Kadlekai Parishe 2023: ನಾಳೆಯಿಂದ ಕಡಲೆಕಾಯಿ ಪರಿಷೆ; 5 ದಿನ ಈ ಮಾರ್ಗ ಬಂದ್‌! - Vistara News

ಕರ್ನಾಟಕ

Kadlekai Parishe 2023: ನಾಳೆಯಿಂದ ಕಡಲೆಕಾಯಿ ಪರಿಷೆ; 5 ದಿನ ಈ ಮಾರ್ಗ ಬಂದ್‌!

Kadlekai Parishe 2023 : ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಶುರುವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

VISTARANEWS.COM


on

Kadlekai Parishe 2023 to start from Dec 9th change in route for 5 days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಾರಂಪರಿಕ ಕಡಲೆಕಾಯಿ ಪರಿಷೆ 2023 (Kadlekai Parishe 2023) ಡಿ.9 ರಿಂದ ಶುರುವಾಗುತ್ತಿದೆ. ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪರಿಷೆಗೆ ಚಾಲನೆ ನೀಡಲಾಗುತ್ತಿದೆ. ಡಿ. 9 ರಿಂದ 13ರವರೆಗೆ ಕಡಲೆಕಾಯಿ ಪರಿಷೆ ನಡೆಯಲಿದ್ದು, ಬಸವನಗುಡಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಬುಲ್‌ ಟೆಂಪಲ್ ರಸ್ತೆಯ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

1)ಲಾಲ್‌ಬಾಗ್ ವೆಸ್ಟ್‌ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜ ಪೇಟೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಬುಲ್‌ ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮುಂದೆ ಸಾಗಿ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

2)ಆರ್.ವಿ. ಟೀಚರ್ಸ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಠಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್‌ ರಾಕ್‌ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್‌ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

3)ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಕಾಲೋನಿ ರಸ್ತೆಯಲ್ಲಿ ಬುಲ್‌ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ತಿಗುಪ್ಪೆ ರಸ್ತೆಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್‌ನಲ್ಲಿ ಕೆ.ಜಿ. ನಗರ ಮುಖ್ಯರಸ್ತೆ ಅಥವಾ ಹಯವಧನರಾವ್ ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: Marriage Cancel : ತಾಳಿ ಕಟ್ಟಲು ಬಂದ್ರೆ ತಾಳಿಯನ್ನೇ ದೂಡಿದ ವಧು; ಅರ್ಧದಲ್ಲೇ ನಿಂತು ಹೋಯಿತು ಮದುವೆ

ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ?

ಕಡಲೆಕಾಯಿ ಪರಿಷೆಗೆ ಭೇಟಿ ನೀಡುವ ಸಾರ್ವಜನಿಕರು, ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ ಆಟದ ಮೈದಾನಗಳನ್ನು ಬಳಸಿಕೊಳ್ಳಬಹುದಾಗಿದೆ.
1)ಎ.ಪಿ.ಎಸ್.ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ
2)ಹಯವಧನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ ಹಾಗೂ ರಾಮಕೃಷ್ಣ ಆಶ್ರಮ ಜಂಕ್ಷನ್
3)ಬುಲ್‌ ಟೆಂಪಲ್ ರಸ್ತೆಯಲ್ಲಿರುವ ಉದಯಭಾನು ಆಟದ ಮೈದಾನ.

ಪರಿಷೆಗೆ ಬನ್ನಿ-ಕೈಚೀಲ ತನ್ನಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಪರಿಷೆಗೆ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ. ಪರಿಷೆಗೆ ಬನ್ನಿ-ಕೈಚೀಲ’ ತನ್ನಿ ಎಂಬ ಆಹ್ವಾನದೊಂದಿಗೆ ಪರಿಸರ ಸ್ನೇಹಿ ಪರಿಷೆ ನಡೆಸಲು ಬಿಬಿಎಂಪಿ ಸಿದ್ಧತೆಗಳನ್ನು ಮಾಡಿಕೊಂಡಿದೆ.

