Mahalaya 2022 | ಮಹಾಲಯದ ದಿನ ಹಿರಿಯರ ಪೂಜೆ ಹೇಗೆ? ಯಾರನ್ನೆಲ್ಲಾ ನೆನೆಯಬೇಕು? - Vistara News

ಧಾರ್ಮಿಕ

Mahalaya 2022 | ಮಹಾಲಯದ ದಿನ ಹಿರಿಯರ ಪೂಜೆ ಹೇಗೆ? ಯಾರನ್ನೆಲ್ಲಾ ನೆನೆಯಬೇಕು?

ಮಹಾಲಯ ಅಮಾವಾಸ್ಯೆಯಂದು (Mahalaya 2022) ಕೆಲವರು ಪಿತೃಗಳಿಗೆ ತರ್ಪಣ ನೀಡಿದರೆ, ಇನ್ನು ಕೆಲವರು ಹಿರಿಕರ ಹಬ್ಬ ಮಾಡುತ್ತಾರೆ. ಇವುಗಳ ಆಚರಣೆ ಹೇಗೆ? ಯಾರಿಗೆಲ್ಲಾ ತರ್ಪಣ ನೀಡಬೇಕೆಂಬ ಮಾಹಿತಿ ಇಲ್ಲಿದೆ.

VISTARANEWS.COM


on

Mahalaya 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನಮ್ಮ ಪಿತೃಗಳಿಗೆ ವರ್ಷದಲ್ಲೊಮ್ಮೆ ಕೃತಜ್ಞತೆ ಸಲ್ಲಿಸಲು ಇರುವ ಅವಕಾಶವೇ ಪಿತೃಪಕ್ಷ ಹಾಗೂ ಮಹಾಲಯ ಅಮಾವಾಸ್ಯೆ (Mahalaya 2022). ನಮ್ಮ ಇಂದಿನ ಜನ್ಮಕ್ಕೆ, ಜೀವನಕ್ಕೆ ನಮ್ಮ ಪಿತೃಗಳ ಕೊಡುಗೆ ಅಪಾರ. ಒಂದಲ್ಲಾ ಒಂದು ರೀತಿಯಲ್ಲಿ ಅವರು ನಮಗೆ ಕೊಡುಗೆ ನೀಡಿಯೇ ಇರುತ್ತಾರೆ. ಆದ್ದರಿಂದ ಅವರಿಗೆ ವರ್ಷದಲ್ಲಿ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ರೀತಿ ಕೃತಜ್ಞತೆ ಸಲ್ಲಿಸಲು ಜಾತಿ-ಧರ್ಮಗಳ ಭೇದವಿಲ್ಲ! ಪಿತೃಪಕ್ಷವು ಸರ್ವರಿಗೂ ಅನ್ವಯಿಸುವ ಆಚರಣೆಯಾಗಿದೆ.

ಪಿತೃಪಕ್ಷದಲ್ಲಿ ಅಥವಾ ಮಹಾಲಯ ಅಮಾವಾಸ್ಯೆಯಂದು ಪೂರ್ವಿಕರು ವಸು-ರುದ್ರ-ಆದಿತ್ಯ ರೂಪದಲ್ಲಿ ಬಂದು ನಮ್ಮ ಕೃತಜ್ಞತೆ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಮಹಾಲಯ ಅಮಾವಾಸ್ಯೆಗೆ (Mahalaya 2022) ಸರ್ವ ಪಿತೃ ಅಮಾವಾಸ್ಯೆ ಎಂಬ ಹೆಸರೂ ಇದೆ. ಅಂದರೆ ಎಲ್ಲ ಪಿತೃಗಳನ್ನು ಅಂದು ಪೂಜಿಸಬಹುದಾಗಿದೆ. ಕೆಲವರು ಪಿತೃಪಕ್ಷವನ್ನು “ಮಾಳಪಕ್ಷʼʼ ಎಂದೂ ಕರೆಯುತ್ತಾರೆ. ಪಿತೃಕಾರ್ಯಗಳನ್ನು ನಮ್ಮ ರಾಜ್ಯದಲ್ಲಿ “ಹಿರಿಯರ ಹಬ್ಬʼʼ ಎಂದೂ ಆಚರಿಸಲಾಗುತ್ತದೆ. ಒಂದೊಂದು ಜಾತಿ ಜನಾಂಗದವರು ಒಂದೊಂದು ರೀತಿಯಲ್ಲಿ ಈ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಉದ್ದೇಶವೂ ಒಂದೇ ಆಗಿದೆ. ಅದು ನಮ್ಮೆಲ್ಲ ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವುದು.

