Akshaya Tritiya Story in Hindu Scriptures and PuranasAkshaya Tritiya 2023 : ಪುಣ್ಯ ಸಂಗ್ರಹಣೆಯ ವಿಶೇಷ ದಿನ ಅಕ್ಷಯ ತೃತೀಯಾ - Vistara News

ಧಾರ್ಮಿಕ

Akshaya Tritiya 2023 : ಪುಣ್ಯ ಸಂಗ್ರಹಣೆಯ ವಿಶೇಷ ದಿನ ಅಕ್ಷಯ ತೃತೀಯಾ

ಇಂದು ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗುವ ಅಕ್ಷಯ ತೃತೀಯ (Akshaya Tritiya 2023). ಈ ದಿನದಂದು ಅಗತ್ಯ ವಸ್ತುಗಳನ್ನು ಸತ್ಪಾತ್ರರಿಗೆ ದಾನ ಮಾಡಿದರೆ, ಇಷ್ಟದೇವತೆಯ ಜಪ-ತಪಗಳನ್ನು ಮಾಡಿದರೆ ಅನಂತಫಲ ದೊರಕುತ್ತದೆ ಎಂದು ಪುರಾಣಗಳಲ್ಲಿ ಹೇಳಲಾಗಿದೆ.

VISTARANEWS.COM


on

Akshaya Tritiya Story in Hindu Scriptures and Puranas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Prerane

Akshaya Tritiya Story in Hindu Scriptures and Puranas

ಗಣೇಶ ಭಟ್ಟ
ಬೇಸಿಗೆಯ ಪ್ರಖರವಾದ ಬೇಗೆ ಎಲ್ಲೇಲ್ಲೂ ವ್ಯಾಪಿಸಿರುವ ಸಮಯವಾದ ವೈಶಾಖಮಾಸದಲ್ಲಿ ಪರಶುರಾಮ ಜಯಂತಿ, ಶಂಕರ ಜಯಂತಿ, ನೃಸಿಂಹ ಜಯಂತಿ, ಕೂರ್ಮಜಯಂತಿ, ಶನೈಶ್ಚರ ಜಯಂತಿ ಮೊದಲಾದ ಧಾರ್ಮಿಕವಾಗಿ ಮಹತ್ವ ಪಡೆದ ಹಬ್ಬಗಳಲ್ಲಿ ಬಹು ಮುಖ್ಯವಾಗಿ ವೈಶಾಖಮಾಸದ ಶುಕ್ಲ ಪಕ್ಷದ ತೃತೀಯಾದಂದು ಆಚರಿಸಲ್ಪಡುವ ಹಬ್ಬವೇ ಅಕ್ಷಯ ತೃತೀಯಾ (Akshaya Tritiya 2023) ಅಥವಾ ಅಕ್ಷಯ ತದಿಗೆ.

ಅಕ್ಷಯ ತೃತೀಯಾ ಕೃತ ಯುಗದ ಆರಂಭದ ದಿನ. ವಿಷ್ಣುವಿನ ದಶಾವತಾರಗಳಲ್ಲಿ ಆರನೇ ಅವತಾರವಾದ ಜನ್ಮತಃ ಬ್ರಾಹ್ಮಣ ಹಾಗೂ ಕರ್ಮದಿಂದ ಕ್ಷತ್ರಿಯನಾದ ಪರಶುರಾಮರ ಅವತಾರವಾದ ದಿನ, ಅಂದರೆ ಪರಶುರಾಮ ಜಯಂತಿ. ಭಗೀರಥನ ಪ್ರಯತ್ನದಿಂದ ಗಂಗೆ ಭೂಮಿಗೆ ಬಂದ ದಿನ. ಸೂರ್ಯದೇವನು ಯುಧಿಷ್ಠಿರನಿಗೆ ಅಕ್ಷಯ ಪಾತ್ರೆ ನೀಡಿದ ದಿನ. ಹಿಂದೂ ಕೀರ್ತಿಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಛತ್ರಪತಿ ಶಿವಾಜಿ ಜನಿಸಿದ ದಿನವೂ ಹೌದು. ಕಲ್ಯಾಣಕ್ರಾಂತಿಯ ರುವಾರಿ ಬಸವೇಶ್ವರರ ಜನ್ಮದಿನವೂ ಹೌದು.

