Maha Shivaratri 2023 : ಶಿವನ ಮಹಾ ಮಹೋತ್ಸವ ಮಹಾ ಶಿವರಾತ್ರಿ - Vistara News

ಧಾರ್ಮಿಕ

Maha Shivaratri 2023 : ಶಿವನ ಮಹಾ ಮಹೋತ್ಸವ ಮಹಾ ಶಿವರಾತ್ರಿ

ಇಂದು ಮಹಾ ಶಿವರಾತ್ರಿ (Maha Shivaratri 2023 ). ಈ ಹಬ್ಬದ ಮಹತ್ವವೇನು? ಈ ಆಚರಣೆಯಲ್ಲಿ ಮಹರ್ಷಿಗಳ ಕೊಡುಗೆ ಏನು? ಇದನ್ನು ಹೇಗೆ ಆಚರಿಸಬೇಕು? ಎಂದು ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗಳ ಅಧ್ಯಯನ-ಸಂಶೋಧನೆಗಳನ್ನು ನಡೆಸುತ್ತಿರುವ ವಿದ್ವಾನ್ ನರಸಿಂಹ ಭಟ್ ಬಡಗು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Maha Shivaratri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Maha Shivaratri 2023

ವಿದ್ವಾನ್ ನರಸಿಂಹ ಭಟ್ ಬಡಗು
ಭಾರತೀಯರ ಜೀವನಪದ್ಧತಿ ಅತಿ ವಿಶಿಷ್ಟವಾದದ್ದು. ಅದಕ್ಕೆ ಕಾರಣವಿಷ್ಟೆ; ಇವರ ಬದುಕು ಒಂದು ದಿನ ಹುಟ್ಟುವುದು ಇನ್ನೊಂದು ದಿನ ಸಾಯುವುದು ಮತ್ತು ಈ ಹುಟ್ಟುಸಾವುಗಳ ಮಧ್ಯೆ ಹಾಗೂ ಹೀಗೋ ಒಂದಷ್ಟು ದಿನ ಜೀವನವನ್ನು ಸವೆಸುವುದು ಇಷ್ಟೇ ಅಲ್ಲ. ಈ ಬದುಕಿಗೆ ಯಾವ ಅರ್ಥವೂ ಇಲ್ಲ. ಪಶುಗಳೂ ಇಂತಹ ಬದುಕನ್ನು ನಡೆಸುತ್ತವೆ. ಇದಕ್ಕಿಂತಲೂ ಭಿನ್ನವೂ ಇದರ ಜೊತೆಗೂಡಿದ್ದೂ ಆದ ಯಾವ ಅಂತರಂಗದ ಬದುಕುಂಟೋ ಅದೇ ನಿಜವಾದದ್ದು ಎಂದು ಸಾರಿದ ಭಾರತೀಯ ಮಹರ್ಷಿಗಳು ಇಂದ್ರಿಯ ತೃಪ್ತಿಯನ್ನು ಬಿಟ್ಟಿಲ್ಲ. ಆತ್ಮತೃಪ್ತಿಯನ್ನು ಮರೆತಿಲ್ಲ. ಇವೆರಡರ ಸಮನ್ವಯದ ಬಾಳಾಟವನ್ನೇ ಜೀವನ’ ಎಂದರು.

ಈ ಮಾನವಶರೀರವು ಇಹ ಮತ್ತು ಪರಗಳನ್ನು ಅತ್ಯಂತ ವ್ಯವಸ್ಥಿತವಾಗಿ ಅನುಭವಿಸಲೆಂದೇ ಭಗವಂತ ನಮಗೆ ಕೊಟ್ಟ ಅನುಗ್ರಹಯಂತ್ರ. ಅನೇಕ ಜನ್ಮಗಳ ಪುಣ್ಯದಿಂದ ಮಾತ್ರ ಮಾನವಜನ್ಮವನ್ನು ಪಡೆಯಲು ಸಾಧ್ಯ. ಆದ್ದರಿಂದ ಈ ಜನ್ಮದಲ್ಲೇ ಈ ಜೀವಕ್ಕೆ ಉತ್ತಮ ಸಂಸ್ಕಾರವನ್ನು ಕೊಡುವುದರ ಮೂಲಕ ಜೀವವು ದೇವನಲ್ಲಿ ಒಂದಾಗಬೇಕು. ಅದಕ್ಕೆಂದೇ ಭಗವಂತ ನಮಗಾಗಿ ಕೊಟ್ಟ ಉತ್ತಮಕಾಲಘಟ್ಟವನ್ನೇ “ಹಬ್ಬ” “ಪರ್ವ” “ಮಹೋತ್ಸವ” ಇತ್ಯಾದಿ ಪದಗಳಿಂದ ಕರೆಯಲಾಗಿದೆ. ಇಂತಹ ವಿಶೇಷಕಾಲಘಟ್ಟಗಳಲ್ಲಿ `ʻಶಿವರಾತ್ರಿ’ ಎಂಬ (Maha Shivaratri 2023) ವಿಶಿಷ್ಟ ಪರ್ವವೂ ಒಂದಾಗಿದೆ.

ಇಂದು ಈ ಶಿವರಾತ್ರಿಮಹೋತ್ಸವವನ್ನು ಭಯಂಕರವಾಗಿ ಆಚರಿಸಲಾಗುತ್ತಿದೆ. ಅದರ ಒಂದು ಝಲಕ್ಕನ್ನು ನೋಡುವುದಾದರೆ; ಇದು ರಾತ್ರಿ ಆಚರಿಸುವ ಹಬ್ಬ. ರಾತ್ರಿಯೆಲ್ಲಾ ಎಚ್ಚರವಾಗಿರುವ ಕಾಲ. ಅದಕ್ಕಾಗಿ ಜಾಗರಣೆ ಮಾಡಬೇಕು ಎಂಬಿಷ್ಟೇ ಅಂಶದಿಂದ ಜಾಗರಣೆಯನ್ನು ವಿದ್ಯುದ್ದೀಪದಿಂದ ರಾತ್ರಿಯನ್ನೇ ಹಗಲಾಗಿಸಿಕೊಂಡು ಬಗೆಬಗೆಯ ಆಟದಲ್ಲಿ ಕೂಟದಲ್ಲಿ ಕಾಲವನ್ನು ಕಳೆಯಲಾಗುತ್ತಿದೆ. ಜೂಜು ಮೋಜು ಮಸ್ತಿಯಲ್ಲೇ ಕಾಲಕಳೆಯುವ ಜನರು ಒಂದು ಕಡೆಯಾದರೆ ಉಪವಾಸ ಜಾಗರಣೆ ಇವೆಲ್ಲ ಮೂಢನಂಬಿಕೆಯ ಆಚರಣೆಗಳು ಎಂದು ಹೇಳುತ್ತಾ ಕಂಠಪರ್ಯಂತ ತಿಂದು ಗಡದ್ದಾಗಿ ನಿದ್ದೆ ಮಾಡಿ ಸುಖವಾಗಿ ರಾತ್ರಿ ಕಳೆಯಿತು! ಎಂದು ಹೇಳುವವರು ಇನ್ನೊಂದು ಕಡೆ.

ಅಷ್ಟು ಇಷ್ಟು ಭಗವಂತ, ಧರ್ಮ, ಎಂದೆಲ್ಲ ನಂಬಿದವರು ಸಾಧ್ಯವಾದಷ್ಟು ಉಪವಾಸದ ಹೆಸರಿನಲ್ಲಿ ಅಲ್ಪಸ್ವಲ್ಪ ತಿಂದು ತಿಳಿದಷ್ಟು ಪೂಜೆ ಮಾಡಿ ಈ ರಾತ್ರಿಯನ್ನು ಹಾಗೂಹೀಗೂ ಕಳೆದು ಶಿವರಾತ್ರಿಯನ್ನು ಆಚರಿಸಿದೆ ಎಂದು ಧನ್ಯಭಾವವನ್ನು ಅನುಭವಿಸುವವರು ಇನ್ನು ಹಲವರು. ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್’ ಅಷ್ಟೊ ಇಷ್ಟೊ ತಿಳಿದೋ ತಿಳಿಯದೋ ಧರ್ಮವನ್ನು ಆಚರಿಸುವುದು ಉತ್ತಮಪಕ್ಷವೇ. ಹಾಗಾದರೆ ಶಿವರಾತ್ರಿ ಎಂದರೇನು? ಈ ಆಚರಣೆಯಲ್ಲಿ ಮಹರ್ಷಿಗಳ ಕೊಡುಗೆ ಎನು? ಇದನ್ನು ಹೇಗೆ ಆಚರಿಸಬೇಕು? ಎಂಬಿತ್ಯಾದಿ ವಿಷಯಗಳನ್ನು ಶ್ರೀರಂಗಮಹಾಗುರುವಿನ ನೋಟದ ಜೊತೆ ತಿಳಿಯುವ ಪ್ರಯತ್ನ ಮಾಡೋಣ.