ಕೆಲವರು ಹಿರಿಯರ ಹಬ್ಬದಂದು ಹಿರಿಯರು ಬಹಳವಾಗಿ ಇಷ್ಟಪಡುತ್ತಿದ್ದ ಆಹಾರ, ಬಟ್ಟೆ, ಇನ್ನಿತರ ವಸ್ತುಗಳನ್ನು ವಿಶೇಷವಾಗಿ ಸಿದ್ಧಪಡಿಸಿ ಹಿರಿಕರಿಗೆ ಒಪ್ಪಿಸುತ್ತಾರೆ. ಅವರನ್ನು ತಮ್ಮದೇ ಆದ ಶೈಲಿಯಲ್ಲಿ ಉಪಚರಿಸುತ್ತಾರೆ. ಈ ನೆಪದಲ್ಲಿ ಕುಟುಂಬದವರೆಲ್ಲರೂ ಒಂದೆಡೆ ಸೇರಿ, ಪೂರ್ವಿಕರನ್ನು ನೆನಪಿಸಿಕೊಳ್ಳುತ್ತಾರೆ. ಕಿರಿಯರಿಗೆ ತಮ್ಮ ಬೇರುಗಳ ಪರಿಚಯವನ್ನು ಗೊತ್ತಿಲ್ಲದೆಯೇ ಮಾಡಿಕೊಡಲಾಗುತ್ತದೆ. ಕೆಲವರು ಮನೆಯಲ್ಲಿಯೇ ಈ ಹಬ್ಬ ಮಾಡಿದರೆ ಇನ್ನು ಕೆಲವರು ತೀರ್ಥಕ್ಷೇತ್ರಗಳಲ್ಲಿ, ನದಿ-ಸಮುದ್ರದ ತೀರಗಳಲ್ಲಿ, ತೋಟಗಳಲ್ಲಿ ಅಥವಾ ಸಮಾಧಿಯ ಬಳಿ ಮಾಡುತ್ತಾರೆ. ಪೂಜೆಯ ನಂತರ ಎಡೆಯನ್ನು ಕಾಗೆಗಳಿಗಾಗಿ ಹೊರಗಿಡುವ ಪದ್ಧತಿ ಬಹುತೇಕ ಎಲ್ಲ ಜಾತಿ-ಜನಾಂಗಗಳಲ್ಲಿಯೂ ಇದೆ.

ಮೃತಪಟ್ಟವರ ಫೋಟೊ ಇದ್ದರೆ ಅದನ್ನು ದೇವರ ಫೊಟೊದಂತೆ ಇಟ್ಟು, ಅದರ ಮುಂದೆ ಅವರು ಇಷ್ಟ ಪಡುವ ವಸ್ತುಗಳನ್ನು ಇಟ್ಟು ಪೂಜೆ ಮಾಡಲಾಗುತ್ತದೆ. ನಂತರ ಬಗೆ ಬಗೆಯ ತಿನಿಸು, ಹಣ್ಣು-ಹಂಪಲುಗಳನ್ನು ನೈವೇದ್ಯ ಮಾಡಲಾಗುತ್ತದೆ. ಕೆಲವರು ಪೂಜೆ ಮುಗಿದ ನಂತರ ಎಡೆಯನ್ನು ಮನೆಯ ಹೊರಗೆ, ಅಥವಾ ಹೊರಗೆಯೇ ಪೂಜೆ ಮಾಡಿದ್ದರೆ ಅಲ್ಲಿ ಕಾಗೆಗಳಿಗೆ ಇಡುತ್ತಾರೆ. ಕಾಗೆ ಬಂದು ಅದನ್ನು ತಿಂದ ನಂತರವೇ ಮನೆಯ ಮಂದಿ ಊಟ ಮಾಡುವ ಸಂಪ್ರದಾಯವೂ ಕೆಲವು ಕಡೆ ಇದೆ.