ಧಾರ್ಮಿಕ-ಸಾಮಾಜಿಕವಾಗಿ ಮಹತ್ವ ಪಡೆದ ಅಕ್ಷಯ ತೃತೀಯೆಯು ವರ್ಷದ ಮೂರುವರೇ ಶುಭದಿನಗಳಾದ ಅಕ್ಷಯ್ಯತೃತೀಯೆ, ವಿಜಯದಶಮಿ, ದೀಪಾವಳಿ ಹಾಗೂ ಬಲಿಪಾಡ್ಯದ ಅರ್ಧದಿನಗಳಲ್ಲಿ ಒಂದಾಗಿದೆ. ಆ ಕಾರಣಕ್ಕಾಗಿ ಈ ದಿನದಂದು ಯಾವುದೇ ಶುಭಕಾರ್ಯವನ್ನು ಮಾಡಬಹುದು.

ಈ ದಿನದ ಮಹತ್ವವೇನು?

ನಿರ್ಣಯ ಸಿಂಧುವಿನ ಪ್ರಕಾರ ‘ವೈಶಾಖ ಶುಕ್ಲ ತೃತೀಯಾ ಅಕ್ಷಯ ತೃತೀಯೋಚ್ಯತೇ ||’ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ದಿನವೇ ಅಕ್ಷಯ ತೃತೀಯಾ. ಈ ದಿನ ಸಂಗ್ರಹಿಸಿದ ಪುಣ್ಯಗಳಿಗೆ ಕ್ಷಯ(ನಾಶ)ವೇ ಇಲ್ಲ ಎಂಬ ಕಾರಣಕ್ಕೆ ಈ ದಿನವನ್ನು ‘ಅಕ್ಷಯ ತೃತೀಯಾ’ಎಂದು ಕರೆಯಲಾಗಿದೆ. ಭವಿಷ್ಯ ಪುರಾಣದಲ್ಲಿ;
ಯತ್ಕಿಂಚಿತ್ ದೀಯತೇದಾನಂ ಸ್ವಲ್ಪಂ ವಾ ಯದಿ ವಾ ಬಹು |
ತತ್ಸರ್ವಂ ಅಕ್ಷಯಂ ಯಸ್ಮಾತ್‌ತೇನೇಯಂ ಅಕ್ಷಯಾ ಸ್ಮೃತಾ ||

ಈ ದಿನದಂದು ಸ್ವಲ್ಪವಾಗಲಿ, ಬಹಳವಾಗಲಿ ಅಥವಾ ಎಷ್ಟೇ ದಾನ ಮಾಡಿದರೂ ಅದರ ಫಲ ಅಕ್ಷಯವಾಗುವುದು.
ಯಾ ಮನ್ವಾದ್ಯಾಯುಗಾದ್ಯಾಶ್ಚ ತಿಥಿಯಸ್ತಾಸು ಮಾನವಃ |
ಸ್ನಾತ್ವಾ ಹುತ್ವಾ ಚ ದತ್ವಾ ಚ ಜಪ್ತ್ವಾ ನಂತ ಫಲಂ ಲಭೇತ್ ||
ಉದಕುಂಭಾನ್ಸಕನಕಾನ್ ಸಾನ್ನಾನ್ ಸರ್ವರಸೈಃ ಸಹ |
ಯವಗೋಧೂಮಚಣಕಾನ್ ಸಕ್ತುದಧ್ಯೋದನಂತಥಾ |
ಗ್ರೈಷ್ಮಿಕಂ ಸರ್ವಮೇವಾತ್ರ ಸಸ್ಯಂದಾನೇ ಪ್ರಶಸ್ಯತೇ ||

