Basava Jayanti 2023 What you ought to know about renowned philosopher BasaveshwaraBasava Jayanti 2023 : ಜಗದ ಜ್ಯೋತಿ, ವಿಶ್ವಗುರು ಶ್ರೀ ಬಸವೇಶ್ವರರು - Vistara News

ಧಾರ್ಮಿಕ

Basava Jayanti 2023 : ಜಗದ ಜ್ಯೋತಿ, ವಿಶ್ವಗುರು ಶ್ರೀ ಬಸವೇಶ್ವರರು

ಮನುಕುಲದ ಸರ್ವರಂಗದ ಸ್ವಾತಂತ್ರ್ಯಕ್ಕಾಗಿ ಆತ್ಮನೈವೇದ್ಯವನ್ನು ಮಾಡಿ ಜಗದ ಜ್ಯೋತಿಯಾದವರು ಶ್ರೀ ಬಸವೇಶ್ವರರು. ಇಂದು ಅವರ ಜಯಂತಿ (Basava Jayanti 2023). ತನ್ನಿಮಿತ್ತ ಶ್ರೀ ಬಸವೇಶ್ವರರ ಜೀವನದ ಸಂಕ್ಷಿಪ್ತ ಪರಿಚಯ ಮಾಡಿಕೊಡುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Basava Jayanti 2023 What you ought to know about renowned philosopher Basaveshwara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
 Basava Jayanti 2023 What you ought to know about renowned philosopher Basaveshwara

ಶ್ರೀ ಮ.ನಿ.ಪ್ರ. ಪ್ರಭು ಚನ್ನಬಸವ ಸ್ವಾಮೀಜಿ
ಜಂಗಮಲಿಂಗಕ್ಷೇತ್ರ, ಶ್ರೀಮೋಟಗಿಮಠ, ಅಥಣಿ.

ಆಯತದಲ್ಲಿ ಪೂರ್ವಾಚಾರಿಯ ಕಂಡೆ
ಸ್ವಾಯತದಲ್ಲಿ ಪೂರ್ವಾಚಾರಿಯ ಕಂಡೆ
ಸನ್ನಿಹಿತದಲ್ಲಿ ಪೂರ್ವಾಚಾರಿಯ ಕಂಡೆ
ಗುಹೇಶ್ವರಲಿಂಗದಲ್ಲಿ ಪೂರ್ವಾಚಾರಿ ಸಂಗನಬಸವಣ್ಣನ
ಶ್ರೀಪಾದಕ್ಕೆ ನಮೋ ನಮೋ ಎಂಬೆನು

-ಅಲ್ಲಮಪ್ರಭು ದೇವರು

ಬಸವರಾಜಾ ನಿನ್ನ ಗುಣಂಗಳಂ ಬಣ್ಣಿಸಲೆಮ್ಮಳವಲ್ಲ;
ಈಶನ ಮೀಸಲಪ್ಪ ಭಕ್ತ ನಿನಗೆಣೆಯಿಲ್ಲ, ಪಡಿಯಿಲ್ಲ?
ಪಾಸಟಿಯಾವಂ?
ಪಾಷಂಡಿ ಭೂಮಿಯೊಳು ಶಿವಭಕ್ತಿಯನಾರಂಭಿಸಿ, ಸಾಮರ್ಥ್ಯಂ ಬಿತ್ತಿ
ಪ್ರತ್ಯಕ್ಷಂಗಳಂ ಬೆಳೆದು, ಗಣಪರ್ವಂಗಳಂ ಸುಫಲಂ ಮಾಡಲೆಂದು
ಬಂದ ಕಾರಣಿಕ ಬಸವಾ, ನಿನ್ನ ದೆಸೆಯಿಂದೆಮ್ಮ ಭಕ್ತಿ ಬಣ್ಣವೇರಿತು

-ಹರಿಹರ

ಬಸವ ಶರಣೆನೆ ಭವವಡಗುವುದು
ಬಸವ ಶರಣೆನೆ ಕೀರ್ತಿಯೆಸೆಯುವುದು
ಬಸವ ಶರಣೆನೆ ದುಸ್ಥಿತಿಗಳತ್ತತ್ತಲೋಡುವುವು
ಬಸವ ಶರಣೆನೆ ಸೌಖ್ಯಮೊದಗುಂ
ಬಸವ ಶರಣೆನೆ ಭಾಗ್ಯವಪ್ಪುಗು
ಬಸವ ಶರಣೆನೆ ಕಾಮಿತೋನ್ನತ ಸಿದ್ಧಿ ಸಿದ್ಧಿಸುಗು

-ಭೀಮಕವಿ

ಬಸವಂ ಭಕ್ತಿಗೆ ಮೂಲಂ
ಬಸವA ಕಾಲಂಗೆಕಾಲನನುಪಮಶೀಲಂ
ಬಸವA ಜಂಗಮಲೋಲಂ
ಬಸವಾ ರಕ್ಷಿಪುದೆನ್ನ ಸಂಗನಬಸವಾ

-ಪಾಲ್ಕುರಿಕೆ ಸೋಮನಾಥ

ಹನ್ನೆರಡನೇಯ ಶತಾಬ್ದಿಯ ಸ್ವರ್ಣೋಧ್ಯಾಯದ ಸಮಾನತೆಯ ಶಿಖರಸೂರ್ಯ ವಿಶ್ವಗುರು ಬಸವಣ್ಣನವರು. ವಿಶ್ವಕ್ಕೆ ಸಂಸತ್ತನ್ನು ಕೊಟ್ಟ ಪ್ರಥಮ ಪಿತಾಮಹ, ವಚನಾಂದೋಲನದ ಪ್ರಥಮ ನೇತಾರ, ನಾಡಿಗೆ ಇಷ್ಟಲಿಂಗ ಕೊಟ್ಟ ಪ್ರಥಮ ಹರಿಕಾರ, ಮಹಾಮಾನವತಾವಾದಿ.

ಕಲ್ಯಾಣವೆಂಬ ಪ್ರಣತಿಯಲ್ಲಿ ಬಹುಬೆಲೆ ಬಾಳುವ ಭಕ್ತಿರಸವೆಂಬ ತೈಲವನ್ನೆರೆದು ಬೆಳ್ಳಂಬೆಳಕಾಗಿ ಶಿವನ ಪ್ರಕಾಶದಂತೆ ತೊಳಗಿ ಬೆಳಗಿದ ವಿಶ್ವವಿಭೂತಿ ಬಸವಣ್ಣನವರು ಮುತ್ತಿನಹಾರದಂತೆ ನುಡಿದು, ಲಿಂಗಮೆಚ್ಚಿ ಅಹುದು ಎಂಬಂತೆ ನಡೆದು, ಸಾರ್ವಕಾಲಿಕವೂ ಶಾಶ್ವತವೂ ಆದ ವಿಶ್ವತತ್ವಗಳನ್ನು ಸಾರಿದವರು. ಇಂಗಳೇಶ್ವರದ ಮಂಗಳಮೂರ್ತಿಯಾದ ಇವರು ಶಿವಾನುಭವದ ಸಾಕಾರಮೂರ್ತಿಯಾಗಿ ಜಂಗಮ ಶಿವಶಾಸನದಂತೆ ಬಾಳಿದವರು. ದೇಶ-ಕಾಲ-ಜಾತಿ-ಕುಲ-ಮತಗಳ ಮಾನವ ನಿರ್ಮಿತ ಸಂಕುಚಿತ ಸೀಮಾರೇಖೆಯನ್ನು ಸೀಮೋಲ್ಲಂಘನಗೈದು ಕಾಯಕ ತತ್ವದ ತಾರಕ ಮಂತ್ರವನ್ನು ಉಪದೇಶಿಸಿ ದಕ್ಷಿಣ ಭಾರತದಲ್ಲಿ ಮೊದಲ ಸ್ವತಂತ್ರ ಕನ್ನಡ ಧರ್ಮವನ್ನು ಕೊಟ್ಟವರು ಬಸವಣ್ಣನವರು. ‘ಲಿಂಗಾಯತ ಧರ್ಮ’ ಬಸವಣ್ಣನವರು ನೀಡಿದ ಮೊದಲ ಪ್ರಜಾಸತ್ತಾತ್ಮಕ ಧರ್ಮವಾಗಿದೆ.ಇದರ ನೇತಾರ ಶ್ರೀ ಬಸವಣ್ಣ.

ದಲಿತೋದ್ಧಾರಕ, ಮಹಿಳಾ ಸ್ವಾತಂತ್ರ್ಯ ನೀಡಿದ ಸಮತಾವಾದಿ, ವಚನಕಾರ ಸಮಾಜೋಧಾರ್ಮಿಕ ಚಳುವಳಿಯ ವಿಶ್ವಚೇತನ ಶ್ರೀ ಬಸವಣ್ಣನವರು. ಅರ್ಥರ್ ಮೈಲ್ಸ್ ಹೇಳುವಂತೆ, ‘ಭಾರತದ ಮೊಟ್ಟ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣ’ ಎಂದು ಬಣ್ಣಿಸುತ್ತಾರೆ.ಬಸವಣ್ಣನವರು ಹೊಸದೊಂದು ಧರ್ಮ ನೀಡಿದರು.

