Jaya Ekadashi 2023 : ಜಯ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸಿದರೆ ಇಷ್ಟಾರ್ಥ ಸಿದ್ಧಿ! - Vistara News

ಧಾರ್ಮಿಕ

Jaya Ekadashi 2023 : ಜಯ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸಿದರೆ ಇಷ್ಟಾರ್ಥ ಸಿದ್ಧಿ!

ಮಾಘ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯನ್ನು ಜಯ ಏಕಾದಶಿಯೆಂದು (Jaya Ekadashi 2023) ಆಚರಿಸಲಾಗುತ್ತದೆ. ಈ ದಿನ ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಜನ್ಮಗಳ ಪಾಪದಿಂದ ಮುಕ್ತಿ ದೊರಕುತ್ತದೆ ಎಂದು ಹೇಳಲಾಗಿದೆ. ಈ ಏಕಾದಶಿಯ ಮಹತ್ವವವನ್ನು ವಿವರಿಸುವ ಲೇಖನ ಇಲ್ಲಿದೆ.

VISTARANEWS.COM


on

Jaya Ekadashi 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಘ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯನ್ನು ಜಯ ಏಕಾದಶಿ (Jaya Ekadashi 2023) ಎಂದು ಕರೆಯಲಾಗುತ್ತದೆ. ಪ್ರತಿ ಮಾಸದ ಏಕಾದಶಿಯೂ ವಿಶೇಷವೇ ಆಗಿರುತ್ತದೆ. ಏಕಾದಶಿಯಂದು ಉಪವಾಸ ಮತ್ತು ಮೌನ ವ್ರತವನ್ನು ಆಚರಿಸುತ್ತಾರೆ. ಏಕಾದಶಿಯ ದಿನವನ್ನು ದೇವರ ಸ್ಮರಣೆಯಲ್ಲಿ ಕಳೆಯುವುದರಿಂದ ಇಷ್ಟಾರ್ಥ ಸಿದ್ಧಿಸುವುದಲ್ಲದೇ, ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಅದರಲ್ಲೂ ಮಾಘ ಮಾಸದಲ್ಲಿ ಬರುವ ಏಕಾದಶಿಗೆ ವಿಶೇಷ ಮಹತ್ವವಿದೆ.

ಈ ಬಾರಿ 2023 ಫೆಬ್ರವರಿ 01ರ ಬುಧವಾರದಂದು ಏಕಾದಶಿಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುವಿನ ಆರಾಧನೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಜಯ ಏಕಾದಶಿ ವ್ರತವನ್ನು ಆಚರಿಸುವವರಿಗೆ ಯಾವುದೇ ಭೂತ, ಪ್ರೇತ ಮತ್ತು ಪಿಶಾಚಿಗಳ ಬಾಧೆ ತಟ್ಟುವುದಿಲ್ಲ. ಈ ದಿನ ವ್ರತವನ್ನು ಆಚರಿಸುವವರು ಜನ್ಮಗಳ ಪಾಪಗಳಿಂದ ಮುಕ್ತಿ ಹೊಂದುತ್ತಾರೆ. ಅಷ್ಟೇ ಅಲ್ಲದೇ ಜಯ ಏಕಾದಶಿಯ ದಿನ ವಸ್ತ್ರ, ಹಣ, ಆಹಾರ ಮತ್ತು ಅಗತ್ಯ ವಸ್ತುಗಳನ್ನು ದಾನವಾಗಿ ನೀಡುವುದರಿಂದ ಶುಭವಾಗುತ್ತದೆ.

ಈ ಜಯ ಏಕಾದಶಿಯನ್ನು ದಕ್ಷಿಣ ಭಾರತದಲ್ಲಿ ಭೂಮಿ ಏಕಾದಶಿ ಭೀಷ್ಮ ಏಕಾದಶಿ ಎಂದು ಸಹ ಆಚರಿಸುತ್ತಾರೆ. ಭೀಷ್ಮ ಏಕಾದಶಿ ಎಂದು ಕರೆಯಲು ಕಾರಣವೇನೆಂದರೆ ಮಾಘ ಮಾಸದ ಶುಕ್ಷ ಪಕ್ಷದ ಅಷ್ಟಮಿಯಂದು ಶರಶೈಯೆಯಲ್ಲಿ ಮಲಗಿದ್ದ ಪಿತಾಮಯ ಭೀಷ್ಮರು ದೇಹ ತ್ಯಾಗ ಮಾಡಿದ್ದರು. ಆ ಕಾರಣದಿಂದಾಗಿ ಆ ದಿನವನ್ನು ಭೀಷ್ಮಾಷ್ಟಮಿ ಎಂದು ಕರೆಯುತ್ತಾರೆ. ಅದರ ನಂತರದಲ್ಲಿ ಬರುವ ಏಕಾದಶಿಯನ್ನು ಭೀಷ್ಮ ಏಕಾದಶಿ ಎಂದು ಕರೆಯಲಾಗುತ್ತದೆ.

ಜಯ ಏಕಾದಶಿಯ ಮುಹೂರ್ತ

ಹಿಂದೂ ಪಂಚಾಂಗದ ಪ್ರಕಾರ ಏಕಾದಶಿಯ ಉದಯ ತಿಥಿಯು ಫೆಬ್ರವರಿ 1ರಂದು ಇರುವ ಕಾರಣ ಬುಧವಾರದಂದೇ ಜಯ ಏಕಾದಶಿ ವ್ರತವನ್ನು ಆಚರಿಸಲಾಗುತ್ತದೆ. ಏಕಾದಶಿ ವ್ರತ ಪಾರಾಯಣ ಮಾಡಲು ಫೆಬ್ರವರಿ 2ರ ಬೆಳಗ್ಗೆ 7 ಗಂಟೆಗೆ ಮುಹೂರ್ತವಿದೆ. ಹಾಗೆಯೇ ಸರ್ವಾರ್ಥ ಸಿದ್ಧಿ ಯೋಗವು ಫೆಬ್ರವರಿ 1ರ ಬೆಳಗ್ಗೆ 7:10 ರಿಂದ ಫೆಬ್ರವರಿ 2ರ ವರೆಗೂ ಇರಲಿದೆ.

