Deepavali 2022 | ಬಹುಸಂಸ್ಕೃತಿಯ ಬೆಳಕಲ್ಲಿ ಬಹು ದೊಡ್ಡ ಹಬ್ಬ ದೀಪಾವಳಿ - Vistara News

ದೀಪಾವಳಿ

Deepavali 2022 | ಬಹುಸಂಸ್ಕೃತಿಯ ಬೆಳಕಲ್ಲಿ ಬಹು ದೊಡ್ಡ ಹಬ್ಬ ದೀಪಾವಳಿ

ಇಂದಿನಿಂದ ಬೆಳಕಿನ ಹಬ್ಬ ದೀಪಾವಳಿ (Deepavali 2022) ಆರಂಭವಾಗಿದೆ. ದೀಪಾವಳಿ ಹಬ್ಬಕ್ಕೂ, ದೀಪಗಳಿಗೂ ಇರುವ ಮಹತ್ವವೇನು? ಏನೆಲ್ಲಾ ಆಚರಣೆಗಳಿವೆ ಎಂದು ತಿಳಿಸಿಕೊಡುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Deepavali 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಲೇಖನವನ್ನು ಇಲ್ಲಿ ಕೇಳಿ ಭಾಗ-1

Navaratri 2022

ಡಾ. ಗಣಪತಿ ಆರ್ ಭಟ್
“ಅಸತೋ ಮಾ ಸದ್ಗಮಯ
ತಮಸೋ ಮಾ ಜ್ಯೋತಿರ್ಗಮಯ
ಮೃತ್ಯೋರ್ಮಾ ಅಮೃತಂ ಗಮಯ”

ಕತ್ತಲೆಯಿಂದ ಬೆಳಕಿನೆಡೆಗೆ ಸಾಗುತ್ತಿರಬೇಕು ನಾವು.

ಕತ್ತಲೆಯು ನಮ್ಮೆದುರು ಇರುವುದನೆಲ್ಲ ಮರೆಮಾಚಿದರೆ, ಹಚ್ಚಿಟ್ಟ ಹಣತೆಯು ಸುತ್ತ ಇರುವುದನೆಲ್ಲ ಬೆಳಗುತ್ತದೆ. ಕತ್ತಲ ವಿರುದ್ಧ ದೀಪವು ನಡೆಸುವ ಯುದ್ಧದಲ್ಲಿ ದೀಪಕ್ಕೇ ಗೆಲುವು ಕಟ್ಟಿಟ್ಟಬುತ್ತಿ. ದೀಪವು ಕತ್ತಲನ್ನು ಹೋಗಲಾಡಿಸಬಹುದೇ ವಿನಃ ಕತ್ತಲು ದೀಪವನ್ನಲ್ಲ. ಜೀವನದುದ್ದಕ್ಕೂ ನಮ್ಮ ಆಂತರ್ಯದಲ್ಲಿ ಇಂಥಹುದೇ ಯುದ್ಧ ನಡೆಯುತ್ತಿರುತ್ತದೆ. ಅಜ್ಞಾನವು ಬದುಕಿನ ನಾನಾ ಸತ್ಯವನ್ನು ಮರೆಮಾಚಿದರೆ, ಜ್ಞಾನವು ಬದುಕಿನ ವಾಸ್ತವವನ್ನು ದರ್ಶನಮಾಡಿಸುತ್ತದೆ. ಅದಕ್ಕಾಗಿ ಹಿರಿಯರು ಬೆಳಕನ್ನು ಜ್ಞಾನದ ಸಂಕೇತವನ್ನಾಗಿ ಕಂಡಿದ್ದಾರೆ. ಪರಮಾತ್ಮನು ಜ್ಞಾನಮಯನು. ಹಾಗಾಗಿ ದೀಪವನ್ನು ಪರಮಾತ್ಮನ ಸ್ವರೂಪವೆಂದು ಭಾವಿಸಲಾಗಿದೆ.

ದೀಪಮೂಲೆ ತತೋ ಬ್ರಹ್ಮಾ ದೀಪಮಧ್ಯೇ ತತೋ ಹರಿಃ।
ದೀಪಾಗ್ರೇ ಶಂಕರಃ ಪ್ರೋಕ್ತಃ ಸಂಧ್ಯಾಜ್ಯೋತಿರ್ನಮೋಸ್ತುತೇ ।।

ಎನ್ನುತ್ತಾ ದೀಪದ ಆದಿಯಲ್ಲಿ ಬ್ರಹ್ಮನು, ಮಧ್ಯದಲ್ಲಿ ವಿಷ್ಣುವು, ಮೇಲ್ಭಾಗದಲ್ಲಿ ಶಿವನು ಹೀಗೆ ತ್ರಿಮೂರ್ತಿಮಯ ದೀಪಕ್ಕೆ ನಮಸ್ಕರಿಸುತ್ತ ಪ್ರತಿನಿತ್ಯ ದೀಪ ಹಚ್ಚವುದು ನಮ್ಮೆಲ್ಲರ ಸಂಸ್ಕೃತಿ. ಪರಮಾತ್ಮನ ಇರುವಿಕೆಯನ್ನು ದೀಪದ ಮೂಲಕ ಕಾಣುವುದೇ ನಮ್ಮ ಭಾರತೀಯ ಆಧ್ಯಾತ್ಮದ ವೈಶಿಷ್ಟ್ಯ. ಹೀಗೆ ದೀಪದ ಮಹತ್ವವನ್ನು ಮನಗಂಡು ನಿತ್ಯ ದೀಪವನ್ನು ಹಚ್ಚುವುದಲ್ಲದೆ, ಅದರ ಆರಾಧನೆಗೆಂತಲೇ ದೀಪಾವಳಿ (Deepavali 2022) ಪರ್ವವನ್ನು ಆಚರಿಸುವುದು ಅತ್ಯಂತ ವಿಶೇಷವಾದುದು. ‘ದೀಪಾನಾಮ್ ಆವಲಿಃ’ ಎಂಬುದಾಗಿ ದೀಪಾವಳಿಯೆಂದರೆ ದೀಪಗಳನ್ನು ಹಚ್ಚಿ ಸಾಲು ಸಾಲಾಗಿ ಜೋಡಿಸುವ, ಸಂಭ್ರಮಿಸುವ ಸಂದರ್ಭವೆಂದು ‘ದೀಪಾವಳಿ’ ಹೆಸರಲ್ಲೇ ಗೊತ್ತಾಗುತ್ತದೆ. ಅದಕ್ಕೆ ಪೂರಕವೆಂಬಂಥಹ ಅನೇಕ ಪೌರಾಣಿಕ ಪ್ರಸಂಗಗಳು ಈ ದೀಪಾರಾಧನೆಗೆ ಹಿನ್ನೆಲೆಯನ್ನು ಒದಗಿಸುತ್ತವೆ.

