importance of Daan Karma, here's what to donate what Phala You Should Know in kannadaImportance Of Daan : ಈ ಮೂರು ವಸ್ತುಗಳ ದಾನದಿಂದ ಪುಣ್ಯ ಅಧಿಕ Vistara News
Connect with us

ಧಾರ್ಮಿಕ

Importance Of Daan : ಈ ಮೂರು ವಸ್ತುಗಳ ದಾನದಿಂದ ಪುಣ್ಯ ಅಧಿಕ

Importance Of Daan : ನಿಸ್ವಾರ್ಥ ಭಾವನೆಯಿಂದ ಮಾಡಿದ ಯಾವುದೇ ದಾನಕ್ಕಾದರೂ ಫಲ ಸಿಕ್ಕೇ ಸಿಗುತ್ತದೆ. ದಾನ ಮಾಡಿದ ವಸ್ತು ಅತ್ಯಂತ ಬೆಲೆಯುಳ್ಳದ್ದೇ ಆಗಿರಬೇಕೆಂದೆನೂ ಇಲ್ಲ. ಯಾವ ವಸ್ತುವಿನ ದಾನದಿಂದ ಏನು ಫಲ ತಿಳಿಯೋಣ ಬನ್ನಿ.

VISTARANEWS.COM


on

importance of daan
Koo

ʻದಾನೇನ ಪಾಣಿಃ ನ ತು ಕಂಕಣೇನʼ ಎಂಬ ಮಾತನ್ನು ನೀವು ಕೇಳಿರಬಹುದು. ದಾನದಿಂದ ಮಾತ್ರವೇ ಕೈಗಳು ಶೋಭಿಸುತ್ತವೆಯೇ ಹೊರತು ಬಂಗಾರದ ಕಡಗಗಳಿಂದಲ್ಲ ಎಂಬುದು ಇದರ ಅರ್ಥ. ದಾನಕ್ಕೆ ನಮ್ಮ ಧರ್ಮದಲ್ಲಿ ಬಹಳ (Importance Of Daan) ಮಹತ್ವವಿದೆ. ದಾನಕ್ಕೆ ಬಹಳದೊಡ್ಡ ಪರಂಪರೆಯೇ ಇದೆ.

ಎಲ್ಲರಿಗೂ ತಿಳಿದಿರುವಂತೆ ದಾನಗಳಲ್ಲಿ ಹಲವಾರು ಪ್ರಕಾರದ ದಾನವಿದೆ. ಗೋದಾನ, ಭೂದಾನ, ಅನ್ನದಾನ, ವಸ್ತ್ರದಾನ ಹೀಗೆ ಹಲವು ದಾನಗಳನ್ನು ನೀಡಲಾಗುತ್ತದೆ. ಎಲ್ಲ ದಾನಗಳೂ ಶ್ರೇಷ್ಠವೇ ಆಗಿವೆ. ಸಾಮರ್ಥ್ಯಕ್ಕೆ ತಕ್ಕಂತೆ ಅಗತ್ಯವಿರುವವರಿಗೆ ದಾನ ನೀಡಿದರೆ ಜನ್ಮಗಳ ಪಾಪ ನಾಶವಾಗುತ್ತದೆ ಎಂಬ ನಂಬಿಕೆ ಇದೆ. ದಾನ ಮಾಡಿದ್ದನ್ನು ಗೌಪ್ಯವಾಗಿ ಇಡುವುದು ಮಾಡಿದ ದಾನಕ್ಕಿಂತ ಹೆಚ್ಚಿನ ಪುಣ್ಯವನ್ನು ತಂದು ಕೊಡುತ್ತದೆ ಎಂದೂ ಹೇಳಲಾಗುತ್ತದೆ.

ದಾನ ಮಾಡುವುದರಿಂದ ವ್ಯಕ್ತಿಯ ಕಷ್ಟ ನಿವಾರಣೆಯಾಗುತ್ತದೆ, ಪಾಪದಿಂದ ಮುಕ್ತಿ ಸಿಗುತ್ತದೆ. ಯಾವ ವ್ಯಕ್ತಿ ನಿಸ್ವಾರ್ಥ ಭಾವದಿಂದ ಯಾರಾದರೂ ಬಡವರಿಗೆ, ನಿರ್ಗತಿಕರಿಗೆ ಅಥವಾ ಅರ್ಹರಿಗೆ ದಾನ ನೀಡುವುದರಿಂದ ಆ ವ್ಯಕ್ತಿಯ ಜೊತೆಗೆ ಅವರ ಕುಟುಂಬದವರಿಗೂ ಪುಣ್ಯ ಲಭಿಸುತ್ತದೆ. ಹಾಗಾಗಿ ಸಾಧ್ಯವಾದಾಗೆಲ್ಲ ದಾನ ಮಾಡಬೇಕೆಂದು ಪುರಾಣಗಳಲ್ಲಿ ಹೇಳಲಾಗಿದೆ.

