Ganesh Chaturthi Recipes: ಈ 5 ತಿನಿಸುಗಳು ಗಣಪತಿಗೆ ತುಂಬಾ ಇಷ್ಟ; ಹೀಗೆ ಸುಲಭವಾಗಿ ತಯಾರಿಸಿ - Vistara News

ಗಣೇಶ ಚತುರ್ಥಿ

Ganesh Chaturthi Recipes: ಈ 5 ತಿನಿಸುಗಳು ಗಣಪತಿಗೆ ತುಂಬಾ ಇಷ್ಟ; ಹೀಗೆ ಸುಲಭವಾಗಿ ತಯಾರಿಸಿ

ತಿಂಡಿ ಪ್ರಿಯ ಗಣಪನಿಗೆ (Ganesh Chaturthi Recipes) ನೈವೇದ್ಯಕ್ಕೆ ಇಡುವುದಕ್ಕೆ ಏನೇನು ತಿಂಡಿ ಮಾಡಬಹುದು? ಗಣಪತಿಗೆ ಇಷ್ಟವಾದ 5 ತಿನಿಸುಗಳನ್ನು ತಯಾರಿಸುವ ವಿಧಾನ ಇಲ್ಲಿದೆ.

VISTARANEWS.COM


on

Idol of Lord Ganesha with Modak Sweet Dish and Flower. Ganesh Chaturthi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಣಪತಿ ಹಬ್ಬಕ್ಕೆ (Ganesh Chaturthi Recipes) ದಿನಗಣನೆ ಆರಂಭವಾಗಿದೆ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಗಣಪತಿಗೆ ಪೂಜೆ ಮಾಡುವುದಕ್ಕೆಂದು ಭರದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ತಿಂಡಿ ಪ್ರಿಯ ಗಣಪನಿಗೆ ನೈವೇದ್ಯಕ್ಕೆ ಇಡುವುದಕ್ಕೆ ಏನೇನು ತಿಂಡಿ ಮಾಡಬೇಕು ಎನ್ನುವ ಯೋಚನೆಯನ್ನು ಈಗಾಗಲೇ ಹೆಣ್ಣುಮಕ್ಕಳು ಮಾಡಲಾರಂಭಿಸಿದ್ದಾರೆ. ಗಣಪತಿ ಹಬ್ಬಕ್ಕೆ ಮಾಡಬಹುದಾದ ಐದು ವಿಶೇಷ ಖಾದ್ಯಗಳ ರೆಸಿಪಿಗಳು ಇಲ್ಲಿವೆ ನಿಮಗಾಗಿ.

Modak- a traditional dish made on Ganpati festival in India

ಮೋದಕ

ಗಣಪ ಮೋದಕ ಪ್ರಿಯ. ಗಣಪತಿ ಹಬ್ಬವೆಂದ ಮೇಲೆ ಅಲ್ಲಿ ಮೋದಕವಿರಲೇಬೇಕು. ಆ ಮೋದಕವನ್ನು ಮಾಡುವ ಬಗೆ ಇಲ್ಲಿದೆ ನೋಡಿ.
ಬೇಕಾಗುವ ಪದಾರ್ಥಗಳು:
ಸ್ಟಫಿಂಗ್‌ಗೆ:
1 ಚಮಚ ತುಪ್ಪ
2 ಕಪ್ ತುರಿದ ತೆಂಗಿನಕಾಯಿ
1 ಕಪ್ ಬೆಲ್ಲ
1/2 ಚಮಚ ಏಲಕ್ಕಿ ಪುಡಿ
ಹಿಟ್ಟಿಗೆ:
2 ಕಪ್ ನೀರು
1/2 ಚಮಚ ಉಪ್ಪು
1 ಚಮಚ ತುಪ್ಪ
2 ಕಪ್ ಅಕ್ಕಿ ಹಿಟ್ಟು
ಸ್ಟಫಿಂಗ್ ಮಾಡುವುದು:

  • ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 1 ಚಮಚ ತುಪ್ಪವನ್ನು ಬಿಸಿ ಮಾಡಿ, ಅದಕ್ಕೆ 2 ಕಪ್ ತೆಂಗಿನಕಾಯಿ ಸೇರಿಸಿ.
  • ತೆಂಗಿನಕಾಯಿ ಪರಿಮಳ ಬರುವವರೆಗೆ ಹುರಿದುಕೊಳ್ಳಿ.
  • ಅದಕ್ಕೆ 1 ಕಪ್ ಬೆಲ್ಲ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
  • ಬೆಲ್ಲ ಕರಗುವ ತನಕ ಮಧ್ಯಮ ಉರಿಯಲ್ಲಿ ಬೇಯಿಸಿ.
  • ಮಿಶ್ರಣ ಚೆನ್ನಾಗಿ ದಪ್ಪವಾಗುವವರೆಗೆ ಬೇಯಿಸಿ, ಅದಕ್ಕೆ 1/2 ಚಮಚ ಏಲಕ್ಕಿ ಪುಡಿ ಹಾಕಿ ಕಲಸಿಡಿ.
    ಮೋದಕ ಹಿಟ್ಟಿನ ತಯಾರಿಕೆ:
  • ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 2 ಕಪ್ ನೀರು, 1/2 ಚಮಚ ಉಪ್ಪು ಮತ್ತು 1 ಚಮಚ ತುಪ್ಪ ತೆಗೆದುಕೊಳ್ಳಿ.
  • ಚೆನ್ನಾಗಿ ಮಿಶ್ರಣ ಮಾಡಿ ಮತ್ತು ನೀರನ್ನು ಕುದಿಸಿ.
  • ಅದಕ್ಕೆ 2 ಕಪ್ ಅಕ್ಕಿ ಹಿಟ್ಟು ಸೇರಿಸಿ ಮತ್ತು ನಿಧಾನವಾಗಿ ಮಿಶ್ರಣ ಮಾಡಿ.
  • ಅಕ್ಕಿ ಹಿಟ್ಟು ಎಲ್ಲಾ ನೀರನ್ನು ಹೀರಿಕೊಳ್ಳುವವರೆಗೆ ಮಿಶ್ರಣ ಮಾಡಿ. ಅದಾದ ನಂತರ ಐದು ನಿಮಿಷಗಳ ಕಾಲ ಅದನ್ನು ತಣ್ಣಗಾಗಲು ಬಿಡಿ.
  • ಹಿಟ್ಟನ್ನು ದೊಡ್ಡ ಬಟ್ಟಲಿಗೆ ವರ್ಗಾಯಿಸಿ, ನಾದಲು ಪ್ರಾರಂಭಿಸಿ. 5 ನಿಮಿಷಗಳ ಕಾಲ ಅಥವಾ ಹಿಟ್ಟು ಮೃದುವಾಗುವವರೆಗೆ ನಾದಿಕೊಳ್ಳಿ.
  • ಚೆಂಡಿನ ಗಾತ್ರದ ಅಕ್ಕಿ ಹಿಟ್ಟಿನ ಹಿಟ್ಟನ್ನು ತೆಗೆದುಕೊಂಡು ಅದನ್ನು ಚಪ್ಪಟೆ ಮಾಡಿ. ನೀವು ತಯಾರಿಸಿಟ್ಟುಕೊಂಡ ಸ್ಟಫಿಂಗ್‌ ಅನ್ನು ಒಂದು ಅದರೊಳಗೆ ಹಾಕಿ ಎಲ್ಲ ಬದಿಗಳಿಂದ ಅದನ್ನು ಮೋದಕದ ಆಕಾರದಲ್ಲಿ ಒತ್ತಿರಿ.
  • ಇಡ್ಲಿ ಪಾತ್ರೆಯಲ್ಲಿ ಇಡ್ಲಿ ಬೇಯಿಸುವ ರೀತಿಯಲ್ಲಿ ಹತ್ತು ನಿಮಿಷಗಳ ಕಾಲ ಮೋದಕವನ್ನು ಬೇಯಿಸಿ.
Sheera

