Monsoon Festivals: ಧೋ ಎಂದು ಸುರಿಯುವ ಮಳೆಯ ನಡುವೆ ಮನಸೆಳೆವ ಹಬ್ಬಗಳು! - Vistara News

ಕರ್ನಾಟಕ

Monsoon Festivals: ಧೋ ಎಂದು ಸುರಿಯುವ ಮಳೆಯ ನಡುವೆ ಮನಸೆಳೆವ ಹಬ್ಬಗಳು!

ಮಳೆಗಾಲ ಅಂದರೆ ಜಿರೋ ಎಂದು ಸುರಿಯುವ ಮಳೆ. ಒಂದು ಹಬ್ಬವಿಲ್ಲ, ಹರಿದಿನವಿಲ್ಲ, ಬರೀ ಬೋರು ಎಂದುಕೊಳ್ಳಬೇಡಿ. ಮಳೆಗಾಲವನ್ನೂ ಉತ್ಸಾಹಭರಿತವಾಗಿ ಮಾಡುವ ಕೆಲವು ಆಚರಣೆಗಳು, ಹಬ್ಬಗಳು (monsoon festivals) ನಮ್ಮ ನಡುವೆ ಇವೆ. ಅವು ಯಾವುವು ಬನ್ನಿ ನೋಡೋಣ.

VISTARANEWS.COM


on

chudi puja and other monsoon festivals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Monsoon Focus

ಉತ್ತರ ಕರ್ನಾಟಕದ ಬೀದರ್‌ನಿಂದ ದಕ್ಷಿಣ ಕರ್ನಾಟಕದ ತುಳುನಾಡಿನವರೆಗೂ ಮಳೆಗಾಲ ಎಂದರೆ ಹಬ್ಬ ಆಚರಣೆಗಳಿಲ್ಲದ ದಿನಗಳು ಎಂದು ಭಾವಿಸಲಾಗುತ್ತದೆ. ಹಾಗೇನೂ ಇಲ್ಲ. ಮಳೆಗಾಲವೆಂದು ಭಾವಿಸಲಾಗುವ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಹಲವು ಮನಸೆಳೆವ ಹಬ್ಬ- ಆಚರಣೆಗಳು (monsoon festivals) ನಾಡಿನಾದ್ಯಂತ ಇವೆ.

ಕೆಡ್ಡಸ

ಇದು ತುಳುನಾಡಿನ ಹಬ್ಬ. ತುಳು ಮಾಸದ ಪೊನ್ನಿ ತಿಂಗಳು ಅಂದರೆ ಮಕರ ಮಾಸದ 27ನೇ ದಿನ ಸಂಜೆಯಿಂದ ಕುಂಭ ಸಂಕ್ರಮಣದವರೆಗೆ ಕೆಡ್ಡಸವನ್ನು ಆಚರಿಸಲಾಗುತ್ತದೆ. ಮೂರು ದಿನ ನಡೆಯುವ ಈ ಹಬ್ಬದ ಆಚರಣೆಯಲ್ಲಿ ನೆಲ ಅಗೆಯುವುದು, ಮರಗಳನ್ನು ಕಡಿಯುವುದು ನಿಷಿದ್ಧ. ಯಾಕೆಂದರೆ ಈ ಸಂದರ್ಭದಲ್ಲಿ ಭೂಮಿ ರಜಸ್ವಲೆಯಾಗಿರುತ್ತಾಳೆ, ಹೀಗಾಗಿ ಕೃಷಿಕಾರ್ಯದಲ್ಲಿ ತೊಡಗಿ ಭೂಮಿಗೆ ನೋವುಂಟು ಮಾಡಿದರೆ ಆಕೆ ಬಂಜೆಯಾಗುತ್ತಾಳೆ ಎಂಬ ನಂಬಿಕೆ. ಕೆಡ್ಡಸ ವೇಳೆ ಪೂಜಿಸುವವರು ಸ್ತ್ರೀಯರು. ಅಂಗಳದ ಒಂದು ಮೂಲೆಯಲ್ಲಿ ಗೋಮಯದಿಂದ ಶುದ್ಧೀಕರಿಸಿದ ಜಾಗದಲ್ಲಿ ವಿಭೂತಿಯಿಂದ ವೃತ್ತ ರಚಿಸಿ ಅದರಲ್ಲಿ ಬಿಳಿಯ ಮಡಿಬಟ್ಟೆ, ಗೆಜ್ಜೆಕತ್ತಿ (ಕಿರುಗತ್ತಿ), ತೆಂಗಿನ ಗರಿಯ ಹಸಿ ಕಡ್ಡಿಯನ್ನಿಟ್ಟು ಮಾಡಿದ ಸಾಂಕೇತಿಕವಾದ ʼಭೂಮಿ’ತಾಯಿಯನ್ನು ಪೂಜಿಸಲಾಗುತ್ತದೆ.

