Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ - Vistara News

ದೇಶ

Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ

ಹಿಂದೂ ಧರ್ಮದ ನಾಲ್ಕು ಶಂಕರಾಚಾರ್ಯರಲ್ಲಿ ಯಾರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಜ್ಯೋತಿರ್ಮಠದ ಪೀಠಾಧೀಶ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದಾರೆ.

VISTARANEWS.COM


on

jyotirmat sri puri sri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ (Ayodhya Ram Temple) ಪ್ರಾಣ ಪ್ರತಿಷ್ಠಾಪನೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ (Avimukteshwaranand Saraswati of Jyotir Mutt) ಅವರು ಹೇಳಿದ್ದಾರೆ.

ಹಿಂದೂ ಧರ್ಮದ ನಾಲ್ಕು ಶಂಕರಾಚಾರ್ಯರಲ್ಲಿ (Shankaracharya) ಯಾರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪುರಿಯ ಗೋವರ್ಧನ ಮಠದ ಮಠಾಧೀಶರು ಇದೇ ರೀತಿ ಹೇಳಿರುವ ಒಂದು ದಿನದಲ್ಲಿ ಜ್ಯೋತಿರ್ಮಠಾಧೀಶರ ಈ ಹೇಳಿಕೆ ಬಂದಿದೆ. ನಿನ್ನೆ, ಜನವರಿ 22ರ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಹಾಜರಾಗಲು ಪುರಿಯ ಗೋವರ್ಧನ ಮಠದ ಮಠಾಧೀಶರು ನಿರಾಕರಿಸಿದ್ದರು.

ಈ ಸಮಾರಂಭವನ್ನು ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವುದರಿಂದ ಇದು ಶಾಸ್ತ್ರಗಳಿಗೆ ವಿರುದ್ಧವಾಗುತ್ತದೆ ಎಂದು ಮಠದ ಅಧಿಕೃತ ಸೋಶಿಯಲ್‌ ಮೀಡಿಯಾ ʼಎಕ್ಸ್‌ʼನ ಖಾತೆಯಲ್ಲಿ ವೀಡಿಯೊ ಮೂಲಕ ಅವರು ಹೇಳಿದ್ದಾರೆ.

ನಾಲ್ಕು ಜ್ಯೋತಿರ್ಮಠಗಳು 8ನೇ ಶತಮಾನದ ಹಿಂದೂ ಆಚಾರ್ಯ ಆದಿಶಂಕರರಿಂದ ಸ್ಥಾಪಿಸಲ್ಪಟ್ಟವುಗಳಾಗಿವೆ. ಹಿಂದೂ ಧರ್ಮದ ಅದ್ವೈತ ವೇದಾಂತ ಸಂಪ್ರದಾಯದ ಪ್ರಮುಖ ಭಾಗವಾಗಿ ಈ ನಾಲ್ಕು ಮಠಗಳಿವೆ. ಈಗಾಗಲೇ ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೆರಡು ಮಠಗಳೆಂದರೆ ಕರ್ನಾಟಕದ ಶೃಂಗೇರಿಯ ಶ್ರೀ ಶಾರದಾ ಪೀಠ, ಗುಜರಾತಿನ ದ್ವಾರಕಾ ಶಾರದಾ ಪೀಠ. ಈ ಮಠಗಳು ಹಾಗೂ ಪರಂಪರೆಯು ಶ್ರೀ ಆದಿಶಂಕರರ ಚಿಂತನೆಯಿಂದ ಪ್ರಭಾವಿತವಾಗಿವೆ. ಶೈವ ಹಿನ್ನೆಲೆಯಿದ್ದರೂ ಈ ಮಠಗಳು ರಾಮ, ಕೃಷ್ಣ ಮುಂತಾದ ವಿಷ್ಣುವಿನ ಅವತಾರಗಳನ್ನೂ ಆರಾಧಿಸುತ್ತವೆ.

ಜ್ಯೋತಿರ್ಮಠದ 46ನೇ ಶಂಕರಾಚಾರ್ಯರಾದ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, “ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು ʼಮೋದಿ ವಿರೋಧಿʼ ಎಂದು ಅರ್ಥೈಸಬಾರದು ಎಂದಿದ್ದಾರೆ. ತಾವು ಶಾಸ್ತ್ರ ವಿರೋಧಿ ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

“ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ. ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾ (ಅಭಿಷೇಕ) ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಮತ್ತು ನಾವು ಇದನ್ನು ಹೇಳಿದರೆ, ನಮ್ಮನ್ನು ʼಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ (Swami Shree Nishchalanand Saraswati) ಅವರು “ತಮ್ಮ ಸ್ಥಾನದ ಘನತೆಯ ಬಗ್ಗೆ ಜಾಗೃತರಾಗಿರುವ ಕಾರಣ” ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ದಿನಗಳ ನಂತರ ಪುರಿ ಶ್ರೀಗಳ ಈ ಹೇಳಿಕೆ ಬಂದಿವೆ. “ನಾನು ಅಲ್ಲಿ ಹೋಗಿ ಏನು ಮಾಡಬೇಕು? ಮೋದಿಜಿ ಉದ್ಘಾಟಿಸಿ ಮೂರ್ತಿ ಮುಟ್ಟಿಸುವಾಗ ನಾನು ಅಲ್ಲಿ ನಿಂತು ಚಪ್ಪಾಳೆ ತಟ್ಟಬೇಕೆ? ನನಗೆ ಸ್ಥಾನಮಾನ ಬೇಡ. ನಾನು ಈಗಾಗಲೇ ದೊಡ್ಡ ಸ್ಥಾನ ಹೊಂದಿದ್ದೇನೆ. ನನಗೆ ಸ್ಥಾನಮಾನ ಅಗತ್ಯವಿಲ್ಲ. ಆದರೆ ಶಂಕರಾಚಾರ್ಯರು ಅಲ್ಲಿ ಹೋಗಿ ಏನು ಮಾಡಬೇಕು?” ಎಂದು ನಾಗಾಲ್ಯಾಂಡ್ ಕಾಂಗ್ರೆಸ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಗೋವರ್ಧನ ಮಠದ ಶ್ರೀಗಳು ಪ್ರಶ್ನಿಸಿದ್ದಾರೆ.

