Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ - Vistara News

ಧಾರ್ಮಿಕ

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’ (Akshaya Tritiya 2024). ಹಿಂದುಗಳ ಪವಿತ್ರ ದಿನಗಳಲ್ಲಿ (Akshaya Tritiya 2024) ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತʼಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ.

VISTARANEWS.COM


on

Akshaya Tritiya 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Prof. Vidwan Navinashastri Ra. Puranika (writers, Sanskrit lecturers, culture thinkers and astrologers)

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)
ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ (Akshaya Tritiya 2024) ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ.ಹಿಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ಜಯಂತಿ, ಉತ್ಸವಗಳು, ಆರಾಧನೆ ಇತ್ಯಾದಿ ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ನಮ್ಮ ಈ ಪುಣ್ಯ ಭೂಮಿ ಭಾರತದಲ್ಲಿ ಎಲ್ಲಾ ಜನರು ಅತ್ಯಂತ ಪ್ರೀತಿಯಿಂದ, ಸಂತೋಷದಿಂದ ಬೆಸೆದುಕೊಂಡು ಇರಲು ಮುಖ್ಯ ಕಾರಣವೇನೆಂದರೆ, ನಮ್ಮ ಪೂರ್ವಜರು ಹಾಕಿಕೊಟ್ಟಂತಹ ಸಂಸ್ಕೃತಿ, ಪರಂಪರೆ ಹಾಗೂ ಕಾಲಕಾಲಕ್ಕೆ ಆಚರಿಸುವ ಹಬ್ಬ – ಹರಿದಿನಗಳು.
ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಾಗೂ ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ. ಹಬ್ಬಗಳೇ ನಮ್ಮ ಭಾರತದ ಉಸಿರು ಎಂದರೂ ತಪ್ಪಾಗಲಿಕ್ಕಿಲ್ಲ.
ಸನಾತನ ವೈದಿಕ ಹಿಂದೂ ಧರ್ಮದಲ್ಲಿ ಸಾಕಷ್ಟು ಹಬ್ಬ-ಹರಿದಿನಗಳು ಉತ್ಸವಗಳು ಆಚರಣೆಯಲ್ಲಿವೆ.
ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’. ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತ” ಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ದಿವಸ ಸಾಮಾನ್ಯವಾಗಿ ಯಾವುದೇ ಒಳ್ಳೆ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣಗಳಲ್ಲಿ ಉಲ್ಲೇಖವಿದೆ.

Akshaya Tritium

ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತ

ಪಂಚಾಂಗದಲ್ಲಿ ಅಕ್ಷಯ ತೃತೀಯದಂದು ಸೂರ್ಯ ಮತ್ತು ಚಂದ್ರರು ಏಕಕಾಲದಲ್ಲಿ ತಮ್ಮ ತಮ್ಮ ಶಕ್ತಿಯುತಸ್ಥಾನ – ಉಚ್ಚರಾಶಿಯಲ್ಲಿ (ಸೂರ್ಯ-ಮೇಷರಾಶಿಯಲ್ಲಿ ಮತ್ತು ಚಂದ್ರ – ವೃಷಭರಾಶಿಯಲ್ಲಿ) ಇರುವದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ಸೂರ್ಯನು ಆತ್ಮ ಮತ್ತು ದೇಹ ಪ್ರತಿಬಿಂಬಿಸಿದರೆ, ಚಂದ್ರನು ಮನಸ್ಸು ಮತ್ತು ಬುದ್ದಿ ಮೇಲೆ ಪ್ರಭಾವ ಬೀರುತ್ತಾನೆ. ಈ ರೀತಿಯಾಗಿ ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಎಂದು ಹೇಳುವರು. ಅಕ್ಷಯ ತೃತೀಯವು ಇಡೀ ವರ್ಷದಲ್ಲಿ ಬರುವ ಒಂದು ಅತ್ಯಂತ ಶುಭದಿನವಾಗಿದೆ.ಹಾಗಾಗಿ‌ ಮನೆಯಲ್ಲಿ ಪೂಜೆ ಹೋಮ ಹವನಾದಿಗಳನ್ನು ಮಾಡುವುದಾದರೆ ಅಥವಾ ಚಿನ್ನ ಖರೀದಿ ಮಾಡುವುದಾದರೆ ಇದು ಸೂಕ್ತವಾದ ದಿನ.ಇದರಿಂದ ಮತ್ತಷ್ಟು ನಮ್ಮಲ್ಲಿ ಸುಖ ಸಮೃದ್ದಿ ಸಂಪತ್ತು ಹೇರಳವಾಗುತ್ತದೆ.ಅಲ್ಲದೇ ಈ ದಿನದಂದು ವಿಷ್ಣು, ಲಕ್ಷ್ಮಿ ಹಾಗೂ ಕುಬೇರನನ್ನು ಜನರು ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಹಿಂದೂ ಪುರಾಣದ ಪ್ರಕಾರ ತ್ರೇತಾಯುಗವು ಆರಂಭವಾದದ್ದು ಈ ಅಕ್ಷಯ ತೃತೀಯದ ಶುಭದಿನದಂದೇ ಎನ್ನುವ ಉಲ್ಲೇಖವಿದೆ.

