Bheemana Amavasya 2023 Know the Rituals and Story of Bheema Amavasya in kannadaBheemana Amavasya 2023 : ಭೀಮನ ಅಮಾವಾಸ್ಯೆ ವ್ರತಾಚರಣೆ ಏಕೆ ಮತ್ತು ಹೇಗೆ? - Vistara News

ಧಾರ್ಮಿಕ

Bheemana Amavasya 2023 : ಭೀಮನ ಅಮಾವಾಸ್ಯೆ ವ್ರತಾಚರಣೆ ಏಕೆ ಮತ್ತು ಹೇಗೆ?

ಆಷಾಢ ಕೃಷ್ಣ ಪಕ್ಷದ ಅಮಾವಾಸ್ಯೆ (ಜು.17) ಭೀಮೇಶ್ವರ ವ್ರತದ ದಿನ (Bheemana Amavasya 2023). ಜ್ಯೋತಿರ್ಭೀಮೇಶ್ವರ ವ್ರತದ ಹಿನ್ನೆಲೆ ಏನು? ವ್ರತಾಚರಣೆ ಹೇಗೆ? ಪೂಜಿಸುವಾಗ ಏನೆಂದು ಪ್ರಾರ್ಥನೆ ಮಾಡಬೇಕೆಂಬ ಮಾಹಿತಿ ಈ ಲೇಖನದಲ್ಲಿದೆ.

VISTARANEWS.COM


on

bhima amavasya vrat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Bheemana Amavasya

ಮೇಧಾ ಪ್ರಹ್ಲಾದಾಚಾರ್ಯ ಜೋಶಿ
ವ್ರತ ಎಂದರೆ ನಿಷ್ಠೆ ಎಂದು ಅರ್ಥ. ದೇವತೆಗಳಲ್ಲಿ ನಾವು ತೋರಿಸುವ ಭಕ್ತಿ ಗೌರವಗಳು ವ್ರತದ ಮೂಲಕ ಪೂಜಾರೂಪದಲ್ಲಿ ಆಚರಿಸಲ್ಪಡುತ್ತವೆ. ಪ್ರತಿ ವ್ರತದಲ್ಲಿ ಆಚರಣೆಗೆ ಪೂರ್ವಸಿದ್ಧತೆ ಆವಶ್ಯಕವಾಗಿರುತ್ತದೆ. ಕಾಲಕ್ಕೆ ತಕ್ಕಂತೆ ಪೂಜಾದ್ರವ್ಯಗಳನ್ನು ಬಳಸಿಕೊಂಡು ಕೆಲವು ವಿಶಿಷ್ಟ ನಿಯಮಗಳನ್ನು ಪಾಲಿಸಿ ವ್ರತಗಳನ್ನು ಮಾಡಬೇಕಾಗುತ್ತದೆ.

ನಮ್ಮ ಸನಾತನ ಹಿಂದೂಸಂಪ್ರದಾಯದಲ್ಲಿ ದೇವರು-ದೇವತೆಗಳ ಪೂಜೆ ಅಷ್ಟೇ ಅಲ್ಲದೇ ಪವಿತ್ರವಾದ ಕೆಲವು ಸಂಬಂಧಗಳನ್ನು ಪೂಜೆಮಾಡುವ ಮೂಲಕ ಆ ಸಂಬಂಧಗಳನ್ನು ಗೌರವಿಸುವ ಸಂಪ್ರದಾಯವು ಆಚರಣೆಯಲ್ಲಿದೆ. ಭಾರತೀಯ ಸಂಪ್ರದಾಯದಲ್ಲಿ ಪತಿಯನ್ನು ದೇವರೆಂದು ಭಾವಿಸಿ, ಪೂಜಿಸುವ ಸಂಪ್ರದಾಯಗಳು ಬಹಳ ಪುರಾತನ ಕಾಲದಿಂದಲೂ ಇದೆ. ಪತಿಯ ಆಯು, ಆರೋಗ್ಯವೃದ್ಧಿಯಾಗಬೇಕು, ಎಲ್ಲ ಕ್ಷೇತ್ರದಲ್ಲೂ ಯಶಸ್ಸು ಸಿಗಬೇಕೆಂದು ಪ್ರಾರ್ಥಿಸಿ ಅನೇಕ ವ್ರತಗಳನ್ನು ಮಾಡುವ ಸಂಪ್ರದಾಯ ಬಂದಿದೆ.

