Ram Mandir: ರಾಮಮಂದಿರಕ್ಕೆ ವಿಜ್ಞಾನದ ಬಲ; ಸಾವಿರ ವರ್ಷವಾದರೂ ಏನೂ ಆಗಲ್ಲ, ಹೇಗೆ ಅಂತೀರಾ? - Vistara News

ದೇಶ

Ram Mandir: ರಾಮಮಂದಿರಕ್ಕೆ ವಿಜ್ಞಾನದ ಬಲ; ಸಾವಿರ ವರ್ಷವಾದರೂ ಏನೂ ಆಗಲ್ಲ, ಹೇಗೆ ಅಂತೀರಾ?

Ram Mandir: ರಾಮಮಂದಿರ ನಿರ್ಮಾಣಕ್ಕೆ ನುರಿತ ಎಂಜಿನಿಯರ್‌ಗಳು, ವಿಜ್ಞಾನಿಗಳು ಶ್ರಮ ವಹಿಸಿದ್ದಾರೆ. ಹಾಗಾಗಿ, ಯಾವುದೇ ಪ್ರಾಕೃತಿಕ ವಿಕೋಪ ಸಂಭವಿಸಿದರೂ ರಾಮಮಂದಿರಕ್ಕೆ ಕಿಂಚಿತ್ತೂ ಹಾನಿಯಾಗುವುದಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ram Mandir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ (Ram Mandir) ಲೋಕಾರ್ಪಣೆಗೆ ಮೂರೇ ದಿನಗಳು ಬಾಕಿ ಉಳಿದಿವೆ. ರಾಮನಗರಿ ಅಯೋಧ್ಯೆಯಲ್ಲಿ ಹಬ್ಬ, ಜಾತ್ರೆಯ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನವರಿ 22ರಂದು ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಇನ್ನು ರಾಮಮಂದಿರವನ್ನು ವೈಜ್ಞಾನಿಕವಾಗಿ, ಸದೃಢವಾಗಿ ನಿರ್ಮಿಸಲಾಗಿದ್ದು, ಒಂದು ಸಾವಿರ ವರ್ಷ ಕಳೆದರೂ ಮಂದಿರಕ್ಕೆ ಹಾನಿಯಾಗದಿರುವ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ.

ಸಾವಿರ ವರ್ಷದವರೆಗೆ ರಿಪೇರಿಯೇ ಬೇಡ

ರಾಮಮಂದಿರವನ್ನು ಕಬ್ಬಿಣ, ಉಕ್ಕು ಸೇರಿ ಯಾವುದೇ ವಸ್ತುಗಳನ್ನು ಬಳಸದೆ, ವಿಶೇಷ ಕಲ್ಲುಗಳಿಂದ ನಿರ್ಮಿಸಲಾಗಿದೆ. ಸುಮಾರು 15 ಅಡಿ ಅಗೆದು, ಮಣ್ಣು ತೆಗೆದು, ಆ ಮಣ್ಣನ್ನು ರಿ-ಎಂಜಿನಿಯರಿಂಗ್‌ ಮಾಡಿ ಮತ್ತೆ ತುಂಬಲಾಗಿದೆ. ದೇಶದ ತಜ್ಞ ಎಂಜಿನಿಯರ್‌ಗಳು, ತಜ್ಞರು ರಾಮಮಂದಿರಕ್ಕಾಗಿ ಶ್ರಮಿಸಿದ್ದಾರೆ. ಹಾಗಾಗಿ, ಒಂದು ಸಾವಿರ ವರ್ಷವಾದರೂ ರಾಮಮಂದಿರವನ್ನು ಕನಿಷ್ಠ ರಿಪೇರಿ ಮಾಡಬೇಕಾಗಿಲ್ಲ ಎಂದು ಹೇಳಲಾಗುತ್ತಿದೆ.

