Adhika Masa 2023 how adhika masa is calculated and its importance in kannada Adhika Masa 2023 : ಅಧಿಕ ಮಾಸದ ಲೆಕ್ಕಾಚಾರ ಹೇಗೆ? ಮಹತ್ವವೇನು? - Vistara News

ಧಾರ್ಮಿಕ

Adhika Masa 2023 : ಅಧಿಕ ಮಾಸದ ಲೆಕ್ಕಾಚಾರ ಹೇಗೆ? ಮಹತ್ವವೇನು?

ನಾಳೆಯಿಂದ (ಜು.18) ಅಧಿಕ ಮಾಸ (Adhika Masa 2023) ಆರಂಭವಾಗುತ್ತಿದೆ. ಈ ಸಲದ ಅಧಿಕ ಮಾಸ ಬಂದಿರುವುದು ಶ್ರಾವಣ ಮಾಸದಲ್ಲಿ. ಮೂವತ್ಮೂರು ತಿಂಗಳಿಗೊಮ್ಮೆ ಬರುವ ಅಧಿಕಮಾಸದ ಲೆಕ್ಕಾಚಾರ ಹೇಗೆ ಎಂದು ತಿಳಿಸುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

adhika masa calculation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
narayana yaji

ನಾರಾಯಣ ಯಾಜಿ
ಪ್ರತೀ ಮೂರು ವರುಷಗಳಿಗೊಮ್ಮೆ ಪಂಚಾಂಗದಲ್ಲಿ ಬರುವ ಅಧಿಕ ಮಾಸದ (Adhika Masa 2023) ಕುರಿತು ಎಲ್ಲರಿಗೂ ಗೊತ್ತು. ಈ ಮಾಸವನ್ನು ಪುರುಷೋತ್ತಮ ಮಾಸವೆಂದೂ ಸಹ ಕರೆಯುತ್ತಾರೆ. ಈ ತಿಂಗಳಿನಲ್ಲಿ ಯಾವುದೇ ಶುಭಕಾರ್ಯವನ್ನು ನಡೆಸಕೂಡದು ಎನ್ನುವ ಧಾರ್ಮಿಕ ನಂಬಿಕೆಯ ಹಿನ್ನೆಲೆಯಲ್ಲಿ ಇಡೀ ತಿಂಗಳು ಕಳೆದು ಹೋಗಿಬಿಡುತ್ತದೆ.

ಗ್ರೆಗೋರಿಯನ್ ಕ್ಯಾಲೇಂಡಿರನ ಪ್ರಕಾರ ನಾಲ್ಕು ವರ್ಷಗಳಿಗೊಮ್ಮೆ ಬರುವ Year Leap ಕುರಿತು ಎಲ್ಲರಿಗೂ ಅರಿವಿದೆ. ವರ್ಷವನ್ನು ನಾಲ್ಕರಿಂದ ಸಂಪೂರ್ಣವಾಗಿ ಭಾಗಿಸಿದಾಗ ಬರುವ ಇಸವಿಯ ಫೆಬ್ರುವರಿ ತಿಂಗಳಲ್ಲಿ ಇಪ್ಪತ್ತೊಂಬತ್ತು ದಿನಗಳು ಬರುತ್ತವೆ. ಉದಾಹರಣೆಗೆ 1996, 2000 ಹಾಗೇ ಮುಂದಿನ ವರ್ಷ, 2024 ರ ಫೆಬ್ರುವರಿ ತಿಂಗಳು ಅಧಿಕ ವರ್ಷದ ದಿನಗಳು. ಇನ್ನುಳಿದ ಇಸವಿಯಲ್ಲಿ ಈ ತಿಂಗಳಿಗೆ ಇಪ್ಪತ್ತೆಂಟೇ ದಿನಗಳು. ಆದರೆ ಹಿಂದೂ ಪಂಚಾಂಗದ ಪ್ರಕಾರ ಬರುವ ಅಧಿಕ ಮಾಸಕ್ಕೆ ನಿರ್ದಿಷ್ಟ ತಿಂಗಳೇನೂ ಇಲ್ಲ; ಯಾವುದೋ ತಿಂಗಳಲ್ಲಿಯೋ ಬಂದು ಹೋಗುತ್ತವೆ.

