾ: ಆರ್ಥಿಕವಾಗಿ ನಷ್ಟವಾಗಬಹುದು, ಎಚ್ಚರಿಕೆ ಇರಲಿ

Weekly Horoscope

ಕನ್ಯಾ ರಾಶಿಯವರಿಗೆ ಮಂಗಳ ಮೂರನೇ ಮತ್ತು ಎಂಟನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಹನ್ನೆರಡನೇ ಮನೆಯಲ್ಲಿ ಅಂದರೆ ಖರ್ಚಿನ ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ಮೂರನೇ, ಆರನೇ ಮತ್ತು ಏಳನೇ ಮನೆಯ ಮೇಲೆ ದೃಷ್ಟಿ ನೆಟ್ಟಿದ್ದಾನೆ. ಇದರಿಂದಾಗಿ ನೀವು ಅನಾವಶ್ಯಕವಾಗಿ ಪ್ರಯಾಣಿಸಬೇಕಾಗಿ ಬರಬಹುದು ಮತ್ತು ಈ ಸಮಯದಲ್ಲಿ ನೀವು ಆರ್ಥಿಕವಾಗಿ ಹಿನ್ನಡೆ ಅನುಭವಿಸಬಹುದು. ಕೆಲಸದಲ್ಲಿ ಸ್ಥಳದಲ್ಲಿ ನಿರೀಕ್ಷಿಸಿದ ಬಡ್ತಿಯನ್ನು ಪಡೆಯಲಾಗುವುದಿಲ್ಲ. ಇದರಿಂದಾಗಿ ನಿಮ್ಮ ಮನಸ್ಸಿಗೆ ಸ್ವಲ್ಪ ಬೇಸರವಾಗಬಹುದು. ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ಸಮಯವು ಅನುಕೂಲಕರವಾಗಿಲ್ಲ. ಈಗ ನೀವು ಉತ್ಸಾಹ ತೋರಿದರೆ ಭವಿಷ್ಯದಲ್ಲಿ ಸಮಸ್ಯೆಗಳಾಗಬಹುದು. ಈ ಸಮಯದಲ್ಲಿ ಒಡಹುಟ್ಟಿದವರೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ಹೆಂಡತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ.

ತುಲಾ: ಪಾಲುದಾರಿಕೆ ವ್ಯವಹಾರಕ್ಕೆ ಸೂಕ್ತ ಸಮಯ

Weekly Horoscope

ತುಲಾ ರಾಶಿಯ ಜನರಿಗೆ, ಮಂಗಳವು ಎರಡನೇ ಮತ್ತು ಏಳನೇ ಮನೆಯ ಅಧಿಪತಿಯಾಗಿದ್ದಾನೆ. ಈ ಸಂಚಾರವು ಹನ್ನೊಂದನೇ ಮನೆಯಲ್ಲಿ ಅಂದರೆ ಲಾಭಸ್ಥಾನದಲ್ಲಿ ನಡೆಯುತ್ತದೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ಎರಡನೇ, ಐದನೇ ಮತ್ತು ಆರನೇ ಮನೆಯ ಮೇಲೆ ದೃಷ್ಟಿ ಬೀರುತ್ತಾನೆ. ಮಂಗಳ ಗ್ರಹದ ಈ ಸಂಚಾರದಿಂದಾಗಿ ನಿಮ್ಮ ಯಾವುದೇ ಪಾಲುದಾರಿಕೆ ಒಪ್ಪಂದವು ಈ ಸಮಯದಲ್ಲಿ ಪ್ರಗತಿ ಹೊಂದಬಹುದು. ನೀವು ಪಾಲುದಾರಿಕೆಯಲ್ಲಿ ಕೆಲಸವನ್ನು ಪ್ರಾರಂಭಿಸಲು ಬಯಸಿದ್ದರೆ ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಜನರು ಉತ್ತಮ ಲಾಭ ಪಡೆಯುತ್ತಾರೆ. ನಿಮ್ಮ ಶತ್ರುಗಳು ಈ ಸಮಯದಲ್ಲಿ ಪರಿಣಾಮಕಾರಿಯಾಗಿರುವುದಿಲ್ಲವಾದರೂ, ಯಾವುದೇ ರೀತಿಯ ನ್ಯಾಯಾಲಯದ ವಿವಾದದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ. ಉದ್ಯೋಗಸ್ಥರು ಈ ಸಮಯದಲ್ಲಿ ಉತ್ತಮ ಏಳಿಗೆಯನ್ನು ಹೊಂದುತ್ತಾರೆ. ಸರ್ಕಾರಿ ಕೆಲಸ ಮಾಡುವವರಿಗೆ ಉನ್ನತ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

