Kempegowda Statue | ಬೆಂಗಳೂರು ಕಟ್ಟಿದ ಪ್ರಭು ಕೆಂಪೇಗೌಡರು ಸಮಾಜ ಸುಧಾರಕರೂ ಹೌದು - Vistara News

ಕರ್ನಾಟಕ

Kempegowda Statue | ಬೆಂಗಳೂರು ಕಟ್ಟಿದ ಪ್ರಭು ಕೆಂಪೇಗೌಡರು ಸಮಾಜ ಸುಧಾರಕರೂ ಹೌದು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮ್ಮ ಹೆಮ್ಮೆಯ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ (Kempegowda Statue) ಅನಾವರಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನಾಡಪ್ರಭುವಿನ ಸಂಕ್ಷಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

kempegowda jayanti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲಕಾ ಕೆ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಪ್ರತಿಮೆ (Kempegowda Statue) ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ವಿಸ್ತಾರವಾದ ಥೀಮ್‌ ಪಾರ್ಕ್‌ ಸಹ ಮುನ್ನೆಲೆಗೆ ಬರಲಿದೆ. ಮೊದಲನೇ ಕೆಂಪೇಗೌಡರ ಬಗ್ಗೆ ನಾವ್ಯಾರೂ ಅರಿಯದವರಲ್ಲ. ಆಧುನಿಕ ಬೆಂಗಳೂರಿನ ನಿರ್ಮಾತೃ, ಕೆರೆಗಳನ್ನು ನಿರ್ಮಿಸಿದವರು, ಮರಗಳನ್ನು ಬೆಳೆಸಿದವರು, ಕೋಟೆ-ಕೊತ್ತಲಗಳು ಮತ್ತು ದೇವಾಲಯಗಳನ್ನು ಕಟ್ಟಿಸಿದವರು- ಇತ್ಯಾದಿ ನಮಗೆ ತಿಳಿದಿದೆ.

ಆದರೆ ಇವುಗಳನ್ನೆಲ್ಲಾ ಆ ಕಾಲದ ಬಹಳಷ್ಟು ರಾಜರು, ರಾಜವಂಶಗಳು ಮಾಡಿರುವುದೇ ಅಲ್ಲವೇ? ಹಾಗಿದ್ದ ಮೇಲೆ ಕೆಂಪೇಗೌಡರೇ ಏಕೆ ನಾಡಪ್ರಭು ಎಂದು ಕರೆಸಿಕೊಳ್ಳಬೇಕು? ಹಲವು ಶತಮಾನಗಳ ಹಿಂದೆ ಬೆಂಗಳೂರು ಕಟ್ಟಿ ಕಾಲವಾದವರನ್ನು ಇಂದಿನ ಕಾಲದವರು ಏಕಾಗಿ ನೆನಪಿಸಿಕೊಳ್ಳಬೇಕು? ಇಂದಿಗೂ ಅವರೇಕೆ ಪ್ರಸ್ತುತ? – ಇಂಥ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನವಿದು.

ನಾಗರಿಕತೆಯ ಹೆಸರಿನಲ್ಲಿ ಊರುಗಳನ್ನು, ನಗರಗಳನ್ನು ನಿರ್ಮಿಸಿಕೊಳ್ಳುವುದು ಇಂದು-ನಿನ್ನೆಯದಲ್ಲ. ಕ್ರಿಸ್ತಪೂರ್ವದ ಕಾಲದಲ್ಲೂ ವ್ಯವಸ್ಥಿತವಾದ ನಗರಗಳಿದ್ದವು ಎಂಬುದು ಹಲವಾರು ಉತ್ಖನನಗಳಲ್ಲಿ ಸ್ಪಷ್ಟವಾಗಿದೆ. ಹಾಗಿದ್ದೂ ನವ ಬೆಂಗಳೂರಿಗೆ ಭಾಷ್ಯ ಬರೆದವರೆಂದು ಕೆಂಪೇಗೌಡರನ್ನು ನಾವು ನೆನಪಿಸಿಕೊಳ್ಳಬೇಕಾಗಿರುವುದು ಬೆಂಗಳೂರು ಕಟ್ಟಿಸಿದ್ದಕ್ಕೆ ಮಾತ್ರವಲ್ಲ; ಅವರ ಅತ್ಯಪೂರ್ವ ದೂರದರ್ಶಿತ್ವಕ್ಕೆ, ಪ್ರಬುದ್ಧ ಮುತ್ಸದ್ದಿತನಕ್ಕೆ, ಆರ್ಥಿಕ ಅಭಿವೃದ್ಧಿಗೆ, ಪರಿಸರದ ಬಗೆಗಿನ ಕಾಳಜಿಗೆ, ಯೋಜನಾಬದ್ಧ ಧಾರ್ಮಿಕ ಚಟುವಟಿಕೆಗಳಿಗೆ, ಕಲೆ- ವಾಸ್ತುಶಿಲ್ಪಕ್ಕೆ ನೀಡಿದ ಪ್ರೋತ್ಸಾಹಕ್ಕೆ, ಸುಸ್ಥಿರ ಆಡಳಿತ ಮತ್ತು ಪ್ರಜಾ ವಾತ್ಸಲ್ಯಕ್ಕೆ.

