Mysore dasara : ದಸರಾ ಎಂಬ ನಾಡಹಬ್ಬದಲಿ ಚಿನ್ನದ ಅಂಬಾರಿ, ಜಂಬೂ ಸವಾರಿ; ನೋಡ ಬನ್ನಿ ಮೈಸೂರು ನಗರಿ! - Vistara News

ಕರ್ನಾಟಕ

Mysore dasara : ದಸರಾ ಎಂಬ ನಾಡಹಬ್ಬದಲಿ ಚಿನ್ನದ ಅಂಬಾರಿ, ಜಂಬೂ ಸವಾರಿ; ನೋಡ ಬನ್ನಿ ಮೈಸೂರು ನಗರಿ!

Mysore dasara : ಮೈಸೂರು ದಸರ ಎಷ್ಟೊಂದು ಸುಂದರ ಎಂಬ ಹಾಡು ಪ್ರಸಿದ್ಧಿ ಪಡೆದಿದೆ. ನಿಜಕ್ಕೂ ಇದು ಸುಂದರ – ಸೊಗಸು – ವೈಭವ. ದಸರಾ ಆರಂಭದಿಂದ ವಿಜಯದಶಮಿಯ ಜಂಬೂ ಸವಾರಿ ವರೆಗೂ ಮೈಸೂರನ್ನು ನೋಡುವುದೇ ಒಂದು ಚೆಂದ ಎಂಬಂತೆ ಇರುತ್ತದೆ. ಕೋವಿಡ್‌ ಸಂದರ್ಭದಲ್ಲಿ ಕಳೆಗುಂದಿದ್ದ ದಸರೆ ಈಗ ಮತ್ತೆ ಕಳೆಗಟ್ಟಿದೆ. ಇದರ ಇತಿಹಾಸವನ್ನು ಒಮ್ಮೆ ನೋಡೋಣ.

VISTARANEWS.COM


on

Mysore Dasara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ (Mysore dasara) ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿದೆ. ಇದರ ಸಂಭ್ರಮವನ್ನು ನೋಡುವುದೇ ಕಣ್ಣಿಗೆ ಒಂದು ಹಬ್ಬ. ಪ್ರತಿ ನವರಾತ್ರಿ (Navratri Festival) ಹಾಗೂ ವಿಜಯದಶಮಿಯ (Vijayadashami Festival) ಅಷ್ಟೂ ದಿನ ಮೈಸೂರು (Mysore City) ಝಗಮಗಿಸಲಿದೆ. ವಿದ್ಯುತ್‌ ದೀಪಾಲಂಕಾರದಿಂದ ಹಿಡಿದು ಇಡೀ ನಗರವೇ ಸಿಂಗಾರಗೊಂಡು ಕಣ್ಮನ ಸೆಳೆಯುತ್ತವೆ. ಇನ್ನು ದಸರೆಯ ಇತಿಹಾಸವನ್ನು ನೋಡುವುದಾದರೆ 1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಆಗಿನಿಂದಲೇ ಆಗಿದೆ.

ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.

Mysore Dasara

ವಿಜಯನಗರ ಸಾಮ್ರಾಜ್ಯದಿಂದ ಬಂತು ಆಚರಣೆ

ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಶೌರ್ಯ – ಪರಾಕ್ರಮಗಳ ಪ್ರದರ್ಶನ, ಕಲೆ – ಸಾಹಿತ್ಯಗಳಿಗೆ ವೇದಿಕೆ, ಸಂಗೀತ – ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ನಡೆಸುತ್ತಾ ಬರಲಾಗಿತ್ತು. ಅವರ ತರುವಾಯ ಮೈಸೂರಿನಲ್ಲಿ ರಾಜಾ ಒಡೆಯರ್‌ ಅವರು ದಸರಾವನ್ನು ಶ್ರೀರಂಗಪಟ್ಟಣದಲ್ಲಿ ಆರಂಭಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಅಂದರೆ 1799ರಲ್ಲಿ ಒಡೆಯರು ತಮ್ಮ ಕೇಂದ್ರ ಸ್ಥಾನವನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿಕೊಂಡರು. ನಂತರದ ದಸರಾ ಆಚರಣೆಗಳು ಮೈಸೂರಿನಲ್ಲಿ ಪ್ರಾರಂಭವಾದವು.

