Merry Christmas 2022 | ಪ್ರೀತಿ, ಸುಖ ಶಾಂತಿಯ ಸಾರುವ ಹಬ್ಬ ಕ್ರಿಸ್‌ಮಸ್‌ - Vistara News

ಧಾರ್ಮಿಕ

Merry Christmas 2022 | ಪ್ರೀತಿ, ಸುಖ ಶಾಂತಿಯ ಸಾರುವ ಹಬ್ಬ ಕ್ರಿಸ್‌ಮಸ್‌

ಅಪರಿಮಿತವಾಗಿ ನಮ್ಮನ್ನು ಪ್ರೀತಿಸಿದ ದೇವ, ಮನುಜ ದೈವತ್ವದ ಪಡಿಯಚ್ಚಾಗಲು ದೀನ ಮನುಜನಾದ. ಆ ದಿನವೇ ಕ್ರಿಸ್‌ಮಸ್‌ (Merry Christmas 2022). ಈ ಹಬ್ಬದ ಮಹತ್ವ ಕುರಿತು ವಿವರಿಸುವ ಲೇಖನ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Merry Christmas 2022

ವಂ. ಡಾಕ್ಟರ್‌ ಫ್ರಾನ್ಸಿಸ್‌ ಫೆರ್ನಾಂಡಿಸ್‌
ದೇವರ ಪ್ರೀತಿ, ಅನನ್ಯ, ಅಪರಿಮಿತ ಅಗಣಿತ! ಈ ಪ್ರೀತಿಯೇ ಸರ್ವಜನರಿಗೂ ಸರ್ವಕಾಲದಲ್ಲೂ ದಾರಿದೀಪ, ಕಾಲಿನ ನಡೆಗೆ ಕೈದೀಪ. ಆದರೆ ಮಾನವನು ಈ ಪ್ರೀತಿಯ ಪರಮದೀಪದ ಸತ್ಯದ ಬೆಳಕಿನಲ್ಲಿ ನಡೆಯದೆ, ಕೆಡುಕಿನ ಕತ್ತಲೆಯಲ್ಲಿ ನಡೆದನು, ಪಾಪದಕೂಪದಲ್ಲಿ ಬಿದ್ದನು. ದೇವರು ದೀರ್ಘದರ್ಶಿಯರ, ಮಹಾಪುರುಷರ ಮತ್ತು ಪ್ರವಾದಿಗಳ ಮುಖಾಂತರ ನೀಡಿದ ಉಪದೇಶ ಎಚ್ಚರಿಕೆಗಳು, ರಕ್ಷಿಸಲು ಮಾಡಿದ ಎಲ್ಲಾ ಪ್ರಯತ್ನಗಳು, ಕೈಗೂಡದೆ ಹೋದವು.

2000 ವರ್ಷಗಳ ಹಿಂದೆ ಕಂದ ಯೇಸು ಬಾಲನು ಈ ಧರೆಗಿಳಿದು ಬಂದದ್ದು ಪ್ರೀತಿಯ ಭಾಷೆಯನ್ನು ಸರ್ವರಿಗೂ ಕಲಿಸಲು, ಪ್ರೀತಿಯ ಪ್ರತೀಕವಾಗಿರುವ ಪುಣ್ಯ ಪ್ರಭಾತ ಪಿತದೇವರನ್ನು ಅವರ ಪ್ರೀತಿ ವಾತ್ಸಲ್ಯದ ಸಾಮ್ರಾಜ್ಯವನ್ನು, ನಮ್ಮ ತನುಮನಗಳಲ್ಲಿ ಹೃದಯ ಹೃನ್ಮನಗಳಲ್ಲಿ ಸಂಜೀವಿನಿಯಾಗಿ, ನಿತ್ಯ ನೂತನ ಚೇತನದ ಮರೀಚಿಕೆಯಾಗಿ ಬಿತ್ತಿ ಬೆಳೆಯಲು.

