Maha Shivaratri 2024: ಶಿವರಾತ್ರಿ ಆಚರಣೆಯ ಮಹತ್ವ ಮತ್ತು ಹಿನ್ನೆಲೆ ತಿಳಿಯೋಣ… - Vistara News

ಮಹಾ ಶಿವರಾತ್ರಿ

Maha Shivaratri 2024: ಶಿವರಾತ್ರಿ ಆಚರಣೆಯ ಮಹತ್ವ ಮತ್ತು ಹಿನ್ನೆಲೆ ತಿಳಿಯೋಣ…

ಶಿವರಾತ್ರಿಯೆಂದರೆ ? (Maha Shivaratri 2024) ಹೊಸಶಕ್ತಿಯನ್ನು ಮೈಗೂಡಿಸಿಕೊಳ್ಳುವುದು ಎಂಬ ಭಾವವೂ ಇದೆ. ಮಾ.8ರಂದು ಮಹಾ ಶಿವರಾತ್ರಿ ಆಚರಣೆಗೂ ಮುನ್ನ ಈ ಹಬ್ಬದ ಕುರಿತು ಒಂದಿಷ್ಟ ಮಾಹಿತಿ ತಿಳಿಸುವ ಲೇಖನ ಇದು.

VISTARANEWS.COM


on

Maha Shivaratri 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಅಲಕಾ ಕೆ
ವರ್ಷದ ಅಷ್ಟೂ ದಿನಕ್ಕೂ ಒಂದೊಂದು ಹೆಸರಿಟ್ಟು ಹಬ್ಬ ಮಾಡುವ ದೇಶ ನಮ್ಮದು. ವರ್ಷವಿಡೀ ಸಂಭ್ರಮಿಸುತ್ತ ಬದುಕನ್ನು ಚಂದವಾಗಿರುವ ದೇಶದಲ್ಲಿ ಶಿವರಾತ್ರಿಯ ಆಚರಣೆಗೊಂದು ವಿಶೇಷ ಮಹತ್ವವಿದೆ. ತ್ರಿಮೂರ್ತಿಗಳಲ್ಲಿ ಒಬ್ಬನಾದ ಈತ ಸೃಷ್ಟಿಯಲ್ಲಿ ಸ್ಥಿತಿಯಿಂದ ಹೊರತಾದ ಎಲ್ಲವನ್ನೂ ಲಯ ಮಾಡುವವ. ಹೊಸ ಹುಟ್ಟಿಗೆ ಅವಕಾಶ ಉಂಟಾಗುವುದು ಹಳತೆಲ್ಲ ಹೋದಾಗಲೇ ತಾನೇ? ಅಂದರೆ ಹೊಸ ಹುಟ್ಟೆಂದರೆ ಹೊಸ ಶಕ್ತಿಯ ಹುಟ್ಟೂ ಹೌದು. ಶಿವರಾತ್ರಿಯೆಂದರೆ (Maha Shivaratri 2024) ಹೊಸಶಕ್ತಿಯನ್ನು ಮೈಗೂಡಿಸಿಕೊಳ್ಳುವುದು ಎಂಬ ಭಾವವೂ ಇದೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಉಪವಾಸದಿಂದ ಬೇಡದ್ದನ್ನು ಕಳೆದುಕೊಂಡು, ಜಗನ್ನಿಯಾಮಕನ ಧ್ಯಾನದಿಂದ ಹೊಸಶಕ್ತಿಯನ್ನು ಮೈಗೂಡಿಸಿಕೊಳ್ಳುವ ಕಾಲ.

Mythological background of Shivaratri

ಪೌರಾಣಿಕ ಹಿನ್ನೆಲೆ

ಈ ಆಚರಣೆಗೆ ಹಲವು ರೀತಿಯ ಪೌರಾಣಿಕ ಹಿನ್ನೆಲೆಗಳಿವೆ. ಶಿವ ಮತ್ತು ಶಕ್ತಿಯರು ಒಂದಾಗಿ ಅಖಂಡ ಶಕ್ತಿಯೊಂದು ಉದ್ಭವಿಸಿದ ದಿನವಿದು. ದೇವಾಸುರರು ಸಮುದ್ರ ಮಥನ ನಡೆಸಿದ ಕಾಲದಲ್ಲಿ, ಅಮೃತಕ್ಕಿಂತ ಮೊದಲು ವಿಷ ಹೊರಬಂತು. ಲೋಕವನ್ನು ಉಳಿಸುವುದಕ್ಕಾಗಿ ಶಿವ ಆ ವಿಷಯವನ್ನು ಕುಡಿದ. ಆ ಹಾಲಾಹಲ ಆತನ ಗಂಟಲಿನಲ್ಲಿ ನಿಲ್ಲುವಂತೆ ಮಾಡಿದಳು ಪಾರ್ವತಿ. ಇದರಿಂದ ಆತ ನೀಲಕಂಠನಾದ ಈ ಸಂದರ್ಭವನ್ನೂ ಶಿವರಾತ್ರಿಯಲ್ಲಿ ನೆನಪಿಸಲಾಗುತ್ತದೆ. ಇದಲ್ಲದೆ, ದೀರ್ಘ ತಪಸ್ಸಿನ ನಂತರ ಈಶ್ವರ ಲಿಂಗರೂಪಿಯಾಗಿ ಉದ್ಭವಿಸಿದ ಕಥಾನಕವೂ ಇದೆ. ಅದನ್ನು ಕಣ್ತುಂಬಿಕೊಳ್ಳುವುದಕ್ಕೆ ರಾತ್ರಿಯ ಜಾಗರಣೆ ಮಾಡಬೇಕೆನ್ನುವ ಪ್ರತೀತಿಯಿದೆ.