ಪುರಾಣಕಥೆಗಳು ಹೇಳುವುದೇನು?

ಒಮ್ಮೆ ಬ್ರಹ್ಮದೇವನು ವೈಕುಂಠಕ್ಕೆ ತೆರಳುತ್ತಾನೆ. ಆಗ ಶ್ರೀವಿಷ್ಣುವು ಶ್ರೀದೇವೀ ಭೂದೇವಿಯರಿಂದ ಸೇವೆಪಡೆಯುತ್ತಿದ್ದನು. ಬ್ರಹ್ಮದೇವನ ಆಗಮನವನ್ನು ಅಲಕ್ಷಿಸಿದ್ದನು. ಇದಕ್ಕೆ ಕೋಪಕೊಂಡ ಬ್ರಹ್ಮದೇವನು; ʻʻಅಯ್ಯಾ ! ಮಹಾವಿಷ್ಣುವೇ! ಈ ಸೃಷ್ಟಿಕರ್ತಾ ಬ್ರಹ್ಮನೇ ಬಂದರೂ ತಿರಸ್ಕಾರವೇ? ಎದ್ದೇಳು! ನಾನು ನಿನ್ನ ಪಿತಾಮಹ ಬಂದಿದ್ದೇನೆʼʼ ಎಂದ. ಅತ್ತ ಮಹಾವಿಷ್ಣುವು ತನ್ನ ಶಯನದಿಂದಲೇ; ʻʻನಿನಗೆ ಮಂಗಳವಾಗಲಿ! ನೀನೂ ಬಂದು ಈ ಆಸನದಲ್ಲಿ ಕುಳಿತುಕೊʼʼ ಎಂದನು. ಆ ಕ್ಷಣದಲ್ಲಿ ಬ್ರಹನು ಇನ್ನಷ್ಟು ಕೋಪದಿಂದ; ʻʻನಿನ್ನ ರಕ್ಷಕ ನಾನು. ಈ ಸೃಷ್ಟಿಗೇ ಕಾರಣ. ಇಷ್ಟಿದ್ದೂ ನನ್ನನ್ನು ಅಪಮಾನಿಸಿರುವೆಯಲ್ಲʼʼ ಎಂದನು.

ಆಗ ಮಹಾವಿಷ್ಣುವು ʻʻನನ್ನ ನಾಭಿಕಮಲದಲ್ಲಿ ಹುಟ್ಟಿರುವುದರಿಂದ ನೀನು ನನ್ನ ಮಗʼʼ ಎಂದನು. ಹೀಗೆ ನಾನು ಸೃಷ್ಟಿಕರ್ತಾ ಎಂದು ಬ್ರಹ್ಮನೂ, ನಾನು ನಿನ್ನನ್ನೇ ಸೃಷ್ಟಿಸಿದ ತಂದೆ ಎಂದು ವಿಷ್ಣುವೂ ಹೀಗೆ ಇಬ್ಬರ ಮಧ್ಯೆ ವಿವಾದ ಆರಂಭವಾಯಿತು. ಬ್ರಹ್ಮನು ಪಾಶುಪತವನ್ನೂ ವಿಷ್ಣುವು ಮಾಹೇಶ್ವರಾಸ್ತ್ರವನ್ನೂ ಪ್ರಯೋಗಿಸಲು ಮುಂದಾದರು. ಇದರಿಂದ ದೇವಗಣ ಭಯಗ್ರಸ್ತವಾಯಿತು. ಹೆದರಿ ಕೈಲಾಸದಲ್ಲಿರುವ ಶಿವನ ಬಳಿ ಓಡಿದರು.

ಈ ಮೊದಲೇ ವಿಷಯವನ್ನು ತಿಳಿದ ಶಿವನು ʻʻನಾನು ಈ ವಿವಾದವನ್ನು ಪರಿಹರಿಸುವೆʼʼ ʻʻಶಿವಲಿಂಗತಯೋದ್ಭೂತಃ ಕೋಟಿಸೂರ್ಯಸಮಪ್ರಭಃʼʼ ಎಂದು ಶಿವನು ತನ್ನ ಜ್ಯೋತಿರ್ಮಯರೂಪವನ್ನು ಪ್ರಕಟಪಡಿಸಿದನು. ಆಗ ಈ ಎರಡೂ ಅಸ್ತ್ರಗಳೂ ಲಿಂಗದಲ್ಲಿ ಲೀನವಾದವು. ಈ ಅವತಾರದ ದಿನವನ್ನೇ ʻಮಹಾಶಿವರಾತ್ರಿ’ ಎಂದು ಕರೆಯಲಾಗಿದೆ. (ಈಶಾನಸಂಹಿತಾ) ಇದೊಂದು ಕೇವಲ ಕಥೆಯಲ್ಲ. ತಾತ್ತ್ವಿಕವಾದ ಹಿನ್ನೆಲೆಯೂ ಉಂಟು. ಅದನ್ನು ಮುಂದೆ ನೋಡೋಣ.

ಮಹಾಕಾಲನಿಗೆ ಯಾವುದು ಕಾಲ?

ಮಹಾಕಾಲನಾದ ಶಿವನ ಆರಾಧನೆಗೆ ವಿಶೇಷವಾದ ಕಾಲ ಕೃಷ್ಣಪಕ್ಷದ ಚತುರ್ದಶೀ. ಪ್ರತಿಮಾಸದಲ್ಲೂ ಕೃಷ್ಣಪಕ್ಷದಲ್ಲಿ ಬರುವ ಚತುರ್ದಶಿಗೂ ಶಿವರಾತ್ರಿ ಎಂದೇ ಹೆಸರು. ಆದರೆ ಮಾಘಮಾಸದ ಕೃಷ್ಣಪಕ್ಷದ ಚತುರ್ದಶಿಗೆ ʻಮಹಾಶಿವರಾತ್ರಿ’ ಎಂದು ಕರೆಯಲಾಗುತ್ತದೆ. ಪ್ರತಿಯೊಂದು ತಿಥಿಯೂ ಒಂದೊಂದು ದೇವತೆಯ ಅಧಿಷ್ಠಾನವಾಗಿರುತ್ತದೆ. ಚತುರ್ಥಿಗೆ ಗಣೇಶ ಅಧಿಷ್ಠಾನ ದೇವತೆಯಾದಂತೆ ಚತುರ್ದಶಿಗೆ ಶಿವನು ಅಧಿಷ್ಠಾನ ದೇವನಾಗಿರುತ್ತಾನೆ. ಅಂದರೆ ಆಯಾ ತಿಥಿಯು ಆಯಾ ದೇವತೆಯ ಉಪಾಸನೆಗೆ ಪ್ರಶಸ್ತವಾದ ಕಾಲ ಎಂಬುದಾಗಿ ನಮ್ಮ ಪರಂಪರೆ ಸಾರಿದೆ. ಇದರಲ್ಲೂ ರಾತ್ರಿಯು ಶಿವನ ಉಪಾಸನೆಗೆ ಅತ್ಯಂತ ಶ್ರೇಷ್ಠವಾಗಿದೆ.

ಶಿವನಿಗೂ ರಾತ್ರಿಗೂ ಸಂಬಂಧವಿದೆ. ಸತ್ತ್ವ-ರಜಸ್ಸು-ತಮಸ್ಸು ಎಂಬ ತ್ರಿಗುಣಗಳಿಗೆ ತ್ರಿಮೂರ್ತಿಗಳಲ್ಲಿ ಕ್ರಮವಾಗಿ ವಿಷ್ಣು-ಬ್ರಹ್ಮ-ಮಹೇಶ್ವರರು ಅಧಿಪತಿಯಾಗಿರುತ್ತಾರೆ. ಕಾಲದಲ್ಲೂ ಬೆಳಿಗ್ಗೆ ಮಧ್ಯಾಹ್ನ ರಾತ್ರಿ ಹೀಗೆ ಒಂದೊಂದು ಕಾಲಕ್ಕೂ ಒಂದೊಂದು ದೇವತೆಯ ಪ್ರಾಧಾನ್ಯವಿರುತ್ತದೆ. ರಾತ್ರಿಯಲ್ಲಿ ತಮಸ್ಸಿನ ಆಧಿಕ್ಯವಿರುವುದರಿಂದಗೆ ಶಿವನಿಗೆ ಪ್ರಾಧಾನ್ಯ.