ಗೋದಾನ, ಭೂದಾನಗಳಂಥ ಹೆಚ್ಚು ಮೌಲ್ಯವುಳ್ಳ ವಸ್ತುಗಳನ್ನು ದಾನವಾಗಿ ನೀಡುವುದು ಎಲ್ಲರಿಗೂ ಸಾಧ್ಯವಿರುವಿರುವುದಿಲ್ಲ, ಹಾಗಾಗಿ ಕಡಿಮೆ ಬೆಲೆ ಹೊಂದಿರುವ, ಎಲ್ಲರಿಗೂ ಕೊಳ್ಳಲು ಸಾಧ್ಯವಾಗುವ ಈ ವಸ್ತುಗಳನ್ನು ದಾನವಾಗಿ ನೀಡಿದರೆ ಉಳಿದೆಲ್ಲವನ್ನೂ ದಾನ ಮಾಡಿದಷ್ಟೇ ಪುಣ್ಯ ಲಭಿಸುತ್ತದೆ. ಹಾಗಾಗಿ ಶಾಸ್ತ್ರದಲ್ಲಿ ಹೇಳಿದ ಈ ಮೂರು ವಸ್ತುಗಳನ್ನು ದಾನವಾಗಿ ನೀಡಿದರೆ ಉತ್ತಮ. ಆ ವಸ್ತುಗಳು ಯಾವುವು ಎಂಬುದನ್ನು ತಿಳಿಯೋಣ;

ಸಂಕಷ್ಟಗಳ ನಿವಾರಣೆಗೆ ಕುಂಕುಮ ದಾನ

ಹಿಂದೂ ಧರ್ಮದಲ್ಲಿ ಕುಂಕುಮಕ್ಕೆ ವಿಶೇಷ ಮಹತ್ವವಿದೆ. ಕುಂಕುಮವು ಸೌಭಾಗ್ಯದ ಸಂಕೇತವಾಗಿದೆ. ಹಾಗಾಗಿ ಕುಂಕುಮವನ್ನು ದಾನ ಮಾಡುವುದರಿಂದ ಪತಿಗೆ ಬರುವ ಎಲ್ಲ ಸಂಕಟಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಜೊತೆಗೆ ಪತಿಯ ಯಶಸ್ಸಿಗೂ ಇದು ಕಾರಣವಾಗುತ್ತದೆ. ಸೌಭಾಗ್ಯದ ಪ್ರತೀಕವಾಗಿರುವ ಕುಂಕುಮವನ್ನು ಸೌಭಾಗ್ಯವತಿ ಸ್ತ್ರೀಯರಿಗೆ ದಾನ ಮಾಡುವುದರಿಂದ ಆರ್ಥಿಕವಾಗಿಯೂ ಒಳಿತಾಗುತ್ತದೆ.

ಶನಿಕಾಟದ ಮುಕ್ತಿಗೆ ಚಪ್ಪಲಿ ದಾನ

ಶಾಸ್ತ್ರಗಳ ಪ್ರಕಾರ ಚಪ್ಪಲಿಯನ್ನು ದಾನವಾಗಿ ನೀಡುವುದು ಅತ್ಯಂತ ಶುಭವಂತೆ. ಇದರಿಂದ ಮುಂಬರುವ ರೋಗ ರುಜಿನಗಳು, ಆರ್ಥಿಕ ಸಂಕಷ್ಟಗಳಂಥ ಅನೇಕ ಸಮಸ್ಯೆಗಳಿಂದ ನಿವಾರಣೆ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಶನಿಯ ಸಾಡೇಸಾತಿ ಮತ್ತು ಅರ್ಧಾಷ್ಟಮದ ಕಾಟದಿಂದ ಸಹ ಮುಕ್ತಿ ದೊರಕುತ್ತದೆ. ಶನಿ ದೋಷವು ಕಾಲಿನಿಂದಲೇ ಆರಂಭವಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಶನಿವಾರದಂದು ಕಪ್ಪು ಬಣ್ಣದ ಚಪ್ಪಲಿಯನ್ನು ದಾನ ಮಾಡುವುದರಿಂದ ಶುಭ ಫಲ ಪ್ರಾಪ್ತವಾಗುತ್ತದೆ.
ಚಪ್ಪಲಿಯನ್ನು ದಾನವಾಗಿ ನೀಡುವಾಗ ಈ ಮಂತ್ರವನ್ನು ಹೇಳಬೇಕೆಂದು ಧರ್ಮ ಗ್ರಂಥಗಳಲ್ಲಿ ಹೇಳಲಾಗಿದೆ;
ಉಪಾನಹೌ ಪ್ರದತ್ತೇ ಮೇ ಕಂಟಕಾದಿನಿವಾರಣೇ|
ಸರ್ವಮಾರ್ಗೇಷು ಸುಖದೇ ಅಥಃ ಶಾಂತಿಂ ಪ್ರಯಚ್ಚ ಮೇ||

ಈ ಶ್ಲೋಕ ಅರ್ಥ ಹೀಗಿದೆ : ಮುಳ್ಳುಗಳಿಂದ ಕಾಲಿನ ರಕ್ಷಣೆ ಮಾಡುವುದರ ಜೊತೆಗೆ ದಾರಿಯುದ್ದಕ್ಕೂ ಸಂತೋಷವನ್ನು ನೀಡುವ ಚಪ್ಪಲಿಯನ್ನು ದಾನವಾಗಿ ನೀಡುತ್ತಿದ್ದೇನೆ. ಇದು ನನಗೆ ಶಾಂತಿ ಮತ್ತು ನೆಮ್ಮದಿ ಸಿಗುವಂತೆ ಮಾಡಲಿ ಎಂಬುದಾಗಿದೆ.