ಇದು ಹೀಗೇಕೆ ಎನ್ನುವುದರ ಹಿಂದೆ ಭಾರತೀಯರ ಖಗೋಳ ಶಾಸ್ತ್ರದ ಜ್ಞಾನಪರಂಪರೆಯೇ ಇದೆ ಎನ್ನುವುದು ಹೆಚ್ಚಿನವರಿಗೆ ಅರಿವಿಲ್ಲ. ಗ್ರಹಗಳ ಚಲನೆ ಅದರ ವಕ್ರಗತಿಯನ್ನು ಮತ್ತು ಕಣ್ಣಿಗೆ ಕಾಣುವ ಗ್ರಹಣಗಳ ಅವಧಿಯನ್ನು ನಿಖರವಾಗಿ ಲೆಕ್ಕೆಹಾಕಿದ ನಮ್ಮ ಸನಾತನಿಗಳಿಗೆ ಪಂಚಾಂಗವೆಂದರೆ ಮೂಗು ಮುಚ್ಚಿ ಕುಳಿತು ದೇವರ ಧ್ಯಾನಮಾಡುವ ಒಂದು ಸಾಧನವಲ್ಲ. ಅದು ಕಾಲದ ನಿಖರವಾದ ಅಳತೆ. ಇದನ್ನು ಅರಿಯಬೇಕಾದರೆ ಮೊದಲು ಪಂಚಾಂಗದ ಕುರಿತು ಸ್ಥೂಲವಾಗಿ ತಿಳಿದುಕೊಳ್ಳಬೇಕು.

ವಾರ, ತಿಥಿ, ನಕ್ಷತ್ರ, ಕರಣ ಮತ್ತು ಯೋಗ ಈ ಐದು ಅಂಗಗಳ ಕುರಿತು ಸ್ಪಷ್ಟವಾಗಿ ತಿಳಿಸುವುದೇ ಪಂಚಾಂಗ. ಆಧುನಿಕವಾಗಿ ಕಾಲವನ್ನು ವರ್ಷ, ತಿಂಗಳು, ಪಕ್ಷ, ವಾರ, ಘಂಟೆ, ನಿಮಿಷ, ಸೆಕೆಂಡು ಮತ್ತು ಸೆಕೆಂಡನ್ನು ವಿಭಜನೆಮಾಡುವ ವಿಧಾನದಲ್ಲಿ ಅಳೆಯುತ್ತಾರೆ. ಋಷಿಗಳು ಕಾಲವನ್ನು ಪರಮಾಣು ಅಂದರೆ ಯಾವುದನ್ನು ವಿಭಜಿಸಲಾಗದೋ ಅಲ್ಲಿಂದ ಎನ್ನುವ ಮಾನದಿಂದ ಪ್ರಾರಂಭಿಸಿ ಪರಮ ಮಹತ್ತು ಎನ್ನುವ ಕಾಲಬೇಧಗಳಿಲ್ಲದ ಸ್ಥಿತಿಯತನಕ ಅಳೆದಿರುವ ಮಾನವನ್ನು ಭಾಗವತ ವರ್ಣಿಸುತ್ತದೆ. ವಿಜ್ಞಾನ ಇದನ್ನು Infinite ಅನಂತವೆಂದು ಹೇಳಿದೆ.

ಕಾಲ ನಿರ್ಣಯಕ್ಕೆ ಸೂರ್ಯನೇ ಮೂಲ

ಭಾಗಿಸಲಾರದ ಮತ್ತು ಭಾಗಕಾರಕ್ಕೆ ಸಿಕ್ಕದೆ ನಡುವಿನ Space-ಆಕಾಶವನ್ನು ಅಳತೆಮಾಡುವ ಕ್ರಿಯೆಗೆ ಕಾಲವೆನ್ನುತ್ತಾರೆ. ಸಂಧ್ಯಾವಂದನೆಯಲ್ಲಿ ಪ್ರತೀ ನಿತ್ಯವೂ ದಿನಗಳನ್ನು ಪರಾರ್ಧದಿಂದ ತೆಗೆದುಕೊಳ್ಳುತ್ತೇವೆ. ಪರಮ ಮಹತ್ತು ಎನ್ನುವುದಕ್ಕಿಂತ ಹಿಂದಿನ ಅಳತೆ ಇದು. ನಾವು ಲೆಕ್ಕಹಾಕುವಾಗ ಎಲ್ಲಿಂದ ಮುಂದೆ ಎಣಿಕೆ ಸಾಧ್ಯವಾಗುವುದಿಲ್ಲವೋ ಅದನ್ನು “ಪರಾರ್ಧ” ಎನ್ನುತ್ತಾರೆ. ಈಗ ನಡೆಯುತ್ತಿರುವ ಕಾಲ ಬ್ರಹ್ಮನ ಹಗಲಿನ ಎರಡನೆಯ ಭಾಗ. ಈ ಕಾಲಮಾನವನ್ನು ನಮ್ಮ ಪರಿಮಿತಿಯಲ್ಲಿ ಅಳೆಯಬೇಕಾದರೆ ಅದಕ್ಕೆ ಲಭ್ಯತೆ ಇರುವ ವಸ್ತು ಬೇಕು. ಈ ವಸ್ತು ತನ್ನ ಪಥದಲ್ಲಿ ವ್ಯತ್ಯಾಸ ಮಾಡಿಕೊಳ್ಳಕೂಡದು. ಅದಕ್ಕೆ ಸಿಕ್ಕ ವಸ್ತುವೇ ‘ಸೂರ್ಯ’.