ಜಯ ಏಕಾದಶಿಯ ಪೂಜಾ ವಿಧಿ

ಏಕಾದಶಿಯ ದಿನ ಪ್ರಾತಃಕಾಲದಲ್ಲಿ ಎದ್ದು ಸ್ನಾನಾದಿಗಳಿಂದ ನಿವೃತ್ತರಾಗಿ ವ್ರತ ಸಂಕಲ್ಪವನ್ನು ಮಾಡಬೇಕು. ನಂತರ ವಿಧಿ ವಿಧಾನಗಳಿಂದ ವಿಷ್ಣುವಿನ ಶ್ರೀಕೃಷ್ಣ ಅವತಾರಕ್ಕೆ ಪೂಜೆ ಮಾಡಲಾಗುತ್ತದೆ. ಏಕಾದಶಿಯಂದು ರಾತ್ರಿ ಜಾಗರಣೆ ಮಾಡುತ್ತಾ ಶ್ರೀಕೃಷ್ಣನ ನಾಮ ಸ್ಮರಣೆ ಮಾಡುವುದರಿಂದ ವಿಶೇಷ ಫಲ ಪ್ರಾಪ್ತಿಯಾಗುತ್ತದೆ. ದ್ವಾದಶಿಯಂದು ಅಗತ್ಯವಿರುವವರಿಗೆ ಭೋಜನವನ್ನು ನೀಡಿ, ದಕ್ಷಿಣೆ ಕೊಟ್ಟ ನಂತರ ವ್ರತ ಪಾರಾಯಣ ಮಾಡಬೇಕು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ವಿಷ್ಣು ಸಹಸ್ರನಾಮ ಪಠಣ

ಭೀಷ್ಮ ಪಿತಾಮಹರು ದೇಹ ತ್ಯಾಗಕ್ಕಾಗಿ ಉತ್ತರಾಯಣದ ಪುಣ್ಯಕಾಲವನ್ನು ಎದುರು ನೋಡುತ್ತಿದ್ದರು. ಆ ಸಂದರ್ಭದಲ್ಲಿ ಅವರನ್ನು ಕಾಣಲು ಪಾಂಡವರು ಬರುತ್ತಾರೆ. ಆಗ ಭೀಷ್ಮಾಚಾರ್ಯರು, ಆಧ್ಯಾತ್ಮಿಕ ಜ್ಞಾನದ ಬಗ್ಗೆ ಜಗತ್ತಿಗೆ ತಿಳಿಸಲು ಮಾಘ ಮಾಸದ ಅಷ್ಟಮಿಯಂದು ಧರ್ಮರಾಯನಿಗೆ ವಿಷ್ಣುಸಹಸ್ರನಾಮವನ್ನು ಉಪದೇಶಿಸುತ್ತಾರೆ.
ಶ್ರೀಕೃಷ್ಣನೇ ಪರಮಜ್ಞಾನಿಗಳಾದ ಭೀಷ್ಮರ ಮುಖಾಂತರ ಲೋಕಕ್ಕೆ ಅನೇಕ ಧಾರ್ಮಿಕ ರಹಸ್ಯಗಳ ಜೊತೆಗೆ ವಿಷ್ಣು ಸಹಸ್ರನಾಮವನ್ನು ತಿಳಿಯುವಂತೆ ಮಾಡುತ್ತಾನೆ. ಹಾಗಾಗಿ ಜಯ ಏಕಾದಶಿಯಂದು ವಿಷ್ಣುವಿನ ಅವತಾರವಾದ ಕೃಷ್ಣನನ್ನು ಪೂಜಿಸುವುದರೊಂದಿಗೆ ವಿಷ್ಣು ಸಹಸ್ರನಾಮವನ್ನು ಸಹ ಪಠಿಸಲಾಗುತ್ತದೆ. ಏಕಾದಶಿಯ ದಿನ ವಿಷ್ಣು ಸಹಸ್ರನಾಮವನ್ನು ಪಠಿಸುವುದು ಮತ್ತು ಲಕ್ಷ್ಮೀ ಸಹಿತ ವಿಷ್ಣುವನ್ನು ಶ್ರದ್ಧೆಯಿಂದ ಪೂಜಿಸುವುದು ಅತ್ಯಂತ ಶುಭವೆಂದು ಹೇಳುತ್ತಾರೆ.

ಜಯ ಏಕಾದಶಿಯ ವ್ರತ ಕಥೆ

ಇಂದ್ರನ ಸಭೆಯಲ್ಲಿ ಉತ್ಸವ ನಡೆಯುತ್ತಿತ್ತು. ಈ ಸಭೆಯಲ್ಲಿ ದೇವಗಣ, ಸಂತ ದಿವ್ಯ ಪುರುಷರು ಆ ಉತ್ಸವದಲ್ಲಿ ಉಪಸ್ಥಿತರಿದ್ದರು.ಮಾಲ್ಯವಾನ್ ಎಂಬ ಗಂಧರ್ವ ಪುರುಷ ಅತ್ಯಂತ ಸ್ವರ ಬದ್ಧವಾಗಿ ಹಾಡುತ್ತಿದ್ದನು. ಅದೇ ರೀತಿ ಪುಷ್ಪವತಿ ಎಂಬ ಗಂಧರ್ವ ಕನ್ಯೆಯು ಅಷ್ಟೇ ಸುಂದರವಾಗಿ ನೃತ್ಯ ಮಾಡುತ್ತಿದ್ದಳು. ಆ ಉತ್ಸವದ ಸಂದರ್ಭದಲ್ಲಿ ಮಾಲ್ಯವಾನ್ ಮತ್ತು ಪುಷ್ಪವತಿ ಇಬ್ಬರೂ ಆ ಸಭೆಯಲ್ಲಿ ಮೋಹಿತರಾಗುತ್ತಾರೆ. ಇದರಿಂದ ಕೋಪಗೊಂಡ ಇಂದ್ರನು ಅವರಿಬ್ಬರಿಗೆ ಮೃತ್ಯುಲೋಕದಲ್ಲಿ ಪಿಶಾಚಿ ಜೀವನ ವ್ಯತೀತ ಮಾಡುವಂತೆ ಶಾಪ ನೀಡುತ್ತಾನೆ.

ಶಾಪದ ಪ್ರಭಾವದಿಂದ ಇಬ್ಬರೂ ಪ್ರೇತವಾಗಿ ಕಷ್ಟದಿಂದ ಪಿಶಾಚಿ ಜೀವನವನ್ನು ನಡೆಸುತ್ತಾರೆ. ಮಾಘ ಮಾಸದ ಶುಕ್ಷ ಪಕ್ಷದ ಏಕಾದಶಿ ವ್ರತದ ಬಗ್ಗೆ ನಾರದರಿಂದ ತಿಳಿದುಕೊಂಡು ವ್ರತಾಚರಣೆ ಮಾಡುತ್ತಾರೆ. ಇದರ ಫಲವಾಗಿ ಅವರಿಗೆ ಪೂರ್ವ ಶರೀರ ಪ್ರಾಪ್ತಿಯಾಗುತ್ತದೆ. ಹಾಗಾಗಿ ಅವರಿಬ್ಬರೂ ಜಯ ಏಕಾದಶಿಯ ಪ್ರಾಮುಖ್ಯತೆಯನ್ನು ಜಗತ್ತಿಗೆ ತಿಳಿಸುತ್ತಾರೆ. ಈ ಜಯ ಏಕಾದಶಿ ವ್ರತದ ಆಚರಣೆಯಿಂದ ಉತ್ತಮ ಜನ್ಮವು ಪ್ರಾಪ್ತವಾಗುತ್ತದೆ. ಹೀಗಾಗಿಯೇ ಈ ಏಕಾದಶಿಯನ್ನು ಶಾಪ ವಿಮೋಚನಾ ಏಕಾದಶಿ ಎಂದೂ ಕರೆಯುತ್ತಾರೆ.