ವೃಶ್ಚಿಕ: ಪ್ರೇಮ ಜೀವನವನ್ನು ಬಲಪಡಿಸುವ ಸಮಯ

Weekly Horoscope

ವೃಶ್ಚಿಕ ರಾಶಿಯವರಿಗೆ ಮಂಗಳನು ​​ಲಗ್ನದ ಅಧಿಪತಿ ಮತ್ತು ಆರನೇ ಮನೆಯ ಅಧಿಪತಿ. ಮಂಗಳನ ಈ ಸಂಕ್ರಮಣವು ವೃಶ್ಚಿಕ ರಾಶಿಯವರ ಕ್ರಿಯೆಯ ಮನೆಯಲ್ಲಿ ನಡೆಯುತ್ತಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳನ ದೃಷ್ಟಿ ಲಗ್ನ, ನಾಲ್ಕನೇ ಮತ್ತು ಐದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ. ಈ ಸಂಚಾರವು ವೃಶ್ಚಿಕ ರಾಶಿಯವರಿಗೆ ಯಶಸ್ಸನ್ನು ತಂದುಕೊಡಲಿದೆ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ ಗೌರವ ಪಡೆಯತ್ತೀರಿ. ನಿಮ್ಮ ಮೇಲಧಿಕಾರಿಗಳು ನಿಮ್ಮನ್ನು ಪ್ರಶಂಸಿಸುವರು. ನಿಮ್ಮ ಗೌರವವೂ ಹೆಚ್ಚಾಗುತ್ತದೆ. ನಿಮ್ಮ ಬುದ್ಧಿವಂತಿಕೆ ಮತ್ತು ಕಠಿಣ ಪರಿಶ್ರಮದಿಂದ ಕಷ್ಟವಾದದ್ದನ್ನೂ ಸಾಧಿಸಿ, ಗುರಿ ಮುಟ್ಟುವಿರಿ. ಈ ಸಂಕ್ರಮಣದಿಂದಾಗಿ ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳು ನಡೆಯುತ್ತವೆ. ನಿಮ್ಮ ಕುಟುಂಬದ ಸದಸ್ಯರಿಗೆ ನೀವು ಅಮೂಲ್ಯವಾದ ಉಡುಗೊರೆಯನ್ನು ಸಹ ನೀಡಬಹುದು. ಮಂಗಳನ ಈ ಸಂಚಾರವು ನಿಮ್ಮ ಪ್ರೇಮ ಜೀವನಕ್ಕೂ ಉತ್ತಮವಾಗಿದೆ. ನೀವು ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುತ್ತೀರಿ.