ಸೂರ್ಯ ದಿನ ರಾತ್ರಿಗಳನ್ನು ಒಂದು ನಿರ್ದಿಷ್ಟ ಸಮಯಕ್ಕೆ ಉಂಟುಮಾಡುತ್ತಾನೆ. ಅದನ್ನು ಅರ್ಥಮಾಡಿಕೊಂಡ ಋಷಿಮುನಿಗಳು ಆತನನ್ನು ಕೇಂದ್ರವನ್ನಾಗಿಸಿಕೊಂಡರು. ಎರಡನೆಯ ಬಾನಿನ ಕೌತುಕವೇ ಚಂದ್ರ. ಮತ್ತೆ ನಕ್ಷತ್ರ, ಹನ್ನೆರೆಡು ರಾಶಿಗಳು… ಹೀಗೆ ಹಲವಾರು ವಿಧಾನಗಳು ಇದ್ದರೂ ಮುಖ್ಯವಾಗಿ ಕಣ್ಣಿಗೆ ಕಾಣುವ ಸೂರ್ಯ ಮತ್ತು ಚಂದ್ರನ ಚಲನೆಯನ್ನು ಅನುಸರಿಸಿ ವಾರ/ದಿನಗಳಿಂದ ಪ್ರಾರಂಭಿಸಿ ವರ್ಷಗಳ ವರೆಗೆ ಅಳೆತೆಮಾಡುವ ವಿಧಾನವನ್ನು ಸೌರಮಾನ ಮತ್ತು ಚಾಂದ್ರಮಾನ ಎನ್ನುವ ರೀತಿಯಲ್ಲಿ ವಿಭಾಗಿಸಲಾಗಿದೆ.

ಭೂಮಿ ಸೂರ್ಯನತ್ತ ತಿರುಗಲು ತೆಗೆದುಕೊಳ್ಳುವ ಅವಧಿ 365 ದಿವಸ 5 ತಾಸು 59 ನಿಮಿಷ 16 ಸೆಕೆಂಡುಗಳು. ಇದನ್ನು 365.25 ದಿವಸ ಎಂದು ಇಟ್ಟುಕೊಂಡರು. ಒಂದು ವರುಷಕ್ಕೆ ಸುಮಾರು ಆರು ಗಂಟೆಯಂತೆ ನಾಲ್ಕು ವರ್ಷಗಳಾದಾಗ ಒಂದು ದಿನಗಳ ವ್ಯತ್ಯಾಸವಾಗಿಬಿಡುತ್ತದೆ. ಅದನ್ನು ಸರಿದೂಗಿಸಲು ಗ್ರೆಗೋರಿಯನ್ ಪಂಚಾಂಗದಲ್ಲಿ ನಾಲ್ಕು ವರ್ಷಗಳಿಗೊಮ್ಮೆ ಅಧಿಕಮಾಸವಾಗಿ ಒಂದು ದಿನವನ್ನು ಹೆಚ್ಚಿಗೆ ಮಾಡಿದರು. ಈ ಲೆಕ್ಕಾಚಾರದ ಹಿಂದೆ ರೋಚಕ ಇತಿಹಾಸವೇ ಇದೆ. ಇಂದು ನಾವು ಕಾಣುತ್ತಿರುವ ಕ್ಯಾಲೆಂಡರಿನ ಸೂತ್ರಕ್ಕೆ ಹದಿನಾರನೇಯ ಶತಮಾನದವರೆಗೆ ಕಾಯಬೇಕಾಯಿತು.

