ಉತ್ತರ ಕನ್ನಡ
Banavasi News: ಶತಾಯುಷಿ ಶ್ರೀ ಸಿದ್ಧವೀರ ಶಿವಯೋಗಿಗಳ ನೂತನ ಗದ್ದುಗೆ ಮಠ ಉದ್ಘಾಟನೆ
Banavasi News: ಹೊಳೆ ಮಠದ ಸಮೀಪದಲ್ಲಿ ಶತಾಯುಷಿ ಶ್ರೀ ಸಿದ್ಧವೀರ ಶಿವಯೋಗಿಗಳ ನೂತನ ಗದ್ದುಗೆ ಮಠವನ್ನು (Gadduge Mutt) ಉದ್ಘಾಟಿಸಲಾಯಿತು. ಈ ವೇಳೆ ಶಿರಸಿ ಹಾಗೂ ತೊಟ್ಟಲಕೇರಿ ಬಣ್ಣದ ಮಠದ ಶಿವಲಿಂಗ ಮಹಾಸ್ವಾಮೀಜಿ, ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಸೇರಿದಂತೆ ಧಾರ್ಮಿಕ ಪ್ರಮುಖರು ಭಾಗಿಯಾಗಿದ್ದರು.
ಬನವಾಸಿ: ಇಲ್ಲಿಯ ಹೊಳೆ ಮಠದ ಸಮೀಪದಲ್ಲಿ ಶತಾಯುಷಿ ಶ್ರೀ ಸಿದ್ಧವೀರ ಶಿವಯೋಗಿಗಳ ನೂತನ ಗದ್ದುಗೆ ಮಠ (Gadduge Mutt) ಉದ್ಘಾಟನೆ ಹಾಗೂ ನಿರಂಜನ ಶರಣ ಕರ್ನಾಟಕ ಗಾಂಧಿ ಹರ್ಡೇಕರ ಮಂಜಪ್ಪ ಅವರ 77ನೇ ಸಂಸ್ಮರಣೆ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು.
ಮುಂಜಾನೆ ಶ್ರೀ ಶಿವಯೋಗಿಗಳ ಕ್ರಿಯಾ ಸಮಾಧಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಇದೇ ವೇಳೆ ಹೊಸಪೇಟೆ ಕಂಪ್ಲಿ ಸಂಸ್ಥಾನ ಮಠದ ಪ್ರಭು ಚನ್ನಬಸವ ಮಹಾಸ್ವಾಮೀಜಿಗಳಿಂದ ಷಟಸ್ಥಲ ಧ್ವಜಾರೋಹಣ ನೆರವೇರಿತು.
ಶಿರಸಿ ಹಾಗೂ ತೊಟ್ಟಲಕೇರಿ ಬಣ್ಣದ ಮಠದ ಶಿವಲಿಂಗ ಮಹಾಸ್ವಾಮೀಜಿ ಅವರು ಶ್ರೀ ಶಿವಯೋಗಿ ಸ್ವಾಮೀಜಿಯವರ ನೂತನ ಗದ್ದುಗೆ ಮಠದ ಉದ್ಘಾಟನೆ ಹಾಗೂ ಶರಣ ಹರ್ಡೇಕರ ಮಂಜಪ್ಪನವರ ಸಂಸ್ಮರಣೆ ಕಾರ್ಯಕ್ರಮವನ್ನು ನೆರವೇರಿಸಿ ಆಶೀರ್ವಚನ ನೀಡುತ್ತಾ, “ನಿಮ್ಮನ್ನು ನೀವು ಗೌರವಿಸಿ. ಆಗ ಮಾತ್ರ ಜೀವನ ಆದರ್ಶವಾಗುತ್ತದೆ. ಉಳವಿಯ ಚನ್ನಬಸವೇಶ್ವರ ಈ ಭಾಗಕ್ಕೆ ಬರದೇ ಇದ್ದಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶರಣ ಪರಂಪರೆಯನ್ನು ಕಾಣುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಶತಾಯುಷಿ ಸಿದ್ಧವೀರ ಶಿವಯೋಗಿಗಳು ಮಹಾನ್ ಶಿವ ಶರಣರಾಗಿದ್ದರು. ಈ ದಿನ ಬನವಾಸಿಯಲ್ಲಿ ಶತಾಯುಷಿ ಸಿದ್ಧವೀರ ಶಿವಯೋಗಿಗಳ ಜ್ಯೋತಿರ್ಲಿಂಗ ಉದಯವಾಗಿದೆ. ಇದರಿಂದಾಗಿ ಸಮಾಜ ಸುಭಿಕ್ಷವಾಗಲಿದೆ” ಎಂದರು.
ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಆಶೀರ್ವಚನ ನೀಡಿ, “ಗುರುವಾದವನು ಸಮಾಜಕ್ಕಾಗಿ ಬದುಕಿರುತ್ತಾನೆ. ಭಕ್ತರಿಗೆ ಜಾಗೃತಿ ಮನೋಭಾವ ಮೂಡುವತನಕ ಸಮಾಜ ಉದ್ಧಾರವಾಗುವುದಿಲ್ಲ. ಕರ್ನಾಟಕ ಗಾಂಧಿ ಹರ್ಡೇಕರ ಮಂಜಪ್ಪನವರು ಧರ್ಮ ಸೇವೆ, ದೇಶ ಸೇವೆಯನ್ನು ಮಾಡಿದ ಮಹಾನ್ ಚೇತನವಾಗಿದ್ದಾರೆ. ಸಿದ್ಧವೀರ ಶಿವಯೋಗಿಯವರು ನಾಡನ್ನು ಜಾಗೃತಗೊಳಿಸಿದ ಶರಣರಾಗಿದ್ದಾರೆ. ಇಬ್ಬರು ಮಹಾ ಶರಣರನ್ನು ನೆನಪಿಸಿಕೊಂಡರೆ ನಮ್ಮ ಜೀವನ ಪಾವನವಾಗುತ್ತದೆ” ಎಂದು ಹೇಳಿದರು.
ಇದನ್ನೂ ಓದಿ: Road Show : ಮಾ. 25ರಂದು ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ಫಿಕ್ಸ್, 26ಕ್ಕೆ ನಿಗದಿಯಾದ ದೇವೇಗೌಡ್ರ ರೋಡ್ ಶೋ ರದ್ದು
ಟಿ. ನರಸೀಪುರ ಚಿದ್ರಳ್ಳಿ ಗವಿಮಠದ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಿ, “ವೀರಶೈವ ಧರ್ಮದ ಪರಿಪಾಲಕರು ಯಜ್ಞ ಯಾಗಾದಿಗಳನ್ನು ಮಾಡುವ ಪದ್ಧತಿಯನ್ನು ರೂಢಿಸಿಕೊಳ್ಳಬಾರದು” ಎಂದರು.
ಜಡೆ ಸಂಸ್ಥಾನ ಮಠದ ಡಾ. ಮಹಾಂತ ಮಹಾಸ್ವಾಮೀಜಿ, ಮೂಡಿ ವಿರಕ್ತ ಮಠದ ಸದಾಶಿವ ಸ್ವಾಮೀಜಿ, ಹಾವೇರಿ ಹೊಸ ಮಠದ ಶಾಂತಲಿಂಗ ಸ್ವಾಮೀಜಿ, ಹೊಳೆ ಮಠದ ಶ್ರೀ ನಾಗಭೂಷಣ ಮಹಾಸ್ವಾಮೀಜಿ, ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಐ.ಆರ್.ಮಠಪತಿ, ಆಲಮಟ್ಟಿಯ ವಿ.ಎಮ್.ಪಟ್ಟಣಶೆಟ್ಟಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಶ್ರೀ ಬಸವೇಶ್ವರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹಾಲಪ್ಪ ಕೆರೂಡಿ, ಅಕ್ಕನ ಬಳಗದ ಅಧ್ಯಕ್ಷೆ ಶೋಭಾ ಉಳ್ಳಾಗಡ್ಡಿ, ವೀರಶೈವ ಸಮಾಜ ಶಿರಸಿ ತಾಲೂಕು ಅಧ್ಯಕ್ಷ ಬಸವರಾಜ ಚಕ್ರಸಾಲಿ ವೇದಿಕೆಯಲ್ಲಿ ಇದ್ದರು.
