Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

B Somashekhar

ಅಯೋಧ್ಯೆಯಲ್ಲಿ ರಾಮಮಂದಿರ ವೈಭವ

B Somashekhar

ಅಮೆರಿಕದಲ್ಲೂ ಸಂತಸ, ಜೈ ಶ್ರೀರಾಮ್‌ ಘೋಷಣೆ

ರಾಮಮಂದಿರ ಉದ್ಘಾಟನೆಯ ಸಂತಸವು ಅಮೆರಿಕದಲ್ಲೂ ಮನೆ ಮಾಡಿದೆ. ಅಮೆರಿಕದಲ್ಲಿರುವ ಟೈಮ್ಸ್‌ ಸ್ಕ್ವೇರ್‌ನಲ್ಲಿ ಜಮಾಯಿಸಿದ ನೂರಾರು ಭಾರತೀಯರು ಜೈಶ್ರೀರಾಮ್‌ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.

B Somashekhar

ಕೆಲವೇ ಕ್ಷಣಗಳಲ್ಲಿ ಮೋದಿ ಆಗಮನ

ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.15ರ ಸುಮಾರಿಗೆ ಮೋದಿ ಅಯೋಧ್ಯೆಗೆ ಆಗಮಿಸಲಿದ್ದಾರೆ.

B Somashekhar

ರಾಮಮಂದಿರಕ್ಕೆ ತೆರಳಲ್ಲ ಆಡ್ವಾಣಿ

ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ ಅವರು ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿದುಬಂದಿದೆ. ಅಯೋಧ್ಯೆಯಲ್ಲಿ 8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದರಿಂದ 96 ವರ್ಷದ ಆಡ್ವಾಣಿ ಅವರು ತೆರಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

B Somashekhar

ಸರಯೂ ತೀರ ರಾಮಮಯ

Exit mobile version