Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಈ ವಾರ ಅಂದರೆ ಫೆಬ್ರವರಿ 12 ರಿಂದ 18 ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಷ: ನಿಮಗೆ ರವಿ ಗ್ರಹದ ದಿವ್ಯ ಬೆಂಬಲ

Weekly Horoscope

ಯಾವುದೋ ಅಡೆತಡೆಗಳಿಗೂ ತಲೆ ಕೆಡಿಸಿಕೊಳ್ಳದ ಹಾಗೆ ರಾಶಿಯ ಅಧಿಪತಿ ಕುಜನು ಅರಿಷ್ಟದ ಕಿಲುಬನ್ನೆಲ್ಲ ನಿವಾರಿಸುವ ಚೈತನ್ಯ ನೀಡುತ್ತಾನೆ. ಮಕ್ಕಳ ಬಗೆಗೆ ಗಮನವಿರಲಿ. ಸುಖದ ವಿಚಾರದಲ್ಲಿ ಈ ವಾರ ಅದೃಷ್ಟದಿಂದಲೇ ನಿಮ್ಮ ಸಂಪನ್ನತೆ ದೊರಕುತ್ತದೆ. ಆದರೆ ನಿಮ್ಮ ವಿರುದ್ಧ ಕತ್ತಿ ಮಸೆಯುವ ವಿರೋಧಿಗಳು ಮಕ್ಕಳ ಮೂಲಕ ಕೆಟ್ಟ ಹೆಸರು ತರಲು ಎಲ್ಲ ರೀತಿಯ ಪ್ರಯತ್ನ ನಡೆಸಬಹುದಾಗಿದೆ, ಎಚ್ಚರವಿರಲಿ. ರಾಜಕೀಯದಲ್ಲಿ ಅದರಲ್ಲೂ ಹೊಸದೇ ಆದ ಸ್ಥಾನಮಾನ ಪಡೆಯುವಲ್ಲಿ ರವಿ ಗ್ರಹದ ದಿವ್ಯ ಬೆಂಬಲವಿದೆ. ಶ್ರೀ ನರಸಿಂಹನನ್ನು ಆರಾಧಿಸಿ.
ಶುಭ ಸಂಖ್ಯೆ: 6 ಶುಭ ದಿಕ್ಕು: ವಾಯವ್ಯ

ವೃಷಭ: ಪ್ರಮೋಷನ್‌ ವಿಳಂಬವಾಗಬಹುದು!

Weekly Horoscope

ದೋಷಮಯನಾದ ಕುಜನು ಮನಸ್ಸಿನ ಶಾಂತಿಯನ್ನು ಹಾಳು ಮಾಡಬಹುದು. ಕೆಟ್ಟ ಹೆಸರು ತರುವ ಯಾವುದೇ ರೀತಿಯ ಅತಿರೇಕಗಳಿಗೆ ಹೆಜ್ಜೆ ಇರಿಸದಿರಿ. ಹೀಗೆ ಎಚ್ಚರದ ಹೆಜ್ಜೆ ಇರಿಸುವಿರಾದರೆ ನಿಮ್ಮ ಬೌದ್ಧಿಕ ಕ್ರಿಯಾಶೀಲತೆಯಿಂದ ಅನೇಕ ರೀತಿಯ ಯಶಸ್ಸು ಸಂಪಾದಿಸುವಿರಿ. ಕೆಲಸದ ಸ್ಥಳದಲ್ಲಿ ಒತ್ತಡ ಇದ್ದೇ ಇದೆ. ನಿಶ್ಚಿತವಾದ ಪ್ರಮೋಷನ್‌ ಸಿಗಬೇಕಾದದ್ದು ತುಸು ವಿಳಂಬವಾಗುವಂತೆ ಮುಂದೂಡಲ್ಪಡುವ ಸಾಧ್ಯತೆಗಳು ಜಾಸ್ತಿಯಾಗಿದೆ. ಭೂಮಿಯ ವಿಷಯದಲ್ಲಿ ಮಹತ್ವದ ಬೆಳವಣಿಗೆ ಇದೆ. ಶಿವನನ್ನು ಆರಾಧಿಸಿ, ಗೆಲುವಿದೆ.
ಶುಭ ಸಂಖ್ಯೆ : 8 ಶುಭ ದಿಕ್ಕು: ನೈಋತ್ಯ