ಬಾಲ್ಯದ ಜೀವನ
ಯಲಹಂಕದ ನಾಡಪ್ರಭು ಕೆಂಪನಂಜೇಗೌಡ ಮತ್ತು ಲಿಂಗಮಾಂಬೆ ಅವರ ಮಗನಾಗಿ 1510ರಲ್ಲಿ ಜನಿಸಿದವರು ಮೊದಲನೇ ಕೆಂಪೇಗೌಡರು. (ಮಾಗಡಿಯಲ್ಲಿ ಇದೇ ವಂಶದ ಇನ್ನೂ ಒಬ್ಬ ಕೆಂಪೇಗೌಡರು ಆಳಿದ್ದರಿಂದ ಇವರು ಮೊದಲನೇ ಕೆಂಪೇಗೌಡರು) ಆವತಿ ವಂಶದ ಕುಲದೇವಿ ಕೆಂಪಮ್ಮನ ಮತ್ತು ಭೈರವನ ಅನುಗ್ರಹದಿಂದ ಜನಿಸಿದ ಮಗುವನ್ನು ಕೆಂಪಯ್ಯ, ಕೆಂಪಣ್ಣ ಎಂದು ಕರೆಯಲಾಯಿತು. ಅದೇ ಮುಂದುವರೆದು ಕೆಂಪರಾಯ, ಕೆಂಪೇಗೌಡ ಎಂದಾಯಿತು.

ಮೊದಲಿನಿಂದಲೂ ವಿಜಯನಗರದ ಸಾಮಂತರಾಗಿದ್ದ ಯಲಹಂಕದ ಈ ಪಾಳೇಗಾರರು, ಕೃಷ್ಣದೇವರಾಯರ ಆಡಳಿತ ಮತ್ತು ಶಿಸ್ತಿನಿಂದ ಅತೀವ ಪ್ರಭಾವಗೊಂಡಿದ್ದರು. ತಂದೆಯೊಂದಿಗೆ ವಿಜಯನಗರದ ರಾಜಧಾನಿಗೆ ಭೇಟಿ ನೀಡಿದ್ದ ಬಾಲಕ ಕೆಂಪಣ್ಣನ ಮನದಲ್ಲಿ ಹಂಪಿಯ ಅಚ್ಚುಕಟ್ಟುತನ ಅಚ್ಚೊತ್ತಿತ್ತು. ಐಗಂಡಪುರದ ಮಾಧವ ಭಟ್ಟರಲ್ಲಿ ಬಾಲಕನ ವಿದ್ಯಾಭ್ಯಾಸ, ಶಸ್ತ್ರಾಭ್ಯಾಸಗಳೆಲ್ಲ ನಡೆದವು. ಗುರುಕುಲದಲ್ಲಿ ಅಭ್ಯಾಸ ಪೂರ್ಣಗೊಂಡ ಮೇಲೆ, ಅವರ ಸೋದರಮಾವನ ಮಗಳಾದ ಚೆನ್ನಾಂಬೆಯೊಂದಿಗೆ ವಿವಾಹವಾಯಿತು.

ಇದೇ ಸಮಯದಲ್ಲಿ ಯುವರಾಜ ನಾಗಿಯೂ ಅಭಿಷೇಚನಗೊಂಡರು. ನಾಡಿನ ಆಡಳಿತದಲ್ಲಿ ತಂದೆಯೊಂದಿಗೆ ತೊಡಗಿಸಿಕೊಳ್ಳುವ ಕೆಂಪೇಗೌಡರಿಗೆ ರಾಜ್ಯಾಡಳಿತದ ಪಟ್ಟುಗಳು ಕರಗತವಾಯಿತು. ಈ ಹೊತ್ತಿನಲ್ಲಿ ಮುಪ್ಪಿನಲ್ಲಿದ್ದ ಕೆಂಪನಂಜೇಗೌಡರು, ಮಗನಿಗೆ ನಾಡಪ್ರಭುವಿನ ಪಟ್ಟ ಕಟ್ಟುತ್ತಾರೆ- ಎನ್ನುವಲ್ಲಿಗೆ, ʻನಾಡಪ್ರಭುʼ ಎಂಬ ಪಟ್ಟ ಕೆಂಪೇಗೌಡರಿಗೆ ವಂಶಪಾರಂಪರ್ಯವಾಗಿ ಬಂದಿದ್ದು! ಆದರೆ ಅಷ್ಟೇ ಅಲ್ಲ.