“ಪ್ರೀತಿಯೇ ಪರಮಾತ್ಮ-ಪ್ರೀತಿಯೇ ಪರಂಧಾಮʼʼ ಎನ್ನುವ ಸತ್ಯವನ್ನು ನೈಜವಾಗಿಸಲು ದೇವರು ಮಾನವರಾದರು. ಜಗದಲ್ಲಿರುವ ಅಸತ್ಯವನ್ನು ಅಳಿಸಿ, ಸತ್ಯವನ್ನು ಉಳಿಸಿ, ಮೇಳೈಸಲು. ನಮ್ಮಲ್ಲಿರುವ ಕತ್ತಲನ್ನು ತೊಲಗಿಸಿ, ಜ್ಯೋತಿಯನ್ನು ಬೆಳಗಿಸಲು, ಸಾವಿನ ಕರಾಳ ಛಾಯೆಯ ಬಂಧನ ಬಿಡಿಸಿ, ಪುನರುತ್ಥಾನದ ಮೂಲಕ ನಿತ್ಯಜೀವಕ್ಕೆ ನಮ್ಮನ್ನು ಎಬ್ಬಿಸಲು ದೇವರು ದೀನ ಮಾನವರಾದರು. ಮಾತ್ರವಲ್ಲ, ದೇವ ಮಾನವನ ನಡುವೆ ಸತ್ಸಂಬಂಧ ಬೆಳೆಸುವ, ಮಾನವ ಮಾನವರ ಮಧ್ಯೆ ಮೈತ್ರಿಯನ್ನು ಮೊಳಗಿಸುವ ಮಹಾಪುರುಷ ಪ್ರಭುಯೇಸುವಾದರು; ಪ್ರೀತಿಯ ಸೆಳೆತವಿರುವ, ಪ್ರೇಮದ ಸ್ಪಂದನ ಇರುವ, ವಾತ್ಸಲ್ಯವ ಸ್ಪರ್ಶವಿರುವ ಸೇತುವೆ ಅವರಾದರು.

ಕ್ರಿಸ್ಮಸ್‌, ದೀನಸ್ಮಿತಿಯ ನೆರಳಲ್ಲೂ ದೈವತ್ವದಛಾಯೆ!!
“ಜಗದಲ್ಲಿ ಜನಿಸಿದ ಪ್ರತಿಯೊಂದು ಮಗುವೂ ಕೂಡಾ ಒಂದು ಸಂದೇಶವನ್ನು ಹೊತ್ತು ತರುತ್ತದೆ. ಅದೇನೆಂದರೆ ದೇವರು ನಮ್ಮನ್ನು ಪ್ರೀತಿಸುತ್ತಾರೆ” ಹೀಗೆಂದು ನುಡಿದವರು ರಾಷ್ಟ್ರ ಕವಿ ರವೀಂದ್ರನಾಥ ಟಾಗೋರ್‌. ಈ ಮಾತು ಎಷ್ಟು ಅರ್ಥಪೂರ್ಣ! ಆದರೆ, ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದ ಮುಗು, ದೇವ ಮಗು, ಯೇಸುಕಂದ, ದೇವರೇ ಪ್ರೀತಿಯೆಂದು ಸಾರಿತು. ದೇವರು ನಮ್ಮ ಮಧ್ಯೆ ಇದ್ದಾರೆ ಎಂದು ತೋರಿಸಿತು. ದೇವರ ಪ್ರೀತಿಗೆ ಪಾತ್ರರಾಗ ಬೇಕಾದರೆ ದೀನತಾಭಾವ ಅತ್ಯಗತ್ಯ ಎಂದು ಜನಿಸಿದ ಕ್ಷಣದಲ್ಲೇ ಬೋಧಿಸಿತು. ದೀನತೆಯೇ ನೈಜಭಕ್ತನಿಗೆ ಶ್ರೇಷ್ಠತೆ! ಈ ಸದ್ಗುಣ, ಆತನಿಗೆ ಶ್ರೇಷ್ಠತೆಯನ್ನು ಸಾರುವ ಸಂಕೇತಗಳು. Humility is the mother of salvation ದೀನತೆರಕ್ಷಣೆಯ ಮಾತೆ ಎಂದು ಸಂತ ಬರ್ನಾಡ್‌ ಷಾ ಹೇಳಿರುವರು. ಹೆನ್ರಿದೆಥೋರೆಯು ಎಂಬುವರು “ದೀನತೆಯು ಸ್ವರ್ಗೀಯ ಬೆಳಕನ್ನು ಬಿಂಬಿಸುವ ದೀವಿಗೆʼʼ ಎಂದು ಹೇಳುತ್ತಾರೆ.

