weekly horoscope check astrological predictions for all zodiac signs for april third week Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಈ ವಾರ ಅಂದರೆ ಏಪ್ರಿಲ್‌ 16 ರಿಂದ ಏಪ್ರಿಲ್‌ 22 ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಷ: ಶಕ್ತಿಯುತ ವರ್ಚಸ್ಸಿನಿಂದ ಗೆಲುವು

Weekly Horoscope

ಧೈರ್ಯ, ಸಾಹಸ, ನಾಯಕತ್ವ, ಚಾತುರ್ಯದ ಮಾತುಗಳಿಂದ ಪ್ರಭಾವ ಬೀರುವ ವೈಕ್ತಿತ್ವವನ್ನು ಪ್ರದರ್ಶಿಸುವ ಅವಕಾಶ ಒದಗಿಬರುವುದನ್ನು ಸದುಪಯೋಗಪಡಿಸಿಕೊಳ್ಳಿ. ನಿಮಗೇ ಅರಿಯದಂತೆ ನಿಮ್ಮಲ್ಲಿ ಅಂತರ್ಗತವಾದ ಸೂಕ್ಷ್ಮ ಮಿತಿಗಳನ್ನು, ದೌರ್ಬಲ್ಯಗಳನ್ನು ಅನ್ಯರಿಗೆ ವೇದ್ಯವಾಗದ ಹಾಗೆ ಜಾಣ್ಮೆಯಿಂದಿರಿ. ಯಾವುದೇ ಸಂದರ್ಭದಲ್ಲಿ ಶಕ್ತಿಯುತ ವರ್ಚಸ್ಸು ನಿಮಗೆ ವರ್ತಮಾನದ ಸಂದರ್ಭದಲ್ಲಿ ಜನರ ನಡುವೆ ನಿಲ್ಲಿಸಿ ನಿಮ್ಮನ್ನು ಗೆಲ್ಲಿಸುತ್ತವೆ. ಹೀಗಿರುವಾಗ ಕುಬ್ಜರಾಗದಿರಿ. ಶ್ರೀ ರಾಘವೇಂದ್ರರನ್ನು ಸ್ತುತಿಸಿದರೆ ಒಳಿತು.
ಶುಭ ಸಂಖ್ಯೆ : 6 ಶುಭ ದಿಕ್ಕು: ಪಶ್ಚಿಮ

ವೃಷಭ: ಧನಾಗಮನಕ್ಕೆ ಅವಕಾಶವಿರುವ ಸಮಯ

Weekly Horoscope

ಶ್ರೀದೇವಿಯ ಒಲುಮೆಯಿಂದ ವಿವಾಹಾದಿ ಕಾರ್ಯಗಳು ಕುಟುಂಬದಲ್ಲಿ ನೆರವೇರಲು, ಇಲ್ಲಾ ಶುಭ ಸಂದರ್ಭ ಮುಹೂರ್ತಗೊಳ್ಳಲು ಅವಕಾಶ ಲಭ್ಯ. ಹಣಕಾಸಿನ ಕುರಿತು ಎಚ್ಚರ ಇರಲಿ. ಹಣಗಳಿಸುವ ಮಾರ್ಗದಲ್ಲಿ ಅನೇಕ ಅಡೆತಡೆ ಬರುವಂತಿದ್ದರೂ ಧನಾಗಮನಕ್ಕೆ ಅವಕಾಶ ಇದೆ. ತಾಳಿದವನು ಬಾಳಿಯಾನು ಎಂಬುದನ್ನು ಮರೆಯದಿರಿ. ನಿಮ್ಮ ವಿರೋಧಿಗಳೇ ನಿಮಗೆ ಕೆಲವು ಲಾಭಕಾರಕ ಮಾರ್ಗಗಳನ್ನು ತೋರಿಸುವ ಕೆಲಸ ಮಾಡುವ ಸಾಧ್ಯತೆ ಇದೆ. ದುರ್ಗಾಳ ಆರಾಧನೆ ಕ್ಷೇಮ.
ಶುಭ ಸಂಖ್ಯೆ : 8 ಶುಭ ದಿಕ್ಕು: ನೈಋತ್ಯ

ಮಿಥುನ: ಜಾಣ್ಮೆಯಿಂದ ಲಾಭ ಪಡೆಯುವಿರಿ

Weekly Horoscope

ಲಾಭಕರವಾದ ಪ್ರವಾಸಗಳು ಜತೆಗೂಡುವ ವಿಶೇಷ ಸಮಯ ಇದಾಗಿದೆ. ಸುಸ್ತು, ಒತ್ತಡ, ಕಿರಿಕಿರಿಗಳನ್ನು ಮನೋದಾಢ್ಯತೆಯಿಂದಲೇ ಗೆಲ್ಲಿ. ಮಕ್ಕಳ ಬಗೆಗೆ ಕಾಳಜಿ ತೋರಿಸಿ. ತಪ್ಪುಗಳಾದರೂ ಧ್ವನಿ ಏರಿಸಿ ತಿದ್ದಲು ಮುಂದಾಗದಿರುವುದೇ ಒಳಿತು. ವಿಶ್ವಾಸ ತೋರಿ ಮಕ್ಕಳ ಮನಸ್ಸನ್ನು ಗೆಲ್ಲಿ. ನಿಮ್ಮ ಜಾಣ್ಮೆ ಹಾಗೂ ವ್ಯವಹಾರಿಕ ಕೌಶಲ್ಯಗಳು ಸೂಕ್ತವಾದ ಚತುರಮತಿಯ ಗಮನವನ್ನು ಸೆಳೆದು ನಿಮಗೆ ಒಳ್ಳೆಯ ಲಾಭ ತರುವ ವರ್ತಮಾನ ಪಕ್ವತೆ ಪಡೆದಿದೆ. ಮಹಾವಿಷ್ಣುವನ್ನು ಸ್ತುತಿಸಿ.
ಶುಭ ಸಂಖ್ಯೆ : 1 ಶುಭ ದಿಕ್ಕು: ವಾಯವ್ಯ