ಚೂಡಿ ಪೂಜೆ

ಶ್ರಾವಣ ಮಾಸದ ಕೇಂದ್ರ ಬಿಂದು ಚೂಡಿ ಪೂಜೆ. ಶ್ರಾವಣ ಮಾಸದ ಶುಕ್ರವಾರ ಮತ್ತು ಆದಿತ್ಯವಾರ ತುಳಸಿ ಮತ್ತು ಹೊಸ್ತಿಲಿಗೆ ಮಾಡುವ ಪೂಜೆಯೇ ಈ ಚೂಡಿ ಪೂಜೆ. ಗರಿಕೆ, ರತ್ನಗಂಧಿ, ಶಂಖ ಪುಷ್ಪ, ಕಣಗಿಲೆ, ಕರವೀರ, ರಥದ ಹೂ, ಗೌರಿ ಹೂ ಮೊದಲಾದ ಹೂಗಳನ್ನು ಕಲಾತ್ಮಕವಾಗಿ ಜೋಡಿಸಿ ಬಾಳೆ ನಾರಿನಲ್ಲಿ ಕಟ್ಟಿದ ಸೂಡಿಯನ್ನು ಹೊಸ್ತಿಲಲ್ಲಿ ಇಟ್ಟು ಪೂಜಿಸಲಾಗುತ್ತದೆ. ಸೂಡಿಯೇ ಈ ಚೂಡಿ.

ನಾಗರ ಪಂಚಮಿ

nagara panchami and other monsoon festivals

ನಾಗರ ಪಂಚಮಿ ನಾಡಿಗೆ ದೊಡ್ಡದಂತೆ. ಇದು ಒಡಹುಟ್ಟಿದವರ ಹಬ್ಬ. ಅಕ್ಕ-ತಮ್ಮ, ಅಣ್ಣ-ತಂಗಿಯರ ಹಬ್ಬ. ನಾಗಪ್ಪನಿಗೆ ತನಿ ಎರೆಯುತ್ತಾರೆ. ಜಾತಕದಲ್ಲಿ ಸರ್ಪ ದೋಷ, ಕಾಳಸರ್ಪಯೋಗ ಮತ್ತು ರಾಹು ದೋಷ ಇರುವವರು ಅಂದು ಬೆಳ್ಳಿ ನಾಗಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರೆ ದೋಷಗಳು ಪರಿಹಾರವಾಗುವುದು ಎಂಬ ನಂಬಿಕೆಯಿದೆ.

ಸಿರಿಯಾಳ ಷಷ್ಠಿ

ಸಿರಿಯಾಳ ಷಷ್ಠಿ ಹಬ್ಬವನ್ನು ಗಂಡು ಮಕ್ಕಳು ಇರುವ ತಾಯಂದಿರು ಆಚರಿಸುತ್ತಾರೆ. ಈ ದಿನ ಬೇಳೆ, ಅಕ್ಕಿ, ಎಣ್ಣೆ, ಹಾಲು, ಮೊಸರು ಜತೆಗೆ ದಕ್ಷಿಣೆ ಇಟ್ಟು ಮುತ್ತೈದೆಯರಿಗೆ ದಾನ ಕೊಡುತ್ತಾರೆ. ಇದರಿಂದ ಗಂಡುಮಕ್ಕಳಿಗೆ ಆಯಸ್ಸು, ಆರೋಗ್ಯ, ಸಂಪತ್ತು ಹೆಚ್ಚುವುದು ಎಂಬ ನಂಬಿಕೆಯಿದೆ.