ಪೋಪ್ ಗ್ರೆಗೋರಿಯನ್ ಪೋಪರಿಗಿರುವ ವಿಶೇಷ ಪರಮಾಧಿಕಾರ “ಪಾಪಲ್ ಬುಲ್ಲ್” (Papal bull)ದ ಮೂಲಕ 1582ನೆಯ ಇಸ್ವಿ ಫೆಬ್ರವರಿ 24ರಂದು ಪರಮಾಯಿಶಿಯನ್ನು ಹೊರಡಿಸಿ ರೂಢಿಗೆ ತಂದಿರುವುದೆನ್ನುವುದನ್ನು ಗಮನಿಸಬೇಕು. ವರ್ಷಗಳನ್ನು ಅಳೆಯಲು ಸೌರಮಾನ ಪದ್ಧತಿ ಸುಲಭವಾದರೆ ತಿಂಗಳನ್ನು ಅಳೆಯಲು ನಮಗೆ ಸಿಗುವ ಸಾಧನ ಚಂದ್ರ. ಪ್ರತೀ ತಿಂಗಳೂ ಕಣ್ಣಿಗೆ ಕಾಣುವಂತೆ ಅಮಾವಾಸ್ಯೆ ಮತ್ತು ಹುಣ್ಣಿಮೆಗಳು ಆಗುತ್ತಲೇ ಇರುತ್ತವೆ. ಮತ್ತು ಪ್ರತಿ ದಿನವೂ ಆತ ಬೇರೆ ಬೇರೆ ಸಮಯಕ್ಕೆ ಉದಯಿಸಿ ಅಸ್ತಮಿಸುತ್ತಾನೆ. (ಭಾರತೀಯ ಕಾಲಗಣನೆಯಲ್ಲಿ ಸೂರ್ಯನ ಸುತ್ತಲೇ ಎಲ್ಲವೂ ಸುತ್ತುತ್ತವೆ ಎನ್ನುವ ಸ್ಪಷ್ಟವಾದ ಉಲ್ಲೇಖಗಳಿವೆ. ಆದರೆ ಲೆಕ್ಕಾಚಾರಕ್ಕೆ ಅನುಕೂಲವಾಗಲು ಸೂರ್ಯನ ಚಲನೆಯನ್ನು ಭೂಮಿಯ ಜಾಗದಲ್ಲಿಟ್ಟರು ಅಷ್ಟೆ.) ಹೀಗೆ ಲೆಕ್ಕಹಾಕುವಾಗ ಸುಮಾರು ಮೂವತ್ತು ದಿನಗಳಿಗೆ ಚಂದ್ರ ಒಂದು ಸುತ್ತು ಬರುತ್ತಾನೆ ಎನ್ನುವುದನ್ನು ಕಂಡುಕೊಂಡರು.

ಸೌರಮಾನ – ಚಂದ್ರಮಾನ

ಸೂರ್ಯ(ಭೂಮಿ) ಖಗೋಲದ ಹನ್ನೆರಡು ರಾಶಿಗಳಲ್ಲಿ ತಿರುಗುವ ಅವಧಿಯನ್ನು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ತಿಂಗಳಾಗಿ ವಿಭಾಗಿಸಿದೆ. (ಇದು ಪ್ರಾಚೀನ ರೋಮನ್ನಿನಲ್ಲಿಯೂ ಇತ್ತು). ಇದನ್ನು ಸೌರಮಾನ ಪದ್ಧತಿ ಎನ್ನುತ್ತಾರೆ. ಅದೇ ರೀತಿ ಚಂದ್ರ ಸಹ ಹನ್ನೆರಡು ತಿಂಗಳಲ್ಲಿ ಸುತ್ತಿಬರುವ ತಿಂಗಳನ್ನು ಚೈತ್ರ ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವಯುಜ, ಕಾರ್ತೀಕ, ಮಾರ್ಗಶೀರ್ಷ, ಪುಷ್ಯ. ಮಾಘ ಮತ್ತು ಪಾಲ್ಗುಣಗಳೆನ್ನುವ ಹನ್ನೆರಡು ಮಾಸಗಳನ್ನಾಗಿ ಹೆಸರಿಸಲಾಯಿತು. ಇದು ಚಾಂದ್ರಮಾನ ಪದ್ಧತಿ. ಇವು ಅಮಾವಾಸ್ಯೆಯಿಂದ ಆರಂಭಿಸಿ ಅಮಾವಾಸ್ಯೆಯತನಕದ ದಿನಗಳು.

ತುಂಬಾ ಮಹತ್ವದ ಅಂಶವೆಂದರೆ ಕಾಲ ಗಣನೆಯಲ್ಲಿ ಭಾರತೀಯ ಪದ್ಧತಿ ಇರುವುದು ಸೂರ್ಯೋದಯದಿಂದ ಸೂರ್ಯೋದಯದ ತನಕ. ಪಾಶ್ಚಿಮಾತ್ಯರು ಕಾಲವನ್ನು ಮಧ್ಯರಾತ್ರಿಯಿಂದ ಮಧ್ಯರಾತ್ರಿಯ ತನಕ ಗಣಿಸುತ್ತಾರೆ. ಭೂಮಿಯ ದೀರ್ಘ ವೃತ್ತಾಕಾರದ ಪರಿಧಿಯ ಕಾರಣದಿಂದ ಋತುಮಾನಗಳುಂಟಾಗುತ್ತವೆ. ಹಾಗಾಗಿ ಪ್ರತೀ ದಿನವೂ ಅಕ್ಷಾಂಶ ಮತ್ತು ರೇಖಾಂಶಕ್ಕನುಗುಣವಾಗಿ ಸೂರ್ಯ ಮೂಡುವ ಸಮಯದಲ್ಲಿಯೂ ಬದಲಾವಣೆಯಾಗುತ್ತಿರುತ್ತದೆ. ಅದೇ ಕಾಲಕ್ಕೆ ಚಂದ್ರನೂ ಸಹ ಮೂಡುವ ಸಮಯದಲ್ಲಿ ಆಗುವ ಸಮಯದ ಬದಲಾವಣೆಯನ್ನು ಗಣನೆಗೆ ತೆಗೆದುಕೊಂಡು ಅದನ್ನು ಮೂವತ್ತು ದಿನಗಳಿಗೊಂದರಂತೆ ಮೂವತ್ತು ತಿಥಿಗಳನ್ನಾಗಿ ವಿಭಾಗಿಸಲಾಯಿತು. ಸೂರ್ಯ ಚಂದ್ರರು ಮೂಡುವ ರೇಖಾಂಶದ ವ್ಯತ್ಯಾಸವನ್ನು ತಿಥಿಯೆನ್ನುತ್ತಾರೆ.

