Mahavir Jayanti 2023 Special article by Hombuja bhattaraka swamijiMahavir Jayanti 2023 : ನಯನ ಪಥಗಾಮಿ ಭವತು ಮೇ - Vistara News

ಧಾರ್ಮಿಕ

Mahavir Jayanti 2023 : ನಯನ ಪಥಗಾಮಿ ಭವತು ಮೇ

ಯುದ್ಧವನ್ನು ಗೆದ್ದವನು ವೀರನಾದರೆ, ತನ್ನನ್ನು ತಾನೇ ಅಂದರೆ ಇಂದ್ರಿಯಗಳ ಮೇಲೆ ಜಯ ಸಾಧಿಸಿದವರು ಮಹಾವೀರರು. ಪ್ರಪಂಚವನ್ನು ಗೆಲ್ಲಬಹುದಾದರೂ ತನ್ನನ್ನು ತಾ ಗೆಲ್ಲುವುದು ಕಠಿಣವಾದುದು. ನಿಜವಾದ ಇಂದ್ರಿಯ ವಿಜಯ ಸಾಧ್ಯ ಎಂದು ಸಾಧಿಸಿ ತೋರಿಸಿದವರೇ ಮಹಾವೀರರು. ಇಂದು ಅವರ ಜಯಂತಿ (Mahavir Jayanti 2023 ).ತನ್ನಿಮಿತ್ತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Mahavir Jayanti 2023 History and Significance of Jain festival in India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ
ಅನಾದಿ ಕಾಲದಿಂದಲೂ ಜೈನ ಧರ್ಮವು ಸರ್ವ ಜೀವಿಗಳು ಬದುಕುವ ಕಲೆಯನ್ನು ಹೇಳುತ್ತ ಬಂದಿದೆ. ಪ್ರತಿಯೊಂದು ಪ್ರಾಣಿಯು ಸುಖವನ್ನು ಬಯಸುತ್ತದೆ. ನೆಮ್ಮದಿಯ ಬಾಳನ್ನು ಹೊಂದಲು ಪ್ರಯತ್ನಿಸುತ್ತವೆ. ಸೂಕ್ಷ್ಮಜೀವಿಯಿಂದ ಬಹುಗಾತ್ರದ ಪ್ರಾಣಿಯು ಕೂಡ ಸಂಸಾರದ ಸುಖವನ್ನು ಭೋಗಿಸಲು ಇಚ್ಚಿಸುತ್ತಾ ಕಾಲಕ್ಷೇಪ ಮಾಡುತ್ತವೆ.

ಸಂಸಾರ ಚಕ್ರದಲ್ಲಿ ಒಮ್ಮೆ ಸಿಲುಕಿದ ಪ್ರಾಣಿ ಅದರಲ್ಲಿಯೇ ಅಪ್ತವಾಗಿರಲು ಬಯಸಿದರು, ಮನುಷ್ಯ ಸಂಕಟಗಳಿಂದ ನರಳುತ್ತಾ ಇರುತ್ತಾನೆ. ದುಃಖ ಚಕ್ರದಿಂದ ಹೊರ ಬರಲು ಉಪಾಯ ಹುಡುಕುತ್ತಿರುತ್ತಾನೆ. ದಾರಿ ಕಾಣದೇ ಪರಿತಪಿಸುತ್ತಾನೆ. ದುಃಖದ ಕಾರಣ ಹುಡುಕದೇ ಸಂತೋಷವನ್ನು ಹೊಂದಲು ಸಾಧ್ಯವಾಗದು. ವಿವೇಕವುಳ್ಳ ಮನುಷ್ಯ ಪ್ರಾಣಿ ಮಾತ್ರ ಉಪಾಯಗಳನ್ನು ಹುಡುಕಿ ಸಂಸಾರ ನಿವೃತ್ತಿಯನ್ನು ಹೊಂದುತ್ತಾನೆ.

ಸಂಸಾರ ದುಃಖಗಳಿಂದ ಪಾರಾಗಲು ಕಾಲಕಾಲಕ್ಕೆ ಮಹಾಪುರುಷರು ಸಾಧನೆ ಮಾಡುವ ಮೂಲಕ ಭೋದಿಸಿ ಹೋಗಿರುತ್ತಾರೆ. ಪ್ರತಿಯೊಂದು ಜೀವಿಗೂ ಬೇಕಾಗಿರುವ ಮೌಲ್ಯಗಳನ್ನು ಸಾರಿರುತ್ತಾರೆ. ಜೈನ ಧರ್ಮದಲ್ಲಿಯೂ 24 ಜನ ತೀರ್ಥಂಕರರುಗಳು ಸಂಸಾರದ ಪ್ರಾಣಿಗಳಿಗೆ ಹಿತೋಪದೇಶವನ್ನು ನೀಡಿರುತ್ತಾರೆ. ಶ್ರೀ ವೃಷಭನಾಥರಿಂದ ಶ್ರೀ ಮಹಾವೀರವರೆಗೆ ಜೀವಿಗಳು ಸುಖವಾಗಿ ನೆಮ್ಮದಿಯಾಗಿ ಬದುಕಲು ʻಧರ್ಮ’ವೆಂಬ ತಳಹದಿಯನ್ನು ಹಾಕಿಕೊಟ್ಟಿರುತ್ತಾರೆ.