“ಮೋದಿ ಅವರು ಧಾರ್ಮಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ” ಎಂದು ಆರೋಪಿಸಿದ ಗೋವರ್ಧನ ಮಠದ ಶ್ರೀಗಳು, “ಆದರೆ ಅಯೋಧ್ಯೆಯ ಬಗ್ಗೆ ತಮಗೆ ಯಾವುದೇ ದ್ವೇಷವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ. ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ನನಗೆ ಆಮಂತ್ರಣ ಬಂದಿದೆ. ನಾನು ಒಬ್ಬನೇ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಅಯೋಧ್ಯೆ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಒಂದು ಹೇಳಿಕೆಯಲ್ಲಿ “ರಾಮ ಮಂದಿರವು ವೈಷ್ಣವ ಪಂಥವಾದ ರಮಾನಂದ ಸಂಪ್ರದಾಯಕ್ಕೆ ಸೇರಿದ್ದು. ಸನ್ಯಾಸಿಗಳಿಗೆ, ಶೈವ ಅಥವಾ ಶಕ್ತಿ ಪಂಥಗಳಿಗೆ ಸೇರಿದ್ದಲ್ಲ” ಎಂದು ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಅವಿಮುಕ್ತಾನಂದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ನಿರ್ಧಾರ ಈಗ ಬಹಿರಂಗಪಡಿಸುತ್ತೇವೆ. ಚಂಪತ್ ರೈ ಅವರು ಇಲ್ಲಿ ಶಂಕರಾಚಾರ್ಯರು ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಇದು ರಮಾನಂದ ಸಂಪ್ರದಾಯಕ್ಕೆ ಸೇರಿದೆ ಎಂದಿದ್ದಾರೆ. ಈ ದೇವಾಲಯ ರಮಾನಂದ ಪಂಗಡಕ್ಕೆ ಸೇರಿದ್ದರೆ, ಚಂಪತ್ ರೈ ಅಲ್ಲಿ ಏಕಿದ್ದಾರೆ? ನೃಪೇಂದ್ರ ಮಿಶ್ರಾ (ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷ) ಏಕೆ ಇದ್ದಾರೆ? ರಾಜಾ ಸಾಹಬ್ (ಬಿಮ್ಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಹಿಂದಿನ ಅಯೋಧ್ಯೆಯ ರಾಜಮನೆತನ ಮತ್ತು ದೇವಾಲಯದ ಟ್ರಸ್ಟಿ) ಏಕೆ ಅಲ್ಲಿದ್ದಾರೆ? ಇವರು ರಾಜೀನಾಮೆ ನೀಡಬೇಕು ಮತ್ತು ಪ್ರಾಣ ಪ್ರತಿಷ್ಠೆಯ ಮೊದಲು ರಮಾನಂದ ಸಂಪ್ರದಾಯಕ್ಕೆ ದೇವಸ್ಥಾನವನ್ನು ಹಸ್ತಾಂತರಿಸಬೇಕು” ಎಂದು ಅವರು ಹೇಳಿದ್ದಾರೆ.

ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಪ್ರಕಾರ, ಧಾರ್ಮಿಕ ವ್ಯಕ್ತಿಗಳನ್ನು ಉದ್ದೇಶಪೂರ್ವಕವಾಗಿ ಬದಿಗಿಟ್ಟು, ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗಿದೆ. “ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೆ ನಿರ್ಮೋಹಿ ಅಖಾಡದವರು ಅಲ್ಲಿ ಪೂಜೆ ಮಾಡುತ್ತಿದ್ದರು. ಆ ಜವಾಬ್ದಾರಿಯನ್ನು ಅವರಿಗೇ ನೀಡಬೇಕು. ನೀವು ಹೆಚ್ಚಿನ ಅರ್ಚಕರನ್ನು ಏಕೆ ನೇಮಿಸಿಕೊಳ್ಳುತ್ತಿದ್ದೀರಿ? ನೀವು ಪೂಜೆಯನ್ನು ನಿರ್ಮೋಹಿ ಅಖಾಡಕ್ಕೆ ಮತ್ತು ದೇವಾಲಯದ ವ್ಯವಸ್ಥೆಯನ್ನು ರಮಾನಂದ ಸಂಪ್ರದಾಯಕ್ಕೆ ಒಪ್ಪಿಸಿ. ಅದನ್ನು ನಾವು ಒಪ್ಪುತ್ತೇವೆ. ನಾಲ್ಕೂ ಶಂಕರಾಚಾರ್ಯರಿಗೆ ಇದರಿಂದ) ಸಂತೋಷವಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: Ram Janmabhoomi: ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆ ಹೋಗದಿರುವುದೇ ಸರಿ: ಸಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

2024ರ ಲೋಕಸಭಾ ಚುನಾವಣೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಅವರು ತಮ್ಮ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ರಾಹುಲ್ ಗಾಂಧಿ (Modi v/s Rahul) ಆರು ಪಟ್ಟು ಹೆಚ್ಚು ಶ್ರೀಮಂತರು ಎಂಬುದನ್ನು ಅಫಿಡವಿಟ್ ನಲ್ಲಿ ಘೋಷಿಸಲಾಗಿದೆ.