ಅಕ್ಷಯ ತೃತೀಯಕ್ಕೆ ಪುರಾಣದ ನಂಟು

ವೈಶಾಖ ಮಾಸಕ್ಕೆ ಸೂರ್ಯ ಅಭಿಮಾನಿ ದೇವತೆ. ಸೂರ್ಯನು ಬೆಳಕು ಮತ್ತು ಶಕ್ತಿಯ ಉಗಮ ಸ್ಥಾನ. ಸೂರ್ಯ ಜಗದ ಕಣ್ಣು. ಸೂರ್ಯ ಜಗವನ್ನು ಬೆಳಗುವವನು ಹೌದು. ಅವನ ಆಂತರ್ಯದಲ್ಲಿರುವುದೇ ಪ್ರಬಲವಾದ ಅಗ್ನಿ. ಅಗ್ನಿಯ ಮೊದಲ ಮಗನೇ ಹಿರಣ್ಯ (ಬಂಗಾರ). ಸೂರ್ಯ-ಅಗ್ನಿ-ಬಂಗಾರದ ಸಂಬಂಧ ಹೀಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ವೈಶ್ವಾನರಾಗ್ನಿಯ ರೂಪದಲ್ಲಿ ನಾನು ಎಲ್ಲರ ಹೃದಯದಲ್ಲಿರುತ್ತೇನೆ ಎಂದು. ವಿಸ್ತರಿಸಿ ಅರ್ಥೈಸುವುದಾದರೆ ನಾವು ಬಂಗಾರವನ್ನು ಧರಿಸಿಕೊಂಡಾಗ ನಮ್ಮ ಹೃದಯವಾಸಿಯಾದ ಅಗ್ನಿಯನ್ನು ಅವನ ಮಗ ಹಿರಣ್ಯ (ಬಂಗಾರ)ನಿಂದಲೇ ಅಲಂಕರಿಸದಂತಾಗುವುದು.
ಅಕ್ಷಯವೆಂದರೆ ಕ್ಷಯವಿಲ್ಲದ್ದು, ಕಡಿಮೆ ಇಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನವಿಲ್ಲದ್ದು. ಇದು ಸಮದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತತೆಯ ಪ್ರತೀಕ.ಧರ್ಮವು ಕರ್ತವ್ಯವನ್ನು, ಆಧ್ಯಾತ್ಮಿಕತೆಯನ್ನು ಅರ್ಥವು ಸಂಪತ್ತನ್ನು, ಕಾಮವು ಭೌತಿಕ ಸಂತೋಷವನ್ನು ಸೂಚಿಸುವ ಆಕಾಂಕ್ಷೆಗಳನ್ನು ಸಂಕೇತಿಸಿದರೆ, ಮೋಕ್ಷ ಈ ಭವಬಂಧನದಿಂದ ಮುಕ್ತವಾಗಿ ಏಕತ್ವದಲ್ಲಿ ಲೀನವಾಗುವುದರ ಸಂಕೇತವಾಗಿದೆ. ಈ ನಾಲ್ಕು ಪುರುಷಾರ್ಥಗಳ ಪೈಕಿ ಯಾವುದಾದರೊಂದರ ಆರಂಭ ಮಾಡುವುದಿದ್ದರೂ ಅದಕ್ಕೆ ಎಲ್ಲ ರೀತಿಯಿಂದಲೂ ಅನುಕೂಲಕರವಾದ ಶುಭ ದಿನವೇ ಈ ಅಕ್ಷಯ ತೃತೀಯ.