6.5 ತೀವ್ರತೆಯ ಭೂಕಂಪ ಸಂಭವಿಸಿದರೂ ಏನೂ ಆಗಲ್ಲ

ನೇಪಾಳವು ನಮ್ಮ ಗಡಿ ರಾಷ್ಟ್ರವಾದ ಕಾರಣ, ಅಲ್ಲಿ ಭೂಕಂಪ ಸಂಭವಿಸಿದರೆ ಹೆಚ್ಚು ಪರಿಣಾಮ ಬೀರುತ್ತದೆ. ಇದನ್ನು ಮನಗಂಡೇ ರಾಮಮಂದಿರಕ್ಕೆ ವಿಶೇಷ ಬುನಾದಿ ಹಾಕಲಾಗಿದೆ. ಐಐಟಿ ಎಂಜಿನಿಯರ್‌ಗಳು, ತಜ್ಞರು ರಾಮಮಂದಿರ ಬುನಾದಿಗೆ ಶ್ರಮಿಸಿದ್ದಾರೆ. ಹಾಗಾಗಿ, ರಿಕ್ಟರ್‌ ಮಾಪನದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದರೂ ರಾಮಮಂದಿರಕ್ಕೆ ಏನೂ ಆಗುವುದಿಲ್ಲ.

ರಾಮಮಂದಿರ ನಿರ್ಮಾಣದ ವೈಶಿಷ್ಟ್ಯಗಳು

  • ರಾಮಮಂದಿರದ ಬುನಾದಿಯನ್ನು ರಾತ್ರಿ ವೇಳೆ ಮಾತ್ರ ನಿರ್ಮಿಸಲಾಗಿದೆ. ತಾಪಮಾನದ ಕಾರಣದಿಂದಾಗಿ ರಾತ್ರಿ ಮಾತ್ರ ಬುನಾದಿ ಹಾಕಲಾಗಿದೆ.
  • ಬುನಾದಿಗೆ 21 ಅಡಿ ದಪ್ಪದ ಗ್ರಾನೈಟ್‌ ಬಳಸಲಾಗಿದೆ. ಸೇತುವೆ ನಿರ್ಮಾಣಕ್ಕೆ ಬಳಸುವ ಪಿಲ್ಲರ್‌ಗಳನ್ನು ಬುನಾದಿಗೆ ಹಾಕಲಾಗಿದೆ.
  • ಧೂಳು, ಕೆಮಿಕಲ್‌ ಮಿಶ್ರಣ ಮಾಡಿ, 56 ಲೇಯರ್‌ಗಳ ಮೂಲಕ ರಾಮಮಂದಿರ ನಿರ್ಮಿಲಾಗಿದೆ. ಇದಕ್ಕಾಗಿ ವಿಶೇಷ ಕಾಂಕ್ರೀಟ್‌ ಹಾಕಲಾಗಿದೆ.
  • ಕನ್‌ಸ್ಟ್ರಕ್ಷನ್‌ ದೈತ್ಯ ಲಾರ್ಸೆನ್‌ ಆ್ಯಂಡ್‌ ಟರ್ಬೊ, ಟಾಟಾ ಕನ್ಸಲ್ಟಿಂಗ್‌ ಎಂಜಿನಿಯರ್ಸ್‌ ಲಿಮಿಟೆಂಡ್‌ ಕಂಪನಿಗಳು ನಿರ್ಮಾಣದ ಹೊಣೆ ಹೊತ್ತುಕೊಂಡಿವೆ.
  • ನಾಗರ ಶೈಲಿಯಿಂದ ಸ್ಫೂರ್ತಿ ಪಡೆದು, 360 ಪಿಲ್ಲರ್‌ಗಳನ್ನು ಬಳಸಿ ರಾಮಮಂದಿರ ನಿರ್ಮಿಸಲಾಗಿದೆ. ಇಡೀ ಮಂದಿರವನ್ನು ಕಲ್ಲಿನಿಂದಲೇ ನಿರ್ಮಿಸಲಾಗಿದೆ. ಸಿಮೆಂಟ್‌, ಕಬ್ಬಿಣ, ಸ್ಟೀಲ್‌ ಬಳಸಿಲ್ಲ.
  • ಭೂಕಂಪ, ಪ್ರವಾಹ, ಚಂಡಮಾರುತ ಅಪ್ಪಳಿಸಿದರೂ ರಾಮಮಂದಿರಕ್ಕೆ ಏನೂ ಆಗುವುದಿಲ್ಲ ಎಂದು ತಜ್ಞರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

