ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…
ಅಯೋಧ್ಯೆಗೆ ಆಗಮಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ರಾಮಮಂದಿರ ಪ್ರವೇಶಿಸಲಿದ್ದಾರೆ. ವಿಮಾನದಲ್ಲಿ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ರಾಮಮಂದಿರಕ್ಕೆ ತೆರಳಿದ್ದಾರೆ.
PM @narendramodi about to reach temple premises in Ayodhya for the Pran Pratishtha ceremony #rammandir #ayodharammandir #ayodhya pic.twitter.com/AUlHmgg6cQ
— DD News (@DDNewslive) January 22, 2024
ಲೈವ್ ಟೆಲಿಕಾಸ್ಟ್ಗೆ ಅನುಮತಿ ಬೇಕಿಲ್ಲ ಎಂದ ಕೋರ್ಟ್; ಡಿಎಂಕೆ ಸರ್ಕಾರಕ್ಕೆ ಹಿನ್ನಡೆ
ತಮಿಳುನಾಡಿನಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ಲೈವ್ ಕಾರ್ಯಕ್ರಮದ ಟೆಲಿಕಾಸ್ಟ್ಗೆ ರಾಜ್ಯ ಸರ್ಕಾರದ ಅನುಮತಿ ಬೇಕಾಗಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರವು ತಮಿಳುನಾಡಿನಲ್ಲಿ ಲೈವ್ ಟೆಲಿಕಾಸ್ಟ್ ನಿಷೇಧಿಸಲಾಗಿದೆ ಎಂದು ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಅನುಮತಿ ಬೇಕಿಲ್ಲ ಎಂದಿದೆ. ಸುಪ್ರೀಂ ಕೋರ್ಟ್ ಕೂಡ ಡಿಎಂಕೆ ಸರ್ಕಾರಕ್ಕೆ ನೋಟಿಸ್ ನೀಡಿದೆ.
Road Accident : ಬೆಂಗಳೂರಲ್ಲಿ ಭೀಕರ ಅಪಘಾತ; ಇಬ್ಬರು ಸವಾರರು ಮೃತ್ಯು
ಬೆಂಗಳೂರಿನಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು (Road Accident) ನಡೆದಿದೆ. ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಎರಡು ಅಪಘಾತಗಳಲ್ಲಿ ಇಬ್ಬರ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಮೈಲಸಂದ್ರ ಬಳಿ ಬುಲೆಟ್ ಹಾಗೂ ಬಲೆನೋ ಕಾರಿನ ನಡುವೆ ಅಪಘಾತ ಸಂಭವಿಸಿದೆ.
Road Accident : ಬೆಂಗಳೂರಲ್ಲಿ ಭೀಕರ ಅಪಘಾತ; ಇಬ್ಬರು ಸವಾರರು ಮೃತ್ಯು
ಅಯೋಧ್ಯೆಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ
#watch | Ayodhya, Uttar Pradesh | Veteran cricketer Anil Kumble says, "It is a wonderful occasion, a very divine occasion. Blessed to be a part of this. It's very historic. Looking forward to seeking blessings from Ram Lalla…" pic.twitter.com/zKodiqk1bG
— ANI (@ANI) January 22, 2024
ಮನೆಯಲ್ಲೇ ಪೂಜೆ ಮಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್
Defence Minister Rajnath Singh performs pooja at his residence ahead of the Pran Pratishtha ceremony at Ram Temple in Ayodhya. pic.twitter.com/Kw3Fl3TV04
— ANI (@ANI) January 22, 2024