ಸರ್ವಧರ್ಮಗಳು ಇದೇ ಮಾರ್ಗವನ್ನು ತೋರಿಸಿವೆ. ಈ ಯುಗದಲ್ಲಿ ಅಂತಿಮ ತೀರ್ಥಂಕರರಾಗಿ ಅವತರಿಸಿ ಸಂಸಾರದ ಅಸಾರತೆಯನ್ನು ಸಾರಿ ಮುಕ್ತ ಮಾರ್ಗೋಪದೇಶವನ್ನು ನೀಡಿದವರು. ಭಗವಾನ್‌ ಶ್ರೀ ವರ್ಧಮಾನರು. (ಮಹಾವೀರ) ಈಗಿನ ಬಿಹಾರ ಪ್ರಾಂತ್ಯದ ಕುಂಡಲಪುರ ಗ್ರಾಮದಲ್ಲಿ (ವೈಶಾಲಿ) ಚೈತ್ರ ಶುಕ್ಲ ತ್ರಯೋದಶಿಯ ಶುಭ ದಿವಸದಂದು ಅವತರಿಸಿದರು. ಹುಟ್ಟುತ್ತಲೇ ಮತಿ, ಶ್ರುತ ಜ್ಞಾನಿಗಳ ಜೊತೆಗೆ ಅವಧಿ ಜ್ವಾನವನ್ನು ಹೊಂದಿದ್ದರಿಂದ ಸಾಮಾನ್ಯರಂತೆ ಅವರಿಗೆ ಯಾವುದೇ ಅಕ್ಷರಾಭ್ಯಾಸದ ಅಗತ್ಯತೆ ಇರಲಿಲ್ಲ.

ತೀಕ್ಷ್ಣ ಬುದ್ಧಿಯುಳ್ಳ ಅವರನ್ನು ನೋಡಿದವರ ಮತಿಯು ಶುದ್ಧವಾಗುತ್ತಿತ್ತು. ಹಾಗಾಗಿಯೇ ಅವರು ʻಸನ್ಮತಿ’ ಎನಿಸಿಕೊಂಡಿದ್ದರು. ತೀರ್ಥಂಕರ ಪ್ರಕೃತಿ ಬಂಧವಾಗಿದ್ದವರಿಗೆ ʻವಜ್ರ ವೃಷಭನಾರಾಚ ಸಂವಹನ’ (ಶರೀರ) ವಿರುತ್ತದೆ. ಅನಂತ ಶಕ್ತಿಯುಳ್ಳವರಾಗಿರುತ್ತಾರೆ. ಅವರ ಮುಂದೆ ಯಾವುದೇ ಪ್ರಾಣಿಗಳು ಯುದ್ಧ ಮಾಡಲು ಮುಂದಾಗವು. ಹಾಗಾಗಿ ವೀರ ಮಹಾವೀರರೆಂದು ಎನಿಸಿಕೊಂಡರು.

ಭಗವಾನ್‌ ಬುದ್ಧ ಮತ್ತು ಮಹಾವೀರರು ಸಮಕಾಲೀನರು. ಹಾಗೆಯೇ ಆ ಕಾಲದಲ್ಲಿನ ಸಾಮಾಜಿಕ ಹಾಗೂ ಧರ್ಮದ ಹೆಸರಿನ ಮೌಢ್ಯಗಳ ವಿರುದ್ಧ ಬೇಸತ್ತವರು. ಪರಸ್ಪರ ಮಾರ್ಗಗಳು ಒಂದೇ ಆಗದೇ ಇದ್ದರೂ ಈ ಇಬ್ಬರು ಮಹಾಪುರುಷರ ಗುರಿಯೊಂದೇ ಆಗಿತ್ತು. ಅದು ʻಮಾನವ ಕಲ್ಯಾಣ’.

ಯುವಾವಸ್ಥೆಯಲ್ಲಿಯೇ ಸಂಸಾರದ ಸಂಬಂಧಗಳನ್ನು ಕಳಚಿ, ತನ್ನಾತ್ಮ ಕಲ್ಯಾಣ ಮಾಡಿಕೊಳ್ಳುವ ಹಾಗೂ ಸನ್ಮಾರ್ಗವನ್ನು ತೋರಿಸುವ ಸಲುವಾಗಿ 30ನೇ ವಯಸ್ಸಿನಲ್ಲಿಯೇ ದೀಕ್ಷೆ (ಸನ್ಯಾಸ) ಗ್ರಹಣ ಮಾಡಿದರು.