VISTARANEWS.COM


on

By

Modi v/s Rahul
Koo

ಪ್ರಧಾನಿ (Prime Minister) ನರೇಂದ್ರ ಮೋದಿ (narendra modi) ಸಾಮಾನ್ಯ ಕುಟುಂಬದಿಂದ ಬಂದವರು. ಇನ್ನು ಕಾಂಗ್ರೆಸ್ (congress) ನಾಯಕ ರಾಹುಲ್ ಗಾಂಧಿ (rahul gandhi) ಹುಟ್ಟಿದ್ದೇ ಶ್ರೀಮಂತ, ರಾಜಕಾರಣಿಗಳ ಕುಟುಂಬದಲ್ಲಿ. ಆದರೂ ಇವರಿಗೆ ರಾಜಕೀಯ ಜೀವನ ಮಾತ್ರ ಸುಲಭದ ಹಾದಿಯಾಗಲಿಲ್ಲ. “ಹಮ್ ತೋ ಫಕೀರ್ ಆದ್ಮಿ ಹೈಂ, ಜೊಲಾ ಲೇ ಕೆ ಚಲ್ ಪಡೆಂಗೆ” ಅಂದರೆ ನಾನೊಬ್ಬ ಸನ್ಯಾಸಿ, ಜೋಳಿಗೆ ಹಿಡಿದು ಹೊರಟುಬಿಡುತ್ತೇನೆ… ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು 2016ರ ಡಿಸೆಂಬರ್ ನಲ್ಲಿ ಹೇಳಿದ್ದ ಘೋಷಣೆ ಆಗ ಜನಪ್ರಿಯವಾಗಿತ್ತು.

ಚಲಾವಣೆಯಲ್ಲಿರುವ 18 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ನೋಟುಗಳಲ್ಲಿ ಸುಮಾರು ಶೇ. 86ರಷ್ಟು ಅಮಾನ್ಯಗೊಳಿಸುವ ಸರ್ಕಾರದ ಕಠಿಣ ನಿರ್ಧಾರವನ್ನು ಆಗ ಅವರು ಸಮರ್ಥಿಸಿಕೊಂಡಿದ್ದರು. ಭ್ರಷ್ಟಾಚಾರದ ವಿರುದ್ಧದ ಇದು ಹೋರಾಟ ಎಂದು ಬಣ್ಣಿಸಿದರು. ಈ ನಿರ್ಧಾರದ ಬಗ್ಗೆ ಸಾಕಷ್ಟು ಟೀಕೆಗಳನ್ನು ಎದುರಿಸಿದರೂ ಅದೆಲ್ಲವನ್ನೂ ತಳ್ಳಿಹಾಕಿದರು. ಕಳೆದುಕೊಳ್ಳಲು ಏನೂ ಇಲ್ಲ ನನ್ನ ಬಳಿ ಎಂದು ಹೇಳಿದರು.

2014ರ ಚುನಾವಣೆ ಮುನ್ನ ಮೋದಿ ತಮ್ಮ ಅಫಿಡವಿಟ್‌ನಲ್ಲಿ 1.65 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಕಳೆದ 10 ವರ್ಷಗಳಲ್ಲಿ ಅವರ ಆಸ್ತಿ 2014ರಲ್ಲಿ 1.65 ಕೋಟಿ ರೂಪಾಯಿ ಇದದ್ದು 2024ರಲ್ಲಿ 3.02 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ಉತ್ತರ ಪ್ರದೇಶದ ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಪ್ರಧಾನಿ ಸಲ್ಲಿಸಿದ ಅಫಿಡವಿಟ್ ತೋರಿಸುತ್ತದೆ. 2019ರಲ್ಲಿ ಪ್ರಧಾನಿ ಮೋದಿಯವರ ಆಸ್ತಿ 2.51 ಕೋಟಿ ರೂ. ಆಗಿತ್ತು.


ನರೇಂದ್ರ ಮೋದಿಯವರ ಆಸ್ತಿ ಎಷ್ಟಿದೆ?

