Vastu Tips For Success: ಜೀವನದಲ್ಲಿ ಯಶಸ್ಸು ಸಿಗಬೇಕೆ? ಈ ವಾಸ್ತು ನಿಯಮ ಪಾಲಿಸಿ - Vistara News

ಪ್ರಮುಖ ಸುದ್ದಿ

Vastu Tips For Success: ಜೀವನದಲ್ಲಿ ಯಶಸ್ಸು ಸಿಗಬೇಕೆ? ಈ ವಾಸ್ತು ನಿಯಮ ಪಾಲಿಸಿ

ಯಾವುದೇ ಕೆಲಸದಲ್ಲಿ ನೀವು ಗೆಲುವು ಸಾಧಿಸಿಕೊಳ್ಳಬೇಕೆಂದರೆ ವಾಸ್ತು ಕೂಡ ಅಷ್ಟೆ ಮುಖ್ಯವಾಗುತ್ತದೆ. ಹಾಗಾದರೆ ಯಾವ ರೀತಿಯಲ್ಲಿ ವಾಸ್ತುವನ್ನು (Vastu Tips For Success) ಪರಿಪಾಲಿಸಿದರೆ ಯಶಸ್ಸು ನಿಮ್ಮದಾಗುತ್ತದೆ? ಈ ಕುರಿತ ಉಪಯುಕ್ತ ಸಲಹೆ ಇಲ್ಲಿದೆ.

VISTARANEWS.COM


on

Vastu Tips For Success
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಶಸ್ಸು ಮತ್ತು ಕೀರ್ತಿ ಯಾರಿಗೆ (Vastu Tips For Success) ಬೇಡ ಹೇಳಿ. ಸಮಾಜದಲ್ಲಿ ತಾವೂ ಕೂಡ ಪ್ರಖ್ಯಾತರಾಗಬೇಕು ಎನ್ನುವುದು ಅನೇಕರ ಕನಸಾಗಿರುತ್ತದೆ. ಅದಕ್ಕೆಂದು ಅವರು ನಾನಾ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಕೇವಲ ಪ್ರಯತ್ನಗಳಿಂದ ಎಲ್ಲವೂ ಸಾಧ್ಯವಾಗುವುದಿಲ್ಲ. ಅದೃಷ್ಟ ಮತ್ತು ದೇವರ ಕೃಪೆಯೂ ನಮ್ಮ ಮೇಲಿದ್ದರೆ ಮಾತ್ರ ಯಶಸ್ಸು ಎನ್ನುವುದು ನಮ್ಮ ಹತ್ತಿರಕ್ಕೆ ಸುಳಿಯುತ್ತದೆ. ಯಾವುದೇ ಕೆಲಸದಲ್ಲಿ ನೀವು ಗೆಲುವು ಸಾಧಿಸಿಕೊಳ್ಳಬೇಕೆಂದರೆ ವಾಸ್ತು ಕೂಡ ಅಷ್ಟೆ ಮುಖ್ಯವಾಗುತ್ತದೆ. ಹಾಗಾದರೆ ಯಾವ ರೀತಿಯಲ್ಲಿ ವಾಸ್ತುವನ್ನು ಪರಿಪಾಲಿಸಿದರೆ ಯಶಸ್ಸು ನಿಮ್ಮದಾಗುತ್ತದೆ ಎನ್ನುವುದಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ.

Businesswoman with Graphs on Computer at Office

ಕಚೇರಿ ಸ್ಥಳದ ದಿಕ್ಕು

ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗಬೇಕು, ಹಾಗೆಯೇ ನೀವು ಪ್ರಖ್ಯಾತರಾಗಬೇಕು ಎಂದರೆ ನಿಮ್ಮ ಕಚೇರಿಯ ದಿಕ್ಕುಗಳು ತುಂಬಾ ಮುಖ್ಯವಾಗುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ನೀವು ಕೆಲಸ ಮಾಡುವ ಸ್ಥಳವು ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿರಬೇಕು. ಈ ದಿಕ್ಕುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಮಂಗಳಕರ ಎಂದು ನಂಬಲಾಗುತ್ತದೆ. ಕಚೇರಿಯಲ್ಲಿ ನಿಮ್ಮ ಡೆಸ್ಕ್‌ ಅನ್ನು ಬಾಗಿಲಿಗೆ ಎದುರಾಗುವಂತೆ ಇರಿಸಿಕೊಳ್ಳುವುದು ಒಳ್ಳೆಯದು. ಹಾಗೆಯೇ ಕಚೇರಿಯೊಳಗೆ ನೈಸರ್ಗಿಕ ಬೆಳಕು ಹೆಚ್ಚಾಗಿ ಬರುವಂತೆ ಮಾಡಿಕೊಳ್ಳಿ ಮತ್ತು ಸಸ್ಯಗಳನ್ನು ಇಡುವುದರಿಂದ ಕಚೇರಿಯಲ್ಲಿ ಉತ್ಪಾದಕ ಮತ್ತು ಧನಾತ್ಮಕ ವಾತಾವರಣ ರಚನೆಯಾಗುತ್ತದೆ.