Incarnation of Ganges

ಗಂಗಾವತರಣ

ಇನ್ನೊಂದು ಹಿನ್ನೆಲೆಯೆಂದರೆ ಗಂಗಾವತರಣದ್ದು. ಭಗೀರಥನ ಪ್ರಾರ್ಥನೆಯಂತೆ ಭೂಮಿಗಿಳಿಯಲು ಭಾಗೀರಥಿ ಒಡಂಬಟ್ಟಿದ್ದರೂ, ಧರಗಿಳಿಯುವ ರೀತಿ ಹೇಗೆ ಎಂಬುದು ಬಗೆಹರಿದಿರಲಿಲ್ಲ. ಕಾರಣ, ಗಂಗೆ ತನ್ನ ಪೂರ್ಣ ಶಕ್ತಿಯನ್ವಯ ಧರೆಗೆ ಧುಮ್ಮಿಕ್ಕಿದ್ದರೆ ಲೋಕವೇ ಅಲ್ಲೋಲಕಲ್ಲೋಲ ಆಗುತ್ತಿತ್ತು. ಹಾಗಾಗಿ ಆಕೆಯನ್ನು ತನ್ನ ಜಟೆಯಲ್ಲಿ ಬಂಧಿಸಿದ ಶಿವ ಗಂಗಾಧರನಾದ. ಅಲ್ಲಿಂದ ಆಕೆ ಧಾರೆಯಾಗಿ ಭೂಮಿಗೆ ಪ್ರವಹಿಸಿದಳು ಎನ್ನುತ್ತವೆ ಪುರಾಣಗಳು. ಈ ಹಿನ್ನೆಲೆಯಲ್ಲಿ ಶಿವಲಿಂಗಕ್ಕೆ ಜಲಾಭಿಷೇಕವೂ ಶ್ರೇಷ್ಠವೇ ಎನ್ನಲಾಗುತ್ತದೆ.

ಆಚರಣೆ ಹೇಗೆ?

ಇವೆಲ್ಲ ಶಿವರಾತ್ರಿಯ ಆಚರಣೆಗಿರುವ ನಾನಾ ಹಿನ್ನೆಲೆಗಳು. ಆದರೆ ಆಚರಣೆಯನ್ನು ಹೇಗೆ ಮಾಡಬೇಕು? ಉಪವಾಸ, ಧ್ಯಾನ ಮತ್ತು ಭಜನೆ ಈ ಆಚರಣೆಯ ಮುಖ್ಯ ಅಂಗಗಳು.

ಉಪವಾಸ

ದೇಹ ಮತ್ತು ಮನಸ್ಸುಗಳ ಶುದ್ಧೀಕರಣಕ್ಕೆ ಇದು ಅತ್ಯಂತ ಮಹತ್ವದ್ದು ಎಂದು ಹೇಳಲಾಗುತ್ತದೆ. ಈಗಿನ ಭಾಷೆಯಲ್ಲಿ ಹೇಳುವುದಾದರೆ, ದೇಹ-ಮನಸ್ಸುಗಳನ್ನು ಡಿಟಾಕ್ಸ್‌ ಮಾಡುವ ಕ್ರಮವಿದು. ಆರೋಗ್ಯದ ಸಮಸ್ಯೆ ಇರುವವರಿಗೆ, ಮಕ್ಕಳಿಗೆ, ವೃದ್ಧರಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಉಪವಾಸದ ನೇಮವಿಲ್ಲ.

meditation

ಧ್ಯಾನ

ವರ್ಷವಿಡೀ ಧ್ಯಾನ-ಪೂಜೆ-ಜಪ-ತಪಗಳನ್ನು ಆಚರಿಸುವುದು ಇಂದಿನ ದಿನಗಳಲ್ಲಿ ಆಗದ ಮಾತು. ಅದಕ್ಕಾಗಿ ದಿನವೊಂದನ್ನು ಮೀಸಲಿರಿಸಿ, ಅಂದಿನ ದಿನ ಕುಂದಿಲ್ಲದಂತೆ ವ್ರತಾಚರಣೆಯಲ್ಲಿ ತೊಡಗುವುದು ಸೂಕ್ತ. ಅಂದಿನ ಧ್ಯಾನ, ಜಪದಿಂದ ವಿಶೇಷ ಶಕ್ತಿ ಸಂಚಯನವಾಗುತ್ತದೆಂಬ ನಂಬಿಕೆ ದೇಶದೆಲ್ಲೆಡೆ ಪ್ರಚಲಿತದಲ್ಲಿದೆ.