ಅಕ್ಷಯ ತೃತೀಯ ಮಹತ್ವ ಏನು?

ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಪ್ರಿಯವಾದ ಹೇಮ (ಚಿನ್ನ) ರಜತಾದಿ ಒಡವೆಗಳನ್ನು ಖರೀದಿಸಿ ಅರ್ಪಿಸಿ ಕೃತಾರ್ಥರಾಗುವರು ಭಾರತೀಯ ಆಸ್ತಿಕರು. ವಿಷ್ಣು ಸಹಸ್ರನಾಮದಲ್ಲಿ ಹೇಳಿದಂತೆ ವಿಷ್ಣು ಸುವರ್ಣ ವರ್ಣದವನು. ಮಾತ್ರವಲ್ಲ, ಅಷ್ಟಶ್ವರ್ಯಗಳ ಅಧಿಪತಿ ಕುಬೇರ. ಈ ಒಂದು ದಿನ ಸ್ವತಃ ಐಶ್ವರ್ಯ ದೇವತೆ ಲಕ್ಷ್ಮಿಯನ್ನು ಪೂಜಿಸುತ್ತಾನೆ ಎಂದು ಲಕ್ಷ್ಮೀತಂತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ದೈವಭಕ್ತರಿಗೆ ಇದೊಂದೇ ದಿನ ಕುಬೇರ ಲಕ್ಷ್ಮೀ ಪೂಜೆ ಮಾಡಲು ಅವಕಾಶ. ವಿಶೇಷವಾಗಿ ತುಪ್ಪದ ದೀಪ ಹಚ್ಚಿ ಪೂಜಿಸಲಾಗುತ್ತದೆ.

Akshaya Tritium photo

ಪುರಾಣ ಪುಣ್ಯ ಕಥೆಗಳಲ್ಲಿ ಅಕ್ಷಯ ತೃತೀಯದ ವಿಶೇಷತೆ

ಈ ದಿನ ಹಲವು ಮಹತ್ಕಾರ್ಯಗಳು ಶುರುವಾದ ದಿನ ಕೃತಯುಗ (ಸತ್ಯ ಯುಗ) ಶುರುವಾದ ದಿನ ಎಂದು ಹೇಳಲಾಗುತ್ತದೆ. ವೇದವ್ಯಾಸರು ಗಣಪತಿ ಆಶೀರ್ವಾದ ಪಡೆದು ಮಹಾಭಾರತ ಬರೆಯಲು ಪ್ರಾರಂಭಿಸಿದ ದಿನ. ಗಂಗಾ ಮಾತೆ ಕೈಲಾಸದಿಂದ ಭೂಮಿಗೆ ಇಳಿದ ದಿನ ಎಂದು ಹೇಳಲಾಗುತ್ತದೆ. ಈ ದಿನ ಹಲವು ಮಹಾತ್ಮರು ಹುಟ್ಟಿದ ದಿನ ಜಗಜ್ಯೋತಿ ಬಸವಣ್ಣ ಹುಟ್ಟಿದ ದಿನ. ಬಲರಾಮ ಜಯಂತಿ ಅನ್ನೂ ಇಂದು ಆಚರಿಸಲಾಗುತ್ತದೆ. ವಿಷ್ಣು ಪರಶುರಾಮನಾಗಿ ಅವತಾರವೆತ್ತಿದ ದಿನ. ಇನ್ನೂ ಹಲವು ಮಹತ್ ಘಟನೆಗಳು ಈ ದಿನ ನಡೆದಿವೆ ಎಂದು ಪುರಾಣಗಳು ಹೇಳುತ್ತವೆ. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ ದಿನ. ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು ಈ ಅಕ್ಷಯ ತೃತೀಯದ ದಿನವೇ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದ ದಿನ.
ಈ ದಿನ ವಿಷ್ಣು ಮತ್ತು ಲಕ್ಷ್ಮಿ ಗಂಗಾಸ್ನಾನ ಮಾಡಿ, ಗಂಗೆಯನ್ನು ಪುಜಿಸಿದ್ದರೆಂದು. ಅಂದಿನಿಂದ ಗಂಗಾ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆ ಎಂಬ ರೂಢಿ ಬಂದಿತು ಎಂದು ಹೇಳಲಾಗುತ್ತದೆ. ಕೃಷ್ಣನು ಕುಚೇಲನನ್ನು ಸತ್ಕರಿಸಿದ ಪುಣ್ಯ ದಿನ. ಈ ಎಲ್ಲ ವಿಶೇಷತೆಗಳು ನಡೆದದ್ದು ಈ ಅಕ್ಷಯ ತೃತೀಯ ದಿನದಂದೇ ಎಂದು ಪುರಾಣಗಳ ಕಥೆಗಳು ಹೇಳುತ್ತವೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಜ್ಯೋತಿಷ ಶಾಸ್ತ್ರದ ಮೂಲಕ ಅಕ್ಷಯ ತೃತೀಯ