ವಾಸ್ತವವಾಗಿ ಮಾನವಜೀವನದಲ್ಲಿ ದೀನ ವಿನಯನಾಗಿ ಬಾಳಿದ ವ್ಯಕ್ತಿಗೆ ತಿರಸ್ಕಾರ-ಬಹಿಷ್ಕಾರ ಕಟ್ಟಿಟ್ಟ ಬುತ್ತಿ. ಇದನ್ನು ಪ್ರತಿಪಾದಿಸಲೆಂದೇ ಪ್ರಭುಕ್ರಿಸ್ತರು ದೀನರಲ್ಲಿ ದೀನರಾದರು, ದರಿದ್ರರಲ್ಲಿ ದರಿದ್ರರಾದರು! ಎಲ್ಲಿ ದೀನತ್ವ ಅಲ್ಲಿ ದೈವತ್ವ ಎಂಬುದನ್ನು ಸಾಕ್ಷಾತ್ಕರಿಸಿದರು. ಆದರೆ ಅವರಿಗೆ ದಕ್ಕಿದ್ದು ತಿರಸ್ಕಾರದ ಪುರಸ್ಕಾರದ ಅವಮಾನದ ಬಹುಮಾನ. ಅವುಗಳಲ್ಲಿರುವುದೇ ನಿಜವಾದ ಶಾಶ್ವತ ಸುಖ ನೆಮ್ಮದಿಯ ಸಿಹಿ ಎಂಬುದನ್ನು ಸವಿದು ತೋರಿಸಿದರು. ಪ್ರತಿಯೊಬ್ಬ ಮನುಷ್ಯನು ನೋವಿನಲ್ಲಿ ನೀನಾದವನ್ನು ಕಾಣಬಯಿಸಿದರೆ, ಸೋಲಿನಲ್ಲಿ ಗೆಲುವನ್ನು ಕಾಣ ಪ್ರಯತ್ನಿಸಿದರೆ, ದೀನತೆಯಲ್ಲಿ ಶ್ರೇಷ್ಠತೆಯನ್ನು ಕಾಣ ನಡೆದರೆ, ತಿರಸ್ಕಾರದಲ್ಲೂ ಪುರಸ್ಕಾರವನ್ನು ಗುರುತಿಸಿದರೆ ಅಸಮಾನ್ಯ ಸಮಸ್ಯೆಗಳು ಸಾಮಾನ್ಯ ಸಮಸ್ಯೆಗಳಾಗಬಹುದಲ್ಲವೇ? ಇಂದಿನ ಹಬ್ಬದ ಈ ಸಂದೇಶ ನಮ್ಮ ಬಾಳಿನ ಪರಿವರ್ತನಾ ಸಂದೇಶ ಏಕಾಗಬಾರದು?.

