Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

Sukhesha Padibagilu

ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

Sukhesha Padibagilu

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳ ನೇತೃತ್ವ ವಹಿಸಿದ್ದಾರೆ. ಆರ್​​ಎಸ್​ಎಸ್​​ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿದ್ದಾರೆ. ಮೋದಿ ಅವರು ಕೆನೆ ಧೋತಿ ಮತ್ತು ಪಟ್ಕಾದೊಂದಿಗೆ ಚಿನ್ನದ ಕುರ್ತಾ ಧರಿಸಿದ ಅವರು ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದು ದೇವಾಲಯದ ಗರ್ಭಗುಡಿಗೆ ಬಂದಿದ್ದರು. ನಂತರ ಪ್ರಧಾನಿ ಪ್ರತಿಷ್ಠಾಪನಾ ಸಮಾರಂಭಕ್ಕೆ ‘ಸಂಕಲ್ಪ’ ತೆಗೆದುಕೊಂಡರು. ಸಮಾರಂಭದ ನಂತರ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕುಬೇರ ತಿಲಕಕ್ಕೂ ಭೇಟಿ ನೀಡಲಿದ್ದಾರೆ. ದೇವಾಲಯದ ನಿರ್ಮಾಣಕ್ಕೆ ಸಂಬಂಧಿಸಿದ ಕಾರ್ಮಿಕರೊಂದಿಗೆ ಅವರು ಸಂವಾದ ನಡೆಸಲಿದ್ದಾರೆ.

B Somashekhar

ರಾಮಮಂದಿರದ ಧಾರ್ಮಿಕ ವಿಧಿವಿಧಾನಗಳಲ್ಲಿ ಮೋದಿ ಭಾಗಿ

Sukhesha Padibagilu

ಐದು ಮಂಟಪಗಳ ಮೂಲಕ ಗರ್ಭಗುಡಿಗೆ ಪ್ರವೇಶಿಸಿದ ಪ್ರಧಾನಿ ಮೋದಿ. ಪ್ರಧಾನ ಅರ್ಚಕರಿಗೆ ಛತ್ರವನ್ನು ಹಸ್ತಾಂತರ ಮಾಡಿದ ಪ್ರಧಾನಿ ಮೋದಿ.

B Somashekhar

ರಾಮಮಂದಿರಕ್ಕೆ ಆಗಮಿಸಿದ ಮೋದಿ

Exit mobile version