Maha Shivaratri 2023: ಪತ್ನಿ ಜತೆ ಶಿವ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡ; ಮೈಸೂರಿನಲ್ಲೂ ಅದ್ಧೂರಿ ಆಚರಣೆ - Vistara News

ಕರ್ನಾಟಕ

Maha Shivaratri 2023: ಪತ್ನಿ ಜತೆ ಶಿವ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡ; ಮೈಸೂರಿನಲ್ಲೂ ಅದ್ಧೂರಿ ಆಚರಣೆ

Maha Shivaratri 2023: ರಾಜ್ಯಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. ಶಿವರಾತ್ರಿ ಪ್ರಯುಕ್ತ ಮಂಡಿನೋವು ಇದ್ದರೂ ಮಾಜಿ ಪ್ರಧಾನಿ ದೇವೇಗೌಡರು ಶಿವನ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇತ್ತ ಮೈಸೂರಿನಲ್ಲಿ ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ ಲಿಂಗಕ್ಕೆ ಚಿನ್ನದ ಕೊಳಗ ಧಾರಣೆ ಮಾಡಲಾಯಿತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಮೈಸೂರು: ಮಾಜಿ ಪ್ರಧಾನಿ ದೇವೇಗೌಡರು ಮಹಾಶಿವರಾತ್ರಿ (Maha Shivaratri 2023) ಪ್ರಯುಕ್ತ ಬೆಂಗಳೂರಿನ ಪದ್ಮನಾಭನಗರ ಸಮೀಪ ಇರುವ ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಂಡಿ ನೋವಿನಿಂದ ಬಳಲುತ್ತಿದ್ದ ಕಾರಣ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪತ್ನಿ ಚನ್ನಮ್ಮ ಜತೆಗೆ ಬೆಂಗಳೂರಿನಲ್ಲಿಯೇ ಶಿವನ ದರ್ಶನವನ್ನು ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಈ ರಾಷ್ಟ್ರದಲ್ಲಿ ಮಹಾ ಶಿವರಾತ್ರಿಯನ್ನು ಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ. ಒಂದೊಂದು ಪಂಗಡದವರು ಒಂದೊಂದು ರೀತಿಯಲ್ಲಿ ಆಚರಣೆ ಮಾಡುತ್ತಾರೆ. ನಾವು ಈಶ್ವರನ ಆರಾಧಕರಾಗಿದ್ದು, ವಂಶ ಪಾರಂಪರ್ಯವಾಗಿ ಶಿವರಾತ್ರಿಯನ್ನು ಆಚರಣೆ ಮಾಡುತ್ತಾ ಬಂದಿದ್ದೀವೆ. ಪ್ರತಿ ವರ್ಷ ನಮ್ಮ ಊರಿನ ಭೈರವೇಶ್ವರ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ಬರುತ್ತಿದ್ದೆ. ಆದರೆ ಈ ಬಾರಿ ಹೋಗಲು ಆಗದ ಕಾರಣಕ್ಕೆ ಬೆಂಗಳೂರಿನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ. ಈ ವಯಸ್ಸಿನಲ್ಲಿ ಊರಿಗೆ ಹೋಗಲು ಆಗಿಲ್ಲ. ಯಾರೂ ಅನ್ಯತಾ ಭಾವಿಸಬಾರದೆಂದು ಮನವಿ ಮಾಡಿದರು.

ಅರಮನೆ ನಗರೀ ಮೈಸೂರಿನಲ್ಲೂ ಶಿವ ನಾಮಸ್ಮರಣೆ

ಮಹಾ ಶಿವರಾತ್ರಿ ಹಬ್ಬವನ್ನು ಮೈಸೂರಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮೈಸೂರು ಅರಮನೆ ಅಂಗಳದಲ್ಲಿರುವ ತ್ರಿನಯನೇಶ್ವರ ಲಿಂಗಕ್ಕೆ ಚಿನ್ನದ ಕೊಳಗ ಧಾರಣೆ ಮಾಡಲಾಯಿತು. ವರ್ಷಕ್ಕೆ ಒಮ್ಮೆ ಮಾತ್ರ ಈ ಕೊಳಗ ಧಾರಣೆ ಮಾಡುವುದು ವಿಶೇಷವಾಗಿದೆ.