ಹಿರಿಕರ ಹಬ್ಬಕ್ಕೆ ಅಥವಾ ಪಿತೃತರ್ಪಣ ನೀಡುವುದಕ್ಕೆ ನಮ್ಮಲ್ಲಿ ಎಲ್ಲಿಲ್ಲದ ಮಹತ್ವ ನೀಡಿಕೊಂಡೇ ಬರಲಾಗಿದೆ. “ಮಾಳಪಕ್ಷ ಮಾಡಲು ಮನೆ ಮಗನನ್ನಾದರೂ ಮಾರುʼʼ ಎಂಬ ಗಾದೆ ಮಾತೇ ಹುಟ್ಟಿಕೊಂಡಿದೆ ಎಂದರೆ ಇದಕ್ಕಿರುವ ಮಹತ್ವ ಅರಿವಾಗುತ್ತದೆ. ಈ ಹಿರಿಕರ ಹಬ್ಬವನ್ನು ಕೆಲವರು ದೀಪಾವಳಿ, ಸಂಕ್ರಾಂತಿ ಅಥವಾ ಯುಗಾದಿಯ ಸಂದರ್ಭದಲ್ಲಿ ಮಾಡುವುದೂ ಉಂಟು.

ದ್ವಾದಶ ಪಿತೃಗಳಿಗೆ ತರ್ಪಣ
ಮಹಾಲಯ ಅಮಾವಾಸ್ಯೆಯಂದು ದ್ವಾದಶ ಪಿತೃಗಳಿಗೆ ವಿಶೇಷವಾಗಿ ತರ್ಪಣ ನೀಡಲಾಗುತ್ತದೆ. ದ್ವಾದಶ ಪಿತೃಗಳು ಎಂದರೆ ಯಾರು ಎಂಬ ಮಾಹಿತಿ ಇಲ್ಲಿದೆ;
ಪಿತೃವರ್ಗ: ಅಸ್ಮತ್‌ ಪಿತರಂ (ತಂದೆ), ಅಸ್ಮತ್‌ ಪಿತಾಮಹಂ (ತಂದೆಯ ತಂದೆ), ಅಸ್ಮತ್‌ ಪ್ರಪಿತಾಮಹಂ (ತಂದೆಯ ತಂದೆಯ ತಂದೆ)
ಮಾತೃ ವರ್ಗ: ಅಸ್ಮತ್‌ ಮಾತರಂ (ತಾಯಿ), ಅಸ್ಮತ್‌ ಪಿತಾಮಹೀಂ (ತಂದೆಯ ತಾಯಿ) ಅಸ್ಮತ್‌ ಪ್ರಪಿತಾಮಹೀಂ (ತಂದೆಯ ತಂದೆಯ ತಾಯಿ), ಅಸ್ಮತ್‌ ಸಾಪತ್ನಿ ಜನನೀ (ತಂದೆಯ ಮೊತ್ತಬ್ಬ ಹೆಂಡತಿ ಇದ್ದರೆ).
ಮಾತಾಮಹ ವರ್ಗ: ಅಸ್ಮತ್‌ ಮಾತಾಮಹಂ (ತಾಯಿಯ ತಂದೆ), ಅಸ್ಮತ್‌ ಮಾತಾ ಪಿತಾಮಹಂ (ತಾಯಿಯ ತಂದೆಯ ತಂದೆ), ಅಸ್ಮತ್‌ ಮಾತಃ ಪ್ರಪಿತಾಮಹಂ (ತಾಯಿಯ ತಂದೆಯ ತಂದೆಯ ತಂದೆ).
ಮಾತಾಮಹಿ ವರ್ಗ: ಅಸ್ಮತ್‌ ಮಾತಾಮಹೀಂ (ತಾಯಿಯ ತಾಯಿ), ಅಸ್ಮತ್‌ ಮಾತಃ ಪಿತಾಮಹೀಂ (ತಾಯಿಯ ತಂದೆಯ ತಾಯಿ), ಅಸ್ಮತ್‌ ಮಾತಾಃ ಪ್ರಪಿತಾಮಹೀಂ (ತಾಯಿಯ ತಂದೆಯ ತಂದೆಯ ತಾಯಿ)
(ಇವರುಗಳಲ್ಲಿ ಯಾರಾದರೂ ಬದುಕಿದ್ದರೆ ಅವರನ್ನು ಬಿಡಬೇಕು)