ವಟ ಸಾವಿತ್ರಿ ಪೂಜೆ, ಮಂಗಳಗೌರೀ ಪೂಜೆ, ಗೌರೀಹರ ಪೂಜೆ ಹಾಗೆಯೇ ಈ ಭೀಮನ ಅಮಾವಾಸ್ಯೆಯು ಒಂದು. ಸ್ತ್ರೀಯರಿಗೆ ಕುಂಕುಮವೇ ಅಮೂಲ್ಯವಾದ ಆಭರಣ. ಪತಿಯ ಸಕಲ ಆಪತ್ತುಗಳೆಲ್ಲ ಕಳೆದು ದೀರ್ಘಾಯುಷ್ಯವನ್ನು ಹೊಂದಲಿ ಎಂದು ಉಮಾ-ಮಹೇಶ್ವರರಲ್ಲಿ ಪ್ರಾರ್ಥಿಸಿ ವಿಧಾನ ಪೂರ್ವಕವಾಗಿ ಪೂಜಿಸುವುದೇ ಈ ಭೀಮನ ಅಮಾವಾಸ್ಯೆ. ಉದ್ದೇಶ್ಯ ಒಂದೇ ಆದರೂ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆ ಕಂಡುಬರುತ್ತದೆ. ಹಾಗೆಯೇ ಆಚರಣೆಯಲ್ಲಿಯೂ ವೈವಿಧ್ಯತೆಯನ್ನು ಕಾಣಬಹುದು.

ಉತ್ತರ ಕರ್ನಾಟಕದಲ್ಲಿ ದಿವಶೀ ಅಮಾವಾಸ್ಯೆ ಎಂದು, ದಕ್ಷಿಣಕನ್ನಡದಲ್ಲಿ ಆಟಿ ಅಮಾವಾಸ್ಯೆ ಎಂದು, ಉತ್ತರ ಕನ್ನಡದ ಕಡೆಗೆ ಕೊಡೆ ಅಮಾವಾಸ್ಯೆ ಎಂದು, ಮೈಸೂರು ಬೆಂಗಳೂರು ಪ್ರಾಂತ್ಯದಲ್ಲಿ ಭೀಮನ ಅಮಾವಾಸ್ಯೆ (Bheemana Amavasya) ಮತ್ತು ಪತಿ ಸಂಜೀವಿನೀ ವ್ರತ ಎಂದು ಹೀಗೆ ಅನೇಕ ಹೆಸರುಗಳಿಂದ ಈ ವ್ರತ ಪ್ರಸಿದ್ಧಿಪಡೆದಿದೆ.

ಈ ವ್ರತವನ್ನು ವಿವಾಹಿತರಷ್ಟೇ ಅಲ್ಲದೆ ಅವಿವಾಹಿತ ಕನ್ಯೆಯರೂ ಆಚರಿಸುವ ಪದ್ಧತಿಯುಂಟು. ವಿವಾಹಿತ ಹೆಣ್ಣುಮಗಳು ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರೆ, ಅವಿವಾಹಿತ ಕನ್ಯೆಯರು ಸದ್ಗುಣಿಯಾದ ಪತಿದೊರೆಯಲಿ ದಾಂಪತ್ಯಜೀವನ ಗೌರೀಹರರಂತೆ ಇರಲಿ ಎಂದು ಪ್ರಾರ್ಥಿಸುತ್ತಾರೆ.

ವ್ರತದ ಹಿನ್ನೆಲೆ ಏನು?

