Ganesh Chaturthi: ಗಣಪ ನಮಗೇಕೆ ಇಷ್ಟು ಆಪ್ತ? - Vistara News

ಗಣೇಶ ಚತುರ್ಥಿ

Ganesh Chaturthi: ಗಣಪ ನಮಗೇಕೆ ಇಷ್ಟು ಆಪ್ತ?

ಈ ದೇವರು ನಮಗೆ ಆಪ್ತರಾಗುವುದು ಹೇಗೆ? ದೇವರೆಂಬ ಭಯ ನಮ್ಮ ಮನದಲ್ಲಿ ನಿಲ್ಲದಂತೆ ಆತನೇ ನಿವಾರಿಸಿಕೊಳ್ಳಬೇಕೆ ಅಥವಾ ಅದು ನಮ್ಮ ಕೆಲಸವೇ? ಖುಷಿ ಕೊಡುವ ಈ ಲೇಖನವನ್ನು ಗಣೇಶ ಹಬ್ಬದ (Ganesh Chaturthi) ಸಂದರ್ಭದಲ್ಲಿ ಓದಿ.

VISTARANEWS.COM


on

Ganesha idol
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲಕಾ ಕೆ

ಗಣಪತಿಯನ್ನು (Ganesh Chaturthi) ನಾನಾ ಹೆಸರುಗಳಿಂದ ಕೊಂಡಾಡುತ್ತಾ, ಆತನ ಆಗಮನಕ್ಕೆ ಥರಾವರಿಯಾಗಿ ಸಿದ್ಧತೆ ನಡೆಸಿದ್ದೇವೆ. ಹೊಸ ಬಟ್ಟೆ-ಬಾಗಿನಗಳಿಂದ ಹಿಡಿದು, ಕಡುಬು-ಕಜ್ಜಾಯ, ಮಂತ್ರ-ಪುಷ್ಪಗಳವರೆಗೆ ಸಕಲ ಸಡಗರವನ್ನೂ ಮಾಡಿಕೊಂಡು ಭಾದ್ರಪದ ಚೌತಿಯನ್ನು ಎದುರು ನೋಡುತ್ತೇವೆ. ಆದರೆ ನಮಗೇಕೆ ಗಣಪಣ್ಣನ ಮೇಲೆ ಇಷ್ಟೊಂದು ಅಕ್ಕರೆ?
ಈ ದೇವರು ನಮಗೆ ಆಪ್ತರಾಗುವುದು ಹೇಗೆ? ದೇವರೆಂಬ ಭಯ ನಮ್ಮ ಮನದಲ್ಲಿ ನಿಲ್ಲದಂತೆ ಆತನೇ ನಿವಾರಿಸಿಕೊಳ್ಳಬೇಕೆ ಅಥವಾ ಅದು ನಮ್ಮ ಕೆಲಸವೇ? ದೇವರೆಂಬ ಕಲ್ಪನೆ ಹುಟ್ಟಿದಾರಭ್ಯ ಇಂದಿನವರೆಗೆ ಒಂದೇ ರೀತಿಯಲ್ಲಿದ್ದಿದ್ದರೆ ಹಿಮಾಲಯದಂತೆ ತಣ್ಣಗೆ, ಎತ್ತರಕ್ಕೆ, ದೂರವಾಗಿಯೇ ಇರುತ್ತಿತ್ತೇನೋ. ಹಾಗಾಗದೆ ಯುಗಧರ್ಮಕ್ಕೆ ತಕ್ಕ ಅವತಾರಗಳನ್ನು ತಾಳಿದ್ದಕ್ಕೆ, ಕಥೆಗಳನ್ನು ಸೃಷ್ಟಿಸಿಕೊಂಡಿದ್ದಕ್ಕೆ, ಭೌಗೋಳಿಕ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು, ಸಾಂಸ್ಕೃತಿಕವಾಗಿ ಸಂಪನ್ನತೆಯನ್ನು ಗಳಿಸಿ, ಜನಮಾನಸದಲ್ಲಿ ಬೇರೂರುವುದಕ್ಕೆ ಸಾಧ್ಯವಾಯಿತು. ಸರಳವಾಗಿ ಅಗಲ ಕಿವಿ, ಉದ್ದ ಮೂಗು, ಡೊಳ್ಳು ಹೊಟ್ಟೆ- ಇಷ್ಟು ಬರೆದರೆ ಸಾಕು, ಪ್ರಥಮ ಪೂಜಿತ ಸಿದ್ಧ! ಭಗವಂತನ ಈ ನಮ್ಯತೆಯೇ ಸಾಕು ಜನರಲ್ಲಿ ಆತನ ಬಗ್ಗೆ ವಿನಮ್ರತೆ ಮೂಡಿಸುವುದಕ್ಕೆ. ಈ ಹಿನ್ನೆಲೆಯಲ್ಲಿ, ಗಣಾಧಿಪನೂ, ಗುಣಾಧಿಪನೂ ಆದ ಪ್ರಣವನ ಒಂದಿಷ್ಟು ಪ್ರವರಗಳು ಇಲ್ಲಿವೆ.

