ugadi horoscope 2023 shobhakruth nama samvatsara rashi phala in kannadaUgadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Ugadi Horoscope 2023 : ಹೊಸ ಸಂವತ್ಸರ ಬಂದಿದೆ. ಈ ಶೋಭಕೃತು ನಾಮ ಸಂವತ್ಸರದಲ್ಲಿ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿವೆ? ನಿಮ್ಮ ರಾಶಿಗಿರುವ ಶುಭಾಶುಭ ಫಲಗಳೇನು? ತಿಳಿಯಲು ಇಲ್ಲಿ ಓದಿ.

VISTARANEWS.COM


on

ugadi horoscope 2023 shobhakruth nama samvatsara rashi phala in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶೋಭಕೃತು ನಾಮ ಸಂವತ್ಸರ ಆರಂಭವಾಗಿದೆ (Ugadi Horoscope 2023). ಮುಂದಿನ ವರ್ಷದ ಅಂದರೆ 2024ರ ಏಪ್ರಿಲ್ 8ರ ವರೆಗೆ ಈ ಸಂವತ್ಸರ ಇರಲಿದೆ. ಈ ನವ ಸಂವತ್ಸರದಲ್ಲಿ ಶನಿ ಗ್ರಹವು ಯುಗಾದಿ ಆರಂಭದಿಂದ ಸಂವತ್ಸರದ ಅಂತ್ಯದ ತನಕ ಈಗಿರುವ ಕುಂಭ ರಾಶಿಯಲ್ಲಿಯೇ ಸಂಚಾರ ಮುಂದುವರಿಸಲಿದೆ. ಇನ್ನು ಗುರು ಗ್ರಹವು ಇದೇ ಏಪ್ರಿಲ್ 22 ತನಕ ಮೀನ ರಾಶಿಯಲ್ಲಿದ್ದು, ಏಪ್ರಿಲ್ 22 ನಂತರ ಈ ಸಂವತ್ಸರದ ಅಂತ್ಯದ ತನಕ ಮೇಷ ರಾಶಿಯಲ್ಲಿ ಸಂಚಾರ ನಡೆಸಲಿದೆ.

ಯುಗಾದಿ ಆರಂಭದಿಂದ ಅಕ್ಟೋಬರ್ 30ರವರೆಗೆ ರಾಹು ಮೇಷದಲ್ಲಿ, ತುಲಾದಲ್ಲಿ ಕೇತು ಇದ್ದು, ಅಕ್ಟೋಬರ್ 30 ರಿಂದ ಸಂವತ್ಸರದ ಕೊನೆ ತನಕ ಮೀನದಲ್ಲಿ ರಾಹು, ಕನ್ಯಾದಲ್ಲಿ ಕೇತು ಸಂಚಾರ ನಡೆಸಲಿವೆ. ಈ ಸಂವತ್ಸರದಲ್ಲಿ ಮೇಷದಿಂದ ಮೀನದ ತನಕ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿರುತ್ತದೆ ಎಂಬುದನ್ನು ನೋಡೋಣ;

ಮೇಷ: ಸ್ವತಂತ್ರ ಗುರುವಿನಿಂದ ರಕ್ಷಣೆ

ugadi horoscope 2023

ಮೇಷ ರಾಶಿಯವರಿಗೆ ಗುರು ದ್ವಾದಶದಲ್ಲಿದ್ದು, ಏಕಾದಶ ಶನಿ ಇದ್ದಾನೆ. ಏಪ್ರಿಲ್ 21ನಂತರ ಗುರು ವೃಷಭಕ್ಕೆ ಹೋದಾಗ ಬೃಹಸ್ಪತಿ ಸಂಧಿ (ರಾಹು ದಶೆಯು ಮುಗಿದು ಗುರು ದಶೆಯು ಶುರುವಾಗಿದ್ದರಿಂದ ರಾಹು- ಬೃಹಸ್ಪತಿ ಸಂಧಿ) ಸಂಭವಿಸುತ್ತದೆ. ಈ ಸಂದರ್ಭದಲ್ಲಿ ನೀವು ಎಚ್ಚರ ವಹಿಸದಿದ್ದರೆ ಕಾರ್ಯದಲ್ಲಿ ಅಲ್ಪ ತೊಡಕು, ವಿಘ್ನ ಉಂಟಾಗುವ ಸಾಧ್ಯತೆ ಇರುತ್ತದೆ. ಮೇ15ರವರೆಗೂ ಎಚ್ಚರಿಕೆಯಿಂದ ಹೆಜ್ಜೆ ಹಾಕಿ. ಸ್ವತಂತ್ರ ಗುರುವು ನಿಮ್ಮನ್ನು ಸಂರಕ್ಷಣೆ ಮಾಡುತ್ತಾನೆ. ಮಾತಿನಲ್ಲಿ ಎಚ್ಚರ ಇರಲಿ. ಗುರು -ರಾಹುವಿಗಾಗಿ ನಾಡಿನ ಅತ್ಯಂತ ಪ್ರಸಿದ್ಧ ದೇವರಾದ ಕುಕ್ಕೆ ಸುಬ್ರಹ್ಮಣ್ಯನನ್ನು ಆರಾಧಿಸಿ ಬನ್ನಿ. ಈ ಸಂವತ್ಸರದಲ್ಲಿ ನೀವು ಸಮನಾದ ಶುಭ-ಅಶುಭ ಫಲಗಳನ್ನು ಪಡೆಯುತ್ತೀರಿ.