ಸಮಾಜ ಸುಧಾರಕ ನಾಡಪ್ರಭು
ಮೊದಲನೇ ಕೆಂಪೇಗೌಡರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿಜಯನಗರದಲ್ಲಿ ಕೃಷ್ಣದೇವರಾಯರು ತೀರಿಕೊಂಡಿದ್ದರು. ಆ ರಾಜ್ಯಕ್ಕೆ ಸಾಮಂತರಾಗಿದ್ದ ಅನೇಕರು ತಮ್ಮನ್ನು ಸ್ವತಂತ್ರ ಎಂದು ಘೋಷಿಸಿಕೊಂಡಿದ್ದರು. ಗಡಿಯಲ್ಲಿ ಬಹಮನಿ ಸುಲ್ತಾನರಿಂದ ಕಿರುಕುಳ ಹೆಚ್ಚಿತ್ತು. ತಮ್ಮನ್ನು ಸ್ವತಂತ್ರ ಎಂದು ಘೋಷಿಸಿಕೊಳ್ಳಲು ಮನಸ್ಸು ಮಾಡದ ಕೆಂಪೇಗೌಡರು, ಸೋದರರಾದ ಸೋಮೇಗೌಡ ಮತ್ತು ಬಸವೇಗೌಡರೊಂದಿಗೆ ಸೇರಿ ವಿಜಯನಗರದ ಪರವಾಗಿ ಯುದ್ಧ ಮಾಡುತ್ತಾರೆ; ರಾಜ್ಯ ಅಖಂಡವಾಗಿರುವುದಕ್ಕೆ ಶ್ರಮಿಸುತ್ತಾರೆ. ಸಣ್ಣ ಪಾಳಯಪಟ್ಟೊಂದು ಸುರಕ್ಷಿತವಾಗಿರುವುದಕ್ಕೆ ಎದುರಾಗುವ ತೊಡಕುಗಳು ಹಲವಾರು. ಪದೇ ಪದೆ ಯುದ್ಧ ಎದುರಾದರೆ ಜೀವಹಾನಿ, ಧನಹಾನಿ, ಮಾನಹಾನಿಗಳೇ ಬದುಕಾಗುತ್ತವೆ. ಅಭಿವೃದ್ಧಿ ಕನ್ನಡಿ ಗಂಟಾಗುತ್ತದೆ.

ಬದಲಿಗೆ ದೊಡ್ಡದೊಂದು ಸಾಮ್ರಾಜ್ಯದ ಛತ್ರಛಾಯೆಯಲ್ಲಿ ಸುರಕ್ಷಿತವಾಗಿ ಬದುಕುವುದಕ್ಕೆ ಹಲವು ದಾರಿಗಳು ದೊರೆಯಬಹುದು. ಹಾಗಾಗಿ ತಮ್ಮ ಪ್ರಜೆಗಳ ಹಿತದೃಷ್ಟಿಯಿಂದ ವಿಜಯನಗರ ಇರುವವರೆಗೂ ಅದರ ಸಾಮಂತರಾಗಿಯೇ ಕೆಂಪೇಗೌಡರು ಉಳಿಯುತ್ತಾರೆ. ಶೌರ್ಯಕ್ಕೆ ಹೆಸರಾದ ಆವತಿ ವಂಶದಲ್ಲಿ ಹುಟ್ಟಿಯೂ, ತಮ್ಮ ನಾಡನ್ನು ಯುದ್ಧಕ್ಕೆ ದೂಡದೆ, ಶಾಂತಿ-ಅಭಿವೃದ್ಧಿಯನ್ನು ಸಾಧಿಸಿದ ಕಾರಣಕ್ಕಾಗಿಯೇ ಇರಬಹುದು- ಕೆಂಪೇಗೌಡರ ಆಳ್ವಿಕೆಯ ದಿನಗಳಿಗೆ ಸೇರಿದ ಮಹಾಸತಿ ಕಲ್ಲು ಮತ್ತು ವೀರಗಲ್ಲುಗಳು ಬೆಂಗಳೂರಿನ ಪ್ರದೇಶದಲ್ಲಿ ದೊರಕಿಲ್ಲ ಎನ್ನಲಾಗುತ್ತದೆ. ಇದಿಷ್ಟೇ ಅಲ್ಲ, ತಮ್ಮ ಕುಲದಲ್ಲಿ ಚಾಲ್ತಿಯಲ್ಲಿದ್ದ ವಿವಾಹ ವಯಸ್ಕ ಹೆಣ್ಣು ಮಕ್ಕಳ ಬೆರಳುಗಳನ್ನು ಕತ್ತರಿಸುವ ಕ್ರೂರ ಸಂಪ್ರದಾಯವೊಂದಕ್ಕೆ ಕೆಂಪೇಗೌಡರು ಅಂತ್ಯ ಹಾಡಿದ ಉಲ್ಲೇಖವಿದೆ. ಹಾಗಾಗಿ ಸಮಾಜ ಸುಧಾರಣೆಯೂ ಅವರ ಆಚರಣೆಯಲ್ಲಿತ್ತು.