ಒಂದು ನಿರ್ದಿಷ್ಟ ಸ್ಠಳದಲ್ಲಿ ಯಾವ ತಿಥಿ ಬರುತ್ತದೆ ಎನ್ನುವುದನ್ನು ಆಯಾ ಪ್ರದೇಶದ ಸೂರ್ಯ ಮತ್ತು ಚಂದ್ರರ ರೇಖಾಂಶದ ವ್ಯತ್ಯಾಸವನ್ನು 12 ಡಿಗ್ರಿಯಿಂದ ಭಾಗಿಸುವ ಮೂಲಕ ಗುರುತಿಸುತ್ತಾರೆ. ಸರಳವಾಗಿ ಹೇಳಬೇಕೆಂದರೆ ಚಂದ್ರ ಸೂರ್ಯನಿಂದ ಎಷ್ಟು ಡಿಗ್ರಿಯಷ್ಟು ದೂರದಲ್ಲಿದ್ದಾನೆ ಎನ್ನುವುದನ್ನು ಆಯಾ ದಿನದ/ಹೊತ್ತಿನ ತಿಥಿ ತಿಳಿಸುತ್ತದೆ. (ಇವು ಕೇವಲ ಸ್ಥೂಲ ಪರಿಚಯ; ಲೆಕ್ಕಾಚಾರವನ್ನು ಇಲ್ಲಿ ಕೊಟ್ಟಿಲ್ಲ) ಚಂದ್ರನ ತಿರುಗುವ ಗತಿ ಸೂರ್ಯನಿಂದಲೂ ತುಂಬಾ ವೇಗವಾಗಿರುವ ಕಾರಣ ಆತ ಪರಿಭ್ರಮಣ ಮಾಡುವಾಗ ಸೂರ್ಯನ ಸಂಗಡ ಅಥವಾ ಆತನಿಂದ 180 ಡಿಗ್ರಿ ದೂರದಲ್ಲಿಯ ತನಕ ಇರುತ್ತಾನೆ. ಜೊತೆಯಲ್ಲಿದ್ದಾಗ ಅಮಾವಾಸ್ಯೆ ಮತ್ತು ದೂರದಲ್ಲಿ ಇದ್ದಾಗ ಹುಣ್ಣಿಮೆ ಆಗುತ್ತದೆ. ಉಳಿದ ತಿಥಿಗಳು ಈ ನಡುವಿನ ದಿನಗಳಲ್ಲಿ ಬರುತ್ತವೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಚಾಂದ್ರಮಾನ ತಿಂಗಳ ಲೆಕ್ಕಾಚಾರ ಹೇಗೆ?

ಚಂದ್ರ ಭೂಮಿಯನ್ನು ಸುತ್ತಲು ತೆಗೆದುಕೊಳ್ಳುವ ಅವಧಿ 29.5306 ದಿನಗಳು; ಇದನ್ನು ಮೂವತ್ತು ತಿಥಿಗಳನ್ನಾಗಿ ವಿಭಜಿಸಲಾಯಿತು.
ಚಾಂದ್ರಮಾನ ವರ್ಷ :- 29.5306 X 12 = 354.3672 ದಿನಗಳು.
ಇಲ್ಲಿಗೆ ಸೌರಮಾನ ವರ್ಷಕ್ಕೂ ಮತ್ತು ಚಾಂದ್ರಮಾನ ವರ್ಷಕ್ಕೂ ಪ್ರತೀ ವರ್ಷದಲ್ಲಿಸುಮಾರು ಹನ್ನೊಂದು ದಿನಗಳ ಅಂತರವಿದೆ. ಕಾಲಮಾನದ ನಿಖರ ಅಧ್ಯಯನಕ್ಕೆ ಸೂರ್ಯ ಅಗತ್ಯವಿರುವ ಕಾರಣದಿಂದಾಗಿ ಮೂರು ವರ್ಷಗಳಿಗೊಮ್ಮೆ ಒಂದು ತಿಂಗಳನ್ನು ಪಂಚಾಂಗದಲ್ಲಿ ಹೆಚ್ಚಿಗೆ ಸೇರಿಸಿ ಅದನ್ನು ಅಧಿಕಮಾಸವೆಂದು ಕರೆಯುವ ವಿಧಾನವನ್ನು ಅನುಸರಿಸಿದರು.

