Gokarna News: ಭಾರತೀಯ ವಾಸ್ತುಶಿಲ್ಪ ವಿನ್ಯಾಸದಿಂದ ಕಂಗೊಳಿಸುತ್ತಿರುವ ವಿಶಿಷ್ಟ 'ಸೇವಾ ಸೌಧ' ಸಮರ್ಪಣಾ ಸಮಾರಂಭಕ್ಕೆ ಸಿದ್ಧ - Vistara News

ಉತ್ತರ ಕನ್ನಡ

Gokarna News: ಭಾರತೀಯ ವಾಸ್ತುಶಿಲ್ಪ ವಿನ್ಯಾಸದಿಂದ ಕಂಗೊಳಿಸುತ್ತಿರುವ ವಿಶಿಷ್ಟ ‘ಸೇವಾ ಸೌಧ’ ಸಮರ್ಪಣಾ ಸಮಾರಂಭಕ್ಕೆ ಸಿದ್ಧ

Gokarna News: ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕುಲಾಧಿಪತಿಗಳಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ವಸತಿಗಾಗಿ ನಿರ್ಮಿಸಲಾದ ʼಸೇವಾ ಸೌಧ’ ಸಮರ್ಪಣಾ ಸಮಾರಂಭ ಜ. 28 ರಂದು ನಡೆಯಲಿದೆ.

VISTARANEWS.COM


on

Raghaveshvara Bharati swamiji gokarna
ಶ್ರೀಕರಾರ್ಚಿತ ಶ್ರೀಚಂದ್ರಮೌಳೀಶ್ವರ ದೇವರಿಗೆ 56 ಭಕ್ಷ್ಯಗಳ ನೈವೇದ್ಯ ಮತ್ತು 108 ದ್ರವ್ಯಗಳಿಂದ ವಿಶೇಷ ಅಭಿಷೇಕ ನೆರವೇರಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯ ಭಕ್ತರು ಸುಮಾರು ಐದು ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ (Gokarna News) ನಿರ್ಮಿಸಿರುವ ವಿಶಿಷ್ಟ ‘ಸೇವಾ ಸೌಧ’ ಸಮರ್ಪಣಾ ಸಮಾರಂಭ ಶನಿವಾರ (ಜ. 28) ನಡೆಯಲಿದೆ.

ಸ್ವಸ್ಥ ಮತ್ತು ಸಮರ್ಥ ಜಗತ್ತಿನ ನಿರ್ಮಾಣಕ್ಕೆ ಸುಯೋಗ್ಯ ಶಿಕ್ಷಣದ ಅಗತ್ಯವನ್ನು ಪರಿಕಲ್ಪಿಸಿ, ಭಾರತದ ಪ್ರಾಚೀನ ಶಿಕ್ಷಣ ವಿನ್ಯಾಸ ಹಾಗೂ ಶಿಕ್ಷಣ ಕ್ರಮಕ್ಕೆ ಕಾಯಕಲ್ಪ ಒದಗಿಸಬೇಕು ಎಂಬ ಮಹದಾಶಯದೊಂದಿಗೆ ಪರಮ ಪೂಜ್ಯರು ಅನುಷ್ಠಾನಗೊಳಿಸುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕುಲಾಧಿಪತಿಗಳಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ವಸತಿಗಾಗಿ ಈ ವಿಶಿಷ್ಟ ಭವನ ನಿರ್ಮಿಸಲಾಗಿದೆ.

ಇದರ ಅಂಗವಾಗಿ ಮೂರು ದಿನಗಳಿಂದ ನಡೆಯುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳು ಜ.೨೮ ರಂದು ಸಂಪನ್ನಗೊಳ್ಳಲಿವೆ. ರಾಘವೇಶ್ವರ ಭಾರತೀ ಶ್ರೀಗಳ ಸಾನ್ನಿಧ್ಯದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಸಮರ್ಪಣಾ ಸಮಾರಂಭದಲ್ಲಿ ಕೊಯಮತ್ತೂರಿನ ಶ್ರೀಚಂದ್ರಶೇಖರ ಭಾರತೀ ಚಂದ್ರಶೇಖರ ಸರಸ್ವತಿ ವೇದಪಾಠ ಶಾಲೆಯ ಮುಖ್ಯಸ್ಥರಾದ ವೇದಬ್ರಹ್ಮ ಶ್ರೀ ಜಂಬೂನಾಥ ಘನಪಾಠಿಗಳು, ತಿರುವನಂತಪುರಂ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ನಾರಾಯಣ ಪಟ್ಟೇರಿ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಟಿಟಿಡಿ ಮಂಡಳಿಯ ಅಧ್ಯಕ್ಷ ವೈ,ವಿ.ಸುಬ್ಬಾರೆಡ್ಡಿ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸುವರು ಎಂದು ಶ್ರೀಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು ವಿವರ ನೀಡಿದ್ದಾರೆ.

ರಾಜ್ಯ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತ ಕುಮಾರ್ ಹೆಗಡೆ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ ಹೆಬ್ಬಾರ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮತ್ತಿತರ ಗಣ್ಯರು ಈ ಅಪೂರ್ವ ಸಮಾರಂಭಕ್ಕೆ ಸಾಕ್ಷಿಗಳಾಗಲಿದ್ದಾರೆ.