ಶಿವನನ್ನು ಸಂಹಾರಕರ್ತಾ ಎಂದು ಕರೆಯಲಾಗುತ್ತದೆ. ಸ್ವಾಭಾವಿಕವಾಗಿ ರಾತ್ರಿಯು ಸಂಹಾರಕಾಲದ ಪ್ರತಿನಿಧಿ. ಇಂದ್ರಿಯಗಳನ್ನು ಸೆಳೆದುಕೊಳ್ಳುವ ಕಾಲ. ಜೀವಿಯು ಕರ್ಮಚೇಷ್ಟೆಗಳನ್ನೆಲ್ಲಾ ಬಿಟ್ಟು ಚೈತನ್ಯವನ್ನು ಉಪಸಂಹರಿಸಿಕೊಂಡು ನಿದ್ದೆಗೆ ಜಾರುವ ಕಾಲವಿದು.ಚʻʻಯಸ್ಯಾಂ ಜಾಗೃತಿ ಭೂತಾನಿ ಸಾ ನಿಶಾ ಪಶ್ಯತೋ ಮುನೇಃ”(ಗೀತಾ-69) ಎಂಬಂತೆ ಸಾಮಾನ್ಯ ಜೀವಿಯು ಜಾಡ್ಯನಿದ್ದೆಯಲ್ಲಿದ್ದರೆ ಮುನಿಯಾದವನು ಆಜಾಡ್ಯನಿದ್ರೆ –ಸಮಾಧಿಯಲ್ಲಿ ಮುಳುಗಿರುತ್ತಾನೆ. ಸಾಧಕನಿಗಿದು ಸಾಧನೆಗೆ ಪರ್ವಕಾಲವಾಗಿದೆ.

ಮನಸಸ್ಪತಿಯ ಜಾಗೃತವಾಗುವ ಪರ್ವ

ಶುಕ್ಲಪಕ್ಷದಲ್ಲಿ ಚಂದ್ರನು ವೃದ್ಧಿಹೊಂದುತ್ತಾ ಕೃಷ್ಣಪಕ್ಷದಲ್ಲಿ ಕ್ಷೀಣಿಸುತ್ತಾ ಹೋಗುತ್ತಾನೆ. ಚಂದ್ರನ ಪ್ರಭಾವ ಇಡೀ ಬ್ರಹ್ಮಾಂಡದ ಮೇಲೆ ಬೀರುತ್ತದೆ. ಅಲ್ಲದೇ ಚಂದ್ರನನ್ನು ಮನಸ್ಸಿಗೆ ಅಧಿಪತಿ ಎಂದು ಜ್ಯೋತಿಷ್ಯಶಾಸ್ತ್ರವು ಹೇಳುತ್ತದೆ. ಹಾಗಾಗಿ ಚಂದ್ರನ ವೃದ್ಧಿಕ್ಷಯಗಳು ನಮ್ಮ ಮನಸ್ಸಿನ ಮೇಲೂ ಪ್ರಭಾವವನ್ನು ಬೀರದಿರದು. ಈ ಕೃಷ್ಣಪಕ್ಷದ ರಾತ್ರಿಯು ವಿಶೇಷವಾದ ತಮಸ್ಸಿನ ಆವರಣವಾಗಿರುವುದರಿಂದ ಸಾಮಾನ್ಯ ಜೀವಿಯು ಜಾಡ್ಯನಿದ್ದೆಗೆ ಜಾರುವುದು ಸಹಜ. ಮತ್ತು ಈ ಗಾಢವಾದ ತಮಸ್ಸಿನ ಕಾಲವೇ ರಾಕ್ಷಸೀಶಕ್ತಿಗಳು ಪ್ರಬುದ್ಧರಾಗುವ ಸನ್ನಿವೇಶವಿರುತ್ತದೆ.

ನೈತಿಕ ಸಾಮಾಜಿಕ ಅಪರಾಧಗಳು ಘಟಿಸುವ ಕಾಲವೂ ಇದೇ ಆಗಿದೆ. ಇದೇ ಕಾಲವು ತಮಸ್ಸಿನ ಅಧಿಪತಿಗೆ ಪ್ರಿಯವಾದದ್ದು. ಮಂದಮತಿಗಳು ಈ ಕಾಲವನ್ನು ನಿದ್ದೆಯಲ್ಲಿ ಕಳೆಯುತ್ತಾರೆ. ಪ್ರಾಜ್ಞರಾದವರು ಈ ಕಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ. ಅವರಿಗಿದು ಸಂಧ್ಯಾಕಾಲ. ಮಧ್ಯರಾತ್ರಿಯನ್ನೂ ಸಂಧ್ಯಾಕಾಲಗಳಲ್ಲಿ ಒಂದೆಂದೂ ಇದು ಸಾಧನೆಗೆ ಅತ್ಯಂತ ಪ್ರಶಸ್ತ ಎಂದು ತೀರ್ಮಾನಿಸಲಾಗಿದೆ.

ʻʻನಿಶಿ ಭ್ರಮಂತಿ ಭೂತಾನಿ ಶಕ್ತಯಃ ಶೂಲಭೃದ್ಯತಃ” – ಶಿವ ಮತ್ತು ಅವನ ಅನುಚರರು ಸಂಚರಿಸುವ ಕಾಲವೂ ಇದೇ ಆಗಿದೆ. ʻʻಇಲ್ಲಿ ಶಿವನ ಸಹಚಾರಿಗಳಾಗಿ ಹೇಳಲ್ಪಟ್ಟಿರುವ ಭೂತಗಳು ಭಯ ಅಥವಾ ಬೀಭತ್ಸಗಳಿಗೆ ಕಾರಣರಾಗಿರುವ ಜೀವಿಗಳಲ್ಲ. ಜ್ಞಾನಿ ಭಕ್ತರಾದ ಪರಿವಾರಗಳು. ಆರಾಧಿಸುವವರಿಗೆ ಇಷ್ಟಾರ್ಥವನ್ನು ಅನುಗ್ರಹಿಸುವ ಶಕ್ತಿ ಇವುಗಳಿಗಿದೆ. ಅವು ಸಂಹಾರಕಾರ್ಯದಲ್ಲೂ ಶಿವನಿಗೆ ಸಹಾಯ ಮಾಡುತ್ತವೆ” ಎಂದು ಶ್ರೀರಂಗಮಹಾಗುರುಗಳು ವ್ಯಾಖ್ಯಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಚತುರ್ದಶೀ ನಿರ್ಣಯ ಹೇಗೆ?

ʻʻಮಾಘಮಾಸಸ್ಯ ಕೃಷ್ಣಾಯಾಂ ಚತುರ್ದಶ್ಯಾಂ ಸುರೇಶ್ವರ!|
ಅಹಂ ವತ್ಸ್ಯಾಮಿ ಭೂಪೃಷ್ಠೇ ರಾತ್ರೌ, ನೈವ ದಿವಾ ಕಲೌ || (ನಾಗರಖಂಡ)

ಎಂಬ ವಚನಾನುಸಾರ ಮಾಘ ಕೃಷ್ಣ ಚತುರ್ದಶಿಯು ಮಹಾಶಿವರಾತ್ರಿ ಎಂದು ಪರಿಗಣಿತವಾಗಿದೆ. ಇನ್ನು ಕೆಲವು ಕಡೆ ʻʻಫಾಲ್ಗುನಸ್ಯ ಚತುರ್ದಶ್ಯಾಂ ಕೃಷ್ಣಪಕ್ಷೇ ಸಮಾಹಿತಾಃ” (ಹೇಮಾದ್ರಿ ತೀರ್ಥಖಂಡ) ಎಂಬುದಾಗಿ ಫಾಲ್ಗುಣ ಮಾಸವನ್ನು ಸ್ವೀಕರಿಸಲಾಗುತ್ತದೆ. ಏನೇ ಆದರೂ ಚತುರ್ದಶಿಯು ಶಿವದೇವತಾತ್ಮಕವಾದ ತಿಥಿಯಾಗಿದೆ.