ಇದನ್ನೂ ಓದಿ: Prerane : ಅಲ್ಲಿರುವುದು ನಮ್ಮನೆ, ಇಲ್ಲಿಗೆ ಬಂದೆವು ಸುಮ್ಮನೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಮನೆಯಲ್ಲಿ ಚಪ್ಪಲಿ, ಶೂ ಎಲ್ಲೆಂದರಲ್ಲಿ ಇಟ್ಟು ಸಂಕಷ್ಟ ಮೈಮೇಲೆ ಎಳೆದುಕೊಳ್ಳಬೇಡಿ!

ವಾಸ್ತು ನಿಯಮಗಳನ್ನು (Vastu Tips) ಪಾಲಿಸುವುದು ಮನೆಯ ಸಮೃದ್ಧಿಗಾಗಿ ಒಳ್ಳೆಯದು. ಇದರಲ್ಲಿ ಕೆಲವೊಮ್ಮೆ ವೈಜ್ಞಾನಿಕ ಅಂಶಗಳು ಅಡಕವಾಗಿರುತ್ತದೆ. ಶೂ, ಚಪ್ಪಲಿಗಳನ್ನು ಇಡುವ ಬಗ್ಗೆಯೂ ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಅವುಗಳನ್ನು ಅನುಸರಿಸಿದರೆ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಯಾಗುವಂತೆ ಮಾಡಬಹುದು.

VISTARANEWS.COM


on

By

Vastu Tips
Koo

ಮನೆಯ (home) ಹೊರಗೆ ಸುತ್ತಾಡಲು ಬಳಸುವ ಬೂಟು ಮತ್ತು ಚಪ್ಪಲಿಗಳನ್ನು (shoes and slippers) ಮನೆಯೊಳಗೇ ಕೊಂಡೊಯ್ಯಬಾರದು ಎನ್ನುತ್ತಾರೆ ಹಿರಿಯರು. ಅಲ್ಲದೇ ಮನೆಯ ಮೆಟ್ಟಿಲ ಬಳಿ ಚಪ್ಪಲಿ ಇಡಬಾರದು, ಅಡ್ಡಾದಿಡ್ಡಿಯಾಗಿ ಚಪ್ಪಲಿಗಳನ್ನು ಇರಿಸಬಾರದು ಎನ್ನುವ ಶಾಸ್ತ್ರವೇ (Vastu Tips) ಇದೆ. ನಾವು ಮಾಡುವ ಸಣ್ಣಪುಟ್ಟ ಅಜಾಗರೂಕತೆಗಳು ಮನೆಯ ವಾಸ್ತುವಿಗೆ ದೋಷ ಉಂಟು ಮಾಡುತ್ತದೆ. ಚಪ್ಪಲಿಯನ್ನು ಇಡುವ ವಿಚಾರದಲ್ಲೂ ಇದು ಅನ್ವಯವಾಗುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ.

ಶೂ ಮತ್ತು ಚಪ್ಪಲಿಗಳನ್ನು ಇಡಲು ವಾಸ್ತು ಸಲಹೆಗಳಿವೆ. ಬೂಟು ಮತ್ತು ಚಪ್ಪಲಿಗಳು ಅಲ್ಲೊಂದು ಇಲ್ಲೊಂದು ಬಿದ್ದಿರುವ ಮನೆಗಳಲ್ಲಿ ಎಂದಿಗೂ ಸಮೃದ್ಧಿ ಇರುವುದಿಲ್ಲ. ಇದರಿಂದ ವಾಸ್ತು ದೋಷವನ್ನು ಎದುರಿಸಬೇಕಾಗಬಹುದು ಎನ್ನುತ್ತದೆ ವಾಸ್ತುಶಾಸ್ತ್ರ.

ಅನೇಕ ಜನರು ತಮ್ಮ ಬೂಟು ಮತ್ತು ಚಪ್ಪಲಿಗಳನ್ನು ಮನೆಯಲ್ಲಿ ಎಲ್ಲಿಯಾದರೂ ತೆಗೆಯುತ್ತಾರೆ ಅಥವಾ ಅಲ್ಲೇ ಇಟ್ಟು ಬಿಡುತ್ತಾರೆ. ಇದನ್ನು ಮಾಡಲೇಬಾರದು. ಹೀಗೆ ಮಾಡುವುದು ನಿಮಗೂ, ಮನೆಗೂ ಒಳ್ಳೆಯದಲ್ಲ.

ಸುಖ, ಶಾಂತಿ, ಸಮೃದ್ಧಿಗಾಗಿ ಮನೆಯಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ಬಾರಿ ನಾವು ಚಪ್ಪಲಿಗಳನ್ನು ಇಡುವ ವಿಚಾರದಲ್ಲಿ ವಾಸ್ತು ನಿಯಮಗಳ ಏನು ಹೇಳುತ್ತವೆ ಎಂಬುದನ್ನು ತಿಳಿದುಕೊಳ್ಳೋಣ.


ಯಾವ ದಿಕ್ಕಿನಲ್ಲಿ ಇಡಬಾರದು?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಉತ್ತರ ಮತ್ತು ಪೂರ್ವ ದಿಕ್ಕಿನಲ್ಲಿ ಪಾದರಕ್ಷೆ ಮತ್ತು ಚಪ್ಪಲಿಗಳನ್ನು ಇಡಬಾರದು. ಈ ದಿಕ್ಕಿನಲ್ಲಿ ಬೂಟು ಮತ್ತು ಚಪ್ಪಲಿಗಳನ್ನು ಇಟ್ಟುಕೊಳ್ಳುವುದರಿಂದ ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.

ಎಲ್ಲಿ ಇಡಬೇಕು?

ಯಾವಾಗಲೂ ಬೂಟು ಮತ್ತು ಚಪ್ಪಲಿಗಳನ್ನು ಮುಚ್ಚಿರುವ ಬೀರುಗಳಲ್ಲಿ ಇಡಬೇಕು ಎನ್ನುತ್ತದೆ ವಾಸ್ತು ನಿಯಮ. ಚಪ್ಪಲಿಗಳು ನೆಗೆಟಿವ್ ಎನರ್ಜಿಯನ್ನು ಹೆಚ್ಚಿಸುವುದರಿಂದ ತೆರೆದ ಜಾಗದಲ್ಲಿ, ಮನೆಯ ಮೆಟ್ಟಿಲುಗಳ ಬಳಿ ಇಡಬಾರದು.