55 ದೇಶಗಳ ಗಣ್ಯರಿಗೆ ಆಹ್ವಾನ

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ 55 ದೇಶಗಳಿಂದ ಸುಮಾರು 100ಕ್ಕೂ ಅಧಿಕ ಗಣ್ಯರು ಅಯೋಧ್ಯೆಗೆ ಆಗಮಿಸಲಿದ್ದಾರೆ. ಜರ್ಮನಿ, ಫಿಜಿ, ಫಿನ್‌ಲ್ಯಾಂಡ್‌, ಅಮೆರಿಕ, ಬ್ರಿಟನ್‌, ಜರ್ಮನಿ, ಇಂಡೋನೇಷ್ಯಾ, ಐರ್ಲೆಂಡ್‌, ಜಪಾನ್‌, ಕೀನ್ಯಾ, ಕೊರಿಯಾ, ಮಾರಿಷಸ್‌, ನಾರ್ವೆ ಸೇರಿ 55 ದೇಶಗಳ ಗಣ್ಯರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಂಗಾಪುರ, ಸ್ಪೇನ್‌, ಶ್ರೀಲಂಕಾ, ಜಾಂಬಿಯಾ, ವಿಯೇಟ್ನಾಂ, ಉಗಾಂಡ, ವೆಸ್ಟ್‌ ಇಂಡೀಸ್‌ ದೇಶಗಳ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ. ವಿದೇಶಗಳಿಂದ ಆಗಮಿಸುವ ಎಲ್ಲ ಗಣ್ಯರು ಜನವರಿ 21ರಂದೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi 3.0 Cabinet: ಪ್ರಧಾನಿಯಾಗಿ ಮೋದಿ ಐದು ವರ್ಷ ಪೂರೈಸುತ್ತಾರಾ? ಜ್ಯೋತಿಷಿಗಳು ಹೇಳುವುದು ಹೀಗೆ

Modi 3.0 Cabinet: ಇಂದು ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದನ್ನು ನೋಡುವುದಾದರೆ ಈ ದಿನ ಜ್ಯೇಷ್ಠ ಮಾಸದ ಶುದ್ಧ ತದಿಗೆ ಪುನರ್ವಸು ನಕ್ಷತ್ರ. ಈ ದಿನ ಸಂಜೆ 7.15 ಕ್ಕೆ ವೃಶ್ಚಿಕ ಲಗ್ನದಲ್ಲಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭ ನಡೆಯುತ್ತಿದೆ.

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ(Modi 3.0 Cabinet) ಮೂರನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಏರಲು ಇನ್ನೇನು ಕ್ಷಣಗಣನೆ ಶುರುವಾಗಿದೆ. ಸಂಜೆ 7.15ಕ್ಕೆ ಪ್ರಮಾಣವಚನ(Modi’s swearing-in) ಕಾರ್ಯಕ್ರಮ ಆರಂಭವಾಗಲಿದೆ. ನೆರೆಯ 7 ರಾಷ್ಟ್ರಗಳ ಗಣ್ಯರು ಸೇರಿದಂತೆ ಒಟ್ಟು 10,000ಕ್ಕೂ ಅಧಿಕ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ ಯಾವ್ಯಾವ ರೀತಿಯ ವ್ಯವಸ್ಥೆ ಮಾಡಲಾಗಿದೆ? ಇನ್ನು ಪ್ರಧಾನಿ ಮೋದಿ ಐದು ವರ್ಷಗಳನ್ನು ಪೂರೈಸುತ್ತಾರೋ..ಇಲ್ಲವೋ ಎಂಬ ಬಗ್ಗೆ ಜ್ಯೋತಿಷಿಗಳು ಹೇಳೋದೇನು ಎಂಬುದ್ನು ನೋಡೋಣ.

