Importance And Significance Of Guru Purnima in kannadaGuru Purnima 2023 : ʻಗುರುʼ ಎಂದರೆ ʻಲಘುʼ ಅಲ್ಲ; ಗುರುವೇ ದೇವರು - Vistara News

ಧಾರ್ಮಿಕ

Guru Purnima 2023 : ʻಗುರುʼ ಎಂದರೆ ʻಲಘುʼ ಅಲ್ಲ; ಗುರುವೇ ದೇವರು

ವೇದಗಳನ್ನು ಬೋಧಿಸಿದ ಮಹಾಗುರುವಾದ ವೇದ ವ್ಯಾಸರ ಜಯಂತಿಯನ್ನು ಗುರುಪೂರ್ಣಿಮೆ ಎಂದು ಆಚರಿಸುವ ಮೂಲಕ ಸಮಸ್ತ ಗುರು ಪರಂಪರೆಗೆ ಕೃತಜ್ಞತೆ ಸಲ್ಲಿಸುವ ಪರಿಪಾಠ ಬೆಳೆದುಬಂದಿದೆ. ಇಂದು ಗುರುಪೂರ್ಣಿಮಾ (Guru Purnima 2023). ತನ್ನಿಮಿತ್ತ ಲೇಖನ ಇಲ್ಲಿದೆ.

VISTARANEWS.COM


on

Guru Purnima 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
veereshananda saraswati

ಸ್ವಾಮಿ ವೀರೇಶಾನಂದ ಸರಸ್ವತೀ
ಅಧ್ಯಕ್ಷರು, ರಾಮಕೃಷ್ಣ-ವಿವೇಕಾನಂದ ಆಶ್ರಮ, ತುಮಕೂರು
ಮನುಷ್ಯನ ಸರ್ವತೋಮುಖ ಅಭಿವೃದ್ಧಿಯತ್ತ ವಿಶೇಷವಾಗಿ ಗಮನಿಸಿ ಅರ್ಥಪೂರ್ಣವಾಗಿ ಕಾರ್ಯೋನ್ಮುಖ ವಾಗುವ ವಿಚಾರದಲ್ಲಿ ಪ್ರಾಚೀನ ಭಾರತ ಜಗತ್ತಿಗೆ ನೀಡಿದ ಕೊಡುಗೆ ಅತ್ಯಪಾರ. ಪ್ರತಿಯೊಬ್ಬ ಮಾನವನ ಬದುಕನ್ನು ರೂಪಿಸುವಲ್ಲಿ ಜನ್ಮ ನೀಡುವ ಮಾತಾಪಿತೃಗಳು ಹಾಗೂ ವಿದ್ಯೆ ಸಂಸ್ಕಾರಗಳನ್ನಿತ್ತ ಗುರು ಸಮೂಹವು ಗೌರವಾನ್ವಿತರೆನಿಸುತ್ತಾರೆ, ಪೂಜನೀಯರೂ ಆಗಿದ್ದಾರೆ.

ತಾಯಿ-ತಂದೆ ಮತ್ತು ಗುರುವಿನ ಗರಡಿಯಲ್ಲಿ ಸಮರ್ಪಕವಾಗಿ ತರಬೇತಿ ಹೊಂದಿದ ಜೀವಿಯು ಕಾಲಕ್ರಮದಲ್ಲಿ “ಮಾನವ ಸಂಪನ್ಮೂಲ”ವಾಗಿ ಜಗತ್ತಿಗೆ ಸಮರ್ಪಿತವಾಗುವ ಪ್ರಕ್ರಿಯೆ ಮನೋಜ್ಞವಾದದ್ದು. ಈ ಮೂರು ಅದ್ಭುತ ಶಕ್ತಿಗಳನ್ನು, “Parents are first teachers and teachers are second parents”ಎಂಬ ಮಾತನ್ನು ಸಮಾಜವು ಸಮರ್ಥಿಸಿರುವುದು ಮಾನವನ ಸಮಗ್ರ ರಕ್ಷಣೆ, ಪೋಷಣೆ ಹಾಗೂ ಉದ್ಧಾರದ ಪಯಣಕ್ಕೆ ಹಿಡಿದ ಕೈಗನ್ನಡಿ ಆಗಿದೆ.
ನ ಗುರೋರಧಿಕಂ ತತ್ತ್ವಂ ನ ಗುರೋರಧಿಕಂ ತಪಃ।
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ॥