ಹಿಂದೊಮ್ಮೆ ಋಷಿಗಳೆಲ್ಲರು ಸೂತರನ್ನು ಕೇಳಿದರು. “ಸರ್ವಶಾಸ್ತ್ರಗಳನ್ನು ಬಲ್ಲ ಮಹಾನುಭಾರವರಾದ ಸೂತರೆ ನಾರಿಯ ದೀರ್ಘಸೌಮಂಗಲ್ಯಕ್ಕಾಗಿ ಯಾವ ವ್ರತವನ್ನು ಆಚರಿಸಬೇಕುʼʼ ಎಂದು. ಅದಕ್ಕೆ ಸೂತರು ಭೀಮನ ಅಮಾವಾಸ್ಯೆ ಎಂಬ ಒಂದು ಪವಿತ್ರವಾದ ವ್ರತವನ್ನು ಉಪದೇಶಿಸಿದರು. ಇದನ್ನು ಆಷಾಢ ಕೃಷ್ಣ ಅಮಾವಾಸ್ಯೆಯಂದು ಹೆಣ್ಣುಮಕ್ಕಳು ತಮ್ಮ ದೀರ್ಘಸೌಮಾಂಗಲ್ಯಕ್ಕಾಗಿ ಆಚರಿಸಬೇಕು. ಹಾಗೆಯೇ ಅದರ ಹಿನ್ನೆಲೆಯನ್ನು ವಿವರಿಸುತ್ತ ಸೂತರು ಕಥೆಯೊಂದನ್ನು ಹೇಳುತ್ತಾರೆ. ಈ ಕಥೆ ಹೀಗಿದೆ;

ಹಿಂದೆ ಸೌರಾಷ್ಟ್ರದೇಶದಲ್ಲಿ ವಜ್ರಬಾಹು ಎಂಬ ರಾಜನಿದ್ದ. ಪರಮ ಧಾರ್ಮಿಕನು, ಪ್ರಜಾಪಾಲನಾತತ್ಪರನೂ ಆದ ಆ ರಾಜನಿಗೆ ಸರ್ವಶಾಸ್ತ್ರಸಂಪನ್ನನು, ಶತ್ರುನಿಗ್ರಹನಿಸ್ಸೀಮನೂ ಮತ್ತು ಅತಿಸುಂದರನಾದ  ವಿಜಯಶೇಖರನೆಂಬ ಮಗನಿದ್ದನು. ವಿಜಯಶೇಖರನು ದುರ್ದೈವವಶಾತ್ ಅಕಾಲಮರಣವನ್ನು ಹೊಂದಿದನು. ದುಃಖದಿಂದ ಬಳಲಿದ ತಂದೆ-ತಾಯಿಗಳು ತಾರುಣ್ಯಕ್ಕೆ ಕಾಲಿಟ್ಟ ಮಗನ ವಿವಾಹವನ್ನೂ ನೋಡಲಿಲ್ಲ ಎಂದು ಪರಿತಪಿಸಿದರು. ಆಗ ಮಗನ ಮೃತದೇಹಕ್ಕೆ ವಿವಾಹ ಮಾಡೋಣ ಎಂದು ಯೋಚಿಸಿದರು. ಯಾರು ನಮ್ಮ ಮಗನ ಮೃತದೇಹದೊಂದಿಗೆ ವಿವಾಹವಾಗುತ್ತಾರೆ ಅವರಿಗೆ ಒಂದು ಲಕ್ಷಚಿನ್ನದ ನಾಣ್ಯಗಳನ್ನು ಕೊಡುವುದಾಗಿ ಪಟ್ಟಣದ ತುಂಬೆಲ್ಲ ಡಂಗುರ ಸಾರುತ್ತಾರೆ.