ಕಟಕ: ಮಾತಿನ ಬಲವೇ ನಿಮ್ಮ ನಿಜವಾದ ಬಲ

Weekly Horoscope

ನಡೆದಿದೆ ಹೋರಾಟ, ಹೋರಾಡಿದಷ್ಟೂ ಹೊಸ ಹೊಸ ದುಷ್ಟರು ಎದುರಾಗುತ್ತಾರೆ. ನಿಮ್ಮ ಮಾನಸಿಕ ದಾರ್ಢ್ಯತೆಯನ್ನು ಕಳಕೊಳ್ಳದಿರಿ. ಆರೋಗ್ಯದ ಬಗೆಗೂ ಎಚ್ಚರ ಇರಲಿ. ಮನಸ್ಸು ನಾಗಾಲೋಟ ಪಡೆದಿರುತ್ತದೆ. ಅವಸರ ಮಾಡದಿರಿ. ಸೂಕ್ತ ನಿರ್ಣಯ ಪಡೆದು ಮಾತನಾಡಿ. ಮಾತಿನ ಬಲ ಸದ್ಯ ನಿಮ್ಮ ನಿಜವಾದ ಬಲ. ಆದರೆ ನಿಷ್ಠುರವಾದ ಮಾತುಗಳು ಬೇಡ. ಮಾತು ಮಾಣಿಕ್ಯವಾಗಲಿ. ಆದರೆ ಮಾತನ್ನು ನಡೆಸಿಕೊಡುವ (ಯೋಗ್ಯರ ಜತೆಗಿನ ಮಾತು) ಜವಾಬ್ದಾರಿ ಇರಲಿ. ಮಾರುತಿಯನ್ನು ಆರಾಧಿಸಿ.
ಶುಭ ಸಂಖ್ಯೆ : 5 ಶುಭ ದಿಕ್ಕು: ಉತ್ತರ

ಸಿಂಹ: ಧೈರ್ಯದೊಂದಿಗೆ ವಿವೇಚನೆಯೂ ಇರಲಿ

Weekly Horoscope

ಧೈರ್ಯ ನಿಮ್ಮ ಆಸ್ತಿ. ಆದರೆ ಧೈರ್ಯ ಒಂದೇ ಆಸ್ತಿಯಾಗಬಾರದು. ವಿವೇಚನೆ ಇರಲಿ. ನಿಮ್ಮದೇ ಆದ ಕೆಲವು ಮಹತ್ವದ ಗುರಿ ತಲುಪಲು ಸಾಕಷ್ಟು ಅವಕಾಶಗಳಿವೆ. ನಿಮ್ಮ ಪ್ರಯತ್ನಗಳನ್ನು ಯುಕ್ತವಾಗಿ ಸಂವರ್ಧಿಸಿ. ಕಾರ್ಯ ಸಾಧನೆಗಾಗಿ ಮುಂದುವರಿದು ಸಾಗಿ. ಕೌಟುಂಬಿಕ ಸಮಾಚಾರದಲ್ಲಿಯೂ ಸೌಹಾರ್ದತೆಗಾಗಿನ ವಿಷಯಗಳು ನಿಮ್ಮ ಸಂತೋಷವನ್ನು ಸಂವರ್ಧಿಸುವ ಕಾಲ ಇದು. ರಾಹು ಗ್ರಹವನ್ನು ಸಮಾಧಾನಗೊಳಿಸಲೋಸುಗ ಶ್ರೀ ಉಗ್ರ ನರಸಿಂಹನನ್ನು ಸ್ತುತಿಸಿ, ಕ್ಷೇಮವಿದೆ.
ಶುಭ ಸಂಖ್ಯೆ : 9 ಶುಭ ದಿಕ್ಕು: ಈಶಾನ್ಯ

ಕನ್ಯಾ: ಸಾತ್ವಿಕತೆಯೇ ನಿಮ್ಮನ್ನು ಗೆಲ್ಲಿಸಲಿದೆ!

Weekly Horoscope

ಕೆಲವು ಸಕ್ಕರೆಯ ಕಾಳುಗಳನ್ನು ಪೂರ್ವದಿಕ್ಕಿನತ್ತ ಯಾರೂ ತುಳಿಯದ ಜಾಗದತ್ತ ಚೆಲ್ಲಿ. ಹಕ್ಕಿಗಳ ಪಾಲಾಗುವ ಸಕ್ಕರೆಯ ಸತ್ವದಿಂದ ಆರ್ಥಿಕತೆಗೆ ಸಂಬಂಧಿಸಿದ ಹಲವು ದುರ್ಭರತೆಗಳನ್ನು ನೀವು ನಿವಾರಿಸಿಕೊಳ್ಳಬಲ್ಲಿರಿ. ಹಿರಿಯರ ಆಸ್ತಿಗೆ ಸಂಬಂಧಿಸಿದ ವಿಚಾರ ತುಸು ಕಗ್ಗಂಟಾಗುವ ಪ್ರಮೇಯಗಳು ಜಾಸ್ತಿ. ಸಂಬಂಧಿಸಿದವರ ಬಳಿ ಶಾಂತವಾಗಿ ಮಾತನಾಡಿ. ಸಾತ್ವಿಕತೆಯೇ ನಿಮ್ಮನ್ನು ಗೆಲ್ಲಿಸುವ ವಜ್ರಾಯುಧವಾಗಿದೆ. ವಿರೋಧಿಗಳಿಗೂ ನೀವು ಬೇಕಾದವರಾಗುತ್ತೀರಿ. ಆದರೆ ಮೈ ಮರೆಯ ಬೇಡಿ. ದತ್ತಾತ್ರೇಯನನ್ನು ಆರಾಧಿಸಿ.
ಶುಭ ಸಂಖ್ಯೆ : 4 ಶುಭ ದಿಕ್ಕು: ಆಗ್ನೇಯ