ಇದನ್ನೂ ಓದಿ: WTC Final : ಕಿಶಾನ್, ಭರತ್ಗಿಂತ ವಿಕೆಟ್ಕೀಪಿಂಗ್ಗೆ ರಾಹುಲ್ ಬೆಸ್ಟ್ ಎಂದ ಮಾಜಿ ಕೋಚ್
ಈ ಸಂದರ್ಭದಲ್ಲಿ ದಾನಿಗಳಾದ ಗಿರಿಜಮ್ಮ ಹಾಲ್ಮಠ ಹಾಗೂ ನೂತನ ಗದ್ದುಗೆ ಕಟ್ಟಡ ಸಮಿತಿಯ ಅಧ್ಯಕ್ಷ ವಾಗೀಶ ಕೆರೂಡಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಬಸವೇಶ್ವರ ಸೇವಾ ಪ್ರತಿಷ್ಠಾನದ ಸದಸ್ಯರು, ಅಕ್ಕನ ಬಳಗದ ಸದಸ್ಯರು, ಬನವಾಸಿ ಹಾಗೂ ಸುತ್ತಮುತ್ತಲಿನ ಸಾವಿರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು. ಉಮೇಶ ಕೆರೂಡಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಬಸವೇಶ್ವರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹಾಲಪ್ಪ ಕೆರೂಡಿ ಸ್ವಾಗತಿಸಿದರು.
“ಬನವಾಸಿಯ ಕಂಪನ್ನು ನಾಡಿಗೆ ಪಸರಿಸಿದ ಆದಿಕವಿ ಪಂಪ ಹಾಗೂ ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ ಅವರ ನೆನಪು ಉಳಿಯುವ ಯಾವ ಕಾರ್ಯವನ್ನು ಸರ್ಕಾರ ಇಲ್ಲಿ ಮಾಡಿಲ್ಲ. ಇಬ್ಬರು ಮಹಾನುಭಾವರ ಸ್ಮಾರಕ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ಕಾಗಿ ಎಲ್ಲರೂ ಒಂದಾಗಬೇಕಾಗಿದೆ” ಎಂದು ಬಸವನಬಾಗೇವಾಡಿ ಸಾಹಿತಿ ಮಹಾತೇಂಶ ಸಂಗಮ್ ಹೇಳಿದರು.
ಉತ್ತರ ಕನ್ನಡ
Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ
Uttara Kannada News: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಉತ್ತರ ಕನ್ನಡ: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾ.22ರಿಂದ 25ರವರೆಗೆ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ (Uttara Kannada News) ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಮೂವರು ಪ್ರಥಮ ಸ್ಥಾನ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಕ್ಪ್ರತಿಯೋಗಿತಾ ಸ್ಪರ್ಧೆಯ ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ, ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶ ಪ್ರಸಾದ ಭಟ್ಟ ಪ್ರಥಮ, ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ, ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ ಪಿಎಚ್ಡಿ ವಿದ್ಯಾರ್ಥಿ ಕುಮಾರ ಹೆಗಡೆ ಅಕ್ಷರಶ್ಲೋಕಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14 ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯವು ಸತತ 41ನೇ ಬಾರಿ ವಿಜಯ ವೈಜಯಂತೀ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ | ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!
ವೇದಭಾಷ್ಯ ಭಾಷಣದಲ್ಲಿ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ
ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಕೃಷ್ಣ ಯಜುರ್ವೇದ ವಿದ್ಯಾರ್ಥಿಯಾದ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿ.ಪ್ರಸಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರ ಕನ್ನಡ
Karnataka Elections 2023 : ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲು ಬ್ಯಾನರ್, ಹೋರ್ಡಿಂಗ್ಸ್, ಬಂಟಿಂಗ್ಸ್ ತೆರವು
Karnataka Elections 2023; ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಬ್ಯಾನರ್, ಹೋರ್ಡಿಂಗ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಕಾರವಾರ: ಮುಂಬರುವ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಈಗಾಗಲೇ ಉತ್ತರ ಕನ್ನಡ ಜಿಲ್ಲಾಡಳಿತ ಸಕಲ ತಯಾರಿಗಳೊಂದಿಗೆ ಚುನಾವಣೆ ಕಾರ್ಯದಲ್ಲಿ ನಿರತವಾಗಿದೆ.