ಪ್ರಧಾನಿ ನರೇಂದ್ರ ಮೋದಿ ಅವರ ಅಫಿಡವಿಟ್ ಪ್ರಕಾರ, ಅವರು ಯಾವುದೇ ಸ್ಥಿರ ಆಸ್ತಿಯನ್ನು ಹೊಂದಿಲ್ಲ ಮತ್ತು ಅವರ ಹೆಸರಿನಲ್ಲಿ ಯಾವುದೇ ಆಸ್ತಿ ಅಥವಾ ವಾಹನಗಳು ನೋಂದಣಿಯಾಗಿಲ್ಲ. ಅವರ ಹೆಸರಿನಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು ಬ್ಯಾಂಕ್ ಠೇವಣಿಗಳಲ್ಲಿ 2.86 ಕೋಟಿ ರೂ.ಗಳನ್ನು ಒಳಗೊಂಡಿವೆ. ಎಲ್ಲವೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿವೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರಗಳು 9 ಲಕ್ಷ ರೂಪಾಯಿ ಇದೆ. ಅವರು ಸುಮಾರು 2.7 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಷೇರು, ಮ್ಯೂಚುವಲ್ ಫಂಡ್‌ ಮತ್ತು ಬಾಂಡ್‌ಗಳಂತಹ ಸೆಕ್ಯೂರಿಟಿಗಳನ್ನು ಹೊಂದಿಲ್ಲ.

ಅವರ ಚರ ಆಸ್ತಿಗಳ ಅಡಿಯಲ್ಲಿ ಈ ಹಿಂದೆ ಪಟ್ಟಿ ಮಾಡಲಾದ 1.1 ಕೋಟಿ ಮೌಲ್ಯದ ವಸತಿ ಆಸ್ತಿಯು ಇನ್ನು ಮುಂದೆ ಅವರ 2024ರ ಅಫಿಡವಿಟ್‌ನ ಭಾಗವಾಗಿರುವುದಿಲ್ಲ. ಪ್ರಧಾನಮಂತ್ರಿಯವರ ಅಫಿಡವಿಟ್‌ನಲ್ಲಿ 52,920 ರೂಪಾಯಿ ನಗದು ಎಂದು ನಮೂದಿಸಲಾಗಿದೆ. ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2.86 ಕೋಟಿ ರೂಪಾಯಿ ಮೌಲ್ಯದ ಎಫ್‌ಡಿಗಳನ್ನು ಹೊಂದಿದ್ದಾರೆ. ಅವರ ವಿರುದ್ಧ ಯಾವುದೇ ಸಾಲ ಅಥವಾ ಬಾಕಿ ಉಳಿದಿಲ್ಲ.
ಪ್ರಧಾನಿ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಅವರು ಮೊದಲು 2014 ಮತ್ತು 2019ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ.


ರಾಹುಲ್ ಗಾಂಧಿ ಮೋದಿಗಿಂತ ಆರು ಪಟ್ಟು ಹೆಚ್ಚು ಶ್ರೀಮಂತರು

ಕೇರಳದ ವಯನಾಡ್‌ನ ಹಾಲಿ ಸಂಸದರಾಗಿರುವ ಮತ್ತು ಈ ವರ್ಷದ ಆರಂಭದಲ್ಲಿ ಅವರ ತಾಯಿ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್‌ಬರೇಲಿಯಿಂದ ಕಣದಲ್ಲಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಆಸ್ತಿ ಪ್ರಧಾನಿ ಮೋದಿಗಿಂತ ಹೆಚ್ಚಿದೆ.

2014ರ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಅನಂತರ ರಾಹುಲ್ ಅವರು ರಫೇಲ್ ಒಪ್ಪಂದದಲ್ಲಿನ ಅಕ್ರಮಗಳಿಂದ ಹಿಡಿದು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ದೇಣಿಗೆಯ ನೆಪದಲ್ಲಿ ತಮ್ಮ ಕೈಗಾರಿಕೋದ್ಯಮಿ “ಸ್ನೇಹಿತರಿಗೆ” ಕ್ವಿಡ್ ಪ್ರೋಕೋವರೆಗಿನ ಆರೋಪಗಳೊಂದಿಗೆ ಪ್ರಧಾನಿ ಮೋದಿ ವಿರುದ್ಧ ಆರೋಪವನ್ನು ಮುಂದುವರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ನ್ಯಾಯಾಲಯವು ಈ ಆರೋಪ ಕುರಿತು ಎಚ್ಚರಿಕೆ ನೀಡಿತ್ತು.

ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಮುನ್ನ ಸಲ್ಲಿಸಿದ ಅಫಿಡವಿಟ್‌ಗಳ ಪ್ರಕಾರ, ರಾಹುಲ್ ಅವರು 20.34 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದು ಮೋದಿಯವರ ಆಸ್ತಿಯ ಆರು ಪಟ್ಟು ಹೆಚ್ಚು.
ಅವರ ಸ್ವಯಂ ಪ್ರಮಾಣಪತ್ರದ ಪ್ರಕಾರ, ರಾಹುಲ್ ಅವರು 9.24 ಕೋಟಿ ರೂ. ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದು, ಅವರ ಸ್ಥಿರ ಆಸ್ತಿ ಮೌಲ್ಯ 11.14 ಕೋಟಿ ರೂಪಾಯಿ. ರಾಹುಲ್ ಬಳಿ 4.3 ಕೋಟಿ ರೂಪಾಯಿ ಷೇರು ಮಾರುಕಟ್ಟೆ ಹೂಡಿಕೆ, 3.81 ಕೋಟಿ ರೂಪಾಯಿ ಮ್ಯೂಚುವಲ್ ಫಂಡ್ ಠೇವಣಿ, ಬ್ಯಾಂಕ್ ಖಾತೆಯಲ್ಲಿ 26.25 ಲಕ್ಷ ರೂಪಾಯಿ ಮತ್ತು ಚಿನ್ನದ ಬಾಂಡ್ 15.21 ಲಕ್ಷ ರೂಪಾಯಿ ಇದೆ. ರಾಹುಲ್ ಅವರ ಸ್ಥಿರಾಸ್ತಿಗಳಲ್ಲಿ ಅವರು 9.04 ಕೋಟಿ ರೂಪಾಯಿ ಮೌಲ್ಯದ ಮತ್ತು 2.10 ಕೋಟಿ ರೂಪಾಯಿ ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ಸ್ಥಿರ ಆಸ್ತಿಗಳಲ್ಲಿ ಹೊಸದಿಲ್ಲಿಯ ಮೆಹ್ರೌಲಿ ಗ್ರಾಮದ ಸುಲ್ತಾನ್‌ಪುರದಲ್ಲಿ ಸುಮಾರು 3.77 ಎಕರೆ ವಿಸ್ತೀರ್ಣದ ಕೃಷಿ ಭೂಮಿಯನ್ನು ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜಂಟಿಯಾಗಿ ಹೊಂದಿದ್ದಾರೆ. 5,838 ಚದರ ಅಡಿ ಅಳತೆಯ ಗುರುಗ್ರಾಮ್‌ನ ಸಿಗ್ನೇಚರ್ ಟವರ್ಸ್‌ನಲ್ಲಿರುವ ವಾಣಿಜ್ಯ ಅಪಾರ್ಟ್‌ಮೆಂಟ್‌ಗಳು ಸೇರಿವೆ.