Merry Christmas 2022

ಗೋದಲಿ ಮತ್ತು ಗೊಲ್ಗೊಥಾ
ಕೆಸರಿನಲ್ಲಿನ ಕಮಲದಂತೆ, ಗೋದಲಿಯೊಳಗೆ ಪರಮ ಶುಭ್ರತೆಯ ಜನನ. ಸರ್ವತಿರಸ್ಕೃತ ಕಡು ಬಡತನದಲ್ಲೂ ಮನೋದಾರಿದ್ರ್ಯತೆಯಲ್ಲೂ ಕ್ರಿಸ್ತರ ದೈವತ್ವವು ಎದ್ದು ಕಾಣುತ್ತಿತ್ತು. ಮಾನವ ಸ್ಥಿತಿಯಲ್ಲಿ ತಮ್ಮನ್ನೇ ತಗ್ಗಿಸಿಕೊಂಡಷ್ಟೂ ಅವರ ದೈವ ಸ್ವಭಾವ ವ್ಯಕ್ತವಾಗುತ್ತಿತ್ತು, ಹೊಳೆಯುವ ಚಿನ್ನದಂತೆ ಮಿರಮಿರನೆ ಮಿನುಗುತ್ತಿತ್ತು. ಮುಂದೆ ಅವರೇ ತಮ್ಮ ಬೋಧನೆಯಲ್ಲಿ ಹೀಗೆಂದರು; “ಯಾರು ತನ್ನನ್ನೇ ಮೇಲಕ್ಕೇರಿಸಿಕೊಳ್ಳುತ್ತಾನೋ, ಅಂಥವನನ್ನು ಕೆಳಕ್ಕೆ ಇಳಿಸಲಾಗುವುದು. ಯಾರು ತನ್ನನ್ನೇ ತಾನೇ ತಗ್ಗಿಸಿಕೊಳ್ಳುತ್ತಾನೋ ಅಂಥವನನ್ನು ಉನ್ನತಿಗೆ ಏರಿಸಲಾಗುವುದುʼʼ
ಬಡ ಕನ್ನಿಕೆಯೊಬ್ಬಳ ಉದರದಲ್ಲಿ ಜನಿಸಿ, ವಸತಿ ವಸ್ತ್ರ ರಹಿತಗೋದಲಿಯಲ್ಲಿ ಮಲಗಿದ್ದಾಗ ದೇವದೂತರ ಸಮೂಹ ಅವರ ಸ್ತುತಿಗೀತೆ ಹಾಡುತ್ತಿತ್ತು. ಕತ್ತೆ ಕುರಿಗಳ ಮಧ್ಯೆ ಜನಿಸಿರುವ ಅವರ ಘನತೆಯನ್ನು ಎತ್ತಿ ಹಿಡಿಯಿತು. ದೂರ ದಿಗಂತದ ನಕ್ಷತ್ರ!

ಕೆಸರಿನಲ್ಲಿ ಕಮಲ ಅರಳಿದಂತೆ, ಅತ್ಯಂತ ಮಲೀನ ಗೋದಲಿಯೊಳಗೆ ಪರಮ ಶುಭ್ರತೆಯು ಜನ್ಮತಾಳಿತು. ತಾನೇ ಉತ್ತಮನು ನನ್ನ ಹೊರತು ಬೇರೆ ಯಾರು ಇಲ್ಲ ನಾನೇ ಶ್ರೇಷ್ಠ ಎನ್ನುವ ನಿಲುವು ನಮ್ಮ ಅನೇಕ ತೊಂದರೆ ತೊಡಕು ಗಳಿಗೆ ಕಾರಣವಾಗಿದೆ. ಪರರಲ್ಲಿನ ಶ್ರೇಷ್ಠತೆ ಅರಿತಾಗ, ಪರರಲ್ಲಿ ಪ್ರಭುವನ್ನು ಕಂಡಾಗ, ಸಹೋದರತೆ ತಾನೇ ತಾನಾಗಿ ಮನೆ ಮಾಡುತ್ತದೆ.