ಜಿಲ್ಲಾದ್ಯಂತ ವಿವಿಧ ಭಾಗಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅಳವಡಿಸಲಾಗಿರುವ ಬ್ಯಾನರ್, ಹೋರ್ಡಿಂಗ್ಸ್ ಹಾಗೂ ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದಾರೆ.
“ಈಗಾಗಲೇ ಶಿರಸಿ ತಾಲೂಕು, ಚಿಪಗಿ ಚೆಕ್ ಪೋಸ್ಟ್, ಹೊನ್ನಾವರ ತಾಲೂಕು ಹೀಗೆ ಅನೇಕ ಭಾಗಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಅಳವಡಿಸಿರುವ ಬ್ಯಾನರ್ಗಳನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ” ಎಂದು ಚುನಾವಣೆ ಶಿರಸ್ತೇದಾರರು ತಿಳಿಸಿದ್ದಾರೆ.
ಇದನ್ನೂ ಓದಿ: Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್ ಶೋ ನಡೆಸಿದ್ದೇಕೆ?
ಉತ್ತರ ಕನ್ನಡ
Sirsi News: ಮನಸ್ಸಿದ್ದರೆ ಮಾರ್ಗ ಅನ್ನುವುದಕ್ಕೆ ಶ್ರೀನಿವಾಸ್ ಹೆಬ್ಬಾರ್ ಅವರೇ ಉದಾಹರಣೆ: ಹರಿಪ್ರಕಾಶ್ ಕೋಣೆಮನೆ
Sirsi News: ಶಿರಸಿ ತಾಲೂಕಿನಲ್ಲಿರುವ ಕೆರೆಗಳು ಜೀವಂತವಾಗಿವೆ ಎಂದರೆ ಅದಕ್ಕೆ ಕಾರಣ ಶ್ರೀನಿವಾಸ ಹೆಬ್ಬಾರ್ ಎಂದು ಹರಿಪ್ರಕಾಶ್ ಕೋಣೆಮನೆ ಶ್ಲಾಘಿಸಿದರು.
ಶಿರಸಿ: “ಮನುಷ್ಯನಿಗೆ ಹಣ-ಅಧಿಕಾರ ಪ್ರಧಾನವಾದಾಗ ಬೇರೇನೂ ಕಾಣುವುದಿಲ್ಲ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಹಣ, ಅಧಿಕಾರ ಎಲ್ಲವೂ ಬರುತ್ತದೆ. ವಿಶ್ವಾಸ, ಒಡನಾಟ, ಪ್ರೀತಿ ಉದಾತ್ತವಾದ ಆಲೋಚನೆ ಬೇಕು. ಮನಸ್ಸಿದ್ದರೆ ಮಾರ್ಗ ಇದೆ ಅನ್ನುವುದಕ್ಕೆ ಉದ್ಯಮಿ ಶ್ರೀನಿವಾಸ್ ಹೆಬ್ಬಾರ್ (Srinivas Hebbar) ಅವರೇ ಒಂದು ಉದಾಹರಣೆ” ಎಂದು ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಅಭಿಪ್ರಾಯಪಟ್ಟರು.