ಸದಾ ರಕ್ಷಣೆಗಾಗಿ ಛತ್ರಿ ದಾನ

ಶಾಸ್ತ್ರಗಳ ಪ್ರಕಾರ ಛತ್ರಿಯನ್ನು ದಾನವಾಗಿ ನೀಡುವುದು ಸಹ ಮಹಾದಾನ. ಶ್ರಾದ್ಧದ ಸಮಯದಲ್ಲಿ ಛತ್ರಿಯನ್ನು ದಾನವಾಗಿ ನೀಡುವ ಪದ್ಧತಿ ಕೆಲವು ಕಡೆ ಇದೆ. ಇದರ ಅರ್ಥವೆನೇಂದರೆ ಮೃತ್ಯುವಿನ ನಂತರ ಮುಂದಿನ ಲೋಕಕ್ಕೆ ಹೋಗುವ ಸಂದರ್ಭದಲ್ಲಿ ಎಲ್ಲ ಋತುಗಳನ್ನು ದಾಟಿಕೊಂಡು ಹೋಗಬೇಕಾಗುತ್ತದೆ. ಹಾಗಾಗಿ ಛತ್ರಿಯು ಈ ಸಮಯದಲ್ಲಿ ಉಪಯೋಗವಾಗುತ್ತದೆ ಎಂಬ ಭಾವನೆಯಿಂದ ನೀಡಲಾಗುತ್ತದೆ.
ಛತ್ರಿಯನ್ನು ದಾನ ಕೊಡುವ ಸಂದರ್ಭದಲ್ಲಿ ಹೇಳುವ ಮಂತ್ರ ಹೀಗಿದೆ ;
ಇಹಮೃತ್ರಾತಪತ್ರಾಣಂ ಕುರು ಮೇ ಕೇಶವ ಪ್ರಭೋ |
ಛತ್ರಂ ತ್ವತ್‌ಪ್ರೀತಯೇ ದತ್ತಂ ಮಮಾಸ್ತು ಚ ಸದಾ ಶುಭಮ್||

ಈ ಶ್ಲೋಕದ ಅರ್ಥ ಹೀಗಿದೆ : ಕೇಶವನೇ ಈ ಛತ್ರಿಯನ್ನು ನಾನು ನಿಮ್ಮ ಕೃಪೆ ಪಡೆಯಲು ದಾನವಾಗಿ ನೀಡಿದ್ದೇನೆ. ಇದು ನನಗೆ ಈ ಲೋಕದಲ್ಲಿ ಮತ್ತು ಪರಲೋಕದಲ್ಲಿ ಬಿಸಿಲಿನಿಂದ ರಕ್ಷಣೆ ಮಾಡಲಿದೆ. ಹಾಗಾಗಿ ಈ ದಾನದಿಂದ ಸದಾ ನನ್ನ ಕಲ್ಯಾಣವಾಗುತ್ತಿರುವಂತೆ ಹರಸು.

ದಾನದ ಮಹತ್ವ ತಿಳಿಸುವ ಈ ವಿಡಿಯೋವನ್ನು ನೋಡಿ.

ಯಾವ ವಸ್ತುವಿನ ದಾನದಿಂದ ಏನು ಲಾಭ?