ಎಲ್ಲಿ ತೆಗೆಯಬಾರದು?

ಮನೆಯ ಬಾಗಿಲಿನ ಬಳಿ ಶೂ ಮತ್ತು ಚಪ್ಪಲಿಗಳನ್ನು ಬಿಚ್ಚಿಡುವ ಅಭ್ಯಾಸ ಹೆಚ್ಚಿನವರಿಗೆ ಇದೆ. ಈ ಅಭ್ಯಾಸ ಇದ್ದರೆ ಕೂಡಲೇ ಬದಲಾಯಿಸಿಕೊಳ್ಳಿ. ವಾಸ್ತು ನಿಯಮದ ಪ್ರಕಾರ ಮನೆಯ ಬಾಗಿಲ ಬಳಿ ಶೂ, ಚಪ್ಪಲಿಗಳನ್ನು ಎಂದಿಗೂ ತೆಗೆಯಬೇಡಿ. ಹೀಗೆ ಮಾಡುವುದರಿಂದ ಕೌಟುಂಬಿಕ ಕಲಹದ ಸಾಧ್ಯತೆ ಹೆಚ್ಚುತ್ತದೆ. ಕುಟುಂಬ ಸದಸ್ಯರ ನಡುವೆ ಜಗಳಗಳು ಉಂಟಾಗಬಹುದು.

ಇದನ್ನೂ ಓದಿ: Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು


ಶೂ ರಾಕ್ ಎಲ್ಲಿ ಇಡಬೇಕು?

ಶೂ ರಾಕ್ ಗಳನ್ನು ಯಾವಾಗಲೂ ಮನೆಯ ಹೊರಗೆ ಇಡಬೇಕು. ಮನೆಯೊಳಗೆ ಶೂ ರಾಕ್ ಗಳನ್ನು ಇಡುವುದರಿಂದ ಪತಿ-ಪತ್ನಿಯರ ನಡುವೆ ಘರ್ಷಣೆಗಳು ಹೆಚ್ಚಾಗುತ್ತವೆ.

ಹೇಗಿಡಬೇಕು?

ಶೂ ಮತ್ತು ಚಪ್ಪಲಿಗಳನ್ನು ಎಂದಿಗೂ ತಲೆಕೆಳಗಾಗಿ ಇಡಬಾರದು. ಯಾಕೆಂದರೆ ಇದು ಮನೆಯಲ್ಲಿ ರೋಗಗಳು ನೆಲೆಸುವಂತೆ ಮಾಡುತ್ತದೆ ಎನ್ನುತ್ತದೆ ವಾಸ್ತು ನಿಯಮ.

Continue Reading

ಕರ್ನಾಟಕ

Mantralaya: ಬೇಸಿಗೆ ರಜೆ ಎಫೆಕ್ಟ್;‌ ಮಂತ್ರಾಲಯದಲ್ಲಿ ಈ ಬಾರಿಯ ಕಾಣಿಕೆ ಸಂಗ್ರಹ ನೋಡಿ

ಈ ಬಾರಿ ಬೇಸಿಗೆ ರಜೆ (Summer holidays) ಇದ್ದುದರಿಂದ ಮಂತ್ರಾಲಯದ (Mantralaya) ಶ್ರೀ ಗುರು ರಾಘವೇಂದ್ರರ ಮಠಕ್ಕೆ ಭೇಟಿ ನೀಡಿದ ಜನರ ಸಂಖ್ಯೆ ಹೆಚ್ಚಿದೆ. ಹಾಗೆಯೇ ಕಾಣಿಕೆಯ ಸಂಗ್ರಹವೂ ಅಧಿಕವಾಗಿರುವುದು ಕಂಡುಬಂದಿದೆ.

VISTARANEWS.COM


on

mantralaya 1
Koo

ರಾಯಚೂರು: ಮಂತ್ರಾಲಯದ (Mantralaya) ಶ್ರೀ ಗುರು ರಾಘವೇಂದ್ರರ ಮಠದಲ್ಲಿ (Sri Guru Raghavendra Mutt Mantralayam) ನಿನ್ನೆ ಹುಂಡಿ (Hundi) ಎಣಿಕೆ ಕಾರ್ಯ ನಡೆಯಿತು. 29 ದಿನಗಳಲ್ಲಿ 2 ಕೋಟಿ 93 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿರುವುದು ಕಂಡುಬಂದಿದೆ.

100ಕ್ಕೂ ಹೆಚ್ಚು ಮಠದ ಸಿಬ್ಬಂದಿಗಳು ಮತ್ತು ಭಕ್ತರಿಂದ ಹುಂಡಿ ಎಣಿಕೆ ನಡೆಯಿತು. ಮೇ ತಿಂಗಳಲ್ಲಿ ಹುಂಡಿಯಲ್ಲಿ ಹಾಕಿರುವ ರಾಯರ ಭಕ್ತರ ಕಾಣಿಕೆ ಇದಾಗಿದ್ದು, ದೊಡ್ಡ ಹಾಗೂ ಸಣ್ಣ ಮೌಲ್ಯದ ಕರೆನ್ಸಿ ನೋಟುಗಳ ಜೊತೆಗೆ 136 ಗ್ರಾಂ ಬಂಗಾರ, 1510 ಗ್ರಾಂ ಬೆಳ್ಳಿ ಕೂಡ ಭಕ್ತರಿಂದ ಕಾಣಿಕೆಯಾಗಿ ಬಂದಿದೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಡಾ. ಸುಬುದೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಠದ ಲೆಕ್ಕಾಧಿಕಾರಿಗಳು, ಆಡಳಿತಗಾರರು ಉಪಸ್ಥಿತರಿದ್ದರು.

ಈ ಬಾರಿ ಬೇಸಿಗೆ ರಜೆ (Summer holidays) ಇದ್ದುದರಿಂದ ಮಂತ್ರಾಲಯಕ್ಕೆ ಭೇಟಿ ನೀಡಿದ ಜನರ ಸಂಖ್ಯೆ ಹೆಚ್ಚಿದೆ. ಹಾಗೆಯೇ ಕಾಣಿಕೆಯ ಸಂಗ್ರಹವೂ ಅಧಿಕವಾಗಿರುವುದು ಕಂಡುಬಂದಿದೆ.