ಬರೋಬ್ಬರಿ 11 ಕೆ.ಜಿ. ತೂಕದ ಅಪರಂಜಿ ಚಿನ್ನದ ಈ ಕೊಳಗ, ಚಿನ್ನದ ಜಟಾಮುಕುಟ, ಕರ್ಣಕುಂಡಲ, ತಾಟಂಕ, ಎರಡು ಲೋಲಕ, ಎರಡು ಕೆಂಪು ಹರಳಿನ ಓಲೆಗಳು, ಹಣೆಯಲ್ಲಿ ಬೆಲೆಬಾಳುವ ಕೆಂಪು ಕಲ್ಲಿನ ತಿಲಕ, ಸಣ್ಣ ಮೂಗುತಿಯುಳ್ಳ ಗಂಗೆ ಮೂರ್ತಿಯನ್ನು ಕೊಳಗ ಒಳಗೊಂಡಿದೆ. ಈ ಅಪರೂಪದ ದೃಶ್ಯ ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು. ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಅರಮನೆ ಆಡಳಿತ ಮಂಡಳಿ ಭಕ್ತರಿಗೆ ಬ್ಯಾರಿಕೇಡ್ ವ್ಯವಸ್ಥೆ ಮಾಡಿತ್ತು.

ಇದನ್ನೂ ಓದಿ: Maha Shivaratri 2023: ಹರಕೆರೆ ರಾಮೇಶ್ವರ ದೇಗುಲದಲ್ಲಿ ಸಹಸ್ರ ಲಿಂಗಗಳಿಗೆ ಪೂಜೆ; 52 ಅಡಿ ಎತ್ತರದ ಬೃಹತ್ ಶಿವಮೂರ್ತಿಗೆ ನಮನ

ಮೈಸೂರು ಸಂಸ್ಥಾನದ ಕೊನೆಯ ಅರಸ ಜಯಚಾಮರಾಜೇಂದ್ರ ಒಡೆಯರ್ ಅವರಿಗೆ ಪುತ್ರ ಸಂತಾನ ಇರಲಿಲ್ಲ. 1953ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹುಟ್ಟಿದರು. ಈ ಸಂತೋಷದ ಸವಿನೆನಪಿಗಾಗಿ ಜಯಚಾಮರಾಜೇಂದ್ರ ಒಡೆಯರ್ ಅಪರಂಜಿ ಚಿನ್ನದ ಕೊಳಗ ಮಾಡಿಸಿ ಕೊಟ್ಟಿದ್ದರು. ಬೆಲೆಬಾಳುವ ಈ ಅಪರೂಪದ ಕೊಳಗವನ್ನು ಶಿವರಾತ್ರಿ ದಿನ ಮಾತ್ರ ತ್ರಿನೇಶ್ವರ ಲಿಂಗಕ್ಕೆ ಧಾರಣೆ ಮಾಡುವ ವಾಡಿಕೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

JEE Main 2024 Result: ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು.

VISTARANEWS.COM


on

karnataka CET Exam 2024
Koo

ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

100 ಅಂಕ ಪಡೆದವರ ಹೆಚ್ಚಳ

ಈ ಬಾರಿ, 100 ಪರ್ಸೆಂಟೈಲರ್‌ಗಳ ಸಂಖ್ಯೆ 2023ಕ್ಕೆ ಹೋಲಿಸಿದರೆ 13 ಅಭ್ಯರ್ಥಿಗಳಷ್ಟು ಹೆಚ್ಚಾಗಿದೆ. ಒಟ್ಟು 56 ಅಭ್ಯರ್ಥಿಗಳು ಪೇಪರ್ 1 (ಬಿಇ/ಬಿಟೆಕ್) ನಲ್ಲಿ 100 ಎನ್‌ಟಿಎ ಅಂಕಗಳನ್ನು ಪಡೆದಿದ್ದಾರೆ. ಅದರಲ್ಲಿ ಇಬ್ಬರು ಹುಡುಗಿಯರು (ಕರ್ನಾಟಕದ ಸಾನ್ವಿ ಜೈನ್ ಮತ್ತು ದೆಹಲಿಯ ಶೈನಾ ಸಿನ್ಹಾ) ಮತ್ತು ಉಳಿದವರು ಪುರುಷ ಅಭ್ಯರ್ಥಿಗಳು. ಈ ಸಂಖ್ಯೆ 2023ರಲ್ಲಿ 43 ಇತ್ತು. ಅವರಲ್ಲಿ ಕರ್ನಾಟಕದ ರಿಧಿ ಕಮಲೇಶ್ ಕುಮಾರ್ ಮಹೇಶ್ವರಿ ಎಂಬ ಒಬ್ಬ ಹುಡುಗಿ ಮಾತ್ರ 100 ಪರ್ಸೆಂಟೈಲ್ ಗಳಿಸಿದ್ದಳು.