Mysore Dasara

ಜಂಬೂ ಸವಾರಿ ಎಂಬ ಆಕರ್ಷಣೆ

ಜಂಬೂ ಸವಾರಿ ಆರಂಭಕ್ಕೆ ಮುನ್ನ ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮೊದಲು ಪೂಜೆ ಸಲ್ಲಿಸಲಾಗುತ್ತದೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಆಸೀನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಆ ಬಳಿಕ 24 ಕುಶಾಲ ತೋಪುಗಳ ಗೌರವವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಅರಮನೆ ಆವರಣದಲ್ಲಿ ವಿಜಯದಶಮಿಯ ಅತ್ಯಾಕರ್ಷಕ ಮೆರವಣಿಗೆಗೆ ಚಾಲನೆ ದೊರೆಯುತದೆ. ಜಂಬೂಸವಾರಿಯು ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ನಡೆಯುತ್ತದೆ.

ಗಮನ ಸೆಳೆಯುವ ಸ್ತಬ್ಧಚಿತ್ರಗಳ ಪ್ರದರ್ಶನ

ಅಂಬಾರಿ ಹೊತ್ತ ಬಲರಾಮನ ಜತೆಗೆ ಪೊಲೀಸ್ ಬ್ಯಾಂಡ್‌ನ ಆಕರ್ಷಕ ತಾಳ ವಾದ್ಯ ಕಳೆಗಟ್ಟಲಿದೆ. ಅಲ್ಲದೆ, ಕಂಸಾಳೆ ಕುಣಿತ, ಕಲಾತಂಡಗಳ ನೃತ್ಯ ಪ್ರದರ್ಶನಗಳ ಜತೆಗೆ ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆಯುತ್ತದೆ. ಇದರ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ.

ಇದನ್ನೂ ಓದಿ: Yuva Dasara: ಜಯನಗರದಲ್ಲಿ ಅ.15 ರಿಂದ 24 ರವರೆಗೆ ʼಯುವ ದಸರಾʼ

750 ಕೆ.ಜಿ. ತೂಕದ ಚಿನ್ನದ ಅಂಬಾರಿ

ದಸರಾ ಹಬ್ಬದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆಯೇ 750 ಕೆಜಿ ತೂಕದ ಚಿನ್ನದ ಅಂಬಾರಿ. ಈ ಚಿನ್ನದ ಅಂಬಾರಿಗೂ ಒಂದು ಇತಿಹಾಸ ಇದೆ. ಇದು ಮೂಲತಃ ಮಹಾರಾಷ್ಟ್ರದ ದೇವಗಿಯಲ್ಲಿ ಇತ್ತು ಎಂದು ಇತಿಹಾಸ ಹೇಳುತ್ತದೆ. ದೇವಗಿರಿ ಆಡಳಿತ ಮುಕ್ತಾಯದ ವೇಳೆ ಅಲ್ಲಿನ ರಾಜ ಮುಮ್ಮಡಿ ಸಿಂಗ ನಾಯಕ ಎನ್ನುವವರಿಗೆ ಹಸ್ತಾಂತರ ಮಾಡುತ್ತಾರೆ. ಮುಮ್ಮಡಿ ಸಿಂಗ ನಾಯಕ ಬಳ್ಳಾರಿ ಬಳಿಯ ರಾಮದುರ್ಗ ಕೋಟೆಗೆ ತಂದು ಸುರಕ್ಷಿತವಾಗಿಡುತ್ತಾರೆ. ಇವರ ಮಗ ಕಂಪಿಲರಾಯ ಕುಮ್ಮಟದುರ್ಗವನ್ನು ರಾಜಧಾನಿಯಾಗಿ ಮಾಡಿಕೊಂಡಾಗ ಅಲ್ಲಿಗೆ ಇದನ್ನು ಒತ್ತುತ್ತಾನೆ. ಅಲ್ಲಿ ಶ್ರೀ ದುರ್ಗಾದೇವಿಯನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಈ ಪೂಜೆಯನ್ನು ಮಗ ಯುವರಾಜ ಸಹ ಮುಂದುವರಿಸುತ್ತಾನೆ.

