Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು? - Vistara News

New year 2023

Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

2023 ರಲ್ಲಿ ಶನಿ, ಗುರು ಮತ್ತು ರಾಹು-ಕೇತುಗಳ ಸಂಚಾರ ಹೇಗಿರಲಿದೆ? ಇದರಿಂದ ದ್ವಾದಶ ರಾಶಿಗಳ ಮೇಲೆ ಯಾವೆಲ್ಲಾ ಪರಿಣಾಮಗಳಾಗಲಿವೆ (Yearly Horoscope 2023) ಎಂಬುದನ್ನ ಖ್ಯಾತ ಜ್ಯೋತಿಷಿಗಳು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Yearly Horoscope 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಚಾರ್ಯ ಶ್ರೀ ವಿಠ್ಠಲ ಭಟ್ಟ ಕೆಕ್ಕಾರು
ಹೊಸ ವರ್ಷ 2023 ಬರುತ್ತಿದೆ. ಈ ನೂತನ ವರ್ಷದಲ್ಲಿ ಮುಖ್ಯವಾಗಿ ಯಾವೆಲ್ಲಾ ಗ್ರಹಗಳ ಸಂಚಾರ ಇರಲಿದೆ. ಇದರ ಪರಿಣಾಮಗಳೇನು (Yearly Horoscope 2023) ಎಂಬುದನ್ನು ನೋಡೋಣ.

ಜ್ಯೋತಿಷ ರೀತಿಯಾಗಿ ಎರಡೂವರೆ ವರ್ಷಕ್ಕೆ ಒಮ್ಮೆ (ಸಾಮಾನ್ಯ ಪರಿಕ್ರಮದಲ್ಲಿ, ಅಂದರೆ ವಕ್ರೀ ಹಾಗೂ ಮುಂದಿನ ಮನೆಗಳಿಗೆ ವೇಗವಾಗಿ ಚಲಿಸುವ ಅವಧಿ ಹೊರತು ಪಡಿಸಿ) ಶನಿ ಗ್ರಹ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತದೆ. ಅಂದರೆ ಒಂದೇ ರಾಶಿಯಲ್ಲಿ ಎರಡೂವರೆ ವರ್ಷ ಇರುತ್ತದೆ. ಇನ್ನು ಗುರು ಗ್ರಹ ಸಾಧಾರಣವಾಗಿ ಒಂದು ರಾಶಿಯಲ್ಲಿ ಒಂದು ವರ್ಷ ಇರುತ್ತದೆ.

ಛಾಯಾ ಗ್ರಹಗಳು ಎನಿಸಿಕೊಂಡ ರಾಹು- ಕೇತುಗಳ ಸಂಚಾರ ಅವಧಿ ಹದಿನೆಂಟು ತಿಂಗಳು. ಇವುಗಳನ್ನು ಸಮಸಪ್ತಕ ಎನ್ನಲಾಗುತ್ತದೆ, ಅಪ್ರದಕ್ಷಿಣೆಯಾಗಿ ಏಳು ಸ್ಥಾನಗಳ ಅಂತರದಲ್ಲಿ ಒಂದು ರಾಶಿಯಲ್ಲಿ ಒಂದೂವರೆ ವರ್ಷದಂತೆ ಸಂಚರಿಸುತ್ತವೆ.

ಶನಿ ಗ್ರಹವು ಜನವರಿ 1, 2023ರಿಂದ ಜನವರಿ 17, 2023ರ ತನಕ ಮಕರ, ಜನವರಿ 17, 2023ರಿಂದ ಡಿಸೆಂಬರ್ 31, 2023ರ ತನಕ ಕುಂಭ ರಾಶಿಯಲ್ಲಿ ಸಂಚಾರ ನಡೆಸಲಿದೆ. ಗುರು ಗ್ರಹವು ಜನವರಿ 1, 2023ರಿಂದ ಏಪ್ರಿಲ್ 22, 2023ರ ತನಕ ಮೀನ, ಏಪ್ರಿಲ್ 22, 2023ರಿಂದ ಡಿಸೆಂಬರ್ 31, 2023ರ ತನಕ ಮೇಷ ರಾಶಿಯಲ್ಲಿ ಸಂಚಾರ ನಡೆಸಲಿದೆ. ಇನ್ನು ರಾಹು-ಕೇತುಗಳು ಜನವರಿ 1, 2023ರಿಂದ ಅಕ್ಟೋಬರ್ 30, 2023ರ ತನಕ ಮೇಷ, ಅಕ್ಟೋಬರ್ 30, 2023ರಿಂದ ಡಿಸೆಂಬರ್ 31, 2023ರ ತನಕ ಮೀನ ರಾಶಿಯಲ್ಲಿ ಸಂಚಾರ ನಡೆಸಲಿದೆ.