ಧನಸ್ಸು: ಆಮದು-ರಫ್ತು ವ್ಯಾಪಾರಿಗಳಿಗೆ ಲಾಭ ಹೆಚ್ಚಲಿದೆ

Weekly Horoscope

ಧನು ರಾಶಿಯವರಿಗೆ, ಮಂಗಳ ಐದನೇ ಮತ್ತು ಹನ್ನೆರಡನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಅದೃಷ್ಟದ ಮನೆಯಲ್ಲಿ ಸಂಚಾರ ನಡೆಯುತ್ತಿದೆ. ಮಂಗಳನ ಈ ಸಂಚಾರದಿಂದಾಗಿ ಧನು ರಾಶಿಯವರಲ್ಲಿ ಧಾರ್ಮಿಕತೆ ಹೆಚ್ಚುತ್ತದೆ ಮತ್ತು ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಬಹುದು. ಕುಲ ಗುರುಗಳ, ಪೀಠಾಧಿಪತಿಗಳ ಬೆಂಬಲ, ಆಶೀರ್ವಾದ ಪಡೆದುಕೊಳ್ಳುತ್ತೀರಿ. ವಿದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳು, ಬಿಸ್ನೆಸ್‌ ಮಾಡುವವರು ಲಾಭವನ್ನು ಪಡೆಯುತ್ತಾರೆ. ಆಮದು ಮತ್ತು ರಫ್ತಿಗೆ ಸಂಬಂಧಿಸಿದ ವ್ಯಾಪಾರಿಗಳು ಈ ಸಮಯದಲ್ಲಿ ಹೆಚ್ಚಿನ ಲಾಭ ಪಡೆಯುತ್ತಾರೆ. ನಿಮ್ಮ ವಿದ್ಯಾಭ್ಯಾಸಕ್ಕಾಗಿ ನೀವು ವಿದೇಶಕ್ಕೆ ಹೋಗಲು ಬಯಸಿದರೆ, ಈ ಸಮಯವು ಅನುಕೂಲಕರವಾಗಿದೆ. ನೀವು ನಿಮ್ಮ ಸಹೋದರರ ಬೆಂಬಲವನ್ನು ಪಡೆಯುತ್ತೀರಿ ಮತ್ತು ಯಾವುದೇ ಪೂರ್ವಜರ ಆಸ್ತಿ ವಿವಾದವಿದ್ದರೆ ಅದನ್ನು ಸಹ ಬಗೆಹರಿಸಿಕೊಳ್ಳುತ್ತೀರಿ. ನಿಮ್ಮ ಕುಟುಂಬ ಸದಸ್ಯರಿಗಾಗಿ ನೀವು ಸಮಯವನ್ನು ನೀಡುತ್ತೀರಿ. ನಿಮಗೆ ವಾಹನ ಅಥವಾ ಕಟ್ಟಡವನ್ನು ಖರೀದಿಸುವ ಯೋಗವಿದೆ. ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ನಡೆಸುತ್ತೀರಿ.

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಮಕರ: ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರಲಿ

Weekly Horoscope

ಮಕರ ರಾಶಿಯವರಿಗೆ ಮಂಗಳವು ನಾಲ್ಕನೇ ಮತ್ತು ಹನ್ನೊಂದನೇ ಮನೆಯ ಅಧಿಪತಿಯಾಗಿದ್ದು, ಈಗ ನಿಮ್ಮ ಎಂಟನೇ ಮನೆಯಲ್ಲಿ ಅಂದರೆ ಹಠಾತ್ ಘಟನೆಗಳು ಸಂಭವಿಸಲು ಕಾರಣವಾಗುವ ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಇಲ್ಲಿಂದ ನಿಮ್ಮ ಹನ್ನೊಂದನೇ ಮನೆ, ಹಣದ ಮನೆ ಮತ್ತು ಮೂರನೇ ಮನೆಯ ಮೇಲೆ ದೃಷ್ಟಿ ನೆಟ್ಟಿದ್ದಾನೆ. ಈ ಮನೆಯಲ್ಲಿ ಮಂಗಳ ಸಂಚಾರದಿಂದ ನಿಮಗೆ ತೊಂದರೆಯಾಗಬಹುದು. ಈ ಸಮಯದಲ್ಲಿ ನಿಮ್ಮ ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ವ್ಯಪಾರ ಮಾಡುವವರಿಗೆ ಈ ಸಮಯ ಅನುಕೂಲವಾಗಿಲ್ಲ. ಹಣದ ಕೊರತೆಯನ್ನು ಎದುರಿಸಬೇಕಾಗಿಬರಬಹುದು. ನಿಮ್ಮ ಕೌಟುಂಬಿಕ ಜೀವನ ಕೂಡ ಸಮಸ್ಯೆಗಳಿಂದ ಕೂಡಿರುತ್ತದೆ. ಮಾತನಾಡುವಾಗ ಸಂಯಮ ಅಗತ್ಯ. ನಿಮ್ಮ ಕಟುವಾದ ಮಾತುಗಳಿಂದಾಗಿ ಜಗಳವಾಗಬಹುದು. ಈ ಸಮಯದಲ್ಲಿ, ನಿಮ್ಮ ಧೈರ್ಯ ಮತ್ತು ಶೌರ್ಯ ಸ್ವಲ್ಪ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ನೀವು ಹಣಕಾಸಿನ ವ್ಯವಹಾರಗಳಲ್ಲಿಯೂ ಜಾಗರೂಕರಾಗಿರಬೇಕು.

ಕುಂಭ: ನಿಮಗೆ ರಾಜಯೋಗದ ಕಾಲವಿದು!