ಅಕ್ಷಯ ತೃತೀಯ ಯಾವ ನಕ್ಷತ್ರದಲ್ಲಿ ಬಂದರೆ ಹೆಚ್ಚು ಶ್ರೇಷ್ಠ?
ಈ ಹಬ್ಬ ‘ತೃತೀಯ ತಿಥಿ’ (ತದಿಗೆಯ ದಿನ) ಯಲ್ಲಿ ಮತ್ತು ‘ವೃಷಭ ರಾಶಿ’ಯ ದಿನ ಆಚರಣೆ ಮಾಡುತ್ತಾರೆ. ಆದರೆ ಈ ವೃಷಭ ರಾಶಿ ಮತ್ತು ತೃತೀಯ ತಿಥಿ ಎರಡೂ ಜೊತೆಯಲ್ಲಿ ಬರುವಾಗ ಅಂದು ಮೂರು ನಕ್ಷತ್ರಗಳಲ್ಲಿ (ಕೃತಿಕಾ, ರೋಹಿಣಿ, ಮೃಗಶಿರ) ಯಾವುದಾದರೊಂದು ಬರುವ ಸಾಧ್ಯತೆ ಇದೆ. ಅಕ್ಷಯ ತೃತೀಯ, ಶುಕ್ಲ ಪಕ್ಷದ ಮೂರನೇ ದಿನ / ತೃತೀಯ ತಿಥಿ ಯಲ್ಲಿ ಬರುತ್ತದೆ.

7 ಗ್ರಹಗಳು 360 ಡಿಗ್ರಿ ವೃತ್ತದ ಯಾವ ಯಾವ ಡಿಗ್ರಿ ಯಲ್ಲಿ ಉಚ್ಚರಾಗಿರುತ್ತಾರೆ.
ಸೂರ್ಯ: ಮೇಷದ 19ನೇ ಡಿಗ್ರಿ (ಅಂದರೆ 18°00′ – 18°59′); (ಪೂರ್ಣ ವೃತ್ತದ 19ನೆ ಡಿಗ್ರಿ)
ಚಂದ್ರ: ವೃಷಭರಾಶಿಯ 3ನೇ ಡಿಗ್ರಿ; (ಪೂರ್ಣ ವೃತ್ತದ 33ನೆ ಡಿಗ್ರಿ);
ಗುರು: ಕಟಕ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 105ನೆ ಡಿಗ್ರಿ);
ಬುಧ: ಕನ್ಯಾ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 165ನೆ ಡಿಗ್ರಿ);
ಶನಿ: ತುಲಾ ರಾಶಿಯ 21ನೆ ಡಿಗ್ರಿ; (ಪೂರ್ಣ ವೃತ್ತದ 201ನೆ ಡಿಗ್ರಿ);
ಮಂಗಳ: ಮಕರ ರಾಶಿಯ 28ನೆ ಡಿಗ್ರಿ; (ಪೂರ್ಣ ವೃತ್ತದ 298ನೆ ಡಿಗ್ರಿ);
ಶುಕ್ರ: ಕುಂಭ ರಾಶಿಯ 27ನೆ ಡಿಗ್ರಿ; (ಪೂರ್ಣ ವೃತ್ತದ 327ನೆ ಡಿಗ್ರಿ);