ಮಿಥುನ: ಹಣಕಾಸಿನ ವಿಚಾರದಲ್ಲಿ ಸಮಸ್ಯೆಗಳಿಲ್ಲ

Weekly Horoscope

ಆರೋಗ್ಯದ ಬಗೆಗೆ ಎಚ್ಚರ ಇರಲಿ. ಹಣಕಾಸಿನ ವಿಚಾರ ಸಮಸ್ಯೆ ತರಲಾರದು. ಮಕ್ಕಳ ವಿಷಯದಲಲಿ ತುಸು ಕಿರಿಕಿರಿ ಇರಬಹುದಾಗಿದೆ. ತಾಯಿ ರಾಜರಾಜೇಶ್ವರಿಯನ್ನು ಸ್ತುತಿಸಿ ಈ ದುಗಡಗಳಿಗೆ ತಡೆ ತನ್ನಿ. ನಿಮ್ಮ ಮನೆಯ ಜೀರ್ಣೋದ್ಧಾರ ಅಥವಾ ಏನೇ ಮರು ನಿರ್ಮಾಣದ ವಿಷಯಗಳ ಬಗ್ಗೆ ಯೋಚನೆ ಇಟ್ಟುಕೊಂಡಿದ್ದರೆ ಸೂಕ್ತವಾದ ಯೋಜನೆಗಳನ್ನು ನಿಖರವಾಗಿ ರೂಪಿಸಿಕೊಂಡು ಮುಂದಡಿ ಇಡಿ. ಸಿನಿಮಾ ತಯಾರಿಕೆ ಅಥವಾ ಡಿಸ್ಟ್ರಿಬ್ಯುಷನ್‌ ವಿಷಯಗಳಲ್ಲಿ ತೊಡಗಿಸಿಕೊಂಡವರಿಗೆ ಸರಳವಾದ ಹೆಜ್ಜೆಗಳಿಂದಲೇ ಲಾಭವಿದೆ. ಮಹಾಲಕ್ಷ್ಮೀಯನ್ನು ಸ್ತುತಿಸಿ.
ಶುಭ ಸಂಖ್ಯೆ : 1 ಶುಭ ದಿಕ್ಕು: ಉತ್ತರ

ಕಟಕ: ಆರ್ಥಿಕ ವಿಚಾರದಲ್ಲಿ ಎಚ್ಚರಿಕೆ ಇರಲಿ

Weekly Horoscope

ಚಂದ್ರನು ತತ್ತರಿಸಿದ ಸಂದರ್ಭ ಇದಾಗಿದೆ. ನಿರಂತರವಾದ ಸಂಘರ್ಷ ಶನೈಶ್ವರನ ಜತೆಯಲ್ಲಿ ಕೊಂಡಿಕೂಡಿಸಿಕೊಂಡ ಚಂದ್ರನಿಂದಾಗಿ ಆರೋಗ್ಯ, ಲವಲವಿಕೆ, ಉತ್ಸಾಹಗಳೆಲ್ಲ ಕೈಗೂಡುವ ಸಾಧ್ಯತೆಗಳು ಅಧಿಕ. ಇಂದ್ರಿಯ ನಿಗ್ರಹ ಶಕ್ತಿ ಪ್ರದಾಯಕ ಮಾರುತಿಯನ್ನು ಆರಾಧಿಸಿ. ಆರ್ಥಿಕ ವಿಚಾರಗಳಲ್ಲಿ ಎಚ್ಚರ ಬೇಕೇಬೇಕು. ಕೊಡುವ ಯಾ ಪಡೆಯುವ ಹಣದ ವಿಚಾರ ಬಿಕ್ಕಟ್ಟುಗಳನ್ನು ಸೃಷ್ಟಿಸುವ ದಿನಗಳು ಇವು, ಜಾಗೃತವಾಗಿರಿ. ಬಾಳ ಸಂಗಾತಿಯ ವಿಚಾರದಲ್ಲಿ ಶಾಂತತೆಯಿಂದ ಇರಿ, ಜಗಳ ಬೇಡ. ರಾಮರಕ್ಷಾ ಸ್ತ್ರೋತ್ರ ಓದಿ.
ಶುಭ ಸಂಖ್ಯೆ : 4 ಶುಭ ದಿಕ್ಕು: ಈಶಾನ್ಯ

