Mahalaya 2022 | ಮನೆಯಲ್ಲಿಯೇ ಪಿತೃತರ್ಪಣ ನೀಡಬಹುದೇ? ಗಯಾ ಶ್ರಾದ್ಧ ಮಾಡಿದ್ದರೂ ಶ್ರಾದ್ಧ ಮಾಡಬೇಕೆ? - Vistara News

ಧಾರ್ಮಿಕ

Mahalaya 2022 | ಮನೆಯಲ್ಲಿಯೇ ಪಿತೃತರ್ಪಣ ನೀಡಬಹುದೇ? ಗಯಾ ಶ್ರಾದ್ಧ ಮಾಡಿದ್ದರೂ ಶ್ರಾದ್ಧ ಮಾಡಬೇಕೆ?

ಮಹಾಲಯ ಅಮಾವಾಸ್ಯೆಯಂದು (Mahalaya 2022) ಶ್ರದ್ಧಾದ ಆಚರಣೆ ಹೇಗೆ? ಮಹಾಲಯದಲ್ಲಿ ಮಧುವನ್ನು ಹೇಗೆ ಸಮರ್ಪಿಸುವುದು ಎಂಬ ಮಾಹಿತಿ ಇಲ್ಲಿದೆ. ಇದು ಪಿತೃಕಾರ್ಯಗಳ ಮಹತ್ವವನ್ನು ತಿಳಿಸುವ ಲೇಖನ ಮಾಲಿಕೆಯ ಕೊನೆಯ ಭಾಗ.

VISTARANEWS.COM


on

Mahalaya 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Mahalaya 2022

ಶ್ರೀ ಶ್ರೀ ರಂಗಪ್ರಿಯ ಶ್ರೀ ಶ್ರೀಃ
ಮಹಾಲಯ ಅಮಾವಾಸ್ಯೆ (Mahalaya 2022) ಬಂದಿದೆ. ಈ ಸಂದರ್ಭದಲ್ಲಿ ಪಿತೃದೇವತೆಗಳ ಪೂಜೆಯನ್ನು ವಿಶೇಷವಾಗಿ ಮಾಡಲಾಗುತ್ತದೆ. ಪಿತೃದೇವತೆಗಳಿಗೆ ಪ್ರಿಯವಾಗಿರುವ ಪದಾರ್ಥಗಳಾದ ಜೇನುತುಪ್ಪ, ಎಳ್ಳು, ತಣ್ಣಗಿರುವ ನೀರು, ಇವುಗಳಿಂದ ತರ್ಪಣವನ್ನು ನೀಡುತ್ತಾರೆ. ಕೆಲವರು ವಿಶೇಷವಾಗಿ ಶ್ರಾದ್ಧಾವನ್ನೂ ಮಾಡುತ್ತಾರೆ. ಮಹಾಲಯದಲ್ಲಿ ಉಳಿದ ಅಮಾವಾಸ್ಯೆ, ಸಂಕ್ರಮಣ ತರ್ಪಣಕ್ಕಿಂತಲೂ ವಿಶೇಷವಾದ ತರ್ಪಣ ಇದೆ. ಇಲ್ಲಿ ಬರುವ ಪಿತೃದೇವತೆಗಳೂ, ಅಮಾವಾಸ್ಯೆಯಲ್ಲಿ ಬರುವ ಪಿತೃದೇವತೆಗಳೂ ಬೇರೆ ಬೇರೆ. ಇಲ್ಲಿರುವ ವಿಶ್ವೇದೇವರುಗಳೂ ಕೂಡ ಬೇರೆ ಬೇರೆ. 

ಈ ಹಬ್ಬದ ವಿಶೇಷತೆ, ಮಹತ್ವವನ್ನು ತಿಳಿಸುವ ಪ್ರಶ್ನೋತ್ತರ ಮಾದರಿಯ ಲೇಖನ ಮಾಲಿಕೆಯ ಕೊನೆಯ ಭಾಗ ಇಲ್ಲಿದೆ.