ತಿಥಿಯ ನಿರ್ಣಯ ಹೇಗೆ?
೧. “ಸರ್ವಾಪಿ ಶಿವರಾತ್ರಿಃ ಪ್ರದೋಷವ್ಯಾಪಿನ್ಯೇವ” (ನಿರ್ಣಯಾಮೃತ) “ಸೂರ್ಯಾಸ್ತದ ಅನಂತರ ಎರಡು ಘಂಟೆಯ ಕಾಲವೇ ಪ್ರದೋಷಕಾಲ. ಈ ಸಮಯದಲ್ಲಿ ಚತುರ್ದಶೀ ತಿಥಿಯು ಇರಬೇಕು.
೨. “ಪ್ರದೋಷನಿಶೀಥೋಭಯವ್ಯಾಪ್ತಿಃ ಇತಿ ಮಾಧವಃ ʼʼಪ್ರದೋಷ ಮತ್ತು ರಾತ್ರಿಯ ಎಂಟನೆ ಮುಹೂರ್ತದವರೆಗೆ ಚತುರ್ದಶೀ ಇರಬೇಕು.
೩. ಎರಡು ರಾತ್ರಿಯೂ ವ್ಯಾಪ್ತವಾಗಿದ್ದರೆ ಮಾರನೇ ದಿನವನ್ನೇ ಪರಿಗಣಿಸಬೇಕು.
೪. ಎರಡೂ ದಿನಗಳಲ್ಲಿಯೂ ತಿಥಿಯು ರಾತ್ರಿವ್ಯಾಪಿನಿಯಲ್ಲದಿದ್ದರೆ ಮಾರನೇ ದಿನವನ್ನೇ ಬಳಸಬೇಕು (ಹೇಮಾದ್ರಿ ಮತ್ತು ಕೌಸ್ತುಭ).
೫. ತ್ರಯೋದಶಿವಿದ್ಧವಾದ ಚತುರ್ದಶಿಯೇ ಶ್ರೇಷ್ಠ ಎಂಬುದಾಗಿ ಸ್ಕಂದಪುರಾಣ ಸಾರಿದೆ. ಈ ವ್ರತವು ಭಾನುವಾರ ಮತ್ತು ಮಂಗಳವಾರ ಹಾಗೂ ಶಿವ ಯೋಗದಿಂದ ಕೂಡಿದ್ದರೆ ಅತ್ಯಂತ ಶ್ರೇಷ್ಠ ಎಂಬುದಾಗಿ ತಿಳಿಯಬೇಕು.

ಶಿವನ ಸಂಖ್ಯೆ ಹನ್ನೊಂದು. ಚೈತ್ರಾದಿ ಮಾಸದಿಂದ ಮಾಘಮಾಸವು ಹನ್ನೊಂದನೇ ಮಾಸವಾಗಿದೆ. ಹಾಗಾಗಿ ಈ ಮಾಸವನ್ನು ʻʻಮಹಾಶಿವರಾತ್ರಿʼʼ ಎನ್ನಲಾಗಿದೆ. ʻʻಸಾಧಕರ ಅಂತರರಂಗದಲ್ಲಿ ಯಾವಾಗ ವಿಶೇಷವಾಗಿ ಶಿವನ ಸಾಕ್ಷಾತ್ಕಾರ ಆಗುತ್ತದೆಯೋ ಆ ಕಾಲವನ್ನೇ ಆಚರಣೆಗೆ ಬಳಸಬೇಕು” ಎಂಬುದು ಶ್ರೀರಂಗಮಹಾಗುರುಗಳ ಅಂತರಂಗವಾಗಿತ್ತು.

maha shivaratri 2023

ಉಪವಾಸ ಹೇಗೆ?

ಉಪವಾಸವು ಮಹಾಶಿವರಾತ್ರಿ ವ್ರತದಲ್ಲಿ ಬಹುಮುಖ್ಯವಾದ ಅಂಗ. ಆಹಾರದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದೇ ಉಪವಾಸ ಎಂಬರ್ಥವನ್ನು ಇಂದು ಎಲ್ಲಾ ಕಡೆ ಕಾಣುತ್ತೇವೆ. ಆದರೆ ಶ್ರೀರಂಗಮಹಾಗುರುಗಳು ಇದನ್ನು ವಿಶೇಷವಾಗಿ ವ್ಯಾಖ್ಯಾನಿಸುತ್ತಿದ್ದರು. “ಉಪ-ಸಮೀಪೇ, ವಾಸ-ಇರುವುದು. ಅಂದರೆ ಭಗವಂತನ ಬಳಿ ಮನಸ್ಸನ್ನು ಸದಾ ಇರಿಸುವುದೇ ಉಪವಾಸವಪ್ಪ” ಎಂದು. ಉಪವಾಸಕ್ಕೆ ನಿಜವಾದ ಅರ್ಥ ಇದುವೇ . ಇಂತಹ ಸ್ಥಿತಿಗೆ ಆಹಾರವನ್ನು ಬಳಸದೇ ಇರುವುದೂ ಕಾರಣ ಎಂಬರ್ಥದಲ್ಲಿ ಉಪವಾಸ ಪದದ ಬಳಕೆ ಉಚಿತವಾಗುವುದು.

“ವಿಷಯಾ ವಿನಿವರ್ತಂತೇ ನಿರಾಹಾರಸ್ಯ ದೇಹಿನಃ”(ಗೀತಾ೨.೫೯) ಎಂಬ ಗೀತಾಚಾರ್ಯನ ಮಾತಿನಂತೆ ಆಹಾರವನ್ನು ಬಳಸದೇ ಇರುವುದು ವಿಷಯಲಾಲಸೆಯನ್ನು ದೂರಮಾಡುವುದು. ಆಗ ಇಂದ್ರಿಯನಿಗ್ರಹ ಮತ್ತು ಮನೋನಿಗ್ರಹ ಸುಲಭ. ನಿಗ್ರಹವೇ ಇಲ್ಲಿ ಮುಖ್ಯ ಉದ್ದೇಶವೇ ಹೊರತು ಕೇವಲ ಆಹಾರವನ್ನು ಬಳಸದಿರುವುದು ಎಂದೂ ಅಲ್ಲ. ಮತ್ತು ನಿಗ್ರಹವುಳ್ಳವನಿಗೆ ಹಸಿವು ಬಾಯಾರಿಕೆಗಳ ಪರಿವೆಯೇ ಇರದು. ಇಂತಹ ಕಂಡೀಶನ್ನು ಏನುಂಟು ಅದನ್ನೇ ಉಪವಾಸ ಎಂದು ಮಹರ್ಷಿಗಳು ಕರೆದಿದ್ದಾರೆ.

ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗು ಅಶಕ್ತರಾದವರು ಭಗವಂತನ ಪೂಜೆಗೆ ತೊಡಕು ಉಂಟಾಗದ ರೀತಿಯಲ್ಲಿ ಆಹಾರವನ್ನು ಬಳಸಿದರೆ ತಪ್ಪಲ್ಲ ಎಂದು ಶಾಸ್ತ್ರಗಳು ವಿಧಿಸಿವೆ. “ಉಪೋಷಿತೈಃ ಪೂಜಿತಃ ಸನ್ ನರಕಾತ್ ತಾರಯೇತ್ ತಥಾ”(ಗರುಡ) –ಈ ಉಪವಾಸವು ಎಲ್ಲಾ ಪಾಪಗಳನ್ನು ಪರಿಹರಿಸಿ ನಮ್ಮನ್ನು ಉದ್ಧಾರ ಮಾಡುವ ಉತ್ತಮವದ ವ್ರತಾಂಗವಾಗಿದೆ.