ಇದನ್ನು ಕೇಳಿದ ಮಾಧವ ಎಂಬಾತ ತನ್ನ ಹೆಂಡಿತಿ ಸುಶೀಲೆ ಎಂಬುವಳಿಗೆ ಈ ಎಲ್ಲ ವೃತ್ತಾಂತವನ್ನು ತಿಳಿಸುತ್ತಾನೆ. ಆ ದಂಪತಿಗಳಿಗೆ ಐದುಜನ ಹೆಣ್ಣು ಮಕ್ಕಳು ಮತ್ತು ಒಂಬತ್ತು ಜನ ಗಂಡುಮಕ್ಕಳು. ತುಂಬಾ ಬಡತನ. ದಾರಿದ್ರ್ಯದಿಂದ ವ್ಯಥೆಪಡುತ್ತಿರುವ ಆ ಮಾಧವ, ನಮ್ಮ ಒಬ್ಬ ಮಗಳನ್ನು ರಾಜನ ಮಗನಿಗೆ ವಿವಾಹಮಾಡೋಣವೇ ? ಅದರಿಂದ ಬಂದ ಧನದಿಂದ ಉಳಿದವರಾದರೂ ಸುಖದಿಂದ ಬಾಳಬಹುದಲ್ಲವೇ ಎಂದು ಹೆಂಡತಿಯನ್ನು ಕೇಳಿದ. ಅದಕ್ಕೆ ಅವಳು ಕುರೂಪಿಯಾಗಲಿ ಷಂಢನಾಗಲಿ ವೃದ್ಧನೇ ಆಗಲಿ ಆದರೆ ಬದುಕಿರುವವನಿಗೆ ಮಾತ್ರ ನಮ್ಮ ಮಗಳನ್ನು ಧಾರೆ ಎರೆಯೋಣ ಎನ್ನುತ್ತಾಳೆ.

ಆದರೆ ದಾರಿದ್ರ್ಯದಿಂದ ಬೇಸತ್ತ ಮಾಧವ ತನ್ನ ಮಗಳನ್ನು ಕರೆದುಕೊಂಡು ಹೋಗಿ ರಾಜನ ಮಗನ ಮೃತದೇಹದೊಂದಿಗೆ ವಿವಾಹಮಾಡಿಸುತ್ತಾನೆ. ರಾಜನು ಸಕಲ ಮರ್ಯಾದೆ ವೈಭವಗಳಿಂದ ಸೊಸೆಯನ್ನು ಪಲ್ಲಕ್ಕಿಯಲ್ಲಿ ಕರೆತಂದು ಕೊನೆಗೆ ಸ್ಮಶಾನದಲ್ಲಿ ಮಗನ ಮೃತದೇಹದೊಂದಿಗೆ ಬಿಟ್ಟು ಹೋಗುತ್ತಾನೆ. ಸ್ಮಶಾನದಲ್ಲಿ ಗೂಬೆಗಳ ಧ್ವನಿಬಿಟ್ಟರೆ ಇನ್ನೊಂದು ಶಬ್ದವಿಲ್ಲ. ಅಲ್ಲಿಯೇ ಪತಿಯನ್ನು ಬಿಟ್ಟು ಹೋದರೆ ಪತಿವ್ರತಾಧರ್ಮ ಕೆಡುವುದೆಂಬ ಧರ್ಮಸಂಕಟ. ಏನು ಮಾಡಲಿ ಎಂದು ದುಃಖದಿಂದ ಪರಿತಪಿಸುತ್ತ ಭಕ್ತಿಯಿಂದ ಪರಮಾತ್ಮನನ್ನು ಪ್ರಾರ್ಥಿಸುತ್ತಾಳೆ.