ಯಾರನ್ನೆಲ್ಲಾ ನೆನೆಯಬೇಕು?
ಮಹಾಲಯದ ಸಂದರ್ಭದಲ್ಲಿ ಕುಟುಂಬದಲ್ಲಿ ಮೃತಪಟ್ಟವರಲ್ಲಿ ಕ್ರಮವಾಗಿ ಮೊದಲು ತಂದೆ, ತಾಯಿ, ಹೆಂಡತಿ, ಅತ್ತೆ, ಮಾವ, ಮಗ, ಸಹೋದರರು, ದೊಡ್ಡಪ್ಪ, ಚಿಕ್ಕಪ್ಪ ಹಾಗೂ ಅವರ ಹೆಂಡತಿ, ತಾಯಿಯ ತಮ್ಮ ಅಥವಾ ಅಣ್ಣ, ಅವರ ಹೆಂಡತಿಯರು, ಮಗಳು, ಅಕ್ಕ, ತಂಗಿ ಹಾಗೂ ಅವರ ಮಕ್ಕಳಿಗೆ, ಭಾವ, ಮೈದುನ ಮುಂತಾದವರು ಹಾಗೂ ವಿಶೇಷವಾಗಿ ಗುರುಗಳು, ಕುಲಪುರೋಹಿತರು ಸೇರಿದಂತೆ ಯಾರು ನಮಗೆ ತಿಳಿದಂತೆ ಮೃತರಾಗಿದ್ದಾರೋ ಅವರಿಗೆಲ್ಲಾ ಕ್ರಮವಾಗಿ ತರ್ಪಣಗಳನ್ನು ಕೊಡುವ ಪದ್ಧತಿ ಇದೆ. ಕೆಲವರನ್ನು ಅವರನ್ನು ನೆನೆದು ವಿಶೇಷ ಪೂಜೆ ಮಾಡುತಾರೆ.

ತರ್ಪಣ ನೀಡುವುದು ಹೇಗೆ?
ತರ್ಪಣಗಳಲ್ಲಿ ಎರಡು ವಿಧಗಳಿವೆ. ಒಂದು ಜಲ ತರ್ಪಣ, ಇನ್ನೊಂದು ತಿಲ ತರ್ಪಣ. ಮಹಾಲಯದ ಸಂದರ್ಭದಲ್ಲಿ ಹೆಚ್ಚಾಗಿ ತಿಲ ತರ್ಪಣ ನೀಡಲಾಗುತ್ತದೆ. ತಿಲ ತರ್ಪಣ ಎಂದರೆ ಎಳ್ಳು-ನೀರು ಸೇರಿಸಿ ನೀಡುವ ತರ್ಪಣ.