ಜಪ

ʻನಮಃ ಶಿವಾಯʼ ಎಂಬ ಪಂಚಾಕ್ಷರಿ ಮಂತ್ರದ ಜಪ ಶ್ರೇಯಸ್ಕರ ಎಂದು ಹೇಳಲಾಗುತ್ತದೆ. ಸೃಷ್ಟಿಯ ಪಂಚತತ್ವಗಳಾದ ಭೂಮಿ, ಜಲ, ಅಗ್ನಿ, ವಾಯು, ಆಕಾಶ ತತ್ವಗಳನ್ನು ಈ ಪಂಚಾಕ್ಷರಿ ಮಂತ್ರ ಸೂಚಿಸುತ್ತದೆ. ಈ ಮಂತ್ರವು ಉತ್ಪಾದಿಸುವ ಧ್ವನಿ ತರಂಗಗಳು ಮನಸ್ಸಿಗೆ ಏಕಾಗ್ರತೆ ಮತ್ತು ದೇಹಕ್ಕೆ ಚೈತನ್ಯವನ್ನು ನೀಡುತ್ತವೆ ಎಂಬ ಮಾತಿದೆ. ನಿಜ ಭಕ್ತಿಯಿಂದ ಈ ಮಂತ್ರದ ಮೂಲಕ ಶಿವನನ್ನು ಜಪಿಸಿದರೆ ಬದುಕು ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಪ್ರಾಜ್ಞರು.

Shiva Pooja

ಪೂಜೆ

ಶಿವನಿಗೆ ಬಿಲ್ವಪತ್ರೆ, ಬಿಳಿಯ ಹೂಗಳು, ಭಸ್ಮ, ವಿಭೂತಿಯಂಥ ವಸ್ತುಗಳಿಂದ ಪೂಜಿಸುವುದು ಶ್ರೇಷ್ಠ ಎನ್ನಲಾಗುತ್ತದೆ. ಸರಳವಾದ ಜಲಾಭಿಷೇಕವೂ ಮಹಾದೇವನಿಗೆ ಮೆಚ್ಚುಗೆಯೆ. ಉಳಿದಂತೆ, ಪೂಜಾ ವಿಧಾನಗಳೆಲ್ಲ ಆಯಾ ಪ್ರಾಂತ್ಯಗಳ ಆಚರಣೆ ಅಥವಾ ಅವರವರ ಭಕ್ತಿಗೆ ಬಿಟ್ಟಿದ್ದು. ಬಾಹ್ಯದ ಪೂಜಾಡಂಬರಕ್ಕಿಂತಲೂ ಆಂತರಿಕವಾದ ಶುದ್ಧ ಭಕ್ತಿಯಿಂದ ನಿವೇದಿಸಿಕೊಳ್ಳುವುದು ಮಹಾದೇವನಿಗೆ ಪ್ರಿಯವಾಗುವಂಥದ್ದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Tumkur News: ಶಿರಾದಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ

Tumkur News: ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಮಹಾಶಿವರಾತ್ರಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

VISTARANEWS.COM


on

Mahashivaratri celebration in Shira

ಶಿರಾ: ನಗರ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಮಹಾಶಿವರಾತ್ರಿಯನ್ನು (Mahashivaratri) ಶ್ರದ್ಧಾ ಭಕ್ತಿಯಿಂದ (Tumkur News) ಆಚರಿಸಲಾಯಿತು.

ಮಹಾಶಿವರಾತ್ರಿ ಅಂಗವಾಗಿ ಶಿವ ದೇವಸ್ಥಾನಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ, ವಿಶೇಷ ದೀಪೋತ್ಸವ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಬೆಳಗ್ಗೆಯಿಂದಲೇ ಭಕ್ತಾದಿಗಳು ಶಿವ ದೇವಸ್ಥಾನಗಳಿಗೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು. ನಗರದ ಶ್ರೀ ಕೊಳದಪ್ಲೇಶ್ವರ ದೇವಸ್ಥಾನ ಸೇರಿದಂತೆ ಶಿವ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ; ನೂತನ ದಾಖಲೆ ಸೃಷ್ಟಿ

ಶಿರಾದ ಶ್ರೀ ಶಂಕರ ಸಹಸ್ರ ಲಿಂಗಾರ್ಚನೆ ಸಮಿತಿಯ ವತಿಯಿಂದ ಮಹಾಶಿವರಾತ್ರಿಯ ಅಂಗವಾಗಿ ನಗರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಹಸ್ರ ಲಿಂಗಾರ್ಚನೆ ಕಾರ್ಯಕ್ರಮ ಜರುಗಿತು.

