Cancer | Gemini | 2023 ಮಿಥುನ, ಕರ್ಕಾಟಕ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ! ಆರೋಗ್ಯದಲ್ಲಿ ನಷ್ಟ! Vistara News
Connect with us

ಧಾರ್ಮಿಕ

Cancer | Gemini | 2023 ಮಿಥುನ, ಕರ್ಕಾಟಕ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ! ಆರೋಗ್ಯದಲ್ಲಿ ನಷ್ಟ!

VISTARANEWS.COM


on

astrology
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Edited by

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

Edited by

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Mysore Dasara 2023: ಬರ ಹಿನ್ನೆಲೆ ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

Mysore Dasara 2023: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅ.15ರಿಂದ ಮೈಸೂರಿನಲ್ಲಿ ದಸರಾ ಮಹೋತ್ಸವ ಆರಂಭವಾಗಲಿದೆ.

VISTARANEWS.COM


on

Edited by

Mysore dasara
Koo

ಮೈಸೂರು: ಬರ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಅನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ದಸರಾವನ್ನು (Mysore Dasara 2023) ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾ ಆಚರಿಸಲಿದೆ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Mysore Dasara : ನಾದಬ್ರಹ್ಮ ಹಂಸಲೇಖ ಈ ಬಾರಿಯ ಮೈಸೂರು ದಸರಾ ಉದ್ಘಾಟಕ; ಸಿಎಂ ಸಿದ್ದರಾಮಯ್ಯ ಘೋಷಣೆ

ಅ.15ರಿಂದ ನವರಾತ್ರಿ

ಅ.15ರಿಂದ ಮೈಸೂರಿನಲ್ಲಿ ಶರನ್ನವರಾತ್ರಿ ಉತ್ಸವ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಲಾಗುತ್ತದೆ.

  • ಅರಮನೆ ಪೂಜೆಗಳು: ಅ.15ರಂದು ಸಾಯಂಕಾಲ 6.30 ರಿಂದ 7.15ಶುಭಮೇಷ ಲಗ್ನದಲ್ಲಿ ಆರಂಭ.
  • ಅ.20ರಂದು ಶುಕ್ರವಾರ : ಕಾತ್ಯಾಯಿನೀ – ಸರಸ್ವತಿ ಪೂಜೆ.
    (ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ ಅ.24ರಂದು ಮಂಗಳವಾರ ವಿಸರ್ಜನೆ)
  • ಅ.21ರಂದು ಶನಿವಾರ : ಕಾಳರಾತ್ರಿ, ಮಹಿಷಾಸುರ ಸಂಹಾರ.
  • ಅ.23 ಸೋಮವಾರ : ಆಯುಧ ಪೂಜೆ.
  • ಅ.24ರಂದು ಮಂಗಳವಾರ : ವಿಜಯದಶಮಿ.
    ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರಿಂದ ನಂದೀ ಧ್ವಜ ಪೂಜೆ.
    ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ ನಂತರ “ಜಂಬೂ ಸವಾರಿ” ಪ್ರಾರಂಭ.
  • ಅ.26ರಂದು ಭಾನುವಾರ : ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ.
Continue Reading

ಕರ್ನಾಟಕ

Communal Harmony : ದರ್ಗಾದಲ್ಲೇ ಗಣಪತಿ ಪ್ರತಿಷ್ಠಾಪನೆ; ಘಂಟೆ ಬಡಿದು ಜೈ ಗಣೇಶ ಎಂದ ಮುಸ್ಲಿಮರು, ಎಂಥಾ ಸೌಹಾರ್ದ!

Communal Harmony : ಬೆಳಗಾವಿಯ ಬೈಲಹೊಂಗಲದ ಕಂಠಿ ಗಲ್ಲಿಯ ದರ್ಗಾದಲ್ಲಿ ಮುಸ್ಲಿಮರೇ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಹಿಂದುಗಳು ಜತೆಯಾಗಿ ನಿಂತು ಪ್ರಾರ್ಥಿಸುತ್ತಾರೆ. ಭಾರತದ ಸೌಹಾರ್ದ ಪರಂಪರೆ ಅತ್ಯುತ್ತಮ ನಿದರ್ಶನವೊಂದು ಈಗಲೂ ಜೀವಂತವಾಗಿದೆ.