ವೃಷಭ: ಆರೋಗ್ಯದ ಕಡೆ ಗಮನ ನೀಡಿ

ugadi horoscope 2023

ಹತ್ತನೇಯ ಮನೆಯಲ್ಲಿ ಶನಿ ಇದ್ದಾನೆ. ದ್ವಾದಶಕ್ಕೆ ಗುರು ಏಪ್ರಿಲ್ 21ರಿಂದ ಬರುತ್ತಾನೆ. ಈ ಸಂದರ್ಭದಲ್ಲಿ ಸುಲಭ ನಡೆ ಇಲ್ಲ. ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಗುರುವಿನ ಗುಲಾಮರಾಗದೇ ನಿಮಗೆ ತೊಂದರೆ ತಪ್ಪದು. ಗುರು ಸಮಾನರಾದ ಮಾತಾಪಿತೃ ಹಾಗೂ ಗುರವರ್ಯರನ್ನು ಪೂಜಿಸಿ, ಅವರ ಮಾರ್ಗದರ್ಶನವನ್ನು ಅನುಸರಿಸಿ ನಡೆದರೆ ಒಳ್ಳೆಯದು. ದುರ್ಗೆಯನ್ನು ಪೂಜಿಸಿದರೆ ಸಮಾಧಾನವಾಗಿ ನಿಮ್ಮೆಲ್ಲ ಕಷ್ಟಗಳು ದೂರವಾಗುತ್ತವೆ. ಈ ಸಂವತ್ಸರದಲ್ಲಿ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಏಕೆಂದರೆ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ದುಷ್ಟರಿಂದ ದೂರವಿರಿ. ಹನ್ನೆರಡರಲ್ಲಿ ಸಂಚರಿಸುವ ರಾಹು, ಆರನೇ ಮನೆಯಲ್ಲಿ ಕೇತು ಆದಾಯ- ವ್ಯಯದ ವಿಷಯದಲ್ಲಿ ನಿಮ್ಮ ಲೆಕ್ಕಾಚಾರವನ್ನು ಬುಡಮೇಲು ಮಾಡಬಹುದು. ಕೊಲ್ಲೂರು ಮೂಕಾಂಬಿಕೆ, ಶೃಂಗೇರಿಯ ಶಾರದೆಯ ದರ್ಶನ ಮಾಡಿ, ಒಳ್ಳೆಯ ಫಲಗಳನ್ನು ಪಡೆಯಬಹುದು.

ಮಿಥುನ : ಸುಬ್ರಹ್ಮಣ್ಯನನ್ನು ಅನನ್ಯವಾಗಿ ಪ್ರಾರ್ಥಿಸಿ

ugadi horoscope 2023

ಎಂಟನೇ ಮನೆಯಲ್ಲಿ ಶನಿ ಹಾಗೂ ಹನ್ನೊಂದನೇ ಮನೆಯಲ್ಲಿ ಗುರು ಸಂಚಾರವಿರುತ್ತದೆ. ಏಕಾದಶದ ಗುರುವಿಗೆ ರಾಹು ಸಂಪರ್ಕವಿರುವುದರಿಂದ ಸದಾಕಲಾ ಸುಬ್ರಹ್ಮಣ್ಯನನ್ನು ಪ್ರಾರ್ಥಿಸುವುದರಿಂದ, ನಿಮ್ಮ ಬುದ್ಧಿಯನ್ನು ನೆಟ್ಟಗಿಟ್ಟು, ಆತನೇ ನಿಮಗೆ ಮಾರ್ಗದರ್ಶನ ನೀಡುತ್ತಾನೆ. ನಿಮ್ಮ ಕಷ್ಟಗಳನ್ನು ದೂರಮಾಡುತ್ತಾನೆ. ಹಾನಿಯುಂಟು ಮಾಡದ ವಿಷಯಗಳಲ್ಲಿ ಅನಾವಶ್ಯಕವಾಗಿ ನಿಮ್ಮ ತಲೆ ತೂರಿಸಲು ಹೋಗಬೇಡಿ. ನಿಮ್ಮೆಲ್ಲಾ ಕೆಲಸಗಳು ನಡೆಯ ಬೇಕಾದರೆ 11ರ ರಾಹುವಿಗಾಗಿ ಚಂಡಿಕಾ ಪರಮೇಶ್ವರಿಯನ್ನು ಪೂಜಿಸಿ. ಶತ್ರು ಕಾಟ ತಪ್ಪಿಸಲು ಭಗಳಮುಖಿ ಸಂದರ್ಶಿಸಿ. ಅಕ್ಟೋಬರ್ ತಿಂಗಳ ನಂತರದಲ್ಲಿ ರಾಹು ಹತ್ತನೇ ಮನೆಗೆ, ಕೇತು ನಾಲ್ಕನೇ ಮನೆಗೆ ಬರುತ್ತಾರೆ. ಆ ನಂತರ ಉದ್ಯೋಗದಲ್ಲಿ ಮತ್ತು ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ವಹಿಸಿ.

ಕಟಕ: ದೇವತಾನುಗ್ರಹದಿಂದ ಮಾತ್ರ ಕಷ್ಟ ದೂರ

ugadi horoscope 2023

ಶನಿಯು ಎಂಟನೇ ಮನೆಯಲ್ಲಿ ಸಂಚರಿಸುವುದರಿಂದ ಹೆಚ್ಚಿನ ಎಚ್ಚರಿಕೆ ಅಗತ್ಯ. ಅಕ್ಟೋಬರ್ ತನಕ ರಾಹು ಹತ್ತನೇ ಮನೆಯಲ್ಲಿ, ಕೇತು ನಾಲ್ಕನೇ ಮನೆಯಲ್ಲಿ ಸಂಚರಿಸುವಾಗ ಉದ್ಯೋಗ ಸ್ಥಳದಲ್ಲಿ ಕೂಡ ನೀವು ಎಚ್ಚರಿಕೆ ವಹಿಸಬೇಕಾಗುತ್ತದೆ. ಸಂಸಾರದಲ್ಲಿ ಒಡಹುಟ್ಟಿದವರೊಂದಿಗೆ ಅಸಮಾಧನ ಉಂಟಾಗಲಿದೆ. ಇದು ನಿಮ್ಮ ಮೆದುಳಿಗೆ ಸಾಕಷ್ಟು ಕೆಲಸವನ್ನು ಕೊಡಲಿದೆ. ನಿಮ್ಮ ದೇವತಾನುಗ್ರಹದಿಂದ ನೀವು ನಿಮ್ಮೆಲ್ಲ ಕಷ್ಟಗಳಿಂದ ಪಾರಾಗಬಹುದು. ಒಂಬತ್ತರ ಗುರುವು ದಶಮಕ್ಕೆ ಬರುತ್ತಾನೆ. ಗುರು ಬಲವು ತಪ್ಪಿದ ಸಂದರ್ಭ ಇದಾಗಿದೆ. ಸಾಕ್ಷಾತ್‌ ಪಾರ್ವತಿ ಪರಮೇಶ್ವರರೇ ಗುರುವೆಂದು ಭಾವಿಸಿ, ಅವರನ್ನು ಪೂಜಿಸದೇ, ಹಿರಿಯರನ್ನು, ಮನೆಯ ಯಜಮಾನರನ್ನು ಕೇಳದೇ ಯಾವ ಕೆಲಸವನ್ನೂ ಮಾಡಬೇಡಿ. ಈ ಸಂವತ್ಸರದಲ್ಲಿ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಿ. ಸಂವತ್ಸರ ದೇವತೆಯಾದ ಕರ್ಕಾಟಕ ರಾಶಿಯಲ್ಲಿ ಜನಿಸಿದ ಶ್ರೀ ರಾಮಚಂದ್ರನನ್ನು ಪೂಜಿಸಿ, ಒಂದು ಸಂವತ್ಸರದ ಕಾಲ ಸುಂದರಕಾಂಡವನ್ನು ಪಾರಾಯಣ ಮಾಡಿ. ಜೀವನವನ್ನು ಜಯಿಸಿ, ಗುರುವು ಏಕದಶಕ್ಕೆ ಬಂದಾಗ ನಿಮ್ಮೆಲ್ಲ ಕೋರಿಕೆ ಈಡೇರಲಿದೆ.