1327ರಲ್ಲಿ ದೆಹಲಿ ಸುಲ್ತಾನರು ದಾಳಿಗೆ ಕಂಪಿಲ ರಾಜ್ಯ ನಾಶವಾಗುತ್ತದೆ. ಆಗ ಭಂಡಾರ ಸಂರಕ್ಷಣೆ ಮಾಡುತ್ತಿದ್ದ ಹಕ್ಕಬುಕ್ಕರು ಈ ಅಂಬಾರಿಯನ್ನು ಹುತ್ತವೊಂದರಲ್ಲಿ ಮುಚ್ಚಿಟ್ಟು ತಲೆಮರೆಸಿಕೊಳ್ಳುತ್ತಾರೆ. 1336ರ ವೇಳೆಗೆ ದೆಹಲಿ ಸುಲ್ತಾನರ ಸಾಮ್ರಾಜ್ಯ ಪತನವಾದ ಬಳಿಕ ಹಕ್ಕನು ರಾಜ್ಯ ಸ್ಥಾಪನೆಗೆ ಮುಂದಾಗುತ್ತಾನೆ. ಆನೆಗೊಂದಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿ ವಿಜಯನಗರ ಸಾಮ್ರಾಜ್ಯವನ್ನು ರಾಜಧಾನಿಯನ್ನಾಗಿ ಮಾಡುತ್ತಾನೆ. ಬುಕ್ಕನು ಹಂಪಿಯಲ್ಲಿ ವಿಜಯನಗರ ಸಾಮ್ರಾಜ್ಯದ ಎರಡನೇ ರಾಜಧಾನಿಯನ್ನು ಸ್ಥಾಪನೆ ಮಾಡುತ್ತಾನೆ. ಅಲ್ಲಿಗೆ ಈ ಅಂಬಾರಿಯನ್ನು ಸ್ಥಳಾಂತರಿಸುತ್ತಾನೆ.

ಸಂಗಮ, ಸಾಳವ, ತುಳು ಹಾಗೂ ಅರವಿಡು ಎನ್ನುವ ನಾಲ್ಕು ವಂಶಗಳು ವಿಜಯನಗರ ಸಾಮ್ರಾಜ್ಯವನ್ನು ಆಳ್ವಿಕೆ ಮಾಡುತ್ತವೆ. ವಿಜಯನಗರ ಸಾಮ್ರಾಜ್ಯ ಪತನಗೊಂಡಾಗ ಅಂಬಾರಿಯನ್ನು ಸಂರಕ್ಷಣೆಗಾಗಿ ಆಂಧ್ರದ ಪೆನಗೊಂಡಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಅಲ್ಲಿಂದ ಕೆಲವು ವರ್ಷಗಳ ಬಳಿಕ ಶ್ರೀರಂಗಪಟ್ಟಣಕ್ಕೆ ಬರುತ್ತದೆ. ಇಲ್ಲಿಂದ ಮೈಸೂರಿಗೆ ಆಸ್ಥಾನ ಸ್ಥಳಾಂತರವಾದಾಗ ಚಿನ್ನದ ಅಂಬಾರಿ ಮೈಸೂರಿಗೆ ಬರುತ್ತದೆ.

ಜಂಬೂ ಸವಾರಿ ಆನೆಗಳು ಇವು

ಜಂಬೂ ಸವಾರಿ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಈ ಬಾರಿ ಜಂಬೂ ಸವಾರಿಗೆ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ತಂಡ ಕ್ಯಾಪ್ಟನ್‌ ಆಗಿದ್ದಾನೆ. ವಿಜಯ, ವರಲಕ್ಷ್ಮಿ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮಿ, ಹಿರಣ್ಯ ಆನೆಗಳು ಸಾಥ್‌ ನೀಡಲಿವೆ.