ಇಂದಿನ ದಿನಮಾನದಲ್ಲಿ ಸಂಕುಚಿತಗೊಂಡು ಮೂರೇ ದಿನ ಆಚರಿಸಲ್ಪಡುವ ದೀಪಾವಳಿಯು ವಾಸ್ತವದಲ್ಲಿ ಆಶ್ವಯುಜ ಮಾಸದ ಕೃಷ್ಣ ತ್ರಯೋದಶಿಯಿಂದ ಆರಂಭವಾಗಿ ಕಾರ್ತಿಕ ಮಾಸದ ದ್ವಿತೀಯಾವರೆಗೆ ಐದು ದಿನಗಳವರೆಗೆ ನಡೆಯುವ ದೊಡ್ಡ ಹಬ್ಬ. ಅಲ್ಲದೆ, ಅಲ್ಲಿಂದ ಮೊದಲ್ಗೊಂಡು ಕಾರ್ತಿಕ ಮಾಸದ ಪೂರ್ಣಿಮೆಯವರೆಗೆ ಅಂದರೆ ಮುಂದೆ ಹದಿನಾಲ್ಕು ದಿನಗಳ ಕಾಲ ಈ ದೀಪಾರಾಧನೆ ನಡೆಯುತ್ತದೆ. ದೀಪವೇ ಈ ಸಂದರ್ಭದಲ್ಲಿ ಪ್ರಮುಖ ಆರಾಧ್ಯ ವಿಷಯವಾಗುವುದು ನಮ್ಮ ಭಾರತೀಯ ಧರ್ಮದ ವಿಷಯ ಸೌಕ್ಷ್ಮ್ಯದ ದ್ಯೋತಕವೇ ಸರಿ. ಸನಾತನವಾದ ನಮ್ಮ ಸಂಸ್ಕೃತಿಯಲ್ಲಿ ಬೆಳಕಿಗೆ ಮತ್ತು ಅದು ಸಂಕೇತಿಸುವ ಜ್ಞಾನಕ್ಕೆ ಎಷ್ಟೆಲ್ಲ ಮಹತ್ವ ಕೊಡಲಾಗಿದೆ ಎಂಬುದಕ್ಕೆ ದೀಪಾವಳಿ ಮತ್ತು ಕಾರ್ತಿಕ ಮಾಸದ ದೀಪೋತ್ಸವಗಳೇ ನಿದರ್ಶನ.

Deepavali 2022

ಐದುದಿನ, ಎರಡು ಮಾಸ
ಭಾರತೀಯ ಹಬ್ಬ-ಹರಿದಿನಗಳ ಪೈಕಿ ದೊಡ್ಡಹಬ್ಬವಾದ ಈ ದೀಪಾವಳಿಯು, ಅನೇಕ, ಪೌರಾಣಿಕ ಪ್ರಸಂಗಗಳನ್ನು ಹೊಂದಿಸಿಕೊಂಡ, ಅನೇಕ ದಿನಗಳವರೆಗೆ ವಿಸ್ತರಿಸಿಕೊಂಡ, ಮಹತ್ತರವಾದ ತತ್ವವನ್ನು ಒಳಗೊಂಡ, ವಿಶೇಷ ಹಬ್ಬವೇ ಹೌದು. ಬೇರೆಲ್ಲ ಹಬ್ಬಗಳು ಯಾವುದಾದರೂ ಒಂದು ಹಿನ್ನಲೆಯಿಂದ ಆಚರಿಸಲ್ಪಟ್ಟರೆ ಐದು ದಿನಗಳ ಕಾಲ ಆಚರಿಸಲ್ಪಡುವ ದೀಪಾವಳಿಯಲ್ಲಿ ಒಂದೊಂದು ದಿನಕ್ಕೂ ಒಂದೊಂದು ಬಗೆಯ ಹಿನ್ನೆಲೆಯಿದೆ. ಇನ್ನೂ ಒಂದು ವಿಶೇಷವೆಂದರೆ ಆಶ್ವಯುಜ ಮಾಸದ ಬಹುಳ ತ್ರಯೋದಶಿಯಿಂದ ಆರಂಭವಾಗಿ, ಕಾರ್ತಿಕ ಮಾಸದ ಶುದ್ಧ ದ್ವಿತೀಯಾವರೆಗೆ ಈ ಹಬ್ಬವು ಒಟ್ಟೂ ಐದು ದಿನಗಳಲ್ಲಿ ಎರಡು ಮಾಸಗಳನ್ನು ಸಂಧಿಸುತ್ತದೆ.

ಧನಲಾಭಕ್ಕಾಗಿ ಧನತ್ರಯೋದಶಿ
ನರಕ ಚತುರ್ದಶಿಯ ಹಿನ್ನಾದಿನವನ್ನು ಧನತ್ರಯೋದಶಿಯೆಂದು ಕರೆಯಲಾಗುತ್ತದೆ. ಉತ್ತರ ಭಾರತದಲ್ಲಿ ಈ ದಿನಕ್ಕೆ ಧನ್ ತೆರಾಸ್ ಎಂಬ ಹೆಸರಿದೆ.

ಪೂಜನೀಯಾ ತಥಾ ಲಕ್ಷ್ಮೀರ್ವಿಜ್ಞೇಯಾ ಸುಖಸುಪ್ತಿಕಾ।
ಸುಖರಾತ್ರ್ಯಾಂ ಪ್ರದೋಷೇ ತು ಕುಬೇರಂ ಪೂಜಯನ್ತಿ ಹಿ।।

ಈ ಲೇಖನವನ್ನು ಇಲ್ಲಿ ಕೇಳಿ ಭಾಗ-2

ಧನಲಾಭಕ್ಕಾಗಿ ಸಂಪತ್ತಿನ ಒಡೆಯ ಕುಬೇರನನ್ನು, ಧನದ ದೇವತೆಯಾದ ಲಕ್ಷ್ಮಿಯ ಜೊತೆಗೂಡಿ ಆವಾಹಿಸಿ ಪೂಜೆ ಮಾಡಲಾಗುವುದು. ಅಂದೇ ಆಯುರ್ವೇದದ ಪಿತಾಮಹನಾದ ಧನ್ವಂತರಿಯು ಆವಿರ್ಭವಿಸಿದ ದಿನವೂ ಹೌದು. ಆಯುರೋಗ್ಯ ವೃದ್ಧಿಗಾಗಿ ಧನ್ವಂತರಿಯ ಪೂಜೆ ಮಾಡಲಾಗುವುದಲ್ಲದೆ ಬಹುತೇಕ ಕಡೆಗಳಲ್ಲಿ ಅಂದು ಸಂಜೆಯ ವೇಳೆ ಹಂಡೆ, ಬಾನಿ ಇತ್ಯಾದಿಗಳಲ್ಲಿ ನೀರು ತುಂಬುವ ಸಂಪ್ರದಾಯವಿದೆ. ನಮ್ಮ ನಾಡಿನ ಮಲೆನಾಡು ಭಾಗಗಳಲ್ಲಿ ನೀರಿನ ಹಂಡೆಯನ್ನು ಬಿಳಿಮಣ್ಣು, ಕೆಮ್ಮಣ್ಣುಗಳಿಂದ ಅಲಂಕರಿಸಿ ಹೊಸನೀರು ತುಂಬಿ ಹಂಡೆಯ ಬಾಯಿಯನ್ನು ಬಾಳೆಎಲೆ ಮತ್ತು ಶಿಂಡ್ಲೆ ಎಂಬ ಕಹಿಯಾದ ಹಣ್ಣಿನಬಳ್ಳಿಯಿಂದ ಕಟ್ಟಲಾಗುತ್ತದೆ.

ಮಾರನೇ ದಿನ ಅದೇ ನೀರನ್ನು ಸ್ನಾನ ಮಾಡಿ ಮನೆ ಮಂದಿಯಲ್ಲ ಹಬ್ಬಕ್ಕೆ ಅಣಿಯಾಗುತ್ತಾರೆ. ಕಲಶದಲ್ಲಿ ನೀರು ತುಂಬುವ ಹವ್ಯಕರ ಬೂರೆಹಬ್ಬವೂ ಅಂದೇ ಇರುತ್ತದೆ. ಇನ್ನು ತ್ರಯೋದಶಿಯ ದಿನ ಸಂಜೆಯ ಹೊತ್ತು ಯಮರಾಜನನ್ನು ನೆನೆಯುತ್ತಾ ಮನೆಯ ಹೊರಗಡೆ ದೀಪವನ್ನು ಹಚ್ಟಿಡಬೇಕು. ಇದರಿಂದ ಯಮಧರ್ಮರಾಜನು ಖುಷಿಗೊಂಡು ಅಪಮೃತ್ಯುವನ್ನು ನಿವಾರಿಸುತ್ತಾನೆ ಎಂದು ಸ್ಕಾಂದ ಪುರಾಣದಲ್ಲಿ ಹೇಳಲಾಗಿದೆ. ಇದನ್ನು ‘ಯಮದೀಪ’ ಎನ್ನಲಾಗಿದೆ.