ವಿಶಿಷ್ಟ ಭವನ

ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ಸಿಮೆಂಟ್, ಇಟ್ಟಿಗೆ ಬಳಸದೇ ವಿಶಿಷ್ಟವಾಗಿ ನಿರ್ಮಿಸಿದ ಈ ಭವ್ಯ ಭವನದ ಸಮರ್ಪಣಾ ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಶ್ರೀಮಠದ ಸೇವಾ ಬಿಂದುಗಳ ಸಮರ್ಪಣೆಯಲ್ಲಿ ನಿರ್ಮಾಣಗೊಂಡ ಭಾರತೀಯ ವಾಸ್ತುಶಿಲ್ಪ ವಿನ್ಯಾಸಗಳಲ್ಲಿ ಕಂಗೊಳಿಸುವ ಆವರಣವನ್ನು ಆಮೂಲಾಗ್ರವಾಗಿ ಅಲಂಕರಿಸಲಿರುವ ಭಾರತೀಯ ಮೂಲದ ಗಿಡ-ಮರ-ಬಳ್ಳಿಗಳಿಂದ ಈ ಭವ್ಯ ಮಂದಿರ ಶೋಭಿಸುತ್ತಿದೆ.

ಪಾಕ ವೈಭವ

ಈ ಭವ್ಯ ಕಾರ್ಯಕ್ರಮಕ್ಕಾಗಿ ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಿಂದ ಆಗಮಿಸಿದ 15 ಕ್ವಿಂಟಾಲ್ ಅಕ್ಕಿ, 2000 ತೆಂಗಿನಕಾಯಿ, 18 ಚೀಲ ಚೀನಿಕಾಯಿ, 12 ಚೀಲ ಕುಂಬಳಕಾಯಿ, 2 ಚೀಲ ಆಲೂಗಡ್ಡೆ, 2 ಚೀಲ ಬೀನ್ಸ್ ಸೇರಿದಂತೆ ಸುವಸ್ತುಗಳನ್ನೊಳಗೊಂಡ ಹಸಿರುವಾಣಿ ಹೊರೆಕಾಣಿಕೆಯನ್ನು ಈ ಸಂದರ್ಭದಲ್ಲಿ ಸಮರ್ಪಿಸಲಾಯಿತು. ಇದರ ಅಂಗವಾಗಿ ಕ್ಷೇತ್ರದ ಅಧಿದೇವತೆ ಶ್ರೀ ಚಂದ್ರಮೌಳೀಶ್ವರ ದೇವರಿಗೆ ಅಷ್ಟೋತ್ತರ ಶತ ವಿಶೇಷ ದ್ರವ್ಯಗಳಿಂದ ಅಭಿಷೇಕ ಸೇವೆ ಮತ್ತು ಸಾಂಪ್ರದಾಯಿಕ ಪಾಕ ವೈಭವವನ್ನು ಶುಕ್ರವಾರ (ಜ.೨೭) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ | Taraka Ratna: ʻಯುವ ಧ್ವನಿʼ ಪಾದಯಾತ್ರೆ ವೇಳೆ ಕುಸಿದು ಬಿದ್ದ ನಟ ನಂದಮೂರಿ ತಾರಕ ರತ್ನ; ಆಸ್ಪತ್ರೆಗೆ ದಾಖಲು

ತೊಡದೇವು, ಮಜ್ಜಿಗೆ ದೋಸೆ, ವಡೆ, ಬಜೆ/ಪೋಡಿ, ದೇಸಿ ಹಾಲಿನ ಕುಲ್ಫಿ, ಚಕ್ಕುಲಿ, ಚಾಟ್ಸ್, ಕರ್ಜಿಕಾಯಿ, ಬಾಳ್ಕ, ಉಪ್ಪುಸೊಳೆ ರೊಟ್ಟಿ, ಬಾಳೆಹಣ್ಣು ಒತ್ತು ಶ್ಯಾವಿಗೆ, ಕೊಟ್ಟೆ ಕಡುಬು, ವಡಪೆ, ಅಕ್ಕಿ ಒತ್ತು ಶ್ಯಾವಿಗೆ, ಉಂಡೆಗಳು, ಚಿಪ್ಸ್, ಬಾಳೆಹಣ್ಣಿನ ಹಲ್ವ, ಹಪ್ಪಳ, ಅಕ್ಕಿವಡೆ, ಓಡುಪ್ಪಾಳೆ, ಗೆಣಸಾಲೆ, ಹೋಳಿಗೆ ಪತ್ರೋಡೆ, ಅತ್ರಾಸ, ಉಂಡ್ಲಕಾಳು, ತೆಂಗೊಳಲು, ಉಸುಲಿ, ಕೋಸುಂಬರಿ, ಹವ್ಯಕ ಪೇಯಗಳಾದ ಅಪ್ಪೆಹುಳಿ, ಬಾಳೆದಿಂಡು ಸೂಪ್ ಮತ್ತಿತರ ತಿಂಡಿ ತಿನಿಸುಗಳ ಪ್ರಾತ್ಯಕ್ಷಿಕೆ ಮತ್ತು ಮಾರಾಟ ಮೇಳದಲ್ಲಿ ಸಾವಿರಾರು ಜನರು ಪಾಲ್ಗೊಂಡರು. ಕೈಮಗ್ಗ, ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟವೂ ನಡೆಯಿತು.