ಅಕ್ಷಯ ಫಲದಾಯಿನಿಯಾದ ಈ ದಿನ ದೇವ-ಪಿತೃಪೂಜೆಗೆ ಪ್ರಶಸ್ತವಾಗಿದ್ದು, ಗಂಗಾದಿ ಪುಣ್ಯ ನದಿಗಳಲ್ಲಿ, ಸಮುದ್ರದಲ್ಲಿ ಸ್ನಾನ, ಭಗವಂತನ್ನು ಉದ್ದೇಶಿಸಿ ಹೋಮ, ಬೇಸಿಗೆ ಕಾಲದಲ್ಲಿ ಹೇಚ್ಚಾಗಿ ಬಳಸಲ್ಪಡುವ ನೀರಿನ ಪಾತ್ರೆ, ಬಂಗಾರ, ಹಸಿವು ಹೋಗಲಾಡಿಸುವ ವಿವಿಧ ಬಗೆಯ ಆಹಾರಗಳು, ಬಾಯಾರಿಕೆ ನೀಗಿಸುವ ಕಬ್ಬಿನರಸ ಮುಂತಾದ ಪಾನೀಯಗಳು,ಅಕ್ಕಿ,ಗೋದಿ, ಕಡಲೆ ಮುಂತಾದ ಧಾನ್ಯಗಳು, ಹಿಟ್ಟು, ಮೊಸರು, ಅನ್ನ, ಸಸ್ಯ ಒಟ್ಟಿನಲ್ಲಿ ಗ್ರೀಷ್ಮಕಾಲದಲ್ಲಿ ಉಪಯೋಗಿಸುವ ಆಹಾರ, ವಸ್ತು ಮೊದಲಾದವುಗಳನ್ನು ಸತ್ಪಾತ್ರರಿಗೆದಾನ, ಇಷ್ಟದೇವತೆಯ ಜಪ-ತಪಗಳನ್ನು ಮಾಡಿದರೆ, ಅನಂತಫಲ ದೊರಕುವುದು ಎಂದು ಮಹಾಭಾರತ-ಭವಿಷ್ಯಪುರಾಣವೇ ಮೊದಲಾದ ಪುರಾಣಗಳಲ್ಲಿ ಹೇಳಿದೆ.

ಬೃಹತ್ಪರಾಶರ ಸಂಹಿತೆಯಲ್ಲಿ ; ದಾನಮೇಕಂಕಲೌಯುಗೇ’ ಎಂದು ಹೇಳಿದಂತೆ, ಯಾರಿಗೆ ಆಹಾರ, ಬಟ್ಟೆ, ಔಷಧಿ ಮುಂತಾದವುಗಳ ಸಹಾಯದ ಅವಶ್ಯಕತೆಯಿದೆಯೋ ಅವರಿಗೆ ತನು-ಮನ-ಧನಗಳ ಸಹಾಯ-ಸಹಕಾರ-ಸೇವೆ ಮಾಡಿದರೇ ಸರ್ವಪುಣ್ಯಗಳೂ ಲಭಿಸುವವು. ಅದೇ ನಿಜವಾದ ಭಗವಂತನ ಪೂಜೆಯಾಗಿದೆ. ದಾನದಿಂದಲೇ ಮನಸ್ಸಂತೋಷ, ಚಿತ್ತಶ್ಶುದ್ಧಿದೊರಕುವುದು, ‘ಅಕ್ಷಯ ಮೋಕ್ಷಸ್ಯಕಾರಣಮ್’ ಎನ್ನುವಂತೆ ಈ ದಿನ ಇವೆಲ್ಲವನ್ನು ಮಾಡುವುದರಿಂದ ಮೋಕ್ಷಕ್ಕೂ ಕಾರಣವಾಗುವುದು ಎಂದು ಪುರಾಣಗಳೂ ಸಾರಿವೆ.

ಪುರಾಣ ಕತೆಗಳಲ್ಲೇನಿದೆ?

ಅಕ್ಷಯ ತೃತೀಯಾ ವ್ರತದ ಕುರಿತಾಗಿ ಪ್ರಸಿದ್ಧ ಪುರಾಣ ಕಥೆಯೊಂದು ಹೀಗೆದೆ. ಹಿಂದೆ ಧರ್ಮದಾಸನೆಂಬ ವೈಶ್ಯನಿದ್ದ. ಅತ್ಯಂತ ಸದಾಚಾರಿಯಾದ ಆತ ದೇವತೆಗಳನ್ನು, ವಿಪ್ರರನ್ನು ಸದಾ ಶ್ರದ್ಧೆಯಿಂದ ಪೂಜಿಸುತ್ತಿದ್ದ. ಅಕ್ಯಯ ತೃತೀಯಾ ವ್ರತದ ಮಹತ್ವ ಅರಿತ ಆತ,ಅಕ್ಷಯ ತೃತೀಯಾ ಹಬ್ಬದ ದಿನದಂದು ಗಂಗಾ ನದಿಯಲ್ಲಿ ಸ್ನಾನ ಮಾಡಿ, ವಿಧಿ ಪೂರ್ವಕ ಭಗವಂತನ್ನು ಪೂಜಿಸಿ, ಸತ್ಪಾತ್ರರಿಗೆ ಬಂಗಾರ,ವಸ್ತ್ರ, ಆಹಾರ ಧಾನ್ಯಗಳನ್ನು ದಾನ ಮಾಡಿದ.