Mahalaya 2022

ತಿಲ ತರ್ಪಣ ನೀಡುವಾಗ, ಮೂರು ದರ್ಭೆಗಳಿಂದ ಮಾಡಿದ ಪವಿತ್ರವನ್ನು ಬಲಗೈ ಅನಾಮಿಕ ಬೆರಳಿಗೆ (ಕಿರು ಬೆರಳಿನ ಪಕ್ಕದ ಬೆರಳು – ಉಂಗರದ ಬೆರಳು) ಹಾಕಿಕೊಳ್ಳಬೇಕು. ಅದು ಸಾಧ್ಯವಿಲ್ಲದ ಪಕ್ಷದಲ್ಲಿ ಅಂದರೆ ದರ್ಭೆ ದೊರೆಯದೇ ಇದ್ದಾಗ ಚಿನ್ನದ ಅಥವಾ ಬೆಳ್ಳಿಯ ಪವಿತ್ರದ ಉಂಗುರವನ್ನು ಧರಿಸಿಕೊಂಡು ಅಂಗೈಯಲ್ಲಿ ತುಳಸೀದಳವನ್ನಿಟ್ಟು ಕೊಂಡು ತರ್ಪಣವನ್ನು ಕೊಡಬಹುದು.

ದರ್ಭೆಯ ಪವಿತ್ರ ಇಲ್ಲದ ಪಕ್ಷದಲ್ಲಿ ಮೂರು ದರ್ಭೆಗಳನ್ನು ಅನಾಮಿಕಾ ಬೆರಳಿಗೆ ಸುತ್ತಿಕೊಂಡು ತರ್ಪಣ ಕೊಡುವ ಸಂಪ್ರದಾಯವೂ ಕೆಲವೆಡೆ ಇದೆ. ಒಂದು ವೇಳೆ ದರ್ಭೆ ಸಿಗದೇ ಇದ್ದಲ್ಲಿ ಬೆರಳುಗಳ ಮಧ್ಯದಲ್ಲಿ “ತುಳಸೀದಳ” ವನ್ನು ಸಿಕ್ಕಿಸಿ ಕೊಂಡಾದರೂ ತರ್ಪಣವನ್ನು ಕೊಡಬಹುದು.

ತರ್ಪಣ ನೀಡಿದ ನಂತರ ಅಥವಾ ಹಿರಿಯ ಪೂಜೆ ಮಾಡಿದ ನಂತರ ಕೆಲವರು ತಮ್ಮ ಕೈಯಲ್ಲಾಗಿರುವುದನ್ನು ದಾನ ನೀಡುವ ಪದ್ಧತಿಯೂ ಇದೆ. ಹಿರಿಯರು ಹೆಚ್ಚಾಗಿ ಪ್ರೀತಿಸುತ್ತಿದ್ದ ವಸ್ತುಗಳನ್ನು ತಂದು ದಾನ ಕೊಡುವ ಸಂಪ್ರದಾಯ ಹಿರಿಯರ ಹಬ್ಬದಲ್ಲಿದೆ.

ಇದನ್ನೂ ಓದಿ | Pitru Paksha | ಪಿತೃ ಪಕ್ಷ ಎಂದರೇನು? ಏಕೆ ಮತ್ತು ಹೇಗೆ ಆಚರಣೆ ಮಾಡಬೇಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

VISTARANEWS.COM


on

ಬೆಳಗಾವಿ: ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ತಿರುಪತಿಯ ಭವ್ಯ ವೆಂಕಟೇಶ್ವರ ದೇವಾಲಯದ ಮಾದರಿಯಲ್ಲೇ ಬೆಳಗಾವಿಯಲ್ಲಿಯೂ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀನಿವಾಸನ ಸನ್ನಿಧಿ ತಲೆಯೆತ್ತಲಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಹೊರವಲಯದ ಸುಮಾರು 7 ಎಕರೆ ಪ್ರದೇಶದಲ್ಲಿ ಈ ಯೋಜನೆ ಸಾಕಾರಗೊಳ್ಳಲಿದ್ದು, ಇದಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಭೂಮಿಯನ್ನು ಖರೀದಿಸಿ ಈಗಾಗಲೇ ಟಿಟಿಡಿ ಮಂಡಳಿಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಈ ಮೂಲಕ ಕುಂದಾನಗರಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಮೊದಲ ಭದ್ರ ಬುನಾದಿ ಬಿದ್ದಿದೆ.