ಜನವರಿ ಪರೀಕ್ಷೆಯಲ್ಲಿ ಒಟ್ಟು 23 ಮಂದಿ 100 ಪರ್ಸೆಂಟ್ ಮಾರ್ಕ್ ತಲುಪಿದ್ದರು. ತೆಲಂಗಾಣದ ಏಳು ವಿದ್ಯಾರ್ಥಿಗಳು ಈ ಮೈಲಿಗಲ್ಲನ್ನು ಸಾಧಿಸುವುದರೊಂದಿಗೆ ಆ ರಾಜ್ಯ ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ರಾಜಸ್ಥಾನಗಳು ನಂತರದ ಸ್ಥಾನದಲ್ಲಿವೆ. ಪ್ರತಿಯೊಂದೂ ಮೂರು 100 ಪರ್ಸೆಂಟೈಲ್ ಹೋಲ್ಡರ್‌ಗಳನ್ನು ಹೊಂದಿದೆ. ದೆಹಲಿ ಮತ್ತು ಹರಿಯಾಣದಲ್ಲಿ ತಲಾ ಇಬ್ಬರು ವಿದ್ಯಾರ್ಥಿಗಳು 100 ಪರ್ಸೆಂಟೈಲ್ ಮಾರ್ಕ್‌ನಲ್ಲಿದ್ದರೆ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಪರಿಪೂರ್ಣ ಅಂಕಗಳನ್ನು ಗಳಿಸಿದ್ದಾರೆ.

ಕಳೆದ ವರ್ಷದಂತೆ, ತೆಲಂಗಾಣವು ಈ ವರ್ಷವೂ ಜೆಇಇ ಮೇನ್‌ನಲ್ಲಿ ಅತಿ ಹೆಚ್ಚು 100 ಪರ್ಸೆಂಟೈಲರ್‌ಗಳನ್ನು ವರದಿ ಮಾಡಿದೆ. 2023ರಲ್ಲಿ ತೆಲಂಗಾಣದ 11 ವಿದ್ಯಾರ್ಥಿಗಳು 100 ಪರ್ಸೆಂಟ್‌ ಗಳಿಸಿದ್ದರು. ಈ ವರ್ಷ ಈ ಪ್ರಮಾಣ 15ಕ್ಕೆ ಏರಿಕೆಯಾಗಿದೆ. 2023ರಲ್ಲಿ ಕ್ರಮವಾಗಿ 2 ಮತ್ತು 5ಕ್ಕೆ ಹೋಲಿಸಿದರೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶವು 100 ಅಂಕ ಗಳಿಸಿದ 7 ವಿದ್ಯಾರ್ಥಿಗಳನ್ನು ಹೊಂದಿದೆ. ದೆಹಲಿ NCRನ 100 ಪರ್ಸೆಂಟೈಲರ್‌ಗಳ ಸಂಖ್ಯೆ 2023ರಲ್ಲಿ 2 ಇದ್ದುದು 6ಕ್ಕೆ ಏರಿದೆ. 7 ಟಾಪರ್‌ಗಳೊಂದಿಗೆ ರಾಜಸ್ಥಾನ ನಂತರ ಬಂದಿದೆ.

ಪಶ್ಚಿಮ ಬಂಗಾಳ, ಕೇರಳ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಂತಹ ಕೆಲವು ರಾಜ್ಯಗಳು ಕಳೆದ ವರ್ಷ ತಲಾ ಟಾಪರ್‌ಗಳನ್ನು ಹೊಂದಿದ್ದವು ಆದರೆ ಈ ಬಾರಿ ಯಾವುದೇ 100 ಪರ್ಸೆಂಟೈಲರ್ ಅನ್ನು ಪಡೆದಿಲ್ಲ.