ಸಿಂಹ: ಒಳ್ಳೆಯ ಹೆಸರು ಮಾಡುವ ಸಮಯ

ugadi horoscope 2023

ಏಳನೇ ಮನೆಯಲ್ಲಿ ಶನಿ ಸಂಚರಿಸುವಾಗ ನಿಮ್ಮ ಜೀವನವನ್ನು ದೇವರೇ ಪರೀಕ್ಷಿಸುತ್ತಿದ್ದಾನೆ ಎಂದು ಭಾವಿಸಬೇಕು. ಮಕ್ಕಳು ಪರೀಕ್ಷೆಗೆ ಓದುವಾಗ ಪಾಠವನ್ನು ಅರ್ಥೈಸಿಕೊಳ್ಳುವಂತೆ, ನೀವು ಜೀವನ ಪಾಠವನ್ನು ಅರ್ಥೈಸಿಕೊಂಡು, ಸನ್ನಿವೇಶ, ಸಂದರ್ಭಗಳಿಗೆ ತಕ್ಕಂತೆ, ವಿಚಾರ ಧಾರೆಗಳನ್ನು ಬದಲಾಯಿಸಿಕೊಂಡು, ಯಾರಿಗೂ ಹಾನಿಯಾಗದಂತೆ, ಯಾರ ಮನಸ್ಸಿಗೂ ನೋವುಂಟಾಗದಂತೆ ಮುನ್ನೆಡೆಯಬೇಕು. ಒಂಬತ್ತರ ಗುರುವು ಬಾಗಿಲು ತಟ್ಟಿ ಬಂದು ನಿಮಗೆ ಒಳ್ಳೆಯದನ್ನು ಮಾಡುತ್ತಾನೆ. ಒಂಬತ್ತನೇ ಮನೆಯಲ್ಲಿರುವ ರಾಹು ಮತ್ತು ಮೂರನೇ ಮನೆಯಲ್ಲಿರುವ ಕೇತು ಅಕ್ಟೋಬರ್‌ 30ರ ನಂತರ ನಿಮ್ಮೆಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ತರುತ್ತಾರೆ. ನೀವು ಒಳ್ಳೆಯ ಹೆಸರು ಸಂಪಾದನೆ ಮಾಡುವ ಕಾಲ ಈ ಸಂವತ್ಸರ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ. ನಿತ್ಯವೂ ಸರಸ್ವತಿ ಪೂಜೆ, ಆರೋಗ್ಯಕ್ಕಾಗಿ ಶನಿ ಪ್ರಾರ್ಥನೆ ಇರಲಿ.

ಕನ್ಯಾ : ಶನಿಯಿಂದ ಸಂಪತ್ತು, ಸೌಕರ್ಯ ಲಭ್ಯ

ugadi horoscope 2023

ಇದೇ ಏಪ್ರಿಲ್‌ನಲ್ಲಿ ಅಷ್ಟಮಕ್ಕೆ ಬರುವ ಗುರುವು ರಾಹುವಿನ ಜತೆಗೂಡಿ, ನೀವು ಇದುವರೆಗೆ ಮಾಡಿದ ಪುಣ್ಯ-ಪಾಪಗಳಿಗೆ ತಕ್ಕ ಪ್ರತಿಫಲ ನೀಡುತ್ತಾರೆ. ʻಗುರುದ್ರೋಹಂ ಕುಲ ನಾಶನಂʼ ಎಂಬ ಮಾತಿನಂತೆ ನೀವು ಗುರುಗಳಿಗೆ ದ್ರೋಹ ಮಾಡಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಆರನೇ ಮನೆಯಲ್ಲಿರುವ ಶನಿಯು ನಿಮಗೆ ಈ ಸಂವತ್ಸರದಲ್ಲಿ ಸಾಕಷ್ಟು ಸಂಪತ್ತು, ಸೌಕಯರ್ಯಗಳನ್ನು ಒದಗಿಸುತ್ತಾನೆ. ಆದರೆ ನಿಮಗೆ ಶಾಶ್ವತವಾಗಿ ಇವೆಲ್ಲವೂ ದೊರೆಯಬೇಕಾದರೆ ಗುರು ವೊಬ್ಬನೇ ಕಾರಣಕರ್ತನು. ಅವನ ಕೃಪೆ ಇರಲೇಬೇಕು. ಗುರು ರಾಹು ಸಂಪರ್ಕದಿಂದ ಜಟರದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಸೂಕ್ತ ವೈದ್ಯರ ಮಾರ್ಗದರ್ಶನ ಪಡೆದು ಮುಂದುವರಿಯಿರಿ. ಅಷ್ಟಮ ಗುರುವು ಆರೋಗ್ಯ ದೃಷ್ಟಿಯಿಂದ ಹಿತಕರ ಸೂಚನೆ ಕೊಡುವುದಿಲ್ಲ. ಹೀಗಾಗಿ ಶ್ರೀ ಗುರು ದತ್ತಾತ್ರೇಯನನ್ನು, ನಂಜನ ಗೂಡಿನ ಶ್ರೀ ನಂಜುಂಡೇಶ್ವರನನ್ನು ಅನನ್ಯವಾಗಿ ಪೂಜಿಸಿ.