Colorful Bright Office Space

ಬಣ್ಣವೂ ಮುಖ್ಯವೇ

ಬಣ್ಣಗಳು ನಮ್ಮ ಮನಸ್ಥಿತಿ ಮತ್ತು ಶಕ್ತಿಯ ಮಟ್ಟಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ಸರಿಯಾದ ಬಣ್ಣವನ್ನು ಬಳಸುವುದರಿಂದ ನಿಮ್ಮ ಯಶಸ್ಸು ಮತ್ತು ಖ್ಯಾತಿಯ ಅವಕಾಶವನ್ನು ಹೆಚ್ಚಿಸಬಹುದು. ನೀವು ಕೆಲಸ ಮಾಡುವ ಕಚೇರಿಯಲ್ಲಿ ಕೆಂಪು, ಕಿತ್ತಳೆ ಮತ್ತು ಹಳದಿಯಂತಹ ಬಣ್ಣವನ್ನು ಹಚ್ಚಿ. ಈ ಶಕ್ತಿಗಳು ರೋಮಾಂಚಕತೆ, ಶಕ್ತಿ, ಯಶಸ್ಸು ಮತ್ತು ಸೃಜನಶೀಲತೆಗೆ ಸಂಬಂಧಿಸಿದ ಬಣ್ಣಗಳಾಗಿವೆ. ನಿಮ್ಮ ಕೆಲಸದ ಸ್ಥಳದಲ್ಲಿ ಈ ಬಣ್ಣಗಳನ್ನು ಹಚ್ಚಿಸಿ. ಅದರಿಂದ ನಿಮಗೆ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಹಾಗೆಂದ ಮಾತ್ರಕ್ಕೆ ಪೂರ್ತಿ ಕಟ್ಟಡಕ್ಕೇ ಒಂದೇ ಬಣ್ಣವನ್ನು ಹಚ್ಚುವುದಕ್ಕೆ ಹೋಗಬೇಡಿ. ಹಾಗೆ ಮಾಡಿದರೆ ಸಮತೋಲನ ತಪ್ಪುವ ಸಾಧ್ಯತೆ ಇರುತ್ತದೆ.

ಗೊಂದಲ ಮುಕ್ತ ಪರಿಸರ

ಯಶಸ್ಸು ಮನುಷ್ಯನ ಕೈ ಹಿಡಿಯಬೇಕೆಂದರೆ ಆತ ಗೊಂದಲವಿಲ್ಲದ ವಾತಾವರಣದಲ್ಲಿ ಇರುವುದೂ ಮುಖ್ಯವಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಗೊಂದಲಮಯ ಪರಿಸರವು ಸಕಾರಾತ್ಮಕ ಶಕ್ತಿಯ ಹರಿವನ್ನು ತಡೆಯುತ್ತದೆ. ಹಾಗೆಯೇ ಪ್ರಗತಿಯಾಗದಂತೆ ಮಾಡುತ್ತದೆ. ನೀವು ವಾಸಿಸುವ ಸ್ಥಳ ಮತ್ತು ಕೆಲಸ ಮಾಡುವ ಸ್ಥಳಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಹಾಗೆಯೇ ಅಲ್ಲಿ ಎಲ್ಲವೂ ಅಚ್ಚುಕಟ್ಟಾಗಿ ಜೋಡಣೆ ಮಾಡಿಟ್ಟುಕೊಳ್ಳಿ. ನೀವು ಕೆಲಸ ಮಾಡುವ ಸ್ಥಳ ಸ್ವಚ್ಛವಾಗಿದ್ದರೆ ಶಾಂತತೆಯ ಭಾವ ಸೃಷ್ಟಿಯಾಗುತ್ತದೆ ಹಾಗಾಗಿ ಸ್ಪಷ್ಟತೆ ಸಿಗುತ್ತದೆ. ಆಗ ನೀವು ಹೆಚ್ಚಿನ ಗಮನವನ್ನು ಉತ್ಪಾದಕತೆಯ ಕಡೆಗೆ ನೀಡಬಹುದು.