ಕಲಿಯುಗದ ಕಾಮಧೇನು ಎಂದು ಭಕ್ತರಿಂದ ಕೀರ್ತಿಸಿಕೊಳ್ಳುವ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಕರ್ನಾಟಕದ ವಿವಿಧ ಕಡೆಗಳಿಂದ ಮಾತ್ರವಲ್ಲದೆ ಸುತ್ತಮುತ್ತಲಿನ ರಾಜ್ಯಗಳಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ತುಂಗಭದ್ರಾ ನದಿ ತೀರದಲ್ಲಿ ನಿಂತಿರುವ ರಾಯರ ಸನ್ನಿಧಾನಕ್ಕೆ ನಿತ್ಯ ಸಾವಿರಾರು ಜನ ಭಕ್ತರು ಭೇಟಿ ನೀಡುತ್ತಾರೆ. ಬೇಸಿಗೆ ರಜೆ ಮುಗಿಯುವ ಮುನ್ನವೇ ಮಂತ್ರಾಲಯಕ್ಕೆ ಹೋಗಿ ಬರಬೇಕೆಂದಿದ್ದರೆ, ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ ರೈಲುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಒಂದನೇ ರೈಲು: ಇದು ವಂದೇ ಭಾರತ್ ರೈಲು. ಈ ರೈಲು ಸಂಖ್ಯೆ KLBG VANDeBHARAT(22232). ಇದು ಕೆಎಸ್ಆರ್ ಬೆಂಗಳೂರಿನಿಂದ ಮಧ್ಯಾಹ್ನ 2.40 ಗಂಟೆಗೆ ಹೊರಡುತ್ತದೆ. ರಾತ್ರಿ 8:18ಕ್ಕೆ ಮಂತ್ರಾಯಲವನ್ನು ತಲುಪುತ್ತದೆ. ಇದರ ಪ್ರಯಾಣ ದರ cc: 1175 ರೂಪಾಯಿ ಇದೆ.

ಎರಡನೇ ರೈಲು: ಬೆಂಗಳೂರಿನಿಂದ ಮಂತ್ರಾಲಯಕ್ಕೆ ಇರುವ ಮೊದಲನೇ ರೈಲು 11014. ಇದು ಕೆಎಸ್‌ಆರ್‌ ಬೆಂಗಳೂರಿನಿಂದ ಸಂಜೆ 4 ಗಂಟೆಗೆ ಹೊರಡುತ್ತದೆ. ರಾತ್ರಿ 11.14ಕ್ಕೆ ತಲುಪುತ್ತದೆ. ಪ್ರಯಾಣ ದರ SL 245 ರೂಪಾಯಿ ಇದೆ.

ಮೂರನೇ ರೈಲು: ಎರಡನೇ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.15ಕ್ಕೆ ಹೊರಡುತ್ತದೆ. ಬೆಳಿಗ್ಗೆ 7.39ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ರೈಲು ಸಂಖ್ಯೆ YPR BIDR EXP(16577). ಶನಿವಾರ ಮಾತ್ರ ಈ ರೈಲು ಇರುತ್ತದೆ. ಪ್ರಯಾಣ ದರ SL: 235 ರೂಪಾಯಿ ಇದೆ.

ನಾಲ್ಕನೇ ರೈಲು: ಇನ್ನೊಂದು ಕೆಎಸ್ಆರ್ ಬೆಂಗಳೂರಿನಿಂದ ರಾತ್ರಿ 8:40ಕ್ಕೆ ಹೊರಡುತ್ತದೆ. ಬೆಳಗ್ಗೆ 3:49ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ಬೆಂಗಳೂರು ಮಂತ್ರಾಲಯ ರೈಲು ಸಂಖ್ಯೆ UDYAN EXP(11302). ಇದರ ಪ್ರಯಾಣ ದರ SL:255 ರೂಪಾಯಿ ಇದೆ. ವಾರದ ಎಲ್ಲಾ ದಿನ ಈ ರೈಲು ಸಂಚರಿಸಲಿದೆ.

ಐದನೇ ರೈಲು: ಮತ್ತೊಂದು ರೈಲು ಸಂಖ್ಯೆ HAS SUR EXP(11312). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 8:50ಕ್ಕೆ ಹೊರಡುತ್ತದೆ. ಬೆಳಿಗ್ಗೆ 2:34ಕ್ಕೆ ಮಂತ್ರಾಲಯ ತಲುಪುತ್ತದೆ. ಪ್ರಯಾಣ ದರ SL:256 ಇದೆ.

ಗುರುರಾಯರ ಮಠಕ್ಕೆ ಮಂತ್ರಾಲಯ ರೈಲ್ವೆ ಸ್ಟೇಷನ್ ತುಂಬಾ ಹತ್ತಿರದಲ್ಲಿದೆ. ಮಂತ್ರಾಲಯ ರೈಲ್ವೆ ಸ್ಟೇಷನ್‌ನಿಂದ ಮಠವು 15 ಕಿಮೀ ದೂರದಲ್ಲಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

Continue Reading

ವಿಜ್ಞಾನ

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

ಪವಾಡಗಳ ಬಗ್ಗೆ ನಾವು ಸಾಕಷ್ಟು ಬಾರಿ ಕೇಳಿರುತ್ತೇವೆ. ಇಲ್ಲಿ ನಡೆದಿರುವ ಪವಾಡ ಮಾತ್ರ ನಂಬಲು ಅಸಾಧ್ಯವಾಗಿರುವುದು. ಇದನ್ನು ಕೇಳಿ ಎಲ್ಲರೂ ಇದು ಖಂಡಿತಾ ಸಾಧ್ಯವಿಲ್ಲ ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಇದು ನಿಜವಾಗಿಯೂ ನಡೆದಿದೆ. ತಲೆಯನ್ನೇ ಕಳೆದುಕೊಂಡ ಕೋಳಿ (Headless Chicken) 18 ತಿಂಗಳ ಕಾಲ ಬದುಕಿದೆ. ಇದು ಈಗ ವಿಜ್ಞಾನಕ್ಕೂ ಸವಾಲಾಗಿ ಕಾಣುತ್ತಿದೆ.

VISTARANEWS.COM


on

By

Headless Chicken
Koo

ಪವಾಡಗಳು (Miracle) ಜೀವನದ (life) ಭಾಗವಾಗಿದೆ. ವಿಜ್ಞಾನದ (science) ಪ್ರಶ್ನೆಗೂ ನಿಲುಕದ ಕೆಲವೊಂದು ಸಂಗತಿಗಳು ಘಟಿಸುತ್ತವೆ. ಯಾರ ಬಳಿಯೂ ಉತ್ತರವಿರುವುದಿಲ್ಲ. ಈ ವಿಷಯಗಳನ್ನು ಅಲೌಕಿಕ (supernatural) ವಿದ್ಯಮಾನದ ಭಾಗವೆಂದೇ ಪರಿಗಣಿಸಲಾಗುತ್ತದೆ. ಇದರಲ್ಲಿ ಈ ಕೋಳಿಯೂ (Headless Chicken) ಒಂದು. ಇದು ಊಹೆಗೂ ನಿಲುಕದಂತಿದೆ. ನಂಬಲು ಕಷ್ಟ ಮತ್ತು ಆಶ್ಚರ್ಯಕರವಾಗಿದೆ.