VISTARANEWS.COM


on

Edited by

Bailahongala dargah Ganeshothsava
Koo

ಬೆಳಗಾವಿ: ಜಾತಿ, ಧರ್ಮಗಳ ಸಂಘರ್ಷ, ಅಪನಂಬಿಕೆ, ದ್ವೇಷಗಳೇ ತುಂಬಿಕೊಳ್ಳುತ್ತಿರುವ ಕಾಲದಲ್ಲಿ ಮನುಷ್ಯ ನಿಜವಾಗಿಯೂ ಬದುಕಬೇಕಾದ ಬಗೆಗಳು ಆಗಾಗ, ಅಲ್ಲಲ್ಲಿ ತೆರೆದುಕೊಳ್ಳುತ್ತವೆ. ಹಿಂದು-ಮುಸ್ಲಿಮರ ಸ್ನೇಹ ಭಾವದ ಕಾಲವಳಿದು ದ್ವೇಷ ಭಾವವೇ ಉಕ್ಕೇರುತ್ತಿರುವ ಹಂತದಲ್ಲಿ ನಡೆಯುತ್ತಿರುವ ಈ ವಿದ್ಯಮಾನಗಳು (Communal Harmony) ನಿಜಾರ್ಥದಲ್ಲಿ ಕತ್ತಲ ಸುರಂಗದ ಕೊನೆಯಲ್ಲಿರುವ ಬೆಳಕಿನ ಹಣತೆಗಳು ಅನಿಸುತ್ತವೆ. ಇಷ್ಟೊಂದು ಖುಷಿಯಿಂದ ವಿಚಾರವನ್ನು ಹೇಳುವುದಕ್ಕೆ ನಿಜಕ್ಕೂ ಒಂದು ಕಾರಣವಿದೆ.

ಬೆಳಗಾವಿ ಜಿಲ್ಲೆಯ (Belagavi News) ಬೈಲಹೊಂಗಲ ಪಟ್ಟಣದ ಕಂಠಿ ಗಲ್ಲಿಯಲ್ಲಿ (Kanti galli in Bailahongala) ಮುಸ್ಲಿಮರೇ ಮುಂದೆ ನಿಂತು ತಮ್ಮದೇ ದರ್ಗಾದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ (Ganeshothsava at Dargah) ತಾವೇ ಪೂಜೆ ಮಾಡಿ, ತಾವೇ ಘಂಟಾಘೋಷ ಮೊಳಗಿಸಿ ಜೈಗಣೇಶ (Muslims Chanted Jai Ganesha) ಎಂದು ಭಕ್ತಿಯಿಂದ, ಹೃದಯಾಂತರಾಳದಿಂದ ಜಯೋಘೋಷ ಮಾಡಿದ್ದಾರೆ. ಇದಕ್ಕೆ ಅಲ್ಲಿನ ಎಲ್ಲ ಹಿಂದುಗಳು ಸಹವರ್ತಿಗಳಾಗಿ, ಸಾಕ್ಷಿಗಳಾಗಿ ಸಂಭ್ರಮಿಸಿದ್ದಾರೆ.

Bailahongala dargah Ganeshothsava communal harmony 2
ಈ ಗಣೇಶನಿಗೆ ಮುಸ್ಲಿಮರಿಂದಲೇ ಆರತಿ ನಡೆಯುತ್ತದೆ ಹಿಂದೂಗಳು ಮಾರ್ಗದರ್ಶನ ಮಾಡುತ್ತಾರೆ

ಬೈಲಹೊಂಗಲ ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಫಕ್ಕೀರಸ್ವಾಮಿ ದರ್ಗಾದಲ್ಲಿ (Fakeeraswamy Dargah at Kantigalli) ನಡೆದಿರುವ ವಿದ್ಯಮಾನ ಇದು. ಹಾಗಂತ ಇದೇನು ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಲ್ಲ. ಯಾವಾಗ ಬಾಲ ಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವದ ಪರಿಕಲ್ಪನೆ ಸೃಷ್ಟಿಸಿದರೋ ಅಥವಾ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ ಯಾವಾಗ ಶುರುವಾಯಿತೋ ಅಂಥ ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಹಿಂದು ಮತ್ತು ಮುಸ್ಲಿಮರು ಸೇರಿ ಆಚರಿಸುವ ವಿಶೇಷ ಗಣೇಶೋತ್ಸವವಾಗಿ ಇದು ಗಮನ ಸೆಳೆದಿದೆ.