Horoscope Today

ಈ ಗ್ರಹಗಳ ಸಂಚಾರದ ಫಲವೇನು?

Yearly Horoscope 2023

ಮೇಷ : ಜನವರಿಯಲ್ಲಿ ಹನ್ನೊಂದನೇ ಮನೆಯ ಶನಿ ಸಂಚಾರದ ವೇಳೆ ಲಾಭ ಕಾಣುತ್ತೀರಿ. ಆಸ್ತಿ ಲಾಭ, ವಾಹನ ಲಾಭ, ಸಾಮಾಜಿಕವಾಗಿ ಪ್ರಭಾವಿಗಳ ಜತೆಗೆ ಸಂಪರ್ಕ ಹಾಗೂ ಆ ಮೂಲಕವಾಗಿ ಸಾಮಾಜಿಕವಾಗಿ, ವೈಯಕ್ತಿಕವಾಗಿ ಲಾಭ, ವರ್ತಕರು- ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನುಕೂಲ ಇತ್ಯಾದಿ ಉತ್ತಮ ಫಲಗಳಿವೆ. ಗುರು ಸಂಚಾರ ಇರುವಾಗ ಆರೋಗ್ಯ ಕಡೆಗೆ ಹಾಗೂ ನಿಮ್ಮ ವೆಚ್ಚದ ಬಗ್ಗೆ ಲಕ್ಷ್ಯ ನೀಡಿ. ಜನ್ಮ ರಾಶಿಯಲ್ಲೇ ರಾಹು ಹಾಗೂ ಏಳನೇ ಮನೆಯಲ್ಲಿ ಕೇತು ಸಂಚರಿಸುವಾಗ ದುರ್ಜನರ ಸಹವಾಸ, ಅಹಂಭಾವ ಇರುತ್ತದೆ.

Yearly Horoscope 2023

ವೃಷಭ: ಶನಿಯು ಕುಂಭ ರಾಶಿಯಲ್ಲಿ ಸಂಚರಿಸುವಾಗ ವೃತ್ತಿಪರರು- ಉದ್ಯೋಗಿಗಳಾದವರಿಗೆ ಅಷ್ಟೇನೂ ಸಮಾಧಾನದ ಸಮಯ ಅಲ್ಲ. ನಿಮ್ಮ ಪಾಲಿಗೆ ಬರಬೇಕಾದ ಮೆಚ್ಚುಗೆ, ಪ್ರಮೋಷನ್, ಸಂಬಳದಲ್ಲಿನ ಹೆಚ್ಚಳವು ಇನ್ನ್ಯಾರದೋ ಪಾಲಾಗುತ್ತದೆ. ಏಪ್ರಿಲ್‌ ತಿಂಗಳ ತನಕ ಹನ್ನೊಂದರಲ್ಲಿ ಗುರು ಸಂಚಾರ ವೇಳೆ ನಾನಾ ಲಾಭ ಆಗುತ್ತದೆ. ಹನ್ನೆರಡರಲ್ಲಿ ಸಂಚರಿಸುವ ರಾಹು ಹಾಗೂ ಆರನೇ ಮನೆಯಲ್ಲಿ ಇರುವ ಕೇತು ಆದಾಯ- ವ್ಯಯದ ಬಗ್ಗೆ ಅಂದಾಜು ಸಿಗದಂಥ ಸ್ಥಿತಿಗೆ ದೂಡುತ್ತವೆ.