ಸಿಂಹ: ನೀವಂದುಕೊಂಡಿದ್ದನ್ನು ಸಾಧಿಸಬಹುದು

Weekly Horoscope

ಗಣಪತಿಯ ಆಶೀರ್ವಾದವನ್ನು ಹೊಂದಿದ್ದೀರಿ. ನಿರ್ವಿಘ್ನವಾಗಿ ಕೆಲಸ ಕಾರ್ಯಗಳನ್ನು ನೆರವೇರಿಸುವ ಸೌಭಾಗ್ಯ ನಿಮ್ಮದಾಗಿದೆ. ಸೂರ್ಯನು ಶನೈಶ್ವರನ ಹಿಡಿತದಲ್ಲಿ ಬಂಧಿ ಎಂಬುದು ಕಾರಣವಾಗಿ, ಕೆಲವು ಸಲ ನಿಮ್ಮ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳು ಇವೆ. ತಾರುಣ್ಯದ ಬಿಸಿ ರಕ್ತದ ಜನ ಬೇಕಾಬಿಟ್ಟಿಯಾಗಿ ಹೆಜ್ಜೆ ಇಡಲು ಮುಂದಾಗದಿರಿ. ವಿವಾಹದ ಬಗೆಗಾಗಿನ ದಾರಿ, ದಾಂಪತ್ಯದ ದಾರಿ ಚೆಲ್ಲಾಪಿಲ್ಲಿ ಆದೀತು. ಕೆಲಸದ ಸ್ಥಳದಲ್ಲಿ ಪ್ರಮೋಷನ್‌ ಅಥವಾ ಕೆಲಸದ ಬದಲಾವಣೆಯಿಂದಾಗಿ ಸಂಬಳ ಏರಿಕೆಯಾಗಲು ಉತ್ತಮ ಅವಕಾಶಗಳಿವೆ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪೂರ್ವ

ಕನ್ಯಾ: ಶಾರದಾಂಬೆಯ ಬೆಂಬಲ ನಿಮಗಿದೆ

Weekly Horoscope

ಮಾತಿನ ಮೇಲೆ ಹಿಡಿತವಿರಲಿ. ಅನಾವಶ್ಯಕವಾದ ಘರ್ಷಣೆಗೆ ಅವಕಾಶ ಮಾಡಿಕೊಳ್ಳದಿರಿ. ಜಗನ್ಮಾತೆ ಶ್ರೀ ಶೃಂಗೇರಿಯ ಶಾರದಾಂಬೆಯ ಅಭಯ ಹಸ್ತ ನಿಮ್ಮ ಪಾಲಿಗಿದೆ. ಬಿಸಿಲಿನ ದಾರಿಯಿದ್ದರೂ ನಿಮ್ಮ ಮಕ್ಕಳಿಂದ ಬಿಸಿಲಿಗೂ ತಂಪು ಒದಗುವ ಸೌಕರ್ಯ ನಿಮಗೆ ಒದಗಿ ಬರುವ ಬಹು ಒಳಿತಿನ ಸಂದರ್ಭವಾಗಿದೆ ಇದು. ಮಹಾಕಾಳಿಯನ್ನು ಆರಾಧಿಸಿ. ಕಾರಣವಿರದೆ ಎದ್ದೇಳುವ ತಳಮಳ, ಬೇಸರ, ದಿಗಿಲುಗಳೆಲ್ಲ ಕರಿಗಿ ಮನದಲ್ಲಿ ನೆಲೆ ನಿಲ್ಲುವ ಶಾಂತಿ ಸಮಾಧಾನ ನಿಮ್ಮ ಅದೃಷ್ಟವಾಗಿದೆ. ಕಾಳಿಕಾಳನ್ನು ಸ್ತುತಿಸಿ, ಒಳಿತಿದೆ.
ಶುಭ ಸಂಖ್ಯೆ : 1 ಶುಭ ದಿಕ್ಕು: ದಕ್ಷಿಣ