ಮಹಾಲಯ ಶ್ರಾದ್ಧವನ್ನು ವಾರ್ಷಿಕ ಶ್ರಾದ್ಧದಂತೆ ಮಾಡಬಹುದೇ?
ಉತ್ತರ : ಇದರಲ್ಲಿ ಮಹಾಲಯ ತರ್ಪಣವನ್ನು, ಸಾಂವತ್ಸರಿಕ ಶ್ರಾದ್ಧ ಮಾಡುವಂತೆಯೇ ಪೂರ್ತಿ ಮಾಡುವವರಿದ್ದಾರೆ. ಉತ್ತಮ ಕಲ್ಪ ಅದು. ಕಾರುಣ್ಯ ಪಿತೃಗಳನ್ನು ವರಣ ಮಾಡಿ ಅವರನ್ನು ಪೂಜಿಸಿ ನಂತರದಲ್ಲಿ ಬ್ರಹ್ಮ ಭೋಜನವನ್ನು ಮಾಡಿಸತಕ್ಕದ್ದು ಉತ್ತಮ ಕಲ್ಪ. ಅದು ಕಷ್ಟವಾಗುತ್ತದೆಯೆಂದು ಸಂಕ್ಷೇಪ ಮಾಡಿ ಆ ಮಹಾಲಯ ಶ್ರಾದ್ಧವನ್ನು ಪಿತೃತರ್ಪಣ ರೂಪದಲ್ಲಿ ಮಾಡಿ ಸತ್ಪಾತ್ರರನ್ನು ಕರೆದು ಬ್ರಾಹ್ಮಣ ಭೋಜನವನ್ನು ಮಾಡಿಸುವುದು ಅಥವಾ ಆಮಶ್ರಾದ್ಧ ಮಾಡಿ ಅವರಿಗೆ ಆಮ ಪದಾರ್ಥಗಳನ್ನು ದಾನ ಮಾಡುವುದು. ಇದೆಲ್ಲಾ ರೂಢಿಯಲ್ಲಿದೆ. ಇಷ್ಟೆಲ್ಲಾ ಮಾಡುವುದಕ್ಕಾಗದೆ ಇರುವವರು ಬಹು ಮಟ್ಟಿಗೆ ತರ್ಪಣ ಕೊಟ್ಟು, ಭೋಜನ ಮಾಡಿಸಿ ದಕ್ಷಿಣೆ ಕೊಡುತ್ತಾರೆ. ಅನುಕೂಲ ಇದ್ದರೆ ಶ್ರಾದ್ಧದಂತೆಯೇ ಎಲ್ಲವನ್ನೂ ಮಾಡಬಹುದು.