Successful Businessman Raising His Hand

ಯಶಸ್ಸು ಮತ್ತು ಖ್ಯಾತಿಯ ಸಂಕೇತ

ಯಶಸ್ಸು ಮತ್ತು ಖ್ಯಾತಿಗೆ ಸಂಬಂಧಿಸಿದಂತೆ ಹಲವಾರು ಚಿಹ್ನೆಗಳಿವೆ. ಅಂತಹ ಚಿಹ್ನೆಗಳನ್ನು ನೀವು ನಿಮ್ಮ ಕಚೇರಿಯಲ್ಲಿ ಇಡಬಹುದು. ಅದರಿಂದ ನಿಮ್ಮಲ್ಲಿ ಸಕಾರಾತ್ಮಕ ಭಾವನೆ ಮೂಡುತ್ತದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ವೈಯಕ್ತಿಕ ಗುರಿಯನ್ನು ಸಂಕೇತಿಸುವಂತಹ ವಸ್ತುಗಳನ್ನು ಅಥವಾ ಚಿತ್ರಗಳನ್ನು ಇಡುವುದು ನಿಮ್ಮನ್ನು ಹೆಚ್ಚು ಕೆಲಸ ಮಾಡುವಂತೆ ಮಾಡುತ್ತದೆ. ಅದರಿಂದಾಗಿ ಸಕಾರಾತ್ಮಕತೆ ಹೆಚ್ಚಾಗಿ ನೀವು ನಿಮ್ಮ ಗುರಿಯತ್ತ ಸಾಗುತ್ತೀರಿ. ಅದರ ಜತೆಯಲ್ಲಿ ಸಮೃದ್ಧಿಯನ್ನು ಸೂಚಿಸುವಂತಹ ಕೆಲವು ಚಿತ್ರಗಳನ್ನೂ ಇಟ್ಟುಕೊಳ್ಳಬಹುದು. ಉದಾಹರಣೆಗೆ ಉದಯಿಸುತ್ತಿರುವ ಸೂರ್ಯನ ಫೋಟೋ ಅಥವಾ ಚಿತ್ರ, ನೀರಿನ ಕಾರಂಜಿ ಚಿತ್ರವು ನಿಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ.

ಸಮತೋಲನ, ಸಾಮರಸ್ಯ

ನಿಮ್ಮ ವಾಸಸ್ಥಳ ಮತ್ತು ಕಚೇರಿಯಲ್ಲಿ ಸಮತೋಲನ ಮತ್ತು ಸಾಮರಸ್ಯ ಕಾಪಾಡಿಕೊಳ್ಳುವುದು ಅತಿಮುಖ್ಯ. ಕಚೇರಿ ಮತ್ತು ಮನೆಯಲ್ಲಿ ಪೀಠೋಪಕರಣಗಳ ಜೋಡಣೆ ಸರಿಯಾದ ಕ್ರಮದಲ್ಲಿರಬೇಕು. ಮನೆ, ಕಚೇರಿಯೊಳಗೆ ನೈಸರ್ಗಿಕವಾಗಿ ಸೂರ್ಯನ ಬೆಳಕು ಬರುವಂತಿರಬೇಕು. ಹಾಗೆಯೇ ಒಳಾಂಗಣ ಸಸ್ಯಗಳನ್ನು ಇಡುವ ಮೂಲಕ ಇನ್ನಷ್ಟು ಧನಾತ್ಮಕ ಶಕ್ತಿಯನ್ನು ಪಡೆಯಬಹುದು. ವೈಯಕ್ತಿಕ ಆಸಕ್ತಿ ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವಂತಹ ಕಲಾತ್ಮಕ ವಾತಾವರಣವನ್ನು ರಚಿಸಿಕೊಳ್ಳಬೇಕು. ಈ ಎಲ್ಲ ಪ್ರಯತ್ನಗಳು ನಿಮ್ಮನ್ನು ಯಶಸ್ಸು ಮತ್ತು ಪ್ರಖ್ಯಾತಿಯ ಹಾದಿಯತ್ತ ಕರೆದುಕೊಂಡು ಹೋಗುತ್ತದೆ.