ತುಲಾ: ತೊಳಲಾಟ ತಾಕಲಾಟಗಳ ವಾರ

Weekly Horoscope

ಕೇತು ಗ್ರಸ್ತ ರಾಶಿಯಲ್ಲಿ ಅಸಂಖ್ಯ ತೊಳಲಾಟಗಳನ್ನು ಸೃಷ್ಟಿಸುವ ತಾಕಲಾಟಗಳಿವೆ. ಕೆಲಸದ ಸ್ಥಳದಲ್ಲಿ ಹಲವು ರೀತಿಯ ಬಿಕ್ಕಟ್ಟುಗಳು ನಿಮ್ಮ ವರ್ತಮಾನವಾಗಿ ಎದ್ದೇಳುತ್ತವೆ. ಆದರೂ ಭಾಗ್ಯದಾಯಕ ಬುಧನು ಕೆಲಸದ ಸ್ಥಳದಲ್ಲಿ ನಿಮಗಾಗಿ ಸಹಾಯ ಹಸ್ತ ಚಾಚಿ ಒತ್ತಡಗಳ ನಡುವೆಯೂ ಮಿಂಚಿ ಮೇಲಾಧಿಕಾರಿಗಳ ಪ್ರಶಂಸೆಗೆ ನೀವು ಪ್ರಾಪ್ತರಾಗುತ್ತೀರಿ. ಸಾಲದ ಸುಳಿಯಲ್ಲಿ ಪರಿತಪಿಸುವ ವರ್ತಮಾನವನ್ನು ನಿರ್ಮಿಸಿಕೊಳ್ಳದಿರಿ. ಕಾರಣವಿರದೇ ವ್ಯಾಜ್ಯಗಳಲ್ಲಿ ಸಿಲುಕಿಹಾಕಿಕೊಳ್ಳುವ ಸಾಧ್ಯತೆ ಅಧಿಕ. ಶನೈಶ್ವರ, ಚಂದ್ರ ಪೀಡಾ ನಿವಾರಣಾ ಸ್ತೋತ್ರ ಓದಿದರೆ ಕ್ಷೇಮ.
ಶುಭ ಸಂಖ್ಯೆ : 3 ಶುಭ ದಿಕ್ಕು: ಆಗ್ನೇಯ

ವೃಶ್ಚಿಕ: ಷಣ್ಮುಖನನ್ನು ಆರಾಧಿಸಿದರೆ ಒಳಿತು

Weekly Horoscope

ದಾಂಪತ್ಯದ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಇರಲಿ. ಶಂಖಪಾಲ ಎನ್ನು ವಿಶೇಷ ಸರ್ಪದ ನೆರವಿನಿಂದ ಹಲವು ನಿಗೂಢ ಶಕ್ತಿಗಳನ್ನು ಸಂಪಾದಿಸಿಕೊಳ್ಳುವಿರಿ. ಆದರೆ ಈ ನಿಗೂಢ ಶಕ್ತಿಯ ನೆರವು ನಿಮ್ಮ ಆಧ್ಯಾತ್ಮಿಕ ಕ್ರಿಯಾಶೀಲತೆ ಹಾಗೂ ಚಿಂತನಗಳನ್ನು ಸಂವರ್ಧಿಸುವ ನೆಲೆಯಲ್ಲಿ ಸಹಾಯಕ್ಕೆ ಬರಬಹುದೇ ಹೊರತೂ ಲೌಖಿಕ ಸಂಗತಿಗಳಲ್ಲಿ ವಿಶೇಷ ಬೆಂಬಲಕ್ಕೆ ಒದಗಲಾರದು. ಹಲವು ಯಶಸ್ಸುಗಳಿಗಾಗಿನ ವಿಚಾರದಲ್ಲಿ ಕಾಲದ ನೆರವಿದೆ ಸದ್ಯ. ನಿಮ್ಮ ಆರಾಧ್ಯ ದೈವವನ್ನೂ, ಷಣ್ಮುಖ ದೇವರನ್ನೂ ಸ್ತುತಿಸಿ, ಒಳಿತಿನ ದಾರಿ ತೆರೆಯಲಿದೆ.
ಶುಭ ಸಂಖ್ಯೆ : 9 ಶುಭ ದಿಕ್ಕು: ವಾಯ್ಯವ