2022-23ರ ಹಣಕಾಸು ವರ್ಷದಲ್ಲಿ ಅವರ ಒಟ್ಟು ಆದಾಯ 1.02 ಕೋಟಿ ರೂಪಾಯಿಗಳಷ್ಟಿದ್ದರೆ; ಸಂಬಳ, ರಾಯಧನ, ಬಾಡಿಗೆ, ಬಾಂಡ್‌ಗಳಿಂದ ಬಡ್ಡಿ, ಲಾಭಾಂಶ ಮತ್ತು ಮ್ಯೂಚುವಲ್ ಫಂಡ್‌ಗಳಿಂದ ಬಂಡವಾಳ ಗಳಿಕೆ ಸೇರಿದಂತೆ ಮೂಲಗಳಿಂದ ರಾಹುಲ್ 55,000 ರೂಪಾಯಿ ನಗದು ಘೋಷಿಸಿದ್ದಾರೆ. ಅವರು 4.2 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ ಮತ್ತು ಸುಮಾರು 49.7 ಲಕ್ಷ ರೂಪಾಯಿಗಳ ಸಾಲ ಹೊಂದಿದ್ದಾರೆ. ಅವರು ಯಾವುದೇ ವಸತಿ ಅಪಾರ್ಟ್ಮೆಂಟ್ ಹೊಂದಿಲ್ಲ.

Continue Reading

ವೈರಲ್ ನ್ಯೂಸ್

Viral News: ತ್ರಿವಳಿ ತಲಾಖ್‌ನಿಂದ ಬೇಸತ್ತಿದ್ದ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

Viral News: Instagramನಲ್ಲಿ ರುಬಿನಾ ಮತ್ತು ಪ್ರಮೋದ್‌ ಕಶ್ಯಪ್‌ಗೆ ಪರಿಚಯವಾಗಿತ್ತು. ಕೆಲವು ಸಂಭಾಷಣೆಗಳ ನಂತರ ಇವರಿಬ್ಬರೂ ಸ್ನೇಹಿತರಾಗಿದ್ದರು. ನಿಧಾನವಾಗಿ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು. ಇನ್ನು ಪ್ರಮೋದ್‌ ಕಶ್ಯಪ್‌ ರುಬಿನಾಳಗಿಂತ 8 ವರ್ಷ ಚಿಕ್ಕವನು. ಆತನನ್ನು ವರಿಸಲು ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಹೆಸರನ್ನು ಪ್ರೀತಿ ಎಂದು ಬದಲಿಸಿಕೊಂಡಳು.

VISTARANEWS.COM


on

Viral News
Koo

ಮಥುರಾ: ತ್ರಿವಳಿ ತಲಾಖ್‌(Triple Talaq) ಪಡೆದು ಗಂಡನಿಂದ ದೂರವಾಗಿ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಅಪರೂಪದ ಘಟನೆ(Viral News) ಉತ್ತರಪ್ರದೇಶ(Uttar Pradesh)ದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆ ತನ್ನ ಮೊಲದ ಪತಿಯಿಂದ ಬಹಳ ಬೇಸತ್ತಿದ್ದಳು. ಸಾಲದೆಂಬುದಕ್ಕೆ ಆತ ತ್ರಿವಳಿ ತಲಾಖ್‌ ಅನ್ನೂ ನೀಡಿದ್ದ. ಇದರಿಂದ ನೊಂದಿದ್ದ ರುಬಿನಾ ತನ್ನ ಧರ್ಮ ಬದಲಿಸಿಕೊಂಡು ಹಿಂದೂ ಯುವಕನನ್ನೇ ಕೈ ಕೈ ಹಿಡಿದಿದ್ದಾಳೆ.