Ganesha with Diwali Lights

ಈತ ಶ್ರಮಜೀವಿಗಳ ದೇವ

ಗಣಪತಿ ಎಂದರೆ ವಿಘ್ನ ವಿನಾಶಕ, ಪ್ರಥಮ ವಂದಿತ, ವಿದ್ಯೆ, ನಾಟ್ಯ, ಸಂಗೀತಗಳಿಗೆ ಅಧಿದೇವತೆ, ಸಿದ್ಧಿ ಪ್ರದಾಯಕ, ಯೋಗಿಗಳ ಪಾಲಿಗೆ ಮೂಲಾಧಾರ ಚಕ್ರದ ಮೂಲದೈವ, ವ್ಯಾಸರ ಪಾಲಿಗೆ ಮಹಾಕಾವ್ಯ ಸಂಪಾದಕ, ಸಾರ್ವಜನಿಕ ಗಣೇಶೋತ್ಸವಗಳ ಮೂಲಕ ಸಮಾಜ ಸಂಘಟನೆಯ ಮೂಲ ಪುರುಷ… ಇತ್ಯಾದಿ ಬಹಳಷ್ಟು ವಿಶೇಷಣಗಳುಂಟು. ಅವೆಲ್ಲವನ್ನೂ ಮೀರಿ ಗಣಪತಿಯನ್ನು ಧಾನ್ಯಾಧಿದೇವತೆ, ಕೃಷಿದೇವತೆ, ಕಷ್ಟಸಹಿಷ್ಣುಗಳ ಭಗವಂತ ಎಂಬಂತೆಯೂ ವರ್ಣಿಸಲಾಗುತ್ತದೆ. ಮನುವಿನದ್ದು ಎನ್ನಲಾಗುವ ಶ್ಲೋಕವೊಂದು ಗಣಪತಿಯ ಬಗ್ಗೆ ಹೇಳುವುದು ಹೀಗೆ-
ವಿಪ್ರಾಣಾಂ ದೈವತಂ ಶಂಭುಃ
ಕ್ಷತ್ರಿಯಾಣಾಂ ತು ಮಾಧವಃ
ವೈಶ್ಯಾಣಾಂ ತು ಭವೇತ್‌ ಬ್ರಹ್ಮಾ
ಶೂದ್ರಾಣಾಂ ಗಣನಾಯಕಃ