  1. ವಸ್ತ್ರದಾನದಿಂದ ಆಯಸ್ಸುವೃದ್ಧಿಯಾಗುತ್ತದೆ.
  2. ಭೂ ದಾನದಿಂದ ಬ್ರಹ್ಮ ಲೋಕ ಪ್ರಾಪ್ತಿ.
  3. ಜೇನು ದಾನದಿಂದ (ಸಣ್ಣ ಕಂಚಿನ ಪಾತ್ರೆಯಲ್ಲಿ ನೀಡಬೇಕು) ಪುತ್ರ ಭಾಗ್ಯ
  4. ಗೋದಾನ ದಾನದಿಂದ ಋಷಿ ದೇವ, ಪಿತೃ ಪ್ರೀತಿ
  5. ಬೆಟ್ಟದನೆಲ್ಲಿ ಕಾಯಿ ದಾನದಿಂದ ಜ್ಞಾನ ಪ್ರಾಪ್ತಿ
  6. .ದೇವಾಲಯದಲ್ಲಿ ದೀಪ ದಾನದಿಂದ ಚಕ್ರವರ್ತಿ ಪದವಿ ಎಂದರೆ ಜೀವನದಲ್ಲಿ ಅತ್ಯುನ್ನದ ಪದವಿ ಪ್ರಾಪ್ತಿ.
  7. ದೀಪ ದಾನದಿಂದ ಲೋಪ ಹರಣ
  8. ಬೇಳೆ ಕಾಳಿನ ದಾನದಿಂದ ದೀರ್ಘಾಯುಸ್ಸು ಸಿದ್ಧಿ.
  9. ಅಕ್ಕಿ ದಾನದಿಂದ ಎಲ್ಲಾ ವಿಧವಾದ ಪಾಪ ನಾಶ
  10. ತಾಂಬೂಲ ದಾನದಿಂದ ಸ್ವರ್ಗ ಪ್ರಾಪ್ತಿ
  11. ಕಂಬಳಿ ದಾನದಿಂದ ವಾಯುರೋಗ ನಾಶ
  12. ಹತ್ತಿ ದಾನದಿಂದ ಕುಷ್ಠ ರೋಗ ನಿವಾರಣೆ
  13. ಜನಿವಾರ ದಾನದಿಂದ ಬ್ರಾಹ್ಮಣ ಜನ್ಮ ಲಭಿಸುತ್ತದೆ
  14. ತುಳಸಿ ದಾನದಿಂದ ಸ್ವರ್ಗ ಪ್ರಾಪ್ತಿ
  15. ತುಪ್ಪ ದಾನದಿಂದ ರೋಗ ನಿವಾರಣೆ
  16. ಅನ್ನ ದಾನದಿಂದ ದಾರಿದ್ರ ನಾಶವಾಗುತ್ತದೆ, ಸಾಲಗಳು ತೀರುತ್ತದೆ.
  17. ವಸ್ತು ದಾನದಿಂದ ಆಯುಷ್ಯ ಹೆಚ್ಚುತ್ತದೆ.
  18. ತುಪ್ಪ ದಾನದಿಂದ ರೋಗ ನಿವಾರಣೆಯಾಗುತ್ತದೆ.
  19. ಹಾಲು ದಾನದಿಂದ ದುಖಃ ತೀರುತ್ತದೆ.
  20. ಮೊಸರು ದಾನದಿಂದ ಇಂದ್ರಿಯಗಳು ವೃದ್ಧಿಯಾಗುತ್ತವೆ.
  21. ಹಣ್ಣು ಗಳ ದಾನದಿಂದ ಬುದ್ಧಿ, ಸಿದ್ಧಿಯು ಲಭಿಸುತ್ತದೆ.
  22. ಬಂಗಾರ ದಾನದಿಂದ ಕುಟುಂಬದಲ್ಲಿ ಇರುವ ದೋಷ ನೀಗುತ್ತದೆ.
  23. ಬೆಳ್ಳಿ ದಾನದಿಂದ ಮನಸ್ಸಿನಚಿಂತೆ ನೀಗುತ್ತದೆ.
  24. ತೆಂಗಿನಕಾಯಿ ದಾನದಿಂದ ಅಂದುಕೊಂಡ ಕಾರ್ಯ ನೆರವೇರುತ್ತದೆ.
  25. ನೆಲ್ಲಿಕಾಯಿ ದಾನದಿಂದ ಜ್ಞಾನ ದಕ್ಕುತ್ತದೆ.

ನಿಮ್ಮ ಜಾತಕದಲ್ಲಿ ಯಾವ ಗ್ರಹ ದೋಷವಿದೆ ಎಂಬುದನ್ನು ತಿಳಿದುಕೊಂಡು ಆ ಗ್ರಹಕ್ಕೆ ಸಂಬಂಧಪಟ್ಟ ವಸ್ತುಗಳನ್ನು ದಾನ ಮಾಡುವುದು ಸೂಕ್ತ ಎಂದು ಜ್ಯೋತಿಷ ಶಾಸ್ತ್ರ ಹೇಳುತ್ತದೆ.

ಇದನ್ನೂ ಓದಿ : Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

Edited by

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Mysore Dasara 2023: ಬರ ಹಿನ್ನೆಲೆ ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

Mysore Dasara 2023: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅ.15ರಿಂದ ಮೈಸೂರಿನಲ್ಲಿ ದಸರಾ ಮಹೋತ್ಸವ ಆರಂಭವಾಗಲಿದೆ.

VISTARANEWS.COM


on

Edited by

Mysore dasara
Koo

ಮೈಸೂರು: ಬರ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಅನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ದಸರಾವನ್ನು (Mysore Dasara 2023) ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾ ಆಚರಿಸಲಿದೆ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Mysore Dasara : ನಾದಬ್ರಹ್ಮ ಹಂಸಲೇಖ ಈ ಬಾರಿಯ ಮೈಸೂರು ದಸರಾ ಉದ್ಘಾಟಕ; ಸಿಎಂ ಸಿದ್ದರಾಮಯ್ಯ ಘೋಷಣೆ

ಅ.15ರಿಂದ ನವರಾತ್ರಿ

ಅ.15ರಿಂದ ಮೈಸೂರಿನಲ್ಲಿ ಶರನ್ನವರಾತ್ರಿ ಉತ್ಸವ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಲಾಗುತ್ತದೆ.