ಶೀರಾ

ಬೇಕಾಗುವ ಪದಾರ್ಥಗಳು
2 ಚಮಚ ತುಪ್ಪ
ಸ್ವಲ್ಪ ಗೋಡಂಬಿ ಮತ್ತು ಒಣದ್ರಾಕ್ಷಿ
1/2 ಕಪ್ ರವೆ
ಒಂದೂವರೆ ಕಪ್ ನೀರು
1/2 ಕಪ್ ಸಕ್ಕರೆ
1/4 ಕಪ್ ತುಪ್ಪ
ಆಹಾರ ಬಣ್ಣ
1/2 ಚಮಚ ಏಲಕ್ಕಿ ಪುಡಿ
ಮಾಡುವ ವಿಧಾನ:

  • ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ, ಗೋಡಂಬಿ, ಒಣ ದ್ರಾಕ್ಷಿಯನ್ನು ಕಡಿಮೆ ಉರಿಯಲ್ಲಿ ಹುರಿಯಿರಿ.
  • ಅದು ಚಿನ್ನದ ಕಂದು ಬಣ್ಣಕ್ಕೆ ತಿರುಗಿದ ನಂತರ, ಪಕ್ಕಕ್ಕೆ ಇರಿಸಿ.
  • ಉಳಿದ ತುಪ್ಪದಲ್ಲಿ 1/2 ಕಪ್ ರವೆ ಸೇರಿಸಿ, ಕಡಿಮೆ ಉರಿಯಲ್ಲಿ 5 ನಿಮಿಷಗಳ ಕಾಲ ಹುರಿಯಿರಿ. ನಂತರ ಪಕ್ಕಕ್ಕೆ ಇರಿಸಿ.
  • ದೊಡ್ಡ ಕಡಾಯಿಯಲ್ಲಿ ಒಂದೂವರೆ ಕಪ್ ನೀರನ್ನು ಹಾಕಿ, ಕುದಿಸಿ.
  • ಅದಕ್ಕೆ ಹುರಿದ ರವೆ ಸೇರಿಸಿ ನಿಧಾನವಾಗಿ ಮಿಶ್ರಣ ಮಾಡಿ.
  • ರವೆ ಎಲ್ಲಾ ನೀರನ್ನು ಹೀರಿಕೊಳ್ಳುವ ತನಕ ಬೇಯಿಸಿ.
  • ರವೆ ನೀರನ್ನು ಹೀರಿಕೊಂಡ ನಂತರ 1/2 ಕಪ್ ಸಕ್ಕರೆ ಸೇರಿಸಿ, ಮಿಶ್ರಣ ಮಾಡಿ.
  • ಸಕ್ಕರೆ ಕರಗಿದ ನಂತರ 1/4 ಕಪ್ ತುಪ್ಪ ಮತ್ತು ಆಹಾರ ಬಣ್ಣವನ್ನು ಸೇರಿಸಿ. (ಆಹಾರ ಬಣ್ಣ ಬಳಸದೆಯೂ ಶೀರಾ ಮಾಡಬಹುದು)
  • ಐದು ನಿಮಿಷಗಳ ಕಾಲ ಚೆನ್ನಾಗಿ ಹುರಿಯಿರಿ.
  • ನಂತರ ಹುರಿದ ಗೋಡಂಬಿ, ಒಣದ್ರಾಕ್ಷಿ ಮತ್ತು ½ ಟೀಸ್ಪೂನ್ ಏಲಕ್ಕಿ ಪುಡಿಯನ್ನು ಸೇರಿಸಿ.
Puran Poli