ಈ ಎಲ್ಲದರ ಜತೆ ಮನುಷ್ಯ ತನ್ನ ಗುರಿಯತ್ತ ಸಾಗಲು ಶ್ರದ್ಧೆಯಿಂದ ಕೆಲಸ ಮಾಡುವುದೂ ಮುಖ್ಯವಾಗುತ್ತದೆ. ಇಲ್ಲಿ ವಿವರಿಸಲಾಗಿರುವ ಸಲಹೆಗಳ ಜತೆಯಲ್ಲಿ ಕೆಲಸವನ್ನು ನಿಷ್ಠೆಯಿಂದ ಮಾಡುತ್ತ ನಡೆಯಿರಿ. ಗೊಂದಲಮುಕ್ತವಾದ ಗುರಿಯನ್ನು ಇಟ್ಟುಕೊಳ್ಳಿ. ವಾಸ್ತು ಶಾಸ್ತ್ರವನ್ನು ಕ್ರಮಬದ್ಧವಾಗಿ ಪಾಲಿಸುತ್ತಾ ಸಾಗಿರಿ. ಹಾಗೆ ಮಾಡಿದಾಗ ಯಶಸ್ಸು ನಿಮ್ಮ ಕೈನಲ್ಲಿರುತ್ತದೆ. ಹಾಗೆಯೇ ಸಮಾಜ ನಿಮ್ಮನ್ನು ಪ್ರಖ್ಯಾತ ವ್ಯಕ್ತಿಯಾಗಿಯೂ ನೋಡಲಾರಂಭಿಸುತ್ತದೆ.

ಇದನ್ನೂ ಓದಿ: Vastu For Shop: ಅಂಗಡಿಯ ವಾಸ್ತು ಹೀಗಿದ್ದರೆ ಭರ್ಜರಿ ವ್ಯಾಪಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Reasi Terror Attack: ದೇಶದವೇ ಬೆಚ್ಚಿ ಬಿದ್ದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಭಯೋತ್ಪದಕ ದಾಳಿಯ ಬಗ್ಗೆ ಪೊಲೀಸರು ಮಹತ್ವದ ಸುಳಿವು ನೀಡಿದ್ದಾರೆ. ಶಂಕಿತ ಉಗ್ರನ ರೇಖಾಚುತ್ರವನ್ನು ಬಿಡುಗಡೆ ಮಾಡಿದ್ದು ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ನಗದು ಘೋಷಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದಲ್ಲಿ ಈ ರೇಖಾಚಿತ್ರವನ್ನು ರಚಿಸಲಾಗಿದೆ.

VISTARANEWS.COM


on

Reasi Terror Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ (Reasi Terror Attack). ಈ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಪೋಲೀಸರು ಶಂಕಿತ ಉಗ್ರನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ರಿಯಾಸಿ ಜಿಲ್ಲೆಯ ಪೂನಿ ಪ್ರದೇಶದಲ್ಲಿ ಇತ್ತೀಚೆಗೆ ಬಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ರೇಖಾ ಚಿತ್ರ ಬಿಡುಗಡೆ ಮಾಡಿದ್ದೇವೆ. ಈತನ ಸುಳಿವು ನೀಡಿದವರಿಗೆ ರಿಯಾಸಿ ಪೊಲೀಸರು 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದಲ್ಲಿ ಈ ರೇಖಾಚಿತ್ರವನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕನ ಬಗ್ಗೆ ಸುಳಿವು ಸಿಕ್ಕವರು ರಿಯಾಸಿ ಎಸ್ಎಸ್‌ಪಿ – 9205571332, ರಿಯಾಸಿ ಎಎಸ್‌ಪಿ- 9419113159, ರಿಯಾಸಿ ಡಿವೈಎಸ್‌ಪಿ ಪ್ರಧಾನ ಕಚೇರಿ – 9419133499, ಪೂನಿ ಎಸ್ಎಚ್ಒ- 7051003214, ರಾನ್ಸೂ ಎಸ್ಎಚ್ಒ – 7051003213, ರಿಯಾಸಿ ಪಿಸಿಆರ್ – 9622856295 ನಂಬರ್‌ಗೆ ಮಾಹಿತಿ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.

ರಿಯಾಸಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಭದ್ರತಾ ಸಿಬ್ಬಂದಿಯ 11 ತಂಡಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ರಾನ್ಸೊ-ಪೊನಿ-ತ್ರೇಯತ್ ಪ್ರದೇಶದಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಕೂವಾಡ ಇದೆ ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಂಡವು ಸೋಮವಾರ ರಿಯಾಸಿಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದೆ ಮತ್ತು ಎನ್ಐಎಯ ವಿಧಿವಿಜ್ಞಾನ ತಂಡವು ಪುರಾವೆಗಳನ್ನು ಸಂಗ್ರಹಿಸುತ್ತಿದೆ.