ವಾಶಿಷ್ಠ ಸಿದ್ಧಾಂತದ ಪ್ರಕಾರ ಅಧಿಕ ಮಾಸವು ಪ್ರತೀ 32 ತಿಂಗಳು 16 ದಿವಸ 8 ಘಟಿಯ ಅಂತರದಲ್ಲಿ ಬರುತ್ತದೆ. ಒಂದು ತಾಸಿಗೆ 2.5 ಘಟಿ. ಒಂದು ದಿನಕ್ಕೆ ಅರವತ್ತು ಘಟಿಗಳು. ಹಿಂದಿನ ಅಧಿಕ ಮಾಸ 2020 ರಲ್ಲಿ ಆಶ್ವೀಜ ಮಾಸದಲ್ಲಿ ( 18 ಸೆಪ್ಟೆಂಬರ್ 2020 ರಿಂದ ಪ್ರಾರಂಬವಾಗಿ 16 ಅಕ್ಟೋಬರ್ 2020 ರತನಕ) ಬಂದಿತ್ತು ಈ ಸಂವತ್ಸರದಲ್ಲಿ ಶ್ರಾವಣ ಮಾಸವನ್ನು ಅಧಿಕ ಮಾಸವೆಂದು ಕರೆಯಲಾಗಿದೆ. ಈ ವೆತ್ಯಾಸ ಯಾಕೆ, ನಮ್ಮಲ್ಲಿಯೂ ನಿರ್ಧಿಷ್ಟ ತಿಂಗಳನ್ನು ಅಧಿಕಮಾಸವೆಂದು ಯಾಕೆ ಗುರುತಿಸಿಲ್ಲ ವೆನ್ನುವುದಕ್ಕೆ ಖಗೋಲ ಶಾಸ್ತ್ರದ ಲೆಕ್ಕಾಚಾರದ ಹಿನ್ನೆಲೆಯಿದೆ.

ಕಾಲ ಗಣನೆಯಲ್ಲಿ ಅನುಕೂಲವಾಗಲಿ ಎಂದು ಚಂದ್ರನ ಗತಿಯನ್ನು ಅನುಸರಿಸಿ ತಿಥಿ ವಾರ ನಕ್ಷತ್ರಗಳನ್ನು ಅನುಸರಿಸಿದರೂ ಅಂತಿಮವಾಗಿ ಇವೆಲ್ಲ ಸೂರ್ಯನ ಚಲನೆಗೆ ಹೊಂದಿಸಿಕೊಳ್ಳುವುದನ್ನು ಈಗಾಗಲೇ ತಿಳಿದಿದ್ದೀವೆ. ಹಾಗಾಗಿ ಪಂಚಾಂಗದಲ್ಲಿ ಚಂದ್ರಮಾನದ ತಿಂಗಳಾದ ಚೈತ್ರ, ವೈಶಾಖಗಳಂತೆ ಸೌರಮಾನದ ತಿಂಗಳಾದ ಮೇಷ ವೃಷಭ ಮಾಸಗಳನ್ನೂ ಅನುಸರಿಸುತ್ತಾರೆ. ಈ ಕಾರಣದಿಂದಲೇ ಯುಗಾದಿ ಆಚರಣೆಯಲ್ಲಿ ಚಂದ್ರಮಾನ ಯುಗಾದಿ ಮತ್ತು ಸೌರಮಾನ ಯುಗಾದಿ ಎನ್ನುವ ಎರಡು ಆಚರಣೆಗಳನ್ನು ಗಮನಿಸಬಹುದು.