  • ಅರಮನೆ ಪೂಜೆಗಳು: ಅ.15ರಂದು ಸಾಯಂಕಾಲ 6.30 ರಿಂದ 7.15ಶುಭಮೇಷ ಲಗ್ನದಲ್ಲಿ ಆರಂಭ.
  • ಅ.20ರಂದು ಶುಕ್ರವಾರ : ಕಾತ್ಯಾಯಿನೀ – ಸರಸ್ವತಿ ಪೂಜೆ.
    (ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ ಅ.24ರಂದು ಮಂಗಳವಾರ ವಿಸರ್ಜನೆ)
  • ಅ.21ರಂದು ಶನಿವಾರ : ಕಾಳರಾತ್ರಿ, ಮಹಿಷಾಸುರ ಸಂಹಾರ.
  • ಅ.23 ಸೋಮವಾರ : ಆಯುಧ ಪೂಜೆ.
  • ಅ.24ರಂದು ಮಂಗಳವಾರ : ವಿಜಯದಶಮಿ.
    ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರಿಂದ ನಂದೀ ಧ್ವಜ ಪೂಜೆ.
    ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ ನಂತರ “ಜಂಬೂ ಸವಾರಿ” ಪ್ರಾರಂಭ.
  • ಅ.26ರಂದು ಭಾನುವಾರ : ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ.
Continue Reading

ಕರ್ನಾಟಕ

Communal Harmony : ದರ್ಗಾದಲ್ಲೇ ಗಣಪತಿ ಪ್ರತಿಷ್ಠಾಪನೆ; ಘಂಟೆ ಬಡಿದು ಜೈ ಗಣೇಶ ಎಂದ ಮುಸ್ಲಿಮರು, ಎಂಥಾ ಸೌಹಾರ್ದ!

Communal Harmony : ಬೆಳಗಾವಿಯ ಬೈಲಹೊಂಗಲದ ಕಂಠಿ ಗಲ್ಲಿಯ ದರ್ಗಾದಲ್ಲಿ ಮುಸ್ಲಿಮರೇ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಹಿಂದುಗಳು ಜತೆಯಾಗಿ ನಿಂತು ಪ್ರಾರ್ಥಿಸುತ್ತಾರೆ. ಭಾರತದ ಸೌಹಾರ್ದ ಪರಂಪರೆ ಅತ್ಯುತ್ತಮ ನಿದರ್ಶನವೊಂದು ಈಗಲೂ ಜೀವಂತವಾಗಿದೆ.

VISTARANEWS.COM


on

Edited by

Bailahongala dargah Ganeshothsava
Koo

ಬೆಳಗಾವಿ: ಜಾತಿ, ಧರ್ಮಗಳ ಸಂಘರ್ಷ, ಅಪನಂಬಿಕೆ, ದ್ವೇಷಗಳೇ ತುಂಬಿಕೊಳ್ಳುತ್ತಿರುವ ಕಾಲದಲ್ಲಿ ಮನುಷ್ಯ ನಿಜವಾಗಿಯೂ ಬದುಕಬೇಕಾದ ಬಗೆಗಳು ಆಗಾಗ, ಅಲ್ಲಲ್ಲಿ ತೆರೆದುಕೊಳ್ಳುತ್ತವೆ. ಹಿಂದು-ಮುಸ್ಲಿಮರ ಸ್ನೇಹ ಭಾವದ ಕಾಲವಳಿದು ದ್ವೇಷ ಭಾವವೇ ಉಕ್ಕೇರುತ್ತಿರುವ ಹಂತದಲ್ಲಿ ನಡೆಯುತ್ತಿರುವ ಈ ವಿದ್ಯಮಾನಗಳು (Communal Harmony) ನಿಜಾರ್ಥದಲ್ಲಿ ಕತ್ತಲ ಸುರಂಗದ ಕೊನೆಯಲ್ಲಿರುವ ಬೆಳಕಿನ ಹಣತೆಗಳು ಅನಿಸುತ್ತವೆ. ಇಷ್ಟೊಂದು ಖುಷಿಯಿಂದ ವಿಚಾರವನ್ನು ಹೇಳುವುದಕ್ಕೆ ನಿಜಕ್ಕೂ ಒಂದು ಕಾರಣವಿದೆ.