ಶ್ರಾದ್ಧವನ್ನು ಎಷ್ಟು ದಿನಗಳು ಮಾಡಬೇಕು?
ಉತ್ತರ : ೧೫ ದಿನ ಪೂರ್ತಿ ಮಾಡಬೇಕು. ಅಷ್ಟೂ ಮಹಾಲಯವೇ. ಆ ೧೫ ದಿವಸ ಆಗದಿದ್ದಲ್ಲಿ, ಮೊದಲನೇ ೪ ದಿನ ಬಿಟ್ಟು ಪಂಚಮ್ಯಾದಿ, ಎಂದರೆ ೫ನೇ ದಿನದಿಂದ ಅಮಾವಾಸ್ಯೆ ಪೂರ್ತಿ ಮಾಡಬೇಕು. ಆ ಮೊದಲನೇ ೪ ದಿವಸ ಏಕೆ ಬಿಡುತ್ತಾರೆಂದರೆ, ಮೊದಲನೇ ೪ ದಿನದಲ್ಲಿ ಆ ಹಿಂದಿನ ತಿಂಗಳ ಅಂಶ ಸ್ವಲ್ಪ ಸೇರಿಕೊಂಡಿರುತ್ತದೆ. ಆಷಾಢ ಮಾಸಕ್ಕೆ ಹಿಂದಿನ ಮಾಸ ಯಾವುದು ಇದೆಯೋ ಅದರ ಧರ್ಮವೇ ಮೊದಲ ೪ ದಿನ ಇರುತ್ತದೆಂದು. ಪಂಚಮ್ಯಾದಿ ಅಗದೆ ಹೋದರೆ, ಅಷ್ಟಮ್ಯಾದಿ ಮಾಡಿ, ಅದೂ ಇಲ್ಲದೆ ಇದ್ದರೆ ತ್ರಯೋದಶಿಯಿಂದ ೩ ದಿವಸ ಮಾಡಿ. ಅಷ್ಟು ದಿವಸವೂ ಮಾಡಲಾಗದಿದ್ದಲ್ಲಿ ಒಂದು ದಿವಸವಾದರೂ ಸಕೃತ್ ಮಹಾಲಯ ಶ್ರಾದ್ಧ ಎಂದು ಮಾಡಬೇಕು. ಸಕೃತ್, ಒಂದೇ ದಿವಸ ಮಾಡುತ್ತೇನೆ, ಜಾಸ್ತಿ ಮಾಡುವುದಕ್ಕೆ ಆಗುವುದಿಲ್ಲ ಎಂದರೆ, ಆವಾಗ ನಿಯಮಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಆ ಪಕ್ಷದಲ್ಲಿ ಒಂದೇ ದಿನ ಮಾಡುವುದಾಗಿದ್ದರೆ, ಅವನ ಮನೆಯ ಶ್ರಾದ್ಧದ ತಿಥಿ ಜ್ಞಾಪಿಸಿಕೊಳ್ಳಬೇಕು. ಅವನ ತಂದೆ ಅಥವಾ ತಾಯಿಯದು, ತಾತನದು, ಮುತ್ತಾತನದು ಯಾರಾದರೂ ಮೃತರಾದ ತಿಥಿ ಆ ಮಹಾಲಯ ಪಕ್ಷದಲ್ಲಿ ಯಾವ ದಿನ ಬರುತ್ತದೆಯೋ ಆ ದಿನ ಆಚರಿಸಬೇಕು. ಕೆಲವು ವಿಶೇಷ ಸನ್ನಿವೇಶಗಳಲ್ಲಿ ಮಹಾವ್ಯತೀಪಾತ ಮಹಾಭರಣಿ, ಗಜಪ್ರಾಯ ಯೋಗ ಎಂದು ಬರುತ್ತದೆ, ಮಹಾಲಯ ಪಕ್ಷದಲ್ಲಿ. ಅಂತಹ ದಿವಸಗಳಲ್ಲಿ ಬೇರೆ ಯಾವುದನ್ನೂ ನೋಡದೆ ಮಾಡಬಹುದು. ತ್ರಯೋದಶಿ ದಿನ ಮಹಾನಕ್ಷತ್ರ ಸೇರಿಕೊಂಡರೆ ಆ ದಿನ ಮಾಡಬಾರದು. ಈ ನಿಯಮಗಳೆಲ್ಲಾ ಒಂದೇ ಒಂದು ದಿವಸ ಮಾಡುವವರಿಗೆ. ಹೇಗಾದರೂ ಮಹಾಲಯ ಪಕ್ಷದಲ್ಲಿ ಒಂದು ದಿವಸವಾದರೂ ಮಾಡಿ.