ಕೃಷ್ಣದೇವರಾಯರ ಕಾಲದ ಸಮೃದ್ಧಿಯನ್ನು ಬಾಲ್ಯದಲ್ಲೇ ಕಂಡಿದ್ದ ಕೆಂಪೇಗೌಡರಿಗೆ ತಮ್ಮಲ್ಲೂ ಅಂತಹದ್ದೇ ರಾಜಧಾನಿ ನಿರ್ಮಿಸಬೇಕು ಎಂಬ ಕನಸಿತ್ತು. ನಗರ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನರಸುತ್ತಾ, ಯಲಹಂಕದಿಂದ ದಕ್ಷಿಣ ದಿಕ್ಕಿನಲ್ಲಿ ಸಂಚರಿಸುತ್ತಿದ್ದಾಗ ಅವರಿಗೊಂದು ವಿಚಿತ್ರ ಕಾಣಿಸಿತು. ಪುಟ್ಟ ಮೊಲವೊಂದು ಬೇಟೆ ನಾಯಿಯನ್ನು ಅಟ್ಟಿಸಿಕೊಂಡು ಹೋಗುತ್ತಿತ್ತು. ಪುಟ್ಟ ಮೊಲಕ್ಕೇ ಇಷ್ಟು ಧೈರ್ಯವಿರಬೇಕಾದರೆ ಇದೊಂದು ವೀರಭೂಮಿಯೇ ಇರಬೇಕು ಎಂದುಕೊಂಡ ಕೆಂಪೇಗೌಡರು, ಹಸಿರು ಕಾನನದಿಂದ ಕೂಡಿದ ಅದೇ ಸ್ಥಳದಲ್ಲಿ ರಾಜಧಾನಿ ಕಟ್ಟಲು ಯೋಚಿಸಿದರು. ಆ ಪ್ರದೇಶದ ಮುಖ್ಯ ನದಿಯಾಗಿದ್ದ ಅರ್ಕಾವತಿಗೆ ಸುತ್ತಲಿನ ಹಲವಾರು ತೊರೆಗಳು ಬಂದು ಸೇರುತ್ತಿದ್ದುದರಿಂದ ನೀರಾವರಿಗೂ ಈ ಭೂಮಿ ಯೋಗ್ಯ ಎಂಬುದು ಅವರ ಅನಿಸಿಕೆಯಾಗಿತ್ತು.

ಇದಕ್ಕೀಗ ಅಪಾರ ಪ್ರಮಾಣದಲ್ಲಿ ಜನ-ಧನ ಒದಗಿಬರಬೇಕಿತ್ತು. 1532ರಲ್ಲಿ ಯಲಹಂಕ, ವರ್ತೂರು, ಬೇಗೂರು, ಹಲಸೂರು, ಕೆಂಗೇರಿ, ತಲಘಟ್ಟಪುರ, ಜಿಗಣಿ, ಕುಂಬಳಗೋಡು ಮುಂತಾದ ಹಲವು ಹೋಬಳಿಗಳನ್ನು ವಿಜಯನಗರ ಸಾಮ್ರಾಜ್ಯವು ಕೆಂಪೇಗೌಡರ ಪಾಳೆಯಗಾರಿಕೆಗೆ ಬಿಟ್ಟುಕೊಟ್ಟಿತ್ತು. ಆದರೆ ಅಲ್ಲಿ ಸಂಗ್ರಹವಾಗುವ ಕಂದಾಯದಲ್ಲಿ ಒಂದಂಶವನ್ನು ಇರಿಸಿಕೊಂಡು ಉಳಿದಿದ್ದನ್ನು ಸಾಮ್ರಾಜ್ಯಕ್ಕೆ ಒಪ್ಪಿಸಬೇಕಿತ್ತು. ಹಾಗಾಗಿ, ಅರಸರ ಸನ್ನಿಧಾನಕ್ಕೆ ಧನಸಹಾಯ ಕೋರಿ ಅರಿಕೆಯನ್ನು ಕಳುಹಿಸುವ ಕೆಂಪೇಗೌಡರು, ಪ್ರಜೆಗಳಿಂದಲೂ ನೆರವು ಕೋರುತ್ತಾರೆ. ಈ ಎಲ್ಲಾ ಕಡೆಗಳಲ್ಲಿ ಪೂರಕವಾಗಿಯೇ ಅವರಿಗೆ ಪ್ರತಿಕ್ರಿಯೆ ದೊರೆಯುತ್ತದೆ. ನಗರ ನಿರ್ಮಾಣಕ್ಕಾಗಿ ಎಷ್ಟೆಷ್ಟು ಪೇಟೆ-ಕೋಟೆಗಳು, ಎಲ್ಲೆಲ್ಲಿ ಕೆರೆ-ಉದ್ಯಾನಗಳು, ಗುಡಿ-ಗುಂಡಾರಗಳು ಎಲ್ಲವನ್ನೂ ಒಳಗೊಂಡ ವಿಸ್ತೃತವಾದ ನೀಲನಕ್ಷೆ ಸಿದ್ಧಗೊಳ್ಳುತ್ತದೆ.