ರಾಷ್ಟ್ರಕವಿ ಕುವೆಂಪು ಹೀಗೆ ಹೇಳುತ್ತಾರೆ;
ಕಾರ್ತಿಕದ ಕತ್ತಲಲಿ ಆಕಾಶ ದೀಪವಾಗಿ ನೀ ಬಂದೆ,
ಬಟ್ಟೆಗೆಟ್ಟವರಿಗೊಂದು ದೊಂದಿದಿಕ್ಕಾಗಿ
ಎಂಟು ಶತಮಾನಗಳ ಹಿಂದೆ
ಅಗ್ನಿ ಖಡ್ಗವನಾಂತ ಓ ಅಧ್ಯಾತ್ಮ ಕ್ರಾಂತಿವೀರ,
ದೇವದಯೆಯೊಂದು ಹೇ ಧೀರಾವತಾರ,
ಶ್ರೀ ಬಸವೇಶ್ವರಾ!
ಜಾತಿ ಪದ್ಧತಿಯ ಹೋಮಕೂಪಕ್ಕೆ
ಬಿದ್ದು, ವೈದಿಕರ ಯಜ್ಞ ತಾಪಕ್ಕೆ
ಬಲಿವೋದ ದಲಿತ ಜೀವರನೆತ್ತಿಮತಿ ವಿಚಾರಕ್ಕೆ
ಕಾಯಕದ ದಿವ್ಯತತ್ತ್ವ ದಾಸುಕ್ಷೇಮ ಧರ್ಮನಾಶಕ್ಕೆ
ನಡೆಸಿದ ಮಹಾತ್ಮನೆ ನಿನಗೆ ನಮೋ ನಮಃ|
ಇಂದಿಗೂ ನಾವು ನಿನ್ನೆತ್ತರಕೆ ಏಳಲಾರದೆ ಅಯ್ಯಾ
ಮತದ ಉಸುಬಿಗೆ ಸಿಲುಕಿ ತತ್ತರಿಸುತಿಹೆವಯ್ಯ!
ಬಾರಯ್ಯ ಕೈ ಹಿಡಿದೆತ್ತಿ ಬದುಕಿಸು ನಮ್ಮನೆಳೆದು
ವರ್ಣಾಶ್ರಮದ ಹೆಸರ ಹೊಲೆಗೆಸರ ವಂಚನೆಯ ಹೊಂಡದಿಂದೆ!
ಭಕ್ತಿ ಗಂಗೆಯನೆರೆದು
ಭಾಗವತ ಶಕ್ತಿಯಂ ಕರೆದು
ಮತ ಮೌಢ್ಯದ ಜ್ಞಾನಕಂಪವನು ತೊಳೆದು
ರುಚಿಗೊಳಿಸು ವಿಜ್ಞಾನ ವೇದಾಂತ ತೀರ್ಥದಿಂದೆ

ಚಾರಿತ್ರಿಕ ಯುಗಪುರುಷ ಬಸವಣ್ಣನವರ ಕುರಿತು ಮೂಡಿಬಂದಷ್ಟು ಪುರಾಣಗಳು ಕಾವ್ಯಗಳು ಚರಿತ್ರೆಗಳು ವಚನಗಳು ಮತ್ತಾವ ವ್ಯಕ್ತಿಗಳ ಕುರಿತು ಬಂದಿಲ್ಲ ಎಂದರೆ ಅತಿಶಯೋಕ್ತಿಯೇನಲ್ಲ. ಶಂಭು ಶಿವನಾಗಿ ದರ್ಶನವಿತ್ತರೆ; ದ್ವಿತೀಯ ಶಂಭುವಾಗಿ ಭುವಿಯ ಬೆಳಗಿದ ಭಾಗ್ಯವಿಧಾತ ಬಸವಣ್ಣನವರು.

ಬಸವಣ್ಣನವರ ಕುರಿತು ಕಾವ್ಯಗಳು

ಅರ್ಜುನವಾಡದ ಶಾಸನ ಬಸವಣ್ಣನವರನ್ನು ಚಾರಿತ್ರಿಕ ವ್ಯಕ್ತಿಯೆಂದು ಸಾಬೀತು ಮಾಡಿದರೆ, ಬಸವಣ್ಣನವರನ್ನು ಕುರಿತು ಮೊಟ್ಟ ಮೊದಲ ಕೃತಿ ಹೊರಬಂದದ್ದು ಹರಿಹರನಿಂದ. ಹರಿಹರನ ಬಸವರಾಜ ದೇವರ ರಗಳೆ ಮೊದಲ ಕೃತಿಯೆಂಬ ಕೀರ್ತಿಗೆ ಪಾತ್ರವಾಗಿದೆ. ತದನಂತರ ಪಾಲ್ಕುರಿಕೆ ಸೋಮನಾಥನು ತೆಲುಗು ಭಾಷೆಯಲ್ಲಿ ಬಸವ ಪುರಾಣವನ್ನು ರಚಿಸಿದನು. ಈ ಕೃತಿಯನ್ನು ಆಧರಿಸಿ ಭೀಮಕವಿ ಕನ್ನಡದಲ್ಲಿ ಬಸವ ಪುರಾಣವನ್ನು ಅನುವಾದಿಸಿದನು. ಸಿಂಗಿರಾಜನ ‘ಅಮಲ ಬಸವರಾಜ ಚಾರಿತ್ರ’, ಷಡಕ್ಷರದೇವನ ‘ಬಸವರಾಜ ವಿಜಯಂ’ ಮೊದಲಾದ ಕೃತಿಗಳು ಬಸವಣ್ಣನವರ ಘನವ್ಯಕ್ತಿತ್ವವನ್ನು ಲೋಕಕ್ಕೆ ಸಾರುವ ಅಮೂಲ್ಯ ಆಕರಗಳಾಗಿವೆ.

ಭುವನ ಭಾಗ್ಯೋದಯ!

ಐತಿಹಾಸಿಕ ನಗರಿ ವಿಜಯಪುರ ಜಿಲ್ಲೆಯ ಬಾಗೇವಾಡಿ ಬಸವಣ್ಣನವರ ಉದಯದಿಂದ ಅದು ‘ಬಸವನ ಬಾಗೇವಾಡಿ’ಯಾಯಿತು. ಇಲ್ಲಿ ಸುಪ್ರಸಿದ್ಧ ಅಗ್ರಹಾರವಿತ್ತು. ಹೆಚ್ಚಾಗಿ ಶೈವಬ್ರಾಹ್ಮಣರು ವಾಸವಾಗಿದ್ದರು. ಈ ಅಗ್ರಹಾರದ ಅಧಿಪತಿ ಮಂಡಿಗೆಯ ಮಾದಿರಾಜ.ಕಮ್ಮೆಕುಲದ ವಂಶಸ್ಥನಾದ ಮಾದರಸ ಮತ್ತು ಮಾದಲಾಂಬಿಕೆಯರು ಆದರ್ಶ ದಂಪತಿಗಳು.ಮಾದಲಾಂಬಿಕೆಯವರ ತವರುಮನೆ ಇಂಗಳೇಶ್ವರ. ಇಂತಹ ದಂಪತಿಗಳ ಪುಣ್ಯೋದರದಿಂದ ಕ್ರಿ.ಶ.1131 ರಲ್ಲಿ ಅವತರಿಸಿದ ಅರಿವ ಮಹಾಮೂರ್ತಿ ಶ್ರೀ ಬಸವಣ್ಣನವರು.

ಬಸವಣ್ಣನ ಸಹೋದರ ದೇವರಾಜು, ಅಕ್ಕ ನಾಗಲಾಂಬಿಕೆ.ಕಿರಿಯ ಪುತ್ರನೇ ಬಸವಣ್ಣ. ಹುಟ್ಟುತ್ತಲೇ ಕೆಳವರ್ಗದ ಬಂಧುವಿನ ಬಂಧನ ಬಗೆಹರಿಸಿದ ಪರಮಾವತಾರಿ. ಮುಂದೆ ಬಾಗೇವಾಡಿಯಲ್ಲಿ ಬಸವಣ್ಣ ಬೆಳೆಯತೊಡಗಿದ. ವಯಸ್ಸಿಗೆ ಮೀರಿದ ಕುತೂಹಲ, ಅಪರೂಪದ ಜಾಣ್ಮೆ, ಎಚ್ಚೆತ್ತ ಚೇತನ; ಆಗಲೇ ಎಚ್ಚರಿಕೆಯ ಜೀವನ ಅರಿತಿದ್ದ ಸೂಕ್ಷ್ಮಗ್ರಾಹಿ! ಬ್ರಾಹ್ಮಣ ಪದ್ಧತಿಯಂತೆ ಬಸವಣ್ಣನಿಗೆ ಎಂಟನೆಯ ವಯಸ್ಸಿಗೆ ‘ಉಪನಯನ’ ನೆರವೇರಿಸಲು ಸಿದ್ಧತೆಗೆ ಸನ್ನದ್ಧರಾದರು. ಅಕ್ಕಳಿಗೂ ಈ ಉಪನಯನ ಮಾಡಿಸಿರಿ, ಅಂದಾಗ ಮಾತ್ರ ನಾನೂ ಉಪನಯನ ಮಾಡಿಕೊಳ್ಳುತ್ತೇನೆ ಎಂದ. ಕರ್ಮಲತೆಯಂತಿದ್ದ ‘ಉಪನಯನ’ ವೈದಿಕಾಚರಣೆಗಳು ಬೇಡವಾಗಿದ್ದವು. ಹಠ ಹಿಡಿಯುತ್ತಾನೆ.

ಕೂಡಲ ಸಂಗಮದೆಡೆಗೆ…

ಬಸವಣ್ಣನ ಮಾತಿಗೆ ಸಹಮತ ಸಿಗದಾದಾಗ ಈ ಸಂಪ್ರದಾಯವಾದಿಗಳ ಸಹವಾಸವೇ ಸಾಕು ಎಂದು ಮನೆಯ ಬಿಟ್ಟು ಹೊರಟನು. ಕೂಡಲಸಂಗಮಕ್ಕೆ ಬರುತ್ತಾನೆ. ಕೂಡಲಸಂಗಮವು ಆ ಕಾಲದಲ್ಲಿ ಒಂದು ದೊಡ್ಡ ವಿದ್ಯಾಕೇಂದ್ರವಾಗಿತ್ತು. ತಮ್ಮ ಮನೆ ಬಿಟ್ಟು, ಬಂಧು ಬಳಗ ಬಿಟ್ಟು ಹೊರಟಾಗ ಒಡಹುಟ್ಟಿದ ಅಕ್ಕ ನಾಗಲಾಂಬಿಕೆ ತಮ್ಮನೊಂದಿಗೆ ಹೊರಟು ನಿಲ್ಲುತ್ತಾಳೆ. ಆತನನ್ನೆ ಹಿಂಬಾಲಿಸುತ್ತಾಳೆ.

