Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

B Somashekhar

ರಾಮಮಂದಿರದಲ್ಲಿ ದೇವೇಗೌಡರು

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಅಯೋಧ್ಯೆಗೆ ತೆರಳಿದ್ದು, ಪ್ರಾಣಪ್ರತಿಷ್ಠಾಪನೆಗೆ ಸಾಕ್ಷಿಯಾಗಲು ಅವರು ರಾಮಮಂದಿರ ಆವರಣ ಪ್ರವೇಶಿಸಿದ್ದಾರೆ.

B Somashekhar

ನೇಪಾಳದ ಜಾನಕಿ ದೇಗುಲದಲ್ಲೂ ಸಂಭ್ರಮ

ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ನೇಪಾಳದ ಜನಕಪುರದಲ್ಲಿರುವ ಜಾನಕಿ ದೇವಾಲಯದಲ್ಲೂ ಸಂಭ್ರಮ ಮನೆಮಾಡಿದೆ. ಜನಕಪುರವು ಸೀತೆಯ ಜನ್ಮಸ್ಥಳವಾದ ಕಾರಣ ಜಾನಕಿ ದೇವಾಲಯದಲ್ಲಿ ಸಂತಸ ಹೆಚ್ಚಾಗಿದೆ. ದೇವಾಲಯಗಳನ್ನು ವಿದ್ಯುತ್‌ದೀಪಗಳಿಂದ ಅಲಂಕರಿಸಲಾಗಿದೆ.

B Somashekhar

ಮುಂಬೈನಲ್ಲಿ ಹಿಂದು-ಮುಸ್ಲಿಮರ ಗಲಾಟೆ, ಐವರ ಬಂಧನ

ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಮೊದಲೇ ಮುಂಬೈನಲ್ಲಿ ಹಿಂದುಗಳು ಹಾಗೂ ಮುಸ್ಲಿಮರ ಮಧ್ಯೆ ಗಲಾಟೆ ನಡೆದಿದ್ದು, ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹಿಂದುಗಳು ವಾಹನದಲ್ಲಿ ಮೆರವಣಿಗೆ ಮಾಡಿಕೊಂಡು ಹೋಗುವಾಗ ಮುಸ್ಲಿಮರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

B Somashekhar

ಅಯೋಧ್ಯೆಗೆ ಆಗಮಿಸಿದ ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಗೆ ಆಗಮಿಸಿದ್ದಾರೆ. ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಸಾಕ್ಷಿಯಾಗಲು ಆಗಮಿಸಿರುವ ಅವರು, ಅಯೋಧ್ಯೆ ತಲುಪುತ್ತಲೇ ಜನರಿಗೆ ಶುಭ ಕೋರಿದರು.

B Somashekhar

ಅಯೋಧ್ಯೆಗೆ ಆಗಮಿಸಿದ ಮೆಗಾಸ್ಟಾರ್‌ ಚಿರಂಜೀವಿ

Exit mobile version