Mahavir Jayanti 2023 History and Significance of Jain festival in India

ತಪಸನಿರ್ಜರಾಚ (ತ.ಸೂ) ಎನ್ನುವಂತೆ ಅನಂತ ಕಾಲದ ಕರ್ಮಗಳ ಬಂಧನವನ್ನು ಕಳಚಿಕೊಳ್ಳಬೇಕೆಂದರೆ ʻತಪಸ್ಸು’ ಮಾಡಲೇಬೇಕು. ಅಂತೆಯೇ ಶ್ರೀ ಮಹಾವೀರರು ಕೂಡ 12 ವರ್ಷಗಳ ಕಾಲ ಸಾಧನೆ ಮಾಡಿದರು. 42ನೇ ವಯಸ್ಸಿನಲ್ಲಿ ತಪಸ್ಸಿನ ಪ್ರತಿಫಲವಾಗಿ ʻʻಕೇವಲಜ್ಞಾನʼʼ (ಅರಿಹಂತ) ಹೊಂದಿದರು.

ಸಾಧನೆಯ ಪ್ರತಿಫಲವಾದ ದಿವ್ಯಜ್ಞಾನವನ್ನು ಹೊಂದಿದ ಮಹಾವೀರರು ʻಸಮವಸರಣ’ವೆಂಬ ಧರ್ಮಸಭೆಯ ಮೂಲಕ ಭವ್ಯ ಜೀವಿಗಳಿಗೆ ಉಪದೇಶವನ್ನು ನೀಡಿದರು. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಮೌಢ್ಯಗಳನ್ನು ಹಿಂಸೆಯನ್ನು ವಿರೋಧಿಸಿದರು. ಸಮ್ಯಕ್ತ್ಯವನ್ನು ಹೊಂದುವ ಉಪಾಯವನ್ನು ಹೇಳಿ ಮಿಥ್ಯಾತ್ವವನ್ನು ಬಿಡಿಸಲು ಪ್ರಯತ್ನಿಸಿದರು. ರಾಜಾ ಶ್ರೇಣಿಕನಂತೆ ಅನೇಕ ರಾಜರು ಮಹಾವೀರರ ಆಶ್ರಯ ಹೊಂದಿದರು. ತಮ್ಮ 72 ನೇ ವಯಸ್ಸಿನಲ್ಲಿ ಅಂತಿಮ ಕರ್ಮಗಳನ್ನು ನಿರ್ಜರೆ ಮಾಡಿ ಮೋಕ್ಷವನ್ನು ಹೊಂದುವ ಮೂಲಕ ಶಾಶ್ವತ ಸುಖವನ್ನು ಹೊಂದಿದರು.

ಧರ್ಮದ ಆಚರಣೆ ಮಾಡಲು ವಯಸ್ಸಿನ ಮಿತಿಯಿಲ್ಲ ಎಂಬ ಸಂದೇಶವನ್ನು ಮಹಾವೀರರು ತೋರಿದ್ದಾರೆ. ತಮ್ಮ ಯುವಾವಸ್ಥೆಯಲ್ಲಿಯೇ ರಾಜ್ಯ, ಸಂಪತ್ತು ಇತ್ಯಾದಿ ಸಂಸಾರದ ವ್ಯಾಮೋಹವನ್ನು ತೊರೆದು ಧರ್ಮದ ಆಶ್ರಯದಲ್ಲಿ ಮುನ್ನಡೆದರು. ಆಗಾಗ ಕೇಳಿ ಬರುವ ಮಾತಿದೆ, ಧರ್ಮಾಚರಣೆ ಏನಿದ್ದರೂ ವೃದ್ಧಾವಸ್ಥೆಯಲ್ಲಿ ಈಗೇನಿದ್ದರೂ “ಭೋಗ ಜೀವನ” ಎಂದು. ಈ ಮಾತು ಖಂಡಿತಾ ಮಿಥೈ. ಧರ್ಮಕ್ಕೆ ವೃದ್ಧಾವಸ್ಥೆಯೇ ಮಾತ್ರ ಸರಿಯಲ್ಲ. ಯಾರು ಧರ್ಮವನ್ನು ನಂಬಿ ನಡೆಯುತ್ತಾರೋ ಅವರು ಸದಾ ಮಾನಸಿಕವಾಗಿ ಯುವಕರಂತೆ ಉತ್ಸಾಹ, ಸಂತೋಷದಿಂದ ಬದುಕನ್ನು ಸಾಗಿಸುತ್ತಿರುತ್ತಾರೆ. ಇದಿಲ್ಲದೇ ಇರುವವರ ಬಾಳನ್ನು ನೋಡಲು ಸಾಕಷ್ಟು ಉದಾಹರಣೆಗಳು ನಮ್ಮೆಲ್ಲರ ಕಣ್ಮುಂದೆ ಇವೆ.