ಇದೀಗ ಒಂದು ಪವಾಡ ಪ್ರಕರಣವೊಂದು ವರದಿಯಾಗಿದೆ. ಇದರಲ್ಲಿ ‘ಮೈಕ್’ ಎಂಬ ಕೋಳಿ (Miracle Mike) ತನ್ನ ಉಳಿದ 18 ತಿಂಗಳ ಸುದೀರ್ಘ ಜೀವನವನ್ನು ತಲೆಯಿಲ್ಲದೇ ಕಳೆದಿದೆ.

1945 ರ ಸೆಪ್ಟೆಂಬರ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ (United States) ಕೊಲೊರಾಡೋದ (Colorado) ಫ್ರೂಟಾದಲ್ಲಿ ವಾಸಿಸುತ್ತಿದ್ದ ಓಲ್ಸೆನ್ ಕುಟುಂಬವು ಸಂಜೆಯ ಊಟಕ್ಕಾಗಿ ಚಿಕನ್ ತಯಾರಿಸಲು ಯೋಚನೆ ಮಾಡುತ್ತಿತ್ತು. ಅದಕ್ಕಾಗಿ ರೈತ ಲಾಯ್ಡ್ ಓಲ್ಸೆನ್ ಮನೆಗೆ ತಾಜಾ ಮಾಂಸವನ್ನು ತರಲು ಹೊಲಕ್ಕೆ ಹೋಗುತ್ತಾನೆ.

ಅಲ್ಲಿ ಆತ ‘ಮೈಕ್’ ಎಂದು ಗುರುತಿಸಲ್ಪಟ್ಟ ಐದೂವರೆ ತಿಂಗಳ ಗಂಡು ವಯಾಂಡೊಟ್ಟೆ ಕೋಳಿಯನ್ನು ಎತ್ತಿಕೊಂಡು ತರುತ್ತಾನೆ. ಅದನ್ನು ಎಷ್ಟೇ ಕೊಲ್ಲಲು ಪ್ರಯತ್ನಿಸಿದರೂ ಆತನಿಗೆ ಅದು ಸಾಧ್ಯವಾಗಲಿಲ್ಲ. ತಲೆಯನ್ನೇ ಕತ್ತರಿಸಿದರೂ ಅದು ಉಸಿರು ಚೆಲ್ಲಲಿಲ್ಲ. ಅದೊಂದು ಅಭೂತಪೂರ್ವ ಘಟನೆಯಾಗಿದ್ದು, ವಿಶ್ವವೇ ಬೆರಗಾಗುವಂತೆ ಮಾಡಿತು.


18 ತಿಂಗಳು ಹೇಗೆ ಬದುಕಿತು?

ಲಾಯ್ಡ್ ಕೋಳಿಯ ಶಿರಚ್ಛೇದ ಮಾಡಿದ. ಕತ್ತಿಯ ಏಟು ಅದರ ತಲೆಯ ಹೆಚ್ಚಿನ ಭಾಗಗಳನ್ನು ಕತ್ತರಿಸಿದರೂ ಅದು ಕುತ್ತಿಗೆ ಮತ್ತು ಗಂಟಲಿಗೆ ಸಂಬಂಧಿಸಿದ ಕಂಠನಾಳವನ್ನು ಸೀಳುವಲ್ಲಿ ವಿಫಲವಾಯಿತು. ಹೀಗಾಗಿ ಅದು ಬದುಕುಳಿಯಿತು. ಒಂದು ಕಿವಿ ಮತ್ತು ಮೆದುಳಿನ ಹೆಚ್ಚಿನ ಕಾಂಡವು ಹಾನಿಗೊಳಗಾದರೂ ಅದು ಸಾಯಲಿಲ್ಲ. ರಕ್ತ ವೇಗವಾಗಿ ಹೆಪ್ಪುಗಟ್ಟಿದ್ದರಿಂದ ಅತಿಯಾದ ರಕ್ತದ ನಷ್ಟವಾಗಲಿಲ್ಲ.

ಬಳಿಕ ಲಾಯ್ಡ್ ಮೈಕ್‌ ಗೆ ಹೊಸ ಜೀವನ ನೀಡಲು ಮುಂದಾದ. ಕೋಳಿಯನ್ನು ಮನೆಗೆ ತಂದು ಸಂಪೂರ್ಣ ಆರೈಕೆ ಮಾಡಲು ನಿರ್ಧರಿಸಿದರು.

ಲಾಯ್ಡ್ ಅದಕ್ಕೆ ಹಾಲು ಮತ್ತು ನೀರಿನ ಮಿಶ್ರಣವನ್ನು ಒಳಗೊಂಡಿರುವ ಆಹಾರವನ್ನು ತಯಾರಿಸಿದ. ಐಡ್ರಾಪರ್ ಮೂಲಕ ಅದಕ್ಕೆ ಆಹಾರವನ್ನು ನೀಡಿದ. ಕೆಲವು ಹುಳು ಮತ್ತು ಜೋಳವನ್ನು ನೀಡಿದನು.

ಮೈಕ್ ಗಳಿಸಿದ ಖ್ಯಾತಿ

ಈ ಘಟನೆಯು ಜಗತ್ತಿಗೇ ಸುದ್ದಿಯಾಗುವಷ್ಟು ವಿಸ್ಮಯಕಾರಿಯಾಗಿತ್ತು. ಮೈಕ್ ಭಾರೀ ಜನಮನಗೆದ್ದಿತು ಮತ್ತು ಸಂಶೋಧನೆಯ ವಿಷಯವಾಯಿತು.

ಹಲವಾರು ನಿಯತಕಾಲಿಕೆಗಳಿಗೆ ಇದನ್ನು ವರದಿ ಮಾಡಿತ್ತು. ಅನೇಕ ಪತ್ರಿಕೆಗಳಿಗೆ ಇದು ಮುಖಪುಟದ ವಿಷಯವಾಯಿತು. ಮೈಕ್ ಅನ್ನು 25 ಸೆಂಟ್ಸ್ ವೆಚ್ಚದಲ್ಲಿ ಸಾರ್ವಜನಿಕರಿಗೆ ಪ್ರದರ್ಶನಕ್ಕೆ ಇಡಲಾಯಿತು.

“ಮೈಕ್ ದಿ ಹೆಡ್‌ಲೆಸ್ ಚಿಕನ್ ಡೇ” ಅನ್ನು 1999 ರಿಂದ ಕೊಲೊರಾಡೋದ ಫ್ರೂಟಾದಲ್ಲಿ ಪ್ರತಿ ಮೇ ತಿಂಗಳ ಮೂರನೇ ವಾರಾಂತ್ಯದಲ್ಲಿ ಆಚರಿಸಲಾಗುತ್ತದೆ.