ಉದ್ಯಾನ ನಗರ ನಿರ್ಮಾಣ
ಆರ್ಥಿಕ, ಕೃಷಿ, ಸಾಂಸ್ಕೃತಿಕ ಮತ್ತು ಧಾರ್ಮಿಕ ಚಟುವಟಿಕೆಗಳು ಯಾವುದೇ ನಾಡಿನ ಆಧಾರ ಸ್ತಂಭಗಳು ಎಂಬುದನ್ನು ಅರಿತಿದ್ದ ಕೆಂಪೇಗೌಡರು, ಅದಕ್ಕೆ ತಕ್ಕಂತೆಯೇ ರಾಜಧಾನಿಯನ್ನು ಕಟ್ಟಲು ಯೋಜಿಸಿದ್ದರು. ರಾಜಧಾನಿಗೆ ನವದ್ವಾರಗಳು ಬೇಕು ಎಂಬ ಉದ್ದೇಶದಿಂದ ಪೂರ್ವಕ್ಕೆ ಹಲಸೂರು, ಪಶ್ಚಿಮಕ್ಕೆ ಸೊಂಡೆಕೊಪ್ಪ, ಉತ್ತರಕ್ಕೆ ಯಲಹಂಕ ಮತ್ತು ದಕ್ಷಿಣಕ್ಕೆ ಆನೇಕಲ್‌ನಲ್ಲಿ ನಾಲ್ಕು ಮಹಾದ್ವಾರಗಳನ್ನು ನಿರ್ಮಿಸಲಾಗಿತ್ತು. ಜೊತೆಗೆ, ವರ್ತೂರು, ಸರ್ಜಾಪುರ, ಕೆಂಗೇರಿ, ಯಶವಂತಪುರ ಮತ್ತು ಕನಕಪುರಗಳಲ್ಲಿ ಐದು ಕಿರುದ್ವಾರಗಳನ್ನು ನಿರ್ಮಿಸಲಾಗಿತ್ತು. ಬೆಂಗಳೂರು ಕೋಟೆ, ಮಾಗಡಿ ಕೋಟೆ, ಸಾವನದುರ್ಗ ಕೋಟೆ, ಹುತ್ರಿ ದುರ್ಗ, ಹುಲಿಯೂರು ದುರ್ಗದ ಕೋಟೆ ಸೇರಿದಂತೆ, ನಾಡಿನ ಆಯಕಟ್ಟಿನ ಸ್ಥಳಗಳಲ್ಲಿ ಏಳು ಕೋಟೆಗಳನ್ನು ನಿರ್ಮಿಸಲಾಗಿತ್ತು. ಊರಿನ ನಾಲ್ಕೂ ದಿಕ್ಕುಗಳಲ್ಲಿ ಕಾವಲು ಗೋಪುರಗಳನ್ನು ನಿಲ್ಲಿಸಲಾಗಿತ್ತು.