JEE ಮುಖ್ಯ 2024 ಪರೀಕ್ಷೆಯ ಎರಡೂ ಅವಧಿಗಳಲ್ಲಿ (ಜನವರಿ/ಏಪ್ರಿಲ್) ನೋಂದಾಯಿಸಿದ ಸಾಮಾನ್ಯ ಅಭ್ಯರ್ಥಿಗಳ ಸಂಖ್ಯೆ 924636, ಮತ್ತು ಎರಡೂ ಅವಧಿಗಳಲ್ಲಿ (ಜನವರಿ/ಏಪ್ರಿಲ್) ಹಾಜರಾದ ಸಾಮಾನ್ಯ ಅಭ್ಯರ್ಥಿಗಳ ಸಂಖ್ಯೆ 822899. ಜನವರಿ 2024 (ಸೆಷನ್ 1) ಪರೀಕ್ಷೆಯಲ್ಲಿ ನೋಂದಾಯಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 1221624, ಅದರಲ್ಲಿ 1170048 ಅಭ್ಯರ್ಥಿಗಳು ಹಾಜರಾಗಿದ್ದರು.

ಜೆಇಇ ಕಟ್-ಆಫ್

ಈ ಬಾರಿ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಜೆಇಇ (ಅಡ್ವಾನ್ಸ್ಡ್) ಕಟ್ ಆಫ್ 93.23 ಆಗಿದೆ. ಇದು 2023ರಲ್ಲಿ 90.77 ಇತ್ತು. 2022ರಲ್ಲಿ 88.4 ಇತ್ತು. SC ಅಭ್ಯರ್ಥಿಗಳಿಗೆ, ಕಟ್-ಆಫ್ 60.09 ಆಗಿದೆ. ಇದು 2023ರಲ್ಲಿ ಇದ್ದ 51.97ರಿಂದ ದೊಡ್ಡ ಜಿಗಿತ. ST ವಿದ್ಯಾರ್ಥಿಗಳಿಗೆ ಕಟ್-ಆಫ್ 46.69%, ಕಳೆದ ಬಾರಿ 37.23% ಇತ್ತು. 2023ರಲ್ಲಿ 73.61%ರಷ್ಟಿದ್ದ OBC (ನಾನ್-ಕ್ರೀಮಿ ಲೇಯರ್) ಕಟ್ ಆಫ್ ಈ ಬಾರಿ 79.67ಕ್ಕೆ ಏರಿದೆ. EWS ವರ್ಗದ ಅಭ್ಯರ್ಥಿಗಳಿಗೆ, ಈ ಬಾರಿ ಕಟ್ ಆಫ್ 75.62 ಆಗಿದೆ. ಕಳೆದ ವರ್ಷ 63.11 ಇತ್ತು.

ಇದನ್ನೂ ಓದಿ: JEE Main 2024 Result: JEE ಮೇನ್‌ 2024 ಸೆಷನ್‌ 1 ಫಲಿತಾಂಶ ಪ್ರಕಟ; ಇಲ್ಲಿ ನೋಡಿ

Continue Reading

ಕ್ರೈಂ

Murder Case: ಕರಗ ಉತ್ಸವದ ವೇಳೆ ಅಣ್ಣಮ್ಮ ದೇವಾಲಯದ ಮುಂದೆ ಹಲ್ಲೆ, ಯುವಕ ಸಾವು

Murder Case: ಏಪ್ರಿಲ್‌ 24ರ ಬೆಳಿಗ್ಗೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಹಲ್ಲೆ ನಡೆದಿದೆ.

VISTARANEWS.COM


on

murder case bengaluru karaga
Koo

ಬೆಂಗಳೂರು: ನಿನ್ನೆ ನಡೆದ ಬೆಂಗಳೂರಿನ ಐತಿಹಾಸಿಕ ಕರಗ (Bengaluru karaga) ಮೆರವಣಿಗೆಯ ಸಂದರ್ಭದಲ್ಲಿಯೇ ಯುವಕನೊಬ್ಬನ ಕೊಲೆ (Murder Case) ಆಗಿದೆ. ಮೆರವಣಿಗೆ ವೇಳೆ ಯುವಕರ ನಡುವೆ ಸೃಷ್ಟಿಯಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿದೆ.

ವಿವಿ ಗಿರಿ ಕಾಲೋನಿಯ ಯುವಕ ಡಿ.ಸಾರದಿ, ಕೊಲೆಯಾದ ಯುವಕ. ಏಪ್ರಿಲ್‌ 24ರ ಬೆಳಿಗ್ಗೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಹಲ್ಲೆ ನಡೆದಿದೆ.