ತಾಲೂಕಿನ ಪೂಜಾರಮದ್ದನಹಳ್ಳಿಯ ಸಿದ್ಧಾರೂಢ ಶಿವಾನಂದ ಮಂದಿರದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಪಂಚವೃಕ್ಷದಡಿ ಶ್ರೀ ಪಂಚಮುಖಿ ಲಿಂಗ ಸನ್ನಿಧಿಯಲ್ಲಿ ಶಿವಪಂಚಾಕ್ಷರಿ ಜಪ, ಯಜ್ಞ ಕಾರ್ಯಕ್ರಮ ಹಾಗೂ ಭಕ್ತರಿಂದ ಜಲಾಭಿಷೇಕ ನಡೆಯಿತು.

ಇದನ್ನೂ ಒದಿ: Vinay Rajkumar: ವಿನಯ್‌ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!

ಇನ್ನು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು.

Continue Reading

ದಾವಣಗೆರೆ

Davanagere News: ಹೊನ್ನಾಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ

Davanagere News: ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಹಾಶಿವರಾತ್ರಿ ಅಂಗವಾಗಿ ಶುಕ್ರವಾರ ಶಿವ ದೇವಾಲಯಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮ ಅರ್ಚನೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

VISTARANEWS.COM


on

Mahashivaratri celebration in Honnali

ಹೊನ್ನಾಳಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಹಾಶಿವರಾತ್ರಿ (Mahashivaratri) ಅಂಗವಾಗಿ ಶುಕ್ರವಾರ ಶಿವ ದೇವಾಲಯಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮ ಅರ್ಚನೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು (Davanagere News) ನೆರವೇರಿದವು.

ಪಟ್ಟಣದ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಕಳೆದ ಒಂದು ವಾರದಿಂದ ವಿಶೇಷ ಪೂಜೆ, ಮಧ್ಯಾಹ್ನ ಮಹಾ ಮಂಗಳಾರತಿ, ಸಂಜೆ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ನೀಲಕಂಠೇಶ್ವರನ ದರ್ಶನ ಪಡೆದು ಪುನೀತರಾದರು ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಿತು. ವಿಶೇಷವಾಗಿ ಶಿವನಿಗೆ ಬಿಲ್ವ ಪತ್ರೆ, ಹೂವುಗಳನ್ನು ಅರ್ಪಿಸಿ, ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ; ನೂತನ ದಾಖಲೆ ಸೃಷ್ಟಿ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪಟ್ಟಣದ ನೀಲಕಂಠೇಶ್ವರ ದೇವರ ಸನ್ನಿಧಿಯಲ್ಲಿ ಸಹಸ್ರಲಿಂಗ ಲಿಂಗ ದೀಪೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Vinay Rajkumar: ವಿನಯ್‌ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!

ಮಹಾಶಿವರಾತ್ರಿ ಅಂಗವಾಗಿ ಶಿವದೇವಾಲಯಗಳಿಗೆ ಭಕ್ತರ ದಂಡೆ ಹರಿದು ಬಂದಿತ್ತು. ಪಟ್ಟಣದ ಶ್ರೀ ಚನ್ನಪ್ಪ ಸ್ವಾಮಿ ಹಿರೇಕಲ್ ಮಠದಲ್ಲಿರುವ ಶಿವನ ದೇವಾಲಯದಲ್ಲಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಗೆಡ್ಡೆ ರಾಮೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.

Continue Reading

ಶಿವಮೊಗ್ಗ

Shivamogga News: ಸೊರಬದಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ

Shivamogga News: ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಮಹಾಶಿವರಾತ್ರಿ ಅಂಗವಾಗಿ ಶುಕ್ರವಾರ ಶಿವ ದೇವಾಲಯಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮ ಅರ್ಚನೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

VISTARANEWS.COM


on

Mahashivaratri celebration in soraba

ಸೊರಬ: ಪಟ್ಟಣ ಸೇರಿ ತಾಲೂಕಿನಾದ್ಯಂತ ಮಹಾಶಿವರಾತ್ರಿ (Mahashivaratri) ಅಂಗವಾಗಿ ಶುಕ್ರವಾರ ಶಿವ ದೇವಾಲಯಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮ ಅರ್ಚನೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು (Shivamogga News) ನೆರವೇರಿದವು.