ಮೋದಿ ಐದು ವರ್ಷಗಳ ಅವಧಿ ಪೂರ್ಣಗೊಳಿಸ್ತಾರಾ?

ಇಂದು ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜ್ಯೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದನ್ನು ನೋಡುವುದಾದರೆ ಈ ದಿನ ಜ್ಯೇಷ್ಠ ಮಾಸದ ಶುದ್ಧ ತದಿಗೆ ಪುನರ್ವಸು ನಕ್ಷತ್ರ. ಈ ದಿನ ಸಂಜೆ 7.15 ಕ್ಕೆ ವೃಶ್ಚಿಕ ಲಗ್ನದಲ್ಲಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭ ನಡೆಯುತ್ತಿದೆ.

ಈ ದಿನ‌ ಭಾನುವಾರ ರಾಜರಿಗೆ ಒಳ್ಳೆಯದು. ಭಾನುವಾರದ ಅಧಿಪತಿ ಸೂರ್ಯ ಗ್ರಹಗಳ ರಾಜ. ಆದ್ದರಿಂದ ಈ ಮಹೂರ್ತಕ್ಕೆ ರಾಜಬಲ. ಮೋದಿಯವರದು ವೃಶ್ಚಿಕ ರಾಶಿ. ಪುನರ್ವಸು ನಕ್ಷತ್ರ ಗುರುವಿನ ನಕ್ಷತ್ರ. ಈ ನಕ್ಷತ್ರದಲ್ಲಿ ಏನೇ ಶುಭಕಾರ್ಯ ಮಾಡಿದರೂ ಪುನಃ ಪುನಃ ಮಾಡುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಪ್ರಮಾಣವಚನದ ಸಮಯದ ಮಹೂರ್ತ ಬಹಳ ಪ್ರಶಸ್ತವಾಗಿದೆ. ದಿನ ತಿಥಿ ವಾರ ನಕ್ಷತ್ರ ಲಗ್ನ ಎಲ್ಲವೂ ಮಹೋನ್ನತವಾಗಿದೆ. ಮೋದಿಯವರ ರಾಶಿಗೆ ಗುಣಾತ್ಮಕವಾಗಿದೆ ಎಂದು ಜೋತಿಷಿಗಳು ಹೇಳುತ್ತಾರೆ. ಹೀಗಾಗಿ ಮೋದಿ ಈ ಬಾರಿಯೂ ಐದು ವರ್ಷ ಪೂರೈಸುವುದು ಖಚಿತ ಎಂದು ಹೇಳುತ್ತಾರೆ.