ಮಥುರಾದಲ್ಲಿ ಈ ಘಟನೆ ನಡೆದಿದ್ದು, ರುಬಿನಾ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಆದರೆ ಪತಿಯ ಚಿತ್ರಹಿಂಸೆಯಿಂದ ಆಕೆ ಬೇಸತ್ತಿದ್ದಳು. ಕೊನೆಗೆ ಆತ ರುಬಿನಾಗೆ ತಲಾಖ್‌ ನೀಡಿದ್ದ. ಬಹಳ ನೊಂದಿದ್ದ ರುಬಿನಾ ತನ್ನ ಎರಡು ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಮನೆ ಬಿಟ್ಟು ಹೊರಬಂದಿದ್ದಳು. ಇದಾದ ಬಳಿಕ ಆಕೆಗೆ ಪ್ರಮೋದ್‌ ಎಂಬಾತನ ಜೊತೆ ಪ್ರೇಮಾಂಕುರವಾಗಿದ್ದು, ಇದೀಗ ಆತನನ್ನೇ ವರಿಸಿದ್ದಾಳೆ. ಇದಕ್ಕೂ ಮುನ್ನ ಪ್ರೀತಿಗಾಗಿ ತನ್ನ ಧರ್ಮವನ್ನೇ ಬದಲಿಸಿಕೊಂಡಿದ್ದಾಳೆ.

ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯಾಗಿತ್ತು

Instagramನಲ್ಲಿ ರುಬಿನಾ ಮತ್ತು ಪ್ರಮೋದ್‌ ಕಶ್ಯಪ್‌ಗೆ ಪರಿಚಯವಾಗಿತ್ತು. ಕೆಲವು ಸಂಭಾಷಣೆಗಳ ನಂತರ ಇವರಿಬ್ಬರೂ ಸ್ನೇಹಿತರಾಗಿದ್ದರು. ನಿಧಾನವಾಗಿ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು. ಇನ್ನು ಪ್ರಮೋದ್‌ ಕಶ್ಯಪ್‌ ರುಬಿನಾಳಗಿಂತ 8 ವರ್ಷ ಚಿಕ್ಕವನು. ಆತನನ್ನು ವರಿಸಲು ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಹೆಸರನ್ನು ಪ್ರೀತಿ ಎಂದು ಬದಲಿಸಿಕೊಂಡಳು. ಇನ್ನು ಕೆ.ಕೆ. ಶಂಕಧರ್‌ ಎಂಬ ಅರ್ಚಕರ ನೇತೃತ್ವದಲ್ಲಿ ವಿವಾಹ ನಡೆದಿದ್ದು, ವಿವಾಹಕ್ಕೂ ಮುನ್ನ ರುಬಿನಾಳನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಪವಿತ್ರಗೊಳಿಸಲಾಗಿದೆ. ನಂತರ ದಂಪತಿಗಳು Instagramನಲ್ಲಿ ಸಂಪರ್ಕಗೊಂಡರು. ಕೆಲವು ಸಂಭಾಷಣೆಗಳ ನಂತರ ಸ್ನೇಹಿತರಾದರು. ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ, ಆ ಬಗ್ಗೆ ಪ್ರತಿಕ್ರಿಯಿಸಿರುವ ರುಬಿನಾ ನನಗೆ ಹಿಂದೂ ಧರ್ಮದ ಬಗ್ಗೆ ಬಹಳ ನಂಬಿಕೆ ಇದೆ. ಇಸ್ಲಾಂನಲ್ಲಿ ಮಹಿಳೆಯರಿಗೆ ಗೌರವ ಇಲ್ಲ. ಅಲ್ಲಿ ಮಹಿಳೆಯರು ಚಿತ್ರಹಿಂಸೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Ujjaini Marulasiddeshwara Jatre: ಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ

ರುಬೀನಾ ಮತ್ತು ಪ್ರಮೋದ್‌ ಬರೇಲಿಗೆ ಹೋಗಿ ಹಿಂದೂ ಸಂಪ್ರದಾಯಗಳ ಮೂಲಕ ಮದುವೆಯಾಗಿದ್ದಾರೆ. ವೃಂದಾವನದ ಬಂಗಾರ್ ಕಾಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ರುಬಿನಾ ತನ್ನ ಪೂರ್ವಜರು ಮೊಘಲರ ಭಯದಿಂದ ಇಸ್ಲಾಂ ಧರ್ಮದ ಅನುಯಾಯಿಗಳಾದರು,. ಆದರೆ ನಾನು ಹಿಂದೂ ದೇವರುಗಳನ್ನು ನಂಬುತ್ತೇನೆ ಮತ್ತು ನಿತ್ಯ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರುಬಿನಾ ಇಸ್ಲಾಂ ಧರ್ಮದ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಧಿಕ್ಕರಿಸಿದ್ದು ಮಾತ್ರವಲ್ಲದೆ, ‘ಹಲಾಲ್’ ಮತ್ತು ತಲಾಖ್‌ ಇವೆಲ್ಲ ಧರ್ಮದಲ್ಲಿನ ಅನಿಷ್ಠ ಪದ್ಧತಿ ಎಂದೂ ಕರೆದಿದ್ದಾರೆ. ಹಿಂದೂ ಧರ್ಮವನ್ನು ಸ್ವೀಕರಿಸುವಂತೆ ಯಾರೂ ಬಲವಂತ ಮಾಡಿಲ್ಲ. ಅದು ನನ್ನ ಆಯ್ಕೆ ಎಂದು ಸ್ಪಷ್ಟಪಡಿಸಿದ್ದಾರೆ.

Continue Reading

ಕ್ರೈಂ

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

Physical Abuse: ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ್ದಾರೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್‌ ದೇಗುಲದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ.