ಹವ್ಯಕ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ವಿಶಿಷ್ಟ ಭಕ್ಷ್ಯ ಭೋಜ್ಯಗಳ ಪ್ರದರ್ಶನ ಮತ್ತು ಮಾರಾಟದ ವಿಶಿಷ್ಟ ಆಹಾರೋತ್ಸವ ಜನಮನ ಸೂರೆಗೊಂಡಿತು. ಹವ್ಯಕ ಪಾಕಶೈಲಿಯಲ್ಲಿ ವಿಶಿಷ್ಟಾತಿವಿಶಿಷ್ಟ ಹಾಗೂ ಅಪರೂಪದ ತಿನಿಸುಗಳನ್ನು ಸಾರ್ವಜನಿಕರು ಆಸ್ವಾದಿಸಿದರು.

ಇದನ್ನೂ ಓದಿ | INDvsNZ T20 : ಟಾಸ್​ ಗೆದ್ದ ಭಾರತ ತಂಡದಿಂದ ಫೀಲ್ಡಿಂಗ್​ ಆಯ್ಕೆ

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಅಗಸ್ತ್ಯರಿಂದ ಪೂಜಿತವಾದ, ವರದ ಮುನಿಗಳು ನೀಡಿದ ಅಶೋಕೆಯಲ್ಲಿ ಶ್ರೀ ಶಂಕರಾಚಾರ್ಯರಿಂದ ಅನುಗ್ರಹಿಸಲ್ಪಟ್ಟ, ವೀರಪರಂಪರೆಯ ಎಲ್ಲ ಪೀಠಾಧಿಪತಿಗಳಿಂದ ಪ್ರತಿ ದಿನ ಸೇವೆ ಸ್ವೀಕರಿಸುತ್ತಿರುವ ಶ್ರೀರಾಮ ದೇವರಿಗೆ ಅಶೋಕೆಯಲ್ಲಿ ಪ್ರಥಮ ಬಾರಿಗೆ ಸಾಮ್ರಾಜ್ಯ ಪಟ್ಟಾಭಿಷೇಕವನ್ನೂ ನೆರವೇರಿಸಲಾಯಿತು. ಶ್ರೀಕರಾರ್ಚಿತ ಶ್ರೀಚಂದ್ರಮೌಳೀಶ್ವರ ದೇವರಿಗೆ 56 ಭಕ್ಷ್ಯಗಳ ನೈವೇದ್ಯ ಮತ್ತು 108 ದ್ರವ್ಯಗಳಿಂದ ವಿಶೇಷ ಅಭಿಷೇಕ ನೆರವೇರಿತು.

ನಾಲ್ಕು ಗಿನ್ನಿಸ್ ದಾಖಲೆಗಳ ವೀರ, ಮೃದಂಗ ಮಾಂತ್ರಿಕ ಡಾ.ಕುನ್ನಂಕುಳಂ ಡಾ.ರಾಮಕೃಷ್ಣನ್ ಮತ್ತು ಯೋಗೀಶ್ ಶರ್ಮಾ ಅವರ ಸಂಗೀತ ಕಾರ್ಯಕ್ರಮವೂ ಇರಲಿದೆ. ಅನೂಪ್ (ವಯಲಿನ್), ಗೋವಿಂದ ಪ್ರಸಾದ್, ಉಣ್ಣಿಕೃಷ್ಣನ್ ಕಾಸರಗೋಡು ಜಿಲ್ಲೆ ಪೆರಿಯಾ ನಾಗರತ್ನ ಹೆಬ್ಬಾರ್ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ, ಕುಮಾರಿ ರಚಿತಾ ತಂಡದಿಂದ ಭರತನಾಟ್ಯ ವೈಭವ ನಡೆಯಲಿದೆ.

ಇದನ್ನೂ ಓದಿ | 2A Reservation: ನಮ್ಮಿಂದ ಕಿತ್ತುಕೊಂಡ 2ಎ ಮೀಸಲಾತಿಯನ್ನು ನಮಗೆ ಮತ್ತೆ ಮರಳಿಸಿ; ಬಲಿಜ ಸಂಕಲ್ಪ ಸಭೆಯಲ್ಲಿ ಹಕ್ಕೊತ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ, ದಕ್ಷಿಣ ಒಳನಾಡಲ್ಲಿ ಮಂಕಾದ; ಮಲೆನಾಡು, ಉತ್ತರ ಒಳನಾಡಲ್ಲಿ ಮಳೆ ಸದ್ದು

Rain New : ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವರುಣ ಮಂಕಾಗಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡಿನಲ್ಲಿ ಸಕ್ರಿಯನಾಗಿದ್ದಾನೆ. ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಕೆಲವೆಡೆ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (rain news) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಚದುರಿದಂತೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ. ಬದಲಿಗೆ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನ ವಾತಾವರಣದಲ್ಲಿ ಯಾವುದೇ ಗಮರ್ನಾಹ ಬದಲಾವಣೆ ಇಲ್ಲ.

ಇದನ್ನೂ ಓದಿ: Hardik Pandya : ಪಾಂಡ್ಯ ಫಿಟ್ ಆಗಿಲ್ಲ, ಸುಮ್ಮನೆ ನಾಟಕ ಮಾಡುತ್ತಿದ್ದಾರೆ ಎಂದ ಆ್ಯಡಂ ಗಿಲ್​ಕ್ರಿಸ್ಟ್​​​

ತಾಪಮಾನ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಕೆಲವೊಮ್ಮೆ ತಾಪಮಾನದಲ್ಲೂ ಏರಿತ ಉಂಟಾಗಲಿದ್ದು, ಬಿಸಿಲ ಧಗೆ ಹೆಚ್ಚಾಗಿ ಇರಲಿದೆ.