ನರಕ ಚತುರ್ದಶಿ
ದೀಪಾವಳಿಯ (Deepavali 2022) ಎರಡನೇ ದಿನವು ಅಂದರೆ ಆಶ್ವಯುಜ ಮಾಸದ ಕೃಷ್ಣಚತುರ್ದಶಿಯ ದಿನವು “ನರಕ ಚತುರ್ದಶಿ” ಎಂದು ಪ್ರಸಿದ್ಧವಾಗಿದೆ. ಕೃಷ್ಣನು ನರಕಾಸುರನನ್ನು ಕೊಂದು ಹದಿನಾರು ಸಾವಿರ ರಾಜಕುವರಿಯರ ಜೀವ, ಮಾನ ಕಾಪಾಡಿದನೆಂದು ನಂಬಲಾಗುತ್ತದೆ. ನರಕನ ಅಸುರಿತನ ನಿರ್ನಾಮವಾಗಿ ದೈವೀಶಕ್ತಿ ರಾರಾಜಿಸಿದುದರ ಸಂಕೇತವಾಗಿ ದೀಪ ಹಚ್ಚಿ ಸಂಭ್ರಮಿಸುವ ಪದ್ಧತಿ ಬಂತು ಎಂಬುದು ಪ್ರತೀತಿ. ಅಂದು ಮೈಗೆಲ್ಲ ಎಣ್ಣೆಯನ್ನು ಹಚ್ಚಿಕೊಂಡು ಅಭ್ಯಂಗ ಸ್ನಾನ ಮಾಡಿದರೆ ಸಕಲ ಪಾಪಗಳೆಲ್ಲ ಕಳೆದು ಹೋಗುವುದು ಎಂಬುದು ನಂಬಿಕೆ. ಶರತ್ ಕಾಲವಾಗಿರುವುದರಿಂದ ಚಳಿಗಾಲದ ಸಮಯದಲ್ಲಿ ತ್ವಚೆಯ ರಕ್ಷಣೆ ಮತ್ತು ಇನ್ನಿತರ ಆರೋಗ್ಯ ಲಾಭಕ್ಕಾಗಿ ಹಬ್ಬದ ಆಚರಣೆಯಲ್ಲಿಯೇ ಆರೋಗ್ಯಸೂತ್ರವನ್ನೂ ಹೇಳಿರುವುದು ಗಮನಾರ್ಹ ವಿಚಾರ.

ಲಕ್ಷ್ಮೀಪೂಜೆ
ಅಮಾವಾಸ್ಯೆಯ ದಿನ ಪ್ರದೋಷಕಾಲದಲ್ಲಿ ಮನೆ, ಅಂಗಡಿ, ಕಛೇರಿ ಇನ್ನಿತರ ವ್ಯವಹಾರ ಕೇಂದ್ರಗಳಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಪೂಜಿಸಲಾಗುವುದು.
“ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ..”
ಎಂಬುದಾಗಿ ಬಂಗಾರದ ಬಣ್ಣವುಳ್ಳ ಲಕ್ಷ್ಮಿಯನ್ನು ಕರೆತಾರೆಂದು ಅಗ್ನಿಯಲ್ಲಿ ಪ್ರಾರ್ಥಿಸುವ ಮಂತ್ರವು ಸೊಗಸಾಗಿದೆ.
ವೈಶ್ಯರಿಗೆ ದೀಪಾವಳಿಯು ವಿಶೇಷ ಹಬ್ಬ. ವ್ಯಾಪಾರಿಗಳು ತಮ್ಮ ಹಳೆಯ ಲೆಕ್ಕಪಟ್ಟಿಯನ್ನು ಸಮಾಪನಗೊಳಿಸಿ ಹೊಸ ಲೆಕ್ಕಪಟ್ಟಿಯನ್ನು ಇದೇ ದಿನ ಆರಂಭಿಸುತ್ತಿದ್ದರು ಎಂಬುದು ಕೂಡ ತಿಳಿದು ಬರುತ್ತದೆ.

ಪಿತೃಗಳ ದಾರಿದೀಪಕ್ಕಾಗಿ ಸಿಡಿಮದ್ದು: ಕುಲದ ಪೂರ್ವಜರನ್ನು ಸಂಸ್ಮರಿಸಿ ಅವರ ಪರಮಗತಿಗಾಗಿ ಪ್ರಾರ್ಥಿಸಿ ನರಕಚತುರ್ದಶೀ ಮತ್ತು ಅಮವಾಸ್ಯೆಯ ದಿನಗಳಂದು ಪಂಜು ಅಥವಾ ಕೊಳ್ಳಿಯನ್ನು ಹೊತ್ತಿಸಬೇಕು ಮತ್ತು ಬೆಂಕಿಕಿಡಿಗಳನ್ನು ಸಿಡಿಸಿ ಪಿತೃಗಳಿಗೆ ಆಕಾಶಮಾರ್ಗದಲ್ಲಿ ಸಂಚರಿಸಲು ದೀಪ ತೋರಿಸಬೇಕು ಎಂದು
ಉಲ್ಕಾಹಸ್ತಾಃ ನರಾಃ ಕುರ್ಯುಃ ಪಿತೃಣಾಂ ಮಾರ್ಗದರ್ಶನಮ್।
ಉಜ್ವಲಜ್ಯೋತಿಷಾ ವರ್ತ್ಮ ಪ್ರಪಶ್ಯಂತು ವ್ರಜಂತು ತೇ।।

ಎಂಬುದಾಗಿ ಸ್ಕಾಂದಪುರಾಣದ ವೈಷ್ಣವಖಂಡದಲ್ಲಿ ಹೇಳಲಾಗಿದೆ. ಈ ಅಂಶವನ್ನು ಮನಗಂಡೇ ಕ್ರಮೇಣ ದೀಪಾವಳಿಯ ಸಂದರ್ಭದಲ್ಲಿ ಪಟಾಕಿ, ಸಿಡಿಮದ್ದು ಸಿಡಿಸುವ ವಾಡಿಕೆ ಬಂತು ಎಂಬ ಅಭಿಪ್ರಾಯವೂ ಇದೆ.

ಬಲಿ ಪಾಡ್ಯಮಿ ಮತ್ತು ದ್ಯೂತ ಪ್ರತಿಪದಾ
ಮಹಾನ್ ದಾನಿಯೆಂದು ವಿಖ್ಯಾತನಾಗಿದ್ದ ಬಲಿಯ ಅಸುರಿತನವನ್ನು ಕೊನೆಗಾಣಿಸಲು ಮಹಾನ್ ವಿಷ್ಣುವು ವಾಮನಾವತಾರ ತಾಳಿ ಬಂದ ಕಥೆ ಪುರಾಣ ಪ್ರಸಿದ್ಧ.
ಬಲಿಯು ರಾಕ್ಷಸನಾದರೂ ದಾನಶೀಲನು. ಹಾಗಾಗಿಯೇ ವಾಮನಾವತಾರಿ ವಿಷ್ಣುವಿನಿಂದ ಪಾತಾಳಕ್ಕೆ ನೂಕಲ್ಪಟ್ಟರೂ ವರ್ಷದಲ್ಲಿ ಮೂರುದಿನ ಭೂಲೋಕದಲ್ಲಿ ಅವನಿಗೆ ಪೂಜೆ ಸಲ್ಲುವುದೆಂದು ಸ್ವತಃ ವಿಷ್ಣುವೇ ವರ ನೀಡಿದ. ದೀಪಾವಳಿಯ ಮೂರು ದಿನ ಬಲೀಂದ್ರ ಪೂಜೆ ಪ್ರಮುಖವಾದುದು. ಇಂದಿಗೂ ಕಾರ್ತಿಕ ಮಾಸದ ಶುದ್ಧ ಪಾಡ್ಯದ ದಿನವು ಬಲಿಪಾಡ್ಯವೆಂದೇ ಪ್ರಸಿದ್ಧ.