ಧನಸ್ಸು: ಶರಣಾಗತಿ ಒಂದೇ ಒಳಿತಿಗೆ ದಾರಿ

Weekly Horoscope

ಸಾಡೇಸಾತಿ ತೊಂದರೆಯಿಂದ ನೀವು ಹೊರ ಬಂದಿದ್ದೀರಿ. ಆದರೆ ಸಮಸ್ಯಾತ್ಮಕವಾದ ರಾಹುವು ನಿಮ್ಮ ಪುಣ್ಯದ ಬಲವನ್ನು ಹೊಸೆದು ಚೆಲ್ಲುತ್ತಿದ್ದಾನೆ. ನಿರೀಕ್ಷಿತವಾದ, ಗುರುತುರ ಯಶಸ್ಸಿನ ದಾರಿಯಲ್ಲಿ ಕೆಂಡದ ಮಳೆದಸುರಿಯಲು ಇದೀಗ ನಿಮ್ಮ ಕನಸು ಬಾಡಬಹುದಾದ ದುಸ್ತರವಾದ ಸ್ಥಿತಿ ಇನ್ನೂ ಚಾಲನೆಯಲ್ಲಿದೆ. ಪ್ರಬಲದವಾದ ನಾರಾಯಣಾಸ್ತ್ರವನ್ನು ಪಾಂಡವರ ವಿರುದ್ಧ ಪ್ರಯೋಗಿಸಿದಾಗ ನಾರಾಯಣ ಧ್ಯಾನವೇ ಅವರನ್ನು ಅಪಾಯದಿಂದ ಪಾರು ಮಾಡಿತಂತೆ. ನೀವೂ ನಾರಾಯಣನನ್ನು ಸ್ತುತಿಸಿ, ಗೆಲ್ಲಿ. ಶರಣಾಗತಿ ಒಂದೇ ಒಳಿತಿಗೆ ದಾರಿ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪಶ್ಚಿಮ

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಮಕರ: ಶಿವ ಶಿವ ಎಂದರೆ ಭಯವಿಲ್ಲ…

Weekly Horoscope

ಸಮುದ್ರ ತೀರದಲ್ಲಿ ಅಥವಾ ಬೆಟ್ಟ ಗುಡ್ಡಗಳಲ್ಲಿರುವ ಪಾವನಮಯ ಶಿವ ಕ್ಷೇತ್ರಗಳ ದೊರೆಯಾದ ಶಿವನನ್ನು ಸ್ತುತಿಸಿ, ತಾಪಸ್ಸಯದಾಯಕನಾದ ಶನೈಶ್ವರನನ್ನು ಒಲಿಸಿಕೊಳ್ಳಿ. ಆರ್ಥಿಕ ಸಿದ್ಧಿಗೆ ಸ್ವತಃ ರಾಶ್ಯಾಧಿಪತಿಯಾದ ಶನೈಶ್ವರನೇ ದಾರಿ ನಿರ್ಮಿಸುವನಾದರೂ ಖರ್ಚಿನ ದಾರಿಗೆ ಅಡಿಗಲ್ಲು ಇಡುವ ಸೂರ್ಯ ನಿಮ್ಮ ಪರಮ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಾನೆ. ಸೂರ್ಯ ಪೀಡಾ ನಿವಾರಣಾ ಸ್ತ್ರೋತ್ರ ಓದಿ. ಗೋದಿ ಕಾಳುಗಳನ್ನು ಹೂ ಗಿಡದ ತಳದಲ್ಲಿ, ಯಾರೂ ತುಳಿಯದ ಜಾಗೆಯಲ್ಲಿ ಚೆಲ್ಲಿ, ಇದರಿಂದ ಒಳಿತಿದೆ.
ಶುಭ ಸಂಖ್ಯೆ : 2 ಶುಭ ದಿಕ್ಕು: ಆಗ್ನೇಯ

ಕುಂಭ: ಮೃದು ಮಾತಿನಿಂದ ಮಾರು ಗೆಲ್ಲಿ!

