Nava Panchama Yoga : ಸೂರ್ಯ ಮಂಗಳ ಯುತಿಯಿಂದ ನವ ಪಂಚಮ ಯೋಗ; ಯಾವೆಲ್ಲಾ ರಾಶಿಗಳಿಗೆ ಶುಭ ಫಲ? - Vistara News

ಭವಿಷ್ಯ

Nava Panchama Yoga : ಸೂರ್ಯ ಮಂಗಳ ಯುತಿಯಿಂದ ನವ ಪಂಚಮ ಯೋಗ; ಯಾವೆಲ್ಲಾ ರಾಶಿಗಳಿಗೆ ಶುಭ ಫಲ?

ಈಗ ನವ ಪಂಚಮ ಯೋಗ ನಡೆಯುತ್ತಿದೆ (Nava Panchama Yoga). ಸೂರ್ಯ ಮತ್ತು ಮಂಗಳ ಗ್ರಹದ ಯುತಿಯಿಂದಾಗಿ ಈ ಯೋಗ ಉಂಟಾಗಿದೆ. ಇದರಿಂದ ಯಾವೆಲ್ಲಾ ರಾಶಿಗಳಿಗೆ ಶುಭ ಫಲಗಳಿವೆ ಎಂಬುದನ್ನು ನೋಡೋಣ.

VISTARANEWS.COM


on

nava pancham yoga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜಾತಕದ ಪ್ರತಿ ಗ್ರಹಗಳ ಸ್ಥಾನ ಮತ್ತು ಸ್ಥಿತಿಯ ಆಧಾರದಲ್ಲಿ ಯೋಗಗಳು ಉಂಟಾಗುತ್ತವೆ. ಯೋಗಗಳಲ್ಲಿ ಹಲವಾರು ಯೋಗಗಳಿದ್ದು, ಇದರಲ್ಲಿ “ನವ ಪಂಚಮ ಯೋಗʼʼವು (Nava Panchama Yoga) ಅತ್ಯಂತ ಉತ್ತಮ ಯೋಗವೆಂದು ಪರಿಗಣಿಸಲಾಗಿದೆ. ಈ ಯೋಗ ಸೃಷ್ಟಿಯಾಗಬೇಕಾದರೆ ನವ ಮತ್ತು ಪಂಚಮ ಸ್ಥಾನದಲ್ಲಿ ಮಿತ್ರ ಗ್ರಹಗಳು ಸ್ಥಿತವಾಗಿರಬೇಕು.

ಒಂದು ಗ್ರಹದಿಂದ ಇನ್ನೊಂದು ಗ್ರಹವು 120 ಡಿಗ್ರಿ ದೂರ ಇರುತ್ತವೆ. ಈ ಎರಡೂ ಗ್ರಹಗಳು ಒಂದೇ ತತ್ವದ ರಾಶಿಯಲ್ಲಿ ಇರುತ್ತವೆ. ಅಂದರೆ ಮೇಷ, ಸಿಂಹ, ಧನು ಗ್ರಹಗಳಲ್ಲಿ ಯಾವುದಾದರೂ ಎರಡು ಗ್ರಹಗಳು ನವಪಂಚಮ ಯೋಗದಲ್ಲಿ ಬರುತ್ತವೆ. ಅದೇ ರೀತಿ ವೃಷಭ, ಕನ್ಯಾ ಮತ್ತು ಮಕರ ಹಾಗೂ ಮಿಥುನ, ತುಲಾ ಮತ್ತು ಕುಂಭ ಅಲ್ಲದೆ ಕರ್ಕ, ವೃಶ್ಚಿಕ ಮತ್ತು ಮೀನ ರಾಶಿಗಳ ತತ್ವದ ಆಧಾರದ ಮೇಲೆ ಈ ಯೋಗವು ಬರುತ್ತವೆ.