ಗಣಪತಿಯ ಹುಟ್ಟಿನ ಕಥೆಗಳನ್ನು ಕೇಳಿದರೆ ಈತನನ್ನು ಶ್ರಮಜೀವಿಗಳ ದೇವ ಎಂದರೆ ತಪ್ಪೇನಿಲ್ಲ. ತಾಯ ಬಸಿರಿನಿಂದ ಬಾರದೆ, ತಾಯಿ ಮೈಯ ಬೆವರು-ಮಣ್ಣಿನಿಂದ ಸೃಷ್ಟಿಗೊಂಡವ ಎಂಬುದು ಪ್ರಧಾನವಾಗಿ ಗಣಪತಿಯ ಜನನದ ಬಗ್ಗೆ ಪ್ರಚಲಿತ ಇರುವಂಥದ್ದು. ಗಣಪನಿಗೆ ಗರಿಕೆಯೇ ಶ್ರೇಷ್ಠವಾಗುವುದು, ದುಡಿಯುವವರಿಗೆ ಪೌಷ್ಟಿಕ ಆಹಾರ ಬೇಕು ಎಂಬಂತೆ ಉಂಡೆ, ಮೋದಕ, ಕಡುಬುಗಳನ್ನು ಆತನ ಕೈಯಲ್ಲಿರಿಸುವುದು, ಕಬ್ಬು, ಬತ್ತದ ತೆನೆಗಳನ್ನು ಆತನಿಗೆ ನೀಡುವುದು, ಮಣ್ಣಿನ ಮೂರ್ತಿ ನಿಸರ್ಗದಲ್ಲಿ ಲೀನವಾಗುವಂತೆ ನೀರಿನಲ್ಲಿ ವಿಸರ್ಜಿಸುವುದು, ಮೊರದಂಥ ಕಿವಿ, ಕಣಜದಂಥ ಹೊಟ್ಟೆ, ಆನೆ ಮುಖ, ಇಲಿ, ಹಾವುಗಳ ಸಾಂಗತ್ಯ- ಇಂಥವುಗಳ ಗಣಪತಿಯನ್ನು ಮಣ್ಣಿಗೆ, ಶ್ರಮಕ್ಕೆ, ನಿಸರ್ಗಕ್ಕೆ ಇನ್ನಷ್ಟು ಹತ್ತಿರವಾಗಿಸುತ್ತವೆ. ಈ ಮೂಲಕ ಗಣಪಣ್ಣ ಯಾವುದೇ ಭಾಷೆ, ಪ್ರಾಂತ್ಯ, ಜಾತಿ, ಪಂಗಡಗಳಿಗೆ ಸೀಮಿತಗೊಳ್ಳದೆ ಜನರೆಲ್ಲರಿಗೂ ಮೆಚ್ಚಾಗುತ್ತಾನೆ.

Happy Ganesh Chaturthi Greeting Card showing photograph of lord ganesha idol, pooja or puja thali, bundi laddu/modak, durva and hibiscus or jasvand flower

ಹುಟ್ಟಿನ ಕಥೆಗಳು

ಪುರಾಣಗಳ ಪ್ರಕಾರ, ಶಿವ-ಪಾರ್ವತಿಯರ ಸುತ ಈತ. ಇನ್ನೂ ಹೇಳಬೇಕೆಂದರೆ ಪಾರ್ವತಿಯ ಮುದ್ದಿನ ಮಗ. ಆದರೆ ಆತನ ಹುಟ್ಟಿನ ಬಗ್ಗೆ ವಿಧವಿಧವಾದ ಕಥೆಗಳಿವೆ. ಜನಪ್ರಿಯವಾದ ಕಥೆಯ ಬಗ್ಗೆ ಮತ್ತಿಲ್ಲಿ ಉಲ್ಲೇಖ ಬೇಡ. ಅದರ ಹೊರತಾಗಿ, ಕಾಶ್ಮೀರಕವಿಯಾದ ಜಯರಥನ ಹರಚರಿತ ಚಿಂತಾಮಣಿಯಲ್ಲಿ ಪಾರ್ವತಿ-ಗಂಗೆ ಇಬ್ಬರೂ ಮಗನೂ ಹೌದಾಗಿದ್ದ ಗಣಪನನ್ನು, ಪಾರ್ವತೀಸುತನೆಂದು ತೀರ್ಮಾನಿಸುವುದು ಶಿವ. ಆದರೆ ಬ್ರಹ್ಮವೈವರ್ತಕ ಪುರಾಣದಲ್ಲಿ ಗಣೇಶನ ಜನನ ವೃತ್ತಾಂತವೇ ಬೇರೆ. ಪಾರ್ವತಿ ತನ್ನ ಮಗುವನ್ನು ತೋರಿಸಲು ಎಲ್ಲರೊಂದಿಗೆ ಶನಿಯನ್ನೂ ಕರೆದಿದ್ದಳಂತೆ. ಶನಿಯ ವಕ್ರದೃಷ್ಟಿ ಬೀಳುತ್ತಿದ್ದಂತೆ ಮಗುವಿನ ತಲೆ ಬಿದ್ದು ಹೋಗಿ, ಬದಲಿಗೆ ಆನೆಯ ತಲೆಯನ್ನು ವಿಷ್ಣು ತಂದು ಅಂಟಿಸಿದನಂತೆ. ಆತ ಏಕದಂತನಾದ ಬಗ್ಗೆಯೂ ನಾನಾ ಕಥೆಗಳಿವೆ. ಪರಶುರಾಮನೊಂದಿಗಿನ ಯುದ್ಧದಲ್ಲಿ ದಂತ ಮುರಿಯಿತೆಂದು ಬ್ರಹ್ಮವೈವರ್ತಕ ಪುರಾಣ ಹೇಳಿದರೆ, ರಾವಣ ಮುರಿದನೆಂದು ಮಾಘಕವಿ ಶಿಶುಪಾಲ ವಧೆಯಲ್ಲಿ ಹೇಳುತ್ತಾನೆ. ಕುಮಾರಸ್ವಾಮಿಯೊಂದಿಗಿನ ಲೋಕ ಸುತ್ತುವ ಸ್ಪರ್ಧೆಯಲ್ಲಿ ಹಲ್ಲು (ದಂತ!) ಮುರಿಯಿತು ಎನ್ನುತ್ತದೆ ಹರಚರಿತ ಚಿಂತಾಮಣಿ.