ಅತಿಥಿಗಳಿಗೆ ಭರ್ಜರಿ ಊಟದ ವ್ಯವಸ್ಥೆ

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ದೇಶ-ವಿದೇಶಗಳ ಗಣ್ಯರಿಗೆ ಭಾರತದ ಪ್ರಮುಖ ಸಾಂಪ್ರಾದಾಯಿಕ ಭಕ್ಷ್ಯಗಳ ಥಾಲಿಯನ್ನು ನೀಡಲಾಗುತ್ತದೆ. ಮೋದಿ ಮತ್ತು ಅಧ್ಯಕ್ಷ ದ್ರೌಪದಿ ಮುರ್ಮು ಇಬ್ಬರೂ ಸಸ್ಯಾಹಾರಿಗಳಾಗಿದ್ದು, ಪ್ರಮುಖವಾಗಿ ಗುಜರಾತಿ ಮತ್ತು ಒಡಿಯಾ ಸಾಂಪ್ರದಾಯಿಕ ಆಹಾರವನ್ನು ಗಣ್ಯರಿಗೆ ಬಡಿಸಲಾಗುತ್ತದೆ. ಎಲ್ಲಾ ಅತಿಥಿಗಳಿಗೆ ಶುದ್ಧ ಸಸ್ಯಾಹಾರಿ ಊಟವನ್ನು ನೀಡಲಾಗುತ್ತದೆ. ಚಾಟ್, ಧೋಕ್ಲಾ, ಕೇಸರಿ ಭಾತ್, ಮಶ್ರೂಮ್ ಕಬಾಬ್ ಮತ್ತು ಹರೇ ಭರೇ ಕಬಾಬ್ಈ ಎಲ್ಲಾ ಭಕ್ಷ್ಯಗಳು ಡಿನ್ನರ್‌ನಲ್ಲಿರಲಿರಲಿವೆ.

ಭಾನುವಾರ ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ. ಸುಮಾರು 8 ಸಾವಿರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಎಲ್ಲೆಡೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಸುಮಾರು 500 ಸಿಸಿಟಿವಿಗಳ ಕಣ್ಗಾವಲು ಇದೆ. ನೋ ಫ್ಲೈಯಿಂಗ್‌ ಜೋನ್‌ ಎಂದು ಘೋಷಿಸಿದ ಕಾರಣ ಯಾವುದೇ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರಪತಿ ಭವನಕ್ಕೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

Continue Reading

Lok Sabha Election 2024

Modi 3.0 Cabinet: ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ; ಅಭಿನಂದನೆ ತಿಳಿಸಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Modi 3.0 Cabinet: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಇಂದು (ಜೂನ್‌ 9) ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ. ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

VISTARANEWS.COM


on

Modi 3.0 Cabinet
Koo

ಬೆಂಗಳೂರು: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ(NDA) ಅಧಿಕಾರಕ್ಕೆ ಬಂದಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಬಿಜೆಪಿಗೆ ಜೆಡಿಎಸ್‌ ಕೂಡ ಬೆಂಬಲ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ (HD Deve Gowda) ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದಾರೆ.

ಮೋದಿ ಪ್ರಮಾಣವಚನಕ್ಕೆ ಸಿದ್ಧತೆ

ಜವಾಹರ ಲಾಲ್‌ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಖ್ಯಾತಿಗೆ ನರೇಂದ್ರ ಮೋದಿ ಭಾಜನರಾಗಲಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಜತೆಗೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಬಿಗಿ ಬಂದೋಬಸ್ತ್‌

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಎಲ್ಲೆಡೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಸುಮಾರು 500 ಸಿಸಿಟಿವಿಗಳ ಕಣ್ಗಾವಲು ಇದೆ. ನೋ ಫ್ಲೈಯಿಂಗ್‌ ಜೋನ್‌ ಎಂದು ಘೋಷಿಸಿದ ಕಾರಣ ಯಾವುದೇ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಷ್ಟ್ರಪತಿ ಭವನಕ್ಕೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ?

ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ

ಭಾನುವಾರ ರಾಜಘಾಟ್‌ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

Continue Reading

ಸಿನಿಮಾ

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್‌ವರ್ಕ್‌ನ ಸಂಸ್ಥಾಪಕ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಭಾನುವಾರ ನಡೆದ ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ramoji Rao Funeral
Koo

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಮತ್ತು ಈಟಿವಿ ನೆಟ್‌ವರ್ಕ್‌ನ (ETV Network) ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಭಾನುವಾರ ಪಾಲ್ಗೊಂಡರು. ರಾಮೋಜಿ ರಾವ್‌ ಅವರ ಪಾರ್ಥಿವ ಶರೀರ ಹೊರಲು ಚಂದ್ರಬಾಬು ನಾಯ್ಡು ಅವರು ಹೆಗಲು ಕೊಟ್ಟಿದ್ದು ಗಮನ ಸೆಳೆಯಿತು.

ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನಾಯ್ಡು ಅವರು ರಾಮೋಜಿ ಅವರ ಪಾರ್ಥಿವ ಶರೀರವನ್ನು ಸಾಗಿಸಲು ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸೇರಿಕೊಂಡರು. ಅಂತ್ಯಕ್ರಿಯೆಯ ಸ್ಥಳದಲ್ಲಿ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದಾಗ ರಾಜಕೀಯ ನಾಯಕ ನಾಯ್ಡು ಅವರು ಮೆರವಣಿಗೆಯನ್ನು ಮುನ್ನಡೆಸಿದರು.


ರಾಮೋಜಿ ರಾವ್ ಅವರು ನಗರದ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಬೆಳಗಿನ ಜಾವ 3.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಅನಂತರ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಬಳಿಕ ಅವರು ನಿಧನರಾದರು. ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲಂ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಿಗೆ ಹಲವಾರು ಪ್ರಮುಖ ರಾಜಕೀಯ ನಾಯಕರು ಮತ್ತು ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸಿದರು.


ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಪ್ರಯತ್ನಗಳು, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಹೇಳಿದ್ದರು.


ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಅವರು ವರ್ಣಿಸಿದ್ದರು.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

ಮಹೇಶ್ ಬಾಬು ಸಂತಾಪ

ನಟ ಮಹೇಶ್ ಬಾಬು ಅವರು, ರಾಮೋಜಿ ರಾವ್ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಅವರ ಸಮಯಕ್ಕಿಂತ ಯಾವಾಗಲೂ ಮುಂದಿರುವ ದಾರ್ಶನಿಕ. ರಾಮೋಜಿ ಫಿಲ್ಮ್ ಸಿಟಿ ಅವರ ತೇಜಸ್ಸಿಗೆ ಮತ್ತು ಸಿನಿಮಾದ ಮೇಲಿನ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ರಿತೇಶ್ ದೇಶ್‌ಮುಖ್ ಸಂತಾಪ

ರಿತೇಶ್ ದೇಶ್‌ಮುಖ್ ಅವರು, ಐಕಾನ್, ಲೆಜೆಂಡ್ ಶ್ರೀ ರಾಮೋಜಿ ರಾವ್ ಅವರು ಇನ್ನಿಲ್ಲ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ಹೊಸಬರಿಗೆ ಅವಕಾಶಗಳನ್ನು ನೀಡುವ ಅವರ ನಂಬಿಕೆಗೆ ಧನ್ಯವಾದಗಳು. ಅವರು ಯಾರೂ ಮಾಡದ ಕೆಲಸವನ್ನು ಮಾಡಲು ಧೈರ್ಯ ಮಾಡಿದರು. ಅವರ ಪರಂಪರೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Continue Reading

ದೇಶ

Modi 3.0 Cabinet: ಈ ನಾಲ್ಕು ಮಹತ್ವದ ಖಾತೆಗಳು ಬಿಜೆಪಿ ಕೈಯಲ್ಲೇ ಉಳಿಯಲಿವೆ!

Modi 3.0 Cabinet:ಎನ್‌ಡಿಎ ಒಕ್ಕೂಟದ ಯಾವ ಪಕ್ಷಕ್ಕೆ ಯಾವ ಖಾತೆ ನೀಡುತ್ತದೆ? ಬಿಜೆಪಿ ಎಷ್ಟು ಖಾತೆಗಳನ್ನು ತನ್ನ ಬಳಿ ಇರಿಸಿಕೊಳ್ಳಲಿದೆ ಎಂಬುದು ಈ ಕುತೂಹಕ್ಕೀಡು ಮಾಡಿರುವ ಸಂಗತಿ. ಅಧಿಕೃತ ಮಾಹಿತಿ ಪ್ರಕಾರ ಬಿಜೆಪಿ ಪ್ರಮುಖ ನಾಲ್ಕು ಖಾತೆಗಳನ್ನು ತನ್ನ ಬಳಿಯೇ ಇರಿಸಿಕೊಳ್ಳಲಿದೆ ಎನ್ನಲಾಗಿದೆ. ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಈ ಬಾರಿ ಹಳೆಯ ಮತ್ತು ಹೊಸ ಮುಖಗಳ ನಡುವೆ ಸಮತೋಲನ ಕಾಪಾಡಿಕೊಂಡು ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Modi 3.0 Cabinet
Koo