ಮಹಾವೀರ ಸಂದೇಶಗಳಾದ “ಬದುಕನ್ನು ಪ್ರೀತಿಸಿ ತನ್ನಂತೆ ಇತರರನ್ನು ಬದುಕಲು ಬಿಡಿʼʼ, ʻಪರಸ್ಪರ ಉಪಕಾರ ಜೀವನವಿರಲಿʼ; ಈ ಸಾರ್ವಕಾಲಿಕ ಸತ್ಯಗಳು ಸರ್ವಧರ್ಮಗಳು ಒಪ್ಪುವ ಸಾರವಿದು. ನಮ್ಮೆಲ್ಲರ ಜೀವನದಲ್ಲಿ ಅವರ ಉಪದೇಶ ಅಂಶಿಕವಾಗಿಯಾದರೂ ಪರಿವರ್ತನೆಗೆ ಸಹಕಾರಿಯಾಗಲಿ ಎಂದು ಮುನ್ನಡೆಯೋಣ. ಚಾಂದ್ರಮಾನ ಯುಗಾದಿಯೊಂದಿಗೆ ಸಂವತ್ಸರ ಪರಿವರ್ತನೆ. ಮನುಷ್ಯನು ಕಾಲವನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಅದು ಪರಿವರ್ತನೆಯಾಗುತ್ತಲೇ ಇರುತ್ತದೆ. ನಾವುಗಳು ಅದರ ವೇಗದಲ್ಲಿ ಚಲಿಸುವ ಅಭ್ಯಾಸ ಮಾಡಿಕೊಳ್ಳಬೇಕು ಅಷ್ಟೇ.

ಲೇಖಕರು ಶಿವಮೊಗ್ಗ ಜಿಲ್ಲೆಯ ಶ್ರೀ ಹೊಂಬುಜ ಜೈನ ಮಠದ ಪೀಠಾಧ್ಯಕ್ಷರು.

ಇದನ್ನೂ ಓದಿ : Mahavir Jayanti : ರಾಜ್ಯದಲ್ಲಿ ಮಹಾವೀರ ಜಯಂತಿ ಸರಕಾರಿ ರಜಾ ದಿನ ಬದಲಾವಣೆ, ಏಪ್ರಿಲ್‌ 3ರ ಬದಲು ಏಪ್ರಿಲ್‌ 4

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Eid Prayers: ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Eid Prayers
Koo

ಶ್ರೀನಗರ: ದೇಶಾದ್ಯಂತ ಮುಸ್ಲಿಮರು ತ್ಯಾಗ, ಬಲಿದಾನದ ಸಂದೇಶ ಸಾರುವ ಬಕ್ರೀದ್‌ (Bakrid 2024) ಸಡಗರ-ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಸೀದಿಗೆ ತೆರಳಿ, ನಮಾಜ್‌ ಮಾಡುವ ಮೂಲಕ, ತಮ್ಮ ಕೈಲಾದಷ್ಟು ದಾನ-ಧರ್ಮವನ್ನೂ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದಾರೆ. ಆದರೆ, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಜಾಮಾ ಮಸೀದಿಯಲ್ಲಿ (Jama Masjid) ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರು ನಮಾಜ್‌ (Eid Prayers) ಮಾಡಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ ಎಂದು ತಿಳಿದುಬಂದಿದೆ.

“ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷವೂ ಮುಸ್ಲಿಮರು ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಭದ್ರತಾ ಸಿಬ್ಬಂದಿಯು ಅವಕಾಶ ಮಾಡಿಕೊಟ್ಟಿಲ್ಲ. ಸೋಮವಾರ (ಜೂನ್‌ 17) ಬೆಳಗ್ಗೆ ಜಾಮಾ ಮಸೀದಿಯಲ್ಲಿ ನಮಾಜ್‌ ಮಾಡಲಾಯಿತು. ಇದಾದ ನಂತರ 9 ಗಂಟೆಗೆ ಈದ್‌ ಪ್ರಾರ್ಥನೆ ಕಾರ್ಯಕ್ರಮ ಇತ್ತು. ಆದರೆ, ಭದ್ರತಾ ಸಿಬ್ಬಂದಿಯು ಮಸೀದಿಯ ಗೇಟ್‌ಗೆ ಬೀಗ ಹಾಕಿ, 9 ಗಂಟೆಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂಬುದಾಗಿ ಹೇಳಿದರು” ಎಂದು ಮಸೀದಿಯಲ್ಲಿ ನಮಾಜ್‌ ಪ್ರಕ್ರಿಯೆ ನಡೆಸಿಕೊಡಬೇಕಿದ್ದ ಅಂಜುಮಾನ್‌ ಔಕಾಫ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಬಕ್ರೀದ್‌ ಆಚರಣೆ