ಕುಡಿಯುವ ನೀರು ಮತ್ತು ಕೃಷಿ ನೀರಾವರಿಗೆ ಎಂದಿಗೂ ತೊಂದರೆಯಾಗದಂತೆ ನಾಡಿನೆಲ್ಲೆಡೆ ಕೆರೆ-ಕಟ್ಟೆಗಳನ್ನು ನಿರ್ಮಿಸಿದ್ದರು. ಧರ್ಮಾಂಬುಧಿ ಕೆರೆ, ಕೆಂಪಾಂಬುಧಿ ಕೆರೆ, ಗಿಡ್ಡಪ್ಪನ ಕೆರೆ, ಸಂಪಂಗಿರಾಮ ಕೆರೆ, ಚೆನ್ನಮ್ಮನ ಕೆರೆ, ಯಡಿಯೂರು ಕೆರೆ, ಕಾರಂಜಿ ಕೆರೆ, ಹಲಸೂರು ಕೆರೆ, ಕೆಂಪಾಪುರ ಕೆರೆ… ಒಂದೇ ಎರಡೇ? ನಗರ ಎಷ್ಟೇ ಬೆಳೆದರೂ ಜನಬಳಕೆಯ ನೀರಿಗೆ ಕೊರತೆಯಾಗಕೂಡದು ಎಂಬುದು ಅವರ ಯೋಜನೆಯಲ್ಲಿ ಸ್ಪಷ್ಟವಾಗಿತ್ತು. ಅಂದಿನ ಕಾಲಕ್ಕೆ ತಕ್ಕಂತೆ ಎಲ್ಲಾ ದೇವಾಲಯಗಳ ಬಳಿಯಲ್ಲಿಯೂ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು.

ನಗರಗಳಲ್ಲಿ ಈಗಿರುವಂಥ ವಿಸ್ತರಣೆಗಳು, ಬಡಾವಣೆಗಳು ಬೇರೆಯದೇ ರೀತಿಯಲ್ಲಿ ಅಂದಿನ ಕಾಲದಲ್ಲೂ ಇದ್ದವು ಎಂದರೆ ತಪ್ಪಾಗಲಾರದು. ವಾಣಿಜ್ಯ ಚಟುವಟಿಕೆಗಳು ಸಾಂಗವಾಗಿ ನೆರವೇರುವ ದೃಷ್ಟಿಯಿಂದ ವೃತ್ತಿಯಾಧರಿತ ಪೇಟೆಗಳನ್ನು ನಿರ್ಮಾಣ ಮಾಡಲಾಗಿತ್ತು. ಉದಾ, ಅರಳೇಪೇಟೆ, ಅಕ್ಕಿಪೇಟೆ, ಕುಂಬಾರಪೇಟೆ, ಅಂಚೆಪೇಟೆ, ತರಗುಪೇಟೆ, ಬಳೇಪೇಟೆ, ಮೇದರ ಪೇಟೆ, ಮಡಿವಾಳ ಪೇಟೆ, ಮುತ್ಯಾಲ ಪೇಟೆ, ಉಪ್ಪಾರ ಪೇಟೆ, ಚಿಕ್ಕಪೇಟೆ, ದೊಡ್ಡಪೇಟೆ- ಮುಂತಾದ ಹಲವಾರು ಪೇಟೆ-ಉಪಪೇಟೆಗಳನ್ನು ನಿರ್ಮಿಸಿ ವರ್ತಕರಿಗೆ ಮತ್ತು ಕುಶಲಕರ್ಮಿಗಳಿಗೆ ಉತ್ತೇಜನ ನೀಡಲಾಗಿತ್ತು. ನಾಡಿನಲ್ಲಿ ಸಂಪತ್ತಿನ ಕ್ರೋಢೀಕರಣಕ್ಕೆ ಪ್ರಭುಗಳು ಕೈಗೊಂಡ ಅತ್ತ್ಯುತ್ತಮ ಕ್ರಮವಿದು.  

ದೇವಾಲಯಗಳ ನಿರ್ಮಾಣ
ರಾಜಧಾನಿಯ ಸುತ್ತಲು ಹಲವು ದೇವಾಲಯಗಳನ್ನು ನಿರ್ಮಿಸಿ, ಹಲವಾರು ಹಳೆಯ ಗುಡಿಗಳ ಜೀರ್ಣೋದ್ಧಾರ ಮಾಡಿಸಿದ್ದರು ಕೆಂಪೇಗೌಡರು. ಬೆಂಗಳೂರಿನ ದೊಡ್ಡ ಬಸವನ ಗುಡಿ ಮತ್ತು ಅಲ್ಲಿನ ಏಕಶಿಲೆಯ ನಂದಿ ಅವರು ನಿರ್ಮಿಸಿದ ಭವ್ಯತೆಗಳಲ್ಲಿ ಒಂದು. ಪ್ರತಿವರ್ಷ ಇಲ್ಲಿ ನಡೆಯುವ ಕಡಲೆಕಾಯಿ ಪರಿಷೆಯು ಕೃಷಿ ಸಮೃದ್ಧಿಗೂ ಧಾರ್ಮಿಕ ಚಟುವಟಿಕೆಗಳಿಗೂ ಇರುವ ಸಂಬಂಧವನ್ನು ಸೂಚಿಸುತ್ತದೆ. ಗವಿಗಂಗಾಧರೇಶ್ವರ ಗುಹಾಂತರ ದೇವಾಲಯ, ಆಂಜನೇಯ ದೇಗುಲ, ನಗರ ದೇವತೆ ಅಣ್ಣಮ್ಮ ದೇವಾಲಯಗಳು ಈ ಕಾಲದಲ್ಲೇ ನಿರ್ಮಾಣಗೊಂಡವು. ಹಲಸೂರಿನ ಶ್ರೀ ಸೋಮೇಶ್ವರ ದೇವಾಲಯ ಕೆಂಪೇಗೌಡರ ಕಾಲದಲ್ಲಿ ಜೀರ್ಣೋದ್ಧಾರಗೊಂಡಿತು. ಇವುಗಳಲ್ಲದೆ, ಕೋಟೆಯ ಸುತ್ತಮುತ್ತ ದೇವಾಲಯಗಳನ್ನು ಕಟ್ಟಿಸುವುದು ಅಂದಿನ ಪ್ರಭುಗಳ ಪರಿಪಾಠವಾಗಿತ್ತು.