ಈ ಕನ್ಯಾಗತ ಸವಿತರಿ ನಿಜವಾಗಿದ್ದರೂ ಆಷಾಢಾದಿ ಪಂಚಮ್ಯಾದಿ ಬಂದರೂ ಕೂಡ ಅದು ಮಲಮಾಸವಾಗಿದ್ದರೆ, ಆಗ ಮಹಾಲಯ ಮಾಡಬಾರದು. ಶುದ್ಧ ಮಾಸದಲ್ಲೇ ಮಾಡಬೇಕು. ಮತ್ತು ಮಹಾಲಯಪಕ್ಷದಲ್ಲಿ ತಂದೆಯ ಪ್ರತ್ಯಾಬ್ದಿಕಶ್ರಾದ್ಧ ಎಂದರೆ ಆ ಶ್ರಾದ್ಧವನ್ನು ಮುಂದಿಟ್ಟುಕೊಂಡು ಮಹಾಲಯ ತರ್ಪಣ ಮಾಡಬಾರದು. ಅಂದರೆ ೧೫ ದಿನಗಳಲ್ಲಿ ಒಂದು ಪಕ್ಷ ೧೪ನೇ ದಿನ ತಂದೆಯ ವಾರ್ಷಿಕಶ್ರಾದ್ಧ ಬಂದಾಗ, ಮುಂದೆ ಸಾಂವತ್ಸರಿಕಶ್ರಾದ್ಧ ಇರುವುದರಿಂದ ಮಹಾಲಯಶ್ರಾದ್ಧ cancelled.

ಇಲ್ಲಿ ಮುಂದೆಂದಿಗೂ ಇಲ್ಲವೆಂದರ್ಥವಲ್ಲ. ಅವನು ಅದನ್ನು ಮುಂದಿನ ತಿಂಗಳು ಮಾಡಬೇಕು. ಈ ಪಕ್ಷದಲ್ಲಿಲ್ಲ. ಮುಂದಿನ ಪಕ್ಷದಲ್ಲಿ. ವೃಶ್ಚಿಕ ಮಾಸದವರೆಗೂ ಅವನಿಗೆ ಅವಕಾಶವಿದೆ. ಆ ವೃಶ್ಚಿಕ ಮಾಸದವರೆಗೂ ತರ್ಪಣ ಮಾಡದೆಹೋದರೆ “ವೃಶ್ಚಿಕೇ ಸಮನು ಪ್ರಾಪ್ತೇ ನಿರಾಶಾಃ ಪಿತರೋಗತಾಃ” ವೃಶ್ಚಿಕ ಮಾಸದವರೆಗೂ ಕಾದು, ಮಾಡದೆ ಇದ್ದರೆ ನಿರಾಶರಾಗಿ ಶಾಪವನ್ನು ಕೊಟ್ಟು ಹೊರಟು ಹೋಗುತ್ತಾರೆ. ತೊಂದರೆಗಳಿಂದ ಮಾಡದಿದ್ದ ಪಕ್ಷದಲ್ಲಿ ಅದನ್ನು ಮುಂದಿನ ತಿಂಗಳ ವೃಶ್ಚಿಕ ಮಾಸದವರೆಗೂ ಅಪರಪಕ್ಷ ಮಹಾಪಕ್ಷ ಮಾಡುವುದಕ್ಕೆ ಅವಕಾಶವಿದೆ.

Mahalaya 2022

ಪ್ರತಿ ಅಮಾವಾಸ್ಯೆ ತರ್ಪಣ ಮಾಡಿದ ಬಳಿಕ ಈ ಮಹಾಲಯ ತರ್ಪಣವನ್ನೂ ಮಾಡಬೇಕೆ?
ಉತ್ತರ : ಪ್ರತಿ ಅಮಾವಾಸ್ಯೆ ತರ್ಪಣ ಎಂದರೆ ನಿತ್ಯಕರ್ಮ ಮಾಡಿದ ಮೇಲೆ ಮಹಾಲಯ ಅಮಾವಾಸ್ಯೆ ತರ್ಪಣ ಮಾಡಬೇಕು. ಒಂದು ಪಕ್ಷ ಸಕೃತ್ ಮಹಾಲಯ ಹಿಂದೆ ಮಾಡಿಬಿಟ್ಟಿದ್ದರೆ ಅಂದು ಸಾಧಾರಣ ಹೇಗೋ ಹಾಗೆ ಅಮಾವಾಸ್ಯೆ ಮಾಡಬೇಕು. ಉತ್ತರಭಾರತದಲ್ಲಿ ಮಹಾಲಯ ತರ್ಪಣವನ್ನು ಪಿತೃಮೋಕ್ಷಧಾಮ ಎಂದು ಕರೆಯುತ್ತಾರೆ. ಗಯಾ ಕ್ಷೇತ್ರ ಬಹಳ ಪವಿತ್ರವಾದದ್ದು. ಅಲ್ಲಿ ಯಾವಾಗ ಬೇಕಾದರೂ ಶ್ರಾದ್ಧವನ್ನು ಆಚರಿಸಬಹುದು.

