Vyasa Puja : ಹವ್ಯಾಸಗಳು ಅಳತೆಗೆ ಸಿಕ್ಕುತ್ತವೆ; ವ್ಯಾಸರು ಅಳತೆಗೆ ಸಿಕ್ಕುವುದಿಲ್ಲ!! - Vistara News

ಧಾರ್ಮಿಕ

Vyasa Puja : ಹವ್ಯಾಸಗಳು ಅಳತೆಗೆ ಸಿಕ್ಕುತ್ತವೆ; ವ್ಯಾಸರು ಅಳತೆಗೆ ಸಿಕ್ಕುವುದಿಲ್ಲ!!

ಶ್ರೀ ವೇದ ವ್ಯಾಸರು ದ್ವಾಪರ ಯುಗದಲ್ಲಿ ಪರಾಶರ ಸತ್ಯವತಿಯ ಪುತ್ರನಾಗಿ ಅವತಾರವೆತ್ತಿದ ದಿನ ಇಂದು. ಮಾಘ ಶುದ್ಧ ಹುಣ್ಣಿಮೆಯ ಈ ದಿನವನ್ನು ವ್ಯಾಸ ಪೂರ್ಣಿಮಾ ಎಂದು ಕರೆಯಲಾಗುತ್ತದೆ. ವ್ಯಾಸ ಪೂಜೆ (Vyasa Puja) ಇಂದಿನ ವಿಶೇಷ. ಶ್ರೀ ವೇದವ್ಯಾಸರ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Vyas Puja 2023 ವ್ಯಾಸ ಪೂಜೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vyasa Puja

ಡಾ. ಶಿವಾನಂದ ಶಿವಾಚಾರ್ಯರು
ಹಿರೇಮಠ, ತಪೋವನ, ತುಮಕೂರು

“ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್” – “ಈ ಜಗತ್ತೆಲ್ಲವೂ ವ್ಯಾಸಶೇಷ”
ಇದು ಬಹುಶ್ರುತ ಮಾತು. ವಿದ್ವದ್ವಲಯದಲ್ಲಿ ಈ ಮಾತಿಗೆ ತುಂಬ ತೂಕವಿದೆ.
ಅಲೌಕಿಕರಿಗೆ ದೇವರು ಸರ್ವಜ್ಞನಾದರೆ ಲೌಕಿಕರಿಗೆ ವ್ಯಾಸರು ಸರ್ವಜ್ಞ. ವ್ಯಾಸರು ಸರ್ವಜ್ಞರೂ ಅಹುದು. ಅವರು ಮರ್ಮಜ್ಞರೂ ಅಹುದು; ಮತ್ತವರು ಧರ್ಮಜ್ಞರೂ ಅಹುದು, ತತ್ತ್ವಜ್ಞರೂ ಅಹುದು. ವ್ಯಾಸರು ಅರಿಯದೆ ಇರುವುದು ಯಾವುದೂ ಇಲ್ಲ. ಅವರ ಜ್ಞಾನದ ವಿಸ್ತಾರ ತುಂಬ ದೊಡ್ಡದು. ಅದು ಜಗದಗಲ, ಮುಗಿಲಗಲ, ಮಿಗೆಯಗಲ!!
“ಮಹರ್ಷಿ” ಗೌರವಕ್ಕೆ ಪಾತ್ರರಾದ ವ್ಯಾಸ ಮಹರ್ಷಿಗಳೊಂದು ಬಹುದೊಡ್ಡ ವಿಶ್ವಕೋಶ.