ಬೆಳಗಾವಿ ಜಿಲ್ಲೆಯ (Belagavi News) ಬೈಲಹೊಂಗಲ ಪಟ್ಟಣದ ಕಂಠಿ ಗಲ್ಲಿಯಲ್ಲಿ (Kanti galli in Bailahongala) ಮುಸ್ಲಿಮರೇ ಮುಂದೆ ನಿಂತು ತಮ್ಮದೇ ದರ್ಗಾದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ (Ganeshothsava at Dargah) ತಾವೇ ಪೂಜೆ ಮಾಡಿ, ತಾವೇ ಘಂಟಾಘೋಷ ಮೊಳಗಿಸಿ ಜೈಗಣೇಶ (Muslims Chanted Jai Ganesha) ಎಂದು ಭಕ್ತಿಯಿಂದ, ಹೃದಯಾಂತರಾಳದಿಂದ ಜಯೋಘೋಷ ಮಾಡಿದ್ದಾರೆ. ಇದಕ್ಕೆ ಅಲ್ಲಿನ ಎಲ್ಲ ಹಿಂದುಗಳು ಸಹವರ್ತಿಗಳಾಗಿ, ಸಾಕ್ಷಿಗಳಾಗಿ ಸಂಭ್ರಮಿಸಿದ್ದಾರೆ.

Bailahongala dargah Ganeshothsava communal harmony 2
ಈ ಗಣೇಶನಿಗೆ ಮುಸ್ಲಿಮರಿಂದಲೇ ಆರತಿ ನಡೆಯುತ್ತದೆ ಹಿಂದೂಗಳು ಮಾರ್ಗದರ್ಶನ ಮಾಡುತ್ತಾರೆ

ಬೈಲಹೊಂಗಲ ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಫಕ್ಕೀರಸ್ವಾಮಿ ದರ್ಗಾದಲ್ಲಿ (Fakeeraswamy Dargah at Kantigalli) ನಡೆದಿರುವ ವಿದ್ಯಮಾನ ಇದು. ಹಾಗಂತ ಇದೇನು ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಲ್ಲ. ಯಾವಾಗ ಬಾಲ ಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವದ ಪರಿಕಲ್ಪನೆ ಸೃಷ್ಟಿಸಿದರೋ ಅಥವಾ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ ಯಾವಾಗ ಶುರುವಾಯಿತೋ ಅಂಥ ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಹಿಂದು ಮತ್ತು ಮುಸ್ಲಿಮರು ಸೇರಿ ಆಚರಿಸುವ ವಿಶೇಷ ಗಣೇಶೋತ್ಸವವಾಗಿ ಇದು ಗಮನ ಸೆಳೆದಿದೆ.

Bailahongala dargah Ganeshothsava communal harmony

ಜಗತ್ತಿನಲ್ಲಿ, ಸುತ್ತಮುತ್ತ ಏನೇ ನಡೆದರೂ ಅದೆಷ್ಟು ತಲಾಂತರಗಳು ಕಳೆದರೂ, ಪೀಳಿಗೆಗಳು ಬದಲಾದದರೂ ಸೌಹಾರ್ದತೆಯ ಈ ಪರಂಪರೆ ಮಾತ್ರ ಯಾವ ಕಲ್ಮಶಕ್ಕೂ ಒಳಗಾಗದೆ, ಯಾವ ಮಾಲಿನ್ಯಕ್ಕೂ ಕಿವಿಗೊಡದೆ ವರ್ಷ ವರ್ಷವೂ ಇನ್ನಷ್ಟು ಸಮೃದ್ಧವಾಗುತ್ತಿದೆ ಎನ್ನುವುದು ಹಿತವಾದ ಸುದ್ದಿ.

Bailahongala dargah Ganeshothsava communal harmony
ಗಣೇಶೋತ್ಸವ ಆಚರಿಸಿದ ಖುಷಿಯಲ್ಲಿ ಅಲ್ಲಿನ ಜನರು

ಇಲ್ಲಿ ಎಲ್ಲ ಜಾತಿ, ಜನಾಂಗದವರು ದರ್ಗಾದ ಆಚರಣೆ ಮತ್ತು ಪರಂಪರೆಗೆ ಹೊಂದಿಕೊಂಡು ಬದುಕುತ್ತಿದ್ದಾರೆ. ದರ್ಗಾದಲ್ಲಿ ನಡೆಯುವ ಪ್ರತಿ ಧಾರ್ಮಿಕ ಆಚರಣೆ, ವಿಧಿ, ವಿಧಾನಗಳಿಗೆ ತಲೆ ಬಾಗಿ ನಡೆದುಕೊಳ್ಳುವ ಸಂಸ್ಕೃತಿ, ಪರಂಪರೆ ಇಲ್ಲಿಯ ಜನರದ್ದಾಗಿದೆ.

ಕೋಮು ಸೌಹಾರ್ದತೆಗೆ ಸಾಕ್ಷಿ ಗಣಪನ ಪ್ರತಿಷ್ಠಾಪನೆ

ಕಂಠಿ ಗಲ್ಲಿಯಲ್ಲಿರುವ ನಿವಾಸಿಗಳು ಪ್ರತಿ ವರ್ಷ ಒಟ್ಟಿಗೆ ಸೇರಿ ಮೊಹರಂ ಆಚರಣೆ ಮಾಡುತ್ತಾರೆ. ಜೊತೆಗೆ ಗಣೇಶ ಚತುರ್ಥಿಯನ್ನು ಅಷ್ಟೇ ನಯ, ವಿನಯ, ಭಕ್ತಿಭಾವದಿಂದ ಬರ ಮಾಡಿಕೊಂಡು ಗಣೇಶನ ಹಬ್ಬ ಆಚರಣೆ ಮಾಡಿಕೊಂಡು ಬಂದಿದ್ದಾರೆ.