Mysore Dasara

ಅರಮನೆಯಲ್ಲಿ ಮೇಳೈಸುವ ಕಾರ್ಯಕ್ರಮಗಳು

ದಸರಾ ವೇಳೆ ಇಡೀ ಮೈಸೂರು ನಗರು ದೀಪಗಳು ಸೇರಿದಂತೆ ಅಲಂಕಾರಗಳಿಂದ ಕಂಗೊಳಿಸುತ್ತಿರುತ್ತದೆ. ಅರಮನೆ ಹಾಗೂ ಸುತ್ತಮುತ್ತಲ ಪ್ರಮುಖ ಕಟ್ಟಡಗಳು ದೀಪಗಳಿಂದ ಹೊಳೆಯುತ್ತಿರುತ್ತವೆ. ಇನ್ನು ಅರಮನೆ ಆವರಣದಲ್ಲಿ ಕ್ರೀಡೆ, ಕುಸ್ತಿ, ಕವಿಗೋಷ್ಠಿ, ಆಹಾರೋತ್ಸವ, ಚಲನಚಿತ್ರೋತ್ಸವದಂತಹ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಮೂಲಕ ಕಲೆ – ಸಾಹಿತ್ಯಗಳಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಕಲಾವಿದರನ್ನು ಗುರುತಿಸುವ ಗೌರವಿಸುವ ಕೆಲಸ ಆಗುತ್ತದೆ.

ಹೇಗಿರಲಿದೆ ಖಾಸಗಿ ದರ್ಬಾರ್‌?

ಇನ್ನು ದಸರೆ ವೇಳೆ ರಾಜಮನತನದಿಂದ ಕೆಲವು ಆಚರಣೆಗಳು ನಡೆಯುತ್ತವೆ. ಅದು ಅವರ ಖಾಸಗಿ ಕಾರ್ಯಕ್ರಮವಾಗಿರುತ್ತದೆ. ಇನ್ನು ರಾಜಮನೆತನಕ್ಕೆ ಖಾಸಗಿ ದರ್ಬಾರ್‌ ಬಹಳ ವಿಶೇಷವಾಗಿರುತ್ತದೆ. ಇದಕ್ಕೆಂದೇ ಅರಮನೆಯಲ್ಲಿ ದರ್ಬಾರ್ ಹಾಲ್ ಇದೆ. ಈ ಖಾಸಗಿ ದರ್ಬಾರ್‌ಗೆ ಸಾಮಾನ್ಯರಿಗೆ ಪ್ರವೇಶ ಇಲ್ಲ. ಯಾರನ್ನು ಕರೆಯಬೇಕು? ಬಿಡಬೇಕು ಎಂಬುದು ಸಂಪೂರ್ಣ ರಾಜಮನೆತನದ ನಿರ್ಧಾರವಾಗಿರುತ್ತದೆ. ಹೀಗಾಗಿ ಅವರ ಆಪ್ತ ವಲಯದವರಿಗೆ ಮಾತ್ರವೇ ಇಲ್ಲಿ ಅವಕಾಶ.

ರಾಜಪೋಷಾಕಿನಲ್ಲಿ ಮಿಂಚುವ ರಾಜ!

ಖಾಸಗಿ ದರ್ಬಾರ್‌ನಲ್ಲಿ ರಾಜನೇ ಪ್ರಮುಖ. ಇಲ್ಲಿ ರಾಜರಾದವರು ಅಂದರೆ ಈಗ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೇಷ್ಮೆ, ರತ್ನಖಚಿತ ರಾಜಪೋಷಾಕನ್ನು ಧರಿಸಿರುತ್ತಾರೆ. ಮಹಾರಾಜರ ಗತ್ತು ಮತ್ತು ಗಾಂಭೀರ್ಯದೊಂದಿಗೆ ಸಿಂಹಾಸನವನ್ನು ಏರಿ ತಮ್ಮ ಬಲಗೈ ಎತ್ತಿ ಸೆಲ್ಯೂಟ್ ಮಾಡಿ ಆಸೀನರಾಗುತ್ತಾರೆ. ಅಲ್ಲಿಂದ ಖಾಸಗಿ ದರ್ಬಾರ್‌ ಆರಂಭವಾಗುತ್ತದೆ.