“ಹೇ ಅನಾಥ ರಕ್ಷಕನೇ, ಮಾರ್ಕಾಂಡೇಯರನ್ನು ಬದುಕಿಸಿದಂತೆ ನನ್ನ ಪತಿಯನ್ನು ಬದುಕಿಸಿಕೊಡುʼʼ ಎಂದು ಪರಿಪರಿಯಾಗಿ ದುಃಖದಿಂದ ಪ್ರಾರ್ಥಿಸುತ್ತಾಳೆ. ಮೇಲುಧ್ವನಿಯಿಂದ ಬಹಳವಾಗಿ ರೋದಿಸುತ್ತಾಳೆ. ಆಗ ಆಕಾಶಮಾರ್ಗದಲ್ಲಿ ಸಂಚರಿಸುತ್ತಿರುವ ಶಿವಪಾರ್ವತಿಯರಿಗೆ ಅವಳ ಆರ್ತನಾದವು ಕೇಳಿಸುತ್ತದೆ. ಯಾರದೀ ಆಕ್ರಂದನ ಎಂದು ಪಾರ್ವತಿಯು ನೋಡುತ್ತಾಳೆ. ಆ ಬಾಲಿಕೆಯ ಪ್ರಕಾಶಮಾನವಾದ ತೇಜಸ್ಸು ಶಿವಪಾರ್ವತಿಯರನ್ನು ಅವಳೆಡೆಗೆ ಬರುವಂತೆ ಮಾಡುತ್ತದೆ.

ತಕ್ಷಣವೇ ಆ ಸ್ಮಶಾನದಲ್ಲಿ ಶಿವಪಾರ್ವತಿಯರು ಅವಳಿಗೆ ಪ್ರತ್ಯಕ್ಷರಾಗುತ್ತಾರೆ. ಅವರನ್ನುಕಂಡ ಆ ಬಾಲಕಿ ಸಾಷ್ಟಾಂಗವೆರಗಿ ತನ್ನ ದೀನಪರಿಸ್ಥಿತಿಯನ್ನು ತೊಡಿಕೊಳ್ಳುತ್ತಾಳೆ. ತನ್ನ ಗಂಡನನ್ನು ಹೇಗಾದರೂ ಬದುಕಿಸಬೇಕೆಂದು ಪರಿಪರಿಯಾಗಿ ಪ್ರಾರ್ಥಿಸುತ್ತಾಳೆ. ಅದಕ್ಕೆ ಈಶ್ವರನು ಕೇಳು ಮಗಳೆ ಸ್ತ್ರೀಯರಿಗೆ ದೀರ್ಘಸೌಮಂಗಲ್ಯದ ವೃದ್ಧಿಗೆ ಸಕಲ ಮಂಗಳಕರವಾದ ಪುತ್ರ-ಪೌತ್ರಾಭಿವೃದ್ಧಿಗೆ ಕಾರಣವಾದ ಒಂದು ವ್ರತವಿದೆ. ಅದನ್ನು ಹೇಳುವೆ ಭಕ್ತಿಯಿಂದ ಆ ವ್ರತವನ್ನಾಚರಿಸು. ಇಂದು ಅಮಾವಾಸ್ಯೆ ಆದ್ದರಿಂದ ಇಂದೇ ಈ ವ್ರತವನ್ನು ಆಚರಿಸು ಎಂದನು.

bheemana amavasya vrata

ಶುದ್ಧ ಸ್ನಾನಾದಿಗಳನ್ನು ಮಾಡಿ ಪೂಜೆಯ ಸ್ಥಳವನ್ನು ಶೋಧಿಸಿ ಸರ್ವತೋಭದ್ರಮಂಡಲವನ್ನು ಬರೆದು ಅಕ್ಕೆಯ ರಾಶಿಯ ಮೇಲೆ ಮಣ್ಣಿನಿಂದ ಎರಡು ದೀಪಸ್ಥಂಭಗಳನ್ನು ಮಾಡಿ ಪಾರ್ವತಿಸಮೇತನಾದ ಜ್ಯೋತಿರ್ನಾಮಕನಾದ ನನ್ನನ್ನು ಪೂಜಿಸು. ಗೋದೀಹಿಟ್ಟಿನಿಂದ ಮಾಡಿದ ಪದಾರ್ಥವನ್ನು ನಿವೇದಿಸು. ಹೀಗೆ ಮಾಡಿದಲ್ಲಿ ಸಕಲ ಇಷ್ಟಾರ್ಥವನ್ನು ಹೊಂದುವೆ ಎಂದು ಶಿವ ನುಡಿದನು. ಅಂತೆಯೇ ಆ ಬಾಲೆ ಚಾಚೂತಪ್ಪದಂತೆ ಭಾಗೀರಥಿಯಲ್ಲಿ ಮಿಂದು ಭಕ್ತಿಯಿಂದ ಆ ವ್ರತವನ್ನು ಆಚರಿಸುತ್ತಾಳೆ. ಕೊನೆಯಲ್ಲಿ ಗೋಧೀಹಿಟ್ಟಿನಿಂದ ಮಾಡಿದ ಬೇಳೆ ಭಂಡಾರವನ್ನು ನಿವೇದಿಸುತ್ತಾಳೆ.