Bailahongala dargah Ganeshothsava communal harmony

ಜಗತ್ತಿನಲ್ಲಿ, ಸುತ್ತಮುತ್ತ ಏನೇ ನಡೆದರೂ ಅದೆಷ್ಟು ತಲಾಂತರಗಳು ಕಳೆದರೂ, ಪೀಳಿಗೆಗಳು ಬದಲಾದದರೂ ಸೌಹಾರ್ದತೆಯ ಈ ಪರಂಪರೆ ಮಾತ್ರ ಯಾವ ಕಲ್ಮಶಕ್ಕೂ ಒಳಗಾಗದೆ, ಯಾವ ಮಾಲಿನ್ಯಕ್ಕೂ ಕಿವಿಗೊಡದೆ ವರ್ಷ ವರ್ಷವೂ ಇನ್ನಷ್ಟು ಸಮೃದ್ಧವಾಗುತ್ತಿದೆ ಎನ್ನುವುದು ಹಿತವಾದ ಸುದ್ದಿ.

Bailahongala dargah Ganeshothsava communal harmony
ಗಣೇಶೋತ್ಸವ ಆಚರಿಸಿದ ಖುಷಿಯಲ್ಲಿ ಅಲ್ಲಿನ ಜನರು

ಇಲ್ಲಿ ಎಲ್ಲ ಜಾತಿ, ಜನಾಂಗದವರು ದರ್ಗಾದ ಆಚರಣೆ ಮತ್ತು ಪರಂಪರೆಗೆ ಹೊಂದಿಕೊಂಡು ಬದುಕುತ್ತಿದ್ದಾರೆ. ದರ್ಗಾದಲ್ಲಿ ನಡೆಯುವ ಪ್ರತಿ ಧಾರ್ಮಿಕ ಆಚರಣೆ, ವಿಧಿ, ವಿಧಾನಗಳಿಗೆ ತಲೆ ಬಾಗಿ ನಡೆದುಕೊಳ್ಳುವ ಸಂಸ್ಕೃತಿ, ಪರಂಪರೆ ಇಲ್ಲಿಯ ಜನರದ್ದಾಗಿದೆ.

ಕೋಮು ಸೌಹಾರ್ದತೆಗೆ ಸಾಕ್ಷಿ ಗಣಪನ ಪ್ರತಿಷ್ಠಾಪನೆ

ಕಂಠಿ ಗಲ್ಲಿಯಲ್ಲಿರುವ ನಿವಾಸಿಗಳು ಪ್ರತಿ ವರ್ಷ ಒಟ್ಟಿಗೆ ಸೇರಿ ಮೊಹರಂ ಆಚರಣೆ ಮಾಡುತ್ತಾರೆ. ಜೊತೆಗೆ ಗಣೇಶ ಚತುರ್ಥಿಯನ್ನು ಅಷ್ಟೇ ನಯ, ವಿನಯ, ಭಕ್ತಿಭಾವದಿಂದ ಬರ ಮಾಡಿಕೊಂಡು ಗಣೇಶನ ಹಬ್ಬ ಆಚರಣೆ ಮಾಡಿಕೊಂಡು ಬಂದಿದ್ದಾರೆ.

Bailahongala dargah Ganeshothsava communal harmony

ಮುಸ್ಲಿಂ ಬಾಂಧವರಿಂದ ಗಣಪನಿಗೆ ಜೈಘೋಷ

ಹಿಂದೂ, ಮುಸ್ಲಿಂ ಬಾಂಧವರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿ, ಗಂಟೆ ಬಾರಿಸಿ, ಆರತಿ ಮಾಡಿ, ನೈವೇದೆ ಸಲ್ಲಿಸಿ ಪ್ರಾರ್ಥಿಸಿದರು. ಅರ್ಚಕರು ಬೋಧಿಸಿದ ಮಂತ್ರ ಘೋಷವನ್ನು ಮುಸ್ಲಿಂ ಬಾಂಧವರು ಭಕ್ತಿಯಿಂದ ನುಡಿದು ಗಜಾನನ ಮಹರಾಜಕೀ ಜೈ ಎಂದು ಘೋಷಣೆ ಹಾಕಿದರು.

ಊರ ಹಿರಿಯರು, ಊರ ಹಿರಿಯರು, ಸಹೃದಯಿಗಳ ಶಕ್ತಿ ಇದು

ಊರಿನ ಹಿರಿಯರಾದ ಮಹಾಂತೇಶ ಹಂಚಿನಮನಿ, ಈರಪ್ಪ ಬೆಂಡಿಗೇರಿ, ಪ್ರಕಾಶ ಪಾಗಾದ, ಅಶೋಕ ಪಾಗಾದ, ವಿಶಾಲ ರೊಡಬಸನವರ, ಸಚಿನ ಹಣಮಶೇಟ, ಕಿರಣ ಪಾಗಾದ, ಉಳವೇಶ ಪಾಗಾದ, ಬಾಬು ಅಡಿಮನಿ, ಶಫೀಕ ಬಡಿಮನಿ, ಜರ್ ನದಾಫ, ಶಿವಲಿಂಗ ಹೂಗಾರ, ಕುಮಾರ ಹೂಗಾರ, ಪ್ರಜ್ವಲ ಹೂಗಾರ, ಅನೇಕರು ಗಣೇಶ ಪ್ರತಿಷ್ಠಾಪನೆ ಜವಾಬ್ದಾರಿ ಹೊತ್ತುಕೊಂಡು ಯಶಸ್ವಿಗೊಳಿಸಿದ್ದಾರೆ.