ಆಗ ಹೊಗಳು ಭಟರು ರಾಜಾಧಿರಾಜ … ರಾಜ ಮಾರ್ತಾಂಡ … ಶ್ರೀಮನ್ಮಹಾರಾಜ … ಬಹುಪರಾಕ್ … ಬಹುಪರಾಕ್ … ಎಂದು ಉದ್ಘೋಷಗಳನ್ನು ಕೂಗುತ್ತಾರೆ. ಪಾಡ್ಯದ ದಿನ ಮಾತ್ರ ಬೆಳಗ್ಗೆ ನಡೆಯುವ ಈ ಖಾಸಗಿ ದರ್ಬಾರ್‌ ಉಳಿದ ದಿನ ಸಂಜೆಗೆ ನಡೆಯುತ್ತದೆ. ದ್ವಾರಪಾಲಕರು, ಪರಾಕ್‌ ಹೇಳುವವರು, ಒಡೆಯರ್ ಆಪ್ತ ಸಿಬ್ಬಂದಿ, ರಾಜದಂಡ ಹಿಡಿದ ಆಸ್ಥಾನ ಅಧಿಕಾರಿಗಳು, ರಾಜಪುರೋಹಿತರು, ವಿದ್ವಾಂಸರು, ಒಡೆಯರ್ ವಂಶಸ್ಥರು, ಬಂಧುಮಿತ್ರರು ಮಾತ್ರ ಇಲ್ಲಿರುತ್ತಾರೆ.

Mysore Dasara

ರಾಜಪರಿವಾರದವರಿಗೆ ಕಾಣಿಕೆ ಸಮರ್ಪಣೆ

ಪ್ರತಿದಿನ ಖಾಸಗಿ ದರ್ಬಾರ್‌ಗೆ ಮುಂಚೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಗಳಿಗೆ ಅಲಂಕಾರ ಮಾಡಿಡಲಾಗುತ್ತದೆ. ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲಾಗುತ್ತದೆ. ಅರಮನೆಯೊಳಗೆ ಇವುಗಳ ಪ್ರವೇಶವಾದ ಬಳಿಕ ಖಾಸಗಿ ದರ್ಬಾರ್ ಆರಂಭವಾಗುತ್ತದೆ. ಇಲ್ಲಿ ಸಿಂಹಾಸನಾರೂಢರಾದ ಯದುವೀರ್ ಒಡೆಯರ್‌ಗೆ ದೇವಾಲಯಗಳಿಂದ ಆಗಮಿಸಿದ ಪುರೋಹಿತರು ಪ್ರಸಾದ ಮತ್ತು ಮಂತ್ರಪುಷ್ಪ ಹಾಗೂ ಮಂಗಳಾಕ್ಷತೆ ನೀಡುವುದು, ನಜರ್ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತದೆ. ನಂತರ ಯದುವೀರ್ ಒಡೆಯರ್ ಸಿಂಹಾಸನದಲ್ಲಿ ಕುಳಿತುಕೊಂಡು ರಾಜಪರಿವಾರದ ಮಂದಿಗೆ ಕಾಣಿಕೆ ನೀಡುತ್ತಾರೆ.

ದರ್ಬಾರ್ ಸಂದರ್ಭ 108 ಸಲ ದೇವಿ ಭಾಗವತ ಪಠಣ, 10 ಮಂದಿ ವೇದಮೂರ್ತಿಗಳಿಂದ ಸಪ್ತಶತಿ ಪಠಣ, ನವಮಿಯ ರಾತ್ರಿ ಅಲಮೇಲಮ್ಮನ ದೇವಸ್ಥಾನದಲ್ಲಿ ಪೂಜೆ, ಆಯುಧಶಾಲೆಯಲ್ಲಿ ಆಯುಧಪೂಜೆ, ವಿಜಯದಶಮಿಯ ದಿನ ಜಟ್ಟಿಗಳ ವಜ್ರಮುಷ್ಠಿ ಕಾಳಗ, ಇದೇ ದಿನ ಶಮೀಪೂಜೆ ಮುಂತಾದ ಧಾರ್ಮಿಕ ಕಾರ್ಯಗಳನ್ನು ಶ್ರದ್ಧಾಭಕ್ತಿಗಳಿಂದ ನಡೆಸಿ ಸಮಾಪ್ತಿಗೊಳಿಸಲಾಗುತ್ತದೆ.

ರಾಜ ಯಧುವೀರ್‌ ಒಡೆಯರ್ ದಿನಚರಿ ಹೇಗಿರಲಿದೆ?