ಗುರುವಿಗಿಂತಲೂ ಅಧಿಕವಾದ ತತ್ತ್ವವಿಲ್ಲ; ಗುರುವಿಗಿಂತಲೂ ಅಧಿಕವಾದ ತಪಸ್ಸಿಲ್ಲ; ತತ್ತ್ವಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು ಯಾವುದೂ ಇಲ್ಲ. ಆದ್ದರಿಂದ ಶ್ರೀಗುರುವನ್ನು ನಮಿಸುತ್ತೇನೆ. ಇದೊಂದು ಅದ್ಭುತವಾದ ಗುರುಸ್ತುತಿ.

ತತ್ತ್ವದ ಮೂರ್ತರೂಪವಾದ ಗುರುವು ನಮ್ಮ ಬದುಕಿನ ಪಯಣದಲ್ಲಿ ಚುಕ್ಕಾಣಿಗನಾಗಿ ನಮ್ಮೊಂದಿಗೆ ಸಂಚರಿಸುತ್ತಾನೆ. ಧರ್ಮದ ಪ್ರತಿನಿಧಿ ಎಂದೆನಿಸಿದ ಆತನ ಕೃಪೆ ಅಸಾಧಾರಣವಾದದ್ದು ಮತ್ತು ಯುಗಪ್ರವರ್ತಕರಾದ ಅವತಾರಪುರುಷರೂ ಈ ಗುರುಶಕ್ತಿಗೆ ಮಣಿದಿದ್ದಾರೆ.

ಶ್ರೀಗುರುವು ತನ್ನ ಶಿಷ್ಯನನ್ನು ಧರ್ಮನಿಷ್ಟನಾಗಿ ಬದುಕಿಗೆ ಪ್ರೇರೇಪಿಸಿದಾಗ ಅವನು ತನ್ನ ಆತ್ಮಸಾಕ್ಷಿಯನ್ನು ಗೌರವಿಸಿ ಬದುಕಿನ ಒಳಿತು ಕೆಡಕುಗಳೊಂದಿಗೆ ಹೋರಾಡುತ್ತಾನೆ. ಕಾಮ-ಕ್ರೋಧಗಳನ್ನು ತನ್ನ ನೈತಿಕ ಬಲದಿಂದ ನಿಯಂತ್ರಿಸಿ ಅವುಗಳನ್ನು ಯೋಗ್ಯ ಪ್ರಮಾಣದಲ್ಲಿ ನಿರ್ವಹಿಸುತ್ತಾನೆ. ಅವನ ಆಲೋಚನೆಗಳು ಮತ್ತು ಅವುಗಳಿಂದ ಉಂಟಾಗುವ ನಡೆವಳಿಕೆಗಳು ಆತ್ಮಸಾಕ್ಷಿಗೆ ಮಣಿದು ಸಾಗುತ್ತವೆ. “ಅಂತರಂಗಕ್ಕಿಂತ ನ್ಯಾಯಾಲಯವಿಲ್ಲ; ಆತ್ಮಸಾಕ್ಷಿಗಿಂತ ತೀರ್ಪು ಮತ್ತೊಂದಿಲ್ಲ” ಎಂಬ ಸತ್ಯವನ್ನು ಗುರುವು ಶಿಷ್ಯನ ಆಂತರ್ಯದಲ್ಲಿ ಪ್ರತಿಷ್ಠಾಪಿಸುತ್ತಾನೆ.

ಗುರು ಶಕ್ತಿ ಮೀರಿದ್ದು ಇನ್ನಾವುದೂ ಇಲ್ಲ!