Yearly Horoscope 2023

ಮಿಥುನ : ಶನಿಯಿಂದ ಈ ಹಿಂದಿನಂತಹ ಕಷ್ಟಗಳು ಸದ್ಯಕ್ಕೆ ಬರುವುದಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಅವಮಾನ ಎದುರಿಸುವ ಸನ್ನಿವೇಶಗಳು ಕಡಿಮೆ ಆಗುತ್ತವೆ. ಗುರು ಹತ್ತು- ಹನ್ನೊಂದನೇ ಮನೆಯಲ್ಲಿ ಸಂಚರಿಸುವುದರಿಂದ ವೃತ್ತಿ ಬದುಕು ಉತ್ತಮಗೊಳ್ಳುತ್ತದೆ, ಜತೆಗೆ ಈ ಹಿಂದಿನ ಹೂಡಿಕೆಗಳು ಅತ್ಯುತ್ತಮ ಲಾಭ ನೀಡುತ್ತವೆ. ಅಂದುಕೊಳ್ಳದ ರೀತಿಯಲ್ಲಿ ಬಡ್ತಿ, ವೇತನ ಹೆಚ್ಚಳ ಕಾಣುತ್ತದೆ. ರಾಹು ಹನ್ನೊಂದನೇ ಮನೆ ಹಾಗೂ ಕೇತು ಐದನೇ ಮನೆಯಲ್ಲಿ ಬಹುತೇಕ ಸಂಚರಿಸಲಿದೆ. ಜಾಗ ಖರೀದಿ, ಸಟ್ಟಾ ವ್ಯವಹಾರದಲ್ಲಿ ಲಾಭ, ವಿದೇಶ ವ್ಯವಹಾರಗಳಿಂದ ಲಾಭ ಮೊದಲಾದವು ಇವೆ.

Yearly Horoscope 2023

ಕಟಕ: ಕುಂಭ ರಾಶಿಗೆ ಶನಿಯ ಪ್ರವೇಶ ಆಗುವುದರೊಂದಿಗೆ ಎಂಟನೇ ಮನೆಗೆ ಶನೈಶ್ಚರ ಬಂದಂತಾಗುತ್ತದೆ. ಶನಿ ಶಾಂತಿ ಮಾಡಿಸಿಕೊಳ್ಳುವುದು ಅಗತ್ಯ. ಇನ್ನು ಕೆಲ ಸಮಯ ನಿಮ್ಮ ಪಾಲಿಗೆ ತುಂಬ ಕ್ಲಿಷ್ಟಕರವಾಗಿರುತ್ತದೆ. ಗುರು ಗ್ರಹ ನಿಮ್ಮ ರಾಶಿಯಿಂದ ಒಂಬತ್ತು ಹಾಗೂ ಹತ್ತನೇ ಮನೆಯಲ್ಲಿ ಸಂಚರಿಸಲಿದ್ದು, ನಿಮ್ಮ ತಂದೆ ಮನೆ ಕಡೆಯಿಂದ ಬರಬೇಕಾದ ಆಸ್ತಿ ಬರುತ್ತದೆ. ರಾಹು ಹತ್ತನೇ ಮನೆಯಲ್ಲಿ, ಕೇತು ನಾಲ್ಕನೇ ಮನೆಯಲ್ಲಿ ಸಂಚರಿಸುವಾಗ ಉದ್ಯೋಗ ಸ್ಥಳದಲ್ಲಿ ನಿಮ್ಮ ಬೆನ್ನ ಹಿಂದೆ ನಡೆಯುವಂತಹ ಹಲವು ಸಂಗತಿಗಳು ಗಮನಕ್ಕೆ ಬಾರದಿರಬಹುದು. ಅವು ನಿಮಗೆ ಅನುಕೂಲವಾಗಿರುವುದಿಲ್ಲ.