ತುಲಾ: ಕ್ಲಿಷ್ಟತೆಗಳನ್ನು ಮೆಟ್ಟಿ ನಿಲ್ಲಿ

Weekly Horoscope

ಉನ್ನತ ವ್ಯಾಸಂಗದಲ್ಲಿ ನಿರತರಾದರೂ ಏಕಾಗ್ರತೆಯೊಂದಿಗೆ ಅಧ್ಯಯನ ನಡೆಸಿ. ಚಂಚಲ ಮನೋಭಾವ ಮಾರಕವೇ ಆಗಲು ಸಾಧ್ಯ. ಪೂರ್ತಿ ಶಕ್ತಿಯಿಂದ ಗುರಿ ಸಾಧಿಸಲು ಗಣಪತಿಯನ್ನು, ಮಾರುತಿಯನ್ನು ಆರಾಧಿಸಿ. ಲಾಭಕ್ಕಾಗಿನ ದಾರಿಗಾಗಿ ನಿಷ್ಠೆ ಮತ್ತು ಜಾಣ್ಮೆಯಿಂದ ಮುಂದಾಗಿ, ಅವಸರವನ್ನು ಮಾಡದಿರಿ. ಮನೆಯಲ್ಲಿನ ವಾತಾವರಣ ಅಶಾಂತಿಗೆ ದಾರಿಯಾಗುವ ಸಂದರ್ಭ ತಪ್ಪಿಸಿ. ಮಕ್ಕಳು ನಿಮ್ಮ ಪ್ರೋತ್ಸಾಹದಾಯಕ ಮಾತುಗಳಿಂದಲೇ ದಕ್ಷತೆಯ ದಾರಿ ಹಿಡಿಯಬೇಕು. ಕ್ಲಿಷ್ಟತೆಗಳನ್ನು ಮೆಟ್ಟಿ ನಿಲ್ಲಿ.
ಶುಭ ಸಂಖ್ಯೆ : 3 ಶುಭ ದಿಕ್ಕು: ನೈಋತ್ಯ

ವೃಶ್ಚಿಕ: ಬಾಳಸಂಗಾತಿಯ ವಿಷಯದಲ್ಲಿ ಅದೃಷ್ಟವಂತರು!

Weekly Horoscope

ಸುಖದಾಯಕನಾದ ಶನೈಶ್ವರನು ನಿಮ್ಮ ಬಗ್ಗೆ ಅಪರೂಪವೇ ಅನ್ನುವಂತೆ ಮೃದುವಾಗಿ ಇದ್ದಾನೆ. ಗುರುವೂ ಆರ್ಧತೆ ಹೊಂದಿದ್ದಾನೆ. ಕುಜನು ತುಸು ಉಸಿರುಗಟ್ಟುವ ಜಾಗೆಯಲ್ಲಿದ್ದರೂ ಆರ್ಥಿಕ ವಿಚಾರಗಳಿಗಾಗಿ ನಿಮಗೆ ಅಪ್ರತ್ಯಕ್ಷವಾದ ಬೆಂಬಲಕ್ಕೆ ಬದ್ಧನಾಗಿರುತ್ತಾನೆ. ಸಹಾಯಕನಾಗುತ್ತಾನೆ. ಬಾಳಸಂಗಾತಿಯ ವಿಚಾರಗಳಲ್ಲೂ ನೀವು ಅದೃಷ್ಟಶಾಲಿಗಳು. ಹೊಂದಾಣಿಕೆಯ ಫಲವಾಗಿ ಮನೆಯಲ್ಲಿ ಶಾಂತಿ ಸ್ಥಿರವಾಗಿರಲು ಅನುಕೂಲಕರ ಸಮಯ. ಕೆಲಸದ ಸ್ಥಳದಲ್ಲೂ ಅದೃಷ್ಟವಿದೆ. ವೆಂಕಟೇಶ್ವರನನ್ನು ಸ್ತುತಿಸಿ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪೂರ್ವ

ಧನಸ್ಸು: ವಿವಾಹಾಪೇಕ್ಷಿಗಳಿಗೆ ಅನುಕೂಲಕರ ಸಮಯ

Weekly Horoscope

ಧೈರ್ಯವನ್ನು ಅನುಗ್ರಹಿಸುವ ಶನೈಶ್ವರನಿರಲು ಹೆದರಿಕೆಯ ಅಗತ್ಯವಿಲ್ಲ. ಮಕ್ಕಳಿಂದ ಹರ್ಷದ ವಾರ್ತೆ ಲಭ್ಯ. ಮದುವೆಯ ವಿಚಾರದಲ್ಲಿ ಅವಕಾಶಗಳು ವಿವಾಹಾಪೇಕ್ಷಿಗಳಿಗೆ ಅನುಕೂಲಕರ. ಗಣೇಶನ ಆರಾಧನೆಯಿಂದ ಬಗೆಹರಿಯದ ವ್ಯಾಜ್ಯಗಳು ನೆರವೇರಲು ಕಾಲ ಸಕಾರಾತ್ಮಕವಾಗಿದೆ. ಬಾಳಸಂಗಾತಿಯ ಆರೋಗ್ಯದ ಕುರಿತು ಗಮನವಿರಲಿ. ಬಹು ಮುಖ್ಯವಾದ ಕೆಲಸದಲ್ಲಿ ಮುಳುಗಿರುವಾಗಲೇ ಕಿರಿಕಿರಿ ತಲೆದೋರುವ ಸಾಧ್ಯತೆ ಜಾಸ್ತಿ. ಶ್ರೀ ತಿಪುರ ಭೈರವಿಯನ್ನು ಸ್ತುತಿಸಿ.
ಶುಭ ಸಂಖ್ಯೆ : 1 ಶುಭ ದಿಕ್ಕು: ಉತ್ತರ