ಈ ವೇಳೆಗೆ ಅಕ್ಕ ನಾಗಲಾಂಬಿಕೆಗೆ ಶಿವಸ್ವಾಮಿ ಅವರೊಂದಿಗೆ ವಿವಾಹವಾಗಿತ್ತು. ಬೆನ್ನ ಹಿಂದಿನ ನೆರಳಿನಂತೆ ಬಸವಣ್ಣನವರಿಗೆ ಬೆಂಗಾವಲಾಗಿ ನಿಂತ ‘ಶಕ್ತಿಗಂಗೋತ್ರಿ’ ಅಕ್ಕನಾಗಲಾಂಬಿಕಾತಾಯಿ. ಕೂಡಲಸಂಗಮ ಕ್ಷೇತ್ರದೊಳಗೆ ಅಪರೂಪದ ಗುರುಕುಲದಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಬಸವಣ್ಣ ಅಲ್ಲಿ ವಿದ್ಯಾರ್ಜನೆ ಪೂರೈಸಿದನು. ಪುಟಕ್ಕಿಟ್ಟ ಚಿನ್ನವಾದನು. ಸಾಧನೆಯ ಅರಿವಿನ ಮೂರ್ತಿಯಾದನು. ಸಂಸ್ಕೃತ, ಹಳೆಗನ್ನಡ ಭಾಷೆಗಳು ಪರವಶವಾದವು. ಸಂಗಮದ ಸಾಧನಾ ರಂಗದಲ್ಲಿ ಸಂಪ್ರದಾಯ, ವೈಚಾರಿಕತೆ, ಮಾನವತೆ ಹೀಗೆ ಅನೇಕ ಮಹತ್ವದ ವಿಷಯಗಳು ಬಸವಣ್ಣನಿಗೆ ಗೋಚರಿಸತೊಡಗಿದವು.ವಯಸ್ಸು ಪ್ರೌಢಾವಸ್ಥೆಗೆ ಬಂದಿತು.

ಕಲ್ಯಾಣ ಮಹೋತ್ಸವ

ತಾಯಿ ಮಾದಲಾಂಬಿಕೆಯ ಅಣ್ಣ ಬಲದೇವರು ಕಳಚೂರಿ ವಂಶದ ಬಿಜ್ಜಳ ಮಹಾರಾಜನ ದಂಡನಾಯಕರಾಗಿದ್ದರು. ಬಲದೇವ ಬಸವಣ್ಣನ ಸೋದರಮಾವ; ಬಸವಣ್ಣನ ಕೀರ್ತಿ ಅದಾಗಲೆ ಕಲ್ಯಾಣ ತಲುಪಿತ್ತು.ಬಸವಣ್ಣನನ್ನು ಅರಸಿ ಕೂಡಲಸಂಗಮಕ್ಕೆ ಬಂದ ಬಲದೇವ ಮಂತ್ರಿ ಬಸವಣ್ಣನನ್ನು ನೋಡಿ ಸಂತಸಗೊಂಡ. ತನ್ನ ಮಗಳನ್ನು ಕೊಟ್ಟು ವಿವಾಹ ಮಾಡಿಸಲು ಮುಂದಾದ. ಅಕ್ಕ ಹಾಗೂ ಬಲದೇವರು ಸೇರಿ ಬಸವಣ್ಣನನ್ನು ಒಪ್ಪಿಸಿ ಗಂಗಾಂಬಿಕೆಯೊಂದಿಗೆ ಕಲ್ಯಾಣ ಮಹೋತ್ಸವವನ್ನು ನೆರವೇರಿಸಿದರು. ಮಂಗಳವೇಡೆಯಲ್ಲಿ ಅಕ್ಕನಾಗಲಾಂಬಿಕೆ ಪತಿ ಶಿವದೇವರು, ತಮ್ಮ ಬಸವಣ್ಣನವರು ನೆಲೆ ನಿಂತರು.

ಬಿಜ್ಜಳ ಮಹಾರಾಜನ ಮತ್ತೋರ್ವ ದಂಡನಾಯಕನಾಗಿದ್ದನು ಸಿದ್ಧರಸ. ರಾಜಕರ‍್ಯಗಳಲ್ಲಿ ತೊಡಗಿದಾಗ ಅಚಾತರ‍್ಯದಿಂದ ಸಿದ್ಧರಸ ದಂಪತಿಗಳು ಕಾಲವಾದರು. ಅವರಿಗೆ ಓರ್ವ ಮಗಳಿದ್ದಳು. ಬಾಲ್ಯದಿಂದಲೂ ಅವಳನ್ನು ಸಾಕಿ ಸಲುಹಿದವರು ಬಿಜ್ಜಳ ಮಹಾರಾಜರು. ಅವಳೇ ಶ್ರೀ ನೀಲಾಂಬಿಕೆ.ಬಸವಣ್ಣನ ವಿನಯ, ವಿದ್ವತ್ತು. ಪ್ರೌಢಿಮೆ ಅರಿತು ಮಹಾರಾಜರು ಗಂಗಾಂಬಿಕೆಯೊಂದಿಗೆ ನೀಲಾಂಬಿಕೆಯನ್ನೂ ಕೊಟ್ಟು ವಿವಾಹ ಮಾಡಿದರು. ಬಸವಣ್ಣನವರು ಗಂಗಾಂಬಿಕೆ ಮತ್ತು ನೀಲಾಂಬಿಕೆಯರ ಬಾಳಿನ ಆದರ್ಶ ಪತಿದೇವರಾದರು.

ಪ್ರಧಾನ ಮಂತ್ರಿ ಪಟ್ಟ

ಭಗವದವತಾರವೇ ಮೈವೆತ್ತು ಬಂದ ಬಸವಣ್ಣ, ಜನಮಾನಸದ ಏಳ್ಗೆಗಾಗಿಯೇ ಅವತರಿಸಿದ ಮನುಕುಲೋದ್ಧಾರಿ! ಅಪಾರ ಅಧ್ಯಯನ, ಆರ್ಥಿಕ ಸೂಕ್ಷ್ಮತೆ, ಆಡಳಿತ ಪ್ರಜ್ಞೆ, ಸಮಾಜ ಸಂವೇದನೆ, ಸಾಹಿತ್ಯ ಆಲೋಚನೆ ಹೀಗೆ ಎಲ್ಲ ವ್ಯಕ್ತಿತ್ವಗಳ ಸಂಗಮವಾಗಿದ್ದರು! ಓರ್ವ ಪರಿಪೂರ್ಣ ಜಂಗಮರಾಗಿದ್ದರು. ಪೂರ್ವದ ಚಾಲುಕ್ಯರು ಅಡಗಿಸಿಟ್ಟಿದ್ದ ಅರವತ್ತಾರು ಕೋಟಿ ಹೊನ್ನಿನ ಸ್ಥಳವನ್ನು ಪರಿಶೀಲಿಸಿ ಹೇಳಿದರು.

ಬಸವಣ್ಣನವರ ಬೆಳವಣಿಗೆಯನ್ನು ಅರಿತ ಬಿಜ್ಜಳ ಮಹಾರಾಜನು ಬಲದೇವರಸರ ಮಂತ್ರಿಪದವಿಯನ್ನು ಬಸವಣ್ಣನವರಿಗೆ ನೀಡಿದರು.ಯಾವ ಪದವಿ ಪ್ರಶಸ್ತಿಗಳಿಗೆ ಮನಸೋಲದ ಬಸವಣ್ಣ ನಾಡವರ ಏಳ್ಗೆಗಾಗಿ ಸೇವೆ ಎಂದು ಒಪ್ಪಿಕೊಂಡರು. ಬಿಜ್ಜಳ ಮಹಾರಾಜನ ಪ್ರಧಾನ ಮಂತ್ರಿಯಾಗಿ ಆರ್ಥಿಕ, ಸಾಮಾಜಿಕ ಎಲ್ಲ ಆಡಳಿತ ವ್ಯವಸ್ಥೆಯನ್ನು ಸುಧಾರಿಸಿದರು. ಇದರಿಂದ ಸಂತಸಗೊಂಡ ಬಿಜ್ಜಳ ಮಹಾರಾಜ ಇವರನ್ನು ಕಲ್ಯಾಣದ ಮಹಾಪ್ರಧಾನಿಯನ್ನಾಗಿ ಮಾಡಿದರು. ಬಸವಣ್ಣನವರಿಂದ ರಾಜ್ಯವು ಸುಭಿಕ್ಷೆಯಿಂದ ಕಂಗೊಳಿಸತೊಡಗಿತು.

ಮಹಾಮನೆಯ ಮೌಕ್ತಿಕದಚ್ಚು

 Basava Jayanti 2023 What you ought to know about renowned philosopher Basaveshwara

ಕಲ್ಯಾಣದಲ್ಲಿ ಬಸವಣ್ಣನವರು ಮಾಡಿದ ಕ್ರಾಂತಿಕಾರಿ ಕೆಲಸಗಳ ಜೊತೆಗೆ ಜನಸಾಮಾನ್ಯರಿಗೂ ಧರ್ಮ ತತ್ವ ಸಿದ್ಧಾಂತಗಳ ಅರಿವು ಆಗಬೇಕು.ಅವರಲ್ಲಿ ವೈಚಾರಿಕ ಪ್ರಜ್ಞೆ ಮೂಡಬೇಕು. ಸಮಾನತೆ-ಕಾಯಕ-ದಾಸೋಹ ತತ್ವಗಳು ಅನುಷ್ಠಾನಕ್ಕೆ ಬರಬೇಕೆಂದು ಬಸವಣ್ಣನವರು ಬಯಸಿದರು. ಅದಕ್ಕಾಗಿ ‘ಅನುಭವ ಮಂಟಪ’ ಮಹಾಮನೆಯನ್ನು ನಿರ್ಮಿಸಿದರು. ಇಷ್ಟಲಿಂಗದ ಅನುಸಂಧಾನ, ವಚನ ರಚನೆ ಮೊದಲಾದ ಕಾರ್ಯಗಳ ಜೊತೆಗೆ ಶತಶತಮಾನಗಳಿಂದ ಅಸ್ಪೃಶ್ಯತೆಯ ಕಳಂಕದಿಂದ ಬದುಕುತ್ತಿದ್ದ ಜನರ ನೋವಿಗೆ ಸ್ಪಂದಿಸಿದರು.ಅವರ ಬಾಳಿನಲ್ಲಿ ಬೆಳಕು ಮೂಡಿಸಿದರು.