ಶಿರಸಿ ಜೀವಜಲ ಕಾರ್ಯಪಡೆ ವತಿಯಿಂದ ಶನಿವಾರ (ಮಾ.25) ಆಯೋಜಿಸಲಾಗಿದ್ದ ತಾಲೂಕಿನ ಕರಸುಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
“ಶಿರಸಿ ತಾಲೂಕಿನಲ್ಲಿರುವ ಕೆರೆಗಳು ಜೀವಂತವಾಗಿವೆ ಎಂದರೆ ಅದಕ್ಕೆ ಕಾರಣ ಶ್ರೀನಿವಾಸ ಹೆಬ್ಬಾರ್ ಅವರೇ ಹೊರತು ಸರ್ಕಾರವಲ್ಲ. ಸರ್ಕಾರ ಅತೀ ಹೆಚ್ಚು ಹಣವನ್ನು ನೀರಾವರಿಗೆ ವ್ಯಯ ಮಾಡುತ್ತಿದೆ. ಎತ್ತಿನ ಹೊಳೆ ಯೋಜನೆಯಿಂದ ಹನಿ ನೀರು ಬಾರದಿದ್ದರೂ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಕಾಮಗಾರಿ ನಡೆಸುತ್ತಿದೆ. ಆದರೆ ಶ್ರೀನಿವಾಸ ಹೆಬ್ಬಾರ್ ಅವರು ಸ್ವತಃ ಸಾಕಷ್ಟು ಕೆರೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜಲಮೂಲಗಳ ಸಂರಕ್ಷಣೆ ಮಾಡುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗುತ್ತಿದೆ. ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲ ಮೂಲಗಳ ಸಂರಕ್ಷಣೆ ಮಾಡುವುದು ನಮಗೆ ಅನಿವಾರ್ಯವಾಗುತ್ತಿದೆ. ಜಲ ಮೂಲಗಳ ಸಂರಕ್ಷಣೆಗೆ ಶ್ರೀನಿವಾಸ್ ಹೆಬ್ಬಾರ್ ಕೊಡುಗೆ ಅಪಾರ” ಎಂದು ಶ್ಲಾಘಿಸಿದರು.
ಶಿರಸಿ ತಾಲೂಕಿನಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಶ್ರೀನಿವಾಸ್ ಹೆಬ್ಬಾರ್ ಅವರ ಚುನಾವಣೆ ಸ್ಪರ್ಧೆಯ ವಿಚಾರ ಸ್ಪಷ್ಟಪಡಿಸಿದ ಹರಿಪ್ರಕಾಶ್ ಕೋಣೆಮನೆ, “ಹೆಬ್ಬಾರ್ ಅವರು ಚುನಾವಣೆಗೆ ಸ್ಪರ್ಧಿಸಲು ತಯಾರಿಲ್ಲ. ಬಹಳ ಒತ್ತಡ ಬಂದರೂ ಒಪ್ಪದೇ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೆರೆಯೆಂದರೆ ಒಂದು ಊರಿನ ಇತಿಹಾಸವಾಗಿರುತ್ತದೆ. ಅಧಿಕಾರವನ್ನು ಬೆನ್ನತ್ತಿ ಹೋಗುವವರ ಹಿಂದೆ ಹೋಗುವ ಬದಲು ಸಾಮಾಜಿಕ ಕೆಲಸ ಮಾಡುವವರ ಹಿಂದೆ ಹೋಗಬೇಕು” ಎಂದರು.