ಗಾಳಿ ವೇಗದ ಎಚ್ಚರಿಕೆ

ಏಪ್ರಿಲ್ 18 ಮತ್ತು 19 ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಮೇಲ್ಮೈ ಗಾಳಿ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಕಲಬುರಗಿ ತತ್ತರ; ನಾಳೆಯೂ ಹಲವೆಡೆ ವರುಣನ ಅಬ್ಬರ

Rain News : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ವರುಣ ಮತ್ತೆ ಸಕ್ರಿಯಗೊಂಡಿದ್ದಾನೆ. ನಾಳೆ (ಏ.16) ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಬಿರುಗಾಳಿ ಮಳೆಗೆ ಕಲಬುರಗಿಯಲ್ಲಿ ನೆಲಕ್ಕುರುಳಿದ ಬಾಳೆ ತೋಟ
Koo

ಬೆಂಗಳೂರು: ರಾಜ್ಯದಲ್ಲಿ ಭಾನುವಾರದಂದು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಲಬುರಗಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.2 ಡಿ.ಸೆ ದಾಖಲಾಗಿತ್ತು. ಮುಂದಿನ 24 ಗಂಟೆಯಲ್ಲಿ ಹಲವೆಡೆ ಮಳೆಯಾಗುವ (rain news) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

ಏ.16ರಿಂದ ಮಲೆನಾಡಿನಾದ್ಯಂತ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನ ಮೈಸೂರು, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 36 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ತಾಪಮಾನ ಮುನ್ಸೂಚನೆ

ಮಳೆ ಮುನ್ಸೂಚನೆ ನಡುವೆಯೂ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ. ಏಪ್ರಿಲ್‌ 18-19ರಂದು ರಾಜ್ಯದ ಒಂದೆರಡು ಕಡೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರಲಿದೆ.

ಕಲಬುರಗಿಯಲ್ಲಿ ಬಿರುಗಾಳಿ ಮಳೆ

ಬಿಸಿಲ‌ನಗರಿ‌ ಕಲಬುರಗಿಯಲ್ಲಿ ಸೋಮವಾರ ಭಾರಿ ಬಿರುಗಾಳಿ ಮಳೆಯಾಗಿದೆ. ಗಾಳಿ ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಷ್ಟವಾಗಿದೆ. ಅಫಜಲಪುರ‌ ತಾಲೂಕಿನ ಸುತ್ತಮುತ್ತ ಗುಡುಗು ಸಿಡಿಲು ಸಹಿತರಾತ್ರಿ ಭಾರಿ ಮಳೆಯಾಗಿದೆ. ಬಳೂರ್ಗಿ ಗ್ರಾಮದಲ್ಲಿ ಬಾಳೆ ತೋಟ ನೆಲಸಮವಾಗಿದೆ. ಮಹ್ಮದ ರಫಿ ಗೌರ್ಕರ್ ಅವರ ತೋಟದಲ್ಲಿ ಬೆಳೆದ‌ ಸುಮಾರು ಮೂರು ಎಕರೆ ಪ್ರದೇಶದ ಬಾಳೆ ತೋಟ ನಾಶವಾಗಿದೆ. ಬರಗಾಲದಲ್ಲೂ ಅಲ್ಪಸ್ವಲ್ಪ ಬಾಳೆ ಬೆಳೆ ಬೆಳಯಲಾಗಿತ್ತು. 3 ಲಕ್ಷ ರೂಪಾಯಿ ಬಂಡವಾಳ ಹಾಕಿ ಟ್ಯಾಂಕರ್‌ ಮೂಲಕ ನೀರುಹಾಯಿಸಿ ಬಾಳೆ ಬೆಳೆಸಿದ್ದರು.

ಇದನ್ನೂ ಓದಿ: Borewell Tragedy : ಕೊಳವೆ ಬಾವಿಯಿಂದ ಬದುಕಿ ಬಂದ ಸಾತ್ವಿಕ್‌ನನ್ನು ತೊಟ್ಟಿಲಿಗೆ ಹಾಕಿ ಹರಕೆ ತೀರಿಸಿದ ಕಲ್ಲಿನಾಥ ಸ್ವಾಮೀಜಿ