ಸೂರ್ಯನಿಗೆ ಶಾಖವನ್ನು ಬೆಂಕಿಗೆ ಉರಿಯನ್ನು ಇತ್ತ ದೇವಕುಮಾರನು ಸ್ವತಃ ಬೆಚ್ಚಗಿರಲು, ಕತ್ತೆ ಕುರಿಗಳಂತಹ ದೀನ ಹೀನ ಪ್ರಾಣಿಗಳನ್ನು ಆಶ್ರಯಿಸಿದ್ದು ಸಾಮಾನ್ಯ ಮತಿಗೆ ಅರ್ಥವಾಗದ ವಿಷಯವಲ್ಲವೇ? ಪ್ರಾಣಿಗಳಿಗೆ ಬೆಚ್ಚನೆಯ ಹೊದಿಕೆಯನ್ನಿತ್ತು, ಭೂಮಿಗೆ ಹಸಿರು ಹುಲ್ಲಿನ ದೋತರವನ್ನಿತ್ತಂತಹ ದೇವಾದಿ ದೇವರು ಹೊದಿಕೆಯಿಲ್ಲದೆ ನಗ್ನವಾಗಿ ಗೋದಲಿಯೊಳಗೆ ಮಲಗಿದ್ದುದು ನಂಬಲು ಕಷ್ಟವಲ್ಲವೇ? ಆದರೆ ಇದು ಪರಮ ಸತ್ಯ. ಮನುಷ್ಯನಾಗಿ ಜನಿಸಿದ ಸೃಷ್ಠಿಕರ್ತನನ್ನು ಅವರಿಂದಲೇ ಸೃಷ್ಟಿಸಲ್ಪಟ್ಟ ಸೃಷ್ಟಿಯ ಹಿಂಬಾಗಿಲಿನಿಂದ ಸ್ವೀಕರಿಸಿತು. ಉತ್ತಮ ಸಮಾಜವು ಅವರನ್ನು ಆದರಿಸಲು ನಿರಾಕರಿಸಿತು. ಆದರೂ ಅವರು ಗೋದಲಿಯಲ್ಲಿ ಜನಿಸಲು ಒಪ್ಪಿದರು. ಗೋದಲಿ ಮತ್ತು ಗೊಲ್ಗೊಥಾ ಒಂದು ಜನನದ ಸ್ಥಳ, ಮತ್ತೊಂದು ಮರಣದ ಸ್ಥಳ. ಇವೆರಡು ಯೇಸುಕ್ರಿಸ್ತರ ಜೀವನದ ಎರಡು ಮಹಾ ದಿಗಂತಗಳು; ಒಂದಕ್ಕೊಂದು ಪ್ರೇರಕ ಹಾಗೂ ಪೂರಕ.

ಸಹೋದರತೆಯ ಸಿಂಚನವೆರೆಯುವ ಹಬ್ಬ ಕ್ರಿಸ್ಮಸ್‌
ನಾವೀಗಲೇ ಕ್ರಿಸ್ತ ಜಯಂತಿಯ ಬೆಚ್ಚನೆಯ ಅನುಭವದಲ್ಲಿದ್ದೇವೆ. ಈ ಮಧುರ ಅನುಭವದಲ್ಲಿ ನಮ್ಮ ಸೃತಿ ಪಟಲದಲ್ಲಿ ಪ್ರಶ್ನೆಯೊಂದು ಮೂಡುವುವುದು ಸಹಜ. ಕ್ರಿಸ್‌ಮಸ್‌ ಎಂದರೇನು ನನಗನಿಸಿದಂತೆ ಕ್ರಿಸ್‌ಮಸ್‌ (Merry Christmas 2022), ದೈವ ಪ್ರೀತಿಯು ಮನುಜರಾದ ಪ್ರೀತಿಯ ಕಥನ. ಕ್ರಿಸ್‌ಮಸ್‌ ದೇವರು ಮನುಜನನ್ನು ಅರಸಿಕೊಂಡು ಬಂದ ಸಂಭ್ರಮದ ಹಬ್ಬ. ಕ್ರಿಸ್‌ಮಸ್‌, ದೇವ ಮನುಜನಾಗಿ, ಮನುಜನನ್ನು ದೇವನನ್ನಾಗಿಸಿ ದೇವನೆಡೆಗೆ ಕರೆದೊಯ್ದ ಹಬ್ಬ. ಕ್ರಿಸ್‌ಮಸ್‌ ಭಾವನೆಗಳ ಸಂಗಮ, ಮಮತೆ ಮಮಕಾರಗಳ ದೇವ, ಮನುಜನಾದ ಅವಿಸ್ಮರಣೀಯ ದಿನ.