Weekly Horoscope

ಕುಂಭ ರಾಶಿಯವರಿಗೆ ಮಂಗಳ ತೃತೀಯ ಮತ್ತು ಹತ್ತನೇ ಮನೆಯ ಅಧಿಪತಿಯಾಗಿರುವುದರಿಂದ ರಾಜಯೋಗವಿದೆ. ನಿಮ್ಮ ಏಳನೇ ಮನೆಯಲ್ಲಿ ಅಂದರೆ ಪಾಲುದಾರಿಕೆಯ ಭಾವದಲ್ಲಿ ಮಂಗಳನ ಸಂಕ್ರಮಣ ನಡೆಯಲಿದೆ. ಈ ಮನೆಯಲ್ಲಿ ಕುಳಿತಿರುವ ಮಂಗಳ ನಿಮ್ಮ ದಶಮ, ಲಗ್ನ ಮತ್ತು ಸಂಪತ್ತಿನ ಸ್ಥಳವನ್ನು ನೋಡುತ್ತಿದ್ದಾನೆ. ಹೀಗಾಗಿ ವ್ಯಾಪಾರಿ ವರ್ಗದವರಿಗೆ ಈ ಮಂಗಳ ಸಂಚಾರವು ತುಂಬಾ ಒಳಿತನ್ನು ಮಾಡಲಿದೆ. ಈ ಸಮಯದಲ್ಲಿ ನೀವು ಹೊಸ ಬಂಡವಾಳ ಹೂಡಿಕೆ ಮಾಡುತ್ತೀರಿ ಮಾತ್ರವಲ್ಲದೆ ನಿಮ್ಮ ವ್ಯವಹಾರವೂ ವಿಸ್ತರಿಸುತ್ತದೆ. ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸಲು ಉದ್ದೇಶಿಸಿದ್ದರೆ ಇದು ಉತ್ತಮ ಸಮಯ. ಈ ಸಮಯದಲ್ಲಿ ನಿಮ್ಮ ಕುಟುಂಬದಲ್ಲಿ ನಿಮಗೆ ಕೆಲವು ದೊಡ್ಡ ಜವಾಬ್ದಾರಿಗಳನ್ನು ನೀಡಬಹುದು. ಆದಾಗ್ಯೂ, ನೀವು ನಿಮ್ಮ ಬಾಳಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕೋರ್ಟ್ ಕೇಸ್ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ಸರ್ಕಾರಿ ಊದ್ಯೋಗಿಗಳು ಈ ಸಮಯದಲ್ಲಿ ಬಡ್ತಿ ಪಡೆಯಬಹುದು. ವಿದ್ಯಾರ್ಥಿ ವರ್ಗಕ್ಕೂ ಈ ಸಮಯ ತುಂಬಾ ಒಳ್ಳೆಯದು. ನೀವು ಸಂಶೋಧನೆಯ ವಿಷಯಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ಈ ಸಮಯವು ನಿಮಗೆ ನಿಜವಾಗಿಯೂ ಅನುಕೂಲಕರವಾಗಿದೆ.

ಇದನ್ನೂ ಓದಿ : Mithuna Sankranti 2023 : ಸೂರ್ಯನ ಈ ಸಂಚಾರ‌, ಕೆಲವರ ಬದುಕಲ್ಲಿ ಬಂಗಾರ!