ನವದೆಹಲಿ: ಬಹುಮತದೊಂದಿಗೆ ಎನ್‌ಡಿಎ (NDA) ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಇಂದು (ಜೂನ್‌ 9) ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಇದೀಗ ಎಲ್ಲರಿಗೂ ಈ ಬಾರಿ ಪ್ರಧಾನಿ ಮೋದಿ ಸಂಪುಟದಲ್ಲಿ ಯಾರ್ಯಾರಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲ ಇದ್ದೇ ಇದೆ. ಈಗಾಗಲೇ ಕೆಲವು ಅಧಿಕೃತ ಮೂಲಗಳ ಪ್ರಕಾರ ಈ ಬಾರಿ ಕೇಂದ್ರ ಸಚಿವ ಸಂಪುಟ(Modi 3.0 Cabinet)ದಲ್ಲಿ ಎನ್‌ಡಿಎ ಮೈತ್ರಿಕೂಟದ 34ಮಂದಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ. ಮಿತ್ರ ಪಕ್ಷಗಳ ಸಹಾಯದೊಂದಲೇ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಖಾತೆ ಹಂಚಿಕೆಯೇ ಬಹಳಷ್ಟು ಸವಾಲಿನ ಕಾರ್ಯವಾಗಿದೆ.

ಹೀಗಿರುವಾಗ ಎನ್‌ಡಿಎ ಒಕ್ಕೂಟದ ಯಾವ ಪಕ್ಷಕ್ಕೆ ಯಾವ ಖಾತೆ ನೀಡುತ್ತದೆ? ಬಿಜೆಪಿ ಎಷ್ಟು ಖಾತೆಗಳನ್ನು ತನ್ನ ಬಳಿ ಇರಿಸಿಕೊಳ್ಳಲಿದೆ ಎಂಬುದು ಈ ಕುತೂಹಕ್ಕೀಡು ಮಾಡಿರುವ ಸಂಗತಿ. ಅಧಿಕೃತ ಮಾಹಿತಿ ಪ್ರಕಾರ ಬಿಜೆಪಿ ಪ್ರಮುಖ ನಾಲ್ಕು ಖಾತೆಗಳನ್ನು ತನ್ನ ಬಳಿಯೇ ಇರಿಸಿಕೊಳ್ಳಲಿದೆ ಎನ್ನಲಾಗಿದೆ. ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಈ ಬಾರಿ ಹಳೆಯ ಮತ್ತು ಹೊಸ ಮುಖಗಳ ನಡುವೆ ಸಮತೋಲನ ಕಾಪಾಡಿಕೊಂಡು ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ನಾಲ್ಕು ಪ್ರಮುಖ ಸ್ಥಾನಗಳ ಜೊತೆಗೆ ಕೇಸರಿ ಪಕ್ಷವು ರೈಲ್ವೆ, ರಸ್ತೆ ಸಾರಿಗೆ, ಕಾನೂನು, ಮಾಹಿತಿ ತಂತ್ರಜ್ಞಾನ ಮತ್ತು ಶಿಕ್ಷಣದಂತಹ ಇತರ ಕೆಲವು ಪ್ರಮುಖ ಸಚಿವಾಲಯಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತದೆ. ಇನ್ನು ಕಳೆದ ಸಚಿವ ಸಂಪುಟದ 10 ಸಚಿವರು ಈ ಬಾರಿಯೂ ಮುಂದುವರೆಯಲಿದ್ದಾರೆ. ಅಮಿತ್ ಶಾ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಮತ್ತು ಅಶ್ವಿನಿ ವೈಷ್ಣವ್ ಅವರು ಕೇಂದ್ರ ಸಚಿವರಾಗಿ ಮುಂದುವರಿಯಲಿದ್ದು, ಅನುರಾಗ್ ಠಾಕೂರ್ ಅವರನ್ನು ಕೈಬಿಡಲಾಗಿದೆ.