ಜೂನ್ 10ರಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಿಯಾಸಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

ಮಾಹಿತಿ ಪಡೆದ ಪ್ರದಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. “ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ ಜತೆ ಘಟನೆಯ ಬಗ್ಗೆ ವಿಚಾರಿಸಿದ್ದೇನೆ. ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ದಾಳಿಕೋರರು ಕಾನೂನಿನ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Actor Darshan Arrested : ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎಚ್ಚರವಿದ್ದರು. ಕೊಲೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಮತ್ತು ಆತನ ಸಹಚರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಬೇರೆ ಬೇರೆ ಲಾಕಪ್​ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಆದರೆ, ಇದುವರೆಗೆ ಜೇಬುಗಳ್ಳರ, ಮನೆಗಳ್ಳರ ಮತ್ತು ಸಣ್ಣಪುಟ್ಟ ಹೊಡೆದಾಟಗಳಲ್ಲಿ ಜೈಲು ಸೇರುತ್ತಿದ್ದವರ ರಕ್ತ ಹೀರಿ ಅಭ್ಯಾಸವಿದ್ದ ಸೊಳ್ಳೆಗಳು ದರ್ಶನ್​ಗೂ ಕಾಟ ಕೊಟ್ಟವು. ಪೊಲೀಸರು ‘ಸೆಲೆಬ್ರಿಟಿ ದರ್ಶನ್​ಗೆ’ ಕಾರ್ಪೆಟ್​, ದಿಂಬು ಎಲ್ಲ ಕೊಟ್ಟು ಮಲಗಲು ವ್ಯವಸ್ಥೆ ಮಾಡಿದ್ದರೂ ಸೊಳ್ಳೆಗಳು ಅವೆಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಬೆಡ್​ಶೀಟ್​ ಒಳಗಿನಿಂದ ತೂರಿಕೊಂಡು ಹೋಗಿ ಕಚ್ಚಿದವು.

ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಹಾಗೂ ಉಳಿದ 11 ಜನ ಆರೋಪಿಗಳು ಲಾಕ್ ಅಪ್ ನಲ್ಲೇ ಉಳಿಯಬೇಕಾಯಿತು. ದರ್ಶನ್‌, ರಾಘವೇಂದ್ರ ಮತ್ತು ವಿನಯ್ ಗೆ ಒಂದು ಲಾಕ್ ಅಪ್ ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರೆ, ಇತರ ಆರೋಪಿಗಳಿಗೆ ಮತ್ತೊಂದು ಲಾಕ್ ಅಪ್​ನಲ್ಲಿ ಮಲಗಲು ಹೇಳಿದ್ದರು. ರಾತ್ರಿ ಆರೋಪಿಗಳಿಗೆ ಖಾಸಗಿ ಹೋಟೆಲ್ ನಿಂದ ದೊನ್ನೆ ಬಿರಿಯಾನಿ‌ ವ್ಯವಸ್ಥೆ ಮಾಡಲಾಗಿತ್ತು. ಚೆನ್ನಾಗಿ ತಿಂದಿದ್ದ ಅವರು ಪೊಲೀಸರೇ ಒದಗಿಸಿದ್ದ ಹಾಸಿಗೆ ಪರಿಕರಗಳು, ಬೆಡ್ ಶೀಟ್, ತಲೆ ದಿಂಬು ಬಳಸಿ ಮಲಗಿದ್ದರು. ಆದರೆ, ಸೊಳ್ಳೆಗಳು ಅವರ ರಕ್ಷಣಾ ಕೋಟೆಯನ್ನು ಭೇದಿಸಿ ಬಂದು ಕಚ್ಚಿದ್ದವು.