ಬಸವಣ್ಣನವರ ಈ ಕೀರ್ತಿ ವಾರ್ತೆಯನ್ನು ಕೇಳಿ ದೇಶ ವಿದೇಶದಿಂದ ಜನರು ಕಲ್ಯಾಣಕ್ಕೆ ಆಗಮಿಸಿದರು.ಕಾಶ್ಮೀರದ ಅರಸು ಮಾರಯ್ಯ ತನ್ನ ಅರಸೊತ್ತಿಗೆಯನ್ನೇ ಧಿಕ್ಕರಿಸಿ ಕಲ್ಯಾಣಕ್ಕೆ ಬಂದ. ಮಹಾರಾಷ್ಟ್ರ, ಒರಿಸ್ಸಾ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕಂದಹಾರ (ಇಂದಿನ ಅಫಘಾನಿಸ್ತಾನ) ಮೊದಲಾದ ಕಡೆಗಳಿಂದ ಕಾಯಕಜೀವಿಗಳು ಕಲ್ಯಾಣಪುರ ಪ್ರವೇಶಿಸಿದರು. ಕಲ್ಯಾಣದಲ್ಲಿ ಲಕ್ಷದಾ ಮೇಲೆ ತೊಂಬತ್ತಾರು ಸಾವಿರ ಜಂಗಮರು ನೆಲೆ ನಿಂತರು. ಅವರಿಗೆಲ್ಲ ಬಸವಣ್ಣನವರ ಮಹಾಮನೆಯಲ್ಲಿ ನಿತ್ಯ ಪ್ರಸಾದ ವ್ಯವಸ್ಥೆಯಾಯಿತು.ಇವರೆಲ್ಲರ ಸಹಕಾರದಿಂದ ಬಸವಣ್ಣನವರು ‘ಅನುಭವ ಮಂಟಪ’ ಎಂಬ ಸಂಸತ್ತನ್ನು ನಿರ್ಮಿಸಿದರು. ಶೂನ್ಯಪೀಠವನ್ನು ಸ್ಥಾಪಿಸಿದರು.

ಈ ಪೀಠಕ್ಕೆ ಕೆಳವರ್ಗದ ಮಹಾಜ್ಞಾನಿ ಅಲ್ಲಮನನ್ನು ಅಧ್ಯಕ್ಷನನ್ನಾಗಿ ಮಾಡಿ ಸಮಾನತೆಯ ಕ್ರಾಂತಿಗೆ ನಾಂದಿ ಹಾಡಿದರು. 770 ಅಮರಗಣಂಗಳು ಸಂಸದರಂತೆ ಕಾರ್ಯ ನಿರ್ವಹಿಸಿದರು. ಆಧ್ಯಾತ್ಮಿಕ ಸಾಮ್ರಾಜ್ಯವೇ ನಿರ್ಮಾಣವಾಯಿತು. ಕಲ್ಯಾಣ ಕೈಲಾಸವಾಯಿತು.

ಕಾಯಕಜೀವಿಗಳ ಸಂಘಟನೆ

‘ಆರಂಭ ಮಾಡುವೆ ಗುರುಪೂಜೆಗೆಂದು’ ಎಂದು ಭಾವಿಸಿದ್ದ ಬಸವಣ್ಣನವರು ಕಲ್ಯಾಣ ರಾಜ್ಯದಲ್ಲಿ ಪ್ರತಿಯೊಬ್ಬರೂ ಕಾಯಕ ಮಾಡಿಯೇ ಪ್ರಸಾದ ಮಾಡಬೇಕೆಂದು ಆದೇಶ ನೀಡಿದರು. ಕಸ ಹೊಡೆಯುವುದರಿಂದ-ಕಲಶದವರೆಗೆ, ಪತ್ರಿ ಎತ್ತುವುದರಿಂದ ಹಿಡಿದು ಪಾದರಕ್ಷೆಯ ತಯಾರಿಸುವವರೆಗೆ, ಎಲ್ಲರೂ ನಿತ್ಯ ಕಾಯಕದಲ್ಲಿ ನಿರತರಾದರು. ಕಲ್ಯಾಣ ಎನ್ನುವುದು ಕೇವಲ ಒಂದು ಪುರವಾಗಿ, ಪ್ರದೇಶವಾಗಿ ಉಳಿಯಲಿಲ್ಲ. ಅದು ಕಲ್ಯಾಣ ರಾಜ್ಯವಾಯಿತು. 19ನೇ ಶತಮಾನದಲ್ಲಿ ಕಾರ್ಲ್ ಮಾರ್ಕ್ಸ್ ಹೇಳಿದ್ದು ಕಾಯಕ ಜೀವಿಗಳ ಸಂಘಟನೆಯನ್ನು, 12ನೇ ಶತಮಾನದಲ್ಲಿ ಸಂಘಟನೆ ಮಾಡಿ ಪ್ರತಿಯೊಬ್ಬ ಶರಣರಿಗೆ ಕಾಯಕವೇ ಕೈಲಾಸವಾಯಿತು.

ದಾಸೋಹವೇ ಪ್ರಾಣಜೀವಾಳ

ಕಾಯಕದಿಂದ ಬಂದದ್ದನ್ನು ಕೂಡಿಡದೆ ಅದನ್ನು ಸಮಾಜಕ್ಕೆ ಬಳಸಬೇಕು ಎನ್ನುವ ದೈವೀಭಾವವೇ ದಾಸೋಹ. ಹಸಿದವರಿಗೆ, ನೊಂದವರಿಗೆ, ನಿರಾಶ್ರಿತರಿಗೆ ಉಣಿಸಿ ಉಣ್ಣುವ ಶರಣಾಗತಿ ಭಾವವೇ ಅದಾಗಿದೆ. ‘ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯ’ ಎಂದು ಬಸವಣ್ಣನವರು ಕೇಳಿಕೊಂಡರು.ಕಲ್ಯಾಣದ ಮಹಾಮಾರ್ಗದಲ್ಲಿ ಎಲ್ಲರೂ ನೀಡುವವರೇ ಇದ್ದರು. ‘ಬೇಡುವವರಿಲ್ಲದೆ ಬಡವನಾದೆ’ ಎಂದರು ಬಸವಣ್ಣನವರು.

ಅನುಭವ ಮಂಟಪ

ವಿಶ್ವದ ಎಲ್ಲ ಅನುಭಾವಿಗಳು, ಕಾಯಕಜೀವಿಗಳು ಸಂಗಮಗೊಂಡ ಅವಿಮುಕ್ತ ಕ್ಷೇತ್ರವೇ ಅನುಭವ ಮಂಟಪ! ವಿಶ್ವದ ಪ್ರಥಮ ಸಂಸತ್ತನ್ನು ನಿರ್ಮಿಸಿದ ನಿರ್ಮಾತೃ ಬಸವಣ್ಣನವರು. ಪ್ರತಿಯೊಬ್ಬರು ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಂಡು ಸಮಾನತೆಯಿಂದ ಬದುಕಬೇಕೆಂಬ ಆಶಯದ ಆಡುಂಬೊಲ ಈ ಅನುಭವ ಮಂಟಪ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲ ಭಾವಜೀವಿಗಳು ಬಸವಣ್ಣನವರ ಕೀರ್ತಿವಾರ್ತೆಗಳನ್ನು ಕೇಳಿ ಅನುಭವ ಮಂಟಪಕ್ಕೆ ಬಂದರು.

ವೈರಾಗ್ಯನಿಧಿ ಅಲ್ಲಮ ಪ್ರಭುದೇವರು ಇದರ ಅಧ್ಯಕ್ಷರಾದರು. ಶಾಂತರಸರು ವಚನ ಭಂಡಾರಿಯಾದರು. ಎಲ್ಲ ಶರಣ ಸಮೂಹ ಅನುಭವ ಮಂಟಪದ ಕರ್ಣಧಾರತ್ವ ವಹಿಸಿಕೊಂಡರು. ಪ್ರಜಾಪ್ರಭುತ್ವದ ಪ್ರತೀಕದಂತಿದ್ದ ಅನುಭಾವಿಗಳ ಒಡ್ಡೋಲಗವದು.ಅಲ್ಲಿ ಪ್ರಧಾನವಾದುದು ಕುಲವಲ್ಲ ಶೀಲ. ಉಚ್ಚನೀಚ ಭಾವದ ಕೊಚ್ಚೆ, ಜಾತಿಭೇದದ ದುರ್ಗಂಧ ಅಲ್ಲಿ ಇರಲಿಲ್ಲ. ಹೀಗೆ ಸದಾಚಾರ ಸದ್ಭಕ್ತಿಗಳೇ ಸೋಪಾನವಾಗಿದ್ದ ಈ ಶಿವಾನುಭವ ಮಂಟಪದ ಸದಸ್ಯರೆಲ್ಲ ಸಮಾನವಾಗಿ ಸವಿದರು. ಸಾನುಕಂಪದ ದ್ಯೋತಕವಾದ ಈ ಅನುಭವ ಮಂಟಪದಲ್ಲಿ ವರ್ಣಸಂಕರ ಭಾವನೆಯನ್ನು ಸೂತಕವೆಂದು ದೂರೀಕರಿಸಿ ಸರ್ವಸಮಾನತೆಯ ಸೋದರಭಾವನೆಯಿಂದ ಅದರೊಳಕ್ಕೆ ಬರಲು ಎಲ್ಲರಿಗೂ ಸ್ವಾಗತ ನೀಡಿದರು.

ದಶದಿಕ್ಕಿಗೂ ಅದರ ಹೆಚ್ಚಳದ ಹಿರಿಮೆ ಹಬ್ಬಿತು. ಆಂಧ್ರ, ತಮಿಳುನಾಡು, ಸೌರಾಷ್ಟ್ರದಿಗಳಿಂದ ಮುಮುಕ್ಷಗಳನೇಕರು ಅಲ್ಲಿಗೆ ಆಕರ್ಷಿತರಾದರು. ಇದರ ಶ್ರೇಯಸ್ಸಿನ ಬಹುಪಾಲು ಬಸವಣ್ಣನವರಿಗೆ ಸಲ್ಲುತ್ತದೆ. ಸಂಪ್ರದಾಯಬದ್ಧವಾಗಿ ಬಂದಿದ್ದ ವರ್ಣಭೇದದ ವಜ್ರ ಭಿತ್ತಿಯನ್ನು ಶಿಥಿಲಗೊಳಿಸಿ, ತಪ್ಪುಭಾವನೆಯನ್ನು ತೊರೆದು ವರ್ಗಭೇದವನ್ನು ತೊಡೆದು, ಅಡುಗೆಯ ಮನೆಗಷ್ಟೇ ಸೀಮಿತವಾಗಿದ್ದ ಸ್ತ್ರೀಯರಿಗೆ ಅನುಭವ ಮಂಟಪದಲ್ಲಿಯೂ ಸಮಾನ ಸ್ಥಾನವನ್ನಿತ್ತು ಅಂದಿನ ಸಮಾಜದಲ್ಲಿ ಅಪೂರ್ವವಾದ ಒಂದು ಪ್ರೇಮ ಪ್ರಭಾವಳಿಯನ್ನು ನಿರ್ಮಿಸಿದ ಕೀರ್ತಿ ಬಸವಣ್ಣನವರದು.