Bailahongala dargah Ganeshothsava communal harmony

ಮುಸ್ಲಿಂ ಬಾಂಧವರಿಂದ ಗಣಪನಿಗೆ ಜೈಘೋಷ

ಹಿಂದೂ, ಮುಸ್ಲಿಂ ಬಾಂಧವರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿ, ಗಂಟೆ ಬಾರಿಸಿ, ಆರತಿ ಮಾಡಿ, ನೈವೇದೆ ಸಲ್ಲಿಸಿ ಪ್ರಾರ್ಥಿಸಿದರು. ಅರ್ಚಕರು ಬೋಧಿಸಿದ ಮಂತ್ರ ಘೋಷವನ್ನು ಮುಸ್ಲಿಂ ಬಾಂಧವರು ಭಕ್ತಿಯಿಂದ ನುಡಿದು ಗಜಾನನ ಮಹರಾಜಕೀ ಜೈ ಎಂದು ಘೋಷಣೆ ಹಾಕಿದರು.

ಊರ ಹಿರಿಯರು, ಊರ ಹಿರಿಯರು, ಸಹೃದಯಿಗಳ ಶಕ್ತಿ ಇದು

ಊರಿನ ಹಿರಿಯರಾದ ಮಹಾಂತೇಶ ಹಂಚಿನಮನಿ, ಈರಪ್ಪ ಬೆಂಡಿಗೇರಿ, ಪ್ರಕಾಶ ಪಾಗಾದ, ಅಶೋಕ ಪಾಗಾದ, ವಿಶಾಲ ರೊಡಬಸನವರ, ಸಚಿನ ಹಣಮಶೇಟ, ಕಿರಣ ಪಾಗಾದ, ಉಳವೇಶ ಪಾಗಾದ, ಬಾಬು ಅಡಿಮನಿ, ಶಫೀಕ ಬಡಿಮನಿ, ಜರ್ ನದಾಫ, ಶಿವಲಿಂಗ ಹೂಗಾರ, ಕುಮಾರ ಹೂಗಾರ, ಪ್ರಜ್ವಲ ಹೂಗಾರ, ಅನೇಕರು ಗಣೇಶ ಪ್ರತಿಷ್ಠಾಪನೆ ಜವಾಬ್ದಾರಿ ಹೊತ್ತುಕೊಂಡು ಯಶಸ್ವಿಗೊಳಿಸಿದ್ದಾರೆ.

Bailahongala dargah Ganeshothsava communal harmony
ಪೂಜೆ ಮತ್ತು ಪ್ರಾರ್ಥನೆಯ ಗಳಿಗೆ

ಇದನ್ನೂ ಓದಿ : Communal Harmony : ಗಣೇಶ ಬಪ್ಪ ಮೋರಯಾ ಎಂದ ಮುಸ್ಲಿಮರು; ಗಣಪನ ಶೋಭಾಯಾತ್ರೆಗಾಗಿ ಈದ್‌ ಮೆರವಣಿಗೆಯೇ ಮುಂದಕ್ಕೆ!

ಬೆಳಗಾವಿಯ ಬೈಲಹೊಂಗಲದ ಈ ಪರಂಪರೆಯಂತೆಯೇ ಇನ್ನೂ ಹಲವು ಕಡೆ ಹಿಂದು ಮುಸ್ಲಿಂ ಸೌಹಾರ್ದತೆಯ ನೂರಾರು ಉದಾಹರಣೆಗಳು ದೊರೆಯುತ್ತವೆ. ಇದು ಇನ್ನಷ್ಟು ಬೆಳೆಯಬೇಕು ಮತ್ತು ಹೊಸ ಹೊಸ ಸೌಹಾರ್ದದ ನಿದರ್ಶನಗಳು ಹುಟ್ಟಿಕೊಳ್ಳಬೇಕು ಎನ್ನುವುದೇ ಅಲ್ಲಿನ ಜನ ಆಶಯ.