ವರ್ಷ ಕಳೆದಂತೆ ಅಶಕ್ತನಾಗಿಯೂ, ವೃದ್ಧನಾಗಿಯೂ ಈ ದಿನ ಉಪವಾಸ-ದಾನ-ಧರ್ಮಗಳನ್ನು ಕೈಗೊಂಡನು. ಅದೇ ವೈಶ್ಯನು ಮುಂದಿನ ಜನ್ಮದಲ್ಲಿ ಕುಶಾವತಿ ರಾಜ್ಯದ ರಾಜನಾದನು. ರಾಜನಾದಾಗಲೂ ಹಿಂದಿನ ಜನ್ಮಸಂಸ್ಕಾರ ವಿಶೇಷದಿಂದ ಅಕ್ಷಯ್ಯ ತೃತೀಯಾ ವ್ರತವನ್ನು ಆಚರಿಸಿದ. ಅಂದು ಸತ್ಪಾತ್ರರಿಗೆ ಗ್ರೀಷ್ಮಕಾಲದಲ್ಲಿ ಉಪಯೋಗಿಸುವ ವಸ್ತುಗಳನ್ನು ಯಥೇಚ್ಛವಾಗಿ ದಾನ ಮಾಡಿದ. ಸಾಕ್ಷಾತ್‌ ದೇವೆಂದ್ರನೇ ವೇಷ ಮರೆಸಿ ವಿಪ್ರ ವೇಷತೊಟ್ಟು ಅಕ್ಷಯ ತೃತೀಯಾ ದಂದು ರಾಜನ ದಾನಯಜ್ಞದಲ್ಲಿ ಪಾಲ್ಗೊಳ್ಳುತ್ತಿದ್ದ.

ರಾಜನಿಗೆ ತನ್ನ ಶ್ರದ್ಧೆ ಮತ್ತು ಭಕ್ತಿಯಕುರಿತಾಗಿ ಸ್ವಲ್ಪವೂ ಅಹಂಕಾರ ವಿರಲಿಲ್ಲ. ಈ ವ್ರತದ ಪ್ರಭಾವದಿಂದ ರಾಜ ಅತ್ಯಂತ ವೈಭವಶಾಲಿ ಯಾಗಿ ರಾಜ್ಯವಾಳಿದರೂ ಧರ್ಮಮಾರ್ಗದಿಂದ ವಿಚಲಿತನಾಗಿರಲಿಲ್ಲ. ಅಕ್ಷಯ ತೃತೀಯಾ ದಿನದಂದು ರಾಜ ನೆಡೆಸಿದ ದೇವಪೂಜನ ಹಾಗೂ ಸತ್ಪಾತ್ರರಿಗೆ ಸುವಸ್ತುಗಳನ್ನು ನೀಡಿದ ಫಲವಾಗಿ ಧನವಂತ-ಪ್ರತಾಪಿ ರಾಜನೆನಿಸಿಕೊಂಡು ಸದ್ಗತಿ ಹೊಂದಿದ.

ಆಚರಣೆ ಹೇಗೆ ಮಾಡಬೇಕು?