ಕರ್ತಾರನ ಕಮ್ಮಟ!

ಭಾರತ ಮೌಢ್ಯದ ಮನೆ, ಕಂದಾಚಾರದ ಕೊಂಪೆ. ಕಲ್ಲು ನಾಗರಿಗೆ ಹಾಲೆರೆವ, ಉಣ್ಣದ ಲಿಂಗಕ್ಕೆ ಬೋನ ಹಿಡಿವ, ನೀರು ಕಂಡಲ್ಲಿ ಮುಳುಗುವ, ಮರ ಸಿಕ್ಕಲ್ಲಿ ಸುತ್ತುವ, ಮಡಕೆ ದೈವ, ಮೊರದೈವ ಎಂದು ನೂರೆಂಟು ಗತಿಗೆಟ್ಟ ದೈವಂಗಳನ್ನು ಪೂಜಿಸುವ, ಹೆಜ್ಜೆಗೊಂದು ಶಕುನ, ಬಿದ್ದರೊಂದು ಶಾಸ್ತ್ರ ಕೇಳುವ ಮೌಢ್ಯಕ್ಕೆ ಒಲಿದು, ಸಹಜತೆಯನ್ನು ಮರೆತವರೇ ಬಹಳ. ಇವರಿಗೆ ನಡೆನುಡಿಯಲ್ಲಿ ಮಡಿಯಾಗಿರುವುದನ್ನು ಕಲಿಸಿದರು ಬಸವಣ್ಣನವರು.
ಧರ್ಮ ಎಂಬುದು ಒಂದು ಜೀವನವಿಧಾನ. ಬಸವಣ್ಣನಲ್ಲಿ ಶ್ರೇಷ್ಠ ಮಾನವತೆ ನಿಜವಾದ ಧರ್ಮ. ಅಂತಹ ಧರ್ಮವನ್ನು ಅಪ್ಪಿದ, ಜಾತೀಯತೆಯನ್ನು ದ್ವೇಷಿಸಿದ. ಅದೇ ರೀತಿ ದೈವದ ಅಸ್ತಿತ್ವವನ್ನು ಒಪ್ಪಿದ, ದೇವಾಲಯ ಸಂಸ್ಕೃತಿಯನ್ನು ತಿರಸ್ಕರಿಸಿದ.

ಅವನು ದೇವರನ್ನು ಕಂಡಿದ್ದು ಕಲ್ಲಿನಲ್ಲಿ ಅಲ್ಲ, ಮಣ್ಣಿನಲ್ಲಿ ಅಲ್ಲ, ಪ್ರತಿಯೊಬ್ಬ ಮಾನವನ ಹೃದಯದಲ್ಲಿ. ಪಕ್ಕದವರನ್ನು ಪ್ರೀತಿಸಿದರೆ ದೇವದೇವನನ್ನೂ ಪೂಜಿಸಿದಂತೆ ಎಂಬ ಭಾವನೆ ಸದ್ಭಾವನೆಯನ್ನು ಬಿತ್ತಿದ. ಮನುಷ್ಯ ಮನುಷ್ಯರ ನಡುವೆ ಸೌಹಾರ್ದದ ಸೂತ್ರವೇ ಹರಿದು ಹೋಗಿ ಪ್ರತಿಯೊಬ್ಬ ವ್ಯಕ್ತಿಯೂ ಒಂದೊಂದು ದ್ವೀಪವಾಗಿರುವ ಈ ದಿನಗಳಲ್ಲಿ ಬಸವಣ್ಣನವರು ತುಂಬಾ ಪ್ರಸ್ತುತರಾಗುತ್ತಾರೆ.ಅವರ ವಿಶ್ವಪ್ರೇಮ ವಿಶ್ವಮೈತ್ರಿ ಅನ್ಯಾದೃಶ್ಯವಾದವುಗಳು.

ಬಸವಣ್ಣನವರ ಬದುಕಿನಲ್ಲಿ ನಡೆದ ಅಪರೂಪದ ಘಟನೆಗಳಿವು…

  • ಬಿಜ್ಜಳನ ಭಂಡಾರಿ, ಪ್ರಧಾನ ಮಂತ್ರಿಯಾಗಿದ್ದರೂ ಬಸವಣ್ಣನವರು ಮಾತ್ರ ತುಂಬಾ ಸರಳ, ಸತ್ಯ ಶುದ್ಧವಾಗಿಯೇ ಬದುಕುತ್ತಿದ್ದರು. ಮಹಾಮನೆಯಲ್ಲಿ ಇರುವಾಗ ಅವರು ಕುಳಿತುಕೊಳ್ಳುವ ಬರೆಹದ ಮಂಚದ ಮುಂದೆ ಎರಡು ದೀಪಗಳು ಇರುತ್ತಿದ್ದವು. ರಾಜ್ಯದ ಮಂತ್ರಿಯಾಗಿ ಬರೆಯುವಾಗ ಮಹಾರಾಜನ ದೀಪ ಹಚ್ಚುತ್ತಿದ್ದರು, ಉಳಿದ ಸಮಯ ತಾವು ವಚನ ರಚನೆ ಮಾಡುವಾಗ ತಮ್ಮ ಮಹಾಮನೆಯ ದೀಪ ಬೆಳಗುತ್ತಿದ್ದರು. ಅಂದರೆ; ವೃತ್ತಿಧರ್ಮವನ್ನು ಶುದ್ಧತೆಯಿಂದ ಪರಿಪಾಲಿಸುತ್ತಿದ್ದರು.
  • ಮಹಾಮನೆಯೊಳಗೆ ಬಸವಣ್ಣನವರು ನೀಲಾಂಬಿಕೆಯವರೊAದಿಗೆ ಮಲಗಿದಾಗ ರಾತ್ರಿ ಕಳ್ಳ ಬಂದು ಅಮ್ಮನವರ ಬಂಗಾರದ ಆಭರಣಗಳನ್ನು ಕಿತ್ತುಕೊಳ್ಳುತ್ತಾನೆ. ಆಗ ಅಮ್ಮ ಕಳ್ಳ ಕಳ್ಳ ಎಂದು ಕೂಗುತ್ತಾರೆ. ತಕ್ಷಣ ಎಚ್ಚರಗೊಂಡ ಅಣ್ಣನವರು ಜಂಗಮವೇಷಧಾರಿಗಳನ್ನು ನೋಡಿ, ‘ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದರೆ ತೆಗೆದು ಕೊಡು ಆಭರಣ, ಎನ್ನಯ್ಯನ ಕೈ ನೋವಾದೀತು’ ಎನ್ನುತ್ತಾರೆ. ಕಳ್ಳನಲ್ಲಿಯೂ ಕೂಡಲಸಂಗನನ್ನು ಕಂಡ ಮಹಾ ವ್ಯಕ್ತಿತ್ವ ಅವರದು.
  • ಮಹಾಮನೆಯ ಮುಂದೆ ಕಟ್ಟಿರುವ ಆಕಳುಗಳನ್ನು ರಾತ್ರಿ ಕಳ್ಳರು ಕದ್ದು ಒಯ್ಯುತ್ತಾರೆ. ಕರುಗಳು ಮಾತ್ರ ಮನೆ ಮುಂದೆ ಒಂಟಿಯಾಗಿರುತ್ತವೆ. ಸೇವಕರನ್ನು ಕರೆದು ಹೇಳುತ್ತಾರೆ ‘ಆಕಳ ಕಳ್ಳರು ಕೊಂಡೊಯ್ದರೆನ್ನದಿರಿಂಭೋ…ಅಲ್ಲಿ ಉಂಬರೂ ಸಂಗ, ಇಲ್ಲಿ ಉಂಬರೂ ಸಂಗ, ಕೂಡಲಸಂಗಮದೇವ ಏಕೋಭಾವ’ ಅದಕ್ಕಾಗಿ ಕರುಗಳನ್ನು ಆಕಳುಗಳು ಇದ್ದ ಜಾಗಕ್ಕೆ ಕಳುಹಿಸಿ ಎನ್ನುತ್ತಾರೆ.
  • ಒಂದು ದಿನ ಅನುಭವ ಮಂಟಪಕ್ಕೆ ಬಸವಣ್ಣನವರು ಹೋಗಲು ಆಗಲಿಲ್ಲ. ಪ್ರಭುದೇವರು ಹಡಪದ ಅಪ್ಪಣ್ಣನವರ ಮೂಲಕ ಬರುವಂತೆ ಸಂದೇಶ ಕಳಿಸುತ್ತಾರೆ. ಆಗ ‘ಒಂದು ಅರಿವೆಯಲ್ಲಿ…ಇರುವೆ ಹಾಕಿ’ ಕಳಿಸುತ್ತಾರೆ. ಪ್ರಭುದೇವರು ದಿವ್ಯದೃಷ್ಟಿಯಿಂದ ಗಮನಿಸಿ ಸಂದೇಶ ನೀಡುತ್ತಾರೆ. ‘ನಾನು ನಿಮ್ಮ ಅರಿವಿನಲ್ಲಿ ಇರುವೆ’ ಎಂದು ತಿಳಿಸಿದ್ದಾರೆ ಅಣ್ಣನವರು ಎಂದು ಪ್ರಚುರಪಡಿಸಿದರಂತೆ.
  • ಶರಣು ಹೇಳಿದ ಹರಳಯ್ಯನವರಿಗೆ ‘ಶರಣು ಶರಣಾರ್ಥಿ’ ಹೇಳುತ್ತಾರೆ ಬಸವಣ್ಣನವರು. ಒಂದು ಶರಣು ಹೆಚ್ಚಾಯಿತೆಂದು ಹರಳಯ್ಯ ಕಲ್ಯಾಣಮ್ಮನವರು ತಮ್ಮ ತೊಡೆ ಚರ್ಮ ತೆಗೆದು ಪಾದರಕ್ಷೆ ಮಾಡಿ ತರುತ್ತಾರೆ. ಅವುಗಳನ್ನು ಕಂಡ ಬಸವಣ್ಣನವರು ‘ನಿಮ್ಮ ಶರಣರ ಚಮ್ಮಾವುಗೆಗೆ ಪೃಥ್ವಿ ಸಮಬಾರದು’ ಇವು ಕೂಡಲಸಂಗಮದೇವರು ಧರಿಸುವ ಪಾದರಕ್ಷೆ ಎಂದು ತಲೆಯ ಮೇಲೆ ಹೊತ್ತುಕೊಳ್ಳುತ್ತಾರೆ.
  • 12ನೇ ಶತಮಾನದವರಿಗೆ ಸಾಕ್ಷಿ ಆಣೆ ಪ್ರಮಾಣ ಮಾಡಲು ವೇದಗಳನ್ನು ಬಳಸುತ್ತಿದ್ದರು. ಆದರೆ ಬಸವಣ್ಣನವರು ‘ನಿಮ್ಮ ಪಾದವೇ ಸಾಕ್ಷಿ, ಎನ್ನ ಮನವೇ ಸಾಕ್ಷಿ’ ಎಂದು ಸಾರಿದರು.
  • ಕಾಯಕ-ದಾಸೋಹ-ಸಮಾನತೆ-ಅರಿವು-ಆಚಾರ ಎಂಬ ಪಂಚಸೂತ್ರ ಗಳನ್ನು ಮೊಟ್ಟಮೊದಲು ಲೋಕದ ಜನತೆಗೆ ನೀಡಿದ ಮಹಾಮಾನವತಾವಾದಿ ಬಸವಣ್ಣನವರು.
  • ಒಮ್ಮೆ ಅನುಭವ ಮಂಟಪದಲ್ಲಿ ಪ್ರಭುದೇವರು ‘ಬಸವ ಬಾರೈ ಮರ್ತ್ಯಲೋಕದೊಳಗೆ ಮತ್ತೆ ಭಕ್ತರುಂಟೆ? ಎಂದಾಗ, ‘ಮತ್ತಾರು ಇಲ್ಲ ನಾನೊಬ್ಬನೆ ಭಕ್ತ’ ಎನ್ನುತ್ತಾರೆ. ಇವರ ಮಾತು ಕೇಳಿ ಅನುಭವ ಮಂಟಪವೇ ಆಶ್ಚರ್ಯ ಪಡುತ್ತದೆ.ಮುಂದುವರಿದು ಬಸವಣ್ಣನವರು ಹೇಳುತ್ತಾರೆ. ಮತ್ತಾರು ಇಲ್ಲ ನಾನೊಬ್ಬನೇ ಭಕ್ತ, ‘ಉಳಿದವರೆಲ್ಲ ಜಂಗಮಲಿಂಗ ಸ್ವರೂಪಿಗಳೆಂದು’ ಹೇಳಿದಾಗ ಶರಣರೆಲ್ಲ ಬಸವಣ್ಣನವರ ಈ ಕಿಂಕರತ್ವಕ್ಕೆ ಮಾರುಹೋಗುತ್ತಾರೆ.
  • ಕಂಡ ಭಕ್ತರಿಗೆ ಕೈಮುಗಿವಾತನೇ ಭಕ್ತ, ಮೃದು ವಚನವೇ ಸಕಲ ಜಪಂಗಳಯ್ಯ, ಮೃದು ವಚನವೇ ಸಕಲ ತಪಂಗಳಯ್ಯ ಸದುವಿನಯವೇ ಸದಾಶಿವನ ಒಲುಮೆ ಎಂದು ಹೇಳಿ ಮನುಷ್ಯನಿಗೆ ಮೌಲ್ಯಗಳ ಅರಿವು ಮೂಡಿಸುತ್ತಾರೆ.