ಪಿತೃ, ಮಾತೃ ಬೇರೆ ಬೇರೆ ತಿಥಿಯಲ್ಲಿ ಮರಣ ಹೊಂದಿದ್ದಾಗ ಯಾವುದನ್ನು ಆಚರಿಸಬೇಕು?
ಉತ್ತರ : ಯಾವುದನ್ನಾದರೂ ಆರಿಸಿಕೊಳ್ಳಬಹುದು. ಎಲ್ಲಾ ಪಿತೃಗಳನ್ನೂ ಸೇರಿಸಿಯೇ ತರ್ಪಣ ಕೊಡಬೇಕಾಗುತ್ತದೆ.

ಪಿತೃಷಟ್ಕ, ಮಾತೃಷಟ್ಕಗಳು ಯಾವುವು?
ಉತ್ತರ : ಅವು ಯಾವುದೆಂದರೆ, ಪ್ರತಿ ಅಮಾವಾಸ್ಯೆಯಲ್ಲಿಯೂ ಪಿತೃಷಟ್ಕಂ ೬ ಜನ, ಎಂದರೆ ಪಿತೃ, ಪಿತಾಮಹ, ಪ್ರಪಿತಾಮಹ ಮತ್ತು ಅವರ ಪತ್ನಿಯರು. ಅದೇ ತರಹ ಮಾತೃ ಷಟ್ಕಂ ಎಂದರೆ ಮಾತೃವರ್ಗಕ್ಕೆ ಸೇರಿದ ಮಾತಾಮಹ, ಮಾತುಃ ಪಿತಾಮಹ, ಮಾತುಃ ಪ್ರಪಿತಾಮಹ ಮತ್ತು ಅವರ ಪತ್ನಿಯರು. ಎಂದರೆ ಒಟ್ಟು ೧೨ ಜನ.

ಸಂನ್ಯಾಸಿಗೆ ಶ್ರಾದ್ಧವನ್ನು ಮಾಡುವುದುಂಟೇ?
ಉತ್ತರ: ದ್ವಾದಶಿ ದಿವಸ ಸಂನ್ಯಾಸಿಯನ್ನು ಕುರಿತು ಶ್ರಾದ್ಧ ಮಾಡುವುದು. ಸಂನ್ಯಾಸಿಗೆ ಯಾವುದೂ ಅನ್ವಯಿಸುವುದಿಲ್ಲ. ಎಲ್ಲವನ್ನೂ ಮೀರಿ ಹೋದವನು. ಆದರೆ ವಿವಾಹದ ನಂತರ ಸಂನ್ಯಾಸವನ್ನು ತೆಗೆದುಕೊಂಡಿದ್ದರೆ, ಅವನ ಪೂರ್ವಾಶ್ರಮದ ಪುತ್ರ, ಬ್ರಹ್ಮೀಭೂತ ಪಿತೃ ಎಂದು ತನ್ನ ತಂದೆಯನ್ನು ಕುರಿತು ಶ್ರಾದ್ಧ ಮಾಡತಕ್ಕದ್ದು. ಮಗನಾದ ಅವನಿಗೆ ಶ್ರೇಯಸ್ಸು. ಇನ್ನೊಂದು ಮುಖ್ಯವಾದ ವಿಷಯವೇನೆಂದರೆ, ಅವರ ಪೂರ್ವಾಶ್ರಮದ ಸಂನ್ಯಾಸಿ ಬದುಕಿದ್ದರೆ ಅವರು ಯಾರನ್ನು ಕುರಿತು ತರ್ಪಣ ಮಾಡುತ್ತಿದ್ದರೋ ಅವರನ್ನೂ ಪುತ್ರ, ತಾವು ಮಾಡುವ ತರ್ಪಣದ ಜೊತೆಗೆ ಸೇರಿಸಿ ಮಾಡಬೇಕು. ಸಂನ್ಯಾಸಿಗೆ ಯಾವ ಅಪೇಕ್ಷೆಯೂ ಇಲ್ಲ ಬ್ರಹ್ಮೀಭೂತನಾದ ಬಳಿಕ. ಆದರೆ ಅವನ ಅಂಶ ಅವನ ಮಗನಲ್ಲಿ ಇರುವುದರಿಂದ ಅವನನ್ನು ಕುರಿತು ಕೃತಜ್ಞತೆಯಿಂದ ಮಾಡುವುದು.