ಜಾಗರಣ ಎಂದರೇನು?
ಜಾಗರಣವು ಶಿವರಾತ್ರಿಯ ಇನ್ನೊಂದು ಮುಖ್ಯವಾದ ಅಂಗ. ಜಾಗರಣ ಎಂದರೆ ಎಚ್ಚರವಾಗಿರುವುದು. “ತಸ್ಯಾಂ ಜಾಗರಣಾದ್ರುದ್ರಃ ಪೂಜಿತೋ ಭುಕ್ತಿಮುಕ್ತಿದಃ” (ಗರುಡ) ಈ ದಿನ ಮಾಡಿದ ಜಾಗರಣವು ಇಹದಲ್ಲಿ ಭೋಗಕ್ಕೆ ಬೇಕಾದ ಸಂಪತ್ತನ್ನೂ, ಮತ್ತು ಪರದ ಭೋಗಕ್ಕೆ ಬೇಕಾದ ವೈರಾಗ್ಯವನ್ನೂ ಕೊಡುವುದಾಗಿದೆ. ಆದ್ದರಿಂದ ಈ ದಿನ ಮಾಡುವ ಜಾಗರಣಕ್ಕೆ ಅಷ್ಟೊಂದು ವಿಶೇಷತೆ ಇದೆ. ಹಾಗಾದರೆ ಜಾಗರಣೆ ಎಂದರೆ ಕೇವಲ ನಿದ್ದೆ ಮಾಡದೆ ಎಚ್ಚರವಾಗಿರುವುದು ಎಂಬ ಅರ್ಥವಲ್ಲ. ನಮ್ಮ ಇಂದ್ರಿಯ, ದೇಹ, ಮನಸ್ಸು ಇವುಗಳನ್ನೆಲ್ಲಾ ಅತ್ಯಂತ ಪಟುವಾಗಿಸಿಕೊಂಡು ಅವುಗಳಿಂದ ಭಗವಂತನನ್ನು ಪೂಜಿಸಬೇಕು, ಸ್ತೋತ್ರಮಾಡಬೇಕು, ಧ್ಯಾನಿಸಬೇಕು ಎಂದರ್ಥ. ನಮ್ಮೆಲ್ಲಾ ಕರಣಕಳೆಬರಗಳನ್ನೆಲ್ಲವನ್ನೂ ಭಗವಂತನಿಗಾಗಿ ಮೀಸಲಿಡುವ ಪವಿತ್ರಕಾಲವೇ ಜಾಗರಣ. ಹೊರತು ಎಚ್ಚರವಾಗಿದ್ದುಕೊಂಡು ಇನ್ನಾವುದೋ ಬಹಿರ್ಮುಖವಾದ ವ್ಯಾಪಾರದಲ್ಲೋ, ಮೋಜು ಮಸ್ತಿನಲ್ಲೋ ಕಾಲಹರಣ ಮಾಡುವುದು ಜಾಗರಣ ಖಂಡಿತ ಆಗಲಾರದು. ಇದು ಭಗವಂತನಿಗೆ ಮಾಡುವ ಅಪಚಾರ. ಸ್ತ್ರೀಯರು ಪುರುಷರು ಎಲ್ಲಾ ಜಾತಿಜನಾಂಗದವರೂ ಎಲ್ಲರೂ ಈ ಜಾಗರಣವನ್ನು ಮಾಡಬಹುದು. ಇಲ್ಲಿ ಒಂದನ್ನು ಮಾತ್ರ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಅದೇನೆಂದರೆ ವ್ರತ ನಿಯಮಗಳೆಲ್ಲವೂ ಯಾರು ಭಗವಂತನ ಮಡಿಲನ್ನು ಸೇರಿ ಈ ಸಂಸಾರಬಂಧನದಿಂದ ಮುಕ್ತಿ ಪಡೆಯಬೇಕು ಎಂದು ಅಪೇಕ್ಷಿಸುತ್ತಾರೋ ಅಂತಹವರಿಗೆ ಮಾತ್ರ ಎಂದು.

ಶಿವರಾತ್ರಿಯ ಪೂಜಾ ವಿಧಾನ

ಶಿವರಾತ್ರಿಯ ದಿನ ಇಡೀ ರಾತ್ರಿ ಪೂಜೆಯನ್ನು ಮಾಡಬೇಕು. ನಾಲ್ಕೂ ಯಾಮಗಳೂ ಪೂಜಾ ಯೋಗ್ಯವಾದ ಕಾಲವಾಗಿವೆ. ಶಿವಲಿಂಗ ಅಥವಾ ಕಲಶದಲ್ಲಿ ಶಿವನನ್ನು ಆವಾಹಿಸಿ ಷೋಡಶೋಪಚಾರಗಳಿಂದ ಪೂಜಿಸಬೇಕು. “ಅಭಿಷೇಕಪ್ರಿಯಃ ಶಿವಃ” ಎಂಬಂತೆ ಅಭಿಷೇಕವು ಶಿವನಿಗೆ ಅತ್ಯಂತ ಶ್ರೇಷ್ಠ. ಹಾಗಾಗಿ ಮೊದಲನೆಯ ಯಾಮದಲ್ಲಿ ಹಾಲಿನಿಂದ, ಎರಡನೆ ಯಾಮದಲ್ಲಿ ಮೊಸರಿನಿಂದ, ಮೂರನೆ ಯಾಮದಲ್ಲಿ ತುಪ್ಪದಿಂದ ಮತ್ತು ನಾಲ್ಕನೆ ಯಾಮದಲ್ಲಿ ಜೇನುತುಪ್ಪದಿಂದ ಅಭಿಷೇಕ ಮಾಡಬೇಕು.

ಯಜುರ್ವೇದದಲ್ಲಿ ಬರುವ ರುದ್ರಾನುವಾಕ ಮಂತ್ರವನ್ನು ಅಭಿಷೇಕದ ಜೊತೆ ಪಠಿಸಬೇಕು. ಪಂಚಾಮೃತ, ಗಂಧ, ಕುಂಕುಮ, ಕರ್ಪೂರ, ತೀರ್ಥ, ಸುವರ್ಣತೀರ್ಥಗಳಿಂದ ಶಿವನಿಗೆ ಅಭಿಷೇಕ ಮಾಡಬೇಕು. ಎಕ್ಕೆ, ಕರವೀರ, ಬಿಲ್ವ ಬಕುಲ ಇವು ಶಂಕರನಿಗೆ ಪ್ರಿಯಕರ. ಇವುಗಳಲ್ಲೂ ಬಿಲ್ವಪತ್ರೆ ಅತ್ಯಂತ ಶ್ರೇಷ್ಠವಾಗಿದೆ. ಮೂರು ದಳಗಳು ತ್ರಿಮೂರ್ತಿಗಳ ಪ್ರತಿರೂಪ. “ಇದರ ದರ್ಶನ, ಸ್ಪರ್ಶ ಮತ್ತು ಸಮರ್ಪಣೆಗಳು ಶಿವಸ್ಥಾನಕ್ಕೆ ಏರಿಸಬಲ್ಲವು ಎಂಬುದನ್ನು ಶ್ರೀರಂಗಮಹಾಗುರುಗಳು ಪ್ರಯೋಗದೊಂದಿಗೆ ಪಾಠ ಮಾಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಲಿಂಗಾಷ್ಟಕ, ಬಿಲ್ವಾಷ್ಟಕ ಮೊದಲಾದ ಸ್ತೋತ್ರಗಳಿಂದ ಶಿವನನ್ನು ಸ್ತುತಿ ಮಾಡಬೇಕು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಶಿವ ಅಷ್ಟೋತ್ತರ ಅಥವಾ ಸಹಸ್ರನಾಮಗಳಿಂದ ಅರ್ಚನೆ, ಶಿವಕಥಾಶ್ರವಣ, ಭಜನ, ಶಿವನಾಮಸಂಕೀರ್ತನ, ಹೀಗೆ ಶಿವಮಯವಾಗಿ ಜಾಗರೂಕರಾಗಿ ರಾತ್ರಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಮರುದಿನ ಬೆಳಿಗ್ಗೆ ಪಾರಣೆ (ವ್ರತಾಂತಭೋಜನ) ಮಾಡಿ ಶಿವರಾತ್ರಿವ್ರತವನ್ನು ಪೂರ್ಣಗೊಳಿಸಬೇಕು.

Maha Shivaratri 2023

ಜಿಜ್ಞಾಸಾಪರಿಹಾರ

ಶಿವನು ತಮಸ್ಸಿಗೆ ಅಧಿದೇವತೆ, ಸಂಹಾರಕ ಅಂದರೆ ಕೊಲ್ಲುವವನು. ಹೀಗಿದ್ದೂ ಇಂತಹ ದೇವರನ್ನು ಪೂಜಿಸುವುದು ಮೂರ್ಖತನವಲ್ಲವೇ? ಇಂತಹ ದೇವರ ಪೂಜೆಯಿಂದ ಫಲವಾದರೂ ಏನು? ಮತ್ತು ಹಿಂದೆ ನೆನೆಪಿಸಿದ ಕಥೆಯ ತಾತ್ತ್ವಿಕವಾದ ಹಿನ್ನೆಲೆ ಏನು? ಎಂಬ ಮೊದಲಾದ ಪ್ರಶ್ನೆಗಳು ಓದುಗರ ಮನಸ್ಸಿನಲ್ಲಿ ಮೂಡುವುದು ಸಹಜ. ಈ ಸೃಷ್ಟಿಯಲ್ಲಿ ಸತ್ತ್ವ, ರಜಸ್ಸು ಮತ್ತು ತಮಸ್ಸು ಈ ಮೂರೂ ಗುಣಗಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಸಾಮರಸ್ಯ ಇರಲು ಸಾಧ್ಯ.