Lord Ganesha , Ganesh festival

ಗಣಪಣ್ಣನಿಗೆ ಮದುವೆಯಾಗಿದೆಯೇ?

ಇದು ಆತನ ಬಗೆಗಿನ ಇನ್ನೊಂದು ಮುಖ್ಯ ಪ್ರಶ್ನೆ. ಈ ಅಣ್ಣನಿಗೆ ಮದುವೆಯಾಗಿದ್ದರೆ ಅತ್ತಿಗೆ ಯಾರು? ಅವನಿಗೆ ಮದುವೆಯಿಲ್ಲ, ಆತ ಬ್ರಹ್ಮಚಾರಿ ಎನ್ನುವಂಥ ಪುರಾಣಗಳು ಕೆಲವಾದರೆ, ಸಿದ್ಧಿ, ಬುದ್ಧಿಯರನ್ನು ಆತ ವಿವಾಹವಾಗಿದ್ದಾನೆ ಎಂಬ ಕಥೆಗಳುಂಟು. ನೋಡಿ, ಆತನಿಗೆ ಒಂದೋ ಮದುವೆಯೇ ಇಲ್ಲ ಅಥವಾ ದ್ವಿಪತ್ನೀವಲ್ಲಭ! ಇನ್ನೂ ಮುಂದುವರಿದು, ಸಿದ್ಧಿಯಲ್ಲಿ ಕ್ಷೇಮ ಮತ್ತು ಬುದ್ಧಿಯಲ್ಲಿ ಲಾಭ ಎಂಬ ಮಕ್ಕಳನ್ನೂ ಆತ ಪಡೆದ ಕಥೆಗಳಿವೆ. ಈತನ ಸಂಸಾರದಲ್ಲಿ ಸಿದ್ಧಿ, ಬುದ್ಧಿ, ಕ್ಷೇಮ, ಲಾಭಗಳೆಲ್ಲಾ ಇರುವುದಕ್ಕೋ ಏನೋ, ಈತ ಕೇವಲ ದೇವಳಗಳಲ್ಲಿ ಮಾತ್ರವಲ್ಲ, ಊರ ಕೋಟೆಗಳಲ್ಲೂ ಪ್ರತಿಷ್ಠಾಪಿತ. ಮಕ್ಕಳಿಂದ ಹಿಡಿದು ವೃದ್ಧರವರೆಗೆ, ಮಾನವ ನಿರ್ಮಿತ ಎಲ್ಲಾ ಬೇಲಿ, ಕಂದಕಗಳನ್ನೂ ದಾಟಿ ಪೂಜಿತ.

Lord Ganesha , Ganesha Festival

ಗಣಪನ ಕಲ್ಪನೆ ಅರ್ವಾಚೀನವೇ?