ಇದನ್ನೂ ಓದಿ: Swiss Open: ಸ್ವಿಸ್ ಓಪನ್ ಬ್ಯಾಡ್ಮಿಂಟನ್: ಸೆಮಿಫೈನಲ್ಗೆ ಲಗ್ಗೆಯಿಟ್ಟ ಚಿರಾಗ್-ಸಾತ್ವಿಕ್ ಜೋಡಿ
ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮಾತನಾಡಿ “ಯುಗಾದಿಯಂದು ನಮ್ಮ ಜೀವಜಲ ಕಾರ್ಯಪಡೆಗೆ ಆರು ವರ್ಷಗಳು ತುಂಬಿವೆ. ಈ ಮೊದಲು ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡುತ್ತಿದ್ದೆವು. ಶಿರಸಿಯ ಸುತ್ತಮುತ್ತ ಇರುವ ಬಹುತೇಕ ಎಲ್ಲ ಕೆರೆಗಳನ್ನು ಜೀವಜಲ ಕಾರ್ಯಪಡೆ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಅತಿಕ್ರಮಣ ಮಾಡಿಕೊಂಡ ಕೆರೆಯ ಜಾಗವನ್ನು ಬಿಡಿಸಿ ಅಭಿವೃದ್ಧಿ ಮಾಡಿದ್ದೇವೆ. ಆಹಾರವಿಲ್ಲ ಎಂದರೂ ಬದುಕಬಹುದು, ಆದರೆ ನೀರು ಇಲ್ಲದೆ ಒಂದು ಕ್ಷಣವೂ ಬದುಕಲು ಸಾಧ್ಯವಿಲ್ಲ. ಇದೀಗ ಎಂಟು ದಿಕ್ಕುಗಳಲ್ಲಿ 16 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದೇವೆ. ಕೆರೆಗಳ ಅಭಿವೃದ್ಧಿ ಮಾಡುವುದರಿಂದ ಜಲಮೂಲಗಳ ಅಭಿವೃದ್ಧಿಯಾಗುತ್ತದೆ. ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ. ಇದುವರೆಗೂ ಯಾವ ಸರ್ಕಾರದಿಂದಲೂ ಒಂದೇ ಒಂದು ರೂಪಾಯಿಯನ್ನು ತೆಗೆದುಕೊಂಡಿಲ್ಲ. ಮುಂದೆಯೂ ತೆಗೆದುಕೊಳ್ಳುವುದಿಲ್ಲ. ನಮ್ಮ ಕೆಲಸಕ್ಕೆ ಸಹಕಾರ ನೀಡಿ” ಎಂದರು.
ಇದನ್ನೂ ಓದಿ: World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್ ಕೋಚ್
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಸ್ಥ ಗಿರೀಶ್ ಭಟ್, “ಹಾಳುಬಿದ್ದ ಕೆರೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಬಹಳ ವರ್ಷಗಳಿಂದ ಊರಿನವರು ತಿರ್ಮಾನಿಸಿದ್ದೆವು. ಈ ಕೆರೆ ಕುಡಿಯುವ ನೀರಿನ ಕೆರೆ ಎಂದು ನಮಗೆ ತಿಳಿದು ಬಂತು. ಸುಮಾರು 2.5 ಎಕರೆ ಪ್ರದೇಶದಲ್ಲಿರುವ ಕೆರೆಯನ್ನು ಅಭಿವೃದ್ಧಿಪಡಿಸಲು ಶ್ರೀನಿವಾಸ ಹೆಬ್ಬಾರ್ ಅವರು ಮುಂದೆ ಬಂದಿರುವುದು ಸಂತಸದ ಸಂಗತಿ” ಎಂದರು.
ಈ ಸಂದರ್ಭದಲ್ಲಿ ಕಿರಣ್ ಚಿತ್ರಕಾರ, ಡಿ ಆರ್ ಭಟ್ , ಪಂಚಾಯತಿ ಉಪಾಧ್ಯಕ್ಷ, ರವೀಶ ಹೆಗಡೆ, ಸಾಮಾಜಿಕ ಕಾರ್ಯಕರ್ತ ವಿ ಪಿ ಹೆಗಡೆ ವೈಶಾಲಿ, ಪ್ರದೀಪ ಶೆಟ್ಟಿ, ಸಂತೋಷ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Documents Digitalization: ಶ್ರೀನಿವಾಸ್ ಹೆಬ್ಬಾರ್ ಮತ್ತೊಂದು ಸಾಹಸ; ಶಿರಸಿ ಉಪ ವಿಭಾಗದ ದಾಖಲೆ ಸಂಪೂರ್ಣ ಡಿಜಿಟಲೀಕರಣ
ಉತ್ತರ ಕನ್ನಡ
Karwar News : 11 ಲಕ್ಷ ರೂ. ಮೌಲ್ಯದ 47 ಕೆಜಿಯಷ್ಟು ಮಾದಕ ದ್ರವ್ಯ ನಾಶ
Karwar News: ಮಾದಕ ವಸ್ತು ಪೂರೈಸುವವರ ವಿರುದ್ಧ ತೀವ್ರ ನಿಗಾ ಇರಿಸಲಾಗಿದ್ದು ಇನ್ನಷ್ಟು ಪ್ರಕರಣಗಳನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ವ್ಯಕ್ತಪಡಿಸಿದ್ದಾರೆ.