ಒಬ್ಬ ಮನುಷ್ಯ ದಿನದ ಇಪ್ಪತ್ತನಾಲ್ಕೂ ಗಂಟೆಗಳ ಕಾಲವೂ ಅವಿಶ್ರಾಂತವಾಗಿ ಕೆಲಸದಲ್ಲಿ ನಿರತನಾದರೆ ಆರೋಗ್ಯ ಕೆಡುವುದಿಲ್ಲವೇ? ಕಾಲಕಾಲಕ್ಕೆ ನಿದ್ದೆಯನ್ನು ಮಾಡಿ ಕೆಲಸವನ್ನು ಮಾಡಿದರೆ ಆರೋಗ್ಯವಾಗಿ ಬದುಕಬಹುದು. ಹಾಗೆಯೇ ಜೀವಿಗಳು ಕರ್ಮಫಲಗಳನ್ನು ಅನುಭವಿಸಿ ಬಳಲಿದಾಗ ವಿಶ್ರಾಂತಿ ಪಡೆಯಲು ಅವನು “ಮರಣ ರೂಪವಾದ ವಿಶ್ರಾಂತಿಯನ್ನು ಕರುಣಿಸುವ ಕರುಣಾಮಯನಾದ ದೇವನೇ ಆಗಿದ್ದಾನೆ. ಜಾಗೃತ್ತಿಗೆ ಹೇಗೆ ರಜಸ್ಸು ಕಾರಣವೋ. ಸಮಾಧಾನಕ್ಕೆ ಸತ್ತ್ವಗುಣ ಕಾರಣ. ನಿದ್ದೆಗೆ ತಮಸ್ಸು ಕಾರಣ. ಶಿವನ ಅನುಗ್ರಹದಿಂದಲೇ ನಾವು ನಿತ್ಯವೂ ಸುಖವಾಗಿ ನಿದ್ರಿಸುತ್ತಿದ್ದೇವೆ.ಯಾವುದೇ ಗುಣವು ವ್ಯತ್ಯಾಸವಾದರೂ ಸೃಷ್ಟಿಯಲ್ಲಿ ಏರುಪೇರು ಸಹಜ. ಒಬ್ಬ ಸಾಧಕನು ಈ ಜೀವನವನ್ನು ಸಾರ್ಥಕಪಡಿಸಿಕೊಳ್ಳಲು ಈ ಮೂರೂ ಗುಣಗಳ ಅಧಿಷ್ಠಾನ ದೇವತೆಗಳ ಪ್ರಸಾದ ಅತಿಮುಖ್ಯ.

ನಮ್ಮ ಜೀವನಕ್ಕೆ ಅಡ್ಡಿಪಡಿಸುವ ರಾಕ್ಷಸೀಸ್ವಭಾವನ್ನು ನಾಶಪಡಿಸುವುದು ಸಂಹಾರಕಾರ್ಯವಾದರೂ ಇದರಿಂದ ಜೀವಸಂಕುಲಕ್ಕೆ ಒಳಿತೇ. ಇಂತಹ ದೇವರನ್ನು ಪೂಜಿಸುವುದರಿಂದ ಜೀವಕ್ಕೆ, ಜೀವನಕ್ಕೆ ಹೊಸ ಉತ್ಸಾಹವನ್ನು ಕೊಡುತ್ತದೆ. ನಮ್ಮ ಮಹರ್ಷಿಗಳ ಯಾವ ಉದ್ಘೋಷವಿದೆಯೋ ಪುರುಷಾರ್ಥಮಯ ಬಾಳಾಟ ಇದೇ ಮಾನವನ ಚರಮ ಮತ್ತು ಪರಮ ಲಕ್ಷ್ಯ. ಇದನ್ನು ಪಡೆಯಲು ಶಿವರಾತ್ರಿಮಹೋತ್ಸವವು ಸಾಧನವಾಗಲಿ ಎಂದು ಶಂಕರನನ್ನು ಪ್ರಾಥಿಸಿ ಮಂಗಳಮಾಡುತ್ತೇನೆ.

– ಲೇಖಕರು ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ : Prerane : ಧ್ಯಾನದಿಂದ ಮಾತ್ರ ಮೃತ್ಯು ಭಯ ದಾಟಲು ಸಾಧ್ಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Vastu Tips: ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ. ಮನೆಗೆ ಕಿಟಕಿ ಬಾಗಿಲು ಅಳವಡಿಸುವುದಕ್ಕೂ ವಾಸ್ತು ಪಾಲನೆ ಮಾಡುವುದು ಮುಖ್ಯ. ಇದರಿಂದ ಮನೆಯೊಳಗೆ ಧನಾತ್ಮಕ ಶಕ್ತಿ ವೃದ್ಧಿಯಾಗಿಸಬಹುದು.

VISTARANEWS.COM


on

By

Vastu Tips
Koo

ಮನೆಯೊಳಗೆ (home) ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಧನಾತ್ಮಕ ಶಕ್ತಿ (Positive energy) ವೃದ್ಧಿಸಿಕೊಳ್ಳುವುದು ಬಹು ಮುಖ್ಯ. ಇದಕ್ಕಾಗಿ ವಾಸ್ತು ಅಂಶಗಳನ್ನು ನಾವು ಪರಿಗಣಿಸಿಬೇಕು. ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ.

ಮನೆಯಾದ್ಯಂತ ಧನಾತ್ಮಕ ಶಕ್ತಿಯನ್ನು ವೃದಿಸುವುದು ಸುಲಭವಲ್ಲ. ವಾಸ್ತು ಪ್ರಕಾರ ಮನೆಗೆ ಬಾಗಿಲು (door) ಮತ್ತು ಕಿಟಕಿಗಳನ್ನು (window) ಅಳವಡಿಸಿದರೆ ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು.

ವಾಸ್ತು ಪ್ರಕಾರ ಬಾಗಿಲು ಮತ್ತು ಕಿಟಕಿಗಳನ್ನು ಅಳವಡಿಸಿದರೆ ಮುಚ್ಚಿರುವ ಜಾಗದಲ್ಲೂ ಧನಾತ್ಮಕ ಶಕ್ತಿ ಪುನರುತ್ಪಾದನೆಯಾಗುತ್ತದೆ. ಈ ಬಾಗಿಲು ಮತ್ತು ಕಿಟಕಿಗಳ ಮೂಲಕ ಶಕ್ತಿಗಳು ಮನೆಯ ಒಳ ಮತ್ತು ಹೊರಗೆ ಹರಿಯುತ್ತವೆ. ಆರೋಗ್ಯಕರ ಮತ್ತು ಶ್ರೀಮಂತ ಜೀವನಶೈಲಿಯ ವೃದ್ಧಿಗಾಗಿ ಇವುಗಳನ್ನು ಇಡಲು ನಿರ್ದಿಷ್ಟ ಜಾಗಗಳಿವೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Vastu Tips: ನಿಮ್ಮ ಮನೆಯಲ್ಲಿ ಸಂತೋಷ ವೃದ್ಧಿಸಬೇಕೆ? ಈ ಸಲಹೆಗಳನ್ನು ಪಾಲಿಸಿ

ಬಾಗಿಲು, ಕಿಟಕಿಗಳಿಗೆ ವಾಸ್ತು ಪಾಲನೆ ಯಾಕೆ?

ಮನೆ ನಿರ್ಮಿಸಲು ಉತ್ಸುಕರಾಗಿರುವ ಮನೆ ಮಾಲೀಕರು ಹಲವಾರು ಕಾರಣಗಳಿಗಾಗಿ ಬಾಗಿಲು ಮತ್ತು ಕಿಟಕಿಗಳನ್ನು ಇಡುವ ಸ್ಥಾನ, ದಿಕ್ಕು ಮತ್ತು ಬಳಸುವ ವಸ್ತುಗಳ ಬಗ್ಗೆ ವಿಶೇಷ ಗಮನವನ್ನು ನೀಡಬೇಕು. ಅವು ಗಾಳಿ ಮತ್ತು ಸೂರ್ಯನ ಬೆಳಕಿಗೆ ಪೂರಕವಾಗಿದೆಯೇ ಎಂಬುದನ್ನು ನೋಡಿಕೊಳ್ಳಬೇಕು. ಇದರಿಂದಲೇ ಮನೆಯೊಳಗೇ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸುವುದನ್ನು ತಡೆಯುತ್ತದೆ.
ಹೊಸ ಮನೆಯನ್ನು ನಿರ್ಮಿಸುತ್ತಿದ್ದರೆ ಅಥವಾ ಹಳೆ ಮನೆಯನ್ನು ನವೀಕರಿಸುತ್ತಿದ್ದರೆ ಬಾಗಿಲು ಮತ್ತು ಕಿಟಕಿಗಳ ವಾಸ್ತು ಬಗ್ಗೆ ತಿಳಿದುಕೊಳ್ಳಿ.