ಲೌಕಿಕ ಗುರುಗಳು ವಿವೇಕಿಗಳಾಗಿ ಮುಂದುವರೆದದ್ದೇ ಆದರೆ ಅವರು ಆಧ್ಯಾತ್ಮಿಕ ಗುರುಗಳ ಸತ್ಸಂಗದ ಅಮೃತವನ್ನು ತಾವೂ ಸವಿಯಬಲ್ಲರು, ಶಿಷ್ಯರಿಗೂ ಉಣಬಡಿಸಬಲ್ಲರೆಂಬ ಸತ್ಯವನ್ನು ನಾವು ಗಮನಿಸಬೇಕು. ಗುರುಶಕ್ತಿಯನ್ನು ಮೀರಿದ್ದು ಈ ಜಗತ್ತಿನಲ್ಲಿ ಇನ್ನಾವುದೂ ಇಲ್ಲ. ತನ್ನಡೆಗೆ ಬಂದ ಪುಣ್ಯಾತ್ಮರನ್ನು ಆತ ಸಂತೋಷದಿಂದಲೂ ಮತ್ತು ಪಾಪಾತ್ಮರನ್ನು ಕಡೆಗಣಿಸದೆ ಕರುಣೆಯಿಂದ ಸ್ವೀಕರಿಸುವ ವಿಧಾನವೇ ಆಲೋಚನಾಯೋಗ್ಯವಾದದ್ದು. ಕೈಯಲ್ಲಿ ಬಿಡಿಗಾಸಿಲ್ಲದವನನ್ನು ಅಥವಾ ಹೊಟ್ಟೆಗೆ ತುತ್ತು ಅನ್ನವಿಲ್ಲದವನನ್ನು ಜನರು “ದೀನ” ಎಂದೇ ಗುರ್ತಿಸಿರಬಹುದಾದರೂ ಗುರುಕೃಪೆ ಇಲ್ಲದವನಿಗಿಂತ ದೀನ ಮತ್ತೊಬ್ಬನಿಲ್ಲ! ಗುರುಕೃಪೆಯನ್ನು ಕಳೆದುಕೊಂಡವನ ನಷ್ಟ ಅಷ್ಟಿಷ್ಟಲ್ಲ.
ಶ್ರೀಗುರುವಿನ ಬಗ್ಗೆ ಜಗತ್ತು ಕಂಡರಿತ ಅದ್ಭುತ ವಿಚಾರಗಳು ಇಂತಿದೆ;
ಗುರುಚರಣಾಂಬುಜ ನಿರ್ಭರ ಭಕ್ತಃ
ಸಂಸಾರಾದಚಿರಾದ್ಭವ ಮುಕ್ತಃ
ಇಂದ್ರಿಯ ಮಾನಸ ನೀಯಮಾದೇವಂ
ದ್ರಕ್ಷ್ಯಸಿ ನಿಜಹೃದಯಸ್ಥಂ ದೇವಂ॥
“ಎಲೈ ಮಾನವನೇ, ಶ್ರೀ ಗುರುಪಾದಪದ್ಮಗಳಲ್ಲಿ ಪರಿಪೂರ್ಣ ಭಕ್ತಿಯುಳ್ಳವನಾಗಿ ಸಂಸಾರದಿಂದ ಶೀಘ್ರವಾಗಿ ಮುಕ್ತನಾಗು. ಇಂದ್ರಿಯಗಳೊಂದಿಗೆ ಮನಸ್ಸನ್ನು ನಿಗ್ರಹಿಸಿದಾಗ ನಿನ್ನ ಹೃದಯಸ್ಥನಾದ ಈಶ್ವರನನ್ನು ನೋಡುವೆ” ಎಂದಿದ್ದಾರೆ ಶ್ರೀಶಂಕರ ಭಗವತ್ಪಾದರು.

ಮನುಷ್ಯನು ಜಾಗೃತ ಸ್ಥಿತಿಯಲ್ಲಿ ಬದುಕಲು ಪೂರಕವಾದ ಜೀವನ ವಿಧಾನಕ್ಕೆ ಶ್ರೀ ಗುರುವು ಪ್ರೇರೇಪಿಸುತ್ತಾನೆ. ಧರ್ಮಕ್ಕೆ ನಿರಂತರವಾಗಿ ಗೌರವ ತೋರುತ್ತಾ ಆಧ್ಯಾತ್ಮಿಕ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಪ್ರಚೋದನೆ ಮಹಾಭಾರತದ ಈ ಶ್ಲೋಕದಲ್ಲಿ ವ್ಯಕ್ತವಾಗಿದೆ.
ನ ಜಾತು ಕಾಮಾತ್ ನ ಭಯಾತ್ ನ ಲೋಭಾತ್
ಧರ್ಮಂ ತ್ಯಜೇತ್ ಜೀವಿತಸ್ಯಾಪಿ ಹೇತೋಃ।
ನಿತ್ಯೋ ಧರ್ಮಃ ಸುಖದುಃಖೇ ತ್ವನಿತ್ಯೇ
ಜೀವೋ ನಿತ್ಯೋ ಹೇತುರಸ್ಯತ್ವನಿತ್ಯಃ ॥