“ಜಾಮಾ ಮಸೀದಿಯಲ್ಲಿ ನಿರಂತರವಾಗಿ ನಮಾಜ್‌ ಮಾಡಲು ನಿರ್ಬಂಧ ವಿಧಿಸಲಾಗುತ್ತಿದೆ. ಬಕ್ರೀದ್‌ನಂತಹ ಸಂದರ್ಭಗಳಲ್ಲಿ ಪ್ರಾರ್ಥನೆ ಸಲ್ಲಿಸುವುದು ಧಾರ್ಮಿಕ ಆಚರಣೆ, ಅಧ್ಯಾತ್ಮಿಕ ಪ್ರತಿಬಿಂಬ ಹಾಗೂ ಸಾಮರಸ್ಯದ ಸಂಕೇತವಾಗಿದೆ. ಹಾಗಾಗಿ, ನಿರಂತರವಾಗಿ ಪ್ರಾರ್ಥನೆಗೆ ನಿರ್ಬಂಧವನ್ನು ವಿಧಿಸುವುದು ಜಮ್ಮು-ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿಲ್ಲ ಎಂಬುದಕ್ಕೆ ಕೈಗನ್ನಡಿಯಾಗಿದೆ. ಪದೇಪದೆ ನಿರ್ಬಂಧಗಳನ್ನು ಹೇರುವುದು, ಜನರ ಆಚರಣೆಗಳಿಗೆ ಅಡ್ಡಿ ಮಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 2019ರಿಂದಲೂ ಬಕ್ರೀದ್‌ ಸೇರಿ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಜಾಮಾ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ಮುಸ್ಲಿಮರು ನಮಾಜ್‌ ಮಾಡುವುದನ್ನು ನಿಷೇಧಿಸಲಾಗಿದೆ. ಶ್ರೀನಗರದಲ್ಲಿ ಉಗ್ರರ ಉಪಟಳ ಜಾಸ್ತಿ ಇರುವ ಕಾರಣ ಭದ್ರತಾ ದೃಷ್ಟಿಯಿಂದಾಗಿ ಭದ್ರತಾ ಸಿಬ್ಬಂದಿಯು ಸಾವಿರಾರು ಮುಸ್ಲಿಮರು ಬಕ್ರೀದ್‌ ದಿನ ನಮಾಜ್‌ ಮಾಡುವುದನ್ನು ನಿರ್ಬಂಧಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪ್ರತಿ ವರ್ಷವೂ ನಮಾಜ್‌ಗೆ ತಡೆ ನೀಡುತ್ತಿರುವುದಕ್ಕೆ ಮುಸ್ಲಿಮರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Continue Reading

ಬೆಂಗಳೂರು

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Bakrid 2024 : ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಕ್ರೀದ್‌ ( Eid al Adha ) ಪ್ರಾರ್ಥನೆಯಲ್ಲಿ ಪಾಲ್ಗೊಂಡು ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

By

Bakrid 2024
Koo

ಬೆಂಗಳೂರು: ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಕ್ರೀದ್ (Eid al Adha) ಅಂಗವಾಗಿ ಚಾಮರಾಜಪೇಟೆ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ (Bakrid 2024 ) ಪಾಲ್ಗೊಂಡು ಮಾತನಾಡಿದರು.

ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಒಬ್ಬರಿಗೊಬ್ಬರು ಶುಭಕೋರಿದರು. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಉಪಸ್ಥಿತಿ ಇದ್ದರು. ಮುಸಲ್ಮಾನರ ಅಮಾಮ್ ಶಾಲು (ಟೋಪಿ) ಹಾಕಿ ಸಿದ್ದರಾಮಯ್ಯರಿಗೆ ಸನ್ಮಾನ ಮಾಡಿದರು.

bakrid 2024

ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಇಡೀ ಭಾರತದಲ್ಲಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿದ್ದೀರಿ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ಬಹುತ್ವದ ದೇಶವಿದು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು, ಯಾವುದೇ ತಾರತಮ್ಯ ಮಾಡಲ್ಲ ಎಂದರು.

ಕೊಪ್ಪಳದಲ್ಲೂ ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೇರಿ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ: Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಬೆಳಗಾವಿ ಅಂಜುಮಾನ ಮೈದಾನ ಹಾಗೂ ಶಿವಮೊಗ್ಗ, ವಿಜಯನಗರ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಈದ್ಗಾ ಮೈದಾನದಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಹೂಡಾ ಅಧ್ಯಕ್ಷ ಇಮಾಮ್, ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೇರಿ ಹಲವರು ಭಾಗಿಯಾಗಿದ್ದರು.