ವರಮಹಾಲಕ್ಷ್ಮಿ ವ್ರತ

ಶ್ರಾವಣ ಮಾಸದ 2ನೇ ಶುಕ್ರವಾರ ಈ ವ್ರತದ ಆಚರಣೆ. ಈ ವ್ರತವನ್ನು ಸಂಜೆ ಸಮಯದಲ್ಲಿ ಲಕ್ಷ್ಮಿಯ ಪೂಜೆ ಮಾಡುವ ಮೂಲಕ ಆಚರಿಸುತ್ತಾರೆ. ಜಾತಕದಲ್ಲಿ ದೋಷ ಇರುವವರು ಲಕ್ಷ್ಮಿಯನ್ನು ಆರಾಧಿಸಿದರೆ ಸಂಪತ್ತು ಪ್ರಾಪ್ತಿ ಆಗುತ್ತದೆ ಎನ್ನಲಾಗುತ್ತದೆ.

ಇದನ್ನೂ ಓದಿ: Monsoon Diet: ಮಳೆಗಾಲದಲ್ಲಿ ಆಹಾರ ಸೇವನೆ ಹೀಗಿರಲಿ

ಉಪಾಕರ್ಮ ಮತ್ತು ರಕ್ಷಾ ಬಂಧನ

raksha bandhan and other monsoon festivals
#image_title

ಶ್ರಾವಣ ಮಾಸದ ಹುಣ್ಣಿಮೆ ದಿನ ಯಜುರ್ವೇದ ಉಪಾಕರ್ಮವನ್ನು, ಚತುರ್ದಶಿ ದಿನ ಋಗ್‌ವೇದ ಉಪಾಕರ್ಮವನ್ನು ಆಚರಿಸುತ್ತಾರೆ. ಒಮ್ಮೊಮ್ಮೆ ಎರಡೂ ಒಟ್ಟಿಗೆಯೂ ಬರಬಹುದು. ಸಾಮಾನ್ಯವಾಗಿ ದೇವಾಲಯದಲ್ಲಿ ಸಾಮೂಹಿಕವಾಗಿ ಆಚರಿಸುತ್ತಾರೆ. ಅದೇ ದಿನ ರಕ್ಷಾ ಬಂಧನವನ್ನು ಸೋದರ ಸೋದರಿಯರು ಆಚರಿಸುತ್ತಾರೆ. ಸಹೋದರನ ಕೈಗೆ ಸಹೋದರಿ ರಾಖಿ ಕಟ್ಟುತ್ತಾಳೆ. ಇದಕ್ಕೆ ಐತಿಹಾಸಿಕ ಹಿನ್ನೆಲೆಯೂ ಇದೆ.

ಶ್ರೀಕೃಷ್ಣ ಜನ್ಮಾಷ್ಟಮಿ

ಕೃಷ್ಣ ಪಕ್ಷದ ಅಷ್ಟಮಿ ದಿನ ರೋಹಿಣಿ ನಕ್ಷತ್ರ ಬರುವ ಪುಣ್ಯ ಕಾಲದಲ್ಲಿ ಶ್ರೀ ಕೃಷ್ಣನ ದಿವ್ಯ ಅವತಾರ. ಆದ್ದರಿಂದ ಈ ದಿನ ಕೃಷ್ಣನ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಆಚರಿಸುತ್ತಾರೆ. ಹಲವಾರು ಕಡೆ ಮೊಸರು ಕುಡಿಕೆ ಉತ್ಸವ ಆಚರಿಸಲಾಗುತ್ತದೆ.