ಕ್ರಾಂತಿಕಾರಿ, ಸಮಾನತೆಯ ಸೇನಾನಿಯಾಗಿದ್ದ ಬಸವಣ್ಣನವರ ವಿಚಾರ ಧಾರೆಗಳು ಸಂಪ್ರದಾಯವಾದಿಗಳನ್ನು ಕೆರಳಿಸಿದವು. ಮಧುವರಸ ಮತ್ತು ಹರಳಯ್ಯ ನವರು ಬಂಧುಗಳಾಗಲು ಪ್ರೇರಣೆ ನೀಡಿದರು. ಜಾತಿ ಸಂಕರ ಕಿತ್ತೊಗೆಯಲು ಇರುವ ಮಾರ್ಗವೆಂದರೆ ಪರಸ್ಪರ ವಿವಾಹ ಕರ‍್ಯ ನೆರವೇರಬೇಕು ಎನ್ನುವ ಜ್ಯೋತಿತತ್ವ ಅವರದ್ದಾಗಿತ್ತು. ಬ್ರಾಹ್ಮಣ್ಯದ ಮಧುವರಸನ ಮಗಳು ಲಾವಣ್ಯ, ಹರಳಯ್ಯನವರ ಮಗ ಶೀಲವಂತ ಇಬ್ಬರಿಗೂ ಕಲ್ಯಾಣ (ವಿವಾಹ) ನೆರವೇರಿಸಿದರು.

ರಾಜ್ಯವನ್ನು ದುರುಪಯೋಗ ಮಾಡಿ ಧರ್ಮ ಹಾಳು ಮಾಡುತ್ತಿದ್ದಾರೆ ಬಸವಣ್ಣನವರು ಎಂದು ಬಿಜ್ಜಳ ಮಹಾರಾಜನಿಗೆ ದೂರು ನೀಡಿದರು. ಕೊಂಡಿ ಮಂಚಣ್ಣಾದಿಗಳು ಬಹುದೊಡ್ಡ ರಾಜಕೀಯ ಕುತಂತ್ರ ಸಂಚು ರೂಪಿಸಿದರು.ಇದನ್ನು ತಲೆಗೆ ತುಂಬಿಕೊಂಡ ರಾಜ ಬಿಜ್ಜಳ ಹರಳಯ್ಯ-ಮಧುವರಸರಿಗೆ ಮರಣದಂಡನೆ ವಿಧಿಸಿದನು. ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿದನು. ಈ ವಿಷಯ ಕೇಳಿ ಶರಣರು ಗಣಾಚಾರಿಗಳಾದರು. ಕಲ್ಯಾಣ ನಾಡು ಅಲ್ಲೋಲ ಕಲ್ಲೋಲವಾಯಿತು. ಒಂದೆಡೆ ರಾಜ ಬಿಜ್ಜಳನ ಹತ್ಯೆಯಾಯಿತು. ಶರಣರಿಗೆ ಎಳೆಹೂಟೆ ಶಿಕ್ಷೆಯಾಯಿತು. ಕಲ್ಯಾಣಕ್ರಾಂತಿಯಾಯಿತು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಧಾರ್ಮಿಕ ಮತಾಂಧತೆಯ ಅಟ್ಟಹಾಸ ಅರಿತ ಶರಣರು ಕಲ್ಯಾಣದಿಂದ ಹತ್ತು ಹಲವು ಕಡೆ ಚೆಲ್ಲುವರಿದರು. ಬಸವಣ್ಣನವರು ಕೂಡಲ ಸಂಗಮದೆಡೆಗೆ, ಪ್ರಭುದೇವರು ಶ್ರೀಶೈಲಕ್ಕೆ, ಚೆನ್ನಬಸವಣ್ಣನವರು ಉಳವಿಗೆ ವಚನ ತಾಡೋಲೆಗಳನ್ನು ಬೆನ್ನಿಗೆ ಕಟ್ಟಿಕೊಂಡು ‘ವಚನ ಸಂಗ್ರಹ’ ಕಾಯಕದೊಳಗೆ ತೊಡಗಿದರು. ನೂರೊಂದು ಕ್ಷೇತ್ರಗಳಿಗೆ ಶರಣರು ಪಾದ ಬೆಳೆಸಿದರು. ಇತ್ತ ಏಕಾಂಗಿಯಾಗಿ ಗುರು ಬಸವಣ್ಣನವರು ತಮ್ಮ ಲೋಕಸೇವಾಕಾರ್ಯಗಳನ್ನು ಪೂರೈಸಿ ಶ್ರಾವಣ ಶುದ್ಧ ಪಂಚಮಿ ದಿನ ಕೂಡಲಸಂಗಮದೊಳಗೆ ಲಿಂಗಯ್ಯನೊಂದಿಗೆ ಬೆರೆತು ಮಹಾಲಿಂಗದೊಳಗೆ ಬಯಲಾದರು. ಸಮರಸಗೊಂಡರು.

ಇದನ್ನೂ ಓದಿ : ತಾತಯ್ಯ ತತ್ವಾಮೃತಂ : ಬಸವಣ್ಣನಂತೆ ತಾತಯ್ಯ ಕೂಡ ದೇಹವೇ ದೇಗುಲ ಎಂದಿದ್ದಾರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Vastu Tips: ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ. ಮನೆಗೆ ಕಿಟಕಿ ಬಾಗಿಲು ಅಳವಡಿಸುವುದಕ್ಕೂ ವಾಸ್ತು ಪಾಲನೆ ಮಾಡುವುದು ಮುಖ್ಯ. ಇದರಿಂದ ಮನೆಯೊಳಗೆ ಧನಾತ್ಮಕ ಶಕ್ತಿ ವೃದ್ಧಿಯಾಗಿಸಬಹುದು.

VISTARANEWS.COM


on

By

Vastu Tips
Koo

ಮನೆಯೊಳಗೆ (home) ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಧನಾತ್ಮಕ ಶಕ್ತಿ (Positive energy) ವೃದ್ಧಿಸಿಕೊಳ್ಳುವುದು ಬಹು ಮುಖ್ಯ. ಇದಕ್ಕಾಗಿ ವಾಸ್ತು ಅಂಶಗಳನ್ನು ನಾವು ಪರಿಗಣಿಸಿಬೇಕು. ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ.