ಬಳ್ಳಾರಿ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಇದೇ ವೇಳೆ ಧರ್ಮಗುರುಗಳಿಂದ ಪ್ರವಾದಿ ಮಹಮದ್ ಪೈಗಂಬರರ ಜೀವನದ ಮಹತ್ವ ಬೋಧನೆ ಮಾಡಲಾಯಿತು. ತ್ಯಾಗ ಹಾಗೂ ಬಲಿದಾನಗಳ ಬಗ್ಗೆ ಧರ್ಮ ಗುರು ವಿವರಿಸಿದರು. ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ಕೋರಿದರು.

ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಧೋಳ ಶಾಸಕ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗಿಯಾದರು. ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲೂ ನಮಾಜ್‌ ಮಾಡಲಾಯಿತು.

ಮೈಸೂರು ಹಾಗೂ ಮಂಡ್ಯದಲ್ಲೂ ಬಕ್ರೀದ್ ಅಂಗವಾಗಿ ವಿವಿಧೆಡೆಗಳಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮಗುರು ಉಸ್ಮಾನ್ ಷರೀಫ್ ಅವರು ಭಾಗಿಯಾಗಿದ್ದರು. ಮಂಡ್ಯದ ಈದ್ಗಾ ಮೈದಾನದಲ್ಲಿ ನಗರಸಭೆ ಸದಸ್ಯ ನಹೀಮ್ ಪ್ರಾರ್ಥನೆ ಸಲ್ಲಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರ್ಮಿಕ

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Bakrid 2024: ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

VISTARANEWS.COM


on

bakrid 2024
Koo

:: ಹಾಶಿಂ ಬನ್ನೂರು

ಮುಸ್ಲಿಮರು (Muslim) ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ (Eid UL Adha- Bakrid 2024) ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ (Quran) ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೇಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು, ಸೌಕರ್ಯ ಹೊಂದಿ ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್ ಆಗಿರುತ್ತದೆ.

ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮೆಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯುವುದು, ಮಿನಾದಲ್ಲಿ ತಂಗುವುದು, ಅರಫಾ ಮೈದಾನಕ್ಕೆ ತೆರಳುವುದು, ಮುಝ್ದಲಿಫಾದಲ್ಲಿ ಇರುವುದು, ಜಮ್ರಾದಲ್ಲಿ ಕಲ್ಲೆಸೆಯುವುದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡುವುದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

ಧರ್ಮ ಪ್ರಚಾರ

ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ಅವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ. ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ್ದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ, ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ.

ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತಮ್ಮ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

ಇದನ್ನೂ ಓದಿ:Govt Holidays : 2024ರಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ರಜೆ; ಇಲ್ಲಿದೆ ಸರ್ಕಾರಿ ರಜೆಗಳ ಪಟ್ಟಿ

Continue Reading

ಧಾರ್ಮಿಕ

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

ದೇವರ ಆರಾಧನೆಗೆ ಪ್ರತಿಯೊಂದು ಧರ್ಮದಲ್ಲೂ ಹಲವಾರು ನಿಯಮಗಳಿವೆ. ಅಂತಹ ಒಂದು ನಿಯಮ ಹಿಂದೂ ಧರ್ಮದಲ್ಲಿ ಇರುವುದು ದೇವಾಲಯದಿಂದ ಹಿಂದಿರುಗುವಾಗ ಗಂಟೆ ಬಾರಿಸಬಾರದು ಎಂಬುದಾಗಿದೆ. ಇದು ಯಾಕೆ, ಗಂಟೆ ಬಾರಿಸುವುದರಿಂದ ಏನು ಪ್ರಯೋಜನ, ಗಂಟೆಯನ್ನು (Temple Bell) ಯಾವಾಗ ಬಾರಿಸಬೇಕು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Temple Bell
Koo

ಹಿಂದೂ ಧರ್ಮದಲ್ಲಿ (hindu dharma) ಪ್ರತಿಯೊಂದು ಆರಾಧನೆಗೂ (worship) ನಿಯಮ ಮತ್ತು ನಿಬಂಧನೆಗಳಿವೆ. ಅದರಲ್ಲೂ ಪೂಜೆಯ (puje) ವೇಳೆ, ದೇವಾಲಯದ (temple) ಒಳಗೆ ಕಟ್ಟುನಿಟ್ಟಾಗಿ ಈ ನಿಯಮಗಳನ್ನು ಪಾಲಿಸುವುದರಿಂದ ನಾವು ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಈ ನಿಯಮಗಳಲ್ಲಿ ಒಂದು ಪೂಜೆಗಾಗಿ ದೇವಾಲಯವನ್ನು ಪ್ರವೇಶಿಸುವಾಗ ಗಂಟೆ (Temple Bell) ಬಾರಿಸುವುದು.