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಮಕರ: ಸಾಲದ ಬಗ್ಗೆ ಎಚ್ಚರವಿರಲಿ

Weekly Horoscope

ಆರ್ಥಿಕ ವಿಚಾರ ತುಸುವಾದರೂ ನಿರ್ಲಕ್ಷಕ್ಕೆ ತುತ್ತಾಗದಿರಲಿ. ಸಾಲದ ಬಗ್ಗೆ ಎಚ್ಚರ. ಸಾಲವನ್ನು ಕೊಡುವುದರ ಬಗೆಗೂ ಎಚ್ಚರ. ಹಣದ ವಿಚಾರ ಬೆಂಕಿ ಉಗುಳಿ ಮನದ ಶಾಂತಿಯನ್ನು ಬೆಂದು ಬೇಯಿಸುವ ಸಮಯ ಇದು ಎಚ್ಚರ. ʻʻನಾನು…ನಾನು… ʼʼ ಎಂಬ ಆತ್ಮ ಪ್ರತಿಷ್ಠೆ ಬೇಡ. ಹಲವಾರು ಉನ್ನತ ವಿಚಾರಗಳನ್ನು ಇದು ಹಾಳು ಮಾಡಬಹುದು. ನಿಮ್ಮ ಸಹಾಯ ಪಡೆದವರೇ ಕ್ಷುಲ್ಲಕವಾಗಿ ವರ್ತಿಸುವ ಸಂದರ್ಭ ನೋಡುವಂತೆ ಆಗಬಹುದು. ʻಕಾಲಾಯ ತಸ್ಮೈ ನಮಃʼ ಎಂದು ಸುಮ್ಮನಿರಿ. ರಾಮ ರಕ್ಷಾ ಸ್ತೋತ್ರ ಓದಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ಆಗ್ನೇಯ

ಕುಂಭ: ಆತ್ಮವಿಶ್ವಾಸದಿಂದಲೇ ಯಶಸ್ಸು

Weekly Horoscope

ವರ್ಚಸ್ಸಿಗೆ ಧಕ್ಕೆ. ಚುನಾವಣೆಯ ವಿಚಾರದಲ್ಲಿ ಆಸ್ಥೆ ತಳೆದವರು ಅನೇಕ ಇಕ್ಕಟ್ಟು, ಬಿಕ್ಕಟ್ಟು ಕೇವಲವಾದ ಜನರ ಚುಚ್ಚು ಮಾತುಗಳು ಬೆನ್ನಟ್ಟಿ ಬರಬಹುದು. ತೂಕವಿಲ್ಲದ ಜನರಿಂದ ಆಚಾರ ಕೇಳಿಸಿಕೊಳ್ಳುವ ಪ್ರಮೇಯ ಎದುರಾದೀತು. ಸಂಕಲ್ಪ, ಸ್ಥೈರ್ಯ ಮನ, ಮನಸ್ಸಿನ ನಿಕ್ಷೇಪವಾಗಲಿ. ಆತ್ಮ ವಿಶ್ವಾಸವಿರಲಿ. ನಿಮ್ಮ ಪ್ರತಿಭೆಯನ್ನು ತೋರಿ ಸರ್ರನೆ ಅಲ್ಪರ ನೆರವಿಗೆ ಒದಗುವಂತೆ ಮಾಡಿಕೊಳ್ಳಬೇಡಿ. ಬೆರಳು ಕೊಟ್ಟರೆ ಹಸ್ತ ನುಂಗುವ ಜನರೇ ಸಿಗುತ್ತಾರೆ. ಹನುಮಾನ್‌ ಚಾಲೀಸಾ ಓದಿರಿ.
ಶುಭ ಸಂಖ್ಯೆ : 4 ಶುಭ ದಿಕ್ಕು: ದಕ್ಷಿಣ