ಮನೆಯಾದ್ಯಂತ ಧನಾತ್ಮಕ ಶಕ್ತಿಯನ್ನು ವೃದಿಸುವುದು ಸುಲಭವಲ್ಲ. ವಾಸ್ತು ಪ್ರಕಾರ ಮನೆಗೆ ಬಾಗಿಲು (door) ಮತ್ತು ಕಿಟಕಿಗಳನ್ನು (window) ಅಳವಡಿಸಿದರೆ ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು.

ವಾಸ್ತು ಪ್ರಕಾರ ಬಾಗಿಲು ಮತ್ತು ಕಿಟಕಿಗಳನ್ನು ಅಳವಡಿಸಿದರೆ ಮುಚ್ಚಿರುವ ಜಾಗದಲ್ಲೂ ಧನಾತ್ಮಕ ಶಕ್ತಿ ಪುನರುತ್ಪಾದನೆಯಾಗುತ್ತದೆ. ಈ ಬಾಗಿಲು ಮತ್ತು ಕಿಟಕಿಗಳ ಮೂಲಕ ಶಕ್ತಿಗಳು ಮನೆಯ ಒಳ ಮತ್ತು ಹೊರಗೆ ಹರಿಯುತ್ತವೆ. ಆರೋಗ್ಯಕರ ಮತ್ತು ಶ್ರೀಮಂತ ಜೀವನಶೈಲಿಯ ವೃದ್ಧಿಗಾಗಿ ಇವುಗಳನ್ನು ಇಡಲು ನಿರ್ದಿಷ್ಟ ಜಾಗಗಳಿವೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Vastu Tips: ನಿಮ್ಮ ಮನೆಯಲ್ಲಿ ಸಂತೋಷ ವೃದ್ಧಿಸಬೇಕೆ? ಈ ಸಲಹೆಗಳನ್ನು ಪಾಲಿಸಿ

ಬಾಗಿಲು, ಕಿಟಕಿಗಳಿಗೆ ವಾಸ್ತು ಪಾಲನೆ ಯಾಕೆ?

ಮನೆ ನಿರ್ಮಿಸಲು ಉತ್ಸುಕರಾಗಿರುವ ಮನೆ ಮಾಲೀಕರು ಹಲವಾರು ಕಾರಣಗಳಿಗಾಗಿ ಬಾಗಿಲು ಮತ್ತು ಕಿಟಕಿಗಳನ್ನು ಇಡುವ ಸ್ಥಾನ, ದಿಕ್ಕು ಮತ್ತು ಬಳಸುವ ವಸ್ತುಗಳ ಬಗ್ಗೆ ವಿಶೇಷ ಗಮನವನ್ನು ನೀಡಬೇಕು. ಅವು ಗಾಳಿ ಮತ್ತು ಸೂರ್ಯನ ಬೆಳಕಿಗೆ ಪೂರಕವಾಗಿದೆಯೇ ಎಂಬುದನ್ನು ನೋಡಿಕೊಳ್ಳಬೇಕು. ಇದರಿಂದಲೇ ಮನೆಯೊಳಗೇ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸುವುದನ್ನು ತಡೆಯುತ್ತದೆ.
ಹೊಸ ಮನೆಯನ್ನು ನಿರ್ಮಿಸುತ್ತಿದ್ದರೆ ಅಥವಾ ಹಳೆ ಮನೆಯನ್ನು ನವೀಕರಿಸುತ್ತಿದ್ದರೆ ಬಾಗಿಲು ಮತ್ತು ಕಿಟಕಿಗಳ ವಾಸ್ತು ಬಗ್ಗೆ ತಿಳಿದುಕೊಳ್ಳಿ.


ಸರಿಯಾದ ಮುಖ್ಯ ಬಾಗಿಲು

ಮನೆಯ ಮುಖ್ಯ ಬಾಗಿಲು ದೊಡ್ಡ ಬಾಗಿಲಾಗಿರಬೇಕು. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಒಳಗೆ ತೆರೆದುಕೊಳ್ಳುವ ಎರಡು ಕವಾಟದ ಬಾಗಿಲು ಮಂಗಳಕರ. ಪ್ರಕಾಶಮಾನವಾದ ದೀಪಗಳು ಮತ್ತು ಉತ್ತಮ ಬಣ್ಣಗಳೊಂದಿಗೆ ಮುಖ್ಯ ಬಾಗಿಲಿನ ಮೇಲೆ ಸುಂದರವಾದ ವಿನ್ಯಾಸಗಳನ್ನು ಅಳವಡಿಸಿಕೊಳ್ಳಿ. ನೀರಸವಾದ ಮುಖ್ಯ ಬಾಗಿಲು ಮನೆಗೆ ಶೋಭೆಯಲ್ಲ.

ಬಾಗಿಲುಗಳ ಸರಿಯಾದ ಸಂಖ್ಯೆ

ಸಕಾರಾತ್ಮಕತೆಯು ಸಹ ಸಮ ಸಂಖ್ಯೆಗಳಲ್ಲಿ ಬರುತ್ತದೆ. ಮನೆಯಲ್ಲಿ ಬಾಗಿಲು ಮತ್ತು ಕಿಟಕಿಗಳ ಸಂಖ್ಯೆ ಯಾವಾಗಲೂ ಸಮವಾಗಿರಬೇಕು. ಎರಡು, ನಾಲ್ಕು, ಆರು ಹೀಗೆ ಎರಡರ ಗುಣಕಗಳಲ್ಲಿರಬೇಕು ಎನ್ನುತ್ತಾರೆ ವಾಸ್ತು ತಜ್ಞರು.


ಬಾಗಿಲಿನ ಗಾತ್ರದಲ್ಲಿ ಸ್ಥಿರತೆ

ಮುಂಭಾಗದ ಬಾಗಿಲನ್ನು ಹೊರತುಪಡಿಸಿ ಮನೆಯಲ್ಲಿ ಎಲ್ಲಾ ಆಂತರಿಕ ಬಾಗಿಲುಗಳ ಗಾತ್ರದಲ್ಲಿ ಒಂದೇ ಆಗಿರಬೇಕು. ವಿಭಿನ್ನ ಬಾಗಿಲು ಗಾತ್ರಗಳು ಮನೆಗೆ ಒಳ್ಳೆಯದಲ್ಲ. ಎದ್ದು ಕಾಣಬೇಕಾದ ಏಕೈಕ ಬಾಗಿಲು ಮುಖ್ಯ ಬಾಗಿಲು. ಮನೆಯೊಳಗೆ ಕೆಲವು ಬಾಗಿಲುಗಳನ್ನು ದೊಡ್ಡದಾಗಿ ಮಾಡಲು ಬಯಸಿದರೆ ಅವುಗಳನ್ನು ಉತ್ತರ ಅಥವಾ ಪೂರ್ವಕ್ಕೆ ಬದಲಾಗಿ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇರಿಸಬೇಕು.

ದೋಷರಹಿತವಾಗಿರಲಿ ಮನೆ ಬಾಗಿಲು

ಮನೆಯಲ್ಲಿ ಬಾಗಿಲುಗಳ ಕಾರ್ಯವಿಧಾನದ ವಿಷಯಕ್ಕೆ ಬಂದರೆ ಬಾಗಿಲು ತೆರೆಯುವಾಗ ಅಥವಾ ಮುಚ್ಚುವಾಗ ಕೀಲು ಬಾಗಿಲುಗಳನ್ನು ಹಾಕುವುದು ಉತ್ತಮ. ಮನೆಯಲ್ಲಿ ಬಾಗಿಲುಗಳು ಮತ್ತು ಕಿಟಕಿಗಳೊಂದಿಗೆ ಹೆಚ್ಚು ಜಗಳಗಳು ಇರುತ್ತದೆ. ಸ್ಮೂತ್ ಕೀಲುಗಳು ಮನೆಯಲ್ಲಿ ಉತ್ತಮ ಸಂಬಂಧಗಳನ್ನು ಪ್ರತಿಬಿಂಬಿಸುತ್ತವೆ. ಸ್ವಯಂ-ಮುಚ್ಚುವ ಬಾಗಿಲುಗಳನ್ನು ತಪ್ಪಿಸುವುದು ಒಳ್ಳೆಯದು.

ಕಿಟಕಿಗಳು

ಎಲ್ಲಾ ಕಿಟಕಿಗಳು ಸರಿಯಾದ ಆಕಾರ ಮತ್ತು ಸಮವಾದ ಎತ್ತರವನ್ನು ಹೊಂದಿರಬೇಕು. ಕಿಟಕಿಗಳು ತಾಜಾ ಗಾಳಿ ಮತ್ತು ಸೂರ್ಯನ ಬೆಳಕಿನ ಮೂಲವಾಗಿರುತ್ತದೆ. ಅವುಗಳಿಗೆ ಯಾವಾಗಲೂ ಎದುರು ಬಾಗಿಲುಗಳನ್ನು ಇಡಬೇಕು. ಮನೆಯಲ್ಲಿ ಗರಿಷ್ಠ ವಾತಾಯನವಿದೆ ಎಂದು ಇದು ಖಚಿತಪಡಿಸುತ್ತದೆ. ಮನೆಯಲ್ಲಿರುವ ಕಿಟಕಿಗಳ ಸಂಖ್ಯೆಯೂ ಸಮ ಸಂಖ್ಯೆಯಲ್ಲಿರಬೇಕು. ಕಿಟಕಿಗಳಿಗೆ ಸಾಮಾನ್ಯವಾಗಿ ನೈಋತ್ಯ ದಿಕ್ಕನ್ನು ತಪ್ಪಿಸಿ. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಕಿಟಕಿಗಳು ದೊಡ್ಡದಾಗಿದ್ದರೆ ಉತ್ತಮ. ಉತ್ತರವು ಸಮೃದ್ಧಿಯನ್ನು ತರುತ್ತದೆ ಆದರೆ ಪೂರ್ವವು ಪ್ರಗತಿ ಮತ್ತು ಆರೋಗ್ಯವನ್ನು ತರುತ್ತದೆ.