ಬೇಸಿಗೆಯಲ್ಲಿ ಕೂದಲನ್ನು ನಯವಾಗಿರಿಸಲು ಕಷ್ಟವಾಗುತ್ತಿದೆಯೆ? ಈ ಸಲಹೆಗಳನ್ನು ಪಾಲಿಸಿ

ಬೇಸಿಗೆಯ ಹೊಡೆತಕ್ಕೆ ಸಿಲುಕಿ ನಲುಗದಂತೆ ನಮ್ಮ ಕೂದಲನ್ನು ಕಾಪಾಡಿಕೊಳ್ಳುವುದು ಹೇಗೆ? ಬೆವರಿನಿಂದ ತಲೆಯ ಚರ್ಮ ಪದೇಪದೆ ಕೊಳಕಾಗಿ, ಅಂಟಾಗಿ, ನವೆಯುಂಟಾಗಿ, ಹೊಟ್ಟಾಗಿ ತೊಂದರೆ ಕೊಡುತ್ತದೆ. ಉರಿಯುತ್ತಿರುವ ಗೋಳದಂಥ ಸೂರ್ಯನ ಅತಿನೇರಳೆ ಕಿರಣಗಳಿಂದ ಕೂದಲಿಗೆ ಹಾನಿಯಾಗಬಹುದು, ಒಣಗಿ ತುಂಡಾಗಬಹುದು. ಬೇಸಿಗೆಯಲ್ಲಿ ಪೋಷಕಾಂಶಗಳ ಕೊರತೆಯಾಗಿ ಕೂದಲು ಸಿಕ್ಕಾಪಟ್ಟೆ ಉದುರಲೂಬಹುದು. ಇಂಥ ಸಂದರ್ಭದಲ್ಲಿ (summer hair care) ಏನು ಮಾಡಬಹುದು?

head bath

ತಲೆಸ್ನಾನ

ಬೆವರಿನಿಂದ ಕೂದಲು ಒದ್ದೆಯಾಗುತ್ತಿರುವಾಗ ಪದೇಪದೆ ತಲೆಸ್ನಾನ ಮಾಡಬೇಕೆನ್ನಿಸಿದರೆ ಸ್ವಲ್ಪ ತಾಳಿ. ಅತಿಯಾದ ಕ್ಲೋರಿನ್ ಅಂಶವೂ ಕೂದಲಿಗೆ ತೊಂದರೆ ಕೊಡುತ್ತದೆ. ಅಷ್ಟೇ ಅಲ್ಲ, ದಿನದಿನವೂ ತಲೆಸ್ನಾನ ಮಾಡುವುದು ಅರೆತಲೆ ಶೂಲೆಯಂಥ ಸಮಸ್ಯೆಗಳನ್ನು ತರಬಹುದು. ತಲೆ ಸ್ನಾನದ ಹೊತ್ತಿನಲ್ಲಿ ಸೌಮ್ಯವಾದ ಶಾಂಪೂ ಬಳಸಿ, ಕಂಡೀಶನರ್‌ ಉಪಯೋಗಿಸಬಹುದು. ರಾಸಾಯನಿಕ ಕಂಡೀಶನರ್‌ಗಳು ಬೇಡವೆಂದಿದ್ದರೆ ಮದರಂಗಿ, ಭೃಂಗರಾಜವನ್ನು ಬಳಸಬಹುದು.

ಬಿಸಿ ಬೇಡ

ಯಾವುದೋ ಮದುವೆ ಮನೆಗೆಂದು ಅಲಂಕರಿಸಿಕೊಳ್ಳುತ್ತಿದ್ದೀರಾದರೆ, ಸ್ವಲ್ಪ ಜಾಗ್ರತೆ ಮಾಡಿ. ಹೀಟ್‌ ಸ್ಟೈಲಿಂಗ್‌, ಅಂದರೆ ಡ್ರೈಯರ್‌, ಸ್ಟ್ರೇಟ್ನರ್‌, ಕೂದಲು ಸುರುಳಿ ಮಾಡುವುದು ಮುಂತಾದ ಹೀಟೀಂಗ್‌ ಉಪಕರಣಗಳನ್ನು ಬೇಸಿಗೆಯಲ್ಲಿ ಆದಷ್ಟೂ ಬಳಸಬೇಡಿ. ಸಾಮಾನ್ಯ ಜೆಲ್‌ಗಳಿಂದಲೂ ಸುಂದರ ಕೇಶಾಲಂಕಾರ ಸಾಧ್ಯವಿದೆ. ಕೂದಲಿಗೆ ಈ ಬೇಸಿಗೆಯಲ್ಲಿ ಮತ್ತೂ ಬಿಸಿ ಸೋಕಿಸುವುದು ಬೇಡ.

ಮುಚ್ಚಿಕೊಳ್ಳಿ

ತಲೆಗೂದಲಿಗೂ ಪರದೆ ಮುಚ್ಚಿಕೊಳ್ಳಬಹುದು. ಬಿಸಿಲಿಗೆ ಹೋಗುವಾದ ತೆಳುವಾದ ಸ್ಕಾರ್ಫ್‌ ಅಥವಾ ಕ್ಯಾಪ್‌ ಬಳಸುವುದರಿಂದ ಅತಿನೇರಳೆ ಕಿರಣಗಳಿಂದ ಕೂದಲನ್ನು ರಕ್ಷಿಸಿಕೊಳ್ಳಬಹುದು. ಮಾತ್ರವಲ್ಲ, ಕೂದಲು ಒಣಗಿ, ಬಣ್ಣಗೆಟ್ಟು ತುಂಡಾಗುವುದನ್ನೂ ತಪ್ಪಿಸಬಹುದು. ಸಾಮಾನ್ಯವಾಗಿ ಕೂದಲ ತುದಿಗಳು ಸಪೂರಾಗಿ, ಕವಲೊಡೆದು ಹೋಗುವ ಸಂಭವವಿರುತ್ತದೆ. ಇವುಗಳನ್ನು ಕಾಲಕಾಲಕ್ಕೆ ಕತ್ತರಿಸಿ. ಇದರಿಂದ ಕೂದಲು ಸಿಕ್ಕಾಗಿ, ಬಾಚುವಷ್ಟರಲ್ಲಿ ಇನ್ನಷ್ಟು ತುಂಡಾಗಿ, ಉದುರುವುದನ್ನು ತಡೆಯಬಹುದು.