ನವರಾತ್ರಿಯ ಮೊದಲನೆಯ ದಿನವಾದ ಪಾಡ್ಯದಂದು ಮಹಾರಾಜರು ಬೆಳಗ್ಗೆ ಎದ್ದು ಎಣ್ಣೆ ಶಾಸ್ತ್ರ ಮಾಡುತ್ತಾರೆ. ಕೊನೆಗೆ ಅರಮನೆಗೆ ಕರೆಸಿಕೊಂಡಿರುವ ಕ್ಷೌರಿಕರಿಂದ ಚೌಲ ಶಾಸ್ತ್ರ ನೆರವೇರಿಸಿ ಮಂಗಳ ಸ್ನಾನ ಮಾಡುತ್ತಾರೆ. ಬಳಿಕ ಮಹಾರಾಜರಿಗೆ ಮುತ್ತೈದೆಯರು ಮತ್ತು ಪುರೋಹಿತ ಮನೆತನದ ಸ್ತ್ರೀಯರಿಂದ ಆರತಿ ಸೇವೆ ಇರುತ್ತದೆ. ಅಲ್ಲಿಂದ ಚಾಮುಂಡಿತೊಟ್ಟಿಗೆ ಭೇಟಿ ನೀಡುವ ಮಹಾರಾಜ ಗಣಪತಿಗೆ ಪೂಜೆ ಮಾಡಿ ಅಲ್ಲಿ ಕಳಶ ಪೂಜೆ, ಕಂಕಣ ಪೂಜೆಯನ್ನು ನೆರವೇರಿಸುತ್ತಾರೆ. ತಮ್ಮ ಕುಲದೇವತೆ ಚಾಮುಂಡಿ ಸನ್ನಿಧಿಯಲ್ಲಿ ಕಂಕಣ ಧರಿಸುತ್ತಾರೆ. ಅವರ ಧರ್ಮಪತ್ನಿ ಮಹಾರಾಣಿ ಸಹ ಕಂಕಣವನ್ನು ಧರಿಸುತ್ತಾರೆ. ಅಲ್ಲಿಂದ ವ್ರತಗಳಿಗೆ ಚಾಲನೆ ಸಿಗುತ್ತದೆ.

ಇದನ್ನೂ ಓದಿ: Dasara Tour: ದಸರಾ ರಜೆಯಲ್ಲಿ ಪ್ರವಾಸ ಮಾಡ್ತೀರಾ? ಕೆಎಸ್‌ಟಿಡಿಸಿ ಟೂರ್‌ ಪ್ಯಾಕೇಜ್‌ ಹೀಗಿದೆ

ದುರ್ಗಾ ಮಾತೆಯ ಸ್ವರೂಪಗಳಾದ ಬ್ರಹ್ಮಿಣಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ, ಮಹೇಶ್ವರಿ, ದುರ್ಗಾ, ಕಾಳಿ, ಚಂಡಿಕೆ ಹೀಗೆ ಎಲ್ಲ ಶಕ್ತಿದೇವತೆಗಳನ್ನೂ ಆರಾಧಿಸಲಾಗುತ್ತದೆ. ಶಿವಸನ್ನಿಧಿ, ಕೃಷ್ಣಸನ್ನಿಧಿ, ಚಾಮುಂಡಿ ಸನ್ನಿಧಿ ಮುಂತಾದ ದೇವರ ಸನ್ನಿಧಿಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ದೇವೀ ಭಾಗವತ ಪಾರಾಯಣ, ರಾಮಾಯಣ ಪಾರಾಯಣ ನಡೆಯುತ್ತದೆ.

ಬಳಿಕ ಗಣಪತಿ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ನವಗ್ರಹ ಪೂಜೆ, ಬ್ರಹ್ಮ, ವಿಷ್ಣು, ಮಹೇಶ್ವರ, ಮಹಾಕಾಳಿ, ಮಹಾಸರಸ್ವತಿ, ಮಹಾಲಕ್ಷ್ಮಿ ಪೂಜೆಗಳು ನಡೆದು ಅಷ್ಟೋತ್ತರ ಸೇವೆ ನಡೆಯುತ್ತದೆ.