ಈ ವೇಳೆ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ತಕ್ಷಣವೇ ಸಾರದಿಯನ್ನು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾರದಿ ಮೃತಪಟ್ಟಿದ್ದಾನೆ.

ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಕೊಪ್ಪಳ: ʼಜೈ ಶ್ರೀರಾಮ್ʼ ಎಂದ (Jai Sriram Slogan) ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault Case) ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕೊಪ್ಪಳ (Koppal news) ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶೈನ್ ಬಾರ್‌ನಲ್ಲಿ ಈ ಘಟನೆ (Crime news) ನಡೆದಿದ್ದು, ಮದ್ಯ ಸೇವನೆಯ ವೇಳೆ ʼಜೈ ಶ್ರೀರಾಮ್‌ʼ ಎಂದಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದು ಆರೋಪ.

ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್‌ನಲ್ಲಿ ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಘೇರಾಯಿಸಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶ್ರೀರಾಮನವಮಿ (Sri Ram Navami) ಸಂದರ್ಭದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದ ಯುವಕರನ್ನು ಅಡ್ಡಗಟ್ಟಿ ಕೆಲ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿದ್ದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿತ್ತು. ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Continue Reading

ಕರ್ನಾಟಕ

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Karnataka Weather: ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.‌

ಕಳೆದ ಒಂದು ವಾರದಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ವರುಣ ಇನ್ನೊಂದು ವಾರ ಕೊಂಚ ಬಿಡುವು ಪಡೆಯಲಿದ್ದಾನೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ.

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

Continue Reading

ಹುಬ್ಬಳ್ಳಿ

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

Lok Sabha Election 2024: ದೇಶಾದ್ಯಂತ ನೇಹಾ ಹತ್ಯೆ ಪ್ರಕರಣ ಪ್ರತಿಧ್ವನಿಸಿದ್ದರಿಂದ ರಾಜ್ಯ ಸರ್ಕಾರ ಸದ್ಯ ಸಿಐಡಿಗೆ ವಹಿಸಿ ನೇಹಾ ಕುಟುಂಬದ ಕಣ್ಣೊರೆಸೋ ಕೆಲಸ ಮಾಡಿದೆ ಅಷ್ಟೇ. ನಿಜವಾಗಿಯೂ ಕಾಂಗ್ರೆಸ್ಸಿಗರಿಗೆ ಕರುಣೆ, ಕಾಳಜಿ ಎಂಬುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi Statement in Unakal
Koo

ಹುಬ್ಬಳ್ಳಿ: ದೇಶದಲ್ಲಿ ನಮ್ಮ ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಇಂದು ನರೇಂದ್ರ ಮೋದಿ ಅವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಪ್ರತಿಪಾದಿಸಿದರು.

ನಗರದ ಉಣಕಲ್‌ನಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ನೇಹಾ ಹಿರೇಮಠ್‌ಗೆ ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ಅವರು ಮಾತನಾಡಿದರು.

ಬಹುಸಂಖ್ಯಾತರ ದೇಶದಲ್ಲೇ ಇಂದು ಬಹುಸಂಖ್ಯಾತರಿಗೆ ಸುರಕ್ಷತೆ ಬೇಕಾಗಿದೆ. ಅವರವರ ಧರ್ಮಾಚರಣೆಗೆ ಸ್ವಾತಂತ್ರ್ಯ ಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ. ಇದಕ್ಕಾಗಿ ಮತ್ತೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬರಲೇಬೇಕಿದೆ ಎಂದು ಹೇಳಿದರು

ಕಂಡಿರಲಿಲ್ಲ ಇಷ್ಟೊಂದು ಕ್ರೂರ ಹತ್ಯೆ

ನೇಹಾಳಷ್ಟು ಕ್ರೂರ ಹತ್ಯೆಯನ್ನು ಯಾವತ್ತೂ ಕಂಡಿರಲಿಲ್ಲ. ಆರೋಪಿ ಫಯಾಜ್ ಅಷ್ಟೊಂದು ಅಮಾನವೀಯವಾಗಿ ಆಕೆಗೆ 10-14 ಬಾರಿ ಚೂರಿ ಇರಿದು ಕೊಂದಿದ್ದಾನೆ. ಹಾಗಿದ್ದರೂ ರಾಜ್ಯ ಸರ್ಕಾರಕ್ಕೆ ಸ್ವಲ್ಪವೂ ಕನಿಕರವಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.