Woman Applying Coconut Oil on Hair Egg Benefits For Hair

ಮಸಾಜ್ ಮತ್ತು ಹೇರ್‌ಪ್ಯಾಕ್

ಕೂದಲ ಬುಡಗಳಿಗೆ ಮಸಾಜ್‌ ಬೇಕೆಬೇಕು. ಶುದ್ಧ ಕೊಬ್ಬರಿ ಎಣ್ಣೆಯೂ ಈ ಕೆಲಸಕ್ಕೆ ಅನುಕೂಲವೇ. ಅದಿಲ್ಲದಿದ್ದರೆ ನಿಮ್ಮಷ್ಟದ ಯಾವುದಾದರೂ ಕೇಶ ತೈಲ ಬಳಸಿ ತಲೆಗೆ ಮಸಾಜ್‌ ಮಾಡಿ. ಇದರಿಂದ ಕೂದಲ ಬುಡಕ್ಕೆ ಚೆನ್ನಾಗಿ ರಕ್ತಸಂಚಾರವಾಗಿ, ಬೆಳವಣಿಗೆ ಹೆಚ್ಚುತ್ತದೆ. ಜೊತೆಗೆ, ಮೆಂತೆ, ಮೊಸರು, ಮೊಟ್ಟೆ ಮುಂತಾದ ವಸ್ತುಗಳಿಂದ ಹೇರ್‌ಪ್ಯಾಕ್‌ ಮಾಡುವುದರಿಂದ ಕೂದಲು ಒಣಗಿ ತುಂಡಾಗುವುದನ್ನು ತಪ್ಪಿಸಬಹುದು.

ಆಹಾರ

ತಿನ್ನುವ ಆಹಾರ ಸಮತೋಲಿತವಾಗಿರಬೇಕು. ಸಾಕಷ್ಟು ಪ್ರೊಟೀನ್‌, ಖನಿಜ ಮತ್ತು ಜೀವಸತ್ವಗಳು ಇಲ್ಲದಿದ್ದರೆ ಕೂದಲುದುರುವುದನ್ನು ತಡೆಯಲು ಸಾಧ್ಯವಿಲ್ಲ. ಆಹಾರದಲ್ಲಿ ಸಾಕಷ್ಟು ಬೀಜಗಳು, ಸೊಪ್ಪು, ಇಡೀ ಧಾನ್ಯಗಳನ್ನು ಸೇರಿಸಿಕೊಳ್ಳಿ. ಕುಡಿಯುವ ನೀರಿನ ಪ್ರಮಾಣ ಕಡಿಮೆಯಾದರೂ ಕೂದಲಿಗೆ ಹಾನಿಯಾಗುತ್ತದೆ. ಬೇಸಿಗೆಯಲ್ಲಿ ಉಂಟಾಗುವ ನಿರ್ಜಲೀಕರಣವಂತೂ ಕೂದಲಿಗೆ ಸಿಕ್ಕಾಪಟ್ಟೆ ತೊಂದರೆ ನೀಡುತ್ತದೆ. ಹಾಗಾಗಿ ನೀರು-ಆಹಾರ ಎರಡೂ ಗಮನಿಸಬೇಕಾದ ಅಂಶಗಳು.

Improved Sleep Health Benefits Of Hot Water Bath

ನಿದ್ದೆ

ದೇಹದ ಯಾವುದೇ ಭಾಗಕ್ಕೆ ಆಗುವ ಹಾನಿಯನ್ನು ರಿಪೇರಿ ಮಾಡುವ ಸಮಯವೆಂದರೆ ನಿದ್ದೆ. ದಿನವಿಡೀ ನಾವು ಮಾಡುವ ಕೆಲಸಗಳಿಂದ ಉಂಟಾಗುವ ಮಾನಸಿಕ, ದೈಹಿಕ ಒತ್ತಡಗಳನ್ನು ನಿವಾರಿಸಿ ದೇಹವನ್ನು ಸಮಸ್ಥಿತಿಗೆ ತರುವಲ್ಲಿ ನಿದ್ದೆ ಮಹತ್ವದ ಪಾತ್ರ ವಹಿಸುತ್ತದೆ. ಇದರಿಂದ ಹಾರ್ಮೋನುಗಳ ಏರುಪೇರನ್ನೂ ಸರಿದೂಗಿಸಬಹುದು. ಹಾಗಾಗಿ ಪ್ರತಿದಿನ ಕಣ್ತುಂಬಾ ನಿದ್ದೆ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

Lok Sabha Election 2024: ಕಾರವಾರದಲ್ಲಿ ಸೋಮವಾರ ಎಂಇಎಸ್‌ನ ಅಭ್ಯರ್ಥಿ ನಿರಂಜನ್ ಉದಯ ಸಿಂಹ ಸರ್ದೇಸಾಯಿ ಉತ್ತರಕನ್ನಡ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

VISTARANEWS.COM


on

Niranjan Sardesai is contesting from MES as a non party candidate for Uttara Kannada constituency
Koo