ಮಹಿಷಾಸುರ ಸಂಹಾರ

ಚಂಡಿಕಾಹೋಮ, ಬಲಿ, ಮಹಿಷವಧೆ, ಶಮೀವೃಕ್ಷ ಪೂಜೆ ಸೇರಿ ಪೂಜಾವಿಧಿಗಳನ್ನು ನಡೆಸಲಾಗುತ್ತದೆ. ಇನ್ನು ದೇವೀ ಭಾಗವತವನ್ನು ಪಾರಾಯಣ ಮಾಡುವಾಗ ಮಹಿಷಾಸುರನನ್ನು ಸಾಂಕೇತಿಕವಾಗಿ ಸಂಹರಿಸಲಾಗುತ್ತದೆ. ಇದಕ್ಕಾಗಿ ಮರದಿಂದ ಮಹಿಷಾಸುರನ ಪ್ರತಿಕೃತಿಯನ್ನು ತಯಾರಿಸಿ ಅದಕ್ಕೆ ಕುಂಕುಮದ ರಕ್ತವರ್ಣವನ್ನು ಸುರಿಯಲಾಗುತ್ತದೆ. ಅಲ್ಲಿಗೆ ಮಹಿಷಾಸುರನ ಸಂಹಾರವಾಗುತ್ತದೆ.

ಗೊಂಬೆಗಳಿಗೆ ಪೂಜೆ

ಯದುವೀರ್ ಒಡೆಯರ್ ದರ್ಬಾರಿಗೆ ಬರುವುದಕ್ಕೂ ಮೊದಲು ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಪತಿಯ ಪಾದಪೂಜೆ ಮಾಡಿ ಹಣೆಗೆ ತಿಲಕ ಇಡುವ ಪದ್ಧತಿಯನ್ನು ನಡೆಸಿಕೊಂಡು ಬರಲಾಗಿದೆ. ಹತ್ತು ದಿನವೂ ಇದೇ ಪದ್ಧತಿ ನಡೆಯಲಿದೆ. ಈ ಎಲ್ಲ ವಿಧಿ-ವಿಧಾನ ಪೂಜೆಗಳ ದಂತದ ಗೊಂಬೆಗಳಿಗೆ ಆರತಿ ಮಾಡಲಾಗುತ್ತದೆ.

Mysore Dasara

ಈ ಬಾರಿಯ ದಸರಾ ಟೈಂಟೇಬಲ್‌ ಹೀಗಿದೆ!

15-10-2023 ಭಾನುವಾರ ಶರನ್ನವರಾತ್ರಿ ಪ್ರಾರಂಭ: ಬೆಳಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಪೂಜೆ ನಡೆಯಲಿದೆ. ಇನ್ನು ಅಂದು ಸಂಜೆ 6.30 ರಿಂದ 7.15ರ ಶುಭಮೇಷ ಲಗ್ನದಲ್ಲಿ ಅರಮನೆಯಲ್ಲಿ ಪೂಜೆಗಳು ಆರಂಭವಾಗಲಿವೆ.

ಶುಕ್ರವಾರ (20-10-2023): ಕಾತ್ಯಾಯಿನೀ – ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಆರಂಭವಾಗುತ್ತದೆ. ಶ್ರವಣ ನಕ್ಷತ್ರದ ದಿನ ಅಂದರೆ 24-10-2023ರ ಮಂಗಳವಾರ ವಿಸರ್ಜನೆ ನಡೆಯಲಿದೆ.

21-10-2023 ಶನಿವಾರ: ಕಾಳರಾತ್ರಿ, ಮಹಿಷಾಸುರ ಸಂಹಾರ ನಡೆಯಲಿದೆ.

23-10-2023 ಸೋಮವಾರ: ಆಯುಧ ಪೂಜೆ ನಡೆಯಲಿದೆ.

ಇದನ್ನೂ ಓದಿ: Mysore Dasara : ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಸಂಚಾರ

ವಿಜಯದಶಮಿ ವಿಶೇಷ

24-10-2023ರ ಮಂಗಳವಾರದಂದು ವಿಜಯದಶಮಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಂದಿ ಧ್ವಜ ಪೂಜೆ ನಡೆಯಲಿದೆ. ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿಯಿಂದ ಮತ್ತು ಗಣ್ಯರಿಂದ ಅಂಬಾರಿಯಲ್ಲಿರುವ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ನಡೆಯಲಿದೆ. ನಂತರ ಜಂಬೂ ಸವಾರಿ ಪ್ರಾರಂಭವಾಗಲಿದೆ. ಭಾನುವಾರ (ಅಕ್ಟೋಬರ್‌ 26) ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