ದೇಶಾದ್ಯಂತ ನೇಹಾ ಹತ್ಯೆ ಪ್ರಕರಣ ಪ್ರತಿಧ್ವನಿಸಿದ್ದರಿಂದ ರಾಜ್ಯ ಸರ್ಕಾರ ಸದ್ಯ ಸಿಐಡಿಗೆ ವಹಿಸಿ ನೇಹಾ ಕುಟುಂಬದ ಕಣ್ಣೊರೆಸೋ ಕೆಲಸ ಮಾಡಿದೆ ಅಷ್ಟೇ. ನಿಜವಾಗಿಯೂ ಕಾಂಗ್ರೆಸ್ಸಿಗರಿಗೆ ಕರುಣೆ, ಕಾಳಜಿ ಎಂಬುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಭಾರತ ವಿಶ್ವಗುರು ಆಗಲು ಸಾಧ್ಯ. ಜನರೂ ಇದನ್ನು ಮನಗಂಡಿದ್ದಾರೆ ಎಂದ ಸಚಿವರು, ಮತ್ತೆ ಕಮಲದ ಗುರುತಿಗೆ ಮತ ನೀಡುವ ಮೂಲಕ ಮೋದಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪ್ರಚಾರ ಸಭೆಯ ಆರಂಭಕ್ಕೂ ಮುನ್ನ ಮತಾಂಧನಿಂದ ಹತ್ಯೆಯಾದ ನೇಹಾ ಹಿರೇಮಠ್‌ಗೆ ಶ್ರದ್ಧಾಂಜಲಿ ಅರ್ಪಿಸಿ, ಆತ್ಮಕ್ಕೆ ಶಾಂತಿ ಕೋರಲಾಯಿತು.

ಇದನ್ನೂ ಓದಿ: Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ಸಭೆಯಲ್ಲಿ ಬಿಜೆಪಿ ಪ್ರಮುಖರಾದ ರಾಜಣ್ಣ ಕೊರವಿ, ಉಮೇಶ್ ಗೌಡ ಕೌಜಗಿರಿ, ಮಹಾದೇವಪ್ಪ ಮೆಣಸಿನಕಾಯಿ, ಸೋಮನಗೌಡ ಪಾಟೀಲ್, ಪರಶುರಾಮ ಹೊಂಬಾಲ, ರಾಮಣ್ಣ ಕೊಕ್ಕಟಿ, ಶೇಕಣ್ಣ ಸೂರ್ಯವಂಶಿ, ಮೋಹನ್ ಬಡಿಗೇರ, ಯಲ್ಲಪ್ಪ ಕಡಪಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement
karnataka CET Exam 2024
ಪ್ರಮುಖ ಸುದ್ದಿ1 min ago

JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

murder case bengaluru karaga
ಕ್ರೈಂ23 mins ago

Murder Case: ಕರಗ ಉತ್ಸವದ ವೇಳೆ ಅಣ್ಣಮ್ಮ ದೇವಾಲಯದ ಮುಂದೆ ಹಲ್ಲೆ, ಯುವಕ ಸಾವು

arijit singh rajamarga column 2
ಅಂಕಣ49 mins ago

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Karnataka Weather
ಕರ್ನಾಟಕ1 hour ago

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Modi
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

Baking Soda
ಆರೋಗ್ಯ2 hours ago

Baking Soda: ಅಡುಗೆ ಸೋಡಾ ನಿಜಕ್ಕೂ ಆರೋಗ್ಯಕ್ಕೆ ಕೆಟ್ಟದ್ದಾ?

World Malaria Day
ಆರೋಗ್ಯ3 hours ago

World Malaria Day: ಭಾರತದಲ್ಲಿ ಮಲೇರಿಯಾಗೆ ಪ್ರತಿವರ್ಷ 20 ಸಾವಿರ ಬಲಿ; ಸೊಳ್ಳೆಗಳು ಭಾರಿ ಡೇಂಜರ್‌!

dina bhavishya read your daily horoscope predictions for April 25 2024
ಭವಿಷ್ಯ7 hours ago

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

PM
ದೇಶ8 hours ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ8 hours ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