Weekly Horoscope

ಸಾಡೇಸಾತಿ ಶನಿ ಕಾಟದ ದಟ್ಟ ಕಾರ್ಮೋಡದ ದಿನಗಳು. ಮನದ ಶಾಂತಿಯನ್ನು ಅಲ್ಲೋಲ ಕಲ್ಲೋಲಗೊಳಿಸುವ ಚಂದ್ರ ಬಾಧಕನಾಗಿದ್ದಾನೆ. ಶತ್ರುಗಳ ಕಸುವನ್ನು, ಶಕ್ತಿಯನ್ನು ಸಂವರ್ಧಿಸಿ ನಿಮ್ಮನ್ನು ದುರ್ಬಲವಾಗಿಸುವ ಅತಿರೇಕಗಳಿಗೆ ಕೈ ಹಾಕುತ್ತಾನೆ. ಅದರೆ ಪ್ರಬಲವಾದ ಕಾರ್ಕೋಟಕ ಶಕ್ತಿಯು ಶ್ರೀ ಹರಿಯ ರೂಪದಲ್ಲಿ ನಿಮ್ಮನ್ನು ಕಾಪಾಡುವ ಸಂಜೀವಿನಿಯೂ ಆಗಿರುತ್ತದೆ. ಐಟಿ, ಬಿಟಿ, ಟೆಕ್ಕಿಗಳು ಮಾತಿನ ಮೇಲಿನ ನಿಯಂತ್ರಣ ಸೂಕ್ತವಾಗಿ ಸಾಧಿಸಿ, ಪರಿಣಾಮಕಾರಿಯಾದ ಮಾತುಗಳನ್ನು ಮೃದುವಾಗಿ ಆಡಿದರೆ ಹಲವನ್ನು ಗೆಲ್ಲುವಿರಿ.
ಶುಭ ಸಂಖ್ಯೆ : 3 ಶುಭ ದಿಕ್ಕು: ಪೂರ್ವಾ

ಮೀನ: ನಿಮಗೀಗ ಮಾತೇ ಮಾಣಿಕ್ಯ

Weekly Horoscope

ಬುಧನೇ ಸಂರಕ್ಷಕ ಎಂಬುದನ್ನು ಅರಿತಿರಿ. ಸಾಡೇಸಾತಿ ಕಾಟದಿಂದ ಮನಸ್ಸು ರೋಸಿ ಹೋಗಿ ಇನ್ನಿಲ್ಲದ ತಾಪತ್ರಯಗಳಿಗೆ ದಾರಿ ಮಾಡಿಕೊಳ್ಳದಂತೆ ವಿವೇಕ ಚಾತುರ್ಯ, ಬುದ್ಧಿವಂತಿಕೆ, ತಾಳ್ಮೆಯಿಂದ ಸನ್ನಿವೇಶಗಳನ್ನು ಗೆಲ್ಲಿ. ಬುಧನು ಈ ವಿಚಾರದಲ್ಲಿ ನಿಮಗೆ ಸಹಾಯಕ. ಭಗವಾನ್‌ ಮಹಾವಿಷ್ಣುವನ್ನು ಆರಾಧಿಸಿ. ಅನಂತನೂ, ಶುಭಾಂಗನೂ ಆದ ಮಹಾವಿಷ್ಣುವು ಭಗವತಿಯಾದ ಶ್ರೀ ಲಲಿತೆಯನ್ನು ನಿಮ್ಮ ಸೌಭಾಗ್ಯಕ್ಕಾಗಿ ಪ್ರೇರೇಪಿಸುತ್ತಾನೆ. ಅರ್ಥಿಕ ವಿಚಾರವನ್ನೂ, ನಾಲಿಗೆಯ ಮೇಲಿನ ಹಿಡಿತವನ್ನೂ ಸೂಕ್ತವಾಗಿ ನಿಯಂತ್ರಿಸಿ.
ಶುಭ ಸಂಖ್ಯೆ :5 ಶುಭ ದಿಕ್ಕು: ನೈಋತ್ಯ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ : Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

PM Narendra Modi: ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

PM Narendra Modi Cm Siddaramaiah many questions to PM Modi Challenge for answer
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯ ಪ್ರವಾಸದಲ್ಲಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್‌ ಹಾಗೂ ಕರ್ನಾಟಕ ಸರ್ಕಾರದ (Karnataka Congress Government) ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಏನು?

ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ.

‘’ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ.

ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್‌ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?

ಸಂಪತ್ತಿನ ಸಮಾನ ಹಂಚಿಕೆ ಎಂಬುದು ಉದಾತ್ತ ಚಿಂತನೆ

ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಎಚ್.ಡಿ. ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ನರೇಂದ್ರ ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದೀರಾ?

ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ?

ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆ ಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ?

ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ

ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ?

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿತು. ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಅನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.

ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಯಾರಿಗೆ?

ಪ್ರಧಾನಿ ಮೋದಿಯವರೇ ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಅದಾನಿ – ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

Continue Reading

ಪ್ರಮುಖ ಸುದ್ದಿ

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

Pralhad Joshi: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್​​ಗೆ ಹೋಗೋ ಅವಶ್ಯಕತೆಯಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಅಷ್ಟೇ ಎಂದು ಜೋಶಿ ಆರೋಪಿಸಿದರು.