ಮೀನ: ತಾಳ್ಮೆ ಸಮಾಧಾನ ನಿಮ್ಮಲ್ಲಿರಲಿ

Weekly Horoscope

ಬೆನ್ನು ಹತ್ತಿದ ಸಾಡೇಸಾತಿ ದಿನಗಳು. ಕುಜನು ಬಲಾಢ್ಯನಾಗಿ ಧನ ಲಾಭದ ವಿಚಾರವಾಗಿ ತುಸು ಬೆಂಬಲ ಕೊಡುವುದು ಸತ್ಯವಾದರೂ ರಾಹುವು ಹಣಕ್ಕೆ ಸಂಚಕಾರ ತರುವ ಕಾಲಘಟ್ಟವಿದು. ಆರೋಗ್ಯದ ಸಂಬಂಧ ಏಕದಂತನನ್ನು ಆರಾಧಿಸಿ. ಶಿವನಿಗೆ ಬಿಲ್ಪಪತ್ರೆ ಏರಿಸಿ, ಮೃತ್ಯುಂಜಯ ಮಂತ್ರ ಪಠಿಸಿ. ದೇವಿಯ ಆರಾಧನೆಯಿಂದಲೂ ಮಾನಸಿಕ ಸಮಾಧಾನ ಸಿಗಲಿದೆ. ಒಟ್ಟಿನಲ್ಲಿ ತಾಳ್ಮೆ ಸಮಾಧಾನ ಮತ್ತು ಬಿಸಿಲ ಬೇಗೆಗೆ ನೆರಳನ್ನು ಉಪಾಯದಿಂದ ಸಾಧಿಸಿಕೊಳ್ಳಿ. ಮಾರುತಿಯನ್ನು ಸ್ತುತಿಸಿ.
ಶುಭ ಸಂಖ್ಯೆ : 3 ಶುಭ ದಿಕ್ಕು: ಪಶ್ಚಿಮ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ : Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mohan Bhagwat: ಎರಡು ಸುತ್ತಿನ ರಹಸ್ಯ ಸಭೆ ನಡೆಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್-ಯೋಗಿ ಆದಿತ್ಯನಾಥ್‌

Mohan Bhagwat: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಮೋಹನ್ ಭಾಗವತ್ ಅವರು ಶನಿವಾರ ಎರಡು ಗೌಪ್ಯ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಆದಿತ್ಯನಾಥ್ ಶನಿವಾರ ಮಧ್ಯಾಹ್ನ ಭಾಗವತ್ ಅವರನ್ನು ಮೊದಲು ಕ್ಯಾಂಪಿಯರ್ಗಂಜ್‌ನ ಶಾಲೆಯಲ್ಲಿ ಭೇಟಿಯಾದರು. ಅಲ್ಲಿ ಇಬ್ಬರು ನಾಯಕರು ಸಭೆ ನಡೆಸಿದರು ಮತ್ತು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಈ ನಾಯಕರು ಮತ್ತೊಂದು ಸುತ್ತಿನ ಮಾತಿಕತೆಗಾಗಿ ರಾತ್ರಿ 8:30ರ ಸುಮಾರಿಗೆ ನಗರದ ಪಕ್ಕಿಬಾಗ್‌ನ ಸರಸ್ವತಿ ಶಿಶು ಮಂದಿರಕ್ಕೆ ಭೇಟಿ ನೀಡಿದರು ಎಂದು ವರದಿಯೊಂದು ತಿಳಿಸಿದೆ.

VISTARANEWS.COM


on

Mohan Bhagwat
Koo

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ (Loksabha Election 2024) ಬಿಜೆಪಿ (BJP) ಸ್ಪಷ್ಟ ಬಹುಮತದ ಕೊರತೆಯನ್ನು ಅನುಭವಿಸಿದ ಅನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸೇರಿದಂತೆ ಕೆಲವು ನಾಯಕರು ನೀಡಿರುವ ಹೇಳಿಕೆಗಳು ದೇಶಾದ್ಯಂತ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಮತ್ತು ಮೋಹನ್ ಭಾಗವತ್ ಅವರು ಶನಿವಾರ ಎರಡು ಗೌಪ್ಯ ಸಭೆ (Closed-door meetings) ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಸಭೆ ತಲಾ ಅರ್ಧ ಗಂಟೆಗಳ ಕಾಲ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಗೋರಖ್ಪುರದಲ್ಲಿ ಗುರುವಾರ ಪ್ರಾರಂಭವಾದ ನಾಲ್ಕು ದಿನಗಳ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೋಹನ್ ಭಾಗವತ್ ಅಲ್ಲೇ ತಂಗಿದ್ದಾರೆ. ಆದಿತ್ಯನಾಥ್ ಶನಿವಾರ ಮಧ್ಯಾಹ್ನ ಭಾಗವತ್ ಅವರನ್ನು ಮೊದಲು ಕ್ಯಾಂಪಿಯರ್ಗಂಜ್‌ನ ಶಾಲೆಯಲ್ಲಿ ಭೇಟಿಯಾದರು. ಅಲ್ಲಿ ಇಬ್ಬರು ನಾಯಕರು ಸಭೆ ನಡೆಸಿದರು ಮತ್ತು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಈ ನಾಯಕರು ಮತ್ತೊಂದು ಸುತ್ತಿನ ಮಾತಿಕತೆಗಾಗಿ ರಾತ್ರಿ 8:30ರ ಸುಮಾರಿಗೆ ನಗರದ ಪಕ್ಕಿಬಾಗ್‌ನ ಸರಸ್ವತಿ ಶಿಶು ಮಂದಿರಕ್ಕೆ ಭೇಟಿ ನೀಡಿದರು ಎಂದು ವರದಿಯೊಂದು ತಿಳಿಸಿದೆ.

ಭೇಟಿಯ ಉದ್ದೇಶವೇನು?