ಹೋಳಿಗೆ

ಬೇಕಾಗುವ ಪದಾರ್ಥಗಳು
ಕಣಕಕ್ಕೆ:
1/2 ಕಪ್‌ ಮೈದಾ ಹಿಟ್ಟು ಅಥವಾ ಒಂದು ಕಪ್‌ ಗೋಧಿ ಹಿಟ್ಟು
1/4 ಕಪ್‌ ನೀರು
ರುಚಿಗೆ ತಕ್ಕಷ್ಟು ಉಪ್ಪು
ಚಿಟಿಕೆ ಅರಿಶಿಣ
3 ಚಮಚ ಅಡುಗೆ ಎಣ್ಣೆ

ಹೂರಣಕ್ಕೆ
1/2 ಕಪ್‌ ಕಡ್ಲೆಬೇಳೆ
1/2 ಕಪ್‌ ಬೆಲ್ಲ
2 ಚಮಚ ತೆಂಗಿನ ತುರಿ
ಸ್ವಲ್ಪ ಏಲಕ್ಕಿ

ಮಾಡುವ ವಿಧಾನ

  • ಒಂದು ಪಾತ್ರೆಯಲ್ಲಿ ಮೈದಾ ಹಿಟ್ಟು, ಉಪ್ಪು, ಅರಿಶಿಣ ಹಾಕಿ.
  • ಸ್ವಲ್ಪಸ್ವಲ್ಪವೇ ನೀರು ಹಾಕುತ್ತ ಚಪಾತಿ ಹಿಟ್ಟಿಗಿಂತ ಮೃದುವಾಗಿ ಕಲಸಿಟ್ಟುಕೊಳ್ಳಿ.
  • ಮೇಲಿನಿಂದ ಸ್ವಲ್ಪ ಎಣ್ಣೆ ಸುರಿದು, 30 ನಿಮಿಷಗಳ ಕಾಲ ಅದನ್ನು ತೆಗೆದಿಡಿ.
  • ಹೂರಣ ತಯಾರಿಸಲು ಬೇಳೆಯನ್ನು ತೊಳೆದು ಅದಕ್ಕೆ ಎರಡು ಪಟ್ಟು ನೀರು ಸೇರಿಸಿ ಬೇಯಿಸಿಕೊಳ್ಳಿ. (೩-೪ ವಿಷಲ್‌ ಬರಿಸಿಕೊಂಡರೆ ಸಾಕು)
  • ಬೇಯಿಸಿದ ಬೇಳೆಯ ನೀರು ಬಸಿದು, ಆ ನೀರಿನಿಂದ ಸಾರು ಮಾಡಬಹುದು.
  • ಬೇಯಿಸಿದ ಬೇಳೆಗೆ ತೆಂಗಿನ ತುರಿ(ಅವಶ್ಯಕಗೆ ಇದ್ದರೆ), ಪುಡಿ ಮಾಡಿದ ಬೆಲ್ಲ ಮತ್ತು ಏಲಕ್ಕಿ ಪುಡಿ ಹಾಕಿ ಕಲಿಸಿ.
  • ಮಿಶ್ರಣವನ್ನು ಅರಿದು, ಅದನ್ನು ಬಾಣಲೆ ಮೇಲಿಟ್ಟು ಸ್ವಲ್ಪ ಗಟ್ಟಿಯಾಗುವವರೆಗೆ ಹುರಿಯಿರಿ.
  • ಹೂರಣವನ್ನು ನಿಂಬೆ ಹಣ್ಣಿನ ಗಾತ್ರದಲ್ಲಿ ಉಂಡೆ ಮಾಡಿಟ್ಟುಕೊಳ್ಳಿ.
  • ನಾದಿಟ್ಟುಕೊಂಡಿದ್ದ ಹಿಟ್ಟನ್ನು ಉಂಡೆ ಮಾಡಿ, ಅದನ್ನು ಚಪ್ಪಟೆ ಮಾಡಿ ಅದರೊಳಗೆ ಹೂರಣದ ಉಂಡೆ ಇಟ್ಟು ನಾದಿದ ಹಿಟ್ಟಿನಿಂದ ಮುಚ್ಚಿ.
  • ಅದನ್ನು ತೆಳುವಾಗಿ ಲಟ್ಟಿಸಿ, ಕಾವಲಿಗೆ ಹಾಕಿ ಚಪಾತಿಯಂತೆ ಕಾಯಿಸಿ.
Rave unde