Yearly Horoscope 2023

ಸಿಂಹ: ಆರನೇ ಮನೆಯಲ್ಲಿ ಸಂಚರಿಸುವ ಶನಿ ಕೊನೆ ಹಂತದಲ್ಲಿ ಮೊದಲ ತಿಂಗಳು ಕೆಲವು ಅನುಕೂಲ ಮಾಡಬಹುದು. ಕೆಲಸ ಬದಲಾವಣೆ ಮಾಡಿಕೊಳ್ಳುವ ಹಾಗಿದ್ದಲ್ಲಿ ಮೊದಲ ಇಪ್ಪತ್ತು ದಿನದೊಳಗೆ ಮುಗಿಸಿಕೊಂಡು ಬಿಡಿ. ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಶನಿ ಸಂಚರಿಸುವಾಗ ಪಾಲುದಾರಿಕೆ ವ್ಯವಹಾರಗಳಲ್ಲಿ ಏನೋ ಸರಿಹೋಗುತ್ತಿಲ್ಲ ಎಂಬ ಭಾವನೆ ಮೂಡುತ್ತದೆ. ಗುರು ನಿಮಗೆ ಎಂಟನೇ ಮನೆಯಲ್ಲಿ, ಅಂದರೆ ಏಪ್ರಿಲ್ ತನಕ ಅದೇ ಮನೆಯಲ್ಲಿ ಇರುವುದರಿಂದ ಕಾನೂನು ವಿಚಾರಗಳಲ್ಲಿ ಸಮಸ್ಯೆಗೆ ಸಿಲುಕುವಂಥ ಸಾಧ್ಯತೆ ಇರುತ್ತದೆ. ಒಂಬತ್ತನೇ ಮನೆಯಲ್ಲಿ ಸಂಚರಿಸುವ ರಾಹು ತಂದೆ ಅಥವಾ ತಂದೆ ಸಮಾನರಾದವರ ಜತೆಗೆ ವೈಮನಸ್ಯ, ಭಿನ್ನಾಭಿಪ್ರಾಯ ಆಗಬಹುದು. ಮೂರನೇ ಮನೆಯಲ್ಲಿ ಸಂಚರಿಸುವ ಕೇತು ಸಹೋದರ- ಸಹೋದರಿಯರ ಮೂಲಕ ಲಾಭ ತರುತ್ತದೆ.

Yearly Horoscope 2023

ಕನ್ಯಾ: ಜನವರಿಯಲ್ಲಿ ಆರನೇ ಮನೆಯಲ್ಲಿ ಶನಿ ಸಂಚಾರ ಆರಂಭಿಸುವುದರೊಂದಿಗೆ ಆದಾಯ ಮೂಲಗಳು, ಆದಾಯ ಪ್ರಮಾಣ ಜಾಸ್ತಿ ಆಗುತ್ತವೆ. ನಿಮ್ಮ ಆರ್ಥಿಕ ಸವಾಲುಗಳನ್ನು ನಿರ್ವಹಿಸಲು ಬಲ ದೊರೆಯುತ್ತದೆ. ಏಳನೇ ಮನೆಯಲ್ಲಿ ಗುರು ಸಂಚರಿಸುವಾಗ ಪಾಲುದಾರಿಕೆ ವ್ಯವಹಾರಗಳು ಉತ್ತಮಗೊಳ್ಳುತ್ತವೆ. ಸಾಂಸಾರಿಕವಾಗಿ ನೆಮ್ಮದಿಯನ್ನು ಕಾಣುತ್ತೀರಿ. ದೂರ ಪ್ರದೇಶ ಹಾಗೂ ವಿದೇಶಗಳಿಂದ ಶುಭ ಸುದ್ದಿ ಕೇಳಿಬರುತ್ತದೆ. ಎಂಟನೇ ಮನೆಯ ರಾಹು ಹಾಗೂ ಎರಡನೇ ಮನೆಯ ಕೇತು ಈ ವರ್ಷದ ಅಕ್ಟೋಬರ್‌ ತನಕ ಒಳ್ಳೆ ಫಲಗಳನ್ನು ನೀಡುವುದಿಲ್ಲ.

Yearly Horoscope 2023

ತುಲಾ: ಈ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ನಿಮ್ಮ ರಾಶಿಯಿಂದ ನಾಲ್ಕು ಮತ್ತು ಐದನೇ ಮನೆಯಲ್ಲಿ ಶನಿ ಸಂಚರಿಸುತ್ತದೆ. ಜನವರಿಯ ಒಂದು ತಿಂಗಳು ಮಕರದಲ್ಲಿ ಶನಿ ಸಂಚರಿಸುವ ತನಕ ಮಾತನಾಡುವಾಗ ತುಂಬ ಎಚ್ಚರಿಕೆಯಿಂದ ಇರಬೇಕು. ಶನಿಯು ಜನವರಿ ಹದಿನೇಳನೇ ತಾರೀಕಿನ ನಂತರ ಐದನೇ ಮನೆಯಲ್ಲಿ ಸಂಚರಿಸುವಾಗ ನೀವೆಷ್ಟು ಧರ್ಮಿಷ್ಠರು, ಸತ್ಯವಂತರಾರುತ್ತೀರೋ ಅಷ್ಟು ನೆಮ್ಮದಿಯಾಗಿ ಇರುವುದಕ್ಕೆ ಸಾಧ್ಯವಾಗುತ್ತದೆ. ಜನ್ಮ ರಾಶಿಯಲ್ಲೇ ಕೇತು ಹಾಗೂ ಸಪ್ತಮದಲ್ಲಿ ರಾಹು ಈ ವರ್ಷದ ಹತ್ತು ತಿಂಗಳು ಇರುತ್ತದೆ. ಆ ವೇಳೆಯಲ್ಲಿ ನಿಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಪಾಪ ಕರ್ಮಾಸಕ್ತಿ ಹೆಚ್ಚು ಮಾಡುತ್ತವೆ.