ಕಾಮದಿಂದಾದಲಿ, ಭಯದಿಂದಾಗಲಿ, ಲೋಭದಿಂದಾಗಲಿ ಮಾನವನು ತನ್ನ ಜೀವವನ್ನು ಉಳಿಸಿಕೊಳ್ಳುವುದಕ್ಕೂ ಕೂಡ ಧರ್ಮವನ್ನು ತ್ಯಜಿಸಬಾರದು. ಏಕೆಂದರೆ ಧರ್ಮವು ನಿತ್ಯವಾದದ್ದು. ಸುಖದುಃಖಗಳು ಅನಿತ್ಯವಾದವು. ಜೀವವು ನಿತ್ಯ, ದೇಹದಲ್ಲಿ ಆತ್ಮವು ಮಿತಗೊಳ್ಳುವುದಕ್ಕೆ ಕಾರಣವು ಅಂದರೆ ಜೀವಕಾರಣವು ಅನಿತ್ಯ!

ಲೋಕ ಗುರು ಶ್ರೀ ಶಂಕರಭಗವತ್ಪಾದರು ತಮ್ಮ ವಿವೇಕಚೂಡಾಮಣಿಯಲ್ಲಿ ಮಾನವರನ್ನು ವಿವಿಧ ಸ್ತರಗಳಲ್ಲಿ ವಿಶ್ಲೇಷಿಸಿ ವಿವರಿಸಿದ ರೀತಿ ಅದ್ಭುತ.
ದೇಹೋಹಮಿತ್ಯೇವ ಜಡಸ್ಯ ಬುದ್ಧಿಃ
ದೇಹೇ ಚ ಜೀವೇ ವಿದುಷತ್ವಹಂ ಧೀಃ।
ವಿವೇಕವಿಜ್ಞಾನವತೋ ಮಹಾತ್ಮನೋ
ಬ್ರಹ್ಮಾಹಮಿತ್ಯೇವ ಮತಿಸ್ಸದಾತ್ಮನಿ॥

“‘ನಾನೇ ದೇಹ’ ಎಂದು ಭಾವಿಸುವವನು ಜಡಬುದ್ಧಿಯವನು. ತಿಳುವಳಿಕೆಯುಳ್ಳವನು ದೇಹದಲ್ಲಿರುವ ಜೀವಿಯು ತಾನೆಂದು ಭಾವಿಸುತ್ತಾನೆ. ಆದರೆ ವಿವೇಕ ಮತ್ತು ಸಾಕ್ಷಾತ್ಕಾರಗಳನ್ನು ಪಡೆದ ಮಹಾತ್ಮನಾದರೋ ಶಾಶ್ವತವಾದ ಆತ್ಮನೇ ತನ್ನಾತ್ಮ ಎಂದು ಭಾವಿಸಿ ‘ನಾನೇ ಬ್ರಹ್ಮ’ ಎಂದು ತಿಳಿದಿರುತ್ತಾನೆ.”

“ನಿನಗೆ ನೀನೇ ಬೆಳಕಾಗು”ಎಂಬ ಸಂದೇಶವನ್ನಿತ್ತು ಶ್ರೀ ಭಗವಾನ್ ಬುದ್ಧನು ತನ್ನ ಪ್ರಿಯ ಶಿಷ್ಯ ಆನಂದನನ್ನು ಸಂತೈಸುತ್ತಾನೆ. ಭಗವದ್ಗೀತೆಯ ಧ್ಯಾನಯೋಗದಲ್ಲಿ ಶ್ರೀಕೃಷ್ಣನು ಅರ್ಜುನನನ್ನು ನಿಮಿತ್ತವಾಗಿಸಿಕೊಂಡು ಜಗತ್ತನ್ನು ಎಚ್ಚರಿಸಿದ್ದು ಹೀಗೆ;
ಉದ್ಧರೇದಾತ್ಮನಾತ್ಮಾನಂ ನಾತ್ಮಾನಮವಸಾದಯೇತ್।
ಆತ್ಮೈವ ಹ್ಯಾತ್ಮನೋ ಬಂಧುಃ ಆತ್ಮೈವ ರಿಪುರಾತ್ಮನಃ॥