ಪಟ್ಟಣದ ದಂಡಾವತಿ ನದಿ ದಂಡೆಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಕಳೆದ ಒಂದು ವಾರದಿಂದ ಶಿವಪಂಚಾಕ್ಷರಿ ಜಪ ನಡೆಯುತ್ತಿದ್ದು, ಇಂದು ಶಿವಪಂಚಾಕ್ಷರಿ ಹವನ ಮತ್ತು ಚಂದ್ರಮೌಳೇಶ್ವರ ಸ್ವಾಮಿಗೆ ಸುಮಾರು 14 ಜನ ಪುರೋಹಿತರಿಂದ ಶತರುದ್ರಾಭಿಷೇಕ ಹಾಗೂ ವಿಶೇಷ ಪೂಜೆ, ಮಧ್ಯಾಹ್ನ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಿತು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನ ಸಮೀಪದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಉಮಾಮಹೇಶ್ವರ ಭಾವೆ ಫೌಂಡೇಷನ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಶ್ರೀ ದೇವರಿಗೆ ವಿಶೇಷ ಪೂಜೆ, ರುದ್ರಾಭಿಷೇಕ ನಂತರ ಪ್ರಸಾದ ವಿತರಣೆ ನಡೆಯಿತು. ವಿಶೇಷವಾಗಿ ಶಿವನಿಗೆ ಬಿಲ್ವ ಪತ್ರೆ, ಕುಂಸಲ ಹೂವು,ಮುತ್ತುಗದ ಹೂವು, ಪಾರಿಜಾತ ಹೂವು, ಎಕ್ಕದ ಹೂವು, ಗಂಟೆ ಹೂವು, ಕಣಗಾಲ ಹೂವುಗಳನ್ನು ಅರ್ಪಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Karnataka Weather : ಇಂದಿನಿಂದ ಮಾರ್ಚ್‌ 14ರವರೆಗೆ ರಾಜ್ಯಾದ್ಯಂತ ಒಣಹವೆ ಸಾಧ್ಯತೆ

ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೂ ಸಹ ಸಾವಿರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಜತೆಗೆ ದೇವಸ್ಥಾನದ ಆವರಣದಲ್ಲಿರುವ ಶ್ರೀ ಕಾಲಭೈರವ, ಪರಶುರಾಮ, ತ್ರಿಶೂಲದ ಭೈರಪ್ಪ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಶಿವರಾತ್ರಿಯ ಅಂಗಾವಾಗಿ ಪ್ರತಿ ವರ್ಷದಂತೆ ಶ್ರೀ ರಂಗನಾಥ ದೇವಾಲಯದಲ್ಲಿ ಧಾರ್ಮಿಕ, ರಾಷ್ಟ್ರೀಯ ಹಾಗೂ ಸಾಹಿತ್ಯಿಕ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Ind vs Eng : ಗಿಲ್, ರೋಹಿತ್​ ಶತಕ, ಭಾರತಕ್ಕೆ 255 ರನ್​ ಮುನ್ನಡೆ

ಮಹಾಶಿವರಾತ್ರಿ ಅಂಗವಾಗಿ ಶಿವದೇವಾಲಯಗಳಿಗೆ ಭಕ್ತರ ದಂಡೆ ಹರಿದು ಬಂದಿತ್ತು. ನದಿ ದಂಡೆಯ ಶ್ರೀಚಂದ್ರ ಮೌಳೇಶ್ವರ ದೇವಾಲಯದಲ್ಲಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಸ್ ನಿಲ್ದಾಣ ಸಮೀಪದ ಶ್ರೀ ಕಲ್ಲೇಶ್ವರ ದೇವಸ್ಥಾನ, ಜಡೆ ಸಂಸ್ಥಾನ ಮಠ ಹಾಗೂ ಹಿರೇಮಠ, ಗೊಗ್ಗೆಹಳ್ಳಿ ಮಠ, ಬಂಕಸಾಣದ ಶ್ರೀ ಹೊಳೆಲಿಂಗೇಶ್ವರ, ಕರಡಿಗೇರಿ ಶ್ರೀ ರಾಮೇಶ್ವರ, ಉರುಗನಹಳ್ಳಿಯ ಶ್ರೀ ಕಾಳಿಂಗೇಶ್ವರ, ಕುಪ್ಪಗಡ್ಡೆ ರಾಮೇಶ್ವರ, ಆನವಟ್ಟಿ ಸಮೀಪದ ಕೋಟಿಪುರದ ಕದಂಬರ ಕಾಲದ ಶ್ರೀ ಕೈಠಭೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.

Continue Reading

ಮಹಾ ಶಿವರಾತ್ರಿ

Maha Shivaratri 2024: ಮಹೇಶ್ವರನ ಕುರಿತು ಎಷ್ಟೊಂದು ಕುತೂಹಲಕರ ಸಂಗತಿಗಳು!

Maha Shivaratri 2024 : ಯಾವುದೇ ಆಚರಣೆಗೂ ಸುತ್ತಮುತ್ತೆಲ್ಲ ಒಂದಿಷ್ಟು ಕಥೆಗಳು, ಪ್ರತೀತಿಗಳು ಹರಡಿರುತ್ತವೆ. ಸ್ಮಶಾನವಾಸಿ ಎನಿಸಿಕೊಂಡು, ಭೂತಗಣಗಳ ನಾಥ ಎನಿಸಿಕೊಳ್ಳುತ್ತಾ, ತಂಪಾದ ಹಿಮಾಲಯದಲ್ಲಿ ಉಮೆಯೊಂದಿಗೆ ಸಂಸಾರ ಮಾಡಿ, ಕೈಲಾಸನಾಥ ಎಂದೂ ಕರೆಸಿಕೊಳ್ಳುವ ಮಹಾದೇವನ ಬಗ್ಗೆಯೂ ಇಂಥದ್ದೇ ಕಥೆಗಳು ಹರಡಿಕೊಂಡಿದೆ

