Famous Ganesha Temples: ಭಕ್ತರ ಮನಸ್ಸಿಗೆ ನೆಮ್ಮದಿ ನೀಡುವ ತಾಣ, ಕರ್ನಾಟಕದ ಪ್ರಮುಖ ಗಣಪತಿ ದೇವಸ್ಥಾನಗಳಿವು - Vistara News

ಗಣೇಶ ಚತುರ್ಥಿ

Famous Ganesha Temples: ಭಕ್ತರ ಮನಸ್ಸಿಗೆ ನೆಮ್ಮದಿ ನೀಡುವ ತಾಣ, ಕರ್ನಾಟಕದ ಪ್ರಮುಖ ಗಣಪತಿ ದೇವಸ್ಥಾನಗಳಿವು

ಗಣೇಶ ದೇವ ಅಂದರೆ ಎಲ್ಲರಿಗೂ ಇಷ್ಟ. ರಾಜ್ಯದಲ್ಲಿ ಹಲವಾರು ಪೌರಾಣಿಕ ಹಿನ್ನೆಲೆಯ ಗಣಪತಿ ದೇವಸ್ಥಾನಗಳಿವೆ. ಗಣೇಶ ಚತುರ್ಥಿ (Ganesha Chaturthi) ಹಿನ್ನೆಲೆಯಲ್ಲಿ, ಪ್ರಮುಖ ಗಣಪತಿ ದೇವಸ್ಥಾನಗಳ (Famous Ganesha Temples) ಸಂಕ್ಷಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

Major Ganapati Temples in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಣಪತಿ ಅನೇಕರಿಗೆ ಪ್ರಿಯ ದೇವರು. ಏನೇ ಕೆಲಸ ಮಾಡಬೇಕೆಂದರೂ ಮೊದಲು ಗಣಪನಿಗೆ ಪೂಜೆ (Ganesha Chaturthi) ಸಲ್ಲಿಸಿಯೇ ಕೆಲಸ ಆರಂಭಿಸಲಾಗುತ್ತದೆ. ಅದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ಹಳ್ಳಿಯಲ್ಲೂ ಗಣೇಶನ ದೇವಸ್ಥಾನ ಕಾಣಸಿಗುತ್ತದೆ. ಅಂದ ಹಾಗೆ ನಮ್ಮ ಕರ್ನಾಟಕದಲ್ಲಿನ ಹಲವು ಗಣಪತಿ ದೇವಸ್ಥಾನಗಳು ಅಪಾರ ಪ್ರಮಾಣದ ಭಕ್ತರನ್ನು ಹೊಂದಿದೆ. ಆ ರೀತಿಯಲ್ಲಿ ಪ್ರಖ್ಯಾತವಾಗಿರುವ (Famous Ganesha Temples) ಗಣೇಶ ದೇವಸ್ಥಾನಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

Idagunji Ganapati Temple

ಇಡಗುಂಜಿ ಗಣಪತಿ ದೇವಸ್ಥಾನ

ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿ ಪುರಾತನ ಗಣಪತಿ ದೇವಸ್ಥಾನವಿದೆ. ಈ ದೇವಸ್ಥಾನ ಸುಮಾರು 1500 ವರ್ಷಗಳಷ್ಟು ಪುರಾತನ ಇತಿಹಾಸವನ್ನು ಹೊಂದಿದೆ. ಇಲ್ಲಿ ಒಂದು ಕೈನಲ್ಲಿ ಮೋದಕ, ಇನ್ನೊಂದು ಕೈನಲ್ಲಿ ಕಮಲದ ಹೂವನ್ನು ಹಿಡಿದಿರುವ ಗಣಪತಿ ಮೂರ್ತಿಯನ್ನು ನೀವು ಕಾಣಬಹುದು. ತ್ರೇತಾಯುಗದಲ್ಲಿ ನಾರದ ಮಹರ್ಷಿ ಇಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದರು ಎನ್ನಲಾಗುತ್ತದೆ. ಪ್ರತಿದಿನ ಇಲ್ಲಿ ಸಹಸ್ರಾರು ಭಕ್ತಾದಿಗಳು ಭೇಟಿ ನೀಡುತ್ತಾರೆ. ಇಡಗುಂಜಿ ಜಾತ್ರೆ ಕೂಡ ಪ್ರಸಿದ್ಧವಾಗಿದೆ.
ದೇಗುಲದ ಸಮಯ
ಬೆಳಗ್ಗೆ: 6:00ರಿಂದ ಮಧ್ಯಾಹ್ನ 1:00
ಮಧ್ಯಾಹ್ನ: 3:00ರಿಂದ ಸಂಜೆ 8:30