ಅವರು ಆ ಕಾಲದ ವಿಶ್ವಕೋಶ ಮತ್ತು ಜ್ಞಾನಕೋಶ. ಅವರು ಈ ಕಾಲದ ಎನ್‌ಸೈಕ್ಲೋಪೀಡಿಯಾ ಮತ್ತು ವೀಕಿಪಿಡಿಯಾ. ಅವರೊಂದು ಎಣಿಕೆಗೆ ಸಿಕ್ಕದ ಜ್ಞಾನಭಂಡಾರ. ವ್ಯಾಸ ಎಂದರೆ “ವಿಸ್ತರಿಸಿಕೊಳ್ಳುವುದು” ಎಂದರ್ಥ.
ವ್ಯಾಸ ಮತ್ತು ಹವ್ಯಾಸಗಳು ಯಾವಾಗಲೂ ವಿಸ್ತರಿಸಿಕೊಳ್ಳುತ್ತಲೇ ಇರುತ್ತವೆ. ವ್ಯಾಸರದು ಕೊನೆ, ಮೊದಲಿಲ್ಲದ ವಿಸ್ತಾರ. ಅವರು ವೇದಮಯ ಮತ್ತು ಪುರಾಣಮಯ. ಅವರು ಬ್ರಹ್ಮಮಯ ಮತ್ತು ಭಾರತಮಯ.

ವ್ಯಾಸರು ವೇದಗಳನ್ನು ಕರಾತಲಾಮಲಕಗೊಳಿಸಿಕೊಂಡಿದ್ದರು. ಅವರು ವೇದಗಳನ್ನು ವಿಂಗಡಿಸುವುದಷ್ಟೇ ಅಲ್ಲ, ಅವುಗಳನ್ನು ವಿಸ್ತರಿಸಿ ವ್ಯಾಖ್ಯಾನಿಸಿದವರು. ಆದ್ದರಿಂದಲೇ ಅವರು ಬರೀ ವ್ಯಾಸರಲ್ಲ; ಅವರು ವೇದವ್ಯಾಸರು.
ಹದಿನೆಂಟು ಪುರಾಣಗಳನ್ನು ಬರೆದ ಹೆಗ್ಗಳಿಕೆ ಅವರದು. ಮತ್ಸಯಪುರಾಣ, ಮಾರ್ಕಂಡೇಯ ಪುರಾಣ, ಭವಿಷ್ಯಪುರಾಣ, ಬ್ರಹ್ಮಪುರಾಣ, ಬ್ರಹ್ಮಾಂಡ ಪುರಾಣ, ಭಾಗವತಪುರಾಣ, ಬ್ರಹ್ಮವೈವರ್ತಪುರಾಣ, ವಾಮನಪುರಾಣ, ವಾಯುಪುರಾಣ, ವಿಷ್ಣುಪುರಾಣ, ವರಾಹಪುರಾಣ, ಅಗ್ನಿಪುರಾಣ, ನಾರದಪುರಾಣ, ಪದ್ಮಪುರಾಣ, ಲಿಂಗಪುರಾಣ, ಗರುಡಪುರಾಣ, ಕೂರ್ಮಪುರಾಣ, ಸ್ಕಂದಪುರಾಣ – ಈ ಹದಿನೆಂಟು ಪುರಾಣಗಳನ್ನು ಜಗತ್ತಿಗೆ ಧಾರೆ ಎರೆದ ಕೀರ್ತಿ ವ್ಯಾಸರದು.

ವ್ಯಾಸರಿಗೆ ಬ್ರಹ್ಮಸೂತ್ರಗಳು ಆಪಾದಮಸ್ತಕ. ಅವರು ಸೂತ್ರಗಳಿಗೆ ದಿಕ್ಸೂಚಿ. ಮತ್ತವರು ಸೂತ್ರಗಳ ಮಾರ್ಗಸೂಚಿ. ಆದ್ದರಿಂದ ಅವರು ಬ್ರಹ್ಮಮಯ. ವ್ಯಾಸರು ಮಹಾಭಾರತದ ಕರ್ತೃ. ಅಷ್ಟು ಮಾತ್ರವಲ್ಲ, ಅವರು ಮಹಾಭಾರತದ ಒಂದು ಸಶಕ್ತ ಪಾತ್ರವೂ ಕೂಡ ಅಹುದು. ವ್ಯಾಸರು ಮಹಾಭಾರತದ ಕರ್ತಾ, ಧರ್ತಾ, ಭರ್ತಾ. ಅವರು ಮಹಾಭಾರತದ ತುಂಬೆಲ್ಲ ಹಾಸುಹೊಕ್ಕು!!