ಸರಿಯಾದ ಮುಖ್ಯ ಬಾಗಿಲು

ಮನೆಯ ಮುಖ್ಯ ಬಾಗಿಲು ದೊಡ್ಡ ಬಾಗಿಲಾಗಿರಬೇಕು. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಒಳಗೆ ತೆರೆದುಕೊಳ್ಳುವ ಎರಡು ಕವಾಟದ ಬಾಗಿಲು ಮಂಗಳಕರ. ಪ್ರಕಾಶಮಾನವಾದ ದೀಪಗಳು ಮತ್ತು ಉತ್ತಮ ಬಣ್ಣಗಳೊಂದಿಗೆ ಮುಖ್ಯ ಬಾಗಿಲಿನ ಮೇಲೆ ಸುಂದರವಾದ ವಿನ್ಯಾಸಗಳನ್ನು ಅಳವಡಿಸಿಕೊಳ್ಳಿ. ನೀರಸವಾದ ಮುಖ್ಯ ಬಾಗಿಲು ಮನೆಗೆ ಶೋಭೆಯಲ್ಲ.

ಬಾಗಿಲುಗಳ ಸರಿಯಾದ ಸಂಖ್ಯೆ

ಸಕಾರಾತ್ಮಕತೆಯು ಸಹ ಸಮ ಸಂಖ್ಯೆಗಳಲ್ಲಿ ಬರುತ್ತದೆ. ಮನೆಯಲ್ಲಿ ಬಾಗಿಲು ಮತ್ತು ಕಿಟಕಿಗಳ ಸಂಖ್ಯೆ ಯಾವಾಗಲೂ ಸಮವಾಗಿರಬೇಕು. ಎರಡು, ನಾಲ್ಕು, ಆರು ಹೀಗೆ ಎರಡರ ಗುಣಕಗಳಲ್ಲಿರಬೇಕು ಎನ್ನುತ್ತಾರೆ ವಾಸ್ತು ತಜ್ಞರು.


ಬಾಗಿಲಿನ ಗಾತ್ರದಲ್ಲಿ ಸ್ಥಿರತೆ

ಮುಂಭಾಗದ ಬಾಗಿಲನ್ನು ಹೊರತುಪಡಿಸಿ ಮನೆಯಲ್ಲಿ ಎಲ್ಲಾ ಆಂತರಿಕ ಬಾಗಿಲುಗಳ ಗಾತ್ರದಲ್ಲಿ ಒಂದೇ ಆಗಿರಬೇಕು. ವಿಭಿನ್ನ ಬಾಗಿಲು ಗಾತ್ರಗಳು ಮನೆಗೆ ಒಳ್ಳೆಯದಲ್ಲ. ಎದ್ದು ಕಾಣಬೇಕಾದ ಏಕೈಕ ಬಾಗಿಲು ಮುಖ್ಯ ಬಾಗಿಲು. ಮನೆಯೊಳಗೆ ಕೆಲವು ಬಾಗಿಲುಗಳನ್ನು ದೊಡ್ಡದಾಗಿ ಮಾಡಲು ಬಯಸಿದರೆ ಅವುಗಳನ್ನು ಉತ್ತರ ಅಥವಾ ಪೂರ್ವಕ್ಕೆ ಬದಲಾಗಿ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇರಿಸಬೇಕು.

ದೋಷರಹಿತವಾಗಿರಲಿ ಮನೆ ಬಾಗಿಲು

ಮನೆಯಲ್ಲಿ ಬಾಗಿಲುಗಳ ಕಾರ್ಯವಿಧಾನದ ವಿಷಯಕ್ಕೆ ಬಂದರೆ ಬಾಗಿಲು ತೆರೆಯುವಾಗ ಅಥವಾ ಮುಚ್ಚುವಾಗ ಕೀಲು ಬಾಗಿಲುಗಳನ್ನು ಹಾಕುವುದು ಉತ್ತಮ. ಮನೆಯಲ್ಲಿ ಬಾಗಿಲುಗಳು ಮತ್ತು ಕಿಟಕಿಗಳೊಂದಿಗೆ ಹೆಚ್ಚು ಜಗಳಗಳು ಇರುತ್ತದೆ. ಸ್ಮೂತ್ ಕೀಲುಗಳು ಮನೆಯಲ್ಲಿ ಉತ್ತಮ ಸಂಬಂಧಗಳನ್ನು ಪ್ರತಿಬಿಂಬಿಸುತ್ತವೆ. ಸ್ವಯಂ-ಮುಚ್ಚುವ ಬಾಗಿಲುಗಳನ್ನು ತಪ್ಪಿಸುವುದು ಒಳ್ಳೆಯದು.

ಕಿಟಕಿಗಳು

ಎಲ್ಲಾ ಕಿಟಕಿಗಳು ಸರಿಯಾದ ಆಕಾರ ಮತ್ತು ಸಮವಾದ ಎತ್ತರವನ್ನು ಹೊಂದಿರಬೇಕು. ಕಿಟಕಿಗಳು ತಾಜಾ ಗಾಳಿ ಮತ್ತು ಸೂರ್ಯನ ಬೆಳಕಿನ ಮೂಲವಾಗಿರುತ್ತದೆ. ಅವುಗಳಿಗೆ ಯಾವಾಗಲೂ ಎದುರು ಬಾಗಿಲುಗಳನ್ನು ಇಡಬೇಕು. ಮನೆಯಲ್ಲಿ ಗರಿಷ್ಠ ವಾತಾಯನವಿದೆ ಎಂದು ಇದು ಖಚಿತಪಡಿಸುತ್ತದೆ. ಮನೆಯಲ್ಲಿರುವ ಕಿಟಕಿಗಳ ಸಂಖ್ಯೆಯೂ ಸಮ ಸಂಖ್ಯೆಯಲ್ಲಿರಬೇಕು. ಕಿಟಕಿಗಳಿಗೆ ಸಾಮಾನ್ಯವಾಗಿ ನೈಋತ್ಯ ದಿಕ್ಕನ್ನು ತಪ್ಪಿಸಿ. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಕಿಟಕಿಗಳು ದೊಡ್ಡದಾಗಿದ್ದರೆ ಉತ್ತಮ. ಉತ್ತರವು ಸಮೃದ್ಧಿಯನ್ನು ತರುತ್ತದೆ ಆದರೆ ಪೂರ್ವವು ಪ್ರಗತಿ ಮತ್ತು ಆರೋಗ್ಯವನ್ನು ತರುತ್ತದೆ.

ಬಾಗಿಲಿಗೆ ಬಳಸುವ ವಸ್ತುಗಳು

ಬಾಗಿಲುಗಳಿಗೆ ವಸ್ತುಗಳನ್ನು ಎಚ್ಚರಿಕೆಯಿಂದ ಆರಿಸುವುದು ಮುಖ್ಯ. ಏಕೆಂದರೆ ಇದು ಎಷ್ಟು ಮಂಗಳಕರ ಎಂಬುದನ್ನು ನಿರ್ಧರಿಸುತ್ತದೆ. ಬಾಗಿಲುಗಳಿಗೆ ವಸ್ತುಗಳನ್ನು ಆಯ್ಕೆಮಾಡುವಾಗ ಮರದ ಬಾಗಿಲು ಯಾವಾಗಲೂ ಅತ್ಯುತ್ತಮ ಆಯ್ಕೆಯಾಗಿದೆ. ಇದಲ್ಲದೆ ಉತ್ತರ ದಿಕ್ಕಿನ ಬಾಗಿಲುಗಳಿಗೆ ಲೋಹ ಅಥವಾ ಕಬ್ಬಿಣದಂತಹ ಬೆಳ್ಳಿಯನ್ನು ಹೊಂದಿರುವ ಬಾಗಿಲುಗಳನ್ನು ಆಯ್ಕೆ ಮಾಡಿಕೊಳ್ಳಿ. ದಕ್ಷಿಣಕ್ಕೆ ಮರದ ಮತ್ತು ಲೋಹದ ಅಂಶಗಳನ್ನು ಹೊಂದಿರುವ ಬಾಗಿಲುಗಳು ಸೂಕ್ತವಾಗಿದೆ. ಪೂರ್ವ ದಿಕ್ಕಿಗೆ ಮರದಿಂದ ಮಾಡಿದ ಬಾಗಿಲು ಉತ್ತಮ. ಪಶ್ಚಿಮಕ್ಕೆ ಕಬ್ಬಿಣದಂತಹ ಲೋಹದಿಂದ ಪ್ರಧಾನವಾಗಿ ಮಾಡಿದ ಬಾಗಿಲನ್ನು ಆಯ್ಕೆ ಮಾಡಿಕೊಳ್ಳಿ.