Guddattu Vinayaka Temple, Kundapura

ಗುಡ್ಡಟ್ಟು ವಿನಾಯಕ ದೇವಸ್ಥಾನ, ಕುಂದಾಪುರ

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಗುಡ್ಡಟ್ಟು ವಿನಾಯಕ ದೇವಸ್ಥಾನ ಕೂಡ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನವನ್ನು ಜಲಧಿವಾಸ ಗಣಪತಿ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದು ಭಾರತದ ಏಕೈಕ ಜಲಧಿವಾಸ ಗಣಪತಿ ದೇವಾಲಯವಾಗಿದೆ. ಇಲ್ಲಿನ ಮೂರು ಅಡಿಯ ಗಣಪತಿ ವಿಗ್ರಹ ಬಂಡೆಯಿಂದ ಹೊರಹೊಮ್ಮಿರುವುದಾಗಿದೆ ಎಂದು ನಂಬಲಾಗಿದೆ.
ದೇವಸ್ಥಾನದ ಸಮಯ
ವಾರದ ದಿನಗಳು: ಬೆಳಗ್ಗೆ 6:30ರಿಂದ ಸಂಜೆ 7:00
ಮಂಗಳವಾರ: ಬೆಳಗ್ಗೆ 6:00ರಿಂದ ಸಂಜೆ 7:00

Southadka Maha Ganapati Temple

ಸೌತಡ್ಕ ಮಹಾ ಗಣಪತಿ ದೇವಸ್ಥಾನ

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಸೌತಡ್ಕ ಮಹಾ ಗಣಪತಿ ದೇವಸ್ಥಾನವಿದೆ. ದೇವರಿಗೆ ಗರ್ಭ ಗುಡಿ ಅಥವಾ ಮಾಡು ಇಲ್ಲದಿರುವುದು ಈ ದೇವಸ್ಥಾನದ ವಿಶೇಷವಾಗಿದೆ. ಈ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 35 ಕಿಲೋಮೀಟರ್‌ ಮತ್ತು ಧರ್ಮಸ್ಥಳದಿಂದ 16 ಕಿಲೋ ಮೀಟರ್‌ ದೂರದಲ್ಲಿದೆ. ಸಾಮಾನ್ಯವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡುವವರು ಇಲ್ಲಿಗೆ ಭೇಟಿ ನೀಡಿ ಗಣಪತಿಯ ಆಶೀರ್ವಾದ ಪಡೆಯುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಳ್ಳುವವರು ದೇಗುಲದಲ್ಲಿ ಗಂಟೆ ಕಟ್ಟಿ ಹರಕೆ ತೀರಿಸುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಗಂಟೆಗಳನ್ನು ನೀವು ಕಾಣಬಹುದು.
ದೇವಸ್ಥಾನದ ಸಮಯ
ಬೆಳಗ್ಗೆ 7:00ರಿಂದ ಸಂಜೆ 7:00

Mahaganapati Temple of Gokarna

ಗೋಕರ್ಣದ ಮಹಾಗಣಪತಿ ದೇವಾಲಯ

ಉತ್ತರ ಕನ್ನಡದ ಗೋಕರ್ಣದಲ್ಲಿ ಮಹಾಗಣಪತಿ ದೇವಾಲಯವಿದೆ. ಈ ದೇವಸ್ಥಾನದ ಗಣಪತಿ ವಿಗ್ರಹ 1,500 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗುತ್ತದೆ. ಗೋಕರ್ಣದ ಮಹಾಬಲೇಶ್ವರ ದೇಗುಲದ ಸನಿಹದಲ್ಲೇ ಈ ದೇವಸ್ಥಾನವಿದೆ. ಇಲ್ಲಿಗೆ ಭೇಟಿ ನೀಡುವವರಿಗೆ ಕಟ್ಟುನಿಟ್ಟಾದ ಡ್ರೆಸ್‌ ಕೋಡ್‌ ಇದೆ.
ದೇವಸ್ಥಾನದ ಸಮಯ
ಬೆಳಗ್ಗೆ 6:00ರಿಂದ ಮಧ್ಯಾಹ್ನ 12.30
ಸಂಜೆ 5:00ರಿಂದ 9:00