ಕ್ರಿಸ್‌ಮಸ್‌ ಸಂಭ್ರಮ, ಸಂತೋಷಗಳ ಸಮ್ಮಿಳಿತ, ಉಡುಗೊರೆ ನೀಡುತ್ತಾ ಪಡೆಯುತ್ತಾ ಸಾಗುವ ಪ್ರೀತಿಯ ಆಚರಣೆ. ಸಂಬಂಧ ಬೆಸೆಯುವ ಭಾತೃತ್ವಮೈಗೂಡಿಸುವ, ಐಕ್ಯತೆ ಮೂಡಿಸಿ, ಕ್ಷಮೆಯಾಚಿಸಿ, ಕ್ಷಮೆ ನೀಡಿ, ಜಾತಿ ಭಾಷೆ, ಬಣ್ಣ ಭೇದ ಸರ್ವವನ್ನೂ ಉಲ್ಲಂಘಿಸಿ ಇತರರನ್ನು ಅಪ್ಪಿ ಒಪ್ಪಿಕೊಳ್ಳುವುದು ಕ್ರಿಸ್‌ಮಸ್‌ ಸಂದೇಶ.

Merry Christmas 2022

ಎಲ್ಲರೂ ಅಣ್ಣತಮ್ಮ, ಎಲ್ಲರೂ ಅಕ್ಕತಂಗಿ, ನಮಗೆಲ್ಲಾ ಅವನೇ ತಂದೆ, ಅವರೇನೆ ನಮ್ಮ ತಾಯಿ ಎಂದು ಹೇಳಲು, ಸಾರಲು ನಮ್ಮ ಮೈಮನಗಳನ್ನು ನವಿರೇಳಿಸಿ, ಪಂಥಾಹ್ವಾನ ನೀಡುವಂತಹುದು ಕ್ರಿಸ್ಮಸ್‌. ಅಪರಿಮಿತವಾಗಿ ನಮ್ಮನ್ನು ಪ್ರೀತಿಸಿದ ದೇವ, ಮನುಜ ದೈವತ್ವದ ಪಡಿಯಚ್ಚಾಗಲು ದೀನ ಮನುಜನಾದ. ಮೊದಲನೆಯದಾಗಿ ದೇವನೇ ತನ್ನ ವಿನಾಭಾವದ ಕುರುಹಾಗಿ ತನ್ನ ಏಕೈಕ ಪುತ್ರನನ್ನೇ ಧಾರೆಯೆರೆದು. ಉಡುಗೊರೆಯನ್ನಾಗಿ ನೀಡಿರುವಾಗ ಪ್ರಭುವಿನ ಮೌಲ್ಯವನ್ನು ನಮ್ಮ ಮನಸ್ಸು ಕಲ್ಪಿಸುವಂತಿಲ್ಲ.