VISTARANEWS.COM


on

Physical Abuse
Koo

ಚೆನ್ನೈ: ತಮಿಳುನಾಡಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ (Physical Abuse) ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ್ದಾರೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್‌ ದೇಗುಲದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ.

ಸಾಲಿಗ್ರಾಮ ಮೂಲದ, ಖಾಸಗಿ ವಾಹಿನಿ ನಿರೂಪಕಿ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ ಪ್ರಕರಣದ ವಿವರ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ

30 ವರ್ಷದ ನಿರೂಪಕಿ ಆಧ್ಯಾತ್ಮಿಕತೆ ಕಡೆಗೆ ಒಲವು ಹೊಂದಿರುವ ವ್ಯಕ್ತಿಯಾಗಿದ್ದು, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಅದರಂತೆ ಚೆನ್ನೈಯ ಪರ್ಯಾಸ್‌ನಲ್ಲಿರುವ ಈ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ಜತೆಗೆ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ನಡುವೆ ಗೆಳೆತನ ಗಟ್ಟಿಯಾಗುತ್ತಿದ್ದಂತೆ ಕಾರ್ತಿಕ್‌ ಮುನಿಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮ, ವಿಶೇಷ ಪೂಜೆಗಳ ಬಗ್ಗೆ ನಿರೂಪಕಿಗೆ ಮಾಹಿತಿ ನೀಡುತ್ತಿದ್ದ. ವಾಟ್ಸಾಪ್‌ ಮೂಲಕ ಸಂದೇಶ ಕಳುಹಿಸುತ್ತಿದ್ದ. ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲ ವಿಶೇಷ ದರ್ಶನದ ವ್ಯವಸ್ಥೆ ಮಾಡಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗೆ ಇವರಿಬ್ಬರ ನಡುವೆ ಆತ್ಮೀಯತೆ ಬೆಳದಿತ್ತು. ಒಂದು ದಿನ ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಕಾರ್ತಿಕ್‌ ಮುನಿಸ್ವಾಮಿ ಆಕೆಯನ್ನು ತನ್‌ ಬೆನ್ಝ್‌ ಕಾರಿನಲ್ಲಿ ಕರೆದುಕೊಂಡು ಮನೆಗೆ ಡ್ರಾಪ್‌ ಮಾಡಿದ್ದ. ಈ ವೇಳೆ ಆತ ತೀರ್ಥದಲ್ಲಿ ನಿದ್ದೆ ಬರುವ ಮಾತ್ರ ಬೆರೆಸಿ ನೀಡಿದ್ದ. ಬಳಿಕ ಅತ್ಯಾಚಾರ ಎಸಗಿದ್ದ. ನಂತರ ನಿರೂಪಕಿಗೆ ತನ್ನ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ತಿಳಿದು ಬಂದಿತ್ತು. ಅಲ್ಲದೆ ಆಕೆ ಗರ್ಭಿಣಿಯೂ ಆಗಿದ್ದರು. ಇದನ್ನು ತಿಳಿದ ಕಾರ್ತಿಕ್‌ ಆಕೆಯನ್ನು ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ. ನಂತರ ವಡಾಪಳನಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದ. ಬಳಿಕ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯ ಬಂಧನ

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ಕಾರ್ತಿಕ್‌ ಮುನಿಸ್ವಾಮಿಯನ್ನು ವಿರುಗಂಬಾಕ್ಕಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ಕೈಗೆತ್ತಿಕೊಂಡಿದ್ದಾರೆ. ವಿಚಾರಣೆ ವೇಳೆ ಪೊಲೀಸರಿಗೆ ಕಾರ್ತಿಕ್‌ ಮುನಿಸ್ವಾಮಿ ಮೊಬೈಲ್‌ನಲ್ಲಿ ಸಂತ್ರಸ್ತೆ ಜತೆಗಿದ್ದ ಖಾಸಗಿ ಫೋಟೊ ಮತ್ತು ವಿಡಿಯೊ ಕೂಡ ಲಭ್ಯವಾಗಿದೆ. ಹೀಗಾಗಿ ಆತನ ವಿರುದ್ಧ 6 ಪ್ರಕರಣ ದಾಖಲಾಗಿದೆ. ಎಂಜಿನಿಯರಿಂಗ್‌ ಪದವಿ ಮುಗಿಸಿರುವ ಸಂತ್ರಸ್ತೆ ಹಲವು ವರ್ಷಗಳಿಂದ ಚೆನ್ನೈಯಲ್ಲಿರುವ ಖಾಸಗಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಎಲ್ಲ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Continue Reading

Lok Sabha Election 2024

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ. ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ ದೇಶದಲ್ಲಿ 4 ಹಂತಗಳ ಮತದಾನ ಪೂರ್ಣಗೊಂಡಿದೆ. ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