ರಾಮಾಯಣಕ್ಕೆ ಮಹರ್ಷಿ ವಾಲ್ಮೀಕಿಗಳು ಆದಿಯಾದ ಹಾಗೆ ಮಹಾಭಾರತಕ್ಕೆ ವ್ಯಾಸರು ಆದಿಯೂ ಅಹುದು; ಅವರು ಮಹಾಭಾರತದ ಬುನಾದಿಯೂ ಅಹುದು. ಮಹಾಭಾರತಕ್ಕೆ ಮುನ್ನುಡಿಯೂ ಅವರೇ, ಬೆನ್ನುಡಿಯೂ ಅವರೇ!!
ವ್ಯಾಸರು ಅಲೌಕಿಕ ಶಕ್ತಿಸಂಪನ್ನರು. ಅವರು ಕರ್ತುಂ, ಅಕರ್ತುಂ ಮತ್ತು ಅನ್ಯಥಾ ಕರ್ತುಂ ಶಕ್ತಿಸಂಪನ್ನರು. ವ್ಯಾಸರು ಲೌಕಿಕ, ಅಲೌಕಿಕ – ಎರಡರಲ್ಲೂ ಅಜಾತಶತ್ರುಗಳು.

ವ್ಯಾಸರು ಋಷಿಪುತ್ರರು. ಋಷಿ ಪರಾಶರ ಮುನಿಗಳು ವ್ಯಾಸರ ತಂದೆ. ಪರಿಣತಮತಿ ನಿಷಾದಪುತ್ರಿ ಸತ್ಯವತಿ ವ್ಯಾಸರ ತಾಯಿ. ವ್ಯಾಸರು ಪರಾಶರ, ಸತ್ಯವತಿಯರ ಕೂಡಲಸಂಗಮ. ವ್ಯಾಸರು ಪರಾಶರರ ಹಾಗೆ ಋಷಿಗಳೂ ಅಹುದು; ಅವರು ಸತ್ಯವತಿಯ ಹಾಗೆ ಪರಿಣತಮತಿಗಳೂ ಅಹುದು.

ವ್ಯಾಸರ ಮೈಬಣ್ಣ ಕಪ್ಪಾಗಿದ್ದುದರಿಂದ ಅವರನ್ನು “ಕೃಷ್ಣದ್ವೈಪಾಯನ” ಎಂದು ಕೂಡ ಕರೆಯುವುದು ಉಂಟು. ಅವರು ಬಹುಕಾಲ ಬದರೀವನದಲ್ಲಿ ವಾಸವಾಗಿದ್ದುದರಿಂದ ಅವರಿಗೆ ಬಾದರಾಯಣ ಎಂದು ಕೂಡ ಕರೆಯುತ್ತಾರೆ.
ದೇವರ ಇಪ್ಪತ್ನಾಲ್ಕು ಅವತಾರಗಳಲ್ಲಿ ವೇದವ್ಯಾಸರ ಅವತಾರ ಕೂಡ ಒಂದು ಎಂದು ಹೇಳಲಾಗುತ್ತದೆ. ವ್ಯಾಸರು ಬರೀ ವೇದವ್ಯಾಸರು ಮಾತ್ರವಲ್ಲ, ಅವರೊಂದು ಸ್ಮೃತಿಯನ್ನು ಕೂಡ ರಚಿಸಿದ್ದಾರೆ. ಮನುಸ್ಮೃತಿ, ಯಾಜ್ಞವಲ್ಕ್ಯ ಸ್ಮೃತಿಗಳ ಹಾಗೆ ವ್ಯಾಸಸ್ಮೃತಿ ಕೂಡ ಸುಪ್ರಸಿದ್ಧ.