Yearly Horoscope 2023

ವೃಶ್ಚಿಕ : ಜನವರಿ ತಿಂಗಳ ಮೊದಲ ಹದಿನೇಳು ದಿವಸ ಮಾತ್ರ ನಿಮ್ಮ ರಾಶಿಗೆ ಮೂರನೇ ಮನೆಯಲ್ಲಿ ಶನಿ ಸಂಚಾರ ಆಗುತ್ತದೆ. ಹಾಗೂ ಆ ನಂತರದಲ್ಲಿ ನಾಲ್ಕರಲ್ಲಿ ಶನಿ ಸಂಚಾರ ಇರುತ್ತದೆ. ಆದ್ದರಿಂದ ಜನವರಿಯಲ್ಲಿ ಮಾತ್ರ ಹಣಕಾಸಿನ ಹರಿವು ಚೆನ್ನಾಗಿ ಇರುತ್ತದೆ. ನಿಮ್ಮಲ್ಲಿ ಕೆಲವರಿಗೆ ಅದು ಸ್ವಲ್ಪ ಮಟ್ಟಿಗಾದರೂ ಇಳಿಕೆ ಕಾಣುತ್ತಾ ಬರುತ್ತಿರುವುದು ಗಮನಕ್ಕೆ ಬರಲಿದೆ. ಮುಂದಿನ ವರ್ಷದ ಏಪ್ರಿಲ್ ತನಕ ಪಂಚಮದಲ್ಲಿ ಗುರು ಸಂಚಾರ ಇರುತ್ತದೆ. ಈ ವೇಳೆ ಸಂತಾನ ಅಪೇಕ್ಷಿತರನ್ನು ಹೊರತುಪಡಿಸಿದಂತೆ ಉಳಿದವರಿಗೆ ಒಳ್ಳೆ ಸಮಯ. ಉತ್ತಮ ಫಲಗಳು ಸಿಗುತ್ತವೆ. ಹನ್ನೆರಡನೇ ಮನೆ ಕೇತು ಖರ್ಚನ್ನು ಹೆಚ್ಚು ಮಾಡಿದರೂ ದೇವತಾ ಆರಾಧನೆ ಕಡೆಗೆ ಮನಸ್ಸು ನೀಡುತ್ತದೆ. ಆರನೇ ಮನೆ ರಾಹು ಭೂಮಿ, ಷೇರು, ಮ್ಯೂಚುವಲ್ ಫಂಡ್‌ಗಳ ಮೂಲಕ ಆದಾಯ ತರುತ್ತದೆ.