ತುಲಾ: ಮಾತಿನ ಮೇಲೆ ಹಿಡಿತವಿರಲಿ

ugadi horoscope 2023

ರಾಶಿಯವರಿಗೆ ಸಪ್ತಮದಲ್ಲಿ ಗುರು ಹಾಗೂ ಪಂಚಮದಲ್ಲಿ ಶನಿ ಇರುತ್ತಾರೆ. ಸ್ವಕ್ಷೇತ್ರದಲ್ಲಿ ಶನಿ ಇದ್ದಾನೆ. ತುಲಾ ರಾಶಿಯ ಅಧಿಪತಿಯ ಕಾರಣಕ್ಕೆ ಆತ ಕಷ್ಟಕಾರ್ಪಣ್ಯಗಳನ್ನು ನೀಡುವುದಿಲ್ಲ. ಸಂತೋಷವನ್ನು, ಅದ್ಭುತವಾದ ವಿಚಾರಗಳಲ್ಲಿ ಜಯವನ್ನು ಹಾಗೂ ಅದ್ದೂರಿಯಾದ ಜೀವನವನ್ನು ಕೊಟ್ಟು ಸಹಕರಿಸುತ್ತಾನೆ. ಜನ್ಮ ರಾಶಿಯಲ್ಲಿಯೇ ಕೇತು ಇರುವುದರಿಂದ ನಿಮ್ಮ ಮಾತು ಹರಿತವಾದ ಚಾಕುವಿನಂತಹ ಆಯುಧವಾಗದಿರಲಿ. ಮಾತಿನ ಮೇಲೆ ಹಿಡಿತವಿರಲಿ. ಸೌಮ್ಯತೆಯಿಂದ ಕೂಡಿರಲಿ. ಮಾತಿನಿಂದ ಯಾರನ್ನೂ ಗೆಲ್ಲಬಹುದು. ಅದೇ ನಿಮ್ಮ ಜೀವನದ ಅಡಿಪಾಯವಾಗಿರಲಿ. ಗುರುವು ಕನ್ಯಾ ರಾಶಿಗೆ ಹೋದ ಮೇಲೆ ಸ್ವತಂತ್ರ ಗುರುವು ನಿಮ್ಮ ಜೀವನದಲ್ಲಿ ಮತ್ತಷ್ಟು ಶೋಭೆಯನ್ನು, ಲಾಭವನ್ನು, ಧೈರ್ಯವನ್ನು, ಕೀರ್ತಿಯನ್ನು ತಂದುಕೊಂಡುತ್ತಾನೆ. ನೆನಪಿರಲಿ ನಿಮ್ಮದು ತಕ್ಕಡಿಯ ರಾಶಿ. ನಿಮ್ಮ ತುಲಭಾರ ಮಾಡುವವರು ಪರಮಾತ್ಮನ ಸ್ವರೂಪಿಯಾದ ನಿಮ್ಮ ತಂದೆ-ತಾಯಿಯರು. ಅವರನ್ನು ಅನುಗ್ರಹವನ್ನು, ಆಶೀರ್ವಾದವನ್ನು ಪಡೆದರೆ, ಜಗತ್ತನ್ನೇ ಗೆದ್ದು, ಕೀರ್ತಿವಂತರಾಗಿ ಬದುಕಬಹುದು. ಕೋರ್ಟ್‌, ಕಚೇರಿ, ವ್ಯವಹಾರ, ಸಂಧಾನ ಎಲ್ಲದರಲ್ಲಿಯೂ ನಿಮಗೆ ಜಯ ಸಿಗುತ್ತದೆ.

ವೃಶ್ಚಿಕ : ಭಕ್ತಿಯಿಂದ ಜೀವನ ಗೆಲ್ಲಿ!

ugadi horoscope 2023

ಈ ಸಂವತ್ಸರದಲ್ಲಿ ನಾಲ್ಕರಲ್ಲಿ ಶನಿ ಸಂಚಾರ ಇರುತ್ತದೆ. ಹಾಗೆಯೇ ಸಂವತ್ಸರದ ಆರಂಭದಲ್ಲಿ ಗುರು ಬಲವು ಸಂಪೂರ್ಣವಾಗಿದ್ದು, ಅದೃಷ್ಟವನ್ನು ನೀಡುತ್ತಾನೆ. ಸರಿಯಾದ ಪ್ರಯತ್ನವನ್ನು ಮಾಡಿದಲ್ಲಿ, ಸರಿಯಾದ ಮಾರ್ಗದಲ್ಲಿ ಹೋದರೆ ಏನನ್ನು ಬೇಕಾದರೂ ಸಾಧಿಸಬಹುದು. ಪರಮಾತ್ಮನು ಕಣ್ಣು ಬಿಟ್ಟರೆ ಒಂದೇ ಕ್ಷಣದಲ್ಲಿ ನಿಮ್ಮ ಜೀವನದಲ್ಲಿ ಯಾವ ರೀತಿಯ ಬದಲಾವಣೆಯನ್ನಾದರೂ ತರಬಲ್ಲನು. ಭಕ್ತಿಯೊಂದಿದ್ದರೆ ಜೀವನವನ್ನೇ ಗೆಲ್ಲಬಹುದು. ಶತ್ರುಗಳನ್ನು ಕೂಡ ಗೆದ್ದು ಯಶಸ್ಸಿನ ಮೆಟ್ಟಿಲೇರಹುದು. ಏಪ್ರಿಲ್‌ 21 ರ ನಂತರ ಗುರುವು ಆರನೇ ಮನೆಯಲ್ಲಿ ಸಂಚಾರ ನಡೆಸಲಿದ್ದು, ಈ ಸಂದರ್ಭದಲ್ಲಿ ಉದ್ಯೋಗದಲ್ಲಿ, ವ್ಯವಹಾರದಲ್ಲಿ ಎಚ್ಚರಿಕೆ ವಹಿಸಬೇಕಿರುತ್ತದೆ. ಹನ್ನೆರಡನೇ ಮನೆ ಕೇತು ವ್ಯಯಕ್ಕೆ ಕಾರಣನಾದರೂ ದೈವ ಭಕ್ತಿಯನ್ನು ಮೂಡಿಸುತ್ತಾನೆ. ನಾಲ್ಕನೆ ಮನೆಯ ಶನಿ ಸಂಚಾರದಿಂದಾಗಿ ಆರೋಗ್ಯದಲ್ಲಿ ಏರು ಪೇರು ಉಂಟಾಗಬಹುದು. ಆದರೆ ಶುದ್ಧ ಮನಸ್ಸು ನೀಡುತ್ತಾನೆ. ಒಟ್ಟಾರೆಯಾಗಿ ಈ ಸಂವತ್ಸರದಲ್ಲಿ ಈ ರಾಶಿಯವರಿಗೆ ಶೇ. 50 ರಷ್ಟು ಶುಭ ಫಲವಿದ್ದರೆ, ಶೇ. 50ರಷ್ಟು ಅಶುಭ ಫಲಗಳನ್ನು ಕಾಣಬಹುದು.