ಈ ದೇವಾಲಯವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ವಾಸ್ತುಶಿಲ್ಪ, ಲಡ್ಡು ವಿತರಣೆ ಮತ್ತು ಭಕ್ತರ ವಾಸ್ತವ್ಯದ ಸೌಲಭ್ಯ ಸೇರಿದಂತೆ ಪ್ರತಿಯೊಂದೂ ಅಂಶದಲ್ಲೂ ಮೂಲ ತಿರುಪತಿ ಕ್ಷೇತ್ರವನ್ನೇ ಹೋಲುವಂತೆ ನಿರ್ಮಾಣವಾಗಲಿದೆ. ನೂರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಶೇ. 10ರಷ್ಟು ಹಣವನ್ನು ಮಾತ್ರ ದಾನಿಗಳಿಂದ ಸಂಗ್ರಹಿಸಿ, ಉಳಿದ ವೆಚ್ಚವನ್ನು ಟಿಟಿಡಿ ಭರಿಸಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಟಿಟಿಡಿ ಪ್ರತ್ಯೇಕ ಟ್ರಸ್ಟ್ ರಚಿಸಿ ಸ್ಥಳೀಯರನ್ನು ಒಳಗೊಳ್ಳಲಿದೆ. ಈ ದೇವಾಲಯದ ನಿರ್ಮಾಣದಿಂದ ಬೆಳಗಾವಿ ಜಿಲ್ಲೆಯಷ್ಟೇ ಅಲ್ಲದೆ, ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೂ ತಿಮ್ಮಪ್ಪನ ದರ್ಶನ ಪಡೆಯಲು ಸುಲಭವಾಗಲಿದೆ.

ನೂತನ ದೇವಾಲಯಗಳ ನಿರ್ಮಾಣಕ್ಕಾಗಿ ಟಿಟಿಡಿ ಮೀಸಲಿಟ್ಟಿರುವ ಒಂಬತ್ತು ಸಾವಿರ ಕೋಟಿ ರೂಪಾಯಿ ನಿಧಿಯಲ್ಲಿ ಬೆಳಗಾವಿ ಯೋಜನೆಯೂ ಸೇರಿದೆ. ದೇಶದ ಆರು ಪ್ರಮುಖ ಸ್ಥಳಗಳಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಟಿಟಿಡಿ, ಬೆಳಗಾವಿಯಲ್ಲಿ ಶೀಘ್ರವೇ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದೆ. ರೆಡ್ಡಿ ಸಂಘದ ಈ ಉದಾರ ಕಾರ್ಯಕ್ಕೆ ಟಿಟಿಡಿ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಬೆಳಗಾವಿ ನಗರವು ಧಾರ್ಮಿಕ ಭೂಪಟದಲ್ಲಿಯೂ ಹೊಸ ಗುರುತು ಪಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಈ ವೆಂಕಟರಮಣನ ಸನ್ನಿಧಿ ಮತ್ತಷ್ಟು ಮೆರುಗು ನೀಡಲಿದೆ.

Continue Reading

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

mysore dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಬೆಂಗಳೂರು

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌ ಆಗಿವೆ. ಸವಾರರು ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.

VISTARANEWS.COM


on

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Ayudha Puja celebrations across the karnataka state  Temples housefull by devotees

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

Ayudha Puja celebrations across the karnataka state  Temples housefull by devotees

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest7 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