ರವೆ ಉಂಡೆ

ಬೇಕಾಗುವ ಸಾಮಾಗ್ರಿಗಳು
1 ಕಪ್‌ ಚಿರೋಟಿ ರವೆ
1 ಕಪ್ ಒಣಕೊಬ್ಬರಿ
ಸ್ವಲ್ಪ ಗೋಡಂಬಿ ಮತ್ತು ಒಣದ್ರಾಕ್ಷಿ
ಸ್ವಲ್ಪ ಏಲಕ್ಕಿ
1 ಕಪ್ ಸಕ್ಕರೆ
1 ಕಪ್ ಹಾಲು
1 ಕಪ್ ತುಪ್ಪ

ಮಾಡುವ ವಿಧಾನ

  • ಮೊದಲಿಗೆ ಚಿರೋಟಿ ರವೆಯನ್ನು ಸಣ್ಣ ಉರಿಯಲ್ಲಿ ತುಪ್ಪ ಹಾಕಿ ಚೆನ್ನಾಗಿ ಹುರಿಯಿರಿ.
  • ಒಣಕೊಬ್ಬರಿಯನ್ನು ಮಿಕ್ಸಿಯಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ.
  • ದ್ರಾಕ್ಷಿ ಮತ್ತು ಗೋಡಂಬಿಯನ್ನು ತುಪ್ಪದಲ್ಲಿ ಹಾಕಿ ಹುರಿದಿಟ್ಟುಕೊಳ್ಳಿ.
  • ರವೆ ಬಿಸಿ ಇರುವಾಗಲೇ ಅದಕ್ಕೆ ಕೊಬ್ಬರಿ ಪುಡಿ, ದ್ರಾಕ್ಷಿ, ಗೋಡಂಬಿ, ಪುಡಿ ಮಾಡಿದ ಸಕ್ಕರೆ, ಎಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ.
  • ನಂತರ ಬಿಸಿ ಮಾಡಿದ ಹಾಲನ್ನು ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲೆಸಿ. ರವೆ ಗಟ್ಟಿಯಾಗುವ ತನಕ ಕಲಸಿ ನಂತರ ಅದನ್ನು ಉಂಡೆಯಾಕಾರದಲ್ಲಿ ಕಟ್ಟಿಡಿ.
sweet seviyan kheer or Payasam, payasa, ksheeram, fereni

ಪಾಯಸ

ಬೇಕಾಗುವ ಪದಾರ್ಥಗಳು
150 ಗ್ರಾಂ ಶಾವಿಗೆ
ಅರ್ಧ ಲೀಟರ್ ಹಾಲು
ಒಂದು ಕಪ್ ಸಕ್ಕರೆ
4 ಚಮಚ ತುಪ್ಪ
ಸ್ವಲ್ಪ ಏಲಕ್ಕಿ ಪುಡಿ
ಸ್ವಲ್ಪ ಹಾಲಿನಲ್ಲಿ ನೆನೆಸಿದ ಕೇಸರಿ ಎಳೆಗಳು
ಸ್ವಲ್ಪ ಗೋಡಂಬಿ, ಒಣದ್ರಾಕ್ಷಿ, ಬಾದಾಮಿ