ಧನಸ್ಸು: ಸುಖ ಸಂತೋಷದ ಸಮಯ

ugadi horoscope 2023

ಏಳೂವರೆ ವರ್ಷ ನಿಮ್ಮನ್ನು ಕಾಡಿದ ಸಾಡೇಸಾತ್ ಶನಿ ದೋಷವು ಸಂಪೂರ್ಣವಾಗಿ ನಿಮ್ಮಿಂದ ದೂರವಾಗುವ ಸಮಯ ಇದು. ಈ ಸಂವತ್ಸರದಲ್ಲಿ ಮೂರನೇ ರಾಶಿಯಲ್ಲಿ ಶನಿ ಸಂಚಾರ ಇರಲಿದೆ. ಹೀಗಾಗಿ ಆರ್ಥಿಕವಾಗಿ ಒಳ್ಳೆಯ ಫಲಗಳನ್ನು ನೀವು ಪಡೆದುಕೊಳ್ಳಬಹುದು. ಹೊಸ ವ್ಯಾಪಾರ-ವ್ಯವಹಾರ ಶುರು ಮಾಡಬಹುದು. ಗುರುವು ಸಂವತ್ಸರದ ಮೊದಲ ಒಂದು ತಿಂಗಳು, ಮೀನಾ ರಾಶಿಯಲ್ಲಿರುವಾಗ ಮನೆ ಕಟ್ಟುವ, ವಾಹನ ಕೊಳ್ಳುವ ಯೋಗವಿದೆ. ಏಪ್ರಿಲ್‌ನಲ್ಲಿ ಗುರುವು ಐದನೇ ಮನೆಗೆ ಹೋಗುತ್ತಾನೆ. ಆಗಲೂ ನಿಮಗೆ ಲಾಭದ ಸಂದರ್ಭವಿದೆ. ಈ ಸಂವತ್ಸರದಲ್ಲಿ ನೀವು ಸುಖ-ಸಂತೋಷವನ್ನು ಕಾಣಬಹುದು. ನಿಮಗೆ ಅಕಸ್ಮಿಕವಾಗಿ ಧನಲಾಭವಾದರೆ ಆರ್ಥಿಕ ವಿಷಯದಲ್ಲಿ ಮಿಂಚಿನಂತೆ ಓಡುವ ಕಾಲವಿದು.

ಮಕರ: ಪಾಪ-ಪುಣ್ಯಗಳಿಗೆ ತಕ್ಕ ಫಲ

ugadi horoscope 2023

ಈ ಸಂವತ್ಸರದಲ್ಲಿ ಕುಂಭದಲ್ಲಿನ ಶನಿ ಎರಡನೇ ಮನೆಯಲ್ಲಿ ಹಾಗೂ ಯುಗಾದಿಯಿಂದ ಒಂದು ತಿಂಗಳ ತನಕ ಗುರು ಮೂರನೇ ಮನೆಯಲ್ಲಿ ಮತ್ತು ಆ ನಂತರ ಸಂವತ್ಸರದ ಕೊನೆಯ ತನಕ ನಾಲ್ಕನೇ ಮನೆಯಲ್ಲಿ ಸಂಚಾರ ಮಾಡಲಿವೆ. ಸಾಡೇಸಾತಿ ಶನಿ ಸಂಚಾರವು ಕೊನೆಯ ಹಂತದಲ್ಲಿದ್ದು, ನಿಮ್ಮನ್ನು ಬಿಡುವ ಕಾಲ ಇದು. ನಾವು ಮಾಡಿದ ಪಾಪ-ಪುಣ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯುತ್ತೇವೆ. ನೀವು ವ್ಯಾಕುಲ ಬುದ್ಧಿಯನ್ನು ಬಿಟ್ಟು, ಮನಸ್ಸನ್ನು ಬಿಗಿಯಾಗಿ ಹತೋಟಿಯಲ್ಲಿಟ್ಟುಕೊಂಡರೆ ಅಂದುಕೊಂಡಿದ್ದನ್ನು ಸಾಧಿಸಬಹುದು. ನಾಲ್ಕನೇ ಮನೆಯಲ್ಲಿ ಗುರುವಿನೊಂದಿಗೆ ರಾಹು ಕೂಡ ಇರುವುದು ಅಷ್ಟು ಶುಭಕರವಲ್ಲ. ಹೀಗಾಗಿ ಗುರು ದಕ್ಷಿಣಾಮೂರ್ತಿಯನ್ನು ಪೂಜಿಸಿ. ಪ್ರತಿ ಗುರುವಾರ ಕಡಲೆಬೆಳೆಯನ್ನು ದಾನ ಮಾಡಿ. ಸಾಧ್ಯವಾಗದೇ ಇದ್ದರೆ, ಕಡಲೆಬೆಳೆಯ ಕೋಸಂಬರಿ ಮಾಡಿ ದೇವರಿಗೆ ನೈವೇದ್ಯ ಮಾಡಿ, ಸುಖವನ್ನು ಕಾಣಬಹುದು. ನೀವು ಕಷ್ಟಪಡುತ್ತಿರುವ ಕೆಲವು ಕೆಲಸಗಳು ತನ್ನಿಂದ ತಾನೇ ವೇಗವನ್ನು ಪಡೆದು, ಮುಕ್ತಾಯದ ಹಂತಕ್ಕೆ ಬರುತ್ತವೆ. ಹತ್ತನೇ ಮನೆಯಲ್ಲಿ ಕೇತು ಇರುವುದರಿಂದ ಉದ್ಯೋಗ, ವ್ಯಾಪಾರ, ವಹಿವಾಟುಗಳಲ್ಲಿ ನೀವು ನಿರೀಕ್ಷೆ ಮಾಡಿರಿದ ತಿರುವುಗಳನ್ನು ಎದುರಿಸಬೇಕಾಗಿ ಬರಬಹುದು.

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಕುಂಭ : ಗುರು ಚರಿತ್ರೆಯ ಪಾರಾಯಣ ಮಾಡಿ