ಅಮಾವಾಸ್ಯೆಯಿಂದ ಅಮಾವಾಸ್ಯೆಯ ತನಕ ಹೇಗೆ ಚಂದ್ರಮಾನ ತಿಂಗಳವೋ ಅದೇ ರೀತಿ ಸಂಕ್ರಾಂತಿಯಿಂದ ಸಂಕ್ರಾಂತಿಯ ತನಕ ಸೌರಮಾನದ ತಿಂಗಳು ಬರುತ್ತವೆ. (ಈ ವರ್ಷ ಚಾಂದ್ರಮಾನ ಯುಗಾದಿ ಮಾರ್ಚ್ 22 ಕ್ಕೆ ಬಂದರೆ ಸೌರಮಾನ ಯುಗಾದಿ ಎಪ್ರಿಲ್ 15 ಕ್ಕೆ ಬಂದಿದೆ). ಭೂಮಿಯನ್ನು ಪ್ರಮುಖವಾಗಿ ಮೇಷದಿಂದ ಮೀನದ ತನಕ ಹನ್ನೆರಡು ಅಕ್ಷಾಂಶಗಳನ್ನಾಗಿ ವಿಭಜಿಸಿದ್ದಾರೆ. ಪೃಥ್ವಿಯ ದೀರ್ಘ ವೃತ್ತಾಕಾರದ ಚಲನೆಯಿಂದಾಗಿ ಋತುಗಳ ಬದಲಾವಣೆಯಾಗುತ್ತದೆ ಎನ್ನುವ ವಿಷಯ ತಿಳಿದಿದೆ. ಸೂರ್ಯ ತಿಂಗಳಿಗೊಮ್ಮೆ ಒಂದು ರಾಶಿಯನ್ನು ಬದಲಿಸುತ್ತಾನೆ. ಇದಕ್ಕೇ ಸಂಕ್ರಾಂತಿ ಎಂದು ಹೆಸರು. ಹೀಗೆ ಮೇಷ ರಾಶಿಯಿಂದ ಮೀನ ರಾಶಿಯವರೆಗೆ ಒಂದು ವರ್ಷದಲ್ಲಿ 12 ಸಂಕ್ರಾಂತಿಗಳು ಆಗುತ್ತವೆ.

ಚೈತ್ರ ಮಾಸದಿಂದ ಫಾಲ್ಗುಣ ಮಾಸದವರೆಗೆ ಪ್ರತಿಯೊಂದು ಮಾಸದಲ್ಲಿ ಒಂದು ಸಂಕ್ರಮಣ ಇರುತ್ತದೆ. ಆದರೆ 32.5 ತಿಂಗಳಾದ ಮೇಲೆ 36ನೆಯ ತಿಂಗಳೊಳಗೆ ಬರುವ ಯಾವುದೋ ಮಾಸದಲ್ಲಿ ಸಂಕ್ರಾಂತಿಯೇ ಇರುವುದಿಲ್ಲ. ಹಿಂದಿನ ತಿಂಗಳಲ್ಲಿ ಅಮಾವಾಸ್ಯೆಯ ದಿನ ಸಂಕ್ರಾಂತಿ ಇರುತ್ತದೆ. ಮತ್ತು ಮುಂದಿನ ತಿಂಗಳಲ್ಲಿ ಪ್ರತಿಪದೆಗೆ ಸಂಕ್ರಾಂತಿ ಇರುತ್ತದೆ. ಯಾವ ತಿಂಗಳಲ್ಲಿ ಸಂಕ್ರಾಂತಿ ಇರುವುದಿಲ್ಲವೋ ಆ ತಿಂಗಳನ್ನು ಅಧಿಕ ಮಾಸವೆಂದು ಕರೆಯುತ್ತಾರೆ. ಈ ವರ್ಷ ಆಷಾಢ ಕಳೆದಮೇಲೆ ಬರುವ ಪ್ರತಿಪದೆಯಿಂದ ಅಮಾವಾಸ್ಯೆಯ(ತಾ. 18/07/2023 ರಿಂದ 17/08/2023) ನಡುವೆ ಸಂಕ್ರಾಂತಿ ಇಲ್ಲ. ಅದು ಶ್ರಾವಣ ಮಾಸದ ಹಿಂದಿನ ಮಾಸವಾಗಿರುವುದರಿಂದ ಅದನ್ನು ಅಧಿಕ ಶ್ರಾವಣವೆಂದು ಕರೆದಿದ್ದಾರೆ. ಅದಕ್ಕೂ ಮುಂದಿನ ತಿಂಗಳನ್ನು ನಿಜ ಶ್ರಾವಣವೆಂದು ಕರೆದಿದ್ದಾರೆ. ಮಹತ್ವದ ಸಂಗತಿಯೆಂದರೆ ಈ ಅಧಿಕ ಮಾಸವು ಮಾರ್ಗಶೀರ್ಷದಿಂದ ಮಾಘ ಮಾಸದ ತನಕ ಬರುವುದಿಲ್ಲ. ಕಾರ್ತೀಕ ಮಾಸವನ್ನೂ ಇದಕ್ಕೆ ಸೇರಿಸಬಹುದು. ಸುಮಾರು 250 ವರ್ಷಗಳಿಗೊಮ್ಮೆ ಕಾರ್ತೀಕ ಮಾಸದಲ್ಲಿ ಅಧಿಕಮಾಸ ಬರುತ್ತದೆ. 1963 ರಲ್ಲಿಯೊಮ್ಮೆ ಕಾರ್ತೀಕಮಾಸದಲ್ಲಿ ಅಧಿಕ ಮಾಸವಿತ್ತು.

ಕ್ಷಯಮಾಸವೂ ಉಂಟು!