ಮಲೆನಾಡಿನ ಭಾಗಗಳಲ್ಲಿ ಅಡಿಕೆಯ ಸಿಂಗಾರ, ಸವತೆಕಾಯಿ ಇತ್ಯಾದಿ ಬೆಳೆಗಳನ್ನು ದೇವರ ಕೋಣೆಯಲ್ಲಿಟ್ಟು, ಬಲೀಂದ್ರನ ರೂಪದಲ್ಲಿ ಪೂಜಿಸುತ್ತಾರೆ. ಅದೇ ದಿನ ಜೂಜಾಡುವ ಪದ್ಧತಿಯೂ ಇದೆ. ಕಾರಣವಿಷ್ಟೆ. ಅಂದು ಪಾರ್ವತಿದೇವಿ ತನ್ನ ಪತಿ ಶಿವನನ್ನು ಪಗಡೆಯಾಟದಲ್ಲಿ ಸೋಲಿಸಿ ಖುಷಿಪಟ್ಟಳು. ಬ್ರಹ್ಮಪುರಾಣವಲ್ಲದೆ ಈ ಪ್ರಸಂಗವನ್ನು ಎಲ್ಲೋರಾದ ಗುಹೆಯಲ್ಲಿ ಕೂಡ ಕೆತ್ತಲಾಗಿದೆ. ಅಂದು ಜೂಜನ್ನಾಡಿ ಗೆದ್ದರೆ ವರ್ಷವಿಡೀ ನಲಿವಿನಿಂದಿರಬಹುದೆಂಬ ನಂಬಿಕೆಯಿಂದ ಜೂಜು ಆಡಿ ದ್ಯೂತಪ್ರತಿಪದಾ ಆಚರಿಸುವ ಪದ್ಧತಿ ಬಂತು.

Deepavali 2022

ಗೋವರ್ಧನಗಿರಿ ಉತ್ಸವ ಹಾಗೂ ಗೋಪೂಜೆ
ದೀಪಾವಳಿಯಲ್ಲಿ ಕೇವಲ ಭಗವಂತನಿಗಷ್ಟೇ ಪೂಜೆ ಸಲ್ಲುವುದಿಲ್ಲ. ಕೃಷಿ ಹಾಗೂ ಪಶುಸಂಪತ್ತುಗಳನ್ನೂ ಪೂಜಿಸಿ ಧನ್ಯತಾಭಾವವನ್ನು ಹೊಂದಲಾಗುತ್ತದೆ.
ಕೃಷ್ಣನು ಗೋವರ್ಧನ ಗಿರಿಯನ್ನು ತನ್ನ ಕಿರು ಬೆರಳಲ್ಲಿ ಎತ್ತಿ ಗೋವು ಹಾಗೂ ಗೋಕುಲವಾಸಿಗಳನ್ನು ಕಾಪಾಡಿದ ವಿಚಾರವು ಭಾಗವತ ಪುರಾಣದಿಂದ ತಿಳಿದುಬರುತ್ತದೆ. ಉತ್ತರ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶದ ವೃಂದಾವನದ ಬಳಿ ಗೋವರ್ಧನ ಗಿರಿಯ ಬಳಿ ಇಂದಿಗೂ ಇದನ್ನು ದೊಡ್ಡ ಉತ್ಸವವಾಗಿ ಆಚರಿಸಲಾಗುತ್ತದೆ. ಗೋವರ್ಧನ ಪರ್ವತವನ್ನು ಅನ್ನದಿಂದ ನಿರ್ಮಿಸಿ ಪೂಜಿಸುವ ಕ್ರಮವೂ ಇದೆ. ಇದನ್ನು ‘ಅನ್ನಕೂಟ’ ಎಂದು ಕರೆದಿದ್ದಾರೆ.

ಕೃಷ್ಣನು ಪಶು ಸಂರಕ್ಷಣೆಯನ್ನು ಮಾಡಿದ ಇಂತಹ ಸಂದರ್ಭದಲ್ಲಿ ಜನರು ಕೊಟ್ಟಿಗೆಯನ್ನು ಶುಚಿಗೊಳಿಸಿ ಹಸುಗಳನ್ನು ಅಲಂಕರಿಸಿ ‘ಗೋಪೂಜೆ’ ಮಾಡುವ ವಾಡಿಕೆಯಂತೂ ಭಾರತದಾದ್ಯಂತ ಎಲ್ಲೆಡೆ ಇದೆ. ಕರ್ನಾಟಕದ ಮಲೆನಾಡು ಭಾಗಗಳಲ್ಲಿ ಗೋಪೂಜೆಯ ದಿನ ಸಾಯಂಕಾಲ ಹೋರಿಗಳನ್ನು ಸಿಂಗರಿಸಿ ದನದಬಯಲು ಆಚರಿಸುವ ಪದ್ಧತಿಯಿದೆ. ರಾಸುಗಳನ್ನು ಕಾಡು ಮೃಗಗಳು ಕೊಂದು ತಿನ್ನದಂತೆ ಹುಲಿಯಪ್ಪನನ್ನು ಪ್ರಾರ್ಥಿಸಲಾಗುತ್ತದೆ. ಇನ್ನು ಹಲವೆಡೆ ದರ್ಭೆಯಿಂದ ಹಗ್ಗ ಮಾಡಿ ಊರರಸ್ತೆಗಳಲ್ಲಿ ಕಟ್ಟಲಾಗುತ್ತದೆ. ಮಾರ್ಗಪಾಲೀ ದೇವಿಯು ಮಾರ್ಗಗಳ ರಕ್ಷಣೆ ಮಾಡುತ್ತಾಳೆ ಎಂಬುದು ನಂಬಿಕೆ. ಒಟ್ಟಾರೆ ಜಾನಪದ ಹಾಗೂ ವೈದಿಕ ಸಂಸ್ಕೃತಿಗಳೆರಡೂ ಪರಸ್ಪರ ಸಮ್ಮಿಲಿತಗೊಂಡು ದೀಪಾವಳಿಯಲ್ಲಿ ಬಗೆ ಬಗೆಯ ಆಚರಣೆಗಳು ಬಂದಿರುವುದು ಬಹಳವೇ ವಿಶೇಷ.

ಯಮದ್ವಿತೀಯಾ
ಕಾರ್ತಿಕಮಾಸದ ಎರಡನೇಯ ದಿನ ಯಮ ದ್ವಿತೀಯ ಎಂದು ಆಚರಿಸುವ ವಾಡಿಕೆಯಿದೆ. ಉತ್ತರಭಾರತದೆಲ್ಲೆಡೆ ಇದನ್ನು ‘ಭಾಯ್ ದೂಜ್’ ಎಂದು ಕರೆಯಲಾಗಿದೆ. ಯಮಧರ್ಮರಾಜನನ್ನು ಅವನ ಸಹೋದರಿ ಯಮುನೆಯು ತನ್ನ ಮನೆಗೆ ಕರೆದು ಔತಣ ಮಾಡಿ ಸತ್ಕರಿಸಿದ ದಿನವೆಂಬ ಪ್ರತೀತಿಯಿದೆ. ಅಂದು ಸಹೋದರರು ತಮ್ಮ ಸಹೋದರಿಯ ಮನೆಯಲ್ಲಿ ಆತಿಥ್ಯ ಸ್ವೀಕರಿಸುವರು. ಕುಟುಂಬಪ್ರಾಧಾನ್ಯತೆ ಇರುವ ನಮ್ಮ ದೇಶದ ಸಂಸ್ಕೃತಿಯನ್ನು ಸಾರುವ ಆಚರಣೆಯಿದು. ಅಣ್ಣ-ತಂಗಿಯರ ವಾತ್ಸಲ್ಯದ ದ್ಯೋತಕವೇ ಆಗಿದ್ದ ಈ ಆಚರಣೆ ಇಂದು ಕ್ರಮೇಣ ಕಣ್ಮರೆಯಾಗುತ್ತಿರುವುದು ಖೇದಕರ.