ಡಿಗ್ರಿ ಲೆಕ್ಕಾಚಾರ

ಒಂದು ಪೂರ್ಣ ವೃತ್ತ = 360 ಡಿಗ್ರಿ. ಈ 360 ಡಿಗ್ರಿ ವೃತ್ತವನ್ನ 12 (ರಾಶಿಗಳು) ಭಾಗಗಳಾಗಿ ಮಾಡಿದಾಗ ಒಂದೊಂದು ರಾಶಿಗೆ 30 ಡಿಗ್ರಿ ಆಗುತ್ತದೆ. ಈ 360 ಡಿಗ್ರಿ ವೃತ್ತವನ್ನ 27 ನಕ್ಷತ್ರಗಳಿಗೆ ಹಂಚಿದರೆ ಒಂದೊಂದು ನಕ್ಷತ್ರಕ್ಕೆ 13° 20′ ಬರುತ್ತದೆ. 27 ನಕ್ಷತ್ರಗಳನ್ನ 12 ರಾಶಿಗಳಿಗೆ ಹಂಚಿದರೆ ಒಂದೊಂದು ರಾಶಿಗೆ ಎರಡೂವರೆ ನಕ್ಷತ್ರಗಳು ಬರುತ್ತವೆ. ಒಂದು ನಕ್ಷತ್ರದಲ್ಲಿ ನಾಲ್ಕು ಪಾದಗಳಿರುತ್ತವೆ ಹಾಗಾಗಿ ಒಂದೊಂದು ಪಾದ 3° 20′ ಜಾಗವನ್ನಾಕ್ರಮಿಸುತ್ತದೆ.
ಒಂದು ರಾಶಿಗೆ ಎರಡೂವರೆ ನಕ್ಷತ್ರಗಳಾದ್ದರಿಂದ ಮತ್ತು ಒಂದು ನಕ್ಷತ್ರಕ್ಕೆ 4 ಪಾದಗಳಾದ್ದರಿಂದ ಒಂದು ರಾಶಿಗೆ 9 ಪಾದಗಳು. ಇದು 13° 20′ ಆಗುತ್ತದೆ. ಉದಾಹರಣೆ: ಮೇಷರಾಶಿಯಲ್ಲಿನ 10 ಪಾದ (ಎರಡೂವರೆ ನಕ್ಷತ್ರ) ಗಳು = 4 ಅಶ್ವಿನಿ + 4 ಭರಣಿ + 2 ಕೃತ್ತಿಕಾ = 4×3° 20′ + 4×3° 20’+ 1×3° 20′ = 30ಡಿಗ್ರಿ