ugadi horoscope 2023

ಈ ಸಂವತ್ಸರದಲ್ಲಿ ದ್ವಾದಶದಿಂದ ಜನ್ಮ ರಾಶಿಗೆ, ಸ್ವಕ್ಷೇತ್ರಕ್ಕೆ ಶನಿ ಗ್ರಹವು ಬಂದಿರುವುದರಿಂದ ಸಾಡೇಸಾತ್ ಎರಡನೇ ಹಂತವು ಆರಂಭ ಆಗುತ್ತದೆ. ಎರಡರಲ್ಲಿರುವ ಗುರು ಶನಿಯ ಈ ಸಂಚಾರದಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನಿಮ್ಮನ್ನು ಸಂರಕ್ಷಿಸಿದ್ದಾನೆ. ಏಪ್ರಿಲ್‌ನಲ್ಲಿ ಗುರುವು ಮೂರನೇ ಮನೆಗೆ ಸಂಚಾರ ನಡೆಸಿ, ಅಲ್ಲಿ ರಾಹು ಸಂಪರ್ಕಕ್ಕೆ ಬಂದನಂತರ ನಿಮಗೆ ಗುರುಬಲವು ತನ್ನಿಂದ ತಾನೇ ಕುಗ್ಗುತ್ತದೆ. ಈ ಸಂವತ್ಸರದಲ್ಲಿ ನೀವು ಗುರು ಚರಿತ್ರೆಯ 14 ಮತ್ತು 18 ನೇ ಅಧ್ಯಯನವನ್ನು ನಿತ್ಯ ಪರಾಯಣ ಮಾಡುವುದರಿಂದ ಶನಿಯ ಅವಕೃಪೆಯಿಂದ ಪಾರಾಗಬಹದು ಹಾಗೂ ದೈವಕೃಪೆಯೂ ದೊರೆಯುತ್ತದೆ. ನಿಮಗೆ ರಕ್ಷಣೆ ದೊರೆಯುತ್ತದೆ. ಅಧಿಕವಾದ ವೆಚ್ಚಗಳನ್ನು ಮಾಡಿ, ಮನೆ ಇತ್ಯಾದಿ ವ್ಯಪಾರಗಳಲ್ಲಿ ಹಣವನ್ನು ಹೂಡದೇ ಜೋಪಾನವಾಗಿ ಸಾಗಿರಿ. ಒಂಬತ್ತರ ಕೇತುವಿನಿಂದಾಗಿ ಅಕ್ಟೋಬರ್ ನಂತರದಲ್ಲಿ ಎಷ್ಟೇ ಹಣ ಬಂದರೂ ಉಳಿತಾಯ ಮಾಡಲಾಗದು. ಇಡೀ ಸಂವತ್ಸರದಲ್ಲಿ ಆಂಜನೇಯನನ್ನು ಪೂಜಿಸಿ.

ಮೀನ: ಮೊಂಡುತನ ಬಿಟ್ಟರೆ ಗೆಲ್ಲಬಹುದು!

ugadi horoscope 2023

ಶನಿ ಸಂಚಾರ ನಿಮ್ಮ ವ್ಯಯ ಸ್ಥಾನದಲ್ಲಿ, ಅಂದರೆ ಹನ್ನೆರಡನೇ ಮನೆಯಲ್ಲಿ ಇರಲಿದೆ. ಸಂವತ್ಸರದ ಮೊದಲ ಒಂದು ತಿಂಗಳ ನಂತರ ಗುರುವು ದ್ವಿತೀಯಕ್ಕೆ ಬರುತ್ತಾನೆ. ಆ ನಂತರ ನಿಮಗೆ ಗುರುಬಲವು ಚೆನ್ನಾಗಿದ್ದರೂ, ನಿಮ್ಮ ಕೆಟ್ಟ ಸ್ವಭಾವ, ಮೊಂಡುತನವನ್ನು ಬಿಡಬೇಕು. ನಾನು ಹೇಳಿದಂತೆಯೇ ಎಲ್ಲವೂ ನಡೆಯಬೇಕು ಎಂಬುದನ್ನು ಬಿಟ್ಟು ಎಲ್ಲರ ಅಭಿಪ್ರಾಯಗಳಿಗೆ ಗೌರವ ನೀಡಿದರೆ ಗುರುವು ನಿಮ್ಮನ್ನು ಮುನ್ನೆಡೆಸುತ್ತಾನೆ. ಗುರುವಿಗೆ ರಾಹುವಿನಿಂದ ಗ್ರಹಣ ಉಂಟಾಗಿ, ರಾಹು-ಬೃಹಸ್ಪತಿ ಸಂಧಿಕಾಲದಲ್ಲಿ ಸಿಕ್ಕಿಹಾಕಿಕೊಂಡು ಪರಿಪೂರ್ಣವಾದ ಯಾವ ಕೆಲಸವನ್ನೂ ಮಾಡುವುದಿಲ್ಲ. ಆರೋಗ್ಯಕ್ಕೂ ತೊಂದರೆ ಇಲ್ಲ. ಆದರೆ ವಿಶಾಲವಾದ ಮನಸ್ಸಿರಬೇಕು, ದೇವತಾರಾಧನೆಯಿರಬೇಕು, ನೀವು ಈವರೆಗೆ ಮಾಡಿದ ತಪ್ಪುಗಳನ್ನು ತಿದ್ದುಕೊಂಡಲ್ಲಿ ಎರಡನೇ ಗುರುವು ನಿಮ್ಮನ್ನು ಇಡೀ ಸಂವತ್ಸರ ಸಂರಕ್ಷಿಸುತ್ತಾನೆ. ರಾಹುಗೆ ಸುಬ್ರಹ್ಮಣ್ಯ ದೇವರನ್ನು ಪೂಜಿಸಿ, ಗುರು ಮೇಷರಾಶಿಯಲ್ಲಿರುವುದರಿಂದ ಈಶ್ವರನ ಪುತ್ರನಾದ ಷಣ್ಮುಖನನ್ನು ಪ್ರಾರ್ಥಿಸಿದರೆ ಎಲ್ಲವೂ ಕೈ ಸೇರಿ ಸಂತೋಷ ಉಂಟಾಗುತ್ತದೆ.

ನಮ್ಮ ಆರಾಧ್ಯದೈವ ಸುಬ್ರಹ್ಮಣ್ಯ ದೇವರನ್ನು ಪ್ರಾರ್ಥಿಸಿ, ಶ್ರೀ ಗುರು ದತ್ತತ್ರೇಯ ದೇವರಿಗೆ ನಮಿಸಿ, ನಮ್ಮ ಕುಲಗುರುಗಳಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು, ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳಿಗೆ ವಂದಿಸಿ ಈ ರಾಶಿ ಫಲವನ್ನು ಇಲ್ಲಿ ದಾಖಲಿಸಿದ್ದೇನೆ.