ಈ ಬಾರಿ ಫೆಬ್ರವರಿ 13ರ ವರೆಗೆ ಸೂರ್ಯ ಮತ್ತು ಮಂಗಳ ಗ್ರಹಗಳು ಈ ರೀತಿ ಸ್ಥಿತವಾಗಿರುವ ಕಾರಣ ನವ ಪಂಚಮ ಯೋಗ ಉಂಟಾಗಲಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳು ಒಂದೇ ರಾಶಿಯಲ್ಲಿ ಸ್ಥಿತವಾಗಿರುವುದಕ್ಕೆ “ಯುತಿʼʼ ಎಂದು ಕರೆಯುತ್ತಾರೆ. ಯುತಿಯ ಜೊತೆ ಜೊತೆಗೆ ಗ್ರಹಗಳ ಸ್ಥಾನವು ಸಹ ವ್ಯಕ್ತಿಯ ಜೀವನದಲ್ಲಿ ಅತ್ಯಂತ ಪ್ರಬಲವಾದ ಪ್ರಭಾವವನ್ನು ಬೀರುತ್ತವೆ. ಎರಡು ಮಿತ್ರ ಗ್ರಹಗಳು ಒಂದರಿಂದ ಇನ್ನೊಂದಕ್ಕೆ ಜಾತಕದ ಒಂಬತ್ತು ಮತ್ತು ಐದನೇ ಸ್ಥಾನದಲ್ಲಿ ಸ್ಥಿತವಾಗಿದ್ದರೆ ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಕೆಲವು ರಾಶಿಯ ವ್ಯಕ್ತಿಗಳಿಗೆ ವಿಶೇಷ ಲಾಭ ಉಂಟಾಗುತ್ತದೆ.

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಇದೇ ರೀತಿ ಸೂರ್ಯ ಮಂಗಳ ಗ್ರಹವು ತ್ರಿಕೋನ ಭಾವದಲ್ಲಿ ಇರುವುದರಿಂದ ನವ ಪಂಚಮ ಯೋಗ ಉಂಟಾಗುತ್ತದೆ. ಸೂರ್ಯ ಗ್ರಹವು ಮಕರ ರಾಶಿಯಲ್ಲಿ ಸ್ಥಿತವಾಗಿದ್ದರೆ, ಮಂಗಳ ಗ್ರಹವು ವೃಷಭ ರಾಶಿಯಲ್ಲಿ ಸ್ಥಿತವಾಗಿದೆ. ಇದರ ಪರಿಣಾಮವಾಗಿ ಉಂಟಾಗುವ ನವ ಪಂಚಮ ಯೋಗದಿಂದ ಕೆಲವು ರಾಶಿಯ ವ್ಯಕ್ತಿಗಳಿಗೆ ಆರ್ಥಿಕ ಲಾಭ ಉಂಟಾಗಲಿದೆ. ಆ ರಾಶಿಗಳು ಯಾವುವು ನೋಡೋಣ.

Nava Panchama Yoga

ಮೇಷ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವ ಪಂಚಮ ಯೋಗದಿಂದ ಈ ರಾಶಿಯ ವ್ಯಕ್ತಿಗಳಿಗೆ ಹೆಚ್ಚಿನ ಲಾಭ ಉಂಟಾಗುತ್ತದೆ. ಈ ರಾಶಿಯ ವ್ಯಕ್ತಿಗಳ ಜಾತಕದಲ್ಲಿ ಮಂಗಳ ಗ್ರಹವು ದ್ವಿತೀಯ ಸ್ಥಾನದಲ್ಲಿ ಸ್ಥಿತವಾಗಿದೆ ಮತ್ತು ಸೂರ್ಯ ಗ್ರಹವು ನವಮ ಸ್ಥಾನದಲ್ಲಿದೆ. ಈ ಸಂದರ್ಭದಲ್ಲಿ ಮೇಷ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನಲಾಭವಾಗುವ ಸಂಭವವಿದೆ. ಗೌರವಾದರಗಳು ಹೆಚ್ಚಲಿವೆ. ಈ ಸಮಯದಲ್ಲಿ ಬಡ್ತಿ, ವರ್ಗಾವಣೆಯ ಯೋಗವಿರುತ್ತದೆ. ಮಾತಿನಿಂದ ಎಲ್ಲರನ್ನು ಗೆಲ್ಲಬಹುದಾಗಿದೆ.