VISTARANEWS.COM


on

pralhad Joshi
Koo

ಹುಬ್ಬಳ್ಳಿ: ರಾಜ್ಯಕ್ಕೆ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಹಿಂದಿನ ಯುಪಿಎ ಅವಧಿಗಿಂತ ಶೇಕಡಾ 40ರಷ್ಟು ಹೆಚ್ಚುವರಿ ಅನುದಾನ ನೀಡಿದೆ. ಹಾಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಶೇ.51ರಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್​​ಗೆ ಹೋಗೋ ಅವಶ್ಯಕತೆಯಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಅಷ್ಟೇ ಎಂದು ಜೋಶಿ ಆರೋಪಿಸಿದರು.

ಎನ್​ಡಿಎ ಅವಧಿಯಲ್ಲಿ ಶೇಕಡಾ 51ರಷ್ಟು ಅನುದಾನ

ಎನ್​​ಡಿಎ ಅವಧಿಯ 2014ರಿಂದ 23ರವರೆಗೆ ಮೋದಿ ಸರ್ಕಾರ ರಾಜ್ಯಕ್ಕೆ 30,951 ಕೋಟಿ ಬರ ಪರಿಹಾರ ಕೊಟ್ಟಿದೆ. ಎನ್​​ಡಿಆರ್​ಎಫ್​ 11482 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ತಿಳಿಸಿದರು. ಯುಪಿಎ ಅವಧಿ 2009 ರಿಂದ 2013ರವರೆಗೆ 15,541 ಕೋಟಿ ಕೊಟ್ಟಿದ್ದರು. ಒಟ್ಟು 44638 ಕೋಟಿ ಕೇಳಿದ್ದರೆ, ಎನ್​​ಡಿಆರ್​ಎಫ್​ನಲ್ಲಿ 3500 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದರು.

ಯುಪಿಎ ಅವಧಿಯಲ್ಲಿ ಕೇವಲ 10 ರಿಂದ 11 ಪರ್ಸೆಂಟ್ ಅನುದಾನ ಬಿಡುಗಡೆ ಆಗಿದ್ದರೆ, ನಮ್ಮ NDA ಕಾಲದಲ್ಲಿ 51 ಪರ್ಸೆಂಟ್ ಬರ ಪರಿಹಾರ ನೀಡಿದ್ದೇವೆ ಎಂದು ಸಚಿವ ಪ್ರಲ್ಹಾದ ಜೋಶಿ ವಿವರಿಸಿದರು.

ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ?

ಶಿರಸಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ಮೋದಿ ರಿಎಂಟ್ರಿ (Modi in Karnataka) ಕೊಟ್ಟಿದ್ದಾರೆ. ಈಗಾಗಲೇ ಬೆಳಗಾವಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿ ಬೃಹತ್‌ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಪಟ್ಟಂತೆ ಪೊಲೀಸರ ಮೇಲೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ನಿಮಗೆ ನಿರ್ದೇಶನ ಕೊಟ್ಟಿದೆಯೇ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡರು.

ಬಳಿಕ ಪೊಲೀಸರಿಗೆ ಬ್ಯಾರಿಕೇಡ್ ಸರಿಸಲು ಹೇಳಿ ಜನರನ್ನು ಒಳಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಕಳುಹಿಸಿದರು. ಜನರನ್ನು ವೇದಿಕೆ ಮುಂದೆ ಕಳುಹಿಸಿದ ಬಳಿಕ ತಾವು ವೇದಿಕೆಗೆ ಬಂದರು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

Continue Reading

Lok Sabha Election 2024

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

If Congress comes to power all your assets will belong to Government says PM Narendra Modi
Koo