ಉದಾಹರಣೆಯಲ್ಲಿ ಹೇಳಿದಂತೆ

  • ಅಶ್ವಿನಿ ಭರಣಿ ಕೃತ್ತಿಕಾ ಪಾದಂ ಮೇಷಃ। ಎಂಬುದು ಹೀಗೆ ಏಲ್ಲಾ ನಕ್ಷತ್ರ ಹಾಗೂ ದ್ವಾದಶ ರಾಶಿಗಳಿಗೂ ಸಹ ಈ ರೀತಿಯಾದ ಶ್ಲೋಕಗಳು ಇವೆ.
  • ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರ, ಭರಣಿ ನಕ್ಷತ್ರ ಮತ್ತು ಕೃತ್ತಿಕಾದ ಮೊದಲ ಪಾದ ಬರುತ್ತವೆ. ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರದ ಮೂರು ಮತ್ತು ನಾಲ್ಕನೇ ಪಾದಗಳು ಮತ್ತು ರೋಹಿಣಿ, ಮೃಗಶಿರ ನಕ್ಷತ್ರಗಳು ಬರುತ್ತವೆ. ನಾವು ಮಾತಿನಲ್ಲಿ ಸೂರ್ಯ ಮೇಷರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ, ಇನ್ನೂ ಆಳಕ್ಕಿಳಿದು ನೋಡಿದರೆ ಈ ಸೂರ್ಯ ಮೇಷ ರಾಶಿಯ ಭರಣಿ ನಕ್ಷತ್ರ (13° 20′ ರಿಂದ 26° 40′) ದಲ್ಲಿ ಮಾತ್ರ ನಿಜವಾಗಿ ಉಚ್ಚ (19 ಡಿಗ್ರಿ – ಭರಣಿ 3 ನೆ ಪಾದ) ನಾಗಿರುತ್ತಾನೆ ಅಂತ ತಿಳಿಯುತ್ತದೆ.
  • ಸರಳೀಕರಿಸಿ ನಾವು ಚಂದ್ರನು ವೃಷಭರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ ಸಹ, ಸರಿಯಾಗಿ ಲೆಕ್ಕ ಹಾಕಿದರೆ ಈ ಚಂದ್ರ ವೃಷಭ ರಾಶಿಯ ಕೃತಿಕಾ ನಕ್ಷತ್ರದ 3 ನೇ ಪಾದದಲ್ಲಿ ತನ್ನ ನಿಜ ಉಚ್ಚ ಸ್ಥಾನದಲ್ಲಿರುತ್ತಾನೆ.
  • ಇನ್ನೊಂದು ಪುರಾಣ ಕತೆಯ ಮೂಲಕ ಯೋಚನೆ ಮಾಡೋದಾದರೆ, ಚಂದ್ರನಿಗೆ 27 ಜನ ( ಇವೇ 27 ನಕ್ಷತ್ರಗಳು) ಹೆಂಡತಿಯರು ಅನ್ನುತ್ತಾರೆ. ಚಂದ್ರ ತನ್ನ ಪ್ರತಿ ಹೆಂಡತಿಯ ಜೊತೆ ಒಂದೊಂದು ದಿನ ಇರುತ್ತಾನೆ ಎನ್ನುವ ಕತೆ ಇದು. ಈ 27 ಹೆಂಡತಿಯರಲ್ಲಿ ರೋಹಿಣಿ ಚಂದ್ರನಿಗೆ ಪ್ರಿಯವಾದ ಹೆಂಡತಿ ಅಂತೆ. ಹಾಗಾಗಿ ಕೆಲ ಕತೆಗಳು ರೋಹಿಣಿ ನಕ್ಷತ್ರದ ದಿನ ಬಂದರೆ (ಅಂದರೆ ಚಂದ್ರ ರೋಹಿಣಿ ನಕ್ಷತ್ರದಲ್ಲಿದ್ದಾಗ) ಅಕ್ಷಯ ತೃತೀಯ ಹೆಚ್ಚು ಶ್ರೇಷ್ಠ ಅನ್ನುವ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಮಾಡುವ ಕೆಲಸಕ್ಕೆ ಶುಭ ಫಲ