Bailahongala dargah Ganeshothsava communal harmony in 2022
2022ರಲ್ಲಿ ನಡೆದ ಗಣೇಶೋತ್ಸವದ ಒಂದು ನೋಟ

ಈದ್‌ ಮೆರವಣಿಗೆಯನ್ನೇ ಮುಂದಕ್ಕೆ ಹಾಕಿದ ಬೆಳಗಾವಿಯ ಮುಸ್ಲಿಮರು

ಬೆಳಗಾವಿಯ ಸೌಹಾರ್ದ ಪರಂಪರೆ ಅದೆಷ್ಟು ಶಕ್ತಿಶಾಲಿಯಾಗಿದೆ ಎನ್ನುವುದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ. ಬೆಳಗಾವಿಯಲ್ಲಿ ಗಣೇಶೋತ್ಸವ ಅದ್ದೂರಿಯಾಗಿ ನಡೆಯುತ್ತದೆ. ಈ ಬಾರಿ ಸೆ. 28ರಂದು ಸಾರ್ವಜನಿಕ ಗಣೇಶೋತ್ಸವವ ಬೃಹತ್‌ ಶೋಭಾಯಾತ್ರೆ ನಡೆಯುತ್ತದೆ. ಈ ಬಾರಿ ಅಂದೇ ಈದ್‌ ಮಿಲಾದ್‌ ಹಬ್ಬವೂ ಬಂದಿದೆ. ಮುಸ್ಲಿಮರು ಕೂಡಾ ನಗರ ಮೆರವಣಿಗೆ ಮೂಲಕ ಇದನ್ನು ಸಂಭ್ರಮಿಸುತ್ತಾರೆ. ಆದರೆ ಎರಡನ್ನೂ ಒಂದೇ ದಿನ ಆಚರಿಸಿದರೆ ವ್ಯವಸ್ಥೆ ಮಾಡುವುದು ಕಷ್ಟವಾಗುತ್ತದೆ, ಕಾನೂನು ಭಂಜಕರಿಗೆ ಅವಕಾಶವಾದೀತು ಎಂದು ಭಾವಿಸಿದ ಮುಸ್ಲಿಂ ಹಿರಿಯರು ತಮ್ಮ ಈದ್‌ ಮೆರವಣಿಗೆಯನ್ನು ಅಕ್ಟೋಬರ್‌ ಒಂದಕ್ಕೆ ಮುಂದೂಡಿದ್ದಾರೆ.

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Edited by

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        pakistan Team
        ಕ್ರಿಕೆಟ್34 mins ago

        Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

        bus auto accident
        ದಕ್ಷಿಣ ಕನ್ನಡ36 mins ago

        Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

        home lizard
        ಲೈಫ್‌ಸ್ಟೈಲ್57 mins ago

        Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

        healthy children food
        Relationship1 hour ago

        Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

        Reality Shows neads a break
        ಅಂಕಣ2 hours ago

        Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

        bangalore bandh
        Live News2 hours ago

        Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

        Vistara Editorial, Janata Darshan by CM must appreciated
        ಕರ್ನಾಟಕ3 hours ago

        ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

        Dina Bhavishya
        ಪ್ರಮುಖ ಸುದ್ದಿ4 hours ago

        Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

        Pakistan Cricket Team Skipper Babaz azam fined exceeding speed limit
        ಕ್ರಿಕೆಟ್9 hours ago

        Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

        Sara Sunny
        ದೇಶ9 hours ago

        Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ

        7th Pay Commission
        ನೌಕರರ ಕಾರ್ನರ್11 months ago

        7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

        DCC Bank Recruitment 2023
        ಉದ್ಯೋಗ8 months ago

        DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

        Sphoorti Salu
        ಸುವಚನ4 months ago

        ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

        Govt employees ssociation
        ಕರ್ನಾಟಕ8 months ago

        7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

        kpsc recruitment 2023 pdo recruitment 2023
        ಉದ್ಯೋಗ2 months ago

        PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

        Rajendra Singh Gudha
        ದೇಶ3 months ago

        Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

        Village Accountant Recruitment
        ಉದ್ಯೋಗ7 months ago

        Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

        Entitled leave for employees involved in strike; Order from Govt
        ನೌಕರರ ಕಾರ್ನರ್7 months ago

        Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

        betel nut smuggling Areca News
        ಕರ್ನಾಟಕ9 months ago

        Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

        7th Pay Commission
        ಕರ್ನಾಟಕ11 months ago

        7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

        Dina Bhavishya
        ಪ್ರಮುಖ ಸುದ್ದಿ4 hours ago

        Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

        At the Janata Darshan event MP S Muniswamy MLA SN Narayanaswamy is fighting
        ಕರ್ನಾಟಕ15 hours ago

        Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

        Davanagere bandh
        ಕರ್ನಾಟಕ17 hours ago

        Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

        HD Devegowda Press meet
        ಕರ್ನಾಟಕ20 hours ago

        Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

        Farmers protest Mundargi bandh
        ಕರ್ನಾಟಕ20 hours ago

        Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

        Dina bhavishya
        ಪ್ರಮುಖ ಸುದ್ದಿ1 day ago

        Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

        Actor padhmini Kirk
        ಕರ್ನಾಟಕ2 days ago

        Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

        dina bhavishya
        ಪ್ರಮುಖ ಸುದ್ದಿ2 days ago

        Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

        Dina bhavishya
        ಪ್ರಮುಖ ಸುದ್ದಿ3 days ago

        Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

        Dina Bhavishya
        ಪ್ರಮುಖ ಸುದ್ದಿ4 days ago

        Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

        ಟ್ರೆಂಡಿಂಗ್‌