Anegudde Vinayaka Temple

ಆನೆಗುಡ್ಡೆ ವಿನಾಯಕ ದೇವಸ್ಥಾನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಶಿಯ ಆನೆಗುಡ್ಡೆ ಗ್ರಾಮದಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನವಿದೆ. ಕುಂಭಾಶಿ ಎಂಬ ಹೆಸರು ರಾಕ್ಷಸ ಕುಂಭಾಸುರನಿಂದ ಬಂದಿದೆ ಎಂದು ಹೇಳಲಾಗುತ್ತದೆ. ಕಥೆಯ ಪ್ರಕಾರ, ಈ ಪ್ರದೇಶದಲ್ಲಿ ಬರಗಾಲ ಬಂದಾಗ, ಅಗಸ್ತ್ಯ ಋಷಿ ಮಳೆ ದೇವರಾದ ವರುಣನನ್ನು ಒಲಿಸಲು ತಪಸ್ಸು ಮಾಡಿದನು. ತಪಸ್ಸಿನ ಸಮಯದಲ್ಲಿ, ರಾಕ್ಷಸ ಕುಂಭಾಸುರನು ಋಷಿಗಳನ್ನು ತೊಂದರೆಗೊಳಿಸಲಾರಂಭಿಸಿದನು. ಭೀಮಸೇನನು ಕುಂಭಾಸುರನನ್ನು ಕೊಲ್ಲಲು ಮತ್ತು ಅವನನ್ನು ಇಲ್ಲಿ ವಧಿಸಲು ಗಣೇಶನಿಂದ ಆಯುಧವನ್ನು ಪಡೆಯುತ್ತಾನೆ. ಇಲ್ಲಿ 12 ಅಡಿ ಎತ್ತರದ ಉದ್ಭವ ಮೂರ್ತಿಯಿದೆ. ಅದಕ್ಕೆ ಐದು ಕೆಜಿ ತೂಕದ ಚಿನ್ನದ ಮುಖವಾಡವನ್ನು ಹಾಕಲಾಗಿರುತ್ತದೆ.
ದೇವಸ್ಥಾನದ ಸಮಯ
ಬೆಳಗ್ಗೆ 5:30ರಿಂದ ರಾತ್ರಿ 8:30

Kurudumale Sri Ganesha Temple

ಕುರುಡುಮಲೆ ಶ್ರೀ ಗಣೇಶ ದೇವಸ್ಥಾನ

ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕುರುಡುಮಲೆಯಲ್ಲಿ ಕುರುಡುಮಲೆ ಶ್ರೀ ಗಣೇಶ ದೇವಸ್ಥಾನವಿದೆ. ಇಲ್ಲಿ ಸಾಲಿಗ್ರಾಮದಿಂದ ತಯಾರಿಸಲಾಗಿರುವ 13.5 ಅಡಿ ಎತ್ತರದ ಗಣೇಶನ ವಿಗ್ರಹವಿದೆ. ಈ ಸ್ಥಳವು ದೇವಾನುದೇವತೆಗಳು ಭೂಮಿಯ ಮೇಲೆ ಮನರಂಜನೆಗಾಗಿ ಸ್ವರ್ಗದಿಂದ ಇಳಿಯುವ ಸ್ಥಳವಾಗಿದೆ ಎಂದು ನಂಬಲಾಗಿದೆ. ಕುರುಡುಮಲೆ ಗಣೇಶ ದೇವಸ್ಥಾನ ವಿಜಯನಗರ ಅರಸರ ಆಳ್ವಿಕೆಯಲ್ಲಿ ನಿರ್ಮಾಣವಾಗಿದೆ ಎಂಬುದಕ್ಕೆ ದೇವಾಲಯದ ಗೋಡೆಯ ಮೇಲಿನ ಶಾಸನಗಳು ಪುರಾವೆಗಳನ್ನು ನೀಡುತ್ತವೆ. ಎಲ್ಲಾ ಶಾಸನಗಳು ತಮಿಳಿನಲ್ಲಿವೆ ಮತ್ತು ಕೆಲವು ಹೊಯ್ಸಳ ರಾಜರ ಆಳ್ವಿಕೆಯಲ್ಲಿ 13ನೇ ಶತಮಾನದಷ್ಟು ಹಿಂದಿನವುಗಳಾಗಿವೆ.
ದೇವಸ್ಥಾನದ ಸಮಯ
ಬೆಳಗ್ಗೆ 6.30ರಿಂದ ಮಧ್ಯಾಹ್ನ 1.00
ಸಂಜೆ 3.00ರಿಂದ 8.30

Sharavu Mahaganapathi temple

ಶರವು ಮಹಾಗಣಪತಿ ದೇವಸ್ಥಾನ

ಶರವು ಮಹಾಗಣಪತಿ ದೇವಸ್ಥಾನ ಕರ್ನಾಟಕದ ಮಂಗಳೂರಿನ ಹಂಪನಕಟ್ಟೆಯಲ್ಲಿದೆ. ಇದು ಸುಮಾರು 800 ವರ್ಷಗಳಷ್ಟು ಹಳೆಯ ದೇವಾಲಯವಾಗಿದೆ. ಈ ದೇವಸ್ಥಾನವನ್ನು ತುಳುವ ರಾಜ ವೀರಬಾಹು ನಿರ್ಮಿಸಿದರು. ಇಲ್ಲಿ ಶರಬೇಶ್ವರ ಮತ್ತು ಮಹಾಗಣಪತಿ ದೇವತೆಗಳನ್ನು ಕ್ರಮವಾಗಿ ಪಶ್ಚಿಮ ಭಾಗದಲ್ಲಿ ಮತ್ತು ದಕ್ಷಿಣ ಭಾಗದಲ್ಲಿ ಪ್ರತಿಷ್ಠಾಪಿಸಲಾಗಿದೆ.
ದೇವಸ್ಥಾನದ ಸಮಯ
ಬೆಳಗ್ಗೆ 5:00ರಿಂದ 12:00
ಸಂಜೆ 4:30ರಿಂದ 8:00