ಅಂದರೆ ಮನಸ್ಸಿನಿಂದಲೇ ತನ್ನನ್ನು ಸಂಸಾರಸಾಗರದಿಂದ ಉದ್ಧಾರ ಮಾಡಿಕೊಳ್ಳಬೇಕು; ಎಂದಿಗೂ ಮನಸ್ಸಿನಿಂದ ತನ್ನನ್ನು ಕುಗ್ಗಿಸಿಕೊಳ್ಳಬಾರದು. ಏಕೆಂದರೆ ಪ್ರತಿಯೊಬ್ಬರ ವಿಷಯದಲ್ಲೂ ಮನಸ್ಸೇ ಬಂಧು, ಮನಸ್ಸೇ ತನ್ನ ಶತ್ರು.
ಪ್ರಾಚೀನ ಭಾರತದ ಗುರುಪರಂಪರೆಯ ಮಹಾನ್ ಚೇತನಗಳನ್ನು ಉಲ್ಲೇಖಿಸಿದಾಗ, ಅವರ ಮಾತುಗಳನ್ನು ಅವಲೋಕಿಸಿದಾಗ ನಮಗೆ ಅರಿವಾಗುವ ಸತ್ಯವೆಂದರೆ ಜಗತ್ತಿನಲ್ಲಿ ನಮ್ಮ ಇಷ್ಟಮಿತ್ರ ಬಂಧು ವರ್ಗವೆಲ್ಲವೂ ಒಂದಿಲ್ಲೊಂದು ದಿನ ನಮ್ಮನ್ನು ತೊರೆದೇ ತೊರೆಯುತ್ತಾರೆ, ಆದರೆ ಗುರುಕೃಪೆ ಎಂಬುದು ಜನ್ಮಜನ್ಮಗಳಲ್ಲಿಯೂ ನಮ್ಮೊಂದಿಗೆ ಸಂಚರಿಸುತ್ತಾ ಸಾಗುತ್ತದೆ!