ಎಲ್ಲಾ ಹಬ್ಬಗಳಂತೆ ಈ ದಿನ ಪ್ರಾತಃಕಾಲದಲ್ಲಿ ನಿತ್ಯಕರ್ಮ ಮಂಗಲಸ್ನಾನ, ನವವಸ್ತ್ರ ಧಾರಣೆ ಮಾಡಿ, ಲಕ್ಷ್ಮೀನಾರಾಯಣನನ್ನು ಸಂದರ್ಶಿಸಿ, ಪೂಜಿಸಿ ಸತ್ಪಾತ್ರರಿಗೆ ಗ್ರೀಷ್ಮಕಾಲದಲ್ಲಿ ಉಪಯೋಗಿಸುವ ವಸ್ತುಗಳನ್ನು ದಾನಮಾಡಿ, ಅಥವಾ ದಾನ ಮಾಡುವೆಎಂದು ಸಂಕಲ್ಪಿಸಬೇಕು. ಫಲಾಹಾರ ಸೇವಿಸಿ, ಅಕ್ಷಯ ತೃತೀಯಾದ ಮಹತ್ವಸಾರುವ ಪುರಾಣಕಥೆ ಶ್ರವಣ ಮಾಡಬೇಕು.
ಪುರಾಣಗಳಲ್ಲಿ ಅಕ್ಷಯ ತೃತೀಯಾದಂದು ಬಂಗಾರ ಖರೀದಿಸಿ ಎಂದು ಹೇಳಿದ್ದಾರೆಯೇ?. ಇದು ಬಹಳ ಮುಖ್ಯವಾದ ಪ್ರಶ್ನೆ. ಪದ್ಮಪುರಾಣದ 64ನೇ ಅಧ್ಯಾಯದಲ್ಲಿ;
ವೈಶಾಖ ಶುಕ್ಲಪಕ್ಷೇತು ತೃತೀಯಾಯೈರು ಪೋಷಿತಾ |
ಅಕ್ಷಯಂ ಫಲಮಾಪ್ನೋತಿ ಸರ್ವಸ್ಯ ಸುಕೃತಸ್ಯ ಚ ||
ಸಾ ತಥಾಕೃತ್ತಿಕೋಪೇತಾ ವಿಶೇಷೇಣ ಸುಪೂಜಿತಾ |
ತತ್ರದತ್ತಂ ಹುತಂಜಪ್ತಂ ಸರ್ವಮಕ್ಷಯಮುಚ್ಯತೇ ||

ಎಂದು ಹೇಳಲಾಗಿದೆ. ಯಾರು ವೈಶಾಖಮಾಸದ ಶುಕ್ಲ ಪಕ್ಷದ ತೃತೀಯಾ ದಿನ ವ್ರತೋಪವಾಸಾದಿಗಳನ್ನು ಮಾಡುವರೋ ಅವರು ತಮ್ಮ ಸಮಸ್ತ ಸತ್ಕರ್ಮಗಳಿಗೆ ಅಕ್ಷಯವಾದ (ಎಂದಿಗೂ ನಾಶವಾಗದ, ಬರಿದಾಗದ) ಪುಣ್ಯಫಲವನ್ನು ಪಡೆಯುವರು. ಈ ದಿನ ಕೃತ್ತಿಕಾ ನಕ್ಷತ್ರದಿಂದ ಕೂಡಿದರೆ ಇನ್ನೂ ವಿಶೇಷ ಪೂಣ್ಯದಿನ. ಈ ದಿನ ಮಾಡುವದಾನ, ಹವನ ಹಾಗೂ ಜಪ ಇವೆಲ್ಲವೂ ಉಳಿದ ದಿನಗಳಿಗಿಂತ ವಿಶೇಷ ಪುಣ್ಯಫಲ ನೀಡುವುದಾಗಿದೆ ಎಂದು, ಈ ದಿನ ದಾನಾದಿಗಳನ್ನು ಮಾಡಲು ಪುರಾಣಗಳಲ್ಲಿ ಹೇಳಿದ್ದಾರೆಯೇ ಹೊರತೂ ಬಂಗಾರ ಇತ್ಯಾದಿ ಸಂಗ್ರಹಿಸಲು ಎಲ್ಲಿಯೂ ಹೇಳಿಲ್ಲ.