VISTARANEWS.COM


on

Maheshwar

ಅಲಕಾ ಕೆ

ಭಕ್ತರ ಕರೆಗೆ ಓಗೊಳ್ಳದ ದೇವರಿಲ್ಲ. ಆದರೆ ಕರೆಯುವ (Maha Shivaratri 2024) ಭಕ್ತರು ಮೌನಿಗಳಾದರೆ ಅದರಲ್ಲಿ ದೇವರ ಪಾತ್ರವಿಲ್ಲ. ಹೀಗೆ ಮಹಾದೇವನನ್ನು ಕರೆಯುವವರು, ಜಪಿಸುವವರು, ಭಜಿಸುವವರು ಅವನ ಹಲವು ರೂಪಗಳನ್ನು, ಸಾಧ್ಯತೆಗಳನ್ನು ಕಲ್ಪಿಸಿಕೊಂಡಿದ್ದಾರೆ. ಹೆಸರು ಯಾವುದೇ ಹೇಳಿದರೂ, ಉಸಿರಿನಲ್ಲಿ ದೇವನಿದ್ದರೆ ಆತನ ಕಿವಿಗಾ ಕರೆ ದೂರವಲ್ಲ. ಹೀಗೆ ಕರೆಯುವ ಮುನ್ನ, ಆ ಮಹಾದೇವನ ಬಗೆಗೊಂದಿಷ್ಟು ಭಾವಗಳು ಈ ರೀತಿಯಲ್ಲಿ ಹರಡಿಕೊಂಡಿವೆ.
ಯಾವುದೇ ಆಚರಣೆಗೂ ಸುತ್ತಮುತ್ತೆಲ್ಲ ಒಂದಿಷ್ಟು ಕಥೆಗಳು, ಪ್ರತೀತಿಗಳು ಹರಡಿರುತ್ತವೆ. ಸ್ಮಶಾನವಾಸಿ ಎನಿಸಿಕೊಂಡು, ಭೂತಗಣಗಳ ನಾಥ ಎನಿಸಿಕೊಳ್ಳುತ್ತಾ, ತಂಪಾದ ಹಿಮಾಲಯದಲ್ಲಿ ಉಮೆಯೊಂದಿಗೆ ಸಂಸಾರ ಮಾಡಿ, ಕೈಲಾಸನಾಥ ಎಂದೂ ಕರೆಸಿಕೊಳ್ಳುವ ಮಹಾದೇವನ ಬಗ್ಗೆಯೂ ಇಂಥದ್ದೇ ಕಥೆಗಳು ಹರಡಿಕೊಂಡಿದೆ. ದೇವರಾದರೂ ಸಂಸಾರಿಯಾಗಿ, ಸಂಸಾರಿಯಾದರೂ ವಿರಾಗಿಯಾಗಿ, ಭಕ್ತರಲ್ಲಿ ಅನುರಕ್ತನೂ ಆಗಿರುವ ಆತ ಲೋಕಕ್ಕೆ ನೀಡುವ ಸಂದೇಶವೇನು? ಶಿವಾರಾಧನೆಯ ಈ ಪರ್ವಕಾಲದಲ್ಲಿ ಮಹೇಶ್ವರನ ಬಗೆಗಿನ ಒಂದಿಷ್ಟು ಕುತೂಹಲಗಳನ್ನಿಲ್ಲಿ ತಣಿಸಿಕೊಳ್ಳೋಣ.

ಪರಿವರ್ತನೆ

ಈಗಿರುವ ಸಂವತ್ಸರ ಹೊರಳಿ ಮುಂಬರುವ ಹೊಸ ಸಂವತ್ಸರಕ್ಕೆ ದಾರಿ ಮಾಡುವ ಕೊಂಚ ಮೊದಲು, ಅಂದರೆ ಫಾಲ್ಗುಣ ಮಾಸದ ಅಮವಾಸ್ಯೆಯ ಮುನ್ನಾದಿನದ ಚತುರ್ದಶಿಯ ತಿಥಿಗೆ ಶಿವರಾತ್ರಿಯ ಆಚರಣೆ ನಡೆಯುತ್ತದೆ. ಹಾಗಾಗಿ ಈತ ಲಯಕ್ಕೆ ಮಾತ್ರವಲ್ಲ, ಪರಿವರ್ತನೆಗೂ ದೇವ. ಆದರೆ ಲೋಕದಲ್ಲಿ ಪರಿವರ್ತನೆ ಎನ್ನುವುದು ನಿತ್ಯನೂತನ ಎಂದಾದ್ದರಿಂದ, ನಿತ್ಯವೂ ಸ್ಮರಣೆಗೆ ಬರುವವ, ಭಕ್ತರನ್ನು ಉದ್ಧರಿಸುವವ ಈ ಲೋಕನಾಥ.