ಎರಡನೆಯದಾಗಿ, ದೇವನ ಪ್ರೀತಿಯ ಸಿಂಚನ ಕ್ರಿಸ್ತ ಜಯಂತಿಯ ಮೂಲಕ ನಮಗಾಗಿರುವಾಗ ನಾವೂ ಕೂಡಾ ಪರರನ್ನು ಪ್ರೀತಿಸುವ ಪ್ರೀತಿಯೇ ಪರಂಧಾಮ ಎಂದು ಸಾರುವ ಮಾನವರಾಗಬೇಕು. ಪರರನ್ನು ದ್ವೇಷಿಸುವ, ಪರರ ವ್ಯಕ್ತಿತ್ವವನ್ನು ಹಾಳು ಮಾಡುವ, ಇತರ ಪ್ರತಿಷ್ಠೆ ಯನ್ನು ಕುಂದಿಸುವ, ವ್ಯಕ್ತಿತ್ವ ನಮ್ಮದಾಗಬಾರದು. ಜಾತಿ, ವರ್ಣ, ನೀತಿಧರ್ಮದ ಆಧಾರದ ಮೇಲೆ ಇತರರನ್ನು ದ್ವೇಪಿಸದೇ, ಬಾಂಧವ್ಯ ಬೆಸೆಯುವ, ಭ್ರಾತೃತ್ವ ಸಾರುವ ಪ್ರೀತಿಯ ಸೇತುವೆಗಳು ನಾವಾಗಬೇಕು. ನಾವೆಲ್ಲರೂ ಒಂದೇ, ನಮ್ಮ; ದೇವರು ಒಂದೇ, ನಮ್ಮ. ವಿಶ್ವಾಸವು ಒಂದೇ ಎಂದು ಸಾರುವ ದೇವನ ಪ್ರೀತಿಯ ಸಾಧನ ನಾವಾಗ ಬೇಕು. ಈ ಸಂದೇಶ ನಿಮ್ಮಮನದಾಳದಲ್ಲಿ ನೆಲೆಯೂರಲಿ.

“ಆ ದೇವ ಪ್ರೀತಿಸಿಹನು ನನ್ನ, ಅಮೂಲ್ಯನಾಗಿಸಿಹನು ಸನ್ನಿಧಾನದಲ್ಲಿ ತನ್ನʼʼ ಈ ನಿಮಿತ್ತ ಯಾರು ನನಗೆ ಅಪಾತ್ರರಲ್ಲ, ಅಪರಿಚಿತರಲ್ಲ, ಸಹೋದರ ಸಹೋದರಿಯಾಗಿದ್ದಾರೆ ಎಲ್ಲ. ಪ್ರಪಂಚವೆಂಬ ದೊಡ್ಡ ಕುಟುಂಬದ ಸದಸ್ಯರು ನಾವು, ನೀಡಲು ಸಂತಸ, ನೀಗಲು ನೋವು. ಕ್ರಿಸ್ತಜಯಂತಿ ಇಂದು ನಮ್ಮೆಲ್ಲರಿಗೂ ಪ್ರೀತಿಯ, ಸುಖಶಾಂತಿಯ ಹಬ್ಬವಾಗಿದೆ. ಆ ಯೇಸುದೇವನ ಪ್ರೀತಿಯ ಪ್ರತೀಕವಾಗಿದ್ದೇವೆ. ಈ ಪ್ರೀತಿಯ ಭಾಷೆಯನ್ನು ನಾವು ಮೊದಲು ಕಲಿತು, ಸಕಲ- ಸದ್ಗುಣಗಳ ವಲ್ಲಭರಾಗಿ ಪ್ರೀತಿಯ ಪ್ರತಿನಿಧಿಗಳಾಗಿ ಪ್ರೀತಿ ಸೌಹಾರ್ದತೆಯಿಂದ ಬಾಳುತ್ತಾ ಇತರರಿಗೂ ಅದನ್ನು ಕಲಿಸಲು ಕಂಕಣ ಬದ್ಧರಾಗೋಣ.

ಲೇಖಕರು ಪ್ರಾಚಾರ್ಯರು, ಸೇಕ್ರೆಡ್‌ ಹಾರ್ಟ್‌ ಪದವಿ ಪೂರ್ವ ಕಾಲೇಜು, ಶಿವಮೊಗ್ಗ.

ಇದನ್ನೂ ಓದಿ | Christmas Fashion | ಕ್ರಿಸ್ಮಸ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ ನಾಲ್ಕು ಆಕರ್ಷಕ ವಿನ್ಯಾಸದ ಗೌನ್‌ಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
bomb hoax bengaluru
ಕ್ರೈಂ13 mins ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್27 mins ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ43 mins ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ50 mins ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ58 mins ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ1 hour ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ1 hour ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ2 hours ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ2 hours ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ16 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ17 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ17 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ18 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