Yearly Horoscope 2023

ಧನುಸ್ಸು : ಇಷ್ಟು ವರ್ಷದ ಸಾಡೇಸಾತ್ ಶನಿಯ ಪ್ರಭಾವ ಸಂಪೂರ್ಣವಾಗಿ ದೂರ ಆಗುವ ಕಾಲ ಇದು. ಜನವರಿ ಹದಿನೇಳನೇ ತಾರೀಕಿನಂದು ಮೂರನೇ ಮನೆಗೆ ಶನಿ ಗ್ರಹದ ಪ್ರವೇಶ ಆಗುತ್ತದೆ. ನಂತರ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೃಢವಾದ ಬದಲಾವಣೆ ಗಮನಿಸಬಹುದು. ನಾಲ್ಕನೆ ಮನೆಯಲ್ಲಿ, ಏಪ್ರಿಲ್‌ ತನಕ ಗುರು ಮೀನದಲ್ಲಿ ಸಂಚಾರ ಮಾಡುವಾಗ ಮನೆ- ಸೈಟು ಖರೀದಿ, ಮನೆ ಕಟ್ಟಿಸುವ ಯೋಗವಿದೆ. ಏಪ್ರಿಲ್‌ನಲ್ಲಿ ಗುರುವು ಐದನೇ ಮನೆಯಲ್ಲಿ ಸಂಚಾರ ಮಾಡುವಾಗ ದೂರದ ಪ್ರದೇಶಗಳಿಗೆ ತೆರಳುವ ಯೋಗವಿದೆ. ಹನ್ನೊಂದನೇ ಮನೆಯಲ್ಲಿ ಕೇತು ಸಂಚರಿಸುವಾಗ ಅದೃಷ್ಟ ಬಲದಿಂದ ವ್ಯಾಜ್ಯ, ತಂಟೆ- ತಕರಾರು ಇದ್ದಲ್ಲಿ ನಿವಾರಣೆ ಆಗುತ್ತವೆ. ಐದನೇ ಮನೆಯಲ್ಲಿ ರಾಹು ಸಂಚರಿಸುವುದರಿಂದ ಮಕ್ಕಳ ಆರೋಗ್ಯದ ಕುರಿತು ಜಾಗ್ರತೆಯಿಂದ ಇರಬೇಕು.

Yearly Horoscope 2023

ಮಕರ : ನಿಮಗೆ ಸಾಡೇಸಾತ್ ಶನಿಯ ಪ್ರಭಾವ 2025ರ ಮಾರ್ಚ್ ತನಕ ಇದೆ. ಜನವರಿಯಲ್ಲಿ ಕುಂಭಕ್ಕೆ ಶನಿ ಪ್ರವೇಶಿಸುವುದರೊಂದಿಗೆ ಎರಡನೇ ಮನೆಯಲ್ಲಿ ಸಂಚಾರ ಇರುತ್ತದೆ. ಜನವರಿಯಿಂದ ಆಚೆಗೆ ಎರಡನೇ ಮನೆಯಲ್ಲಿ ಶನಿ ಸಂಚರಿಸುವಾಗ ಸ್ವಲ್ಪ ಆತಂಕ ಇರುತ್ತದೆ. ಗುರು ನಾಲ್ಕನೇ ಮನೆಯಲ್ಲಿ ಸಂಚರಿಸುವಾಗ ಆಕಸ್ಮಿಕವಾಗಿ ಭೂಮಿ ಲಾಭ ಆಗುವುದೋ ಅಥವಾ ಯಾವುದಾದರೂ ಬಗೆಯಲ್ಲಿ ನಿಮ್ಮ ಹೆಸರಿಗೆ ಮನೆಯೊಂದು ಬರುವುದೋ ಅಥವಾ ದೊಡ್ಡ ಮೊತ್ತವೊಂದು ಕೈ ಸೇರುವುದೋ ಆಗುತ್ತದೆ. . ಈ ವರ್ಷದ ಹತ್ತು ತಿಂಗಳು ನಾಲ್ಕರಲ್ಲಿ ರಾಹು ಇದ್ದು ನಿಮ್ಮದೇ ಸುಖ- ಸವಲತ್ತಿಗೆ ಇರುವಂಥ ಅನುಕೂಲಗಳು ನಿಮಗೇ ಇಲ್ಲದಂತೆ, ದೊರೆಯದಂತಾಗುತ್ತದೆ. ಹತ್ತರಲ್ಲಿ ಕೇತು ಇರುವುದರಿಂದ ಉದ್ಯೋಗ, ವೃತ್ತಿಯಲ್ಲಿ ಸವಾಲುಗಳು ಜಾಸ್ತಿ ಆಗುತ್ತವೆ.