ವ್ಯಾಸರು ಜ್ಞಾನದ ಆಕರಗಳ ವಿವಿಧ ಪ್ರಕಾರಗಳಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಇದು ಕಾರಣ, ಭಾರತೀಯ ವಾಙ್ಮಯವು ವೇದವ್ಯಾಸರಿಗೆ ಸದಾ ಋಣಿಯಾಗಿದೆ. ಭಾರತೀಯ ಸಂಸ್ಕೃತಿಯನ್ನು ಕಟ್ಟುವಲ್ಲಿ ಮತ್ತು ಸನಾತನ ಧರ್ಮದ ಸಂಪನ್ಮೂಲಗಳನ್ನು ಸಂವರ್ಧಿಸುವಲ್ಲಿ ವೇದವ್ಯಾಸರ ಪಾತ್ರ ತುಂಬ ಮಹತ್ತರವಾಗಿದೆ.
ಮಹರ್ಷಿ ವ್ಯಾಸರು ತ್ರಿಕಾಲದರ್ಶಿಗಳಾಗಿದ್ದರು. ಅವರಿಗೆ ಭೂತ, ವರ್ತಮಾನ, ಭವಿಷ್ಯದ ವಕ್ತಾರರಾಗಿದ್ದರು. ಮಹಾಭಾರತದ ಪ್ರತಿಯೊಬ್ಬ ವ್ಯಕ್ತಿಯ ವರ್ತಮಾನ, ಇತಿಹಾಸ ಮತ್ತು ಭವಿಷ್ಯ ಅವರಿಗೆ ಗೊತ್ತಿತ್ತು.

ಅದು ಧೃತರಾಷ್ಟ್ರನಾದರೂ ಸರಿ; ಅದು ದುರ್ಯೋಧನನಾದರೂ ಸರಿ; ಅದು ಧರ್ಮರಾಜನಾದರೂ ಸರಿ; ಅದು ದ್ರೌಪದಿಯಾದರೂ ಸರಿ; ಅದು ಗಾಂಧಾರಿಯಾದರೂ ಸರಿ – ಅವರೆಲ್ಲರ ಪೂರ್ವಾಪರಗಳು, ಇತಿಮಿತಿ, ಪರಿಮಿತಿಗಳು ವ್ಯಾಸರಿಗೆ ಚೆನ್ನಾಗಿ ಗೊತ್ತಿತ್ತು. ವ್ಯಾಸರು ಅಪ್ಪಟ ಮಾತೃಭಕ್ತರು. ಅವರು ಅಮ್ಮನ ಮಗ.

ಅವರು ಋಷಿಗಳಾದರೂ ಸಹ ಅಮ್ಮ ಕರೆದಾಗಲೆಲ್ಲ ಅಮ್ಮನ ಮುಂದೆ ಪ್ರತ್ಯಕ್ಷರಾಗುತ್ತಿದ್ದರು. ಅಮ್ಮ ಹೇಳಿದ ಪ್ರತಿಯೊಂದು ಮಾತನ್ನೂ ಅವರು ಚಾಚೂತಪ್ಪದೆ ಪಾಲಿಸುತ್ತಿದ್ದರು. ಅವರು ಅಮ್ಮನ ಆಜ್ಞೆ, ಆದೇಶವನ್ನು ಶಿರೋಧಾರ್ಯವಾಗಿಸಿಕೊಂಡು ಅವುಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದರು. ಆ ಕಾಲದ ಜನಗಳ ಭಾಷೆಯಲ್ಲಿ ಹೇಳುವುದಾದರೆ ಅವರೊಬ್ಬ “ಆಪದ್ಬಾಂಧವʼʼ ಮತ್ತು ಈ ಕಾಲದ ಜನಗಳ ಭಾಷೆಯಲ್ಲಿ ಹೇಳುವುದಾದರೆ ಅವರೊಬ್ಬ “ಟ್ರಬಲ್‌ಶೂಟರ್”!.