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರದೇ ಇರುವ ಹಿನ್ನೆಲೆಯಲ್ಲಿ ಭಾಗವತ್ ಅವರ ಗೋರಖ್ಪುರ ಪ್ರವಾಸವು ಮಹತ್ವ ಪಡೆದಿದೆ. ಇದು ವಾಡಿಕೆಯ ಭೇಟಿ ಅಲ್ಲ ಎಂದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. “ಉತ್ತರಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ ತೋರಿದೆ. ಈ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿರುವ ಸಾಧ್ಯತೆ ಇದೆʼʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶದಲ್ಲಿ ಬರೋಬ್ಬರಿ 80 ಲೋಕಸಭಾ ಕ್ಷೇತ್ರಗಳಿದ್ದು 2014ರಲ್ಲಿ ಬಿಜೆಪಿ 71 ಮತ್ತು 2019ರಲ್ಲಿ 62 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಕೇವಲ 33 ಸ್ಥಾನಗಳಿಗೆ ಸೀಮಿತವಾಗಿದೆ. ಇತ್ತ ಪ್ರತಿಪಕ್ಷಗಳ ಇಂಡಿ ಮೈತ್ರಿಕೂಟ ಇಲ್ಲಿ ಜಾದೂ ಮಾಡಿ 43 ಕಡೆ ಗೆಲುವಿನ ನಗೆ ಬೀರಿದೆ. ಆ ಪೈಕಿ ಸಮಾಜವಾದಿ ಪಾರ್ಟಿ 37 ಕಡೆ ಮತ್ತು ಕಾಂಗ್ರೆಸ್‌ 6 ಕಡೆ ಗೆದ್ದಿದೆ. ಈ ಎಲ್ಲ ವಿಚಾರಗಳನ್ನು ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಅದರಲ್ಲಿಯೂ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋತಿರುವುದು ಪಕ್ಷಕ್ಕೆ ಆಘಾತ ತಂದಿತ್ತಿದೆ. ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರನ್ನು ಎಸ್‌ಪಿಯ ಅವಧೇಶ್ ಪ್ರಸಾದ್ ಸೋಲಿಸಿದ್ದು, ಈ ಬಗ್ಗೆ ಬಿಜೆಪಿ ತಲೆಕೆಡಿಸಿಕೊಂಡಿದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

ಮೂಲಗಳ ಪ್ರಕಾರ ಭಾಗವತ್ ಬುಧವಾರ ಗೋರಖ್ಪುರಕ್ಕೆ ತಲುಪಿದ ನಂತರ, ಸ್ಥಳೀಯ ಆರ್‌ಎಸ್‌ಎಸ್‌ ಪದಾಧಿಕಾರಿಗಳೊಂದಿಗೆ ಅನೇಕ ಸುತ್ತಿನ ಸಭೆಗಳನ್ನು ನಡೆಸಿ ಚುನಾವಣೆ ಫಲಿತಾಂಶದ ಬಗ್ಗೆ ಅವರಿಂದ ವರದಿಗಳನ್ನು ಪಡೆದಿದ್ದಾರೆ. ಸೋಲಿನ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಉಭಯ ನಾಯಕರ ಗೌಪ್ಯ ಮಾತುಕತೆ ಕುತೂಹಲ ಮೂಡಿಸಿದೆ.

Continue Reading

ಕರ್ನಾಟಕ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Actor Darshan: ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Continue Reading

Latest

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral News: ಕ್ರೀಂ, ಲೋಷನ್ ಹಚ್ಚಿ ಫೇಸ್ ಮಸಾಜ್ ಮಾಡುವುದರ ಬಗ್ಗೆ ಕೇಳಿರುತ್ತೀರಿ. ಆದರೆ ಉತ್ತರಪ್ರದೇಶದ ಈ ಮುಸ್ಲಿಂ ಕ್ಷೌರಿಕ ತನ್ನ ಬಳಿ ಫೇಸ್ ಮಸಾಜ್ ಮಾಡಿಸಿಕೊಳ್ಳಲು ಬಂದ ಯುವಕನ ಮುಖಕ್ಕೆ ಎಂಜಲು ಹಚ್ಚಿ ಮಸಾಜ್ ಮಾಡಿದ್ದಾನೆ, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

VISTARANEWS.COM


on

Viral News
Koo

ಹುಡುಗಿಯರ ಹಾಗೇ ಹುಡುಗರಿಗೂ ಸುಂದರವಾಗಿ ಕಾಣಬೇಕೆಂಬ ಆಸೆ ಇರುತ್ತದೆ. ಹಾಗಾಗಿ ಹುಡುಗಿಯರು ಬ್ಯೂಟಿ ಪಾರ್ಲರ್ ನಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಂಡ ಹಾಗೆ ಹುಡುಗರು ಕ್ಷೌರದ ಅಂಗಡಿಯಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬ ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿ ಅವಾಂತರ ಮಾಡಿಕೊಂಡ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಫೇಸ್‌ ಮಸಾಜ್‌ ಮಾಡಿಕೊಂಡರೆ ಮುಖದಲ್ಲಿ ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ದಣಿದ ಮುಖಕ್ಕೆ ರಿಲೀಫ್‌ ಆಗುತ್ತೆ ಎಂದು ಕೆಲವರು ದುಡ್ಡು ಸುರಿದು ಮಸಾಜ್‌ ಮಾಡಿಕೊಳ್ಳುತ್ತಾರೆ. ಹೀಗೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿನ ಕ್ಷೌರದಂಗಡಿಗೆ ವ್ಯಕ್ತಿಯೊಬ್ಬ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿದ್ದಾನೆ. ಆದರೆ ಕ್ಷೌರದಂಗಡಿಯವನು ಕ್ರೀಂ, ಲೋಷನ್‌ಗಳನ್ನು ಹಚ್ಚಿ ಮುಖಕ್ಕೆ ಮಸಾಜ್‌ ಮಾಡುವುದರ ಬದಲು ಎಂಜಲು ಉಗಿದು ಮಸಾಜ್‌ ಮಾಡಿದ್ದಾನಂತೆ. . ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರೋಪಿ ಅಮ್ಜದ್ ಎಂಬುದಾಗಿ ತಿಳಿದುಬಂದಿದೆ. @TruestoryUP ಎಂಬ ಹೆಸರಿನ ಖಾತೆಯಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಈತನ ಘೋರ ಕೃತ್ಯದ ದೃಶ್ಯ ವೈರಲ್ ಆಗಿದ್ದು, ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

ಜೂನ್ 8ರಂದು ಈ ವಿಡಿಯೊ ಹಂಚಿಕೊಂಡಿದ್ದು, ಇದನ್ನು16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಮತ್ತು ಈತನ ಕೃತ್ಯದ ವಿರುದ್ಧ ವೀಕ್ಷಕರು ಪ್ರತಿಕ್ರಿಯೆ ನೀಡಿದ್ದಾರೆ.