ದೀಪಾವಳಿಯ (Deepavali 2022 ) ಆಚರಣೆ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನ ಭಿನ್ನವಾಗಿದೆ. ಮಂದಿರದಲ್ಲಿ ದೀಪಹಚ್ಚಿ ಪಶ್ಚಿಮ ಬಂಗಾಳದಲ್ಲಿ ಕಾಳಿಪೂಜೆ ಅಥವಾ ಶ್ಯಾಮಾಪೂಜೆಯನ್ನು ಮಾಡಿದರೆ ಗಂಗಾತಟದಲ್ಲಿ ರಂಗವಲ್ಲಿ ಬಿಡಿಸಿ, ದೀಪ ಹಚ್ಟಿ ಉತ್ತರ ಪ್ರದೇಶದಲ್ಲಿ ‘ದೇವ ದೀಪಾವಲೀ’ ಆಚರಿಸಲಾಗುತ್ತದೆ. ಓಡಿಶಾದಲ್ಲಿ ಸೆಣಬಿನ ಪಂಜನ್ನು ಉರಿಸಿ ಪೂರ್ವಜರಿಗೆ ಗೌರವಸಲ್ಲಿಸಿ ‘ಕೌನ್ರಿಯಾ ಕಥಿ’ ಆಚರಿಸಿದರೆ ಮಹಾರಾಷ್ಟ್ರದಲ್ಲಿ ಗೋವುಗಳನ್ನು ಪೂಜಿಸಿ ‘ವಸುಬರಸ್’ ಆಚರಿಸುತ್ತಾರೆ. ಹೀಗೆ ಇಡೀ ದೇಶದಲ್ಲಿ ದೀಪಾವಳಿ ಹಬ್ಬವನ್ನು ಬಗೆ ಬಗೆಯಿಂದ ಆಚರಿಸಿದರೂ ಎಲ್ಲಿಗೇ ಹೋದರೂ ಕಾಣುವುದು ದೀಪ ಮಾತ್ರ.

ದೀಪಾವಳಿಯ ಹಿನ್ನಲೆ ನೂರಾರು ಇರಬಹುದು. ಪದ್ಧತಿಯಂತೂ ಸಾವಿರಾರು ಇರಬಹುದು. ಹಣತೆಯಲ್ಲಿ ಹಚ್ಚಿಟ್ಟ ದೀಪ ಮಾತ್ರ ಯಾವ ವ್ಯತ್ಯಾಸವೂ ಇಲ್ಲದೆ ಅಖಂಡತೆಯನ್ನೇ ಸಾರುವುದು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ನಮ್ಮ ದೇಶ ಎನ್ನುವುದಕ್ಕೆ ನಮ್ಮ ಹಬ್ಬಗಳೇ ಸಾಕ್ಷಿ. ಏನಂತೀರಿ?

ಲೇಖಕರು ಸಂಸ್ಕೃತ ಪ್ರಾಧ್ಯಾಪಕರು

ಇದನ್ನೂ ಓದಿ | Diwali In Ayodhya | 17 ಲಕ್ಷ ದೀಪ, ಲೇಸರ್‌ ಶೋ ಮೂಲಕ ಅಯೋಧ್ಯೆಯಲ್ಲಿ ದೀಪಾವಳಿ ಸಂಭ್ರಮ, ವಿಡಿಯೊ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೀಪಾವಳಿ

After Deepavali Skin Care: ದೀಪಾವಳಿ ನಂತರ ತ್ವಚೆಯ ಆರೈಕೆಗೆ 5 ಸಿಂಪಲ್‌ ಸಲಹೆ

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಮಾಡುವುದು ಅತ್ಯಗತ್ಯ. ಇದಕ್ಕಾಗಿ ನೀವು ಏನೆಲ್ಲಾ ಮಾಡಬಹುದು? ಎಂಬುದನ್ನು ಬ್ಯೂಟಿ ಎಕ್ಸ್‌ಪಟ್ರ್ಸ್ ಇಲ್ಲಿ ತಿಳಿಸಿದ್ದಾರೆ.

VISTARANEWS.COM


on

After Deepavali Skin Care
ಚಿತ್ರಕೃಪೆ: ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಅತ್ಯವಶ್ಯ. ಅದ್ಯಾಕೆ? ಎಂದು ಯೋಚಿಸುತ್ತಿದ್ದೀರಾ! ಹಬ್ಬದ ಸಂಭ್ರಮಕ್ಕಾಗಿ ಪ್ರತಿದಿನ ಹಚ್ಚಿದ ಗ್ರ್ಯಾಂಡ್‌ ಓವರ್‌ ಮೇಕಪ್‌, ಒಂದರ ಮೇಲೊಂದು ಸವಿದ ಸಿಹಿ ತಿಂಡಿ ಹಾಗೂ ಜಂಕ್‌ ಪದಾರ್ಥ ಸೇವನೆ ಎಲ್ಲವೂ ತ್ವಚೆಯನ್ನು ಡಲ್‌ ಆಗಿಸಬಹುದು. ಕೆಲವರಿಗೆ ಇದರಿಂದ ಮೊಡವೆ ಹಾಗೂ ಜಿಡ್ಡಿನಿಂದ ಚರ್ಮದ ಸಮಸ್ಯೆ ಎದುರಾಗಬಹುದು. ಇವೆಲ್ಲವನ್ನು ನಿಭಾಯಿಸಲು ಫೆಸ್ಟಿವ್‌ ಸೀಸನ್‌ ಮುಗಿದ ನಂತರ ಮುಖದ ಆರೈಕೆಯತ್ತ ಗಮನ ನೀಡುವುದು ಉತ್ತಮ. ಇದರಿಂದ ನಾನಾ ಸ್ಕಿನ್‌ ಸಮಸ್ಯೆಗಳಿಂದ ದೂರಾಗಿ, ಎಂದಿನಂತೆ ನವೋಲ್ಲಾಸದಿಂದ ಕಾಣುವ ತ್ವಚೆಯನ್ನು ತಮ್ಮದಾಗಿಸಿಕೊಳ್ಳಬಹುದು ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್ ಮಂಗಲಾ. ಇದಕ್ಕೆ ಪೂರಕ ಎಂಬಂತೆ ಅವರು 5 ಸಿಂಪಲ್‌ ಸಲಹೆ ನೀಡಿದ್ದು, ಪಾಲಿಸಿ ನೋಡಿ ಎಂದಿದ್ದಾರೆ.

Give the makeup a break first

ಮೊದಲು ಮೇಕಪ್‌ಗೆ ಬ್ರೇಕ್‌ ನೀಡಿ

ಪ್ರತಿದಿನ ಮೇಕಪ್‌ ಹಚ್ಚಿದ ಮುಖಕ್ಕೆ ಕೊಂಚ ಬ್ರೇಕ್ ಹಾಕಿ. ಮಾಯಿಶ್ಚರೈಸ್‌ ಮಾಡಿ. ಮುಖದ ತ್ವಚೆಗೆ ಉಸಿರಾಡಲು ಅವಕಾಶ ನೀಡಿ. ಬೇಕಿದ್ದಲ್ಲಿ ರಿಜುನುವೇಟ್‌ ಆಗಲು ಸಹಾಯ ಮಾಡುವ ಹೈಡ್ರೋ ಫೇಶಿಯಲ್‌ ಮಾಡಿಸಿ.