Vyasa Puja

ಅಮ್ಮನ ಆದೇಶವನ್ನು ಶಿರಸಾವಹಿಸಿ ಅವರು ಕುರುಕುಲ ಮತ್ತು ಕುರುವಂಶಾವಳಿ ಬೆಳೆಯುವುದಕ್ಕೆ ಕಾರಣರಾಗುತ್ತಾರೆ. ಅವರು ಅಮ್ಮನ ಆದೇಶಕ್ಕೆ ತಲೆಬಾಗಿ ಧೃತರಾಷ್ಟ್ರ, ಪಾಂಡುರಾಜ ಮತ್ತು ವಿದುರರಿಗೆ ಜನ್ಮಕೊಡುತ್ತಾರೆ. ತನ್ಮೂಲಕ ಅವರು ಕೌರವ, ಪಾಂಡವ ಸಂತಾನದ ಹಸಿರು ನಿಶಾನೆಯಾಗುತ್ತಾರೆ.
ಭೀಷ್ಮ ಪಿತಾಮಹರು ಅಪ್ಪನಿಗಾಗಿ ಆಜನ್ಮ ಬ್ರಹ್ಮಚಾರಿಯಾಗಿ ಉಳಿದರೆ ವ್ಯಾಸ ಮಹರ್ಷಿಗಳು ಅಮ್ಮನಿಗಾಗಿ ಮತ್ತು ಅಮ್ಮನ ಇಚ್ಛಾಪೂರ್ತಿಗಾಗಿ ಸಂತತಿ ಸಂತಾನವರ್ಧಕರಾಗುತ್ತಾರೆ.

ವ್ಯಾಸ ಮಹರ್ಷಿಗಳ ಬದುಕು ಬರೀ ಬದುಕಲ್ಲ, ಅದೊಂದು ಭಗವದ್ಗೀತೆ. ಅದೊಂದು ಭರವಸೆ. ನಮ್ಮ ದೃಷ್ಟಿಯಲ್ಲಿ, ಭಗವದ್ಗೀತೆ ಎಂದರೆ ಭರವಸೆ ಮತ್ತು ಭಗವದ್ಗೀತೆ ಎಂದರೆ ಆತ್ಮವಿಶ್ವಾಸ. ವ್ಯಾಸರೂ ಕೂಡ ಹಾಗೇನೇ. ವ್ಯಾಸರೆಂದರೆ ಭರವಸೆ ಮತ್ತು ವ್ಯಾಸರೆಂದರೆ ಆತ್ಮವಿಶ್ವಾಸ. ನಮಗೆಲ್ಲ ಇಷ್ಟೊಂದು “ಬ್ರಹ್ಮಾಂಡ” ಜ್ಞಾನವನ್ನು ನೀಡಿದ ವ್ಯಾಸರ ವಿಷಯದಲ್ಲಿ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳಿವೆ. ಅವುಗಳನ್ನು ಗಮನಿಸುವಾ.

1.ವ್ಯಾಸರ ತಂದೆ, ತಾಯಿಗಳಾದ ಋಷಿ ಪರಾಶರ ಮತ್ತು ನಿಷಾದಪುತ್ರಿ ಸತ್ಯವತಿಯರದು ಪ್ರೇಮವಿವಾಹ. ವ್ಯಾಸ ಮಹರ್ಷಿಗಳು ಅವರುಗಳ ಪ್ರೇಮಸಂಗಮದ ಕೂಸು.

೨. ತಿಥಿ, ಮಿತಿಗಳ ಪ್ರಕಾರ, ವ್ಯಾಸರು ಆಷಾಢ ಪೂರ್ಣಿಮೆಯಂದು ಜನಿಸುತ್ತಾರೆ.

೩. ತಂದೆ ಪರಾಶರ ಮುನಿಗಳ ಆಶೀರ್ವಾದದಿಂದ ವ್ಯಾಸರು ಜನಿಸಿದ ತಕ್ಷಣ ಯೌವನಸ್ಥರಾಗುತ್ತಾರೆ. ಅವರದು ನಿತ್ಯಯೌವನ; ಮತ್ತವರದು ಅಳಿವಿಲ್ಲದ ಯೌವನ. ಅವರು ಯೌವನ ನಿತ್ಯಚಿರಂಜೀವಿ.

೪.ಹುಟ್ಟಿದ ತಕ್ಷಣ ವ್ಯಾಸರು ತಪಸ್ಸನ್ನು ಮಾಡಲು ದ್ವೈಪಾಯನ ದ್ವೀಪಕ್ಕೆ ಹೋಗುತ್ತಾರೆ.