ಬೆಳಗಾವಿ: ಎಲ್ಲಿಯವರೆಗೆ ನಿಮ್ಮ ನರೇಂದ್ರ ಮೋದಿ (PM Narendra Modi) ಬದುಕಿರುತ್ತಾರೋ ಅಲ್ಲಿಯವರೆಗೂ ಕಾಂಗ್ರೆಸ್‌ ಕುಕೃತ್ಯಕ್ಕೆ ಅವಕಾಶ ಕೊಡಲ್ಲ. ನಿಮ್ಮ ಮಂಗಳಸೂತ್ರ, ನಿಮ್ಮ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕೊಡಲ್ಲ. ಪೂರ್ವಜರ ಆಸ್ತಿಗಳಿಗೆ ತೆರಿಗೆ (Tax on ancestral properties) ಹಾಕುತ್ತೇವೆ, ಕಾನೂನು ತರುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಕೆಡುತ್ತದೆ. ನಿಮ್ಮ ವಂಶಸ್ಥರು ಮಾಡಿರುವ ಆಸ್ತಿಯನ್ನು ಈ ಕಾಂಗ್ರೆಸಿಗರು ವಾಪಸ್ ಪಡೆಯುತ್ತಾರಂತೆ. ನೀವು ಕೂಡಿಟ್ಟಿರೋ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ಕೊಡಲು ಆಗುವುದಿಲ್ಲ. ನಿಮ್ಮ ಆಸ್ತಿಗೆ ಶೇಕಡಾ 55ರಷ್ಟು ತೆರಿಗೆ ವಿಧಿಸಿ ಆಸ್ತಿಯನ್ನು ಹೊಡೆಯುವುದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವೋಟ್ ಬ್ಯಾಂಕ್‌ ಭದ್ರ ಮಾಡಿಕೊಳ್ಳಲು ಕಾಂಗ್ರೆಸ್‌ನಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆ ರೀತಿ ಆಗಲು ನೀವು ಬಿಡುತ್ತೀರಾ ಎಂದು ಕರ್ನಾಟಕದ ಎಲ್ಲ ಜನರಿಗೆ ನಾನು ಕೇಳುತ್ತಿದ್ದೇನೆ. ಆ ರೀತಿಯ ಕಾನೂನು ತರಲು ಹೊರಟಿರುವ ಕಾಂಗ್ರೆಸ್‌ಗೆ ಅಧಿಕಾರ ಕೊಡುತ್ತೀರಾ? ಇಂಥ ಕಾಂಗ್ರೆಸಿಗರನ್ನು ಹುಡುಕಿ ಹುಡುಕಿ ದೂರ ಇಡಿ ಎಂದು ಮನವಿ ಮಾಡಿದರು.

ಇಷ್ಟೆಲ್ಲ ಅನ್ಯಾಯ ಮಾಡುವ ಕಾಂಗ್ರೆಸ್‌ಗೆ ಜನ ಪಾಠ ಕಲಿಸಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಹೆಣ್ಣು ಮಕ್ಕಳ ಹತ್ಯೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ನಡೆದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಬೆಳಗಾವಿ ದಲಿತ ಮಹಿಳೆ ಬೆತ್ತಲೆ ಪ್ರಕರಣ ಪ್ರಸ್ತಾಪ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿ ದೌರ್ಜನ್ಯ ಎಸೆಗಲಾಗಿದೆ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳ ಪ್ರೇರಣೆಯೊಂದಿಗೆ ಬಿಜೆಪಿ ಆಡಳಿತವು ನಡೆಯುತ್ತಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಇದೆ, ಮಕ್ಕಳು ಅಲ್ಲಿ ಓದುತ್ತಿದ್ದಾರೆ. ನಿಮ್ಮ ಕನಸುಗಳೇ ಮೋದಿ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Narendra Modi: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ,

VISTARANEWS.COM


on

Congress ties with Aurangzeb supporters and Girls killed under his rule says Narendra Modi
Koo

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆದರೂ ಸಹ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯಲ್ಲವೂ ಅನ್ಯರ ಪಾಲಾಗುತ್ತದೆ. ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಗೆಡುತ್ತದೆ. ಅವರು ದಿಲ್ಲಿಯಲ್ಲಿ ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ಪರ್ಸೆಂಟ್‌ ಅನ್ನು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ. ಹೀಗಾಗಿ ನಿಮ್ಮ ಆಸ್ತಿಯ ಬಹುದೊಡ್ಡ ಪಾಲು ಕಾಂಗ್ರೆಸ್‌ ಸರ್ಕಾರದ್ದಾಗುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇರ ವಾಗ್ದಾಳಿ ನಡೆಸಿದರು.

Continue Reading
Advertisement
PM Narendra Modi Cm Siddaramaiah many questions to PM Modi Challenge for answer
Lok Sabha Election 202416 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ38 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್45 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ45 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202447 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ1 hour ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ2 hours ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್2 hours ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್2 hours ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202447 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