Biggest Ganpati temple in Bangalore

ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನ

ಬೆಂಗಳೂರಿನ ದೊಡ್ಡ ಗಣಪತಿ ದೇವಾಲಯ ಬೆಂಗಳೂರು ಮಾತ್ರವಲ್ಲದೆ ರಾಜ್ಯದಲ್ಲೇ ಪ್ರಸಿದ್ಧವಾದ ಗಣಪತಿ ದೇವಸ್ಥಾನವಾಗಿದೆ. ಇಲ್ಲಿ 18 ಅಡಿ ಎತ್ತರ ಮತ್ತು 16 ಅಡಿ ಅಗಲವಿರುವ ಏಕಶಿಲೆ ಗಣಪತಿ ಮೂರ್ತಿಯಿದೆ. ಈ ಗಣಪತಿಯನ್ನು ಶಕ್ತಿ ಗಣಪತಿ ಮತ್ತು ಸತ್ಯ ಗಣಪತಿ ಎಂದೂ ಕರೆಯಲಾಗುತ್ತದೆ. ಈ ದೇವಸ್ಥಾನವನ್ನು ಕೆಂಪೇಗೌಡ ಅವರು ನಿರ್ಮಿಸಿದರು ಎಂಬ ಇತಿಹಾಸವಿದೆ.
ದೇವಸ್ಥಾನದ ಸಮಯ
ಬೆಳಗ್ಗೆ 6:00ರಿಂದ ಮಧ್ಯಾಹ್ನ 12:00
ಸಂಜೆ 5:30ರಿಂದ 9:00

ಇದನ್ನೂ ಓದಿ: Ganesh Chaturthi: ದೇಶದ ಟಾಪ್‌ 10 ಗಣೇಶ ಪೆಂಡಾಲ್‌ಗಳಿವು, ಇವುಗಳ ವಿಶೇಷ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        love jihad
        ಕರ್ನಾಟಕ2 hours ago

        Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

        BUS
        ಕರ್ನಾಟಕ2 hours ago

        ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

        ತುಮಕೂರು3 hours ago

        Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

        CSK vs SRH
        ಕ್ರೀಡೆ3 hours ago

        CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

        Notes
        ಕರ್ನಾಟಕ3 hours ago

        ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

        Narendra Modi
        Lok Sabha Election 20243 hours ago

        Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

        cet exam karnataka exam authority
        ಕರ್ನಾಟಕ3 hours ago

        CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

        PM Narendra Modi
        ಕರ್ನಾಟಕ4 hours ago

        PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

        Paris Olympics
        ಕ್ರೀಡೆ4 hours ago

        Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

        Arecanut cultivation
        ಚಿತ್ರದುರ್ಗ4 hours ago

        Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

        Sharmitha Gowda in bikini
        ಕಿರುತೆರೆ7 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ6 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ5 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ7 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ6 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ4 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ5 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Congress fears defeat over EVMs Congress will not win a single seat in Karnataka says PM Narendra Modi
        Lok Sabha Election 202410 hours ago

        PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

        PM Narendra Modi in Sirsi
        Lok Sabha Election 202412 hours ago

        PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

        If Congress comes to power all your assets will belong to Government says PM Narendra Modi
        Lok Sabha Election 202414 hours ago

        Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

        Congress ties with Aurangzeb supporters and Girls killed under his rule says Narendra Modi
        Lok Sabha Election 202414 hours ago

        Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

        Modi in Karnataka stay in Belagavi tomorrow and Huge gatherings at five places
        ಪ್ರಮುಖ ಸುದ್ದಿ17 hours ago

        Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

        Dina Bhavishya
        ಭವಿಷ್ಯ21 hours ago

        Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

        Lok sabha election 2024
        Lok Sabha Election 20241 day ago

        Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

        road Accident in kolar evm
        ಕೋಲಾರ2 days ago

        Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

        Dina Bhavishya
        ಭವಿಷ್ಯ2 days ago

        Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

        Lok Sabha Election 2024 congress booth agent allegation for Fake voting in Hassan Lok Sabha constituency
        ಹಾಸನ3 days ago

        Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

        ಟ್ರೆಂಡಿಂಗ್‌