೫.ರಾಮಾಯಣದ ಕರ್ತೃ ವಾಲ್ಮೀಕಿ ತಪಸ್ಸು ಮಾಡುತ್ತಿದ್ದರೆ ಅವರ ಮೇಲೆ ಹುತ್ತ ಬೆಳೆಯುತ್ತದೆ. ಹುತ್ತದ ಕಾರಣದಿಂದಾಗಿಯೇ, ಅವರನ್ನು ವಾಲ್ಮೀಕಿ ಎಂದು ಕರೆಯುವುದು!! ಹಾಗೆಯೇ ವ್ಯಾಸರು ಕೂಡ ಘೋರ ತಪಸ್ಸನ್ನು ಮಾಡಿ ಕಪ್ಪಾಗುತ್ತಾರೆ. ತಪಸ್ಸಿನಿಂದ ಅವರ ಮೈ ಕಾಯ್ದು, ಕಾಯ್ದು ಕಪ್ಪಾದ ಕಾರಣದಿಂದಾಗಿಯೇ, ಅವರನ್ನು “ಕೃಷ್ಣದ್ವೈಪಾಯನ” ಎಂದು ಕರೆಯುತ್ತಾರೆ.

೬.ಶ್ರೀಮದ್ ಭಗವತ್‌ಪುರಾಣದಲ್ಲಿ ವಿವರಿಸಲಾದ ಭಗವಾನ್ ವಿಷ್ಣುವಿನ 24 ಅವತಾರಗಳಲ್ಲಿ, ಮಹರ್ಷಿ ವೇದವ್ಯಾಸರ ಹೆಸರೂ ಕೂಡ ಇದೆ.

೭.ಬಹುಶ್ರುತ ಮತ್ತು ಬಹುಜನಜ್ಞಾತ ಅಷ್ಟಚಿರಂಜೀವಿಗಳಲ್ಲಿ ಮಹರ್ಷಿ ವೇದವ್ಯಾಸರು ಕೂಡ ಒಬ್ಬರು.

೮.ವೇದವ್ಯಾಸರು ಈಗಲೂ ಇದ್ದಾರೆ. ಏಕೆಂದರೆ ಅವರು ಅಮರರು; ಮತ್ತವರು ಚಿರಂಜೀವಿಗಳು.

೯.ವ್ಯಾಸರು ದೈಹಿಕವಾಗಿ ಮತ್ತು ಭೌತಿಕವಾಗಿ ಮತ್ತು ನಮ್ಮ ಜೊತೆ ಇದ್ದಾರೋ ಇಲ್ಲವೋ ಎಂಬ ಜಿಜ್ಞಾಸೆ ಬೇಡ. ಅವರು ವೇದ, ಪುರಾಣ, ಇತಿಹಾಸ, ಮಹಾಭಾರತವಾಗಿ ಈಗಲೂ ನಮ್ಮ, ನಿಮ್ಮಗಳ ಜೊತೆಯಲ್ಲಿ ಇರುವುದಂತೂ ಅಕ್ಷರಶಃ ಸತ್ಯ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

೧೦.ವೇದವ್ಯಾಸರ ಸಲಹೆಯನ್ನು ಶಿರೋಧಾರ್ಯವಾಗಿಸಿಕೊಂಡು ಧೃತರಾಷ್ಟಪತ್ನಿ ಗಾಂಧಾರಿ “ಶತಕೌರವ” ಸಂತಾನಕ್ಕೆ ಜನ್ಮಕೊಡುತ್ತಾಳೆ.

೧೧. ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ಅಶ್ವತ್ಥಾಮನು ಬ್ರಹ್ಮಾಸ್ತ್ರವನ್ನು ಪ್ರಯೋಗಿಸಿದಾಗ ಅದನ್ನು ವ್ಯಾಸರು ಬಲವಾಗಿ ಖಂಡಿಸುತ್ತಾರೆ. ಕೃಷ್ಣ ಅಶ್ವತ್ಥಾಮನಿಗೆ ಹಾಕಿದ ಶಾಪವನ್ನು ವ್ಯಾಸರು ಅನುಮೋದಿಸುತ್ತಾರೆ. ಅಶ್ವತ್ಥಾಮನ ವಿಷಯದಲ್ಲಿ ಕೃಷ್ಣನು ಜಾರಿಮಾಡಿದ “ಶಠಂ ಪ್ರತಿ ಶಾಠ್ಯಂ” ರಣನೀತಿಗೆ ವ್ಯಾಸರು ಸಹ ಧ್ವನಿಕೂಡಿಸುತ್ತಾರೆ.