ಬಾಗಿಲುಗಳು ಮತ್ತು ಕಿಟಕಿಗಳ ಬಣ್ಣ

ಗಾಢವಾದ ಬಣ್ಣಗಳು ಮನೆಯೊಳಗೆ ಹರ್ಷಚಿತ್ತ ಮತ್ತು ಶಕ್ತಿಯುತ ಮನಸ್ಥಿತಿಗೆ ಕಾರಣವಾಗುತ್ತವೆ. ಆದ್ದರಿಂದ ಮುಂಭಾಗದ ಬಾಗಿಲುಗಳಿಗೆ ಹಳದಿ ಮತ್ತು ನೀಲಿ ಬಣ್ಣಗಳನ್ನು ಆರಿಸಿ.

ಅಲಂಕಾರಿಕ ವಸ್ತುಗಳು

ಬಾಗಿಲಿನ ಮುಂದೆ ಹನುಮಾನ್ ಅಥವಾ ಗಣೇಶನ ವಿಗ್ರಹವನ್ನು ಇರಿಸುವುದರಿಂದ ದುಷ್ಟ ಶಕ್ತಿಗಳನ್ನು ದೂರವಿರಿಸಬಹುದು ಎಂದು ನಂಬಲಾಗಿದೆ. ಹಿತ್ತಾಳೆಯ ಬಟ್ಟಲಿನಲ್ಲಿ ನೀರನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅದೃಷ್ಟ ಮತ್ತು ಸಂಪತ್ತನ್ನು ಆಕರ್ಷಿಸಲು ಬುದ್ಧನ ಪ್ರತಿಮೆ ಅಥವಾ ಗಾಳಿಯ ಚೈಮ್ ಅನ್ನು ಪ್ರವೇಶದ್ವಾರದ ಬಳಿ ಇರಿಸಬಹುದು.


ವಾಸ್ತು ಪರಿಣಾಮ

ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಬಾಗಿಲು, ಕಿಟಕಿಗಳು ತಾಜಾ ಗಾಳಿ ಮತ್ತು ಬೆಳಿಗ್ಗೆ ಒಳ್ಳೆಯದು. ದಿನದ ಆರಂಭದಲ್ಲಿ ಇದು ಮನೆಯ ಶುದ್ಧೀಕರಣ ಪ್ರಕ್ರಿಯೆಯನ್ನು ನಡೆಸುತ್ತದೆ.

ದಕ್ಷಿಣ ದಿಕ್ಕು ಎಲ್ಲಾ ಉತ್ತಮ ಶಕ್ತಿಗಳ ಕೇಂದ್ರ ಎಂದು ಪರಿಗಣಿಸಲಾಗಿದೆ. ದಕ್ಷಿಣಕ್ಕೆ ಎದುರಾಗಿ ನಿಖರವಾಗಿ ಮತ್ತು ಮಧ್ಯದಲ್ಲಿ ಬಾಗಿಲು, ಕಿಟಕಿಗಳನ್ನು ಇರಿಸಿದರೆ ಮನೆಯೊಳಗೆ ಉತ್ತಮ ಶಕ್ತಿ ಸಂಚಾರವಾಗುತ್ತದೆ.

ಪೂರ್ವ ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಇಲ್ಲಿ ಪ್ರವೇಶದ್ವಾರಗಳು ಸಮೃದ್ಧಿ, ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುತ್ತದೆ.

ಪಶ್ಚಿಮ ದಿಕ್ಕು ಸೂರ್ಯಾಸ್ತಮಾನವನ್ನು ಆನಂದಿಸುವ ಮನೆಮಾಲೀಕರಿಗೆ ಸೂಕ್ತವಾಗಿದೆ. ಈ ದಿಕ್ಕು ಸಂಪತ್ತು ಮತ್ತು ಸಮೃದ್ಧಿಯನ್ನು ಉತ್ತೇಜಿಸುತ್ತದೆ.

ಏನು ಮಾಡಬೇಕು?

ಮನೆಯ ಮುಖ್ಯ ಬಾಗಿಲು ಹೊಸ್ತಿಲನ್ನು ಹೊಂದಿರಬೇಕು. ಮನೆಗೆ ಸಂಪತ್ತನ್ನು ಆಕರ್ಷಿಸಲು ನಿರ್ದಿಷ್ಟ ಸಂಖ್ಯೆಯಲ್ಲಿ ಹೊಸ್ತಿಲಿನ ಎದುರು ಮೆಟ್ಟಿಲುಗಳನ್ನು ಇರಿಸಬೇಕು.

ಮುಖ್ಯ ಬಾಗಿಲು ಯಾವಾಗಲೂ ನೆಲದ ಮಟ್ಟಕ್ಕಿಂತ ಮೇಲಿರಬೇಕು. ಮಲಗುವ ಕೋಣೆಯ ಬಾಗಿಲುಗಳು ಮುಖ್ಯ ಬಾಗಿಲಿಗಿಂತ ಚಿಕ್ಕದಾಗಿರಬೇಕು. ಮುಖ್ಯ ಬಾಗಿಲನ್ನು ಮನೆಯಲ್ಲಿ ದೊಡ್ಡದಾಗಿಸಬೇಕು. ಎಲ್ಲಾ ಬಾಗಿಲುಗಳು ಪ್ರದಕ್ಷಿಣಾಕಾರವಾಗಿ ತೆರೆದಿರುವುದನ್ನು ಖಚಿತಪಡಿಸಿಕೊಳ್ಳಿ.


ಏನು ಮಾಡಬಾರದು?

ಮುಖ್ಯ ಬಾಗಿಲು ಮತ್ತು ನಿರ್ಗಮನ ಬಾಗಿಲು ಎದುರಾಗಿ ಇರಬಾರದು. ಮುಖ್ಯ ಬಾಗಿಲುಗಳು ಮನೆಯ ಆಯಾವನ್ನು ಬಿಟ್ಟು ಹೊರಗೆ ಇರಬಾರದು. ಮುಖ್ಯ ಬಾಗಿಲನ್ನು ಭೂಗತ ಟ್ಯಾಂಕ್ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳ ಕೆಳಗೆ ಇಡುವುದನ್ನು ತಪ್ಪಿಸಿ.

ಮುಖ್ಯ ಬಾಗಿಲಿನ ಮುಂದೆ ಶೂ ಅಥವಾ ಕಸವನ್ನು ಇಡಬೇಡಿ. ಮುಖ್ಯ ಬಾಗಿಲಿನ ಮುಂಭಾಗದಲ್ಲಿ ಕಂಬ, ಮರ, ತಂತಿ ಸೇರಿದಂತೆ ಅಡೆತಡೆಗಳನ್ನು ತಪ್ಪಿಸಿ.

ಬಾಗಿಲು ಅಥವಾ ನಿರ್ಗಮನ ಬಾಗಿಲಿನ ಹೊರ ಭಾಗದಲ್ಲಿ ದೇವರ ಚಿತ್ರಗಳನ್ನು ಪ್ರದರ್ಶಿಸಬೇಡಿ. ಬಾಗಿಲಿನ ವಾಸ್ತು ಪ್ರಕಾರ ಇದು ದುಃಖಕ್ಕೆ ಕಾರಣವಾಗಬಹುದು.

ಮನೆಯಲ್ಲಿ ಹೆಚ್ಚಿನ ಮಹಡಿಗಳಿದ್ದರೆ ಪ್ರತಿ ಮಹಡಿಯಲ್ಲಿ ಒಂದರ ಮೇಲೊಂದು ಬಾಗಿಲು ಹಾಕದಂತೆ ನೋಡಿಕೊಳ್ಳಿ.

Continue Reading

ಬೆಂಗಳೂರು

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ (Bengaluru Karaga) ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ

VISTARANEWS.COM


on

Bengaluru Karaga
Koo

ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Continue Reading
Advertisement
Implement the work without damaging the drinking water pipelines says ZP CEO Sadashiva Prabhu
ವಿಜಯನಗರ1 hour ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ1 hour ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ2 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ2 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ2 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20242 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ3 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ3 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ3 hours ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ13 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202414 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202415 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ21 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