ಗಯಾ ಶ್ರಾದ್ಧ ಮಾಡಿದ ಬಳಿಕ ಮತ್ತೆ ಶ್ರಾದ್ಧ ಮಾಡುವ ಅವಶ್ಯಕತೆ ಇಲ್ಲ ಎಂಬ ಪ್ರತೀತಿ ಇದೆ. ಆದರೆ ಶಾಸ್ತ್ರಗಳು ಏನು ಹೇಳುತ್ತವೆ?
ಉತ್ತರ : ಈ ವಿಷಯ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು- ಮಹಾಧರ್ಮಿಷ್ಠರು, ಶಾಸ್ತ್ರಗಳಲ್ಲಿ ನಿಷ್ಣಾತರಾದವರು. ಅವರು ಗಯಾಶ್ರಾದ್ಧ ಮಾಡಿದ ನಂತರ ಮುಂದೆ ಶ್ರಾದ್ಧ ಮಾಡಬೇಕೇ, ಬೇಡವೇ ಎನ್ನುವ ದ್ವಂದ್ವ ಬಂದಿತು. ಈ ವಿಷಯದಲ್ಲಿ ಪರಿಪೂರ್ಣ ಜ್ಞಾನವಿರುವವರ ಬಳಿ ಸತ್ಯಾರ್ಥವನ್ನು ತಿಳಿದು ಕೊನೆಗೆ ಶ್ರಾದ್ಧ ಮಾಡಲೇ ಬೇಕೆಂದು ತೀರ್ಮಾನಿಸಿದರು.

ಗಯಾಶ್ರಾದ್ಧ ಮಾಡುವುದು ಪಿತೃಗಳು ಏನಾದರೂ ದುರ್ಗತಿ ಹೊಂದಿದ್ದರೆ ಸದ್ಗತಿ ಉಂಟು ಮಾಡುವುದ ಕ್ಕೋಸ್ಕರವಾಗಿ. ಸಾಂವತ್ಸರಿಕ ಶ್ರಾದ್ಧ ಮಾಡುವುದು ಕರ್ತೃವಿನ ಏಳಿಗೆಗೆ. ಎರಡೂ ಮಾಡಬೇಕು. ಹೊಟ್ಟೆಯಲ್ಲಿ ಹುಟ್ಟಿದ ಮಾತ್ರಕ್ಕೆ ಪುತ್ರನಾಗುವುದಿಲ್ಲ. ಪುತ್ರ ಎಂದರೆ ’ಜೀವತೋರ್ವಾಕ್ಯಕರಣಾತ್’ ಎಂದರೆ ತಂದೆ ತಾಯಿಗಳ ಜೀವಿತ ಕಾಲಪೂರ್ತಿ, ವಿಧೇಯನಾಗಿದ್ದು, ಚೆನ್ನಾಗಿ ನೋಡಿಕೊಂಡು, ಅವರ ಮಾತನ್ನು ನಡೆಸಿಕೊಡಬೇಕು. “ಗಯಾಯಾಂ ಪಿಂಡದಾನಾತ್” ಅವರ ಮೃತ್ಯುವಿನ ಅನಂತರ ಗಯೆಯಲ್ಲಿ ಪಿಂಡಪ್ರದಾನ ಮಾಡಬೇಕು.