ಎಲ್ಲರಿಗೂ ಈ ನವ ಸಂತ್ಸರವು ಶುಭವನ್ನು, ಸುಖವನ್ನು, ಸಂಭ್ರಮವನ್ನು ಎಲ್ಲದಕ್ಕಿಂತ ಮುಖ್ಯವಾಗಿ ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Ugadi 2023 : ಜಗದ ಆದಿ ಈ ಯುಗಾದಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Danesh Palyani: ಪಾಕಿಸ್ತಾನದ ಪ್ರಮುಖ ಹಿಂದು ನಾಯಕರೂ ಆಗಿರುವ ದಾನೇಶ್‌ ಕುಮಾರ್‌ ಪಲ್ಯಾನಿ ಅವರು, ಪಾಕ್‌ನಲ್ಲಿ ಹೇಗೆ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ, ಹೇಗೆ ಮುಸ್ಲಿಮರು ದೌರ್ಜನ್ಯ ಎಸಗುತ್ತಿದ್ದಾರೆ ಎಂಬುದರ ಕುರಿತು ಸಂಸತ್‌ನಲ್ಲಿಯೇ ಬೆಳಕು ಚೆಲ್ಲಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Danesh Palyani
Koo

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ (Pakistan) ಹಿಂದುಗಳನ್ನು, ಹಿಂದು ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡುವ ಹೀನ ಕೃತ್ಯವು ಮೊದಲಿನಿಂದಲೂ ನಡೆಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ವಿಭಾಜನೆಯಾದಾಗಿನಿಂದಲೂ ಮುಸ್ಲಿಮರು ಮತಾಂತರಗೊಳಿಸಿದ ಕಾರಣ ನೆರೆ ರಾಷ್ಟ್ರದಲ್ಲಿ ಹಿಂದುಗಳ ಸಂಖ್ಯೆಯು ಗಣನೀಯವಾಗಿ ಕುಸಿದಿದೆ. ಪಾಕಿಸ್ತಾನದ ಹಿಂದು ಸಂಸದ, ಹಿಂದುಗಳ ನಾಯಕರೂ ಆದ ದಾನೇಶ್‌ ಕುಮಾರ್‌ ಪಲ್ಯಾನಿ (Danesh Kumar Palyani) ಅವರೀಗ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ (Conversion) ಮಾಡಲಾಗುತ್ತಿದೆ ಎಂಬುದನ್ನು ಸಂಸತ್‌ನಲ್ಲಿಯೇ ಬಹಿರಂಗಪಡಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಸಂಸತ್‌ನಲ್ಲಿ ಮಾತನಾಡಿದ ದಾನೇಶ್‌ ಕುಮಾರ್‌ ಪಲ್ಯಾನಿ, “ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಧಕ್ಕೆಯಾಗುತ್ತಿದೆ. ಅದರಲ್ಲೂ, ಹಿಂದು ಯುವತಿಯರನ್ನು ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ. ಹಿಂದು ಯುವತಿಯನ್ನು ಅಪಹರಣ ಮಾಡಿ, ಬಳಿಕ ಅವರನ್ನು ಇಸ್ಲಾಂಗೆ ಮತಾಂತರಗೊಳಿಸಲಾಗುತ್ತಿದೆ. ಪಾಕಿಸ್ತಾನವು ಹಿಂದುಗಳನ್ನು ಬಲವಂತವಾಗಿ ಮಾತನಾಡಬಾರದು ಎಂಬ ಹಕ್ಕು ನೀಡಿದೆ. ಆದರೆ, ಸಿಂಧ್‌ ಪ್ರಾಂತ್ಯದಲ್ಲಿ ಹಿಂದುಗಳ ಸ್ಥಿತಿಯು ದುಸ್ಥರವಾಗಿದೆ” ಎಂದು ಹೇಳಿದ್ದಾರೆ.

“ಬಲವಂತವಾಗಿ ಧರ್ಮವನ್ನು ಹೇರಬಾರದು ಎಂಬುದಾಗಿ ಕುರಾನ್‌ ಕೂಡ ಹೇಳುತ್ತದೆ. ನಿಮ್ಮ ಧರ್ಮ ನಿಮ್ಮದು, ನಮ್ಮ ಧರ್ಮ ನಮ್ಮದು ಎಂಬ ಸಂದೇಶ ಸಾರಲಾಗಿದೆ. ಆದರೆ, ಇಸ್ಲಾಂ ಧರ್ಮದ ದುಷ್ಕರ್ಮಿಗಳು ಪಾಕಿಸ್ತಾನದ ಸಂವಿಧಾನವನ್ನೂ ನಂಬಲ್ಲ, ಕುರಾನ್‌ ಷರೀಫ್‌ಅನ್ನು ಕೂಡ ನಂಬುವುದಿಲ್ಲ. ಇದರಿಂದಾಗಿ ಪಾಕಿಸ್ತಾನದಲ್ಲಿ ಹಿಂದು ಯುವತಿಯರು ಬಲವಂತವಾಗಿ ತಮ್ಮ ಧರ್ಮವನ್ನು ಬದಲಾಯಿಸಬೇಕಾಗಿದೆ. ಪ್ರಿಯಾ ಕುಮಾರಿ ಎಂಬ ಯುವತಿಯನ್ನು ಅಪಹರಿಸಿ ಎರಡು ವರ್ಷಗಳೇ ಕಳೆದಿವೆ. ಆದರೂ, ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ದೂರಿದರು.

“ಪಾಕಿಸ್ತಾನದ ಸಂವಿಧಾನವಾಗಲಿ, ಪವಿತ್ರ ಕುರಾನ್‌ ಆಗಲಿ ಬಲವಂತದ ಮತದಾನವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಹೀಗಿದ್ದರೂ, ನಮ್ಮ ಮಾತೃಭೂಮಿಯಾದ ಪಾಕಿಸ್ತಾನದ ಘನತೆಗೆ ದುಷ್ಕರ್ಮಿಗಳು ಧಕ್ಕೆ ತರುತ್ತಿದ್ದಾರೆ. ಇಂತಹವರ ವಿರುದ್ಧ ಪಾಕಿಸ್ತಾನ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಆಗ್ರಹಿಸಿದ್ದಾರೆ. ಪಾಕಿಸ್ತಾನದಲ್ಲಿ ಬಲವಂತದ ಮತಾಂತರ, ಯುವತಿಯರ ಅಪಹರಣ, ಮಕ್ಕಳ ಕಳ್ಳ ಸಾಗಣೆ, ಬಾಲ್ಯ ವಿವಾಹದಂತಹ ಸಮಸ್ಯೆಗಳು ತಲೆದೋರಿರುವ ಕುರಿತು ಕೆಲ ದಿನಗಳ ಹಿಂದಷ್ಟೇ ವಿಶ್ವಸಂಸ್ಥೆಯು ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: Forced Conversion : ಮಹಿಳೆಯ ಖಾಸಗಿ ವಿಡಿಯೊ ಮಾಡಿ, ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ ನೀಚ ದಂಪತಿ