ಬಾಗಿಲಿಗೆ ಬಳಸುವ ವಸ್ತುಗಳು

ಬಾಗಿಲುಗಳಿಗೆ ವಸ್ತುಗಳನ್ನು ಎಚ್ಚರಿಕೆಯಿಂದ ಆರಿಸುವುದು ಮುಖ್ಯ. ಏಕೆಂದರೆ ಇದು ಎಷ್ಟು ಮಂಗಳಕರ ಎಂಬುದನ್ನು ನಿರ್ಧರಿಸುತ್ತದೆ. ಬಾಗಿಲುಗಳಿಗೆ ವಸ್ತುಗಳನ್ನು ಆಯ್ಕೆಮಾಡುವಾಗ ಮರದ ಬಾಗಿಲು ಯಾವಾಗಲೂ ಅತ್ಯುತ್ತಮ ಆಯ್ಕೆಯಾಗಿದೆ. ಇದಲ್ಲದೆ ಉತ್ತರ ದಿಕ್ಕಿನ ಬಾಗಿಲುಗಳಿಗೆ ಲೋಹ ಅಥವಾ ಕಬ್ಬಿಣದಂತಹ ಬೆಳ್ಳಿಯನ್ನು ಹೊಂದಿರುವ ಬಾಗಿಲುಗಳನ್ನು ಆಯ್ಕೆ ಮಾಡಿಕೊಳ್ಳಿ. ದಕ್ಷಿಣಕ್ಕೆ ಮರದ ಮತ್ತು ಲೋಹದ ಅಂಶಗಳನ್ನು ಹೊಂದಿರುವ ಬಾಗಿಲುಗಳು ಸೂಕ್ತವಾಗಿದೆ. ಪೂರ್ವ ದಿಕ್ಕಿಗೆ ಮರದಿಂದ ಮಾಡಿದ ಬಾಗಿಲು ಉತ್ತಮ. ಪಶ್ಚಿಮಕ್ಕೆ ಕಬ್ಬಿಣದಂತಹ ಲೋಹದಿಂದ ಪ್ರಧಾನವಾಗಿ ಮಾಡಿದ ಬಾಗಿಲನ್ನು ಆಯ್ಕೆ ಮಾಡಿಕೊಳ್ಳಿ.

ಬಾಗಿಲುಗಳು ಮತ್ತು ಕಿಟಕಿಗಳ ಬಣ್ಣ

ಗಾಢವಾದ ಬಣ್ಣಗಳು ಮನೆಯೊಳಗೆ ಹರ್ಷಚಿತ್ತ ಮತ್ತು ಶಕ್ತಿಯುತ ಮನಸ್ಥಿತಿಗೆ ಕಾರಣವಾಗುತ್ತವೆ. ಆದ್ದರಿಂದ ಮುಂಭಾಗದ ಬಾಗಿಲುಗಳಿಗೆ ಹಳದಿ ಮತ್ತು ನೀಲಿ ಬಣ್ಣಗಳನ್ನು ಆರಿಸಿ.

ಅಲಂಕಾರಿಕ ವಸ್ತುಗಳು

ಬಾಗಿಲಿನ ಮುಂದೆ ಹನುಮಾನ್ ಅಥವಾ ಗಣೇಶನ ವಿಗ್ರಹವನ್ನು ಇರಿಸುವುದರಿಂದ ದುಷ್ಟ ಶಕ್ತಿಗಳನ್ನು ದೂರವಿರಿಸಬಹುದು ಎಂದು ನಂಬಲಾಗಿದೆ. ಹಿತ್ತಾಳೆಯ ಬಟ್ಟಲಿನಲ್ಲಿ ನೀರನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅದೃಷ್ಟ ಮತ್ತು ಸಂಪತ್ತನ್ನು ಆಕರ್ಷಿಸಲು ಬುದ್ಧನ ಪ್ರತಿಮೆ ಅಥವಾ ಗಾಳಿಯ ಚೈಮ್ ಅನ್ನು ಪ್ರವೇಶದ್ವಾರದ ಬಳಿ ಇರಿಸಬಹುದು.


ವಾಸ್ತು ಪರಿಣಾಮ

ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಬಾಗಿಲು, ಕಿಟಕಿಗಳು ತಾಜಾ ಗಾಳಿ ಮತ್ತು ಬೆಳಿಗ್ಗೆ ಒಳ್ಳೆಯದು. ದಿನದ ಆರಂಭದಲ್ಲಿ ಇದು ಮನೆಯ ಶುದ್ಧೀಕರಣ ಪ್ರಕ್ರಿಯೆಯನ್ನು ನಡೆಸುತ್ತದೆ.

ದಕ್ಷಿಣ ದಿಕ್ಕು ಎಲ್ಲಾ ಉತ್ತಮ ಶಕ್ತಿಗಳ ಕೇಂದ್ರ ಎಂದು ಪರಿಗಣಿಸಲಾಗಿದೆ. ದಕ್ಷಿಣಕ್ಕೆ ಎದುರಾಗಿ ನಿಖರವಾಗಿ ಮತ್ತು ಮಧ್ಯದಲ್ಲಿ ಬಾಗಿಲು, ಕಿಟಕಿಗಳನ್ನು ಇರಿಸಿದರೆ ಮನೆಯೊಳಗೆ ಉತ್ತಮ ಶಕ್ತಿ ಸಂಚಾರವಾಗುತ್ತದೆ.

ಪೂರ್ವ ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಇಲ್ಲಿ ಪ್ರವೇಶದ್ವಾರಗಳು ಸಮೃದ್ಧಿ, ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುತ್ತದೆ.

ಪಶ್ಚಿಮ ದಿಕ್ಕು ಸೂರ್ಯಾಸ್ತಮಾನವನ್ನು ಆನಂದಿಸುವ ಮನೆಮಾಲೀಕರಿಗೆ ಸೂಕ್ತವಾಗಿದೆ. ಈ ದಿಕ್ಕು ಸಂಪತ್ತು ಮತ್ತು ಸಮೃದ್ಧಿಯನ್ನು ಉತ್ತೇಜಿಸುತ್ತದೆ.

ಏನು ಮಾಡಬೇಕು?

ಮನೆಯ ಮುಖ್ಯ ಬಾಗಿಲು ಹೊಸ್ತಿಲನ್ನು ಹೊಂದಿರಬೇಕು. ಮನೆಗೆ ಸಂಪತ್ತನ್ನು ಆಕರ್ಷಿಸಲು ನಿರ್ದಿಷ್ಟ ಸಂಖ್ಯೆಯಲ್ಲಿ ಹೊಸ್ತಿಲಿನ ಎದುರು ಮೆಟ್ಟಿಲುಗಳನ್ನು ಇರಿಸಬೇಕು.

ಮುಖ್ಯ ಬಾಗಿಲು ಯಾವಾಗಲೂ ನೆಲದ ಮಟ್ಟಕ್ಕಿಂತ ಮೇಲಿರಬೇಕು. ಮಲಗುವ ಕೋಣೆಯ ಬಾಗಿಲುಗಳು ಮುಖ್ಯ ಬಾಗಿಲಿಗಿಂತ ಚಿಕ್ಕದಾಗಿರಬೇಕು. ಮುಖ್ಯ ಬಾಗಿಲನ್ನು ಮನೆಯಲ್ಲಿ ದೊಡ್ಡದಾಗಿಸಬೇಕು. ಎಲ್ಲಾ ಬಾಗಿಲುಗಳು ಪ್ರದಕ್ಷಿಣಾಕಾರವಾಗಿ ತೆರೆದಿರುವುದನ್ನು ಖಚಿತಪಡಿಸಿಕೊಳ್ಳಿ.


ಏನು ಮಾಡಬಾರದು?

ಮುಖ್ಯ ಬಾಗಿಲು ಮತ್ತು ನಿರ್ಗಮನ ಬಾಗಿಲು ಎದುರಾಗಿ ಇರಬಾರದು. ಮುಖ್ಯ ಬಾಗಿಲುಗಳು ಮನೆಯ ಆಯಾವನ್ನು ಬಿಟ್ಟು ಹೊರಗೆ ಇರಬಾರದು. ಮುಖ್ಯ ಬಾಗಿಲನ್ನು ಭೂಗತ ಟ್ಯಾಂಕ್ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳ ಕೆಳಗೆ ಇಡುವುದನ್ನು ತಪ್ಪಿಸಿ.

ಮುಖ್ಯ ಬಾಗಿಲಿನ ಮುಂದೆ ಶೂ ಅಥವಾ ಕಸವನ್ನು ಇಡಬೇಡಿ. ಮುಖ್ಯ ಬಾಗಿಲಿನ ಮುಂಭಾಗದಲ್ಲಿ ಕಂಬ, ಮರ, ತಂತಿ ಸೇರಿದಂತೆ ಅಡೆತಡೆಗಳನ್ನು ತಪ್ಪಿಸಿ.

ಬಾಗಿಲು ಅಥವಾ ನಿರ್ಗಮನ ಬಾಗಿಲಿನ ಹೊರ ಭಾಗದಲ್ಲಿ ದೇವರ ಚಿತ್ರಗಳನ್ನು ಪ್ರದರ್ಶಿಸಬೇಡಿ. ಬಾಗಿಲಿನ ವಾಸ್ತು ಪ್ರಕಾರ ಇದು ದುಃಖಕ್ಕೆ ಕಾರಣವಾಗಬಹುದು.

ಮನೆಯಲ್ಲಿ ಹೆಚ್ಚಿನ ಮಹಡಿಗಳಿದ್ದರೆ ಪ್ರತಿ ಮಹಡಿಯಲ್ಲಿ ಒಂದರ ಮೇಲೊಂದು ಬಾಗಿಲು ಹಾಕದಂತೆ ನೋಡಿಕೊಳ್ಳಿ.

Continue Reading

ಬೆಂಗಳೂರು

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ (Bengaluru Karaga) ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ

VISTARANEWS.COM


on

Bengaluru Karaga
Koo

ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Continue Reading
Advertisement
Swiggy fined
ಬೆಂಗಳೂರು5 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ5 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ5 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ6 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್6 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ6 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ7 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ7 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202412 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ17 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ24 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ3 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