ಕಾರವಾರ: ಜಿಲ್ಲೆಯ (Karwar News) ವಿವಿಧ ಠಾಣೆಗಳಲ್ಲಿ ಒಟ್ಟು 51 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 11 ಲಕ್ಷ ರೂ. ಮೌಲ್ಯದ 47 ಕೆಜಿಯಷ್ಟು ಮಾದಕ ದ್ರವ್ಯಗಳನ್ನು ನ್ಯಾಯಾಲಯದ ಅನುಮತಿಯ ಮೇರೆಗೆ ನಾಶಪಡಿಸಲಾಯಿತು. ಅಂಕೋಲಾ ತಾಲೂಕಿನ ಬೊಗ್ರಿಬೈಲ್ನ ಕೆನರಾ ಐ.ಎಮ್.ಎ.(ಯು.ಕೆ) ಕಾನ್ ಗ್ರೀಟ್ಮೆಂಟ್ ಫೆಸಿಲಿಟಿಯ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರ ಸಮ್ಮುಖದಲ್ಲಿ ಮಾದಕ ವಸ್ತುಗಳನ್ನು (Drugs Destroyed) ನಾಶಪಡಿಸಲಾಯಿತು.
ಮಾದಕ ವಸ್ತುಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯು ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲೂ ಮಾದಕ ವಸ್ತುಗಳ ಸಾಗಾಟ ಪ್ರಕರಣಗಳ ವಿರುದ್ಧ ಎಚ್ಚರಿಕೆ ವಹಿಸಲಾಗುವುದು. ಇನ್ನೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಮೂಲಕ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ, ಸೇವನೆಯನ್ನು ಸಂಪೂರ್ಣ ಬುಡಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸನ್ನದ್ಧವಾಗಿದೆ. ಮಾದಕ ವಸ್ತುಗಳನ್ನು ಪೂರೈಸುವವರ ವಿರುದ್ಧ ತೀವ್ರ ನಿಗಾ ಇರಿಸಲಾಗಿದ್ದು ಇನ್ನಷ್ಟು ಪ್ರಕರಣಗಳನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Sanskrit Yuvajanotsavah: ಮಾ. 26ರಂದು ಮಲ್ಲೇಶ್ವರದಲ್ಲಿ ‘ಸಂಸ್ಕೃತ ಯುವಜನೋತ್ಸವಃ’ ಕಾರ್ಯಾಗಾರ
ಒಂದು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 24 ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದ್ದು, ಗಾಂಜಾ ಇರಿಸಿಕೊಂಡಿದ್ದಂತಹ ಹತ್ತರಿಂದ ಹನ್ನೆರಡು ಪ್ರಕರಣಗಳು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಪೊಲೀಸರ ತಂಡವನ್ನು ರೂಪಿಸಿಕೊಂಡ ಗಾಂಜಾ ಸಾಗಾಟ, ಸೇವನೆ ಮಾಡುವವರ ಮಾಹಿತಿ ಕಲೆ ಹಾಕಿ ಅಂತಹವರನ್ನು ಮಟ್ಟ ಹಾಕುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿ ಮಾದಕ ವಸ್ತು ಸಾಗಾಟದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಎಸ್ಪಿ ವಿಷ್ಣುವರ್ಧನ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾರವಾರ ಡಿವೈಎಸ್ಪಿ ವ್ಯಾಲೆಂಟೈನ್ ಡಿಸೋಜಾ, ಭಟ್ಕಳ ಡಿವೈಎಸ್ಪಿ ಶ್ರೀಕಾಂತ, ಡಿಸಿಆರ್ಬಿ ಡಿವೈಎಸ್ಪಿ ವಿಜಯ ಪ್ರಸಾದ್ ಹಾಗೂ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐ ಹಾಗೂ ಪಿಎಸೈ ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ: Wall collapse: ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು
-
ಸುವಚನ33 mins ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಅಂಕಣ22 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ22 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ22 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ23 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ20 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ20 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
-
ಕರ್ನಾಟಕ16 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