೧೨. ಹಾವು ಮುತ್ತಿಕೊಂಡಿರುವ ಭೂಸಹಿತಪ್ರಪಂಚದ ಮೊದಲ ಭೌಗೋಳಿಕ ನಕ್ಷೆಯ ಕಲ್ಪನೆ ವೇದವ್ಯಾಸರದು.

೧೩. ವೇದವ್ಯಾಸರ ಹೆಂಡತಿಯ ಹೆಸರು ಅರುಣಿ. ಶುಕದೇವ ವ್ಯಾಸ ಮಹರ್ಷಿಗಳ ಮಗ. ಶುಕ ಮಹಾಯೋಗಿ. ತಪಸ್ಸು, ತತ್ತ÷್ವಜ್ಞಾನಗಳಲ್ಲಿ ಅಪ್ಪನನ್ನೇ ಮೀರಿಸಿದ ಬಾಲಯೋಗಿಯಾತ.

೧೪. ವೇದವ್ಯಾಸರು ನಾಲ್ಕು ಜನ ಶ್ರೇಷ್ಠ ಶಿಷ್ಯರನ್ನು ಹೊಂದಿದ್ದರು. ಅವರು ತಮ್ಮ ನಾಲ್ಕು ಜನ ಶಿಷ್ಯರಿಗೆ ನಾಲ್ಕು ವೇದಗಳನ್ನು ಕಲಿಸುತ್ತಾರೆ. ವ್ಯಾಸರು ತಮ್ಮ ಶಿಷ್ಯನಾದ ಪೈಲನಿಗೆ ಋಗ್ವೇದ, ವೈಶಂಪಾಯನನಿಗೆ ಯಜುರ್ವೇದ, ಜೈಮಿನಿಗೆ ಸಾಮವೇದ ಮತ್ತು ಸುಮಂತುವಿಗೆ ಅಥರ್ವವೇದವನ್ನು ಕಲಿಸುತ್ತಾರೆ.

೧೫. ವೇದವ್ಯಾಸರು ಮಹಾತಪಸ್ವಿಗಳು ಎಂಬುವುದಕ್ಕೆ ಒಂದು ಉದಾಹರಣೆ ಇಲ್ಲಿದೆ; ಕುರುಕ್ಷೇತ್ರ ಯುದ್ಧಾನಂತರ, ಅದೊಮ್ಮೆ ವ್ಯಾಸಮಹರ್ಷಿಗಳು ಧೃತರಾಷ್ಟ್ರ ಮತ್ತು ಗಾಂಧಾರಿಯನ್ನು ನೋಡಲು ಕಾಡಿಗೆ ಹೋಗುತ್ತಾರೆ. ಆ ಒಂದು ಸಂದರ್ಭದಲ್ಲಿ, ಯುಧಿಷ್ಠಿರನೂ ಕೂಡ ಅಲ್ಲಿಯೇ ಇರುತ್ತಾನೆ. ಅವರೆಲ್ಲರೂ ವ್ಯಾಸರ ಎದುರಿನಲ್ಲಿ ತಮ್ಮನ್ನು ಅಗಲಿಹೋದ ಸಂಬಂಧಿಗಳ “ಪುನರ್ದರ್ಶನ” ಮಾಡಬೇಕೆಂಬ ಹಂಬಲವನ್ನು ವ್ಯಕ್ತಪಡಿಸುತ್ತಾರೆ. ವ್ಯಾಸರು ಅವರನ್ನೆಲ್ಲ ಗಂಗಾನದಿಯ ದಡಕ್ಕೆ ಕರೆತಂದು ಅವರಿಗೆಲ್ಲ ತಮ್ಮ ತಪೋಬಲದಿಂದ ಕುರುಕ್ಷೇತ್ರ ಯುದ್ಧದಲ್ಲಿ ಮೃತರಾದ ಭೀಷ್ಮ, ದ್ರೋಣಾದಿಗಳ “ಪುನರ್ದರ್ಶನ” ಮಾಡಿಸುತ್ತಾರೆ.

