Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

B Somashekhar

ವಿದೇಶದಲ್ಲೂ ರಾಮನಾಮ ಜಪ

B Somashekhar

ಜನರ ರಾಮನಿಗೆ ಜಾನಪದ ನೃತ್ಯದ ಮೆರುಗು

B Somashekhar

84 ಸೆಕೆಂಡ್‌ಗಳಲ್ಲಿ ನಡೆಯಲಿದೆ ಪ್ರಾಣ ಪ್ರತಿಷ್ಠೆ

ಭವ್ಯ ರಾಮಮಂದಿರದ ಗರ್ಭಗುಡಿಯಲ್ಲಿ ಕೇವಲ 84 ಸೆಕೆಂಡ್‌ಗಳಲ್ಲಿ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆ 29 ನಿಮಿಷ ಹಾಗೂ 8 ಸೆಕೆಂಡ್‌ಗಳಿಂದ 12 ಗಂಟೆ 30 ನಿಮಿಷ ಹಾಗೂ 32 ಸೆಕೆಂಡ್‌ಗಳ ಶುಭ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಲಾಗುತ್ತಿದೆ. ಕೇವಲ 84 ಸೆಕೆಂಡ್‌ಗಳಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

B Somashekhar

ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ

  • ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
  • 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
  • ಬೆಳಗ್ಗೆ 11ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
  • ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
  • ಮಧ್ಯಾಹ್ನ 1-2: ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
  • ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
  • ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
  • B Somashekhar

    ಪ್ರಾಣ ಪ್ರತಿಷ್ಠೆ ಎಂದರೇನು?

    ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ. ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

    Exit mobile version