ಪ್ರತಿ ಹಿಂದೂ ದೇವಾಲಯದಲ್ಲೂ ಗಂಟೆ ಇರುತ್ತದೆ. ಜನರು ದೇವಸ್ಥಾನಕ್ಕೆ ಹೋದಾಗ ಮತ್ತು ಅಲ್ಲಿಂದ ಹಿಂತಿರುಗಿದಾಗ ಅವರು ಗಂಟೆಯನ್ನು ಬಾರಿಸುತ್ತಾರೆ. ಆದರೆ ದೇವಸ್ಥಾನದಿಂದ ಹಿಂತಿರುಗುವಾಗ ಗಂಟೆ ಬಾರಿಸಬಾರದು ಎಂಬುದು ನಿಮಗೆ ತಿಳಿದಿದೆಯೇ?

ದೇವಸ್ಥಾನದಿಂದ ಹಿಂದಿರುಗುವಾಗ ಗಂಟೆ ಏಕೆ ಬಾರಿಸಬಾರದು ಎಂಬುದು ಹೆಚ್ಚಿನವರಿಗೆ ಗೊತ್ತಿಲ್ಲ. ಈ ನಿಯಮದ ಹಿಂದೆ ಬಹು ಮಹತ್ವದ ಕಾರಣವಿದೆ.


ದೇವಸ್ಥಾನಗಳಲ್ಲಿ ಗಂಟೆ ಏಕೆ ಬಾರಿಸುತ್ತೇವೆ?

ಶಬ್ದವು ಶಕ್ತಿಗೆ ಸಂಬಂಧಿಸಿದೆ. ನಾವು ದೇವಸ್ಥಾನದ ಗಂಟೆಯನ್ನು ಬಾರಿಸಿದಾಗ ಗಂಟೆ ಬಾರಿಸುವ ವ್ಯಕ್ತಿಗೆ ಧನಾತ್ಮಕ ಶಕ್ತಿಯು ಹರಡುತ್ತದೆ ಮತ್ತು ಸುತ್ತಮುತ್ತಲಿನ ಜನರ ಮೇಲೆ ಅದು ಪರಿಣಾಮ ಬೀರುತ್ತದೆ ಎಂದು ನಂಬಲಾಗುತ್ತದೆ.
ಶಾಸ್ತ್ರ, ಸ್ಕಂದ ಪುರಾಣದಲ್ಲಿ ನಾವು ದೇವಾಲಯದ ಗಂಟೆಯನ್ನು ಬಾರಿಸಿದಾಗ ಅದು ‘ಓಂ’ ಶಬ್ದವನ್ನು ಹೋಲುತ್ತದೆ ಎಂದು ಉಲ್ಲೇಖಿಸಲಾಗಿದೆ. ‘ಓಂ’ ಶಬ್ದವು ಶುದ್ಧ, ಪವಿತ್ರ ಮತ್ತು ಧನಾತ್ಮಕ ಶಕ್ತಿಯೊಂದಿಗೆ ಸಂಬಂಧಿಸಿದೆ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ದೇವಾಲಯವನ್ನು ಪ್ರವೇಶಿಸುವಾಗ ಗಂಟೆಯನ್ನು ಬಾರಿಸುವ ಸಂಪ್ರದಾಯವಿದೆ.

ಮರಳುವಾಗ ಗಂಟೆ ಬಾರಿಸುವುದಿಲ್ಲ ಏಕೆ?

ದೇವಸ್ಥಾನದಿಂದ ಹೊರಬರುವಾಗ ಅನೇಕ ಜನರು ಗಂಟೆ ಬಾರಿಸುವುದನ್ನು ನೋಡಿರಬಹುದು. ಆದರೆ ಇದು ತಪ್ಪು ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ದೇವಸ್ಥಾನದಿಂದ ಹೊರಡುವಾಗ ಗಂಟೆಯನ್ನು ಬಾರಿಸಬಾರದು. ಯಾಕೆಂದರೆ ಹೀಗೆ ಮಾಡುವುದರಿಂದ ದೇವಾಲಯದ ಧನಾತ್ಮಕ ಶಕ್ತಿಯನ್ನು ದೇವಾಲಯದಲ್ಲಿಯೇ ಬಿಟ್ಟು ಬಂದಂತೆ ಆಗುತ್ತದೆ. ನಾವು ದೇವಾಲಯದಿಂದ ಬರಿಗೈಯಲ್ಲಿ ಮರಳುತ್ತೇವೆ. ಹಾಗಾಗಿ ದೇವಸ್ಥಾನದಿಂದ ಹೊರಡುವಾಗ ಗಂಟೆ ಬಾರಿಸಬಾರದು.