ಅಣ್ಣತಮ್ಮಂದಿರಿದ್ದರೆ ಆ ಭಂಡಾರವನ್ನು ಒಡೆದು ಕೊಡುತ್ತಿದ್ದರು ಎಂದು ದುಃಖಿಸಿದಾಗ ಸಾಕ್ಷಾತ್ ನಂದಿವಾಹನನಾದ ಶಿವನೇ ಅವಳಿಗೆ ಬೇಳೆ ಭಂಡಾರವನ್ನು ಒಡೆದು ಕೊಡುತ್ತಾನೆ. ಹೀಗೆ ಜ್ಯೋತಿಸ್ಥಂಭವನ್ನು ಪೂಜಿಸಿ ಗೌರೀಹರರ ಕೃಪೆಗೆ ಪಾತ್ರಳಾಗಿ ಮೃತನಾದ ತನ್ನ ಪತಿಯನ್ನು ಬದುಕಿಸಿಕೊಳ್ಳುತ್ತಾಳೆ. ನಂತರ ಶಿವನ ಅನುಗ್ರಹದಿಂದ ಅಲ್ಲಿಯೇ ಅವರಿಗೊಂದು ಪಟ್ಟಣವೂ ನಿರ್ಮಾಣವಾಗುತ್ತದೆ. ಸಕಲ ಐಶ್ವರ್ಯಗಳನ್ನು ಹೊಂದಿ ಅನೇಕವರ್ಷಗಳಕಾಲ ಸಂತೋಷದಿಂದ ಜೀವನ ಸಾಗಿಸುತ್ತಾರೆ. ಇದು ಭವಿಷ್ಯೋತ್ತರಪುರಾಣದಲ್ಲಿ ಬಂದ ದೀಪಸ್ತಂಭ ಗೌರೀ ವ್ರತ. ಇದೇ ಭೀಮನ ಅಮಾವಾಸ್ಯೆ ಎಂದು ಪ್ರಸಿದ್ಧಿಯನ್ನು ಪಡೆಯಿತು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ವ್ರತ ಆಚರಣೆ ಹೇಗೆ?

ಆಷಾಢ ಕೃಷ್ಣ ಅಮಾವಾಸ್ಯೆಯಂದು ಸ್ತ್ರೀಯರು ಶುದ್ಧವಾಗಿ ಎಣ್ಣೆಸ್ನಾನಾದಿಗಳನ್ನು ಮಾಡಿ, ಶುದ್ಧಬಟ್ಟೆಯನ್ನು ತೊಟ್ಟು ಎರಡು ದೀಪಸ್ತಂಭಗಳನ್ನು ಸ್ಥಾಪಿಸಬೇಕು. ಜೊತೆಗೆ ಉಮಾಮಹೇಶ್ವರರ ಚಿತ್ರವನ್ನು ಇಡಬೇಕು. ತುಪ್ಪ ಅಥವಾ ಎಳ್ಳೆಣ್ಣೆಯಿಂದ ದೀಪವನ್ನು ಪ್ರಜ್ವಾಲಿಸಬೇಕು. ಸರ್ವವಿಘ್ನಪರಿಹಾರಕನಾದ ಮಹಾಗಣಪತಿಯನ್ನು ಮೊದಲು ಪೂಜಿಸಬೇಕು. ದೀಪಸ್ತಂಭದಲ್ಲಿ ಶಿವಪಾರ್ವತಿಯರ ಧ್ಯಾನ ಆವಾಹನಾದಿಗಳನ್ನು ಮಾಡಿ ಷೋಡಶೋಪಚಾರ ಪೂಜೆಯನ್ನು ಮಾಡಬೇಕು.