ಕಾರವಾರ: ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಇದೀಗ ಉತ್ತರ ಕನ್ನಡಕ್ಕೂ ಕಾಲಿಟ್ಟಿದ್ದು, ಸಂಯುಕ್ತ ಮಹಾರಾಷ್ಟ್ರ ರಚನೆಯ ಗುರಿಯೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಗೆ (Lok Sabha Election 2024) ಸ್ಪರ್ಧಿಸಲು ಮುಂದಾಗಿದೆ. ಕಾರವಾರದಲ್ಲಿ ಸೋಮವಾರ ಎಂಇಎಸ್‌ನ ಅಭ್ಯರ್ಥಿ ನಿರಂಜನ್ ಉದಯ ಸಿಂಹ ಸರ್ದೇಸಾಯಿ ಉತ್ತರಕನ್ನಡ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ನಗರದ ಮಿತ್ರಸಮಾಜ ಮೈದಾನದಿಂದ 30ಕ್ಕೂ ಅಧಿಕ ಬೆಂಬಲಿಗರೊಂದಿಗೆ, ಸಂಯುಕ್ತ ಮಹಾರಾಷ್ಟ್ರ ರಚನೆಯ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಬಳಿಕ ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್‌ಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: Elon Musk: ಭಾರತದಲ್ಲಿ 2 ಲಕ್ಷ ಎಕ್ಸ್‌ ಖಾತೆಗಳು ಬ್ಯಾನ್‌

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಭ್ಯರ್ಥಿ ನಿರಂಜನ್, ಮರಾಠಿ ಭಾಷಿಕರ ಮೇಲಿನ ದೌರ್ಜನ್ಯದ ವಿರುದ್ಧ ಬೆಳಗಾವಿ ಹಾಗೂ ಉತ್ತರ ಕನ್ನಡದಲ್ಲಿ ಈ ಬಾರಿ ಎಂಇಎಸ್‌ನಿಂದ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಪಕ್ಷಗಳು ಮರಾಠಿಗರನ್ನು ಕೇವಲ ಅವರ ಅಭಿವೃದ್ಧಿಗಾಗಿ ಬಳಸಿಕೊಳ್ಳುತ್ತಿವೆ. ಹೀಗಾಗಿ ಮರಾಠಿ ಭಾಷೆ, ಸಂಸ್ಕೃತಿಯ ಪರವಾಗಿ ಇರುವಂತೆ ಮರಾಠಾ ಮತದಾರರಿಗೆ ಮನವಿ ಮಾಡಿದ್ದು, ಯಾವುದೇ ರಾಷ್ಟ್ರೀಯ ಪಕ್ಷಗಳು ಹಣ ನೀಡಿದರೂ ಅವರನ್ನ ಬೆಂಬಲಿಸಬೇಡಿ ಎಂದರು.

ಇನ್ನು ಎಂಇಎಸ್ ಛತ್ರಪತಿ ಶಿವಾಜಿ ಮಹಾರಾಜರ ವಿಚಾರಧಾರೆಗಳೊಂದಿಗೆ ಎಲ್ಲ ಜಾತಿ ಧರ್ಮಗಳನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳಿಂದ ಮರಾಠಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕನ್ನಡಿಗರ ಮೇಲೆ ನಮಗೆ ಯಾವುದೇ ದ್ವೇಷ ಇಲ್ಲ, ಕನ್ನಡ ನಮ್ಮ ಚಿಕ್ಕಮ್ಮ ಇದ್ದಂತೆ. ಆದರೆ ಭಾಷಾಧಾರಿತ ಗಡಿ ವಿವಾದವನ್ನು ಸರ್ಕಾರಗಳು ಮಾಡಿದ್ದು. ಭಾಷಾಧಾರಿತ ಪ್ರಾಂತ್ಯಗಳ ರಚನೆಯಿಂದ 40 ಲಕ್ಷಕ್ಕೂ ಅಧಿಕ ಮರಾಠಿಗರು ಕರ್ನಾಟಕದಲ್ಲಿ ಸಿಲುಕಿದ್ದಾರೆ. ಇದರ ವಿರುದ್ಧ ಕಳೆದ 60ಕ್ಕೂ ಅಧಿಕ ವರ್ಷಗಳಿಂದ ನಾವು ಹೋರಾಡುತ್ತಿದ್ದೇವೆ. ಗಡಿ ಜಿಲ್ಲೆಗಳಲ್ಲಿ ಮರಾಠಿ ಹಾಗೂ ಕನ್ನಡದ ದ್ವಿಭಾಷೆಯ ಆಡಳಿತ ವ್ಯವಸ್ಥೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಇದನ್ನೂ ಓದಿ: MS Dhoni : ವಿರಾಟ್ ಕೊಹ್ಲಿಯಂತೆ ಐಪಿಎಲ್​ನಲ್ಲಿ ವಿಶೇಷ ಸಾಧನೆ ಮಾಡಿದ ಮಹೇಂದ್ರ ಸಿಂಗ್​ ಧೋನಿ