500 ವರ್ಷಗಳ ಇತಿಹಾಸವಿರುವ ಬಸವನಗುಡಿ ಕಡಲೆಕಾಯಿ ಪರಿಷೆಯು ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ನಡೆಯುತ್ತದೆ. ಈಗಾಗಲೇ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಸ್ವಚ್ಚತೆ ಕಾರ್ಯವನ್ನು ಮಾಡಲಾಗುತ್ತಿದೆ. ವರ್ಷಕ್ಕೊಮ್ಮೆ ದೊಡ್ಡ ಬಸವನಿಗೆ ಎಣ್ಣೆ ಹಾಕಿ ಸ್ವಚ್ಚ ಮಾಡಲಾಗುತ್ತದೆ.

ವ್ಯಾಪಾರಿಗಳು ಕೂಡ 5 ದಿನದ ಮೊದಲೆ ಕಡಲೆಕಾಯಿ ವ್ಯಾಪಾರ ಮಾಡಲು ತಮ್ಮ ತಮ್ಮ ಜಾಗವನ್ನು ಕಾಯಿದ್ದಿರಿಸಿಕೊಂಡಿದ್ದಾರೆ. ವ್ಯಾಪಾರಸ್ಥರು ಈ ಬಾರಿ ಹೆಚ್ಚಿನ ಆದಾಯದ ನಿರೀಕ್ಷೆಯಲ್ಲಿದ್ದಾರೆ. ಇನ್ನು ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ಪರಿಸರ ಪ್ರೇಮಿ ಕಡಲೆಕಾಯಿ ಪರಿಷೆ ನಡೆಸಲು ತೀರ್ಮಾನಿಸಲಾಗಿದೆ.

ಬಸವನಗುಡಿ ಕಡಲೆ ಕಾಯಿ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ವಿದ್ಯುತ್ ದೀಪಾಲಂಕಾರ, ವಿವಿಧ ಬಗೆಯ ಆಹಾರದ ಮಳಿಗೆಗಳು, ಆಟಿಕೆಗಳು ಮಕ್ಕಳನ್ನು ಆಕರ್ಷಿಸಲಿವೆ. ಮಲ್ಲೆಶ್ವರದ ಕಡಲೆಕಾಯಿ ಪರಿಷೆಯ ನಂತರ ಈಗ ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ರುಚಿ ರುಚಿಯಾದ ಕಡಲೆಕಾಯಿ ಸವಿಯಲು ಸಿಲಿಕಾನ್ ಸಿಟಿ ಮಂದಿ ಕಾತುರದಿಂದ ಕಾಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನೂತನ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯನ್ನು ನೆನಪಿಸುತ್ತಲೇ ಶುಭ ಕೋರಿದ್ದಾರೆ.

VISTARANEWS.COM


on

PM Narendra Modi and Siddaramaiah
Koo

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಬೆಂಗಳೂರು: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ(NDA) ಅಧಿಕಾರಕ್ಕೆ ಬಂದಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಬಿಜೆಪಿಗೆ ಜೆಡಿಎಸ್‌ ಕೂಡ ಬೆಂಬಲ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ (HD Deve Gowda) ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದಾರೆ.

ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

ರಾಯ್‌ಪುರ: ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ, ಆರಾಧಿಸುವ, ಅವರ ಪರವಾಗಿ ವಾದ ಮಾಡುವ, ಸಮಯ ಬಂದರೆ ಜಗಳಕ್ಕೂ ನಿಲ್ಲುವ ‘ಭಕ್ತರು’ ಇದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಛತ್ತೀಸ್‌ಗಢದಲ್ಲಿ (Chhattisgarh) ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ದೇವರಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಆ ಮೂಲಕ ಆತ ಅಭಿಮಾನ ಮೆರೆದಿದ್ದಾನೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ದುರ್ಗೇಶ್‌ ಪಾಂಡೆ ಎಂಬ 30 ವರ್ಷದ ವ್ಯಕ್ತಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದ ಹಿನ್ನೆಲೆಯಲ್ಲಿ ದೇವಾಲಯ ತೆರಳಿ, ಕಾಳಿ ದೇವಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್‌ 4ರಂದೇ ಆತನು ಕಾಳಿ ದೇವಸ್ಥಾನಕ್ಕೆ ತೆರಳಿ, ತನ್ನ ಎಡಗೈ ಬೆರಳನ್ನು ಕತ್ತರಿಸಿ ದೇವತೆಗೆ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 290 ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಖುಷಿ ತಾಳದೆ ಆತ ಬೆರಳು ಕತ್ತರಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ದೇವಸ್ಥಾನದಲ್ಲಿ ಬೆರಳು ಕತ್ತರಿಸಿಕೊಂಡ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಕ್ಕೀಡಾದ ಕುಟುಂಬಸ್ಥರು ವ್ಯಕ್ತಿಯನ್ನು ಸಮಾರಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಕೂಡಲೇ ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಹೋಗಿ ಎಂದು ಸೂಚಿಸಿದ್ದಾರೆ. ಅದರಂತೆ, ದುರ್ಗೇಶ್‌ ಪಾಂಡೆ ಅವರನ್ನು ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ರಕ್ತಸ್ರಾವವನ್ನು ನಿಲ್ಲಿಸಿದ್ದಾರೆ. ಸದ್ಯ, ದುರ್ಗೇಶ್‌ ಪಾಂಡೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading

ಕ್ರೈಂ

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

Assault Case: ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್‌ನಲ್ಲಿ ನಿನ್ನೆ ಸಂಜೆ ನಡೆದಿದೆ. ಆಂಬ್ಯುಲೆನ್ಸ್‌ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕೆಣಕಿ ಕಾರಿನಲ್ಲಿದ್ದ ನಾಲ್ವರಿಂದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕನ ಬಟ್ಟೆ ಹರಿದುಹಾಕಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

road rage assault case
ಆಂಬ್ಯುಲೆನ್ಸ್‌ ತಡೆದು ಹಲ್ಲೆ ನಡೆಸಿದ ಪುಂಡರು
Koo

ಬೆಂಗಳೂರು: ರೋಡ್‌ ರೇಜ್‌ (Road Rage) ಆಯ್ತು, ರಸ್ತೆಯಲ್ಲೇ ಹಲ್ಲೆ ಆಯ್ತು. ಇದೀಗ ಪುಂಡರು ತುರ್ತು ಚಿಕಿತ್ಸೆಗೆ (Emergency) ತೆರಳುತ್ತಿದ್ದ ಆಂಬ್ಯುಲೆನ್ಸ್‌ (Ambulance) ಅನ್ನೂ ಬಿಟ್ಟಿಲ್ಲ. ಸೈರನ್‌ ಹಾಕಿಕೊಂಡು ಧಾವಿಸುತ್ತಿದ್ದ ಆಂಬ್ಯುಲೆನ್ಸನ್ನೂ ಚೇಸ್‌ ಮಾಡಿ, ಅಡ್ಡಗಟ್ಟಿ, ಉಸಿರಾಟದ ತೊಂದರೆ ಇರೋ ಮಗುವಿದೆ ಬಿಟ್ಬಿಡಿ ಎಂದು ಬೇಡಿಕೊಂಡರೂ ಕೇಳದೆ ಡ್ರೈವರ್‌ ಮೇಲೆ ಹಲ್ಲೆ (Assault Case) ನಡೆಸಿದ್ದಾರೆ.

ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್‌ನಲ್ಲಿ ನಿನ್ನೆ ಸಂಜೆ ನಡೆದಿದೆ. ಆಂಬ್ಯುಲೆನ್ಸ್‌ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕೆಣಕಿ ಕಾರಿನಲ್ಲಿದ್ದ ನಾಲ್ವರಿಂದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕನ ಬಟ್ಟೆ ಹರಿದುಹಾಕಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ಬರುತ್ತಿತ್ತು. ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗಾಗಿ, ಆಕ್ಸಿಜನ್ ಹಾಕಿಸಿ ಕರೆ ತರಲಾಗುತ್ತಿತ್ತು. KA01 MJ9996 ನಂಬರಿನ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ವಿನಾಕಾರಣ ಆಂಬ್ಯುಲೆನ್ಸ್‌ ಚಾಲಕನನ್ನು ಕೆಣಕಿದ್ದಾರೆ. ಐದಾರು ಕಿಲೋಮೀಟರ್ ಚೇಸ್ ಮಾಡಿಕೊಂಡು ಬಂದು, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಅಡ್ಡಗಟ್ಟಿ ಏಕಾಏಕಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಮಗುವಿನ ಕಂಡಿಷನ್ ಕ್ರಿಟಿಕಲ್ ಇದೆ, ಬಿಟ್ಬಿಡಿ ಎಂದು ಮಗುವಿನ ಪೋಷಕರು ಕೈ ಮುಗಿದರೂ ಕ್ರೂರಿ ಪುಂಡರು ಬಿಡಲಿಲ್ಲ. ಚಾಲಕನಿಗೆ ಥಳಿಸಿ ಆಂಬ್ಯುಲೆನ್ಸ್ ಕೀ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ತಡೆದು ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿ ಇಂದು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಬಳಿ ಆಂಬ್ಯೂಲೆನ್ಸ್ ಚಾಲಕರು ಪ್ರತಿಭಟಿಸುವ ಸಾಧ್ಯತೆ ಇದೆ.

ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿಯಾಗಿ (Road Accident) ಸ್ಥಳದಲ್ಲೆ ಓರ್ವ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಡೊಂಗರಗಾಂವ್ ಬಳಿ ಘಟನೆ ನಡೆದಿದೆ. ಹರಕಂಚಿ ಗ್ರಾಮದ ಕೂಲಿ ಕಾರ್ಮಿಕ ಶಿವಪ್ಪ ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.

ಹರಕಂಚಿ ಗ್ರಾಮದಿಂದ ಕೂಲಿ ಕೆಲಸಕ್ಕೆಂದು ಹುಮನಬಾದ್ ಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದಕ್ಕೆ ಓವರ್‌ಟೆಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆದ ರಭಸಕ್ಕೆ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಮಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಟೆಂಪೋವನ್ನು ತೆರವು ಮಾಡಿದ್ದಾರೆ.

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

Continue Reading

ಮಳೆ

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 10ರಂದು ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ (Rain News) ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Stabbing in Mangalore : ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.

VISTARANEWS.COM


on

Stabbing in Mangalore:
Koo

ಮಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ (Stabbing in Mangalore) ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ.

ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

Continue Reading
Advertisement
Narendra Modi Oath Ceremony Celebs Congratulate PM Modi
ಸಿನಿಮಾ8 mins ago

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

IND vs PAK
ಪ್ರಮುಖ ಸುದ್ದಿ11 mins ago

IND vs PAK : ಭಾರತ ಪರ ಬೆಟ್ಟಿಂಗ್ ಕಟ್ಟಿ 5.4 ಕೋಟಿ ರೂಪಾಯಿ ಗೆದ್ದ ಕೆನಡಾದ ರ್ಯಾಪರ್ ಡ್ರೇಕ್!

IND vs PAK
ಕ್ರೀಡೆ37 mins ago

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

PM Narendra Modi and Siddaramaiah
ಪ್ರಮುಖ ಸುದ್ದಿ49 mins ago

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

IND vs PAK
ಕ್ರೀಡೆ1 hour ago

IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

road rage assault case
ಕ್ರೈಂ1 hour ago

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

IND vs PAK
ಪ್ರಮುಖ ಸುದ್ದಿ1 hour ago

IND vs PAK : ಸಿರಾಜ್​ ಚೆಂಡಿನ ಹೊಡೆತಕ್ಕೆ ಪಿಚ್​ನಲ್ಲೇ ಅಡ್ಡಡ್ಡ ಮಲಗಿದ​ ರಿಜ್ವಾನ್​; ಇಲ್ಲಿದೆ ವಿಡಿಯೊ

Shikakai For Hair
ಆರೋಗ್ಯ2 hours ago

Shikakai For Hair: ತಲೆ ಕೂದಲಿಗೆ ಶ್ಯಾಂಪೂ ಒಳ್ಳೆಯದೋ ಸೀಗೆಕಾಯಿ ಸೂಕ್ತವೋ?

Karnataka Weather Forecast
ಮಳೆ2 hours ago

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Modi Cabinet
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