ಒಂಬತ್ತು ಎಳೆಯ ದಾರವನ್ನು ಅರಿಶಿನ ಕುಂಕುಮದಿಂದ ಪೂಜಿಸಿ ಅದಕ್ಕೆ ಒಂಬತ್ತು ಗಂಟುಗಳನ್ನು ಹಾಕಬೇಕು. ಗೋದೀಹಿಟ್ಟಿನಿಂದ ಮಾಡಿದ ಕಡುಬು (ಹೂರಣ ತುಂಬಿದ ಕಡಬು) ನೈವೇದ್ಯ ತೋರಿಸಬೇಕು. ಮನೆಯ ಹೊಸ್ತಿಲ ಮೇಲೆ ಬೇಳೆಯ ಭಂಡಾರವನ್ನಿಟ್ಟು ಅಣ್ಣತಮ್ಮಂದಿರ ಮೊಳಕೈಯಿಂದ ಆ ಭಂಡಾರವನ್ನು ಒಡಿಸಿ ಅವರ ಕೈಯಿಂದಲೇ ಆಶೀರ್ವಾದರೂಪವಾಗಿ ಅದನ್ನು ಸ್ವೀಕರಿಸುವ ಸಂಪ್ರದಾಯವೂ ಇದೆ. ಪೂಜಿಸಿದ ದಾರವನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ನಂತರ ಗೌರಿಗೆ ಉಡಿಯನ್ನು ತುಂಬಿ ಹೂರಣದ ಆರತಿಯನ್ನು ಮಾಡಬೇಕು.

ವಿವಾಹಿತ ಸ್ತ್ರೀಯರು ತಮ್ಮ ಪತಿಯ ಪಾದತೋಳೆದು ತಿಲಕವಿಟ್ಟು ನಮಸ್ಕರಿಸಿ ದೀರ್ಘಸೌಮಂಗಲ್ಯವನ್ನು ಪ್ರಾರ್ಥಿಸಿ ಆರತಿಯನ್ನು ಮಾಡಬೇಕು. ನಂತರ ಎಲ್ಲ ಗುರುಹಿರಿಯರಿಗೆ ನಮಸ್ಕರಿಸಿ ಎಲ್ಲರ ಆಶೀರ್ವಾದವನ್ನು ಪಡೆಯಬೇಕು. ಸಾಯಂಕಾಲದ ಸಮಯದಲ್ಲಿ ಮನೆಗೆ ಮುತ್ತೈದೆಯರನ್ನು ಕರೆದು ಅರಶಿನ ಕುಂಕುಮ ಬಳೆ ಕುಪ್ಪುಸದ ಖಣ ಎಲೆ ಅಡಿಕೆ ದಕ್ಷಿಣೆ ಇತ್ಯಾದಿ ಮಂಗಳ ದ್ರವ್ಯಗಳನ್ನು ಕೊಟ್ಟು ಆಶೀರ್ವಾದ ಪಡೆಯಬೇಕು. ಪಾರ್ವತಿಯು ಸಂತಾನ, ಸಮೃದ್ಧಿ, ಪಾತಿವ್ರತ್ಯ, ಹಾಗೂ ಶಕ್ತಿಯ ಸಂಕೇತಳು. ಆದ್ದರಿಂದ ಸ್ತ್ರೀಯರು ಆ ದಿನದಂದು ದಾಂಪತ್ಯಕ್ಕೆ ಅಭಿಮಾನಿಗಳಾದ ಉಮಾಮಹೇಶ್ವರರ ಪೂಜೆಯನ್ನು ವಿಶೇಷವಾಗಿ ಮಾಡುತ್ತಾರೆ.

ಇದನ್ನೂ ಓದಿ : Dakshinayana 2023 : ಜು.17 ರಿಂದ ದಕ್ಷಿಣಾಯನ ಶುರು; ಏನಿದರ ಮಹತ್ವ?