ಲಯವೆಂಬ ಬಿಡುಗಡೆ

ಕಾಲವನ್ನು ಚಕ್ರವೆಂದು ಕರೆಯಲಾಗುತ್ತದೆ. ಒಳಿತು-ಕೆಡುಕು, ಸುಖ-ಶೋಕಗಳ ಕಾಲಗಳು ಮೇಲೆ-ಕೆಳಗೆ ಉರುಳುತ್ತಲೇ ಇರುತ್ತವೆ. ಹಾಗಾಗಿ ಹೊಸತು ಸೃಷ್ಟಿಯಾಗಿ, ಇರುವುದು ನಿರ್ವಹಣೆಯಾಗಿ, ಬೇಡದ್ದು ಅಳಿಯುತ್ತಲೇ ಇರಬೇಕು. ಈ ಪ್ರಕ್ರಿಯೆಯನ್ನು ಸಾಗರದ ಉಬ್ಬರ-ಇಳಿತಕ್ಕೆ ಹೋಲಿಸುವವರೂ ಇದ್ದಾರೆ. ಕಾರಣ, ಈ ಎಲ್ಲಾ ಪ್ರಕ್ರಿಯೆಗೆ ತನ್ನದೇ ಆದ ವಿಶಿಷ್ಟವಾದ ಲಯವೊಂದಿದೆ- ನೃತ್ಯವೊಂದರ ಲಯದಂತೆ. ನಟರಾಜನ ಹೆಜ್ಜೆಯ ರಿಂಗಣದಂತೆ, ಕಾಲಚಕ್ರದ ಗತಿಯೂ ಲಯಬದ್ಧವಾದುದು ಎಂಬ ಕಲ್ಪನೆಯಿದೆ. ಇದೇ ಹಿನ್ನೆಲೆಯಲ್ಲಿ ನೋಡಿದಾಗ, ಪ್ರಳಯ ಶಿವನ ತಾಂಡವಕ್ಕೆ ಬಹಳಷ್ಟು ಹೊಳಹುಗಳು ದೊರೆಯುತ್ತದೆ. ʻಲಯʼ ಎನ್ನುವ ಕ್ರಿಯೆಗೂ ವಿಶಿಷ್ಟವಾದ ಲಯವೊಂದಿರುವುದನ್ನು ಈ ತಾಂಡವದ ಮೂಲಕ ಅರಿತುಕೊಳ್ಳಬಹುದು ನಾವು.
ಆದಿಗುರು, ಆದಿಯೋಗಿ ಎನ್ನುವ ಹೆಸರುಗಳು ಮಹಾದೇವನಿಗಿವೆ. ತಪಸ್ಸು, ಧ್ಯಾನಗಳು ಆತನ ಯಾವತ್ತಿನ ಚರ್ಯೆಗಳು. ಭವಬಂಧನಗಳನ್ನು ಕಳೆಯುವುದಕ್ಕೆ ಇವೆಲ್ಲ ಮಾರ್ಗಗಳಾಗಿ ಭವಿಗಳಾದ ನಮಗೆ ಗೋಚರಿಸಿದರೆ, ನಮ್ಮಂತೆ ಹುಟ್ಟಿಲ್ಲದ ಆತ ಅಭವ. ಯೋಗ ಭಂಗಿಗಳಲ್ಲಿ, ಆದಿಯೋಗಿಯನ್ನು ಸಾಂಕೇತಿಸುವ ನಟರಾಜಾಸನಕ್ಕೆ ಅದರದ್ದೇ ಆದ ಮಹತ್ವವವಿದೆ. ಇದನ್ನು ಕ್ರಮಬದ್ಧವಾಗಿ ಮಾಡುವುದಕ್ಕೆ ದೇಹ-ಮನಸ್ಸುಗಳಲ್ಲಿ ಅತಿ ಹೆಚ್ಚಿನ ಸಮತೋಲನವನ್ನು ಈ ಆಸನ ಬೇಡುತ್ತದೆ. ಮಾತ್ರವಲ್ಲ, ಯೋಗಾಭ್ಯಾಸಿಯಲ್ಲಿನ ಋಣಾತ್ಮಕ ಶಕ್ತಿಗಳೆಲ್ಲ ಲಯವಾಗುವಂತೆಯೂ ಮಾಡಬಲ್ಲ ಭಂಗಿಯಿದು. ಹಾಗಾಗಿ ಮಹಾಶಿವರಾತ್ರಿಯಲ್ಲಿ ಪರಶಿವನ ತಾಂಡವವನ್ನೂ ನೆನಪಿಸಿಕೊಳ್ಳಲಾಗುತ್ತದೆ. ಮಹಾದೇವನ ಸ್ಮರಣೆಯ ಮೂಲಕ ಹಳೆಯದು, ಬೇಡದ್ದೆಲ್ಲ ಲಯವಾಗಿ ಹೊಸ ಪರಿವರ್ತನೆಗೆ ನಾಂದಿಯಾಗಲಿ ಎನ್ನುವ ಮಹೋನ್ನತ ಆಶಯವನ್ನು ಅರಿಯಬೇಕಿದೆ