Mahalaya 2022
ಗಯಾದಲ್ಲಿ ಶ್ರಾದ್ಧ

ನಂತರ “ಪ್ರತ್ಯಬ್ದಂ ಭೂರಿಭೋಜನಾತ್” ಶ್ರಾದ್ಧದ ಅಂಗವಾಗಿ ಪ್ರತಿವರ್ಷ ಭೂರಿಭೋಜನ ಮಾಡಿಸ ಬೇಕು. ಇವೆಲ್ಲ ಇದ್ದರೆ “ಪುತ್ರಸ್ಯ ಪುತ್ರಃ” ಎಂದು ಹೆಸರು. ಇವನು ಮಾಡುವುದು ಪಿತೃಮುಕ್ತಿಗಾಗಿ. ಕರ್ತೃ ಅವನ ಕೃತಜ್ಞತೆಯನ್ನು ತೋರಿಸಲು. ಮೊದಲು ಪ್ರಯಾಗದಲ್ಲಿ, ನಂತರ ಗಯೆಯಲ್ಲಿ, ಕೊನೆಯಲ್ಲಿ ಬದರೀಕ್ಷೇತ್ರದಲ್ಲಿ ಶ್ರಾದ್ಧವನ್ನು ಮಾಡಬೇಕೆಂದು ಗುರುಭಗವಂತರು ಅಪ್ಪಣೆ ಕೊಡಿಸಿದ್ದರು. ಈ ಮೂರು ಕಡೆಯಲ್ಲೂ ವಿಷ್ಣು ಪಾದವಿದೆ. ಓಂ ಭೂಃ ಭುವಃ ಸುವಃ ಬದರೀ ಕ್ಷೇತ್ರದಲ್ಲಿ ಕಪಾಲಮೋಕ್ಷ. ಬ್ರಹ್ಮಕಪಾಲವಿದೆ. ಅಲ್ಲಿ ಪಿತೃಪಿಂಡವನ್ನು ಕೊಟ್ಟ ಬಳಿಕ ಬೇರೆಕಡೆ ಮಾಡಬಾರದು. ಉತ್ತಮವಾದುದು ಹೊರಟು ಹೊಯಿತು ನೊಡಿ ಅಲ್ಲಿಗೆ. ಸಾಕ್ಷಾತ್ ಶಿವನಿಗೆ ಬ್ರಹ್ಮಕಪಾಲ ಮೋಕ್ಷವಾಯಿತು, ಈ ಬದರೀಕ್ಷೇತ್ರದಲ್ಲಿ. ಬದರಿಯಲ್ಲಿ ಪಿಂಡಪ್ರದಾನ ಮಾಡುವ ರೀತಿಯೆಂದರೆ ಬದರೀ ನಾರಾಯಣನಿಗೆ ನಿವೇದನವಾಗಿರುವ ನೈವೇದ್ಯವನ್ನು ತೆಗೆದುಕೊಂಡು ಪಿಂಡಪ್ರದಾನ ಮಾಡುವುದು.

ಪಿತೃತರ್ಪಣವನ್ನು ಮನೆಯಲ್ಲಿ ಮಾಡಬಾರದೆಂದು ಹೇಳುತ್ತಾರೆ. ಏಕೆ?
ಉತ್ತರ : ಮನೆಯಲ್ಲಿ ಮಾಡದಿರುವ ರೂಢಿ ಏಕೆ ಬಂತೆಂದರೆ ಇತರರ ದೃಷ್ಟಿ ಬೀಳದಿರಲೆಂದು. ತುಳಸೀಕಟ್ಟೆ, ಭೂಮಿಯ ಹತ್ತಿರ, ಮಹಾನದಿಗಳು, ಸರೋವರಗಳು, ಬಯಲು, ಹಲಸಿನ ಮರದ ಬುಡ, ಇವೆಲ್ಲ ಪಿತೃ ದೇವತೆಗಳಿಗೆ ಬಹಳ ಪ್ರಿಯವಾದದ್ದು.