ಏನೆಂದು ಪ್ರಾರ್ಥಸಿಬೇಕು?

ಮೃತ್ಯುಂಜಯ ನಮಸ್ತುಭ್ಯಂ ತವ ಮೇ ಸೂತ್ರಧಾರಣಾತ್ |
ಸೌಭಾಗ್ಯಂ ಧನಧಾನ್ಯಂ ಚ ಪ್ರಜಾವೃದ್ಧಿಂ ಸದಾ ಕುರು ||

ಉಮಾ ವೈ ವಾಕ್ ಸಮುದ್ದಿಷ್ಟಾ ಮನೋ ರುದ್ರ ಉದಾಹೃತಃ |
ತದೇತತ್ ಮಿಥುನಂ ಜ್ಞಾತ್ವಾ ನ ದಾಂಪತ್ಯಾತ್ ವಿಹೀಯತೇ ||

bheemana amavasya vrata

ನಮ್ಮ ಭಾರತೀಯ ಸಂಪ್ರದಾಯವೆಂದರೆ ಸಕಲ ಜಾತಿಮತಧರ್ಮಗಳನ್ನು ಏಕತೆಯಿಂದ ಕಾಣುವ ಸಂಸ್ಕೃತಿ. ಆದ್ದರಿಂದ ಈ ಪೂಜೆಯು ಯಾವುದೇ ಒಂದು ಧರ್ಮಕ್ಕಾಗಲಿ ಜಾತಿಗಾಗಲಿ ಸೀಮಿತಗೊಂಡಿಲ್ಲ. ಎಲ್ಲ ಸುಮಂಗಲಿಯರೂ ಅವಶ್ಯವಾಗಿ ಆಚರಿಸಬಹುದಾದ ವ್ರತ ಇದು.

ನಮ್ಮ ನಮ್ಮ ಅನುಕೂಲಗಳಿಗೆ ತಕ್ಕಂತೆ ವೈಭವ ಅವಶ್ಯವಾಗಿ ಮಾಡಬೇಕು. ಆದರೆ ವೈಭವ ಆಡಂಬರಗಳೆ ಮುಖ್ಯವಲ್ಲ. ಪೂಜೆಯಲ್ಲಿ ಬೇಕಾದ ಮುಖ್ಯಸಾಮಗ್ರಿ ಭಕ್ತಿ. ಆದ್ದರಿಂದ ಯಥಾಯೋಗ್ಯವಾಗಿ ಭಕ್ತಿವಿಶ್ವಾಸಗಳಿಂದ ಪೂಜೆಯನ್ನು ಮಾಡುವುದೇ ಅತಿ ಪ್ರಧಾನ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Pretha Maduve: ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ.

VISTARANEWS.COM


on

pretha maduve
Koo

ಮಂಗಳೂರು: ಕರ್ನಾಟಕ ಕರಾವಳಿಯ (karnataka Coastal) ತುಳುನಾಡಿನ (Tulunadu) ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ (Pretha Maduve) ಸಜ್ಜಾಗಿದ್ದ ವಧುವಿಗೆ (bride) ವರ (groom) ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ (Souls) ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ (Folk) ರೀತಿಯಲ್ಲಿ ನಡೆಯುತ್ತದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಈ ʼವಧುʼ ಒಂದು ವಾರದ ಮಗುವಾಗಿದ್ದಾಗಲೇ ತೀರಿಕೊಂಡಿದ್ದಳು. ಇದು ನಡೆದು 30 ವರ್ಷಗಳು ಆಗಿವೆ. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ. ಈ ಮಗುವಿಗೆ ನಾಮಕರಣವೂ ಆಗಿರಲಿಲ್ಲ. ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

Pretha Maduve

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.

ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ಇದನ್ನೂ ಓದಿ: Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Continue Reading

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
2nd PUC Exam 2 Result tomorrow
ಶಿಕ್ಷಣ7 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ36 mins ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ36 mins ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ1 hour ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ7 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20247 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ8 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