ಕ್ಲೆನ್ಸಿಂಗ್‌- ಟೋನಿಂಗ್‌-ಮಾಯಿಶ್ಚರೈಸಿಂಗ್

ಪ್ರತಿದಿನ ಕ್ಲೆನ್ಸಿಂಗ್‌-ಟೋನಿಂಗ್‌ ಹಾಗೂ ಮಾಯಿಶ್ಚರೈಸಿಂಗ್‌ ಮಾಡಿ. ಇದು ತ್ವಚೆಯನ್ನು ರಿಲ್ಯಾಕ್ಸ್‌ ಮಾಡುವುದರೊಂದಿಗೆ ಸ್ಕಿನ್‌ ಆರೋಗ್ಯ ಸುಧಾರಿಸುತ್ತದೆ.

Get a good night's sleep

ಕಣ್ತುಂಬ ನಿದ್ರೆ ಮಾಡಿ

ಹಬ್ಬದ ಗಡಿಬಿಡಿಯಲ್ಲಿ ಸಾಕಷ್ಟು ಜನ ನಿದ್ರೆ ಕಡಿಮೆ ಮಾಡುತ್ತಾರೆ. ಇದು ಮುಖದ ಮೇಲೆ ಎದ್ದು ಕಾಣದಂತೆ ಮಾಡಲು ಮೇಕಪ್‌ ಹಚ್ಚುತ್ತಾರೆ. ಆದರೆ. ಇದು ತಾತ್ಕಲಿಕ ಪರಿಹಾರ. ನ್ಯಾಚುರಲ್‌ ಆಗಿ ತ್ವಚೆ ಚೆನ್ನಾಗಿ ಕಾಣಲು ಕನಿಷ್ಠ 7-8 ಗಂಟೆಯಾದರೂ ಕಣ್ತುಂಬ ನಿದ್ರೆ ಮಾಡುವುದು ಅಗತ್ಯ. ಮಲಗಿದಾಗ ತ್ವಚೆಯ ರಿಜುನುವೆಟ್‌ಗೆ ಅಗತ್ಯವಿರುವ ಕೊಲಾಜೆನ್‌ ಉತ್ಪತ್ತಿಯಾಗುತ್ತದೆ.

ಶೀಟ್‌ ಮಾಸ್ಕ್‌ ಉಪಯೋಗಿಸಿ

ಇದೀಗ ಮಾರುಕಟ್ಟೆಯಲ್ಲಿ ಲಭ್ಯವಿರುವ ತ್ವಚೆಯ ಫ್ರೆಂಡ್ಲಿ ಹಾಗೂ ಅಗತ್ಯ ಪೌಷ್ಟಿಕಾಂಶಗಳನ್ನು ಪೂರೈಸುವ, ನಿಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವ ಶೀಟ್‌ ಮಾಸ್ಕ್‌ ಆಯ್ಕೆ ಮಾಡಿ ಬಳಸಿ. ಇದು ಮುಖವನ್ನು ಕಾಂತಿಯುಕ್ತಗೊಳಿಸುತ್ತದೆ.

Use a scrub

ಸ್ಕ್ರಬ್‌ ಬಳಸಿ

ಸ್ಕ್ರಬ್‌ ಬಳಕೆಯಿಂದ ಚರ್ಮದ ಮೇಲಿನ ಡೆಡ್‌ ಸ್ಕಿನ್‌ ಹೋಗುತ್ತದೆ. ಜೊತೆಗೆ ರಕ್ತ ಸಂಚಾರ ಸುಗಮವಾಗುತ್ತದೆ. ಹೋಮ್‌ ಮೇಡ್‌ ಸ್ಕ್ರಬ್‌ ಉತ್ತಮ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Deepavali Mens Fashion: ದೀಪಾವಳಿ ಹಬ್ಬದ ಮೆನ್ಸ್ ಟ್ರೆಡಿಷನಲ್‌ ಸ್ಟೈಲಿಂಗ್‌ಗೆ ಸಾಥ್‌ ನೀಡುವ ಎಥ್ನಿಕ್‌ವೇರ್ಸ್

Continue Reading

ದೀಪಾವಳಿ

ದೀಪಾವಳಿ ಆಚರಣೆ ವೇಳೆ ಹಿಂದುಗಳ ಮೇಲೆ ಖಲಿಸ್ತಾನಿಗಳ ದಾಳಿ; ಕಲ್ಲು ತೂರಿದ ಉಗ್ರರು!

ಕೆನಡಾದಲ್ಲಿ ಖಲಿಸ್ತಾನಿ ಉಗ್ರರು, ಪ್ರತ್ಯೇಕವಾದಿಗಳು ಇದಕ್ಕೂ ಮೊದಲು ಕೂಡ ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ. ಹಿಂದು ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ. ಈಗ ದೀಪಾವಳಿ ಆಚರಣೆ ವೇಳೆಯೂ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದಾರೆ.

VISTARANEWS.COM


on

Khalistani Attack
Koo

ಒಟ್ಟಾವ: ಕೆನಡಾದಲ್ಲಿ ಹಿಂದುಗಳ ಮೇಲೆ ಖಲಿಸ್ತಾನಿ ಉಗ್ರರು (Khalistani Terrorists), ಮೂಲಭೂತವಾದಿಗಳ ದಾಳಿ ಮುಂದುವರಿದಿದೆ. ಟೊರೊಂಟೊ ಹೊರವಲಯದ ಮಿಸ್ಸಿಸ್ಸೌಗ ಪಟ್ಟಣದಲ್ಲಿ ಹಿಂದುಗಳು ದೀಪಾವಳಿ (Deepavali 2023) ಆಚರಣೆ ಮಾಡುವ ವೇಳೆ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಮೇಲೆ ಕಲ್ಲು ತೂರಾಟ ಮಾಡುವ, ಖಲಿಸ್ತಾನಿ ಧ್ವಜ ಹಾರಿಸಿ ಉದ್ಧಟತನ ಮಾಡಿರುವ ವಿಡಿಯೊ (Viral Video) ಈಗ ಲಭ್ಯವಾಗಿದೆ.

ಕೆನಡಾದ ಟೊರೊಂಟೊ ಸೇರಿ ಹಲವೆಡೆ ಹಿಂದುಗಳು ಸಡಗರ-ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಆದರೆ, ಮಿಸ್ಸಿಸ್ಸೌಗ, ಬ್ರ್ಯಾಂಪ್ಟನ್‌ ಸೇರಿ ಕೆಲವೆಡೆ ಹಿಂದುಗಳು ಪಟಾಕಿ ಸಿಡಿಸಿ ದೀಪಾವಳಿ ಆಚರಣೆ ಮಾಡುವಾಗ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಆಚರಣೆಗೆ ಅಡ್ಡಿಪಡಿಸುವ ಜತೆಗೆ ಕಲ್ಲು ತೂರಾಟ ಮಾಡಿದ್ದಾರೆ. ಖಲಿಸ್ತಾನಿ ಧ್ವಜ ಹಾರಿಸಿದ ಅವರು ಭಾರತ ವಿರೋಧಿ ಘೋಷಣೆಗಳನ್ನೂ ಕೂಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ ಬಳಿಕ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಹಲವು ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಹಾಗೆಯೇ, ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡ ಇದೆ ಎಂದೆಲ್ಲ ಆರೋಪಿಸಿದ್ದಾರೆ. ಇದಕ್ಕೆಲ್ಲ ಸೊಪ್ಪು ಹಾಕದ ಭಾರತ ಸರ್ಕಾರವು ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕೆನಡಾದಲ್ಲಿ ಹಿಂದುಗಳ ಮೇಲೆ ದಾಳಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಸ್ಫೋಟಕ್ಕೆ ಸಂಚು; ಭಾರತ ಆಗ್ರಹಿಸಿದ ಬಳಿಕ ತನಿಖೆಗೆ ಕೆನಡಾ ಆದೇಶ

ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಪನ್ನುನ್‌ ಎಚ್ಚರಿಕೆ

ನವೆಂಬರ್‌ 19ರಂದು ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಎಚ್ಚರಿಕೆ ನೀಡಿದ್ದಾನೆ. ನವೆಂಬರ್‌ 4ರಂದು ಗುರುಪತ್ವಂತ್‌ ಸಿಂಗ್‌ ಪನ್ನುನ್‌ ವಿಡಿಯೊ ಪೋಸ್ಟ್‌ ಮಾಡಿದ್ದ. “ನವೆಂಬರ್‌ 19ರಂದು ಸಿಖ್ಖರು ಏರ್‌ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು.‌ ಅಂದು ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು” ಎಂದು ಹೇಳಿದ್ದ. ನವೆಂಬರ್‌ 19 ಇಂದಿರಾ ಗಾಂಧಿ ಜನ್ಮದಿನವಾದ ಕಾರಣ ಅಂದೇ ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದಿದ್ದಾನೆ. ಅಮೃತಸರದ ಸ್ವರ್ಣಮಂದಿರ ಹೊಕ್ಕಿದ್ದ ಉಗ್ರರ ವಿರುದ್ಧ ಇಂದಿರಾ ಗಾಂಧಿ ಅವರು ಆಪರೇಷನ್‌ ಬ್ಲ್ಯೂ ಸ್ಟಾರ್‌ಗೆ ಆದೇಶ ಮಾಡಿದ ಬಳಿಕ ಅವರು 1984ರಲ್ಲಿ ಹತ್ಯೆಗೀಡಾದರು. ಈಗ ಅವರ ಜನ್ಮದಿನದಂದೇ ಏರ್‌ ಇಂಡಿಯಾ ವಿಮಾನ ಸ್ಫೋಟಿಸಲು ಸಂಚು ರೂಪಿಸಲಾಗಿದೆ. ಭಾರತದ ಆಗ್ರಹದ ಬಳಿಕ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಕೆನಡಾ ತಿಳಿಸಿದೆ.

Continue Reading

ದೀಪಾವಳಿ

ಬ್ರಿಟನ್ ಪಿಎಂ ಕಚೇರಿಯಲ್ಲಿ ದೀಪಾವಳಿ! ಗಮನ ಸೆಳೆದ ಅಕ್ಷತಾ ಮೂರ್ತಿ ಉಡುಗೆ

Diwali 2023: ಬ್ರಿಟನ್ ಪಿಎಂ ಸರ್ಕಾರಿ ಅಧಿಕೃತ ನಿವಾಸದಲ್ಲಿ ಈ ಬಾರಿ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕದ ಅಳಿಯನಾಗಿರುವ ಬ್ರಿಟನ್ ಪಿಎಂ ರಿಷಿ ಸುನಕ್ ಹಾಗೂ ಅವರ ಪತ್ನಿ ಅಕ್ಷತಾ ಮೂರ್ತಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.

VISTARANEWS.COM


on

Diwali in British PM's office! Akshata Murthy fashionable dress caught attention
Koo

ಲಂಡನ್: ಬ್ರಿಟನ್ ಪ್ರಧಾನಿ ಅಧಿಕೃತ ಕಚೇರಿ ನಿವಾಸದಲ್ಲಿ (10 Downing Street) ಈ ಬಾರಿ ದೀಪಾವಳಿಯ ( Diwali 2023) ಕಲರವ ಮೇಳೈಸಿತ್ತು. ಪ್ರಧಾನಿ ರಿಷಿ ಸುನಕ್ (UK PM Rishi Sunak) ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಹಾಗೂ ಮಕ್ಕಳು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಅಕ್ಷತಾ ಅವರು ಯಾವಾಗಲೂ ಫ್ಯಾಶನೇಬಲ್ ಆಗಿರುತ್ತಾರೆ. ಈಗ ದೀಪಾವಳಿಯಂದು ಅವರ ಸಾಂಪ್ರದಾಯಿಕ ಉಡುಗೆ ಗಮನ ಸೆಳೆದಿದೆ. ಅಕ್ಷತಾ ಅವರು ಎಲೆಕ್ಟ್ರಿಕ್ ನೀಲಿ ಮೈಸೂರು ರೇಷ್ಮೆ ಸೀರೆಯಲ್ಲಿ ಸೊಗಸಾಗಿ ಕಾಣುತ್ತಿದ್ದರು. ಅವರು ಸೀರೆಯನ್ನು ಸೊಗಸಾಗಿ ಧರಿಸಿದ್ದರು. ಸೀರೆಯೊಂದಿಗೆ ಸಣ್ಣ ತೋಳಿನ ಕುಪ್ಪಸವನ್ನು ಧರಿಸಿದ್ದರು. ಸರಳವಾದ ಸೀರೆಯು ತೆಳುವಾದ ಚಿನ್ನದ ಅಂಚುಗಳನ್ನು ಪ್ರದರ್ಶಿಸಿತು ಮತ್ತು ಕುಪ್ಪಸವು ಹೂವಿನ ಮೋಟಿಫ್‌ಗಳನ್ನು ಒಳಗೊಂಡಿತ್ತು. ಅಕ್ಷತಾ ಒಂದು ಜೊತೆ ನೇತಾಡುವ ಕಿವಿಯೋಲೆಗಳು, ಗಂಡಬೇರುಂಡ ನೆಕ್ಲೇಸ್ ಮತ್ತು ಬಳೆಗಳನ್ನು ಧರಿಸಿದ್ದರು.

ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಯಾವಾಗಲೂ ಪ್ರೇಕ್ಷಕರ ಮೇಲೆ ಫ್ಯಾಶನ್ ಪ್ರಭಾವ ಬೀರಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆ ಅಥವಾ ಅಂತರಾಷ್ಟ್ರೀಯ ಶೃಂಗಸಭೆಗಳಿಗೆ ಆಕೆಯ ವಿಶಿಷ್ಟ ತೊಡುಗೆ, ಆಕೆಯ ಶೈಲಿ ಮತ್ತು ಸೊಬಗುಗೆ ಮಿತಿಯಿರಲಿಲ್ಲ.

ದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಅಕ್ಷತಾ ಮೂರ್ತಿ ಅವರ ವಾರ್ಡ್ರೋಬ್ ಆಯ್ಕೆಗಳು ಉನ್ನತ ದರ್ಜೆಯದ್ದಾಗಿದ್ದವು ಎಂಬುದು ಮನವರಿಕೆಯಾಗಿತ್ತು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ರಾಗಿ ಪ್ರದರ್ಶನಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಆಯೋಜಿಸಿದ್ದ ಜಿ20 ಸಂಗಾತಿಗಳ ಕಾರ್ಯಕ್ರಮಕ್ಕೆ ಮುದ್ರಿತ ನೀಲಕ ಮಿಡಿ ಉಡುಗೆಯನ್ನು ಆರಿಸಿಕೊಂಡಿದ್ದರು. ಉಡುಪಿನಲ್ಲಿ ಹೂವಿನ ಮುದ್ರಿತ ನಾಟಕೀಯ ಪಫ್ಡ್ ಸ್ಲೀವ್‌ಗಳು ಎ-ಲೈನ್ ಸಿಲೂಯೆಟ್ ಮತ್ತು ಭುಗಿಲೆದ್ದ ಕೆಳಭಾಗವನ್ನು ಒಳಗೊಂಡಿತ್ತು. ಇದು ಆಕರ್ಷಕವಾಗಿತ್ತು.

ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಕ್ಷತಾ ಮೂರ್ತಿ ಅವರು ತೊಡುಗೆ ಶೈಲಿಯ ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣಗೊಂಡಿದೆ. ಅಕ್ಷತಾ ಮೂರ್ತಿ ಅವರು ತಮ್ಮ ಫ್ಯಾಶನೇಬಲ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಬ್ರಿಟನ್ ಪ್ರಧಾನಿಯ ಮನೆಯಲ್ಲಿ ನಡೆದ ದೀಪಾವಳಿ ಹಬ್ಬದ ಆಚರಣೆಯು ವಾವ್ ಎನ್ನುವಂತಿತ್ತು. ಇದಕ್ಕೆ ಅಕ್ಷತಾ ಮೂರ್ತಿ ಅವರು ಉಡುಗೆ-ತೊಡುಗೆ ಕಳಶವಿಟ್ಟಂತೆ ಇತ್ತು ಎಂದು ಫ್ಯಾಶನ್ ಜಗತ್ತಿನ ತಜ್ಞರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: 75 ವರ್ಷದಲ್ಲೇ ಮೊದಲ ಬಾರಿಗೆ ಕಾಶ್ಮೀರದ ಶಾರದಾ ದೇವಿ ದೇಗುಲದಲ್ಲಿ ದೀಪಾವಳಿ ಆಚರಣೆ!

Continue Reading

ಕ್ರಿಕೆಟ್

KL Rahul: ಕನ್ನಡದಲ್ಲೇ ದೀಪಾವಳಿಯ ಶುಭ ಕೋರಿದ ಕೆ.ಎಲ್​ ರಾಹುಲ್​

ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ(diwali wishes) ಕೋರಿದ್ದಾರೆ.

VISTARANEWS.COM


on

kl rahul century celebration
Koo

ಬೆಂಗಳೂರು: ದೇಶಾದ್ಯಂತ ದೀಪಾವಳಿ(diwali 2023) ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲೆಲ್ಲೂ ಪಟಾಕಿ ಸದ್ದು ಕೇಳಿಸುತ್ತಿದೆ. ಕುಟುಂಬಸ್ಥರು, ಸಂಬಂಧಿಕರು, ಗೆಳೆಯರ ಜತೆ ಹಬ್ಬದ ಆಚರಣೆ ಭರ್ಜರಿಯಾಗಿದೆ. ಇದರ ಬೆನ್ನಲೇ ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಶುಭಾಶಯ(diwali wishes) ಕೋರಿದ್ದಾರೆ​. ಅದು ಕೂಡ ಕನ್ನಡದಲ್ಲೇ ಶುಭ ಕೋರಿ ಎಲ್ಲ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಅವರು ಶತಕ ಬಾರಿಸಿ ಸಂಭ್ರಮಿಸಿದ್ದರು. ತಮ್ಮ ಶತಕದ ಮತ್ತು ಪಂದ್ಯದ ಫೋಟೊಗಳನ್ನು ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಾಕಿ ‘ದೀಪಾವಳಿಯ ಶುಭಾಶಯಗಳು’ ಎಂದು ಬರೆದು ತಿವರ್ಣ ಧ್ವಜ ಮತ್ತು ಹಣತೆಯ ಎಮೋಜಿಯನ್ನು ಹಾಕಿದ್ದಾರೆ.

ದಾಖಲೆ ಬರೆದ ರಾಹುಲ್​

ನೆದರ್ಲೆಂಡ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಕೆ.ಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವೇಳೆ ಅವರು 2023 ರ (ಹಾಲಿ ಆವೃತ್ತಿಯ) ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆ ಅವರು ಮುರಿದರು.

ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸುವ ಹಾದಿಯಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್​ಗಳನ್ನು ಬಾರಿಸಿದರು, ಇದು ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಎರಡನೇ ಅತಿ ಹೆಚ್ಚು ಮೊತ್ತಕ್ಕೆ (410/4) ಮುನ್ನಡೆಸಿತು. ಇದು ರಾಹುಲ್ ಅವರ ಆರನೇ ಏಕದಿನ ಶತಕವಾಗಿದೆ. ಭಾರತದ 5ನೇ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಜೊತೆಗೂಡಿ 208 ರನ್​ಗಳ ಜೊತೆಯಾಟವಾಡಿದ್ದು, ಇದು ಏಕದಿನ ವಿಶ್ವಕಪ್​​ನಲ್ಲಿ ನಾಲ್ಕನೇ ವಿಕೆಟ್​ಗೆ ಅತಿ ಹೆಚ್ಚು ರನ್​ಗಳ ಜೊತೆಯಾಟದ ದಾಖಲೆಯಾಗಿದೆ.

ಇದನ್ನೂ ಓದಿ MS Dhoni: ಧೋನಿ ಕುಟುಂಬದೊಂದಿಗೆ ದೀಪಾವಳಿ ಆಚರಿಸಿದ ರಿಷಭ್​ ಪಂತ್​

ತವರಿನ ಅಂಗಳದಲ್ಲಿ ರಾಹುಲ್ ಅವರು ಪ್ರಚಂಡ ಬ್ಯಾಟಿಂಗ್​ ತೋರ್ಪಡಿಸುವ ಮೂಲಕ ನೆರೆದಿದ್ದ ತವರಿನ ಅಭಿಮಾನಿಗಳಿಗೆ ಭರಪೂರ ರಂಚನೆ ನೀಡಿದರು. ಬ್ಯಾಟಿಂಗ್​ ಮಾತ್ರವಲ್ಲದೆ ಕೀಪಿಂಗ್​ನಲ್ಲಿಯೂ ಮಿಂಚಿದ ಅವರು 2 ಅದ್ಭುತ ಕ್ಯಾಚ್​ಗಳನ್ನು ಕೂಡ ಹಿಡಿದು ಮಿಂಚಿದರು.

ಜತೆಯಾಟದಲ್ಲಿಯೂ ದಾಖಲೆ ಬರೆದ ರಾಹುಲ್​

ಈ ಪಂದ್ಯದಲ್ಲಿ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡದ ಪರವಾಗಿ ನಾಲ್ಕನೇ ಅತ್ಯಧಿಕ ರನ್​ಗಳ ಜತೆಯಾಟ ನಡೆಸಿ ದಾಖಲೆಯ ಬರೆದರು. ಉಭಯ ಆಟಗಾರರು ನಾಲ್ಕನೇ ವಿಕೆಟ್​ಗೆ 208 ರನ್​ಗಳ ಜತೆಯಾಟ ನೀಡಿದರು. ಈ ಮೂಕಲ ವಿಶ್ವಕಪ್​ನಲ್ಲಿ ನಾಲ್ಕನೇ ವಿಕೆಟ್ ಅಥವಾ ಅದಕ್ಕಿಂತ ಕಡಿಮೆ ವಿಕೆಟ್​ಗೆ ಭಾರತದ ಅತ್ಯಧಿಕ ಜತೆಯಾಟ ನಡೆಸಿದ ದಾಖಲೆ ನಿರ್ಮಿಸಿದರು.

Continue Reading
Advertisement
srinivasa prasad
ಪ್ರಮುಖ ಸುದ್ದಿ2 mins ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ10 mins ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ33 mins ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ36 mins ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ1 hour ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ2 hours ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ7 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ8 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು8 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202415 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202417 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202419 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202419 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ22 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