ಇದನ್ನೂ ಓದಿ: Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

ಮೈಕ್ ನಿಂದ ಕೋಳಿ ಮಾಲೀಕ ತಿಂಗಳಿಗೆ ಸುಮಾರು 45,000 ಡಾಲರ್ ಆದಾಯ ಗಳಿಸಿದ. ಈ ಅದ್ಭುತ ಕೋಳಿ ಮೌಲ್ಯ ಆಗ 10,000 ಡಾಲರ್ ಆಗಿತ್ತು.

ಸಾವು ಹೇಗಾಯಿತು?

1947ರ ಮಾರ್ಚ್ ನಲ್ಲಿ ಜೋಳದ ತುಂಡು ಮೈಕ್ ನ ಗಂಟಲಲ್ಲಿ ಸಿಲುಕಿದ ನಂತರ ಅದು ಸಾವನ್ನಪ್ಪಿತು. ಪ್ರವಾಸದಿಂದ ಹಿಂದಿರುಗುವಾಗ ಲಾಯ್ಡ್ ಶುಚಿಗೊಳಿಸುವ ಸಿರಿಂಜ್‌ಗಳನ್ನು ಬಿಟ್ಟು ಬಂದಿದ್ದರಿಂದ ಮೈಕ್ ನನ್ನು ಬದುಕಿಸಲು ವಿಫಲರಾದರು.

Continue Reading

ಧಾರ್ಮಿಕ

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

ನಮ್ಮ ದೈನಂದಿನ ಜೀವನದಲ್ಲಿ ವಾಸ್ತು ಶಾಸ್ತ್ರದ (Vastu Tips) ಪ್ರಭಾವವು ಗಾಢವಾಗಿದೆ. ಮನೆ ಅಥವಾ ಕಾರ್ಯಸ್ಥಳದೊಳಗೆ ಸರಿಯಾದ ವಸ್ತುಗಳನ್ನು ಸರಿಯಾದ ಸ್ಥಳಗಳಲ್ಲಿ ಇರಿಸಿದಾಗ ಅವು ಶಕ್ತಿಯ ಹರಿವನ್ನು ಸಮನ್ವಯಗೊಳಿಸುತ್ತವೆ. ಉತ್ತಮ ಆರೋಗ್ಯ, ಆರ್ಥಿಕ ಸ್ಥಿರತೆ ಮತ್ತು ಸಂತೋಷವನ್ನು ನೀಡುವ ಉಡುಗೊರೆಗಳನ್ನು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದ್ದು, ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವಾಗ ಹೆಚ್ಚು ಚಿಂತೆ ಮಾಡದೇ ಇವುಗಳನ್ನು ಆಯ್ಕೆ ಮಾಡಬಹುದು.

VISTARANEWS.COM


on

By

Vastu Tips
Koo

ಉಡುಗೊರೆಗಳನ್ನು (Gift) ಸ್ವೀಕರಿಸುವುದು ಯಾರಿಗೆ ಇಷ್ಟವಿಲ್ಲ? ಪ್ರತಿಯೊಬ್ಬರೂ ಉಡುಗೊರೆ ನೀಡುವಾಗ ಅದು ತೆಗೆದುಕೊಳ್ಳುವವರ ಮನಕ್ಕೆ ಇಷ್ಟವಾಗುವಂತಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಉಡುಗೊರೆಗಳು ಪ್ರೀತಿಯ ಶುದ್ಧ ಸೂಚಕವಾಗಿದೆ ಮತ್ತು ಅವು ಭಾವನಾತ್ಮಕ ಮತ್ತು ಆಂತರಿಕ ಮೌಲ್ಯವನ್ನು ಹೊಂದಿರುತ್ತದೆ. ಹೀಗಾಗಿ ಪ್ರೀತಿ ಪಾತ್ರರಿಗೆ ಉಡುಗೊರೆಗಳನ್ನು ಆಯ್ಕೆ ಮಾಡುವಾಗ ಯೋಚನೆ ಕಾಡುವುದು ಸಹಜ.

ನಾವು ಕೊಡುವ ಉಡುಗೊರೆಯು ಸ್ವೀಕರಿಸುವವರ ಜೀವನಕ್ಕೆ ಸಮೃದ್ಧಿ (prosperity), ಸಕಾರಾತ್ಮಕತೆ (positivity) ಮತ್ತು ಸಾಮರಸ್ಯವನ್ನು (harmony) ತರುವಂತೆ ಇರಬೇಕು ಎನ್ನುತ್ತದೆ ವಾಸ್ತುಶಾಸ್ತ್ರ (Vastu Tips). ಉಡುಗೊರೆಗಳನ್ನು ಆಯ್ಕೆ ಮಾಡಲು ವಾಸ್ತು ಶಾಸ್ತ್ರವು ಕೆಲವೊಂದು ಮಾರ್ಗದರ್ಶನವನ್ನು ನೀಡುತ್ತದೆ.

ವಾಸ್ತು ತತ್ತ್ವಗಳೊಂದಿಗೆ ಜೋಡಿಸಲಾದ ಉಡುಗೊರೆಯನ್ನು ಪ್ರೀತಿ ಪಾತ್ರರಿಗೆ ನೀಡಿದಾಗ ಇದು ಕೇವಲ ವಸ್ತುವನ್ನು ನೀಡುವುದಿಲ್ಲ. ಅದರೊಂದಿಗೆ ಅದೃಷ್ಟ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತೀರಿ.

ಸ್ವೀಕರಿಸುವವರ ಯೋಗಕ್ಷೇಮ ಮತ್ತು ಯಶಸ್ಸನ್ನು ಹೆಚ್ಚಿಸುವ ನಿರ್ದಿಷ್ಟ ಉಡುಗೊರೆಗಳನ್ನು ವಾಸ್ತು ಶಾಸ್ತ್ರವು ಸೂಚಿಸುತ್ತದೆ. ಈ ಉಡುಗೊರೆಗಳು ಯಾವುದೇ ಚಿಂತೆ ಇಲ್ಲದೆ ಆಯ್ಕೆ ಮಾಡಬಹುದು. ಇದು ಉಡುಗೊರೆ ಸ್ವೀಕರಿಸುವವರ ಪರಿಸರದಲ್ಲಿನ ಶಕ್ತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಜೀವನದ ವಿವಿಧ ಅಂಶಗಳಲ್ಲಿ ಅವರಿಗೆ ಅನುಕೂಲಕರವಾಗಿರುತ್ತದೆ.