ಚಿಂತೆಗೆ ಬಿದ್ದಿರುವ ದರ್ಶನ್​

ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

ಭಾರೀ ಭದ್ರತೆ

ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು. ದರ್ಶನ್​ಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗವಿದೆ. ಹುಚ್ಚು ಅಭಿಮಾನ ದರ್ಶನ್ ಆರೋಪಿಯೇ ಅಲ್ಲ ಎಂದು ವಾದಿಸುವ ಮಟ್ಟಕ್ಕೆ ಬಂದಿದೆ. ಹೀಗಾಗಿ ಡಿ ಬಾಸ್ ನೋಡಲು ಪೊಲೀಸ್​ ಠಾಣೆಗೆ ಬರಬಹುದು ಎಂಬ ಊಹೆ ಮೇಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂದಿನಿಂದ ಆರು ದಿನಗಳ ಕಾಲ ತನಿಖೆ

ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ಆರಂಭದಲ್ಲಿ ಆರೋಪಿಗಳ ಎಲೆಕ್ಟ್ರಾನಿಕ್ ಡಿವೈಸ್​​ಗಳ ತಲಾಷೆ ನಡೆಯಲಿದೆ. ಜತೆಗೆ ಅಪಹರಿಸಿಕೊಂಡು ಬಂದು ಕೂಡಿ ಹಾಕಿದ ಜಾಗ, ಕೊಲೆ ಮಾಡಿ ಎಸೆದ ಜಾಗವನ್ನು ಮಹಜರು ಮಾಡಲಿದ್ದಾರೆ.

ಇದನ್ನೂ ಓದಿ: Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು, ಯಾರು ಅವರಿಗೆ ಹೊಡೆದಿದ್ದಾರೆ, ಅವರನ್ನು ಎತ್ತಿ ಹಾಕಿಕೊಂಡು ಬಂದು ಎಸೆದು ಹೋಗಿದ್ದು ಯಾರು ಎಂಬೆಲ್ಲ ಕೋನದಿಂದ ತನಿಖೆ ನಡೆಸಲಿದ್ದಾರೆ. ಅಮಾನುಷವಾಗಿ ಕೊಲೆ ಮಾಡಲು ಬಳಸಿರುವ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಿಸಾಡಿರುವ ಆಯುಧಗಳನ್ನು ಹುಡುಕಿ ಪತ್ತೆ ಹಚ್ಚಲಿದ್ದಾರೆ.

ಪ್ರಮುಖವಾಗಿ ಹತ್ಯೆ ನಡೆದ ದಿನ ಆರೋಪಿಗಳ ಮೊಬೈಲ್​ ನೆಟ್​ವರ್ಕ್ ಇದ್ದ ಜಾಗವನ್ನು ಪತ್ತೆ ಹಚ್ಚಲಿದ್ದಾರೆ. ಈ ಮಾಹಿತಿಯು ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್​ ಸಲ್ಲಿಕೆ ಮಾಡುವುದಕ್ಕೆ ಪ್ರಮುಖ ಸಾಕ್ಷಿಗಳಾಗಲಿವೆ. ಅದೇ ರೀತಿ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆದೊಯ್ದು ತನಿಖೆ ನಡೆಸಲು ಪೊಲೀಸರು ಮುಂದಾಗಲಿದ್ದಾರೆ.

Continue Reading

ಪ್ರಮುಖ ಸುದ್ದಿ

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Terrorists Attack : ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಸೇನಾ ನೆಲೆಯ ಮೇಲೆ ಈ ದಾಳಿ ನಡೆದಿದೆ. ಮೂರು ದಿನಗಳ ಹಿಂದೆ ಭಯೋತ್ಪಾದಕರು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿ ಕಮರಿಗೆ ಬಿದ್ದು ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದರು.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದ ಸೇನಾ ನೆಲೆಯ ಮೇಲೆ ಮಂಗಳವಾರ ತಡರಾತ್ರಿ ಭಯೋತ್ಪಾದಕರು ದಾಳಿ (Terrorists Attack) ನಡೆಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇದು ಮೂರನೇ ಉಗ್ರರ ಚಟುವಟಿಕೆಯಾಗಿದೆ. ಪ್ರಸ್ತುತ ಉಗ್ರಗಾಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಸೇನಾ ನೆಲೆಯ ಮೇಲೆ ಈ ದಾಳಿ ನಡೆದಿದೆ. ಮೂರು ದಿನಗಳ ಹಿಂದೆ ಭಯೋತ್ಪಾದಕರು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದ ಕಾರಣ ಬಸ್​ ಕಮರಿಗೆ ಬಿದ್ದು ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದರು.

ಏನಾಗಿತ್ತು ಕಥುವಾ ಜಿಲ್ಲೆಯಲ್ಲಿ?