ಶಿಲ್ಪಕಲೆಗೆ ನಾಡಪ್ರಭುಗಳ ಕೊಡುಗೆಯೋ ಎಂಬಂತೆ, ಗಿರಿಜಾ ಕಲ್ಯಾಣ ಮತ್ತು ರಾಮಾಯಣ ಕಥನಗಳ ಸಾಲುಗಳನ್ನು ಕೋಟೆ ವೆಂಕಟರಮಣ, ಹಲಸೂರಿನ ಸೋಮೇಶ್ವರ ಮತ್ತು ಶಿವಗಂಗೆಯ ಕಲ್ಯಾಣಿಯ ಗೋಡೆಗಳ ಮೇಲೆ ಇಂದಿಗೂ ಕಾಣಬಹುದು. ಸುಸಜ್ಜಿತ ರಸ್ತೆ ಮಾರ್ಗಗಳು, ಸಾಲು ಮರಗಳು, ಉದ್ದಗಲಕ್ಕೂ ಉದ್ಯಾನವನಗಳು, ಕುಡಿಯಲು ಮತ್ತು ಕೃಷಿಗೆ ಸಮೃದ್ಧವಾದ ನೀರಾವರಿ ವ್ಯವಸ್ಥೆ, ನಾಡಿನ ರಕ್ಷಣೆಗೆ ಕೋಟೆ, ಕಾವಲುಗೋಪುರ ಹಾಗೂ ದ್ವಾರಗಳು, ಸುಸ್ಥಿರ ಆರ್ಥಿಕತೆಗಾಗಿ ವಾಣಿಜ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ, ಕಲೆ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಇಂಬು- ಇವನ್ನೆಲ್ಲಾ ಮಾಡಿದವರು ಯಾವುದೋ ಸಾಮ್ರಾಜ್ಯದ ಅರಸನಲ್ಲ; ಸಾಮಂತ ನಾಡೊಂದರ ಪಾಳೆಯಗಾರ.

ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ ಯಾವ ಸಿಂಹಾಸನ, ಅರಸೊತ್ತಿಗೆಯ ಹಂಗಿಲ್ಲದೆಯೇ ಜನಮನದ ಅರಸನಾಗಿದ್ದವರು- ನಿಜವಾದ ಅರ್ಥದಲ್ಲಿ ʻನಾಡಪ್ರಭುʼ! ಬೆಂಗಳೂರಿನ ಇಂದಿನ ಸ್ಥಿತಿ ಏನೇ ಇದ್ದರೂ, ಭವ್ಯ ಮತ್ತು ಉದಾತ್ತ ಧ್ಯೇಯೋದ್ದೇಶಗಳ ಜೊತೆಗೆ ಅತ್ಯಂತ ವ್ಯವಸ್ಥಿತ ಬೆಂಗಳೂರನ್ನು ಕಟ್ಟಿದ್ದ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಲೇಬೇಕಾದ ಹೊತ್ತಿದು.

ಇದನ್ನೂ ಓದಿ Kempegowda Jayanti | ಬೆಂಗಳೂರನ್ನು ದೇಗುಲಗಳ ನಗರವನ್ನಾಗಿಸಿದ ಕೆಂಪೇಗೌಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Drowned: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂಧಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ 4 ಜನರು ಮೃತಪಟ್ಟರು. ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

VISTARANEWS.COM


on

drowned 4 death in kolhapur
Koo

ಕೊಲ್ಹಾಪುರ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ಕು ಮಂದಿ ಜಲಸಮಾಧಿಯಾದ (drowned death) ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ ತಾಲೂಕಿನ ಬಸ್ತವಾಡೆ ಸೇತುವೆ ಬಳಿ ನಡೆದಿದೆ. ಮೃತಪಟ್ಟವರಲ್ಲಿ ಕರ್ನಾಟಕದ ಬೆಳಗಾವಿಯ (belagavi news) ಇಬ್ಬರು ಸೇರಿದ್ದಾರೆ.

ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂಧಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ 4 ಜನರು ಮೃತಪಟ್ಟರು. ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

ಮೃತರಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳು. ರೇಶ್ಮಾ ದಿಲಿಪ ಏಳಮಲೇ (34) ಹಾಗೂ ಯಶ್ ದಿಲಿಪ ಏಳಮಲೇ (17) ಇವರಿಬ್ಬರೂ ಕಾಗಲ ತಾಲೂಕಿನ ಅನ್ನುರ ಗ್ರಾಮದ ಜಾತ್ರೆಗೆ ಸಂಬಂಧಿಕರ ಮನೆಗೆ ಬಂದಿದ್ದರು. ಇನ್ನಿಬ್ಬರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯವರು. ಕೊಲ್ಹಾಪುರ ಜಿಲ್ಲೆಯ ಮುರಗುಡ ನಿವಾಸಿ ಜಿತೇಂದ್ರ ಲೋಕರೆ (36) ಹಾಗೂ ಕೊಲ್ಹಾಪುರ ಜಿಲ್ಲೆಯ ರೂಕಡಿ ಗ್ರಾಮದ ನಿವಾಸಿ ಸವಿತಾ ಅಮರ ಕಾಂಬಳೆ (27). ಕಾಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

Continue Reading

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೈಂ

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Murder Case: ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

VISTARANEWS.COM


on

sarjapura boy murder case
Koo

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

Student Death

ಆನೇಕಲ್: ಎಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ (Student Death) ಮೃತಪಟ್ಟಿದ್ದಾಳೆ. ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ (Self Harming) ಶವ ಪತ್ತೆಯಾಗಿದೆ. ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ (18) ಮೃತ ದುರ್ದೈವಿ.

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.

ಕಾಲೇಜಿನವರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

ರಕ್ಷಿಸಲು ಹೋದ ವಿದ್ಯಾರ್ಥಿನಿಗೆ ಎಚ್‌ಓಡಿ ಬೈಗುಳ

ಇನ್ನೂ ಪಕ್ಕದ ರೂಮಿನ ವಿದ್ಯಾರ್ಥಿನಿ ಪ್ರಗತಿ ಎಂಬಾಕೆ ಬಾಗಿಲು ತೆರೆದು ನೋಡಿದಾಗ ಹರ್ಷಿತಾ ನೇಣಿಗೆ ಶರಣಾಗಿದ್ದು ಕಂಡಿದೆ. ಕೊಠಡಿಯ ಬಾಗಿಲು ತೆರೆದು ರಕ್ಷಣೆ ಮಾಡಲು ಪ್ರಗತಿ ಮುಂದಾಗಿದ್ದಕ್ಕೆ, ಎಚ್‌ಓಡಿ ಭಾರತಿ ಎಂಬುವವರು ಕೊಠಡಿ ಬಾಗಿಲನ್ನು ತೆರೆದಿದ್ದು ಯಾಕೆ ಎಂದು ಪ್ರಶ್ನೆ ಮಾಡಿ ಬೈದಿದ್ದಾರೆ. ರಕ್ಷಣೆ ಮಾಡಲು ಮುಂದಾಗಿದ್ದೆ ತಪ್ಪಾ ಎಂದು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟಿಸಿದ್ದಾರೆ. ಹರ್ಷಿತಾ ಮೃತಪಟ್ಟಾಗ ರಕ್ಷಣೆಗೆ ಹಾಸ್ಟೆಲ್‌ನಲ್ಲಿ ಯಾರು ಇರಲಿಲ್ಲ. ವಾರ್ಡನ್, ಆಯಾ ಯಾರು ಹಾಸ್ಟೆಲ್‌ನಲ್ಲಿ ಇರಲಿಲ್ಲ. ಹಾಸ್ಟೆಲ್ ಆಡಳಿತ ವ್ಯವಸ್ಥೆ ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದರು.

Continue Reading

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
t20 world cup
ಕ್ರಿಕೆಟ್59 seconds ago

T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

drowned 4 death in kolhapur
ಕ್ರೈಂ25 mins ago

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Virat kohli
ಪ್ರಮುಖ ಸುದ್ದಿ31 mins ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Crime News
ಕ್ರೈಂ41 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ46 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ1 hour ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ2 hours ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ3 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ4 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