Nava Panchama Yoga

ವೃಷಭ : ಈ ರಾಶಿಯ ವ್ಯಕ್ತಿಗಳಿಗೂ ನವ ಪಂಚಮ ಯೋಗವು ಅನುಕೂಲ ಮಾಡಿಕೊಡಲಿದೆ. ಮಂಗಳ ಗ್ರಹವು ಈ ರಾಶಿಯವರಲ್ಲಿ ಉಚ್ಛ ಸ್ಥಿತಿಯಲ್ಲಿದೆ. ಹಾಗಾಗಿ ಈ ರಾಶಿಯ ವ್ಯಕ್ತಿಗಳಿಗೆ ಅದೃಷ್ಟ ಕೈ ಹಿಡಿಯಲಿದೆ. ಸಮಾಜದಲ್ಲಿ ಗೌರವ ಹೆಚ್ಚಲಿದೆ. ಕಾರ್ಯ ಕ್ಷೇತ್ರದಲ್ಲಿ ಉತ್ಸಾಹ ಹೆಚ್ಚಲಿದೆ. ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿಯಾಗಲಿದೆ. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವವರ ಇಚ್ಛೆ ಈಡೇರಲಿದೆ. ಈ ಸಮಯದಲ್ಲಿ ಆರ್ಥಿಕ ಸ್ಥಿತಿಯೂ ಉತ್ತಮವಾಗಲಿದೆ.

Nava Panchama Yoga

ಕಟಕ : ಈ ರಾಶಿಯ ವ್ಯಕ್ತಿಗಳಿಗೆ ಆರ್ಥಿಕವಾಗಿ ನವ ಪಂಚಮ ಯೋಗವು ಲಾಭ ತರಲಿದೆ. ಮಂಗಳ ಗ್ರಹವು ಕಟಕ ರಾಶಿಯ ಲಾಭ ಸ್ಥಾನದಲ್ಲಿರುವುದರಿಂದ ಕೇಂದ್ರ ತ್ರಿಕೋನ ರಾಜಯೋಗವನ್ನು ನಿರ್ಮಾಣ ಮಾಡುತ್ತದೆ. ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಲಿದೆ. ಧನ ಲಾಭದ ಯೋಗ ಉಂಟಾಗುತ್ತದೆ. ವ್ಯಾಪಾರಿಗಳಿಗೆ ಬರಬೇಕಿದ್ದ ಹಣ ಈ ಸಮಯದಲ್ಲಿ ಕೈ ಸೇರಲಿದೆ. ವಿದೇಶ ಪ್ರವಾಸದ ಯೋಗವೂ ಇರುತ್ತದೆ.

ಇದನ್ನೂ ಓದಿ : Planet Transit 2023 : ಸದ್ಯವೇ ಮೂರು ಗ್ರಹಗಳ ಸಂಚಾರ; ಶುಭಾಶುಭ ಫಲಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಉದ್ಯೋಗಿಗಳಿಗೆ ತೆರೆಯಲಿದೆ ಅದೃಷ್ಟದ ಬಾಗಿಲು; ಪ್ರೇಮಿಗಳಿಗೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಶುಕ್ರವಾರ ಮೇಷ ರಾಶಿಯನ್ನು ರಾತ್ರಿ 11:28ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವೃಶ್ಚಿಕ ರಾಶಿಯವರು ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಧನಸ್ಸು ರಾಶಿಯವರು ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 09:37 ವಾರ: ಶುಕ್ರವಾರ
ನಕ್ಷತ್ರ: ಶತಭಿಷಾ 06:12 / ಪೂರ್ವ ಭಾದ್ರಪದ 28:47 ಯೋಗ: ವಿಷ್ಕುಂಭ 18:03
ಕರಣ: ಕೌಲವ 09:37 ಅಮೃತ ಕಾಲ: ರಾತ್ರಿ 09:16 ರಿಂದ 10:47 ರವರಗೆ
ದಿನದ ವಿಶೇಷ: ಕಾಲಾಷ್ಟಮಿ, ವಿಶ್ವ ಧೂಮಪಾನ ನಿಷೇಧ ದಿನ