ಪೌರಾಣಿಕವಾಗಿ ಗಣಪತಿಯ ಕಥೆ-ಕಲ್ಪನೆಗಳು ಏನೇ ಇದ್ದರೂ, ಈಗ ನಮ್ಮೆದುರಿಗಿರುವ ಮುದ್ದು ಮುಖದ ಗಣಪನ ಕಲ್ಪನೆಗಳು ಪುರಾಣ ಪೂರ್ವದ ಋಗ್ವೇದದಲ್ಲಿ ಇದ್ದಂತಿಲ್ಲ. ಎಲ್ಲರಂತೆ ಆತನೂ ಒಬ್ಬ ಸಾಮಾನ್ಯ ದೇವತೆಯಂತೆ ಕಂಡುಬರುತ್ತಾನೆ. ಋಗ್ವೇದದಲ್ಲಿ ಇರುವ ʻಗಣಾನಾಂ ತ್ವಾಂ ಗಣಪತಿಂ ಹವಾಮಹೇʼ ಎಂಬ ಋಕ್ಕು ಗಣಪತಿ ಪೂಜೆಯ ಮುಖ್ಯಮಂತ್ರವಾಗಿ ಬಳಕೆಯಲ್ಲಿದ್ದರೂ, ಇಲ್ಲಿರುವ ಗಣಪತಿ ಶಬ್ದಕ್ಕೆ ಬೃಹಸ್ಪತಿ ಅಥವಾ ಬ್ರಹ್ಮಣಸ್ಪತಿ ಎಂದು ಸಹ ವಿದ್ವಾಂಸರು ಅರ್ಥೈಸುತ್ತಾರೆ. ಯಜುರ್ವೇದದ ತೈತ್ತರೀಯ ಸಂಹಿತೆಯಲ್ಲಿ ʻನಮೋ ಗಣೇಭ್ಯೋ ಗಣಪತಿಭ್ಯಶ್ಚವೋ ನಮಃʼ ಎಂಬ ಮಂತ್ರದಲ್ಲಿ ಅನೇಕ ಗಣಪತಿಗಳ ಉಲ್ಲೇಖವಿದೆ. ಪ್ರಾಚೀನವಾದ ಮಾನವಗೃಹ್ಯಸೂತ್ರದಲ್ಲಿ ಈ ವಿನಾಯಕರ ಹೆಸರುಗಳನ್ನು ಸಾಲಕಟಂಟಕ, ಕೂಶ್ಮಾಂಡ, ರಾಜಪುತ್ರ ಉಸ್ಮಿತ ಮತ್ತು ದೇವಯಜನ ಎಂದು ಹೇಳಲಾಗಿದೆ. ಮುಂದೆ ಯಾಜ್ಞವಲ್ಕ್ಯ ಸೃತಿಯಲ್ಲಿ ಈ ವಿನಾಯಕರ ತಾಯಿ ಅಂಬಿಕೆಯೆಂದೂ, ವಿಘ್ನ ಪರಿಹಾರಕ್ಕೆ ಇವರನ್ನು ತೃಪ್ತಿ ಪಡಿಸಬೇಕೆಂದೂ ಹೇಳಲಾಗಿದೆ.
ತನ್ನ ಹುಟ್ಟಿನ ಆರಂಭದಲ್ಲೇ ಭಗ್ನವಾಗಿ, ಅದೇ ಕಾರಣಕ್ಕಾಗಿ ಪ್ರಥಮ ವಂದಿತ, ವಿಘ್ನ ನಿವಾರಕ ಆಗುವಂಥ ವರವನ್ನು ತಂದೆಯಿಂದಲೇ ಪಡೆದ ಗಣಪತಿಯ ದಂತಿ ಮುಖ, ಮಂದಸ್ಮಿತ ಮುಂತಾದ ಇಂದಿನ ಸ್ವರೂಪ ಕ್ರಿ. ಶ ಆರನೇ ಶತಮಾನದ ಆಜೂಬಾಜು ಅಸ್ತಿತ್ವಕ್ಕೆ ಬಂದಿತೆಂಬುದು ಅಂದಾಜು. ಇದೇ ಕಾಲದ ಪ್ರಾಚೀನ ಶಿಲಾ ಮೂರ್ತಿಗಳು ಜೋಧಪುರ, ಬಾದಾಮಿ, ಐಹೊಳೆ ಮುಂತಾದೆಡೆಗಳು ಲಭ್ಯವಿದೆ. ಈ ಹಿನ್ನೆಲೆಯಲ್ಲಿ, ಗಣಪತಿಯ ಗುಣವಿಶೇಷಗಳನ್ನು ಸಾರುವ ಪುರಾಣಗಳು ಆನಂತರ ರಚಿತವಾಗಿರಬಹುದೆಂಬ ಊಹೆ ಇದೆ. ರಾಮಾಯಣ ಮತ್ತು ಮಹಾಭಾರತದ ಮೂಲರೂಪದಲ್ಲಿ ಗಣಪತಿಯ ಬಗ್ಗೆ ಉಲ್ಲೇಖಗಳಿಲ್ಲ. ವ್ಯಾಸರು ನೀಡಿದ ಮಹಾಭಾರತದ ಉಕ್ತಲೇಖನವನ್ನು ಗಣಪತಿ ತನ್ನ ಸೊಂಡಿಲು ಮುರಿದು ಬರೆಯುತ್ತಾ ಹೋದ ಕಥೆಗಳೆಲ್ಲಾ ಪ್ರಕ್ಷಿಪ್ತವಾಗಿ ಸೇರಿಕೊಂಡಿದೆ ಎಂಬ ವಾದಗಳೂ ಇವೆ.