Continue Reading

Latest

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Viral Video: ವಾಕಿಂಗ್ ಮಾಡಿದರೆ ದೇಹದ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ.ನಗರದ ಮಂದಿ ವಾಕಿಂಗ್‌ಗೆ ತಾವು ಪ್ರೀತಿಯಿಂದ ಸಾಕಿದ ನಾಯಿಯನ್ನು ಕೂಡ ಕರೆದುಕೊಂಡು ಹೋಗುವುದು ನಾವು ಕಂಡಿರುತ್ತೇವೆ. ಇಂತಹ ಸಾಕು ಪ್ರಾಣಿಯ ಜೊತೆ ಎಲ್ಲರೂ ವಾಕಿಂಗ್ ಹೋಗುತ್ತಾರೆ. ಆದರೆ ದುಬೈನ ಈ ಬೆಡಗಿ ಮಾತ್ರ ಮನುಷ್ಯರು ಬೆಚ್ಚಿಬೀಳುವ ಹುಲಿಯ ಜೊತೆ ಪಾರ್ಕ್‌ನಲ್ಲಿ ವಾಕಿಂಗ್ ಮಾಡಿದರೆ ನೋಡಿದವರ ಎದೆ ಝಲ್ ಎನ್ನದೆ ಇರುತ್ತಾ ಹೇಳಿ!

VISTARANEWS.COM


on

Viral Video
Koo

ಹುಲಿ ಎಂದರೆ ಎಲ್ಲರೂ ಭಯಭೀತರಾಗುತ್ತಾರೆ. ಯಾಕೆಂದರೆ ಹುಲಿ ತನ್ನ ಆಹಾರಕ್ಕಾಗಿ ಪ್ರಾಣಿಗಳು ಮಾತ್ರವಲ್ಲ ಮನುಷ್ಯರನ್ನೂ ಕೊಂದು ತಿನ್ನುತ್ತದೆ. ಹಾಗಾಗಿ ಹುಲಿಯನ್ನು ಎದುರು ನೋಡುವುದು ಬೇಡ ದೂರದಲ್ಲಿ ಅದರ ಗರ್ಜನೆ ಕೇಳಿದರೂ ಸಾಕು ಎಲ್ಲರೂ ದಿಕ್ಕಾಪಾಲಾಗಿ ಓಡುತ್ತಾರೆ. ಅಂತಹದರಲ್ಲಿ ದುಬೈನಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗಾಗಿ ಹುಲಿಯೊಂದಿಗೆ ನಡೆದುಕೊಂಡು ಬಂದರೆ ಅಲ್ಲಿದ್ದವರ ಪರಿಸ್ಥಿತಿ ಹೇಗಿರಬೇಡ ಹೇಳಿ. ಈ ಮಹಿಳೆ ಹುಲಿ ಜೊತೆ ನಡೆದುಕೊಂಡು ಬರುವ ದೃಶ್ಯ ಎಲ್ಲರಲ್ಲೂ ಭಯವನ್ನು ಹುಟ್ಟಿಸಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್ (Viral Video) ಆಗಿದೆ.

ನಾಯಿ ಕುತ್ತಿಗೆಗೆ ಚೈನ್‌ ಕಟ್ಟಿಕೊಂಡು ವಾಕಿಂಗ್‌ಗೆ ಹೋಗುವವರು ನಿಮಗೆ ರಸ್ತೆಯಲ್ಲಿ ನೂರಾರು ಜನರು ಸಿಗುತ್ತಾರೆ. ಆದರೆ ದುಬೈಯಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗೆ ಬರುವಾಗ ಕಾಡಿನಲ್ಲಿರಬೇಕಾದ ಹುಲಿಯನ್ನು ತನ್ನ ಜೊತೆ ಕರೆದುಕೊಂಡು ಬಂದರೆ ಹೇಗಿರಬೇಡ ಹೇಳಿ. ಹುಲಿಯ ಕುತ್ತಿಗೆಗೆ ಸರಪಳಿಯನ್ನು ಕಟ್ಟಿ ನಾಯಿಯಂತೆ ಕರೆದುಕೊಂಡು ಬರುತ್ತಿರುವ ಈಕೆಯ ಧೈರ್ಯ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದಾರೆ. ಹುಲಿಯ ಜೊತೆ ವಾಕಿಂಗ್‌ಗೆ ಹೋಗುವುದನ್ನು ವಿಡಿಯೊ ಮಾಡಿ “ ನನ್ನ ಮುದ್ದಿನ ಹುಲಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದೇನೆ “ ಎಂದು ಶೀರ್ಷಿಕೆ ಬರೆದು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾಳೆ.