“ಜವಾಹರಲಾಲ್ ನೆಹರೂ ಕೂಡ ಸಂಸತ್ತಿನಲ್ಲಿ ʼಬಿರ್ಲಾ-ಟಾಟಾ ಕಿ ಸರ್ಕಾರ್‌ʼನಂತಹ ನಿಂದನೆಗಳನ್ನು ಎದುರಿಸುತ್ತಿದ್ದರು. ಈ ಕುಟುಂಬದ (ನೆಹರೂ) ಸಮಸ್ಯೆಯೆಂದರೆ ಈಗಲೂ ನಾನು ಅದೇ ನಿಂದನೆಗಳನ್ನು ಎದುರಿಸಬೇಕೆಂದು ಬಯಸುತ್ತದೆʼʼ ಎಂದು ಆರೋಪಿಸಿದ್ದಾರೆ. ʼʼದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ಗೌರವಿಸಬೇಕು ಎಂದು ಹೇಳಲು ನನಗೆ ನಾಚಿಕೆಯಾಗುವುದಿಲ್ಲ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅತಿಥಿಗಳ ಪಟ್ಟಿ ತಯಾರಿಸುವಾಗ ನಾನು ಕ್ರೀಡಾಪಟುಗಳು ಮತ್ತು ಸಾಧಕರ ಹೆಸರನ್ನು ಸೇರಿಸುತ್ತೇನೆ. ದೇಶವು ತನ್ನ ಸಾಧಕರನ್ನು ಪೂಜಿಸದಿದ್ದರೆ ಮತ್ತು ಗೌರವಿಸದಿದ್ದರೆ, ವಿಜ್ಞಾನಿ ಮತ್ತು ಪಿಎಚ್‌ಡಿ ಮಾಡುವ ಜನರನ್ನು ನಾವು ಹೇಗೆ ಹೊಂದಲು ಸಾಧ್ಯ? ಎಲ್ಲ ವರ್ಗದ ಸಾಧಕರನ್ನು ಗೌರವಿಸಬೇಕು ಎಂಬುದು ನನ್ನ ಅಭಿಮತ” ಎಂದು ಅವರು ಹೇಳಿದ್ದಾರೆ.

“ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ. ನಾನು ತಪ್ಪು ರೀತಿಯಲ್ಲಿ ಯಾರಿಗಾದರೂ ಪ್ರಯೋಜನ ಉಂಟು ಮಾಡಿದ್ದರೆ ನನ್ನನ್ನು ಗಲ್ಲಿಗೇರಿಸಬೇಕು. ಆದರೆ ನನ್ನ ದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ನಾನು ಗೌರವಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ. ಆ ಮೂಲಕ ಅದಾನಿ-ಅಂಬಾನಿಯಂತಹ ಶ್ರೀಮಂತ ಉದ್ಯಮಿಗಳಿಗೆ ನೆರವು ನೀಡಿದ್ದಾರೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಸೂಕ್ಷ್ಮವಾಗಿ ತಿರುಗೇಟು ನೀಡಿದ್ದಾರೆ.

ಸಂಪತ್ತಿನ ಸೃಷ್ಟಿಕರ್ತರು ಮತ್ತು ಕಾರ್ಮಿಕರ ಬಗ್ಗೆಯೂ ಸಮಾನವಾಗಿ ಚಿಂತಿಸುತ್ತೇನೆ ಎಂದು ಮೋದಿ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. “ನನ್ನ ಪ್ರಕಾರ ದೇಶದ ಅಭಿವೃದ್ಧಿಗೆ ಬಂಡವಾಳಶಾಹಿಗಳ ಹಣ, ಆಡಳಿತ ಮಂಡಳಿಯವರ ಯೋಚನೆ ಮತ್ತು ಕಾರ್ಮಿಕರ ಕಠಿಣ ಪರಿಶ್ರಮ ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

ಮುಸ್ಲಿಂ ವಿರೋಧಿ ಆರೋಪಕ್ಕೂ ತಿರುಗೇಟು

ಕೆಲವು ದಿನಗಳ ಹಿಂದಯಷ್ಟೇ ಮೋದಿ ಅವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಟಾಂಗ್‌ ಕೊಟ್ಟಿದ್ದರು. ʼʼಹಿಂದು ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದು-ಮುಸ್ಲಿಂ ಎಂದು ಭೇದ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯʼʼ ಎಂದು ಸ್ಪಷ್ಟವಾಗಿ ಹೇಳಿದ್ದರು. ʼʼಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆʼʼ ಎಂದರು. 

Continue Reading
Advertisement
Dengue awareness rally in Hosapete
ವಿಜಯನಗರ15 mins ago

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Modi v/s Rahul
ರಾಜಕೀಯ22 mins ago

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

gold rate today adah
ಚಿನ್ನದ ದರ32 mins ago

Gold Rate Today: ಇಳಿಯಿತು ಚಿನ್ನದ ಬೆಲೆ; ಬಂಗಾರದ ಗ್ರಾಹಕರಿಗೆ ತುಸು ನಿಟ್ಟುಸಿರು; ದರ ಹೀಗಿದೆ

MDH, Everest Spices
ವಿದೇಶ38 mins ago

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

Virat Kohli
ಕ್ರೀಡೆ42 mins ago

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

dhruva sarja support C Cinema Kanda Kanda Video Song Release
ಸ್ಯಾಂಡಲ್ ವುಡ್51 mins ago

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Pushpa 2 Allu Arjun anasuya bharadwaj poster look out
ಟಾಲಿವುಡ್53 mins ago

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Viral News
ವೈರಲ್ ನ್ಯೂಸ್56 mins ago

Viral News: ತ್ರಿವಳಿ ತಲಾಖ್‌ನಿಂದ ಬೇಸತ್ತಿದ್ದ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

Murder case In Bengaluru
ಬೆಂಗಳೂರು1 hour ago

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

IPL Ticket Scam
ಕ್ರೀಡೆ1 hour ago

IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ23 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