ಭಾರತಕ್ಕೆ ಸೀಮಿತನಲ್ಲ!

ಹೌದು. ಹಿಂದೆ ಭಾರತೀಯ ಸಂಸ್ಕೃತಿಯ ಸಂಪರ್ಕಕ್ಕೆ ಬಂದ ಹಲವಾರು ದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಏಷ್ಯಾ ಖಂಡದ ದೇಶಗಳಲ್ಲಿ ಗಣಪತಿಯ ಕಲ್ಪನೆ ಇದೆ, ಆರಾಧನೆಯೂ ಇದೆ. ಜಾವಾ, ಥಾಯ್ಲೆಂಡ್‌, ಕಾಂಬೋಡಿಯದಂಥ ಆಗ್ನೇಯ ಏಷ್ಯಾ ದೇಶಗಳಲ್ಲಿ ಗಣಪತಿ ಹಿಂದೂ ಸಂಪ್ರದಾಯದ ಅನ್ವಯ ಇದ್ದರೆ, ಶ್ರೀಲಂಕಾ, ಜಪಾನ್‌ ಮತ್ತು ಚೀನಾಗಳಲ್ಲಿ ಬೌದ್ಧ ಸಂಪ್ರದಾಯದ ಪ್ರಭಾವಕ್ಕೆ ಒಳಗಾಗಿರುವಂತೆ ಕಾಣುತ್ತದೆ. ಅದರಲ್ಲೂ ಬುದ್ಧನ ಜಾತಕ ಕಥೆಗಳಲ್ಲಿ ಹಿಂದಿನ ಜನ್ಮಗಳಲ್ಲಿ ಬುದ್ಧ ಆನೆಯೇ ಆಗಿದ್ದನಂತೆ. ಬುದ್ಧನಾಗಿದ್ದ ಜನ್ಮದಲ್ಲಿ ಆತ ತಾಯಿಯ ಹೊಟ್ಟೆಯಲ್ಲಿದ್ದಾಗ ಬಿಳಿಯ ಆನೆಯೊಂದು ಆಕೆಯ ಗರ್ಭವನ್ನು ಚುಚ್ಚಿತ್ತು ಎಂದೂ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಬೌದ್ಧರ ಪ್ರಭಾವವಿದ್ದ ಪ್ರಾಂತ್ಯಗಳಲ್ಲಿ ಆನೆ ಮುಖದ ದೇವರ ಆರಾಧನೆಗೆ ಮಹತ್ವ ದೊರೆತಿದೆ.
ಮಾನವನ ಇತಿಹಾಸ, ನಾಗರಿಕತೆ ಮತ್ತು ಸಂಸ್ಕೃತಿಯ ವಿಕಸನದೊಂದಿಗೆ ನಮ್ಮ ಗಣೇಶ ದೇವನೂ ವಿಕಾಸ ಹೊಂದುತ್ತಾ ಬಂದಿರುವುದನ್ನು ಕಾಣುತ್ತೇವೆ. ದೇಶ, ಕಾಲ, ಪಾತ್ರಗಳನ್ನು ಮೀರಿ, ನಮ್ಮ ಅಮೂರ್ತ ಪ್ರಜ್ಞೆಯ ಭಾಗವಾಗಿ, ವಿದ್ಯೆ ನೀಡುತ್ತಾ, ಸಿದ್ಧಿ ಪ್ರದಾಯಕನಾಗಿ, ವಿಘ್ನ ನಿವಾರಿಸುತ್ತಾ ಮೂರ್ತ ರೂಪದಲ್ಲಿ ಮನೆಮನೆಗೆ ಬರುವವನಾತ. ನಮ್ಮ ಕಲ್ಪನೆಯ ರೂಪವನ್ನು ತಾನು ಧರಿಸಿ, ನಮ್ಮಿಷ್ಟದ ಕಡುಬು-ಕಜ್ಜಾಯಗಳನ್ನು ತಾನು ತಿಂದು, ನಾವು ನಿವೇದಿಸಿದ ಮಂತ್ರ-ಪುಷ್ಪಗಳಿಂದ ಪೂಜಿತನಾಗುತ್ತಾನೆ ಗಣಪ. ಹೀಗೆ ನಮ್ಮೊಂದಿಗೆ ನಮ್ಮಂತೆಯೇ ಇರುವ ದೇವರೇ ಅಲ್ಲವೇ ನಮಗೆ ಆಪ್ತರಾಗುವುದು?