ನೀಲಕಂಠ

ದೇವಾಸುರರು ಸಮುದ್ರ ಮಥನವನ್ನು ಮಾಡಿದ ಕಥೆಯನ್ನು ನಾವೆಲ್ಲರೂ ಕೇಳಿದವರೇ. ಅಮೃತವನ್ನು ಬಯಸಿ ಎಲ್ಲರೂ ನಿರೀಕ್ಷೆಯಲ್ಲಿದ್ದಾಗ ಮೊದಲಿಗೆ ಹಾಲಾಹಲ ಬಂತು. ಅದಕ್ಕೊಂದು ಸರಿಯಾದ ಅಂತ್ಯ ಕಾಣಿಸದಿದ್ದರೆ ಲೋಕವನ್ನೆಲ್ಲ ಆ ವಿಷ ನಾಶ ಮಾಡುವ ಭೀತಿ ಎದುರಾಯಿತು. ದೇವತೆಗಳು ಜಗದೀಶ್ವರನ ಮೊರೆ ಹೊಕ್ಕರು. ಲೋಕವನ್ನು ಕಾಪಾಡುವ ಉದ್ದೇಶದಿಂದ ಆ ಘೋರ ವಿಷವನ್ನು ಈಶ ತನ್ನ ಕಂಠದಲ್ಲಿ ಇರಿಸಿಕೊಂಡ, ಈ ಮೂಲಕ ನೀಲಕಂಠನಾದ. ಇದೇ ಹಿನ್ನೆಲೆಯಲ್ಲಿ, ಲೋಕದ ಕಷ್ಟಗಳನ್ನೆಲ್ಲ ಕಳೆಯಬಲ್ಲ ಆತನ ಮಹಿಮೆಯನ್ನು ಶಿವರಾತ್ರಿಯಲ್ಲಿ ಕೊಂಡಾಡಲಾಗುತ್ತದೆ.

ಶಿವ-ಶಕ್ತಿಯ ಸಂಯೋಗ

ಒಂದಾನೊಂದು ಕಾಲದಲ್ಲಿ ಲೋಕಕಂಟಕನಾಗಿದ್ದ ತಾರಕ ಎಂಬ ಅಸುರನ ಸಂಹಾರಕ್ಕಾಗಿ ಲೋಕವೇ ನಿರೀಕ್ಷಿಸುತ್ತಿತ್ತು. ಆದರೆ ಆತನ ಮೃತ್ಯು ಶಿವ-ಪಾರ್ವತಿಯ ಸಂತಾನದಿಂದಲೇ ಎಂಬುದು ವಿಧಿ ಲಿಖಿತವಾಗಿತ್ತು. ಆದರೆ ದಾಕ್ಷಾಯಿಣಿಯನ್ನು ಕಳೆದುಕೊಂಡ ಶೋಕದಲ್ಲಿದ್ದ ಶಿವ, ಲೋಕದ ಪರಿವೆಯಿಲ್ಲದಂತೆ ಘೋರ ತಪಸ್ಸಿನಲ್ಲಿ ತೊಡಗಿಕೊಂಡಿದ್ದ. ಹಾಗಿದ್ದ ಮೇಲೆ, ಪರ್ವತ ರಾಜನ ಮಗಳಾಗಿ ಶಿವನಿಗಾಗಿಯೇ ಹುಟ್ಟಿದ್ದ ಪಾರ್ವತಿಯನ್ನು ಆತ ವರಿಸುವುದು ಹೇಗೆ? ಶಿವನ ಮನಸ್ಸನ್ನು ಪರಿವರ್ತಿಸುವುದಕ್ಕೆ ಮನ್ಮಥ ಬಾಣಗಳನ್ನು ಹೂಡಿದ. ತನ್ನ ತಪೋಭಂಗವಾಗಿದ್ದಕ್ಕೆ ಕುಪಿತನಾದ ಶಿವ, ಮೂರನೇ ಕಣ್ಣಿನಿಂದ ಕಾಮನನ್ನು ದಹಿಸಿಬಿಟ್ಟ. ಇದ್ಯಾವುದಕ್ಕೂ ವಿಚಲಿತಳಾಗದ ಪಾರ್ವತಿ ತನ್ನ ಭಕ್ತಿಯಿಂದಲೇ ಶಿವನನ್ನು ಒಲಿಸಿಕೊಂಡಳು. ಇವರಿಬ್ಬರ ವಿವಾಹದಿಂದ ಜನಿಸಿದ ಸ್ಕಂದ ಅಥವಾ ಕಾರ್ತಿಕೇಯನಿಂದಲೇ ತಾರಕಾಸುವ ಹತನಾದ. ಆವರೆಗೆ ಖಂಡ ಶಕ್ತಿಯಾಗಿದ್ದ ಶಿವ-ಪಾರ್ವತಿಯರು, ಒಂದಾಗಿ ಅಖಂಡ ಶಕ್ತಿಯಾದ ಹಿನ್ನೆಲೆಯೂ ಶಿವರಾತ್ರಿಗಿದೆ.

Continue Reading
Advertisement
ನೀಟ್ 2026 ಪರೀಕ್ಷೆ
Latest9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest11 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest2 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