ಮಾಡುವ ವಿಧಾನ

  • ಬಾಣಲಿಯೊಂದಕ್ಕೆ ಎರಡು ಚಮಚದಷ್ಟು ತುಪ್ಪ ಹಾಕಿ, ಅದಕ್ಕೆ ಗೋಡಂಬಿ, ದ್ರಾಕ್ಷಿ ಮತ್ತು ಬಾದಾಮಿಯನ್ನು ಹಾಕಿ ಹುರಿದು, ತೆಗೆದಿಟ್ಟುಕೊಳ್ಳಿ.
  • ಬಾಣಲಿಯಲ್ಲಿ ಉಳಿದ ತುಪ್ಪಕ್ಕೆ ಶಾವಿಗೆಯನ್ನು ಹಾಕಿ ಹುರಿದುಕೊಳ್ಳಿ.
  • ಶಾವಿಗೆ ಹುರಿದ ನಂತರ ಅದಕ್ಕೆ ಅರ್ಧ ಲೀಟರ್‌ ಹಾಲನ್ನು ಸೇರಿಸಿ.
  • ಅವೆರೆಡು ಕುದಿಯುತ್ತಿರುವಾಗ ಅದಕ್ಕೆ ಸಕ್ಕರೆಯನ್ನು ಸೇರಿಸಿ ಕೆಲಸ ಕಾಲ ಅದನ್ನು ಬೇಯುವುದಕ್ಕೆ ಬಿಡಿ.
  • ನಂತರ ಅದಕ್ಕೆ ಹುರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಮತ್ತು ಏಲಕ್ಕಿ ಪುಡಿಯನ್ನು ಹಾಕಿ. ಹಾಗೆಯೇ ಎರಡು ಚಮಚ ತುಪ್ಪ ಸೇರಿಸಿ ಗ್ಯಾಸ್‌ ಆಫ್‌ ಮಾಡಿ.

ಇದನ್ನೂ ಓದಿ: Ganesh Chaturthi: ಪರಿಸರ ಪ್ರೇಮಿಗಳಿಗಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಇಕೋ ಫ್ರೆಂಡ್ಲಿ ಗೌರಿ-ಗಣೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        Prajwal Revanna Case These are the questions SIT will ask Prajwal
        ಕ್ರೈಂ6 mins ago

        Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

        Narendra Modi
        ದೇಶ18 mins ago

        Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

        gold rate today
        ಚಿನ್ನದ ದರ22 mins ago

        Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

        Self Harming
        ಕಲಬುರಗಿ25 mins ago

        Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

        Bhoomi Shetty African braids Look style
        ಸಿನಿಮಾ40 mins ago

        Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

        prajwal revanna case lookout notice
        ಕ್ರೈಂ44 mins ago

        Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

        School Jobs Scam
        Lok Sabha Election 202452 mins ago

        School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

        elephant attack
        ಬೆಂಗಳೂರು ಗ್ರಾಮಾಂತರ52 mins ago

        Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

        Delhi Lieutenant Governor
        ದೇಶ1 hour ago

        Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

        Prajwal Revanna Case Application seeking exemption from appearing before SIT rejected
        ಕ್ರೈಂ1 hour ago

        Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

        Sharmitha Gowda in bikini
        ಕಿರುತೆರೆ7 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ7 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ5 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ7 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ6 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ5 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ5 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Dina Bhavishya
        ಭವಿಷ್ಯ8 hours ago

        Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

        dina bhavishya read your daily horoscope predictions for April 30 2024
        ಭವಿಷ್ಯ2 days ago

        Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

        PM Narendra modi in Bagalakote and Attack on Congress
        Lok Sabha Election 20243 days ago

        PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

        PM Narendra modi in Bagalakote for Election Campaign and here is Live telecast
        Lok Sabha Election 20243 days ago

        PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

        dina bhavishya read your daily horoscope predictions for April 29 2024
        ಭವಿಷ್ಯ3 days ago

        Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

        Narendra Modi
        Lok Sabha Election 20244 days ago

        PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

        PM Narendra Modi in Sirsi
        Lok Sabha Election 20244 days ago

        PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

        If Congress comes to power all your assets will belong to Government says PM Narendra Modi
        Lok Sabha Election 20244 days ago

        Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

        Congress ties with Aurangzeb supporters and Girls killed under his rule says Narendra Modi
        Lok Sabha Election 20244 days ago

        Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

        Modi in Karnataka stay in Belagavi tomorrow and Huge gatherings at five places
        Latest4 days ago

        Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

        ಟ್ರೆಂಡಿಂಗ್‌