ಇವಳ್ಯಾರು ಎಂಬ ಕುತೂಹಲ ನಿಮಗೂ ಆಗಿರಬಹುದು ಅಲ್ವಾ…?ಈಕೆ ಇನ್ ಸ್ಟಾಗ್ರಾಂ, ಟಿಕ್ ಟಾಕ್ ಮತ್ತು ಯೂಟ್ಯೂಬ್ ನಲ್ಲಿ ಜಪ್ರಿಯರಾಗಿದ್ದ ನಾಡಿಯಾ ಖಾರ್ ಎನ್ನಲಾಗಿದೆ. ಈಕೆ ಫ್ಯಾಷನ್ ವಿಷಯಕ್ಕೆ ಹೆಸರುವಾಸಿಯಾಗಿದ್ದಾಳೆ. ಆಗಾಗ ಐಷರಾಮಿ ಕಾರುಗಳು, ವ್ಲಾಗ್ ಗಳು ಮತ್ತು ಕಿರು ವಿಡಿಯೊಗಳನ್ನು ಪ್ರದರ್ಶಿಸುತ್ತಿರುತ್ತಾಳೆ. ಇದೀಗ ಅವಳು ದುಬೈನಲ್ಲಿ ಹುಲಿಯ ಜೊತೆಗೆ ನಡೆದುಕೊಂಡು ಬರುತ್ತಿರುವ ವಿಡಿಯೊ ಪೋಸ್ಟ್ ಮಾಡಿದ್ದಾಳೆ. ವಿಡಿಯೊದಲ್ಲಿ ಅವಳು ಮೃಗಾಲಯದ ಒಳಗೆ ಮತ್ತು ದುಬೈನ ಸಾರ್ವಜನಿಕ ಉದ್ಯಾನವನದಲ್ಲಿ ಹುಲಿಯೊಂದಿಗೆ ನಡೆಯುತ್ತಿರುವ ವಿಡಿಯೊ ವೈರಲ್ ಆಗಿದೆ. ಇದಕ್ಕೆ 6 ಮಿಲಿಯನ್ ವೀಕ್ಷಣೆ ಮತ್ತು 100000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

ಹಾಗೇ ಈ ವಿಡಿಯೊಗೆ ಹೆಚ್ಚಿನ ಪ್ರತಿಕ್ರಿಯೆ ಬಂದಿದ್ದು, ಕೆಲವರು ಹುಲಿಯನ್ನು ನಾಯಿಯಂತೆ ಸಾಕಿಕೊಂಡಿರುವುದಕ್ಕೆ ಆಕೆಯ ಕೃತ್ಯವನ್ನು ಟೀಕಿಸಿದರೆ, ಕೆಲವರು ಅದನ್ನು ಕಂಡು ಆಶ್ಚರ್ಯಚಕಿತರಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೊಬ್ಬರು “ಪ್ರಾಣಿಗಳ ಕ್ರೌರ್ಯವನ್ನು ಕ್ಷಮಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

ದುಬೈಯಲ್ಲಿ ಕ್ರೂರ ಪ್ರಾಣಿಗಳನ್ನು ಸಾಕು ಪ್ರಾಣಿಗಳಂತೆ ಸಾಕುತ್ತಾರೆ. ಇಲ್ಲಿ ಹುಲಿ, ಸಿಂಹ, ಕರಡಿಗಳಂತಹ ನರಭಕ್ಷಕ ಪ್ರಾಣಿಗಳನ್ನು ಪಳಗಿಸಿ ಖಾಸಗಿ ಮೃಗಾಲಯದಲ್ಲಿ ಸಾಕುತ್ತಾರೆ. ಅದರ ಜೊತೆಗೆ ಕೋತಿ ಮತ್ತು ಜಿರಾಫೆಗಳಂತಹ ಪ್ರಾಣಿಗಳಿಗೂ ವಸತಿ ನೀಡುತ್ತಾರೆ. ಇದು ಅವರಿಗೆ ಪ್ರಾಣಿಗಳ ಮೇಲಿದ್ದ ಕಾಳಜಿಯನ್ನು ತೋರಿಸುತ್ತದೆ.

ಈಗ ಸೋಷಿಯಲ್‌ ಮೀಡಿಯಾದ್ದೇ ಹವಾ. ತಿಂದಿದ್ದು, ಕುಡಿದಿದ್ದು, ಹೆತ್ತಿದ್ದು ಎಲ್ಲವನ್ನೂ ಇದರಲ್ಲಿ ಹಾಕುತ್ತಾರೆ. ಆ ದೇಶದಲ್ಲಿ ಬೆಡಗಿಯೊಬ್ಬಳು ಹಸಿ ಹಾವನ್ನೇ ತಟ್ಟೆಯಲ್ಲಿಟ್ಟುಕೊಂಡು ತಿಂದರೆ, ಮತ್ತೊಬ್ಬಳು ಹರೆಯದ ಹುಡುಗಿ ಅಜ್ಜನನ್ನೇ ಪ್ರೀತಿಸಿ ಮದುವೆಯಾದಳು. ಈಗ ಲೈಕ್ಸ್‌, ಕಾಮೆಂಟ್‌ಗಳಿಗಾಗಿ ಏನು ಬೇಕಾದರೂ ಮಾಡುವುದಕ್ಕೆ ಸೈ ಅನ್ನುವ ಹಂತದಲ್ಲಿ ನಾವಿದ್ದೇವೆ.

Continue Reading
Advertisement
Mohan Bhagwat
ದೇಶ17 seconds ago

Mohan Bhagwat: ಎರಡು ಸುತ್ತಿನ ರಹಸ್ಯ ಸಭೆ ನಡೆಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್-ಯೋಗಿ ಆದಿತ್ಯನಾಥ್‌

Actor Darshan
ಕರ್ನಾಟಕ28 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Apple With sticker
Latest40 mins ago

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Viral News
Latest40 mins ago

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral Video
Latest52 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest56 mins ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ1 hour ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ1 hour ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ18 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