ಮೀನ: ಇದು ಶುಭ ಫಲಗಳನ್ನು ಪಡೆಯುವ ಸಮಯ

Weekly Horoscope

ಮೀನ ರಾಶಿಯವರಿಗೆ ಮಂಗಳ ಎರಡನೇ ಮತ್ತು ಅದೃಷ್ಟದ ಮನೆಯ ಅಧಿಪತಿ. ನಿಮ್ಮ ಆರನೇ ಮನೆಯಲ್ಲಿ ಅಂದರೆ ಶತ್ರು ಮನೆಯಲ್ಲಿ ಸಂಚಾರ ನಡೆಸುತ್ತಾನೆ. ಹೀಗಾಗಿ ಈ ಸಂಚಾರವು ತುಂಬಾ ಶುಭ ಫಲಗಳನ್ನು ನೀಡುತ್ತದೆ. ಮಂಗಳ ಗ್ರಹದ ಈ ಸಂಚಾರದಿಂದ, ನಿಮ್ಮ ಕೆಲಸದಲ್ಲಿ ನೀವು ಬಯಸಿದ ಬಡ್ತಿಯನ್ನು ಪಡೆಯಬಹುದು. ನಿಮ್ಮ ಶತ್ರುಗಳು ಸಂಪೂರ್ಣವಾಗಿ ನಾಶವಾಗಲಿದ್ದಾರೆ. ಮಂಗಳ ಗ್ರಹವು ಅದೃಷ್ಟದ ಸ್ಥಾನಕ್ಕೆ ಹೋಗುವುದರಿಂದ, ಈ ಸಮಯದಲ್ಲಿ ನೀವು ಅದೃಷ್ಟವನ್ನು ಪಡೆಯುತ್ತೀರಿ.
ಈ ಸಮಯದಲ್ಲಿ ನೀವು ವಿದೇಶಕ್ಕೆ ಹೋಗುವ ಅವಕಾಶವನ್ನು ಸಹ ಪಡೆಯಬಹುದು. ನೀವು ಕೆಲವು ಕೆಲಸದ ಸಂಬಂಧ ಪ್ರಯಾಣಿಸಬೇಕಾಗಿ ಬರಬಹುದು. ಈ ಪ್ರವಾಸಗಳು ಭವಿಷ್ಯದಲ್ಲಿ ನಿಮಗೆ ಪ್ರಯೋಜನ ನೀಡುತ್ತವೆ. ಲಗ್ನದ ಮೇಲೆ ಮಂಗಳನ ದೃಷ್ಟಿಯೂ ನಡೆಯುತ್ತಿದೆ, ಇದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನಿಮ್ಮ ಧೈರ್ಯ ಮತ್ತು ಶೌರ್ಯವು ಹೆಚ್ಚಾಗುತ್ತದೆ. ಸಮಾಜದಲ್ಲಿ ನೀವು ಗೌರವವನ್ನು ಪಡೆಯುತ್ತೀರಿ. ನಿಮ್ಮಲ್ಲಿನ ನಾಯಕತ್ವದ ಗುಣ ವೃದ್ಧಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

T20 World Cup 2024: ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ (ಜೂನ್‌ 14) ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವೆ ಮಹತ್ವದ ಪಂದ್ಯ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಹಾಗಾಗಿ, ಅಮೆರಿಕ ತಂಡವು 5 ಅಂಕಗಳೊಂದಿಗೆ ಸೂಪರ್‌ 8ಕ್ಕೆ ಪ್ರವೇಶ ಪಡೆಯಿತು. ಭಾನುವಾರ ಪಾಕಿಸ್ತಾನವು ಐರ್ಲೆಂಡ್‌ ವಿರುದ್ಧ ಆಡಲಿದ್ದು, ಗೆದ್ದರೂ 4 ಅಂಕಗಳೊಂದಿಗೆ ವಿಮಾನ ಹತ್ತಬೇಕಿದೆ.

VISTARANEWS.COM


on

T20 World Cup 2024
Koo

ವಾಷಿಂಗ್ಟನ್‌: ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು (Pakistan Cricket Team) ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ (T20 World Cup 2024) ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂ (Babar Azam) ನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ (ಜೂನ್‌ 14) ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವೆ ಮಹತ್ವದ ಪಂದ್ಯ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ಎರಡೂ ತಂಡಗಳು ತಲಾ ಒಂದು ಪಾಯಿಂಟ್‌ ಸಂಪಾದಿಸಿದವು. ಇದರೊಂದಿಗೆ ಒಟ್ಟು 5 ಅಂಕ ಗಳಿಸಿದ ಅಮೆರಿಕ ತಂಡವು ಸೂಪರ್‌ 8ಕ್ಕೆ ಲಗ್ಗೆ ಇಟ್ಟಿತು. ಮೊದಲ ಬಾರಿಗೆ ಟಿ-20 ವಿಶ್ವಕಪ್‌ನಲ್ಲಿ ಆಡುತ್ತಿರುವ ಅಮೆರಿಕ ತಂಡವು ಮೊದಲ ಪ್ರಯತ್ನದಲ್ಲಿಯೇ ಸೂಪರ್‌ 8 ಪ್ರವೇಶಿಸಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನವು ಸೆಮಿಫೈನಲ್‌ ಕೂಡ ತಲುಪಿರಲಿಲ್ಲ. ಇನ್ನು, 2009ರ ಟಿ-20 ವಿಶ್ವಕಪ್‌ ಚಾಂಪಿಯನ್‌ ಆಗಿರುವ ಪಾಕಿಸ್ತಾನವು 2022ರ ಟಿ-20 ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿ, ರನ್ನರ್‌ ಅಪ್‌ ಆಗಿತ್ತು. ಆದರೆ, ಪ್ರಸಕ್ತ ಟೂರ್ನಿಯಲ್ಲಿ ಗ್ರೂಪ್‌ ಹಂತದಲ್ಲಿಯೇ ಮನೆಯ ದಾರಿ ಹಿಡಿದಿದೆ. 2007ರಿಂದಲೂ ಟಿ-20 ವಿಶ್ವಕಪ್‌ ಟೂರ್ನಿಗಳಲ್ಲಿ ಪಾಕಿಸ್ತಾನವು ಒಮ್ಮೆಯೂ ಗ್ರೂಪ್‌ ಹಂತದಲ್ಲಿಯೇ ಹೊರಬಿದ್ದಿರಲಿಲ್ಲ. ಆದರೆ, ಪ್ರಸಕ್ತ ಟೂರ್ನಿಯಲ್ಲಿ ಹೊರಬೀಳುವ ಮೂಲಕ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗದೆ.

ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡವು ಅಗ್ರಸ್ಥಾನಿಯಾಗಿ ಸೂಪರ್‌ 8ಕ್ಕೆ ಪ್ರವೇಶ ಪಡೆದಿದೆ. ಶನಿವಾರ ಕೆನಡಾ ವಿರುದ್ಧ ಔಪಚಾರಿಕ ಪಂದ್ಯವನ್ನಷ್ಟೇ ಆಡಲಿದೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: T20 World Cup Viral Video: ಪಾಕ್​ ತಂಡದ ವೇಗಿಗೆ ತವರಿನ ಅಭಿಮಾನಿಗಳಿಂದಲೇ ಗೇಲಿ

Continue Reading

ದೇಶ

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆತ, ಕೃತ್ಯ ಬಯಲಾಗುವ ಭಯದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Truck Driver
ಮಲಗಿದ್ದ ಬಾಲಕಿಯನ್ನು ಹೊತ್ತೊಯ್ಯುತ್ತಿರುವ ಕಟುಕ ಡ್ರೈವರ್.
Koo

ಹೈದರಾಬಾದ್:‌ ತೆಲಂಗಾಣದಲ್ಲಿ ಟ್ರಕ್‌ ಚಾಲಕನೊಬ್ಬ 6 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿದ್ದಾನೆ. ತೆಲಂಗಾಣದ (Telangana) ಪೆದ್ದಪಲ್ಲಿ ಜಿಲ್ಲೆಯಲ್ಲಿ ಗುರುವಾರ (ಜೂನ್‌ 13) ರಾತ್ರಿ ಭೀಕರ ಕೃತ್ಯ ನಡೆದಿದೆ. ಕಂದಮ್ಮನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯನ್ನು ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ದುರುಳನನ್ನು ಬಲರಾಮ್‌ ಎಂದು ಗುರುತಿಸಲಾಗಿದೆ. ಈತನು ಉತ್ತರ ಪ್ರದೇಶದವನಾಗಿದ್ದು, ಟ್ರಕ್‌ ಚಾಲಕನಾಗಿ (Truck Driver) ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ಬಾಲಕಿ ಕೂಡ ನಿದ್ದೆಯಲ್ಲಿದ್ದ ಕಾರಣ ಆಕೆ ಕಿರುಚಾಡಿಲ್ಲ. ಮೆಲ್ಲಗೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತುಕೊಂಡು ಹೋದ ಆತ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

ಮಧ್ಯರಾತ್ರಿ ಬಾಲಕಿಯ ತಾಯಿಗೆ ಎಚ್ಚರವಾಗಿದೆ. ಪಕ್ಕದಲ್ಲಿ ಮಲಗಿದ್ದ ಮಗಳು ಕಾಣಿಸದಿದ್ದಾಗ ಎಲ್ಲ ಕಾರ್ಮಿಕರನ್ನು ಎಬ್ಬಿಸಿದ್ದಾರೆ. ಕೂಡಲೇ ಎಲ್ಲ ಕಾರ್ಮಿಕರು ತಡ ರಾತ್ರಿಯೇ ಬಾಲಕಿಗಾಗಿ ಶೋಧ ನಡೆಸಿದ್ದಾರೆ. ಆಗ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಇನ್ನಷ್ಟು ಕಾರ್ಮಿಕರು ಜತೆಗೂಡಿ ರಾತ್ರಿ ದುಷ್ಟನ ಶೋಧಕ್ಕಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆಗ ಟ್ರಕ್‌ ಚಾಲಕನು ಕಾರ್ಮಿಕರ ಕೈಗೆ ಸಿಕ್ಕಿದ್ದಾನೆ. ಆತನಿಗೆ ಧರ್ಮದೇಟು ಕೊಟ್ಟ ಕಾರ್ಮಿಕರು, ಮನಸೋಇಚ್ಛೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಲರಾಮ್‌ ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಲರಾಮ್‌ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೊಬ್ಬ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು, ಕೊಲೆ ಮಾಡಿದ್ದ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದ. ಬಳಿಕ ಉಸಿರುಗಟ್ಟಿಸಿ ಕೊಂದಿದ್ದ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Congress Guarantee: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಇದನ್ನೂ ಓದಿ | Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು.

ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ನಿರೀಕ್ಷೆಯಂತೆ ಬಂದಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ. 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಇದನ್ನೂ ಓದಿ | Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞರ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

Continue Reading

ದೇಶ

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Arundhati Roy: ಕಾಶ್ಮೀರದ ಕುರಿತು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೈಯದ್‌ ಶಾ ಗೀಲಾನಿ ಹಾಗೂ ಅರುಂಧತಿ ರಾಯ್‌ ಅವರು, “ಭಾರತೀಯ ಸೇನೆಯೇ ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ” ಎಂಬುದಾಗಿ ಹೇಳಿದ್ದರು ಎಂಬ ಆರೋಪವಿದೆ. ಇವರ ಭಾಷಣದ ಸಿ.ಡಿಗಳನ್ನು ಕೂಡ ಕೋರ್ಟ್‌ ಪರಿಗಣಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಅರುಂಧತಿ ರಾಯ್‌ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ.

VISTARANEWS.COM


on

Arundhati Roy
Koo

ನವದೆಹಲಿ: ಜಮ್ಮು-ಕಾಶ್ಮೀರದ ಕುರಿತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಪ್ರಕರಣದಲ್ಲಿ ಖ್ಯಾತ ಲೇಖಕಿ, ಸಾಮಾಜಿಕ ಹೋರಾಟಗಾರ್ತಿಯೂ ಆದ ಅರುಂಧತಿ ರಾಯ್‌ (Arundhati Roy) ಹಾಗೂ ಮಾಜಿ ಪ್ರೊಫೆಸರ್‌ ಶೇಖ್‌ ಶೌಕತ್‌ ಹುಸೇನ್‌ (Sheikh Showkat Hussain) ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧವೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ (V K Saxena) ಅನುಮತಿ ನೀಡಿದ್ದಾರೆ. ಉಗ್ರರನ್ನು ನಿಗ್ರಹಿಸಲು ಜಾರಿಗೆ ತಂದಿರುವ ಕಾಯ್ದೆಯ ಅಡಿಯಲ್ಲಿ ಇಬ್ಬರ ವಿರುದ್ಧ ಇನ್ನು ಕ್ರಮ ತೆಗೆದುಕೊಳ್ಳಲಾಗುತ್ತದೆ.

ಏನಿದು ಪ್ರಕರಣ?

2010ರ ಅಕ್ಟೋಬರ್‌ 21ರಂದು ನವದೆಹಲಿಯ ಎಲ್‌ಟಿಜಿ ಆಡಿಟೋರಿಯಂನಲ್ಲಿ ‘ಆಜಾದಿ-ದಿ ಓನ್ಲಿ ವೇ’ (Azadi- The Only Way) ಎಂಬ ಬ್ಯಾನರ್‌ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅರುಂಧತಿ ರಾಯ್‌ ಹಾಗೂ ಕಾಶ್ಮೀರ ಕೇಂದ್ರೀಯ ವಿವಿಯ ಮಾಜಿ ಪ್ರೊಫೆಸರ್‌ ಶೇಖ್‌ ಶೌಕತ್‌ ಹುಸೇನ್‌ ಅವರು ಕಾಶ್ಮೀರ ಕುರಿತು ಮಾತನಾಡಿದ್ದರು. ಇವರು ಕಾಶ್ಮೀರ ಕುರಿತು ನೀಡಿದ ಹೇಳಿಕೆಗಳನ್ನು ಖಂಡಿಸಿದ ಕಾಶ್ಮೀರದ ಸುಶೀಲ್‌ ಪಂಡಿತ್‌ ಎಂಬ ಸಾಮಾಜಿಕ ಕಾರ್ಯಕರ್ತ 2010ರ ಅಕ್ಟೋಬರ್‌ 28ರಂದು ಎಫ್‌ಐಆರ್‌ ದಾಖಲಿಸಿದ್ದರು.