ಸ್ವಾಮಿ ವಿವೇಕಾನಂದರ ಗುರು ನಮನ

ಇನ್ನು ಈ ಮಹಾನ್ ಗುರುಪರಂಪರೆಯಲ್ಲಿ ಕಳೆದ ಶತಮಾನದಲ್ಲಿ ನಾವು ಗಮನಿಸುವ ಪ್ರಮುಖರಾದ ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ ಜೀವನ ಹಾಗೂ ಅವರಿತ್ತ ಸಂದೇಶಗಳು ಮಾನವನ ಬದುಕಿನಲ್ಲಿ ನವೋತ್ಸಾಹ ಮೂಡಿಸಿವೆ. 1897ರಲ್ಲಿ ಸ್ವಾಮಿ ವಿವೇಕಾನಂದರು ಮದ್ರಾಸಿನಲ್ಲಿ ನೀಡಿದ “ಭಾರತದ ಸಂತರು” ಎಂಬ ಉಪನ್ಯಾಸದಲ್ಲಿ ತಮ್ಮ ಗುರುವಾದ ಶ್ರೀರಾಮಕೃಷ್ಣರ ಬಗ್ಗೆ ಹೃದಯಸ್ಪರ್ಶಿಯಾದ ಮಾತು ಬಂದಿವೆ; ಶಂಕರಾಚಾರ್ಯರ ಪ್ರಖರವಾದ ಬುದ್ಧಿಮತ್ತೆಯನ್ನು, ಶ್ರೀ ಚೈತನ್ಯ ಮಹಾಪ್ರಭುವಿನ ಅದ್ಭುತವೂ ಅನಂತವೂ ಆದ ಹೃದಯವನ್ನು ಒಂದು ದೇಹದಲ್ಲಿ ಮಿಲನಗೊಂಡ ವ್ಯಕ್ತಿತ್ವವೊಂದರ ಅವತರಣಕ್ಕೆ ಕಾಲವು ಪರಿಪಕ್ವವಾಗಿತ್ತು. ಪ್ರತಿಯೊಂದು ಪಂಥದಲ್ಲಿಯೂ ಒಂದೇ ಚೈತನ್ಯವು ಅದೇ ಭಗವಂತನು ಕಾರ್ಯನಿರ್ವಹಿಸುತ್ತಿರುವುದನ್ನು ಕಾಣುವಂಥವನು; ಪ್ರತಿಯೊಂದರಲ್ಲೂ ಭಗವಂತನನ್ನು ಕಾಣಬಲ್ಲವನು; ಭಾರತದ ಒಳಗಾಗಲೀ, ಹೊರಗಾಗಲೀ ಈ ಜಗತ್ತಿನಲ್ಲಿರುವ ಪ್ರತಿಯೊಬ್ಬನ ವಿಷಯಕ್ಕೂ – ದರಿದ್ರ, ದುರ್ಬಲ, ಬಹಿಷ್ಕೃತ, ದಲಿತ–ಈ ಎಲ್ಲರಿಗಾಗಿಯೂ ಯಾರ ಹೃದಯವು ಮರುಗಿ ಕಣ್ಣೀರು ಇಡುತ್ತಿತ್ತೋ ಅಂಥವನು; ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೂ ಇದ್ದ ಎಲ್ಲ ಪರಸ್ಪರ ವಿರೋಧಾತ್ಮಕ ಪಂಥಗಳನ್ನು ಸಮನ್ವಯಗೊಳಿಸಬಲ್ಲ ಉದಾತ್ತವಾದ ಭಾವನೆಗಳನ್ನು ಯಾರ ತೀಕ್ಷ್ಣವಾದ ಮತಿಯು ಕಲ್ಪಿಸಿಕೊಳ್ಳಬಹುದಾಗಿತ್ತೋ, ಹಾಗೆ ಕಲ್ಪಿಸಿಕೊಂಡು ಬುದ್ಧಿ ಹೃದಯಗಳ ವಿಶ್ವಧರ್ಮಗಳ ಅದ್ಭುತ ಸಾಮರಸ್ಯವನ್ನು ಅಸ್ತಿತ್ವಕ್ಕೆ ತರಬಲ್ಲವನಾಗಿದ್ದನೋ ಅಂಥವನ ಜನ್ಮಕ್ಕೆ ಕಾಲವು ಪರಿಪಕ್ವವಾಗಿತ್ತು. ಅಂಥ ವ್ಯಕ್ತಿಯೊಬ್ಬರ ಜನನವಾಯ್ತು. ಆತನ ಪದತಲದಲ್ಲಿ ಅನೇಕ ವರ್ಷಗಳು ಕುಳಿತುಕೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಕಾಲವು ಪಕ್ವವಾಗಿತ್ತು, ಅಂಥ ಮಾನವನೊಬ್ಬನ ಆಗಮನದ ಅವಶ್ಯಕತೆಯಿತ್ತು. ಆತ ಬಂದ.

ಆದರೆ ಅದರಲ್ಲಿನ ಅತ್ಯಂತ ಆಶ್ಚರ್ಯಕರವಾದ ವಿಚಾರವೆಂದರೆ ಆತನ ಜೀವನ ಚಟುವಟಿಕೆಗಳು ನಡೆದದ್ದು ಪಾಶ್ಚಾತ್ಯ ಚಿಂತನೆಗಳಿಂದ ತುಂಬಿ ತುಳುಕುತ್ತಿದ್ದ ನಗರವೊಂದರ ಸಮೀಪದಲ್ಲಿ. ಈ ಪಾಶ್ಚಾತ್ಯ ಭಾವನೆಗಳ ಹಿಂದೆ ಹುಚ್ಚು ಹಿಡಿದು ಓಡುತ್ತಿದ್ದ ನಗರವು ಅದಾಗಿತ್ತು. ಭಾರತದ ಬೇರಾವುದೇ ನಗರಕ್ಕಿಂತಲೂ ಹೆಚ್ಚಿನ ಐರೋಪ್ಯ ಪ್ರಭಾವಕ್ಕೊಳಗಾಗಿದ್ದ ನಗರವದು. ಅಲ್ಲಿ ಆತ ಬಾಳಿದ, ಯಾವುದೇ ಪುಸ್ತಕದ ಓದು ಇಲ್ಲದೇ. ಈ ಮಹೋನ್ನತ ಮತಿಯು ತನ್ನ ಹೆಸರನ್ನು ಬರೆಯುವುದನ್ನೂ ಕಲಿತಿರಲಿಲ್ಲ. ಆದರೆ ನಮ್ಮ ವಿಶ್ವವಿದ್ಯಾನಿಲಯದ ಅತ್ಯಂತ ಧೀಮಂತ ಪದವೀಧರರು ಅವರಲ್ಲಿ ಬುದ್ಧಿಯ ಮೇರುವನ್ನೇ ಕಂಡರು. ವಿಚಿತ್ರವ್ಯಕ್ತಿಯಾಗಿದ್ದ ಆತನೇ “ಶ್ರೀರಾಮಕೃಷ್ಣ ಪರಮಹಂಸರು.”