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮನೆಯೊಂದಕ್ಕೆ ನುಗ್ಗಿದ್ದ ಉಗ್ರರ ಗುಂಪಿನಲ್ಲಿ ಒಬ್ಬನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ (Terrorist Killed) . ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹಿರಾನಗರ್ ಸೆಕ್ಟರ್​ನ ಸೆಡಾ ಸೋಹಲ್ ಗ್ರಾಮದಲ್ಲಿ ಸಂಜೆ 7: 45 ರ ಸುಮಾರಿಗೆ ಅನುಮಾನಾಸ್ಪದ ಉಗ್ರಗಾಮಿ ಚಟುವಟಿಕೆ ಪತ್ತೆಯಾಗಿತ್ತು. ಅವರಿಗೆ ಶರಣಾಗುವಂತೆ ಸೂಚಿಸಿದೆವು. ಅವರು ಮನವಿ ಧಿಕ್ಕರಿಸಿ ಕಾಡಿನೊಳಗೆ ಹೋಗಿ ಗುಂಡಿನ ದಾಳಿ ನಡೆಸಿದ್ದರು. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಶಂಕಿತರನ್ನು ಪತ್ತೆಹಚ್ಚಲು ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆ ಬಗ್ಗೆ ಕಥುವಾ ಜಿಲ್ಲಾಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

ಭಾರತ ಪಾಕ್​ ಗಡಿಗೆ ಹತ್ತಿರವಿರುವ ಹಿರಾನಗರ್ ಸೆಕ್ಟರ್​ನ ಸೈದಾ ಗ್ರಾಮದ ಮನೆಯೊಂದರ ಮೇಲೆ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನಾನು ಡಿಸಿ #Kathua ಶ್ರೀ ರಾಕೇಶ್ ಮಿನ್ಹಾಸ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನಾನು ಸ್ಥಳದಲ್ಲಿರುವ ಕಥುವಾ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಜತೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ” ಎಂದು ಸಿಂಗ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದಾಳಿಗೊಳಗಾದ ಮನೆಯ ಮಾಲೀಕರು ಮೊಬೈಲ್ ಫೋನ್​ನಲ್ಲಿ ಮಾತನಾಡಿದ್ದಾರೆ. ಜಂಟಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಾನು ಮತ್ತು ನನ್ನ ಕಚೇರಿ ನಿರಂತರ ಸಂಪರ್ಕರುತ್ತದೆ” ಎಂದು ಕೇಂದ್ರ ಸಚಿವರು ಹೇಳಿದರು.

ಇದನ್ನೂ ಓದಿ: Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

ಶಿವ ಖೋರಿ ದೇವಸ್ಥಾನದಿಂದ ಕತ್ರಾದ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಿಯಾಸಿಯ ಪೋನಿ ಪ್ರದೇಶದ ಟೆರ್ಯಾತ್ ಗ್ರಾಮದ ಬಳಿ ಉಗ್ರರ ಗುಂಡೇಟು ತಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ. ಈ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 41 ಜನರು ಗಾಯಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

VISTARANEWS.COM


on

Actor Darshan Arrested
Koo

ಬೆಂಗಳೂರು : ತನ್ನ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸ್​​ ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan Arrested) ಹಾಗೂ ಆತನ ಸಹಚರರಿಗೆ ಕಾಮಾಕ್ಷಿ ಪಾಳ್ಯ ಪೊಲೀಸರು ಮಂಗಳವಾರ ರಾತ್ರಿಯ ಊಟಕ್ಕೆ ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟಿದ್ದಾರೆ. ಪ್ರಕರಣದಲ್ಲಿ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ. ಪವಿತ್ರಾ ಸಾಂತ್ವನ ಕೇಂದ್ರದಲ್ಲಿ ಇದ್ದರೆ ಉಳಿದವರು ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ರಾತ್ರಿಯ ಊಟಕ್ಕೆ ಪೊಲೀಸರು ಅವರೆಲ್ಲರಿಗೂ ಚಿಕ್ಕಪೇಟೆ ಬಿರಿಯಾನಿ ಪ್ಯಾಕೇಟ್​ಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಸೆರೆಯಾಗಿವೆ.

ದೊಡ್ಡ ಪ್ರಮಾಣದಲ್ಲಿ ಬಿರಿಯಾನಿ ಪ್ಯಾಕೆಟ್​ಗಳನ್ನು ಕ್ಯಾರಿ ಬ್ಯಾಗ್​ನಲ್ಲಿ ತುಂಬಿಸಿಕೊಂಡು ಹೋಗಿದ್ದು, ಜತೆಗೆ ಎಲ್ಲರಿಗೂ ಮಿನರಲ್ ವಾಟರ್​ ನೀಡಲಾಗಿದೆ. ಆರೋಪಿಗಳು ಕೆಲವರು ಬೆಳಗ್ಗಿನಿಂದ ಬಂಧನ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮೈಕೈ ನೋವು, ತಲೆ ನೋವು ಎಂದಿದ್ದು ಅವರೆಲ್ಲರಿಗೂ ಡೋಲೋ 650 ಮಾತ್ರೆಯನ್ನೂ ತಂದಕೊಟ್ಟಿದ್ದಾರೆ.