ಗಂಟೆ ಏಕೆ ಬಾರಿಸಬೇಕು?

ಸನಾತನ ಧರ್ಮದಲ್ಲಿ ಪ್ರಾಚೀನ ಕಾಲದಿಂದಲೂ ಪೂಜೆಗೆ ಪ್ರಾಮುಖ್ಯತೆ ನೀಡಲಾಗಿದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ನಾವು ದೇವಾಲಯವನ್ನು ಪ್ರವೇಶಿಸುವಾಗ ಗಂಟೆಯನ್ನು ಬಾರಿಸಿದರೆ ಗಂಟೆಯ ಶಬ್ದವು ನಮ್ಮ ದೇಹದಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಯನ್ನು ನಾಶಪಡಿಸುತ್ತದೆ. ಜನರಿಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ದೇವರಿಗೆ ಗಂಟೆಯ ಸದ್ದು ಇಷ್ಟವಾಗುತ್ತದೆ ಮತ್ತು ಗಂಟೆ ಬಾರಿಸುವ ಮೂಲಕ ಭಕ್ತರು ದೇವರ ಉಪಸ್ಥಿತಿಯ ಅನುಭವ ಪಡೆಯಬಹುದು.

ಗಂಟೆ ಬಾರಿಸುವುದು ದೇವಾಲಯವನ್ನು ಪ್ರವೇಶಿಸಲು ಮತ್ತು ದೇವತೆಗಳ ಗಮನವನ್ನು ಸೆಳೆಯಲು ದೇವರ ಅನುಮತಿ ತಮ್ಮ ಕಡೆಗೆ ಸೆಳೆಯುವುದಾಗಿದೆ. ಗಂಟೆ ಬಾರಿಸುವ ಮೂಲಕ ಭಕ್ತನು ತನ್ನ ಆಗಮನವನ್ನು ದೇವರಿಗೆ ತಿಳಿಸುತ್ತಾನೆ ಎಂದು ಹೇಳಲಾಗುತ್ತದೆ.

ಗಂಟೆಯ ಶಬ್ದವು ದೈವತ್ವವನ್ನು ಸ್ವಾಗತಿಸುವ ಮತ್ತು ದುಷ್ಟತನವನ್ನು ಹೋಗಲಾಡಿಸುವ ಮಂಗಳಕರವೆಂದು ಪರಿಗಣಿಸಲಾಗಿದೆ. ಗಂಟೆಯ ಶಬ್ದವು ಮನಸ್ಸನ್ನು ನಡೆಯುತ್ತಿರುವ ಆಲೋಚನೆಗಳಿಂದ ದೂರವಿಡುತ್ತದೆ. ಹೀಗಾಗಿ ಮನಸ್ಸು ಹೆಚ್ಚು ಗ್ರಹಿಸುವಂತೆ ಮಾಡುತ್ತದೆ.

ಇದನ್ನೂ ಓದಿ: Importance Of Tilaka: ಹಣೆಯ ಮೇಲೆ ತಿಲಕ ಇಟ್ಟರೆ ಏನೇನು ಪ್ರಯೋಜನ? ಇದಕ್ಕಿದೆ ವೈಜ್ಞಾನಿಕ ಕಾರಣ!

ಗಂಟೆಯ ಶಬ್ದವು ದೇಹ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಇರುವ ಎಲ್ಲಾ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ನಾಶಪಡಿಸುತ್ತದೆ ಎಂದು ವೈಜ್ಞಾನಿಕವಾಗಿ ಹೇಳಲಾಗುತ್ತದೆ, ಇದರಿಂದಾಗಿ ದೇವಾಲಯ ಮತ್ತು ಅದರ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿರುತ್ತದೆ.

ಗಂಟೆಯನ್ನು ಯಾವಾಗ ಬಾರಿಸಬೇಕು?

ಬೆಳಗ್ಗೆ ಮತ್ತು ಸಂಜೆ ದೇವಾಲಯದ ಗಂಟೆಯನ್ನು ಬಾರಿಸಬೇಕು ಎಂದು ಶಾಸ್ತ್ರಗಳಲ್ಲಿ ಬರೆಯಲಾಗಿದೆ. ಇದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಆದ್ದರಿಂದ ಪೂಜೆಯನ್ನು ಪ್ರಾರಂಭಿಸುವ ಮೊದಲು ನಿಯಮಿತವಾಗಿ ಮನೆಯಲ್ಲೂ ಗಂಟೆ ಬಾರಿಸುವುದು ಒಳ್ಳೆಯದು.

Continue Reading
Advertisement
Viral Video
Latest9 mins ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest12 mins ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ42 mins ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ1 hour ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ1 hour ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest2 hours ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್2 hours ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ2 hours ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್2 hours ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ2 hours ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು6 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