ಸ್ವಾಮಿ ವಿವೇಕಾನಂದರಿಂದ “ಅವತಾರವರಿಷ್ಠ”ರೆಂದೇ ಸ್ತುತಿಸಲ್ಪಟ್ಟ ಭಗವಾನ್ ಶ್ರೀರಾಮಕೃಷ್ಣರು ಜಗತ್ತಿನ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಹಾನ್ ಮೈಲಿಗಲ್ಲಾದರು. “ಭಗವಂತನು ಯುಗಯುಗಗಳಲ್ಲಿಯೂ ಗುರು ರೂಪದಲ್ಲಿ ಅವತೀರ್ಣನಾಗಿದ್ದಾನೆ. ಸಚ್ಚಿದಾನಂದನೇ ಗುರು, ನಿಷ್ಕಾಮ ಭಾವನೆಯಿಂದ ಕಾರ್ಯಮಾಡುವುದರಿಂದ ಚಿತ್ತಶುದ್ಧಿಯಾಗುವುದಲ್ಲದೇ ಭಗವಂತನಲ್ಲಿ ಅನುರಾಗ ವೃದ್ಧಿಸಿ ಆತನ ಸಾಕ್ಷಾತ್ಕಾರಕ್ಕೆ ದಾರಿ ಮಾಡಿಕೊಡುತ್ತದೆ, ಉಸಿರಾಡುವುದೂ ಕರ್ಮವೇ. ಆದ್ದರಿಂದ ಕರ್ಮವನ್ನು ತ್ಯಾಗ ಮಾಡದೆ ಕರ್ಮಫಲವನ್ನು ಭಗವಂತನಿಗರ್ಪಿಸಿ ನಿಶ್ಚಿಂತೆಯಿಂದಿರು…” ಇಂತಹ ಅತ್ಯದ್ಭುತ ಸಂದೇಶಗಳನ್ನಿತ್ತ ಶ್ರೀ ರಾಮಕೃಷ್ಣರು ಮನುಷ್ಯನ ಬದುಕಿಗಿತ್ತ ಭರವಸೆ, ಧ್ಯೇಯ ಹಾಗೂ ಆದರ್ಶೋಪಾಸನೆಯ ವಿಚಾರಗಳು ಸಾಧಕರಿಗೆ ಆಪ್ಯಾಯಮಾನವಾಗಿವೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಗುರುಪಥ ಮೊದಲು!

“ಗುರು ಹಾಗೂ ಗೋವಿಂದರಲ್ಲಿ ನಾನು ಮೊದಲು ವಂದಿಸುವುದು ಗುರುವನ್ನು” ಎಂದಿದ್ದಾರೆ ಕಬೀರದಾಸರು. “ಶಿವಪಥವರಿವಡೆ ಗುರುಪಥ ಮೊದಲು” ಎಂದಿದ್ದಾರೆ ಶರಣರು.
ಅಲೆಗ್ಸಾಂಡರ್ ಚಕ್ರವರ್ತಿ ತನ್ನ ಗುರುವನ್ನು “ಬದುಕಿನ ಉದ್ಧಾರಕ” ಎಂದಿದ್ದಾನೆ. “ಹರಿ ಮುನಿದರೆ ಗುರು ಕಾಯ್ವನು, ಗುರು ಮುನಿದರೆ ಕಾವರಾರು?” ಎಂದಿದ್ದಾರೆ ಸಾಧಕರು.
“ಗುರು” ಎಂದರೆ “ಲಘು” ಅಲ್ಲ. ಗುರುವೇ ತತ್ತ್ವ, ಆತನೇ ತಪಸ್ಸು! ತರಗತಿಯಲ್ಲಿ ಮಕ್ಕಳ ಮುಂದಿರುವ ಶಿಕ್ಷಣವೇ ಶ್ರೇಷ್ಠ ಗ್ರಂಥ! The last reference bookಆತನೇ ಆಗಿದ್ದಾನೆ.