Continue Reading

ಕರ್ನಾಟಕ

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

Prajwal Revanna: ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ಕಾರ್ತಿಕ್‌ ಬಗ್ಗೆ ಹೇಳಿಕೆ ನೀಡಿದ ಬಳಿಕವಂತೂ ಹಲವು ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Prajwal Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರ ಕಾಮಕೇಳಿಯ ವಿಡಿಯೊಗಳು ಬಹಿರಂಗವಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪೆನ್‌ಡ್ರೈವ್‌ ಪ್ರಕರಣವು (Pen Drive Case) ಕರ್ನಾಟಕದಲ್ಲಿ (Karnataka) ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದರೆ, ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲಿ ಅಜ್ಞಾತವಾಸ ಅನುಭವಿಸುತ್ತಿದ್ದರೆ, ವಿಡಿಯೊ, ಫೋಟೊಗಳು ಎಲ್ಲೆಡೆ ಹರಡಲು ಕಾರಣರಾದ ಮಾಜಿ ಚಾಲಕ ಕಾರ್ತಿಕ್‌ ಮಲೇಷ್ಯಾದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಅಜ್ಞಾತಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿ, ಕೆಲ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ, “ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು” ಎಂಬುದಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ತಿಕ್‌ ಮಲೇಷ್ಯಾಗೆ ತೆರಳಿದ್ದು ದೃಢಪಟ್ಟಿದ್ದು, ಕಾರು ಚಾಲಕನೊಬ್ಬ ಮಲೇಷ್ಯಾದಲ್ಲಿ ಕಾಲ ಕಳೆಯುವುದು, ಅಲ್ಲಿಯೇ ಹಾಲಿಡೇಸ್‌ ಎಂಜಾಯ್‌ ಮಾಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಮೂಡಿವೆ.

ಪ್ರಜ್ವಲ್‌ ರೇವಣ್ಣ ಲೈಂಗಿಕ ಶೋಷಣೆ ಮಾಡಿರುವ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಇನ್ನು ಸಾವಿರಾರು ಅಶ್ಲೀಲ ವಿಡಿಯೊಗಳಿರುವ ಪೆನ್‌ಡ್ರೈವ್‌ ಎಲ್ಲೆಂದರಲ್ಲಿ ಸಿಕ್ಕಿರುವುದು ಹಲವು ಅನುಮಾನ ಮೂಡಿಸಿವೆ. ಇದರ ಮಧ್ಯೆಯೇ, ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದು ಈಗ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಕಾರ್ತಿಕ್‌ ಬಗ್ಗೆ ಎಚ್‌ಡಿಕೆ ಸಿಡಿಮಿಡಿ

ಬೆಂಗಳೂರಿನ ಪದ್ಮನಾಭನಗರದ ನಿವಾಸದ ಗೇಟ್‌ ಮುಂಭಾಗದಲ್ಲಿ ಪ್ರಕರಣದ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆದರು. ಪದೇಪದೇ ಏನು ಕೇಳುತ್ತೀರಿ, ನಿಮಗೆ ಏನು ಕೆಲಸ, ಇಲ್ಲಿ ಯಾಕೆ ಬಂದಿದ್ದೀರಾ? ಸುದ್ದಿ ಬಿಡುವವರ ಜತೆ ಹೋಗಿ ಎಂದು ಕಿಡಿಕಾರಿದರು. ನಿನ್ನೆ ಡ್ರೈವರ್ ಒಬ್ಬ ವಿಡಿಯೋ ಮಾಡಿ ಹೇಳಿದನಲ್ಲಾ? ಯಾರು ಆ ವಿಡಿಯೊ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣ ತಮ್ಮ ಇದ್ದಾರಲ್ಲವೇ? ಅವರು ಏನ್ ಹೇಳಿದರು? ಕುಮಾರಸ್ವಾಮಿ ಬಿಟ್ಟಿದ್ದು ಎನ್ನುತ್ತಾರೆ. ಡ್ರೈವರ್ ಕಾರ್ತಿಕ್ ಎಲ್ಲಿದ್ದಾನೆ ಈಗ? ಮಲೇಷ್ಯಾದಲ್ಲಿ ಇದಾನೆ, ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿದರು.

ಆ ಡ್ರೈವರ್‌ ಕಾರ್ತಿಕ್ ಏನು ಹೇಳಿಕೆ ಕೊಟ್ಟಾ? ದೇವರಾಜೇಗೌಡ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದೆ ಅಂತ ಹೇಳಿದ್ದ. ಇಂದು ಬೆಳಗ್ಗೆ ಈ ಚಿಲ್ಲರೆ ಅಣ್ಣ ತಮ್ಮ ಇದಾರಲ್ವಾ (ಡಿಕೆಶಿ ಹಾಗೂ ಡಿ.ಕೆ ಸುರೇಶ್), ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಯಾರು ಕಳುಹಿಸಿದರು? ಎಲ್ಲಿಂದ ವಿಡಿಯೋ ಮಾಡಿ ಬಿಟ್ಟದ್ದಾನೆ, ಅದನ್ನು ಮೊದಲು ತಿಳಿದುಕೊಳ್ಳಿ. ನನ್ನ ಕೆಣಕಿದ್ದಾರೆ, ಸುಮ್ಮನೆ ಬಿಡಲ್ಲ ನಾನು ಎಂದು ಡಿಕೆ ಬ್ರದರ್ಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Continue Reading

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕರ್ನಾಟಕ

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Neha Murder Case: ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ಹಿರೇಮಠ ತಂದೆ-ತಾಯಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ (Neha Murder Case) ನ್ಯಾಯ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ಒದಗಿಸಿದರು. ನೇಹಾ ತಂದೆ ನಿರಂಜನ್ ಹಿರೇಮಠ ಅವರು, ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದರೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಅವರೆದುರು ದುಃಖ ತೋಡಿಕೊಂಡಿದ್ದಾರೆ.

ಮಗಳು ನೇಹಾಳ ಹತ್ಯೆ ಹಿನ್ನೆಲೆ ಮತ್ತು ಈವರೆಗೆ ಆದ ಬೆಳವಣಿಗೆಗಳ ಕುರಿತು ಕಾರ್ಪೊರೇಟರ್ ನಿರಂಜನ್ ಅವರು ಕೇಂದ್ರ ಗೃಹ ಸಚಿವರೆದುರು ವಿವರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರಲ್ಲದೆ, ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.‌

ಇದನ್ನೂ ಓದಿ | PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case BJP will not be with those who do injustice to women says Amit Shah

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

Continue Reading
Advertisement
Bhajanotsava
ಬೆಂಗಳೂರು2 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ3 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ3 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ4 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ4 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ4 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ4 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ4 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ5 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ5 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