ಮಹಾಲಯದಲ್ಲಿ ಮಧುವನ್ನು ಹೇಗೆ ಸಮರ್ಪಿಸುವುದು?
ಉತ್ತರ : ಶುದ್ಧ ಮನಸ್ಸಿನಿಂದ ಎಳ್ಳು ತಣ್ಣೀರು ಅದರ ಜೊತೆಗೆ ತರ್ಪಣ ಕೊಡುವಾಗ ಮಧುವನ್ನು ಸೇರಿಸಬಹುದು. ಅದಿಲ್ಲದಿದ್ದರೆ ಬ್ರಾಹ್ಮಣರಿಗೆ ಭೋಜನ ಬಡಿಸುವಾಗ ಅವರ ಎಲೆಗೆ ಶುದ್ಧವಾದ ಜೇನುತುಪ್ಪವನ್ನು ಬಡಿಸಬೇಕು. ಹಾಗೆಯೇ ಮಧುಬ್ರಾಹ್ಮಣ ಮಂತ್ರವನ್ನು ಅಭಿಶ್ರವಣದಲ್ಲಿ ಹೇಳಬೇಕು. ಈ ಎರೆಡು ಮಧುಗಳು ಸೇರಿ ಪಿತೃಗಳಿಗೆ ತೃಪ್ತಿ ಉಂಟಾಗುತ್ತದೆ. ಪರಮಾತ್ಮನಿಗೆ ಮಧು ಎಂದು ಹೆಸರು. ಏಕೆಂದರೆ ಅವನು ಅತ್ಯಂತ ಮಧುರನಾದವನು. ಭೋಗ್ಯನಾದವನು. ಮಹನೀಯ ನಾದವನು. ಆ ಮಧುವಿನ ಜ್ಞಾಪಕಕ್ಕೋಸ್ಕರವಾಗಿ ಈ ಮಧು. ಪಿತೃದೇವತೆಗಳಿಗೆ ಪ್ರಿಯವಾದದ್ದು.

ಲೇಖಕರು: ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು,
 ಅಷ್ಟಾಂಗಯೋಗ ವಿಜ್ಞಾನಮಂದಿರಂ

ಈ ಪ್ರಶ್ನೋತ್ತರ ಲೇಖನವು ಒಟ್ಟು ಮೂರು ಭಾಗದಲ್ಲಿ ಪ್ರಕಟವಾಗಿದೆ. ಇನ್ನೆರಡು ಲೇಖನಗಳ ಲಿಂಕ್‌ ಇಲ್ಲಿದೆ.
1 . Mahalaya 2022 | ಮಹಾಲಯದ ವಿಶೇಷವೇನು? ಶ್ರಾದ್ಧಕ್ಕೆ ಪ್ರಶಸ್ತವಾದ ದಿನ ಯಾವುದು?
2 . Mahalaya 2022 | ಮಹಾಲಯದಲ್ಲಿ ತರ್ಪಣ ನೀಡುವುದು ಹೇಗೆ? ಕಾರುಣ್ಯಪಿತೃಗಳು ಎಂದರೆ ಯಾರು?

ಇದನ್ನೂ ಓದಿ | Mahalaya 2022 | ಪಿತೃಕಾರ್ಯಗಳಿಗೆ ಹೆಸರಾದ ರಾಜ್ಯದ ತೀರ್ಥಕ್ಷೇತ್ರಗಳು ಯಾವವು ಗೊತ್ತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
Mango Juice Benefits
ಆರೋಗ್ಯ58 mins ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ58 mins ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ7 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್7 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ8 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ8 hours ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202414 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ18 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು19 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