Yearly Horoscope 2023

ಕುಂಭ : ನಿಮಗೆ ಈಗ ಏಳರಾಟ ಶನಿಯ ಒಂದು ಹಂತ, ಅಂದರೆ ಎರಡೂವರೆ ವರ್ಷ ಮುಗಿಸಿದ್ದೀರಿ. ಜನವರಿ ತಿಂಗಳಿನಿಂದ ನಿಮ್ಮದೇ ಜನ್ಮ ರಾಶಿಯಲ್ಲಿ ಸಂಚರಿಸುವಾಗ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಏಪ್ರಿಲ್‌ನಿಂದ ಮೂರನೇ ಮನೆಯಲ್ಲಿ ಗುರು ಸಂಚರಿಸುವಾಗ ನಿಮ್ಮಲ್ಲಿ ಆತ್ಮವಿಶ್ವಾಸ ಇರುತ್ತದೆ. ಯಾವುದೇ ಕೆಲಸವನ್ನು ಮಾಡಿ ಮುಗಿಸಬಲ್ಲ ಚಾಕಚಕ್ಯತೆ ಬರುತ್ತದೆ. ಸಹೋದರ- ಸಹೋದರಿಯರ ಬೆಂಬಲ ನಿಮ್ಮ ಪಾಲಿಗೆ ಒದಗಿ ಬರಲಿದೆ. ನಿಮ್ಮ ರಾಶಿಯಿಂದ ಮೂರನೇ ಮನೆಯಲ್ಲಿ ರಾಹು ಸಂಚರಿಸುವುದರಿಂದ ರಿಯಲ್ ಎಸ್ಟೇಟ್ ಏಜೆಂಟ್‌ಗಳು, ಷೇರು ದಲ್ಲಾಳಿಗಳಿಗೆ ಹಣದ ಹರಿವು ಉತ್ತಮವಾಗಿರುತ್ತದೆ. ಒಂಬತ್ತರಲ್ಲಿ ಕೇತು ಸಂಚಾರ ಇರುವುದರಿಂದ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

Yearly Horoscope 2023

ಮೀನ : ಜನವರಿಯ ಮೊದಲ ಹದಿನೇಳು ದಿನಗಳು ಮೀನ ರಾಶಿಗೆ ಹನ್ನೊಂದನೇ ಮನೆಯಲ್ಲಿ ಶನಿ ಸಂಚಾರ ಇರುತ್ತದೆ. ಆ ನಂತರದಲ್ಲಿ ವ್ಯಯ ಸ್ಥಾನಕ್ಕೆ ಬರಲಿದೆ. ಸಾಡೇಸಾತ್ ಶನಿಯ ಆರಂಭದ ಘಟ್ಟ ಇದು. ಏಪ್ರಿಲ್‌ ತನಕ ಜನ್ಮ ರಾಶಿಯಲ್ಲೇ ಇರುವ ಗುರುವಿನಿಂದ ನಾನಾ ಬಗೆಯ ದುಃಖಗಳನ್ನು ಅನುಭವಿಸಬೇಕಾಗುತ್ತದೆ. ಜನ್ಮ ಗುರು ಮನುಷ್ಯರಿಗೆ ದುಃಖವನ್ನು ನೀಡುತ್ತಾನೆ. ಅಕ್ಟೋಬರ್ ತನಕ ರಾಹು ದ್ವಿತೀಯದಲ್ಲಿ ಇದ್ದು ನಿಮ್ಮನ್ನು ಭ್ರಮಾಧೀನರನ್ನಾಗಿ ಮಾಡಲಿದ್ದು, ಹಗಲುಗನಸು ಕಾಣದಿರಿ. ಎಂಟನೇ ಮನೆಯಲ್ಲಿನ ಕೇತು ಗುಪ್ತ ರೋಗಗಳು, ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಉಂಟುಮಾಡಬಹುದು.

ಇದನ್ನೂ ಓದಿ | Venus Transit 2022 | ಇಂದು ಮಕರ ರಾಶಿ ಪ್ರವೇಶಿಸಲಿರುವ ಶುಕ್ರ; ಈ ನಾಲ್ಕು ರಾಶಿಯವರಿಗೆ ಧನ ಲಾಭ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
T20 World Cup 2024
ಕ್ರೀಡೆ3 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ16 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್20 mins ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ23 mins ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Dubai Airport
EXPLAINER33 mins ago

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

IPL 2024 Points Table
ಕ್ರೀಡೆ43 mins ago

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

Minister Lakshmi hebbalkar Latest statement in Belagavi
ಬೆಳಗಾವಿ1 hour ago

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Sahil Khan Travelled 1,800 km In 4 Days To Avoid Arrest
ಬಾಲಿವುಡ್1 hour ago

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Hassan Pen Drive Case Deve Gowda refuses to expel Prajwal and What is the reason
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Pro-Khalistan slogan
Latest1 hour ago

Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20242 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