ಪ್ರತ್ಯೇಕವಾದಿ ಮುಖಂಡ ಸೈಯದ್‌ ಶಾ ಗೀಲಾನಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಸೈಯದ್‌ ಶಾ ಗೀಲಾನಿ ಹಾಗೂ ಅರುಂಧತಿ ರಾಯ್‌ ಅವರು, “ಭಾರತೀಯ ಸೇನೆಯೇ ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ” ಎಂಬುದಾಗಿ ಹೇಳಿದ್ದರು ಎಂಬ ಆರೋಪವಿದೆ. ಕಾರ್ಯಕ್ರಮದಲ್ಲಿ ಇವರೆಲ್ಲ ಮಾತನಾಡಿದ ಸಿ.ಡಿಗಳನ್ನು ಸುಶೀಲ್‌ ಪಂಡಿತ್‌ ಅವರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಅದರಂತೆ, ಹಲವು ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಈಗ ಯುಎಪಿಎ ಅಡಿಯಲ್ಲಿ ದೆಹಲಿ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.

ಏನಿದು ಯುಎಪಿಎ?
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯನ್ನು ಸಂಕ್ಷಿಪ್ತವಾಗಿ ಯುಎಪಿಎ ಎಂದ ಕರೆಯಲಾಗುತ್ತದೆ. ಭಾರತದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದೇ ಈ ಕಾನೂನಿನ ಮುಖ್ಯ ಉದ್ದೇಶ. ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾಯ್ದೆಯು ಸರ್ಕಾರಕ್ಕೆ ನೀಡುತ್ತದೆ. 1967ರ ಈ ಕಾಯ್ದೆಗೆ ಹಲವು ಬಾರಿ ತಿದ್ದುಪಡಿಯಾಗಿದೆ. ತೀರಾ ಇತ್ತೀಚಿನ ತಿದ್ದುಪಡಿ ಎಂದರೆ, 2019ರ ತಿದ್ದುಪಡಿ. ಈ ತಿದ್ದುಪಡಿ ಅನ್ವಯ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಯನ್ನು ಕಾನೂನು ಪ್ರಕ್ರಿಯೆಗೆ ಒಳಪಡಿಸದೇ ಉಗ್ರ ಎಂದು ತೀರ್ಮಾನಿಸಬಹುದಾಗಿದೆ. ಈ ಕಾನೂನನ್ನು ಉಗ್ರ ನಿಗ್ರಹ ಕಾಯಿದೆ ಎಂದೂ ಕರೆಯಲಾಗುತ್ತದೆ.

ಗರಿಷ್ಠ ಶಿಕ್ಷೆ ಏನು?
ಯುಎಪಿಎ ಕಾಯ್ದೆಯಡಿ ಅಪರಾಧಿಗೆ ಗರಿಷ್ಠ ಐದು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಜೀವಾವಧಿ ಶಿಕ್ಷೆ ವಿಧಿಸಬಹುದು. ಗರಿಷ್ಠ ಪ್ರಕರಣದಲ್ಲಿ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ. ಈ ಕಾಯ್ದೆಯಡಿ ಬಂಧಿತರಾದವರಿಗೆ ಜಾಮೀನು ದೊರೆಯುವ ಅವಕಾಶಗಳು ಬಹಳ ಕಡಿಮೆಯಾಗಿರುತ್ತದೆ. ಆಸ್ತಿಯನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ಎನ್ಐಎಗೆ ಈ ಕಾಯ್ದೆ ನೀಡುತ್ತದೆ.

ಇದನ್ನೂ ಓದಿ: Coimbatore Blast | ಯುಎಪಿಎ ಕಾಯ್ದೆಯಡಿ ಕೊಯಮತ್ತೂರು ಸ್ಫೋಟ ತನಿಖೆ, ಯಾಕೆ ಈ ನಿರ್ಧಾರ?

Continue Reading
Advertisement
T20 World Cup 2024
ಕ್ರಿಕೆಟ್2 hours ago

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Toyota Technical Education Programme started at Bareilly Government Polytechnic by TKM
ದೇಶ2 hours ago

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Truck Driver
ದೇಶ3 hours ago

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

Do not split BBMP says Karave State President TA Narayana Gowda
ಕರ್ನಾಟಕ4 hours ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ4 hours ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ4 hours ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ5 hours ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ5 hours ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ5 hours ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ5 hours ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು8 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು9 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ9 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