ಗುರುವನ್ನು ಲಘುವಾಗಿ ಭಾವಿಸುವುದರೊಂದಿಗೆ ಮಾನವನ ಸಂತತಿ ಅವನತಿಯತ್ತ ಸಾಗುತ್ತದೆ. ಆದರೆ “ಗುರು”ವಾದವನು ತನ್ನ ಘನತೆ, ಗೌರವ, ಪವಿತ್ರತೆ ಮೊದಲಾದ ಆದರ್ಶಗಳಿಗೆ ಚ್ಯುತಿ ತರದಂತೆ ಎಚ್ಚೆತ್ತ ಜೀವನ ನಡೆಸಬೇಕು. ಶಿಕ್ಷಕನ ಬದುಕಿನಲ್ಲಿ ಸಡಿಲವಾದ, ಹಗುರವಾದ ಉಡಾಫೆಯ ನಡೆವಳಿಕೆ ಸಲ್ಲದು. ಸಮಾಜವು ಶಿಕ್ಷಕರಲ್ಲಿ ಭರವಸೆ ಕಳೆದುಕೊಳ್ಳಬಾರದು. ಅಷ್ಟೇ ಅಲ್ಲದೇ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಶ್ರದ್ಧೆ ನಿಷ್ಠೆ, ಭರವಸೆಗಳನ್ನು ಕಳೆದುಕೊಂಡು ಬಾಳುವೆ ನಡೆಸುವದಿನಗಳು ಎಂದೆಂದೂ ಬಾರದಿರಲಿ ಎಂಬ ಪ್ರಾರ್ಥನೆ ನನ್ನದು.
ಅಂತಿಮವಾಗಿ, “ದೇವರಿಗಿಂತ ಗುರುವೇ ಅಧಿಕ” ಎಂದು ಕೆಲವರು. ಇಲ್ಲ, “ಗುರುವಿಗಿಂತ ದೇವರೇ ಅಧಿಕ” ಎಂದು ಇನ್ನು ಕೆಲವರು. ಆದರೆ ಏಕೆ ಈ ಅಧಿಕಪ್ರಸಂಗ? “ಗುರುವೇ ದೇವರು, ದೇವರೇ ಗುರು!” ಎಂದಿದ್ದಾರೆ ಬ್ರಹ್ಮಲೀನ ಪೂಜ್ಯ ಸ್ವಾಮಿ ಪುರುಷೋತ್ತಮಾನಂದರು.

ಇದನ್ನೂ ಓದಿ : Guru Purnima 2022 | ಗುರು ಪದದ ಅರ್ಥ ಅರಿತವರಿಗಷ್ಟೇ ಮುಕ್ತಿ

ನಾವು ಯಾವುದೇ ಕಾರ್ಯವನ್ನು ಕೈಗೆತ್ತಿಕೊಂಡರೂ ಪ್ರಾರಂಭದಲ್ಲಿ ಗುರುವಿಗೆ ವಂದನೆ ಸಲ್ಲಿಸಲೇಬೇಕು. ವೇದಾಧ್ಯಯನವು ಪ್ರಾರಂಭವಾಗುವುದೂ “ಶ್ರೀ ಗುರುಭ್ಯೋ ನಮಃ” ಎಂದೇ!
ಜಗಬೆಳಗಿದ ಗುರುಪರಂಪರೆಗೆ ಕೋಟಿ ಕೋಟಿ ನಮನಗಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
Terrorist Arrested
ಕರ್ನಾಟಕ28 mins ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ36 mins ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ42 mins ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ1 hour ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ1 hour ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ2 hours ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ2 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ2 hours ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest2 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ17 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