ಇದನ್ನೂ ಓದಿ: Ganesha Stories With Audio: ನೀವು ಓದಲೇಬೇಕಾದ ಗಣಪತಿಯ ಕುತೂಹಲಕರ ಕಥೆಗಳಿವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        IPL 2024
        ಕ್ರೀಡೆ15 mins ago

        IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

        HD Revanna
        ಕರ್ನಾಟಕ29 mins ago

        HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

        IPL 2024
        ಕ್ರೀಡೆ31 mins ago

        IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

        Dingaleshwar Swamiji
        ಕರ್ನಾಟಕ37 mins ago

        Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

        Virat kohli
        ಕ್ರೀಡೆ59 mins ago

        Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

        Prajwal Revanna Case
        ಕರ್ನಾಟಕ1 hour ago

        Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

        Bangalore To Belagavi Train
        ಕರ್ನಾಟಕ1 hour ago

        Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

        IPL 2024
        Latest1 hour ago

        IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

        Jai Shri Ram Slogan
        ಕರ್ನಾಟಕ2 hours ago

        Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

        Paytm
        ಪ್ರಮುಖ ಸುದ್ದಿ2 hours ago

        Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

        Sharmitha Gowda in bikini
        ಕಿರುತೆರೆ7 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ7 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ5 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ7 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ6 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ5 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ6 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Dina Bhavishya
        ಭವಿಷ್ಯ19 hours ago

        Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

        Bengaluru Rains
        ಮಳೆ1 day ago

        Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

        Dina Bhavishya
        ಭವಿಷ್ಯ2 days ago

        Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

        Prajwal Revanna Case Another victim gives statement before judge Will Revanna get anticipatory bail
        ಕ್ರೈಂ2 days ago

        Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

        Dina Bhavishya
        ಭವಿಷ್ಯ3 days ago

        Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

        dina bhavishya read your daily horoscope predictions for April 30 2024
        ಭವಿಷ್ಯ5 days ago

        Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

        PM Narendra modi in Bagalakote and Attack on Congress
        Lok Sabha Election 20245 days ago

        PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

        PM Narendra modi in Bagalakote for Election Campaign and here is Live telecast
        Lok Sabha Election 20245 days ago

        PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

        dina bhavishya read your daily horoscope predictions for April 29 2024
        ಭವಿಷ್ಯ6 days ago

        Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

        Vote Jihad
        Lok Sabha Election 20246 days ago

        PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

        ಟ್ರೆಂಡಿಂಗ್‌