Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

B Somashekhar

ರಾಮಮಂದಿರದಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ

B Somashekhar

ಹನುಮಾನ್‌ಗಢಿ ದೇಗುಲದಲ್ಲಿ ನಟ ಅನುಪಮ್‌ ಖೇರ್‌ ಪೂಜೆ

ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಆಗಮಿಸಿರುವ ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರು ಹನುಮಾನ್‌ಗಢಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

B Somashekhar

ದೇಶಕ್ಕೆ ದೇಶವೇ ರಾಮಮಯ ಎಂದ ಯೋಗಿ

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್‌ ಅವರು ಶುಭ ಕೋರಿದ್ದಾರೆ. “ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಸಂಖ್ಯ ರಾಮಭಕ್ತರ ಕನಸಿಂದು ನನಸಾಗುತ್ತಿದೆ. ಇಡೀ ದೇಶವೇ ರಾಮಮಯವಾಗಿದೆ” ಎಂದು ಯೋಗಿ ಪೋಸ್ಟ್‌ ಮಾಡಿದ್ದಾರೆ.

B Somashekhar

ರಾಮಲಲ್ಲಾನಿಗೆ ಮೊದಲ ಸ್ನಾನ

ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ.

B Somashekhar

ರಾಮನಗರಿಯಲ್ಲಿ ರಾಮ ಭಕ್ತಿಯ ನಗಾರಿ

Exit mobile version