ಬಂಗಾರ ಅಥವಾ ಯಾವುದೇ ಅಮೂಲ್ಯವಾದ ವಸ್ತುಗಳನ್ನು ಅವಶ್ಯಕತೆ ಇದ್ದಾಗ ಯಾವಾಗ ಬೇಕಾದರೂ ಖರೀದಿಸಬಹುದು. ನಮ್ಮ ಸನಾತನ ಗ್ರಂಥಗಳಲ್ಲಿ ಈ ದಿನದಂದು ಬಂಗಾರ ಇತ್ಯಾದಿ ಸುವಸ್ತುಗಳನ್ನು ದಾನ ಮಾಡಲು ಹೇಳಿದ್ದಾರೆಯೇ ಹೊರತೂ, ಎಲ್ಲಿಯೂ ಬಂಗಾರ, ಭೂಮಿ, ಮನೆ ಮುಂತಾದ ಬೆಲೆಬಾಳುವ ವಸ್ತುಗಳನ್ನು ಖರೀದಿಸುವ ಕುರಿತಾಗಲಿ, ಸಂಗ್ರಹಿಸುವುದರ ಕುರಿತಾಗಿ ಹೇಳಿಲ್ಲ.

ಈ ದಿನ, ಸುವಸ್ತುಗಳನ್ನು ಸತ್ಪಾತ್ರರಿಗೆ ದಾನ ಮಾಡಿ ಪುಣ್ಯಸಂಗ್ರಹಣೆ ಮಾಡುವ ದಿನವಾಗಿದ್ದು, ಚಿನ್ನ ಮುಂತಾದವುಗಳ ಖರೀದಿಸುವ ಅಥವಾ ಸಂಗ್ರಂಹಣೆಯ ದಿನವಲ್ಲ. ಕೊಟ್ಟರೆಕೊಟ್ಟ ಪುಣ್ಯ ಅಕ್ಷಯವಾಗುವುದು ಎಂದು ಹೇಳಲಾಗಿದೆಯೇ ಹೊರತೂ ಖರೀದಿಸಿದ, ಸಂಗ್ರಹಿಸಿದ ವಸ್ತು ಅಕ್ಷಯ್ಯವಾಗುವುದು ಎಂಬುದಕ್ಕೆ ಯಾವುದೇ ಪ್ರಾಚೀನ ಗ್ರಂಥಗಳ ಆಧಾರವಿಲ್ಲ. ಚಿನ್ನ ಖರೀದಿಸುವ ಪರಿಪಾಠ ಬಂದ್ದದ್ದು ತೀರಾಇತ್ತೀಚಿಗೆ. ಮೌಲ್ಯ ವರ್ಧನೆ ವಸ್ತುಗಳನ್ನು ಖರೀದಿಸುವುದು, ಸಂಗ್ರಹಿಸುವುದು ಕಾಲಾಂತರದಲ್ಲಿ ಆರ್ಥಿಕವಾಗಿ ಲಾಭದದೃಷ್ಟಿಯಿಂದ, ಆ ದೃಷ್ಟಿಯಿಂದ ಬೇಕಾದರೆ ಖರೀದಿಸಬಹುದು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಎಲ್ಲಾ ಹಬ್ಬಗಳೂ ನಮ್ಮಜೀವನಕ್ಕೆ ಅಮೂಲ್ಯ ಸಂದೇಶ-ಪಾಠಗಳನ್ನು ಸಾರುತ್ತವೆ. ಅಕ್ಷಯ ತೃತೀಯಾ ಕೂಡ ಸಂಕಷ್ಟದಲ್ಲಿರುವವರಿಗೆ ಕೈಲಾದ ಸಹಾಯ ಮಾಡಿ ಎನ್ನುವ ಬಹುದೊಡ್ಡ ಸಂದೇಶವನ್ನು ಹೇಳಿದೆ. ಈ ಹಿನ್ನಲೆಯಲ್ಲಿ ಹಬ್ಬವನ್ನು ಅರಿತು ಆಚರಿಸಿದಲ್ಲಿ ಇಹ-ಪರಕ್ಕೆ ಕ್ಷೇಮವಾಗುವುದು.

– ಲೇಖಕರು ಸಂಸ್ಕೃತ ಉಪನ್ಯಾಸಕರು, ನೆಲ್ಲಿಕೇರಿ, ಕುಮಟಾ(ಉ.ಕ)

ಇದನ್ನೂ ಓದಿ: Akshaya Tritiya 2023 : ಅಕ್ಷಯ ತೃತೀಯಕ್ಕೆ ಉಂಟು ಪುರಾಣದ ನಂಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Bengaluru Rain
ಕರ್ನಾಟಕ2 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ2 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ3 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ3 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ3 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ3 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ3 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ4 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ7 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ8 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