೧೬. ಪಾಂಡವರು ಸ್ವರ್ಗಾರೋಹಣ ಮಾಡುವುದಕ್ಕೆ ಸ್ವತಃ ವೇದವ್ಯಾಸರೇ ಮಾರ್ಗಸೂಚಿಯನ್ನು ನೀಡುತ್ತಾರೆ. ವ್ಯಾಸರ ಆಜ್ಞೆಯನ್ನು ಪಡೆದುಕೊಂಡು ಪಾಂಡವರು ಸ್ವರ್ಗಾರೋಹಣ ಕ್ರಿಯೆ-ಪ್ರಕ್ರಿಯೆಗೆ “ಅಥಶ್ರೀ” ಹೇಳುತ್ತಾರೆ.

೧೭.ವೇದವ್ಯಾಸರ ಇನ್ನೊಂದು ವಿಶೇಷತೆ ಎಂದರೆ, ಅವರು ಮಹಾಭಾರತವನ್ನು ಬರೆಯುವುದಕ್ಕೆ ನಾವೆಲ್ಲರೂ ಪೂಜಿಸುವ “ಪ್ರಥಮವಂದಿತ” ಗಣೇಶನನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಗಣೇಶ ಮಾತ್ರ ವ್ಯಾಸರನ್ನು ಜೀರ್ಣಿಸಿಕೊಳ್ಳಬಲ್ಲ ಮತ್ತು ಅರಗಿಸಿಕೊಳ್ಳಬಲ್ಲ. ವ್ಯಾಸರು ಇಡೀ ಜಗತ್ತು “ಜೈ” ಎನ್ನುವಂತೆ ಮಹಾಭಾರತವನ್ನು ಹೇಳುತ್ತ ಹೋದರೆ ಗಣಪತಿಯು ಇಡೀ ಜಗತ್ತು “ಸೈ” ಎನ್ನುವಂತೆ ಮಹಾಭಾರತವನ್ನು ಬರೆದು ದಾಖಲಿಸುತ್ತಾನೆ.
ಕೊನೆಯಲ್ಲೊಂದು ಮಾತು.

ಈ ಪ್ರಪಂಚದಲ್ಲಿ ಬೇರೆ ಯಾರೆಲ್ಲ ಬರೆದುದನ್ನು ಓದಿ ಮುಗಿಸಬಹುದು. ಆದರೆ ವ್ಯಾಸರು ಬರೆದುದನ್ನು ಮಾತ್ರ ಓದಿಮುಗಿಸುವುದು ಸಾಧ್ಯವೇ ಇಲ್ಲ. ವ್ಯಾಸರು ಅಷ್ಟೊಂದು ಬರೆದಿದ್ದಾರೆ. ವ್ಯಾಸರು ಅಷ್ಟಿಷ್ಟು ಬರೆದಿಲ್ಲ. ಅವರು ಬರೆದದ್ದನ್ನೆಲ್ಲ ಓದಲು ಒಂದಲ್ಲ, ಎರಡಲ್ಲ, ಹಲವಾರು ಜನ್ಮಗಳೇ ಬೇಕು. ವಿದ್ಯೆಯ ಆಪಾತಾಳನಭವಾದ ವ್ಯಾಸರಿಗೊಂದು “ಜೈ ಹೋ” ಹೇಳುತ್ತ ಅವರಿಗೆ ತಲೆಬಾಗಿ ವಂದಿಸುವಾ.

ಇದನ್ನೂ ಓದಿ: ತಾತಯ್ಯ ತತ್ವಾಮೃತಂ : ಒಂದಂಶ ಕಡಿಮೆಯಾಗಿದ್ದರೂ ಚಿನ್ನವು ಅಪರಂಜಿಯಾಗುವುದಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading
Advertisement
ಕರ್ನಾಟಕ27 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ29 mins ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ44 mins ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ48 mins ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ1 hour ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ2 hours ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ2 hours ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್2 hours ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Retirement Plan
ಮನಿ ಗೈಡ್2 hours ago

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

Siddharth Kak
ದೇಶ2 hours ago

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