ಕಾರವಾರ, ಜೋಯಿಡಾ, ಹಳಿಯಾಳ ಭಾಗಗಳಲ್ಲಿದ್ದ ಮರಾಠಿ ಶಾಲೆಗಳನ್ನು ಹಂತ ಹಂತವಾಗಿ ಬಂದ್ ಮಾಡಲಾಗಿದೆ. ಬೆಳಗಾವಿಯ ಖಾನಾಪುರ ಭಾಗದಲ್ಲಿ 50% ಶೇಕಡಾ ಜನತೆ ಮರಾಠಿ ಮಾತನಾಡುತ್ತಾರೆ. ಆದರೂ ಅಲ್ಲಿನ ಮರಾಠಿ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೀಡದೇ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ನಾವು ಕನ್ನಡದ ವಿರೋಧಿಗಳಲ್ಲ, ನಮ್ಮ ಮಾತೃಭಾಷೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಮರಾಠಿಗರಿರುವಲ್ಲಿ ಕನ್ನಡದೊಂದಿಗೆ ಮರಾಠಿ ಭಾಷೆಯ ನಾಮಫಲಕಗಳನ್ನೂ ಅಳವಡಿಸಬೇಕು. ಈ ಎಲ್ಲ ಹೋರಾಟಗಳಿಗೆ ದನಿಯಾಗಲು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಎಂದು ಅಭ್ಯರ್ಥಿ ನಿರಂಜನ್ ತಿಳಿಸಿದರು.

Continue Reading

ಮಳೆ

Karnataka Weather : ಮಲೆನಾಡಿಗಷ್ಟೇ ಮಳೆ ಅಲರ್ಟ್‌; ಬೆಂಗಳೂರಿನಲ್ಲಿ ಹೇಗೆ?

Dry weather : ರಾಜ್ಯಾದ್ಯಂತ ಎರಡು ದಿನಗಳ ಕಾಲ ಶುಷ್ಕ ವಾತಾವರಣವು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ ಒಣಹವೆ (Dry weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ. ಏ.16ರಿಂದ ಮಲೆನಾಡಿನಾದ್ಯಂತ ಮಳೆಯಾಗುವ (Rain News) ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಆದರೆ ಏಪ್ರಿಲ್ 15 ರಿಂದ 16 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮುಂದುವರಿಯಲಿದೆ. ಹೀಗಾಗಿ ಬಿಸಿ ತಾಪಮಾನ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ.

ಬೆಂಗಳೂರಿನಿಂದ ದೂರ ಉಳಿದ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸದ್ಯಕ್ಕೆ ಹವಾಮಾನ ಇಲಾಖೆ ಪ್ರಕಾರ ಮಳೆಯಾಗುವ ಯಾವುದೇ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶವು 35 ಹಾಗೂ ಕನಿಷ್ಠ ಉಷ್ಣಾಂಶವು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Brain Exercise: ಚುರುಕಾಗಿರಬೇಕೇ? ದೇಹಕ್ಕೆ ವ್ಯಾಯಾಮ ಮಾಡಿದರೆ ಸಾಲದು, ಮೆದುಳಿಗೂ ಮಾಡಿ!

ಏಪ್ರಿಲ್‌ 17 ರಿಂದ ಮತ್ತೆ ಮಳೆ ಶುರು

ಏಪ್ರಿಲ್‌ 17 ರಿಂದ 20ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಇದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರುಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

19ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

20ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident in Hubballi
ಹುಬ್ಬಳ್ಳಿ9 mins ago

Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

Rameshwaram Cafe
ಕ್ರೈಂ26 mins ago

Rameshwaram Cafe Blast: ಐಟಿ ಬಿಟಿ ಜನರೇ ರಾಮೇಶ್ವರಂ ಕೆಫೆ ಬಾಂಬರ್‌ಗಳ ಟಾರ್ಗೆಟ್ ಆಗಿದ್ದರು!

New Job Trend
ಉದ್ಯೋಗ29 mins ago

New Job Trend: ಉದ್ಯೋಗ ಕ್ಷೇತ್ರದಲ್ಲೊಂದು ಹೊಸ ಟ್ರೆಂಡ್; ಏನಿದು ಡ್ರೈ ಪ್ರಮೋಷನ್?

Boat Capsize
ದೇಶ47 mins ago

Boat Capsize: ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

IPL 2024
ಕ್ರಿಕೆಟ್50 mins ago

IPL 2024: ದಯವಿಟ್ಟು ಆರ್​ಸಿಬಿ ತಂಡವನ್ನು ಮಾರಿಬಿಡಿ; ಅಳಲು ತೋಡಿಕೊಂಡ ಟೆನಿಸ್​ ದಿಗ್ಗಜ

IPL 2024
ಕ್ರಿಕೆಟ್1 hour ago

IPL 2024: ವಿಶ್ರಾಂತಿ ಬಯಸಿದ ಗ್ಲೆನ್ ಮ್ಯಾಕ್ಸ್​ವೆಲ್​; ಮುಂದಿನ ಪಂದ್ಯಗಳಿಗೆ ಅಲಭ್ಯ

elephant death in dubare camp
ಕೊಡಗು1 hour ago

Elephant Death: ಕ್ಯೂಟ್‌ ಆಗಿ ಆಟವಾಡುತ್ತಿದ್ದ ತಬ್ಬಲಿ ಮರಿಯಾನೆಗೆ ಕೊನೆಗೂ ಸಿಗಲಿಲ್ಲ ತಾಯಿ

Right To Sleep
ಪ್ರಮುಖ ಸುದ್ದಿ1 hour ago

Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

s jaishankar book the india way
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

IPL 2024
ಕ್ರೀಡೆ2 hours ago

IPL 2024: 6 ಸೋಲು ಕಂಡರೂ ಆರ್​ಸಿಬಿಯ ಪ್ಲೇ ಆಫ್ ಆಸೆ ಇನ್ನೂ ಜೀವಂತ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ6 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 202423 hours ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