ಆರೋಪಿ ಚಿತ್ರನಟ ಹಾಗೂ ಇದು ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪ್ರಕರಣವಾಗಿರುವ ಕಾರಣ ತಮ್ಮ ವಶದಲ್ಲಿರುವ ಆರೋಪಿಗಳನ್ನು ಸರಿಯಾಗಿ ನೋಡಿಕೊಳ್ಳುವುದು ಪೊಲೀಸರಿಗೆ ಅನಿವಾರ್ಯ. ಹೀಗಾಗಿ ಅವರ ಊಟ, ತಿಂಡಿ ಹಾಗೂ ಇನ್ನಿತರ ಉಪಚಾರಗಳನ್ನು ಮಾಡಲು ಪೊಲೀಸರ ತಂಡ ನಾನಾ ರೀತಿಯ ಶ್ರಮಗಳನ್ನು ಹಾಕುತ್ತಿದೆ.

ಹಾಸಿಗೆ, ತಲೆದಿಂಬು

ಆರೋಪಿ ನಂಬರ್ 1 ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಪೊಲೀಸರು ರಾತ್ರಿ ವೇಳೆ ಮಲಗಲು ಹಾಸಿಗೆ ಹಾಗೂ ತಲೆ ದಿಂಬು ವ್ಯವಸ್ಥೆಯನ್ನೂ ಮಾಡಿದ್ದಾರೆ. 9 ಗಂಟೆ ವೇಳೆಗೆ ಪೊಲೀಸರು ನಾನಾ ಕಡೆಯಿಂದ ಆರೋಪಿಗಳೆಲ್ಲರಿಗೂ ಮಲಗಲು ಕಾರ್ಪೆಟ್​, ಬೆಡ್​ಶೀಟ್​ ಹಾಗೂ ತಲೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿರುವ ಪೊಲೀಸರಿಗೆ ಮುಂದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡುವೆ ಇಷ್ಟೊಂದು ವ್ಯವಸ್ಥೆಗಳನ್ನು ಮಾಡಲೇಬೇಕಾಗುತ್ತದೆ.

ಇದನ್ನೂ ಓದಿ: Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

ಏತನ್ಮಧ್ಯೆ, ಆರೋಪಿ ನಂಬರ್​ 2 ಪವಿತ್ರಾಗೌಡ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಪೊಲೀಸರು ಅವರನ್ನು ಅಲ್ಲಿಗೆ ಜೀಪ್​ನಲ್ಲಿ ಕರೆದುಕೊಂಡು ಹೋಗಿ ಬಿಡುತ್ತಿದ್ದಂತೆ ನಗುನಗುತ್ತಾ ಅವರು ಸಾಂತ್ವನ ಕೇಂದ್ರ ಸೇರಿಕೊಂಡಿದ್ದಾರೆ. ನಡೆದ ಘಟನೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಅವರು ಕೇಂದ್ರ ಸೇರಿಕೊಂಡಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

Continue Reading
Advertisement
Reasi Terror Attack
ದೇಶ34 mins ago

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Actor Darshan Arrested
ಸ್ಯಾಂಡಲ್ ವುಡ್38 mins ago

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Terrorists Attack
ಪ್ರಮುಖ ಸುದ್ದಿ1 hour ago

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Rock Salt Or Powder Salt
ಆರೋಗ್ಯ2 hours ago

Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

Actor Darshan Arrested
ಪ್ರಮುಖ ಸುದ್ದಿ3 hours ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

Dina Bhavishya
ಭವಿಷ್ಯ3 hours ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Health Benefits Of Jaggery
ಆರೋಗ್ಯ3 hours ago

Health Benefits Of Jaggery: ಬೆಲ್ಲ ಉಳಿದ ಆಹಾರದಂಥಲ್ಲ; ಇದರ ಲಾಭಗಳು ಏನೇನು ತಿಳಿದುಕೊಂಡಿರಿ

T20 World Cup
ಪ್ರಮುಖ ಸುದ್ದಿ8 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ9 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ9 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ16 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ17 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ19 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ21 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