ಅಧಿಕ ಮಾಸವಿರುವಂತೆಯೇ ಒಮ್ಮೆಮ್ಮೆ ಕ್ಷಯಮಾಸವೂ ಬರುತ್ತದೆ. ಅಂದರೆ ಯಾವ ತಿಂಗಳಲ್ಲಿಯಾದರೂ ಎರಡು ಅಮಾವಾಸ್ಯೆಯ ನಡುವೆ ಎರಡು ಸಂಕ್ರಾಂತಿ ಬರುವುದುಂಟು. ಸಂಕ್ರಾಂತಿಯ ಬಿಂದು ಬರುವ ಸ್ವಲ್ಪ ಮೊದಲು ಅಮಾವಾಸ್ಯೆ ಮುಕ್ತಾಯವಾದರೆ ಆ ತಿಂಗಳನ್ನು ಕ್ಷಯಮಾಸವೆನ್ನುತ್ತಾರೆ.

ಕಾರ್ತೀಕ ಮಾಸದಿಂದ ಮಾಘಮಾಸಗಳಲ್ಲಿ ಸೌರ ಮಾಸವು (ನವಂಬರದಿಂದ ಫೆಬ್ರುವರಿಯ ತನಕ) ಚಾಂದ್ರಮಾನಕ್ಕಿಂತ ಸ್ವಲ್ಪ ಕಡಿಮೆ ಅವಧಿಯದಾಗಿರುತ್ತದೆ. ಅದಕ್ಕಾಗಿಯೇ ಅಧಿಕಮಾಸಗಳು ಈ ತಿಂಗಳಲ್ಲಿ ಬರುವುದಿಲ್ಲ. ಸುಮಾರು 141 ವರ್ಷಗಳಿಗೊಮ್ಮೆ ಕ್ಷಯಮಾಸವು ಬರುತ್ತದೆ. ಕೊನೆಯದಾಗಿ 1982-83 ರಲ್ಲಿ ಮಾಘ ಮಾಸದಲ್ಲಿ ಕ್ಷಯ ಮಾಸ ಬಂದಿತ್ತು. ಅಂತಹ ವರ್ಷದಲ್ಲಿ ಎರಡು ಅಧಿಕ ಮಾಸಗಳು ಬರುತ್ತವೆ. ಮೊದಲನೆಯದು ಕ್ಷಯಮಾಸಕ್ಕಿಂತ ಎರಡು ಮೂರು ತಿಂಗಳು ಮೊದಲು, ಅದನ್ನು ಸಂಸರ್ಪ ಮಾಸವೆನ್ನುತ್ತಾರೆ. ಇನ್ನೊಂದನ್ನು ಮಲಿಮ್ಲಚ ಮಾಸವೆನ್ನುತ್ತಾರೆ.

ಇದನ್ನೂ ಓದಿ : ಧವಳ ಧಾರಿಣಿ ಅಂಕಣ: ಗುರುಶಿಷ್ಯ ಪರಂಪರೆ: ತತ್ತ್ವದರ್ಶನದ ಹಾದಿಯನ್ನು ತೋರಿಸುವ ಜ್ಞಾನದ ಬೆಳಕು

1982 ರ ಆಶ್ವೀಜ ಮಾಸ ಮೊದಲ ಅಧಿಕ ಮಾಸವಾದರೆ ಇನ್ನೊಂದು ಪಾಲ್ಗುಣ ಮಾಸ ಅಧಿಕಮಾಸವಾಗಿತ್ತು. ಸಂಕ್ಷಿಪ್ತವಾಗಿ ವಿವರಿಸಬೇಕೆಂದರೆ ಅಧಿಕ ಮಾಸವೆಂದರೆ ಸಂಕಾಂತಿ ರಹಿತ ಚಾಂದ್ರಮಾನ ಮಾಸ. ಕ್ಷಯ ಮಾಸವೆಂದರೆ ಎರಡು ಸಂಕ್ರಾಂತಿಗಳು ಒಂದು ಚಾಂದ್ರಮಾನ ಮಾಸದಲ್ಲಿ ಬರುವುದು.

ಅಧಿಕ ಮಾಸದಲ್ಲಿ ದೇವರ ಆರಾಧನೆಯ ಜೊತೆಗೆ ನಮ್ಮ ಪ್ರಾಚೀನ ಋಷಿಗಳ ಖಗೋಳ ಜ್ಞಾನಕ್ಕೂ ಗೌರವವನ್ನು ಸಲ್ಲಿಸೋಣ.

– ಲೇಖಕರು ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading
Advertisement
ipl 2024
ಪ್ರಮುಖ ಸುದ್ದಿ23 seconds ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ23 mins ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ52 mins ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು54 mins ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ59 mins ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ1 hour ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ1 hour ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ2 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ2 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ2 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ4 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ18 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