ಸಮೃದ್ಧಿ ಮತ್ತು ಸಕಾರಾತ್ಮಕತೆಯನ್ನು ತರುವ 7 ಅದೃಷ್ಟದ ಉಡುಗೊರೆಗಳು

ಲಾಫಿಂಗ್ ಬುದ್ಧ

ಲಾಫಿಂಗ್ ಬುದ್ಧ ಅನೇಕರ ಕಚೇರಿ ಮತ್ತು ಮನೆಗಳಲ್ಲಿ ಕಂಡುಬರುವ ಜನಪ್ರಿಯ ಅಲಂಕಾರಿಕ ವಸ್ತುವಾಗಿದೆ. ಹರ್ಷಚಿತ್ತದ ವ್ಯಕ್ತಿ ಯಾವುದೇ ಜಾಗದಲ್ಲಿ ಸಂತೋಷವನ್ನು ತರುತ್ತದೆ ಎನ್ನುವ ನಂಬಿಕೆ ಇದೆ. ಫೆಂಗ್ ಶೂಯಿ ತತ್ತ್ವಗಳ ಪ್ರಕಾರ ರೋಮಾಂಚಕ ಮತ್ತು ಮಂಗಳಕರ ಶಕ್ತಿಯನ್ನು ಇದು ಸೃಷ್ಟಿಸುತ್ತದೆ.


ಗಣೇಶ ವಿಗ್ರಹ

ಗಣೇಶ ಹೊಸ ಆರಂಭ ಮತ್ತು ಯಶಸ್ಸಿನ ದೇವರು. ಗಣೇಶನ ಪ್ರತಿಮೆಯನ್ನು ನೀಡುವುದು ಉಡುಗೊರೆ ಸ್ವೀಕರಿಸುವವರಿಗೆ ಆಶೀರ್ವಾದವನ್ನು ಕೊಡುತ್ತದೆ. ಈ ಪ್ರತಿಮೆಯು ಶಕ್ತಿ, ಬುದ್ಧಿವಂತಿಕೆ ಮತ್ತು ಜೀವನದಲ್ಲಿ ಸವಾಲುಗಳನ್ನು ಜಯಿಸುವ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ.


ಶ್ರೀ ಮೇರು ಯಂತ್ರ

ಮೇರು ಶ್ರೀ ಯಂತ್ರವು ತನ್ನ ಆರಾಧಕರಿಗೆ ಶಾಂತಿ, ಸಂತೋಷ, ಜನಪ್ರಿಯತೆ, ಶಕ್ತಿ, ಅಧಿಕಾರ, ಸಂಪತ್ತು, ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ. ಸಮರ್ಪಣೆ ಮತ್ತು ನಂಬಿಕೆಯಿಂದ ಇದನ್ನು ಪೂಜಿಸಿದರೆ ಆಶೀರ್ವಾದ ಸಿಗುತ್ತದೆ ಎನ್ನುವ ನಂಬಿಕೆ ಇದೆ.


ರಾಧಾ ಕೃಷ್ಣನ ವಿಗ್ರಹ

ಶುಭ ಸೂಚಕವಾಗಿ ರಾಧಾ ಕೃಷ್ಣನ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು. ಇದು ನಿಮ್ಮ ಜೀವನದಲ್ಲಿ ಆಳವಾದ ಶಾಂತಿ, ಸಮೃದ್ಧ ಪ್ರೀತಿ ಮತ್ತು ಬಲವಾದ ಸಮರ್ಪಣೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ವಾಸ್ತು ಆಮೆ

ಆಮೆಗಳು ಅದೃಷ್ಟ ಮತ್ತು ದೀರ್ಘಾಯುಷ್ಯವನ್ನು ಪ್ರತಿನಿಧಿಸುತ್ತವೆ. ಆದ್ದರಿಂದ, ಗಾಜಿನ ಅಥವಾ ಸ್ಫಟಿಕ ಆಮೆಯನ್ನು ಉಡುಗೊರೆಯಾಗಿ ನೀಡುವುದು ಅವರಿಗೆ ಮಾಡುವ ಯಾವುದೇ ಕೆಲಸದಲ್ಲಿ ಅದೃಷ್ಟ ಮತ್ತು ಯಶಸ್ಸನ್ನು ತರುತ್ತದೆ.

ಚೈಮ್ಸ್

ವಿಂಡ್ ಚೈಮ್ ಗಳು ಕೇವಲ ಅಲಂಕಾರಕ್ಕಾಗಿ ಮಾತ್ರವಲ್ಲ. ಅವುಗಳು ಅದೃಷ್ಟ, ಸಮೃದ್ಧಿ ಮತ್ತು ಪಾಲಿಸಬೇಕಾದ ನೆನಪುಗಳನ್ನು ಸಂಕೇತಿಸುತ್ತವೆ. ಅದರ ಸುಮಧುರ ರಾಗಗಳು ಮನಸ್ಸನ್ನು ಶಾಂತಗೊಳಿಸುತ್ತದೆ. ಉತ್ಸಾಹವನ್ನು ಹೆಚ್ಚಿಸುತ್ತವೆ. ಮನೆಗೆ ಧನಾತ್ಮಕ ಶಕ್ತಿ ಮತ್ತು ಶಾಂತಿಯುತ ವಾತಾವರಣವನ್ನು ತುಂಬುತ್ತದೆ.

ಇದನ್ನೂ ಓದಿ: Vastu Tips: ಆರ್ಥಿಕ ಪ್ರಗತಿಗೆ ಈ ವಾಸ್ತು ಟಿಪ್ಸ್‌ ಫಾಲೋ ಮಾಡಿ


ಗೋಮತಿ ಚಕ್ರ ವೃಕ್ಷ

ಗೋಮತಿ ಚಕ್ರವನ್ನು ಉಡುಗೊರೆಯಾಗಿ ನೀಡುವುದು ಆಧ್ಯಾತ್ಮಿಕ ಮಹತ್ವದಿಂದ ತುಂಬಿದ ಅರ್ಥಪೂರ್ಣ ಸೂಚಕವಾಗಿದೆ. ಗೋಮತಿ ನದಿಯಲ್ಲಿ ಹೆಚ್ಚಾಗಿ ಕಂಡುಬರುವ ಈ ಪವಿತ್ರ ಕಲ್ಲುಗಳು ಸಕಾರಾತ್ಮಕ ಶಕ್ತಿ ಮತ್ತು ರಕ್ಷಣಾತ್ಮಕ ಗುಣಗಳಿಂದ ಮೌಲ್ಯಯುತವಾಗಿವೆ. ಗೋಮತಿ ಚಕ್ರವನ್ನು ನೀಡುವುದು ಸ್ವೀಕರಿಸುವವರಿಗೆ ಸಮೃದ್ಧಿ ಮತ್ತು ಅದೃಷ್ಟವನ್ನು ಆಶೀರ್ವಾದಿಸುತ್ತದೆ.

Continue Reading
Advertisement
Assault Case in Shivamogga
ಕ್ರೈಂ4 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್5 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್11 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202411 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ14 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ23 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್35 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ54 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ4 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