ನಿತೀಶ್ ಕುಮಾರ್ ನೇತೃತ್ವದ JD(U) ಒಂದು ಕ್ಯಾಬಿನೆಟ್ ಸ್ಥಾನ ಮತ್ತು ಒಬ್ಬ ರಾಜ್ಯ ಸಚಿವ (MoS) ಸ್ಥಾನ ಪಡೆಯಲಿದೆ. ಇನ್ನು ತೆಲುಗು ದೇಶಂ ಪಕ್ಷದ (ಟಿಡಿಪಿ) ಹೊಸದಾಗಿ ಚುನಾಯಿತರಾದ ಇಬ್ಬರು ಸಂಸದರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಲು ಸಿದ್ಧರಾಗಿದ್ದಾರೆ, ಇದು ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಸಜ್ಜಾಗಿದೆ ಎಂದು ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಪಕ್ಷವು ಭಾನುವಾರ ಖಚಿತಪಡಿಸಿದೆ.

ಟಿಡಿಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪುತ್ರ ರಾಮ್ ಮೋಹನ್ ನಾಯ್ಡು, ಯರ್ರಾನ್ ನಾಯ್ಡು (36) ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ. ಅವರು ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅತ್ಯಂತ ಕಿರಿಯ ಕೇಂದ್ರ ಕ್ಯಾಬಿನೆಟ್ ಸಚಿವರಾಗಲಿದ್ದಾರೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Continue Reading
Advertisement
Modi 3.0 Cabinet
ದೇಶ11 mins ago

Modi 3.0 Cabinet: ಪ್ರಧಾನಿಯಾಗಿ ಮೋದಿ ಐದು ವರ್ಷ ಪೂರೈಸುತ್ತಾರಾ? ಜ್ಯೋತಿಷಿಗಳು ಹೇಳುವುದು ಹೀಗೆ

IND vs PAK
ಕ್ರೀಡೆ14 mins ago

IND vs PAK: ನಂ.1 ಬ್ಯಾಟರ್​ ಆಗಿದ್ದರೆ ಪಾಕ್​ ವಿರುದ್ಧ ಆಡಿ ತೋರಿಸು; ಸೂರ್ಯಕುಮಾರ್​ಗೆ ಸವಾಲೆಸೆದ ಪಾಕ್​ ಆಟಗಾರ

Modi 3.0 Cabinet
Lok Sabha Election 202416 mins ago

Modi 3.0 Cabinet: ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ; ಅಭಿನಂದನೆ ತಿಳಿಸಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Ramoji Rao Funeral
ಸಿನಿಮಾ56 mins ago

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

Karnataka Rain
ಮಳೆ59 mins ago

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Modi 3.0 Cabinet
ದೇಶ1 hour ago

Modi 3.0 Cabinet: ಈ ನಾಲ್ಕು ಮಹತ್ವದ ಖಾತೆಗಳು ಬಿಜೆಪಿ ಕೈಯಲ್ಲೇ ಉಳಿಯಲಿವೆ!

Kangana Ranaut Slapped incident Hrithik Roshan Backs Post
ಬಾಲಿವುಡ್1 hour ago

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Modi 3.0 Cabinet
Lok Sabha Election 20242 hours ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Murder Case
ಬೆಂಗಳೂರು ಗ್ರಾಮಾಂತರ2 hours ago

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