ಮಂಗಳ ಗೌರಿ ವ್ರತ

ಶ್ರಾವಣ ಮಾಸದ ಮೊದಲು ಮಂಗಳ ವಾರದಿಂದ ನಾಲ್ಕು ಮಂಗಳವಾರ ಮಂಗಳ ಗೌರಿ ವ್ರತವನ್ನು ಆಚರಿಸುತ್ತಾರೆ. ಹೊಸದಾಗಿ ಮದುವೆ ಆದ ಹೆಣ್ಣು ಮಕ್ಕಳು ಅವರ ತವರು ಮನೆಯಲ್ಲಿ ಈ ವ್ರತವನ್ನು ಆಚರಿಸುತ್ತಾರೆ. 5 ವರ್ಷ ಸತತವಾಗಿ ಈ ವ್ರತವನ್ನು ಆಚರಿಸಬೇಕು. ಕೊನೆಯಲ್ಲಿ ಉದ್ಯಾಪನೆ ಮಾಡಬೇಕು ಎನ್ನಲಾಗುತ್ತದೆ.

ಶ್ರಾವಣ ಶನಿವಾರ

ಪ್ರತಿ ಶ್ರಾವಣ ಶನಿವಾರದಂದು ಕುಲದೇವತೆ ವೆಂಕಟರಮಣ ಸ್ವಾಮಿ ಒಕ್ಕಲಿನವರು ಪಡಿ ಬೇಡುತ್ತಾರೆ. ಬಿಳಿ ಮತ್ತು ಕೆಂಪು ನಾಮವನ್ನು ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆಯನ್ನು ಬೇಡಬೇಕು ಎಂದು ಹೇಳುತ್ತಾರೆ.

ಇದನ್ನೂ ಓದಿ: Monsoon Precautions : ಮಳೆಗಾಲದಲ್ಲಿ ಅಪಾಯಗಳಿಂದ ದೂರವಿರಲು ಹೀಗೆ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

MLC Election: ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ.

VISTARANEWS.COM


on

mlc election congress candidate gift boxes
Koo

ಆನೇಕಲ್: ಮತದಾರರಿಗೆ (voters) ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್‌ಗಳು (Gift box) ಗೋದಾಮಿನಲ್ಲಿ ಪತ್ತೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಯ (Congress Candidate) ಕಡೆಯವರು ವಿಧಾನ ಪರಿಷತ್‌ ಚುನಾವಣೆಯ (MLC Election) ಬೆಂಗಳೂರು ಪದವೀಧರ ಕ್ಷೇತ್ರದ (graduates constituency) ಮತದಾರರಿಗೆ ವಿತರಿಸಲು ಇವುಗಳನ್ನು ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ. ದುಬಾರಿ ಬೆಲೆಯ ಕಿಚನ್‌ ಸೆಟ್‌ಗಳು ಇವುಗಳಲ್ಲಿವೆ. ಅವುಗಳ ಮೇಲೆ RG ಎಂಬ ಪ್ರಿಂಟ್ ಹೊಂದಿವೆ. ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಗೋದಾಮಿನಲ್ಲಿಯೂ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ.

ಸುಳಿವಿನ ಮೇರೆಗೆ ಬಿಜೆಪಿ ಕಾರ್ಯಕರ್ತರು ಗೋದಾಮಿನ ಮೇಲೆ ದಾಳಿ ನಡೆಸಿ ಇದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ. ಜಯನಗರದಲ್ಲಿ ರಾತ್ರಿ ಪತ್ತೆಯಾಗಿರುವ ಗಿಫ್ಟ್ ಸೆಟ್‌ಗಳ ಜೊತೆಗೆ ಇದು ಸಾಮ್ಯತೆ ಹೊಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ನಡೆಸಿರುವ ಬಿಜೆಪಿ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌, ನಿಂಗರಾಜೇಗೌಡ ಬಂಡಾಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ‌.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.

ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

ಜೆಡಿಎಸ್‌ನಲ್ಲೂ ಬಂಡಾಯ?

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್‌ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

KMF Nandini Logo: ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

VISTARANEWS.COM


on

T20 World Cup 2024
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಈಗಾಗಲೇ 2 ತಂಡಗಳಾದ ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಇದೀಗ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ.

ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ಕ್ರೈಂ

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Student Self harming: ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಟಾಪರ್ಸ್ ಆಗಿದ್ದು, ಇನ್ನಷ್ಟು ಅಂಕ ಗಳಿಸುವಂತೆ ಒತ್ತಡಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ. ಈ ಆತ್ಮಹತ್ಯೆ ಸರಣಿಯ ಬಗ್ಗೆ ಆಕ್ರೋಶ ಹೆಚ್ಚಾಗಿದ್ದು, ಪ್ರತಿಷ್ಠಿತ ಕಾಲೇಜಿನ ವಿರುದ್ಧ ಕೆಲ ಪೋಷಕರು ತಿರುಗಿ ಬಿದ್ದಿದ್ದಾರೆ. ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ಹಲವರು, ಸೂಸೈಡ್ ಪ್ರಕರಣಗಳ ಹಿಂದಿನ ರಹಸ್ಯ ಭೇದಿಸಲು ಒತ್ತಾಯಿಸಿದ್ದಾರೆ.

VISTARANEWS.COM


on

pes students self harming
ಆತ್ಮಹತ್ಯೆ ಮಾಡಿಕೊಂಡ ಸೂರ್ಯ, ರಾಹುಲ್‌, ಆದಿತ್ಯ
Koo

ಬೆಂಗಳೂರು: ನಿನ್ನೆ ರಾಜಧಾನಿಯ (Bengaluru) ಪ್ರತಿಷ್ಠಿತ ಪಿಇಎಸ್‌ ಎಂಜಿನಿಯರಿಂಗ್‌ (PES university) ಕಾಲೇಜಿನ ವಿದ್ಯಾರ್ಥಿ ರಾಹುಲ್‌ ಆತ್ಮಹತ್ಯೆಯೊಂದಿಗೆ, ಈ ಕಾಲೇಜಿನಲ್ಲಿ ಒಂದು ವರ್ಷದ ಅಂತರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ (Student Self harming) ಮಾಡಿಕೊಂಡಂತಾಗಿದೆ. ಇವು ನಾಲ್ಕೂ ಕೂಡ ವಿಚಿತ್ರ ಸಾಮ್ಯತೆ ಹೊಂದಿವೆ. ನಾಲ್ವರೂ ಪಿಇಎಸ್‌ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಲ್ಲರೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು (Engineering Students) ಹಾಗೂ ಅಭ್ಯಾಸದಲ್ಲಿ ಟಾಪರ್‌ಗಳೇ (Toppers) ಆಗಿದ್ದಾರೆ.

ಇತ್ತ, ವಿದ್ಯಾರ್ಥಿಗಳ ಪೋಷಕರು ಕಾಲೇಜಿನ ಆಡಳಿತ ಮಂಡಳಿಯವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಒಂದು ವರ್ಷದಲ್ಲಿ 4 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪರಿಸ್ಥಿತಿಯ ಗಂಭೀರತೆಯನ್ನು ಪೊಲೀಸರ ಹಾಗೂ ಸರ್ಕಾರದ ಗಮನಕ್ಕೆ ತರಲು ಪಿಇಎಸ್ ಯೂನಿವರ್ಸಿಟಿ ವಿರುದ್ಧ ಮೇ 18ಕ್ಕೆ ಪ್ರತಿಭಟನೆ ಪೋಷಕರಿಂದ ಫ್ರೀಡ್ಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಒಂದೇ ವರ್ಷದ ಅಂತರದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಮೂವರೂ ಒಂದೇ ಕಟ್ಟಡದ, 6ನೇ ಅಂತಸ್ತಿನಿಂದಲೇ ಬಿದ್ದು ಮೃತಪಟ್ಟಿದ್ದಾರೆ. 2023ರ ಜುಲೈನಲ್ಲಿ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜಿನಲ್ಲಿ ಆದಿತ್ಯ ಪ್ರಭು ಎಂಬಾತ ಜೀವಹಾನಿ ಮಾಡಿಕೊಂಡಿದ್ದ. ಇದರ ನಂತರ, ಎಲೆಕ್ಟ್ರಾನಿಕ್‌ ಸಿಟಿಯ ಪಿಇಎಸ್‌ ಯೂನಿವರ್ಸಿಟಿ ಕಟ್ಟಡದಲ್ಲಿ ದುರಂತಗಳು ಸಂಭವಿಸಿವೆ. 2023ರ ಅಕ್ಟೋಬರ್‌ನಲ್ಲಿ ‌ಸೂರ್ಯ (21), 2024ರ ಜನವರಿ 29ರಂದು ವಿಗ್ನೇಶ್ (20), ನಿನ್ನೆ ರಾಹುಲ್ (21) ಸುಸೈಡ್‌ ಮಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆಯಿಂದ ಇವುಗಳ ತನಿಖೆ ನಡೆಯುತ್ತಿದೆ.

ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಟಾಪರ್ಸ್ ಆಗಿದ್ದು, ಇನ್ನಷ್ಟು ಅಂಕ ಗಳಿಸುವಂತೆ ಒತ್ತಡಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ. ಈ ಆತ್ಮಹತ್ಯೆ ಸರಣಿಯ ಬಗ್ಗೆ ಆಕ್ರೋಶ ಹೆಚ್ಚಾಗಿದ್ದು, ಪ್ರತಿಷ್ಠಿತ ಕಾಲೇಜಿನ ವಿರುದ್ಧ ಕೆಲ ಪೋಷಕರು ತಿರುಗಿ ಬಿದ್ದಿದ್ದಾರೆ.

ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಆಕ್ರೋಶ ಕಂಡುಬಂದಿದೆ. ಈ ಕಾಲೇಜಿನಲ್ಲಿ ಏನಾಗುತ್ತಿದೆ, ಇಷ್ಟು ಆತ್ಮಹತ್ಯೆಗಳು ಸಂಭವಿಸಿದರೂ ಕಾರಣ ಯಾಕೆ ಪತ್ತೆಯಾಗುತ್ತಿಲ್ಲ, ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ಹಲವರು, ಸೂಸೈಡ್ ಪ್ರಕರಣಗಳ ಹಿಂದಿನ ರಹಸ್ಯ ಭೇದಿಸಲು ಒತ್ತಾಯಿಸಿದ್ದಾರೆ.

ಈ ಹಿಂದೆ, ಪಿಇಎಸ್ ಯೂನಿವರ್ಸಿಟಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯ ಕುರಿತು ಏಪ್ರಿಲ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದಿತ್ತು. ವಿದ್ಯಾರ್ಥಿಗಳ ಸರಣಿ ಸಾವಿನ ಬಗ್ಗೆ ತನಿಖೆ ನಡೆಸಿ, ತಡೆಗಟ್ಟಲು ಸೂಕ್ತ ಕ್ರಮವಹಿಸಲು ಕೇಂದ್ರ ಸಚಿವಾಲಯ ಸೂಚನೆ ನೀಡಿತ್ತು. 2024 ಏಪ್ರಿಲ್ 1ರಂದು ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದ ಒಂದು ತಿಂಗಳಲ್ಲೇ ಮತ್ತೊಬ್ಬ ವಿದ್ಯಾರ್ಥಿಯ ಸಾವು ಸಂಭವಿಸಿದೆ.

ನಿನ್ನೆಯ ಘಟನೆ

ನಿನ್ನೆ ಕರಸಾಲ ರಾಹುಲ್‌ ಎಂಬ ವಿದ್ಯಾರ್ಥಿ ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪಿಇಎಸ್ ಯೂನಿವರ್ಸಿಟಿಯ ಕಟ್ಟಡದಿಂದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈತ ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ವಿಧ್ಯಾರ್ಥಿ. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ. ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.‌

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Continue Reading
Advertisement
mlc election congress candidate gift boxes
ಬೆಂಗಳೂರು20 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ21 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್31 mins ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ39 mins ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ40 mins ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

IPL 2024 Points Table
ಕ್ರೀಡೆ1 hour ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ1 hour ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ1 hour ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ1 hour ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ1 hour ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