PM Narendra Modi: ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

5 PM for 5 years if Congress comes to power says PM Narendra Modi
Koo

ದಾವಣಗೆರೆ: ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು (INDI Alliance) ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣದಲ್ಲೂ ರಾಜಕೀಯ

ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ದೆಹಲಿಯಿಂದ 1 ರೂಪಾಯಿ ಕೊಟ್ಟರೆ ಬರೀ ಹದಿನೈದು ಪೈಸೆ ಮಾತ್ರ ತಲುಪ್ತಿತ್ತು. ಈ ವಿಷಯವನ್ನು ಕಾಂಗ್ರೆಸ್‌ನಿಂದ ಪ್ರಧಾನಿಯಾದವರೇ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನ ಎಲ್ಲ ಭ್ರಷ್ಟಾಚಾರಕ್ಕೆ ಇದೇ ಸಾಕ್ಷಿಯಾಗುತ್ತಿತ್ತು. ಇನ್ನೂ ಹುಟ್ಟದ ಮಕ್ಕಳ ಹೆಸರಲ್ಲಿ, ಸತ್ತವರ ಹೆಸರಲ್ಲೂ ಕಾಂಗ್ರೆಸ್‌ನಿಂದ ಲೂಟಿ ಮಾಡಲಾಗಿದೆ. ಯಾರೂ ಊಹಿಸದ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದವರು ಕಾಂಗ್ರೆಸಿಗರಾಗಿದ್ದಾರೆ. ಸರ್ಕಾರದ ಖಜಾನೆ ಲೂಟಿ ಮಾಡುವುದೇ ಕಾಂಗ್ರೆಸ್ ಪಕ್ಷದ ನಾಯಕರ ಗುರಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.

ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲ

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

ಕರ್ನಾಟಕ

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case: ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.

VISTARANEWS.COM


on

Hassan Pen Drive Case
ಸುಮನ್ ಡಿ ಪೆನ್ನೇಕರ್, ಎಡಿಜಿಪಿ ಬಿ.ಕೆ. ಸಿಂಗ್, ಸೀಮಾ ಲಾಟ್ಕರ್
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

Lok Sabha Election 2024

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi: ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Congress fears defeat over EVMs Congress will not win a single seat in Karnataka says PM Narendra Modi
Koo

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

PM Narendra Modi: ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

VISTARANEWS.COM


on

Congress instigates bombers We are crushing traitors through NIA PM Narendra Modi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಘಟನೆ ಬಗ್ಗೆ ಗರಂ ಆಗಿ ಮಾತನಾಡಿದರು.

ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಎಕ್ಸ್‌ರೇ ಮಾಡುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮ್ಮ ಸೇವೆ ಮಾಡುವುದಕ್ಕಾಗಿಯೇ ಪರಮಾತ್ಮ ನರೇಂದ್ರ ಮೋದಿಯನ್ನು ಕಳುಹಿಸಿದ್ದಾನೆ. ನಿಮ್ಮ ಕನಸೇ ಮೋದಿ ಸಂಕಲ್ಪ ಅಂತಾ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮುಸ್ಲಿಂ ದೊರೆಗಳ ದೌರ್ಜನ್ಯ ಹಾಗೂ ಅತ್ಯಾಚಾರಗಳ ಬಗ್ಗೆ ಕಾಂಗ್ರೆಸ್ ಸೊಲ್ಲಿಲ್ಲ. ವೋಟ್‌ ಬ್ಯಾಂಕ್ ಹಾಗೂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ರಾಜಕಾರಣ ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕದಂಬ ವಂಶಸ್ಥರು ಆಡಳಿತ ನಡೆಸಿ ಅಪಾರ ಕೊಡುಗೆ ನೀಡಿದ್ದಾರೆ. ಕದಂಬ ವಂಶಸ್ಥರು ಕನ್ನಡ ಅಭಿವೃದ್ಧಿಗೆ ನೀಡಿದ ಒತ್ತನ್ನು ಯಾರೂ ಮರೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading
Advertisement
Ishan Kishan
ಕ್ರೀಡೆ5 mins ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 20247 mins ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್20 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ25 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್26 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ33 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202438 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ54 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್59 mins ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್1 hour ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202438 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ8 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