ಅಕ್ಷಯ ತೃತೀಯ ದಿನದಂದು ಈ ಶುಭ ಮುಹೂರ್ತದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಶುಭ ಫಲವನ್ನು ಪಡೆದುಕೊಳ್ಳುವಿರಿ. ಅಕ್ಷಯ ತೃತೀಯದಂದು ರೂಪುಗೊಳ್ಳುವ ಈ ಶುಭ ಸಂಯೋಗವು ನಿಮ್ಮ ಜೀವನದಲ್ಲಿ ಶುಭವನ್ನೇ ತರುತ್ತದೆ. ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಮಾಡಿದರೆ ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ. ನಮ್ಮ ಹೆಣ್ಣುಮಕ್ಕಳು ಒಡವೆಯನ್ನು ಖರೀದಿಸಲು ತುಂಬಾ ಇಷ್ಟ ಪಡುತ್ತಾರೆ. ಏಕೆಂದರೆ ಅದು ಕೂಡ ಅಪತ್ಕಾಲಕ್ಕೆ ನೆರವಾಗುವ ಆಸ್ತಿಯಲ್ಲವೇ.!? ಹಾಗೇ ಹೆಣ್ಣಿನ ಸೌಂದರ್ಯದ ಮತ್ತು ಹೆಮ್ಮೆಯ ಪ್ರತೀಕ ಈ ಒಡವೆ. ಅಲ್ಲದೇ ಈ ನಂಬಿಕೆ ತಲಾಂತರಗಳಿಂದ ಇಷ್ಟು ಗಟ್ಟಿಯಾಗಿ ಜನರು ನಂಬಿಕೊಂಡು ಬಂದಿದ್ದಾರೆಂದರೆ ಏನು ಅರ್ಥ? ಆ ದಿನದ ಮಹಿಮೆಯಿಂದ ನಂಬಿದವರ ಜೀವನದಲ್ಲಿ ಒಳ್ಳೆಯದು ಆಗಿದೆ ಎಂದೇ ಅರ್ಥ, ಅಲ್ಲವೇ? ನಮ್ಮ ಭಾರತೀಯ ಪಂಚಾಂಗ ಸುಮ್ಮನೆ ಬಂದಿಲ್ಲ ಅದು ಒಂದು ವಿಜ್ಞಾನ ಎನ್ನುವುದಕ್ಕೆ ಇದು ಕೂಡ ಒಂದು ಸಾಕ್ಷಿ. ಈ ರೀತಿಯಾದ ವೈಜ್ಞಾನಿಕ ಸಂತ್ಯಾಂಶವುಳ್ಳ ಅಕ್ಷಯ ತೃತೀಯ ನಾಡಿನ ಜನತೆಗೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಉಜ್ವಲತೆಯನ್ನು, ಎಲ್ಲ ಜೀವಿಗಳಿಗೂ ಹಚ್ಚ ಹಸುರಾದ ಸುಖ ಶಾಂತಿಯನ್ನು ನೀಡುವಂತಹ ಪುಣ್ಯಮಯವಾದ ಮಹಾನ್ ಪರ್ವವಾಗಲಿ ಎಂದು ಪ್ರಾರ್ಥಿಸುತ್ತಾ ಈ ರೀತಿಯಾಗಿ ನಾವೇಲ್ಲರೂ
ಅಕ್ಷಯ ತೃತೀಯ ದಿನದ ನಿಜ ಅರ್ಥವನ್ನು ತಿಳಿದು ಆಚರಿಸೋಣ ಸಂಭ್ರಮಿಸೋಣ.
ಲೋಕಾಃ ಸಮಸ್ತಾಃ ಸುಖಿನೋ ಭವಂತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Pretha Maduve: ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ.

VISTARANEWS.COM


on

pretha maduve
Koo

ಮಂಗಳೂರು: ಕರ್ನಾಟಕ ಕರಾವಳಿಯ (karnataka Coastal) ತುಳುನಾಡಿನ (Tulunadu) ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ (Pretha Maduve) ಸಜ್ಜಾಗಿದ್ದ ವಧುವಿಗೆ (bride) ವರ (groom) ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ (Souls) ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ (Folk) ರೀತಿಯಲ್ಲಿ ನಡೆಯುತ್ತದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಈ ʼವಧುʼ ಒಂದು ವಾರದ ಮಗುವಾಗಿದ್ದಾಗಲೇ ತೀರಿಕೊಂಡಿದ್ದಳು. ಇದು ನಡೆದು 30 ವರ್ಷಗಳು ಆಗಿವೆ. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ. ಈ ಮಗುವಿಗೆ ನಾಮಕರಣವೂ ಆಗಿರಲಿಲ್ಲ. ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

Pretha Maduve

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.

ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ಇದನ್ನೂ ಓದಿ: Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Continue Reading

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
Karnataka weather Forecast
ಕರ್ನಾಟಕ15 mins ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ17 mins ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ23 mins ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ30 mins ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ43 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ45 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ51 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ53 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ1 hour ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ1 hour ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