ಸೂರ್ಯೋದಯ : 05:52   ಸೂರ್ಯಾಸ್ತ : 06:43

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬದಲ್ಲಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರ ಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ, ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು. ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ:ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ.
ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ. ಹೀಗಾಗಿ ಆರ್ಥಿಕವಾಗಿ ಸದೃಢವಾಗಿರುವಿರಿ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ. ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ, ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ. ಸಂಗಾಂತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದೆ ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು.ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ.ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಬೇಕು. ಇನ್ನು ಕುಂಭ ರಾಶಿಯವರು ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 11:43 ವಾರ: ಗುರುವಾರ
ನಕ್ಷತ್ರ: ಧನಿಷ್ಠಾ 07:30 ಯೋಗ: ವೈಧೃತಿ 20:51
ಕರಣ: ಭವ 20:51 ಅಮೃತ ಕಾಲ: ರಾತ್ರಿ 11:25 ರಿಂದ 12:56 ರವರಗೆ
ದಿನದ ವಿಶೇಷ: ಶ್ರೀರಾಮ ಪಟ್ಟಾಭಿಷೇಕ, ತುಂಬುರರ ಜಯಂತಿ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಇಂದು ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ, ಹೀಗಾಗಿ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಸಾಧ್ಯತೆಗಳು ಇದ್ದು, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ.
ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ನಂತರ ದುಃಖಿಸುಸುವುದು ಬೇಡ. ನಿಮಗೆ ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ, ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಇರಲಿದ್ದು, ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್, ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡುವುದು ಉತ್ತಮ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಇನ್ನು ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಕುಂಭ ರಾಶಿಯವರು ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 13:39 ವಾರ: ಬುಧವಾರ
ನಕ್ಷತ್ರ: ಶ್ರವಣಾ 08:37 ಯೋಗ: ಇಂದ್ರ 23:32
ಕರಣ: ವಣಿಜ 13:39 ಅಮೃತ ಕಾಲ: ರಾತ್ರಿ 09:36 ರಿಂದ 11:08 ರವರಗೆ
ದಿನದ ವಿಶೇಷ: ಜೇವರ್ಗಿ ಷಣ್ಮುಖ ಶಿವಯೋಗಿ ರಥ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 12:17 ರಿಂದ 01:53
ಗುಳಿಕಕಾಲ: ಮಧ್ಯಾಹ್ನ 10:41 ರಿಂದ 12:17
ಯಮಗಂಡಕಾಲ: ಬೆಳಗ್ಗೆ 07:29 ರಿಂದ 09:05

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ .ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಕುರಿತು ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Bhavani Reavanna
ಕರ್ನಾಟಕ24 mins ago

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Gold Rate Today
ಚಿನ್ನದ ದರ25 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Physical Abuse
ಕಲಬುರಗಿ25 mins ago

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Spelling Bee
ವಿದೇಶ31 mins ago

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Nivetha Pethuraj heated argument video with cops
ಟಾಲಿವುಡ್39 mins ago

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

T20 World Cup 2024
ಕ್ರಿಕೆಟ್43 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

Rameshwaram Cafe
ವೈರಲ್ ನ್ಯೂಸ್1 hour ago

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ1 hour ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ1 hour ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ1 hour ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ24 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