Bailahongala dargah Ganeshothsava communal harmony
ಪೂಜೆ ಮತ್ತು ಪ್ರಾರ್ಥನೆಯ ಗಳಿಗೆ

ಇದನ್ನೂ ಓದಿ : Communal Harmony : ಗಣೇಶ ಬಪ್ಪ ಮೋರಯಾ ಎಂದ ಮುಸ್ಲಿಮರು; ಗಣಪನ ಶೋಭಾಯಾತ್ರೆಗಾಗಿ ಈದ್‌ ಮೆರವಣಿಗೆಯೇ ಮುಂದಕ್ಕೆ!

ಬೆಳಗಾವಿಯ ಬೈಲಹೊಂಗಲದ ಈ ಪರಂಪರೆಯಂತೆಯೇ ಇನ್ನೂ ಹಲವು ಕಡೆ ಹಿಂದು ಮುಸ್ಲಿಂ ಸೌಹಾರ್ದತೆಯ ನೂರಾರು ಉದಾಹರಣೆಗಳು ದೊರೆಯುತ್ತವೆ. ಇದು ಇನ್ನಷ್ಟು ಬೆಳೆಯಬೇಕು ಮತ್ತು ಹೊಸ ಹೊಸ ಸೌಹಾರ್ದದ ನಿದರ್ಶನಗಳು ಹುಟ್ಟಿಕೊಳ್ಳಬೇಕು ಎನ್ನುವುದೇ ಅಲ್ಲಿನ ಜನ ಆಶಯ.

Bailahongala dargah Ganeshothsava communal harmony in 2022
2022ರಲ್ಲಿ ನಡೆದ ಗಣೇಶೋತ್ಸವದ ಒಂದು ನೋಟ

ಈದ್‌ ಮೆರವಣಿಗೆಯನ್ನೇ ಮುಂದಕ್ಕೆ ಹಾಕಿದ ಬೆಳಗಾವಿಯ ಮುಸ್ಲಿಮರು

ಬೆಳಗಾವಿಯ ಸೌಹಾರ್ದ ಪರಂಪರೆ ಅದೆಷ್ಟು ಶಕ್ತಿಶಾಲಿಯಾಗಿದೆ ಎನ್ನುವುದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ. ಬೆಳಗಾವಿಯಲ್ಲಿ ಗಣೇಶೋತ್ಸವ ಅದ್ದೂರಿಯಾಗಿ ನಡೆಯುತ್ತದೆ. ಈ ಬಾರಿ ಸೆ. 28ರಂದು ಸಾರ್ವಜನಿಕ ಗಣೇಶೋತ್ಸವವ ಬೃಹತ್‌ ಶೋಭಾಯಾತ್ರೆ ನಡೆಯುತ್ತದೆ. ಈ ಬಾರಿ ಅಂದೇ ಈದ್‌ ಮಿಲಾದ್‌ ಹಬ್ಬವೂ ಬಂದಿದೆ. ಮುಸ್ಲಿಮರು ಕೂಡಾ ನಗರ ಮೆರವಣಿಗೆ ಮೂಲಕ ಇದನ್ನು ಸಂಭ್ರಮಿಸುತ್ತಾರೆ. ಆದರೆ ಎರಡನ್ನೂ ಒಂದೇ ದಿನ ಆಚರಿಸಿದರೆ ವ್ಯವಸ್ಥೆ ಮಾಡುವುದು ಕಷ್ಟವಾಗುತ್ತದೆ, ಕಾನೂನು ಭಂಜಕರಿಗೆ ಅವಕಾಶವಾದೀತು ಎಂದು ಭಾವಿಸಿದ ಮುಸ್ಲಿಂ ಹಿರಿಯರು ತಮ್ಮ ಈದ್‌ ಮೆರವಣಿಗೆಯನ್ನು ಅಕ್ಟೋಬರ್‌ ಒಂದಕ್ಕೆ ಮುಂದೂಡಿದ್ದಾರೆ.

Continue Reading
Advertisement
MLA BY Vijayendra
ಕರ್ನಾಟಕ2 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ2 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ2 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ3 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ3 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್4 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ4 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ4 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ4 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ4 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ21 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